Tag: ಮಹಾಯಾಗ

  • ಅಯೋಧ್ಯೆಗೆ ಜೋಧ್‌ಪುರದಿಂದ 600 ಕೆಜಿ ಪರಿಶುದ್ಧ ತುಪ್ಪ ರವಾನೆ

    ಅಯೋಧ್ಯೆಗೆ ಜೋಧ್‌ಪುರದಿಂದ 600 ಕೆಜಿ ಪರಿಶುದ್ಧ ತುಪ್ಪ ರವಾನೆ

    ಜೈಪುರ: ಜನವರಿಯಲ್ಲಿ ನಡೆಯಲಿರುವ ಅಯೋಧ್ಯೆ ರಾಮಮಂದಿರದ (Ayodhya Ram Mandir) ಲೋಕಾರ್ಪಣೆಗೆ ಭರದ ಸಿದ್ದತೆಗಳು ನಡೆದಿವೆ. ರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನೆಗಾಗಿ ರಾಜಸ್ಥಾನದ ಜೋಧ್‌ಪುರದಿಂದ (Jodhpur) 600 ಕೆಜಿಯಷ್ಟು ಪರಿಶುದ್ಧ ತುಪ್ಪವನ್ನು (Ghee) ಅಯೋಧ್ಯೆಗೆ ಕಳಿಸಲಾಗಿದೆ.

    ಈ ತುಪ್ಪವನ್ನು ವಿಶೇಷವಾಗಿ ತಯಾರಿಸಲಾದ 108 ಕಲಶಗಳಲ್ಲಿ 11 ರಥಗಳ ಮೂಲಕ ಅಯೋಧ್ಯೆಗೆ ಮಂತ್ರಘೋಷಗಳ ಮೂಲಕ ಕಳುಹಿಸಿಕೊಡಲಾಗಿದೆ. ಸಾಂದೀಪನಿ ರಾಮಧರ್ಮ ಗೋಶಾಲೆ ಈ ತುಪ್ಪವನ್ನು ಕಳುಹಿಸಿಕೊಟ್ಟಿದೆ.  ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆ ಬೆನ್ನಲ್ಲೇ ಭಾವುಕರಾಗಿದ್ದ ಪ್ರಧಾನಿ ಮೋದಿ

    ಪ್ರಾಣ ಪ್ರತಿಷ್ಠೆಯ ಸಮಯದಲ್ಲಿ ನಡೆಸಲಾಗುವ ಮಹಾಯಜ್ಞ ಮತ್ತು ಆರತಿಗಾಗಿ ವಿಶೇಷ ತುಪ್ಪವನ್ನು ಬಳಸಲಾಗುತ್ತದೆ. ಗೋಶಾಲೆಯಲ್ಲಿರುವ ದೇಸಿ ಹಸುವಿನಿಂದ ಈ ತುಪ್ಪವನ್ನು ತಯಾರಿಸಲಾಗಿದೆ.

    ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ 2024ರ ಜನವರಿ 22ರಿಂದ ಮಾರ್ಚ್ 10 ರವರೆಗೆ 48 ದಿನಗಳ ಕಾಲ ನಡೆಯಲಿದ್ದು, ಜನವರಿ 22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜ.22 ರಂದು ಶ್ರೀರಾಮನ ಭವ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

     

  • ಕೊರೊನಾ ದೇವಿಗೆ ದೇವಾಲಯ ನಿರ್ಮಿಸಿ ವಿಶೇಷ ಪೂಜೆ

    ಕೊರೊನಾ ದೇವಿಗೆ ದೇವಾಲಯ ನಿರ್ಮಿಸಿ ವಿಶೇಷ ಪೂಜೆ

    ಚೆನ್ನೈ: ಜಗತ್ತನ್ನು ಕಾಡುತ್ತಿರುವ ಮಹಾಮಾರಿ ಕೊರೊನಾಗೆ ಈಗ ತಮಿಳುನಾಡಿನಲ್ಲಿ ದೇವರ ಸ್ವರೂಪ ನೀಡಲಾಗಿದೆ. ಈ ಮೂಲಕ ಕೊರೊನಾ ಆರ್ಭಟವನ್ನು ತಣ್ಣಾಗಾಗಿಸುವಂತೆ ಕೊರೊನಾ ಅಮ್ಮನಿಗೆ ವಿಶೇಷ ಪೂಜೆ ನಡೆಸುವ ಮೂಲಕವಾಗಿ ಸುದ್ದಿಯಲ್ಲಿದೆ.

    ಸೋಂಕು ನಿವಾರಣೆಗಾಗಿ ವಿಶೇಷ ಪೂಜೆಗೆ ಮೊರೆ ಹೋಗಿದ್ದಾರೆ ತಮಿಳುನಾಡಿನ ಕೊಯಿಮತ್ತೂರಿನ ಜನ. ಕೊಯಿಮತ್ತೂರಿನ ಹೆಸರಾಂತ ಕಾಮಾಚಿಪುರಿ ಅಧೀನಂ ಪೀಠ ಕೋವಿಡ್ ಸೋಂಕಿಗಾಗಿ ವಿಶೇಷವಾಗಿ ಕೊರೊನಾ ದೇವಿ ದೇಗುಲವನ್ನು ನಿರ್ಮಿಸಿದೆ. ಈ ದೇವಾಲಯದಲ್ಲಿ ಕೊರೊನಾ ದೇವರನ್ನು ಶಾಂತಗೊಳಿಸಿ, ಸೋಂಕು ನಿವಾರಣೆಯಾಗುವಂತೆ ದಿನನಿತ್ಯ ಪೂಜೆ ನಡೆಸಲಾಗುತ್ತಿದೆ.

    ಈಗಾಗಲೇ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರೆವೇರಿಸಲಾಗುತ್ತಿದ್ದು, ಈ ದೇವಾಲದಯಲ್ಲಿ 48 ದಿನಗಳ ಕಾಲ ವಿಶೇಷ ಪೂಜೆ ಮತ್ತು ಪುನಸ್ಕಾರಗಳನ್ನು ನಡೆಯಲಿದೆ. ಇದರ ಜೊತೆಗೆ ವಿಶೇಷ ಮಹಾಯಾಗವನ್ನು ಆಯೋಜಿಸಿದ್ದು, ಈ ಮೂಲಕ ದೇವರನ್ನು ಸಂತೃಪ್ತಿಗೊಳಿಸಿ ಶಾಂತವಾಗುವಂತೆ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಧೀನಂನ ಮುಖ್ಯಸ್ಥ ಶಿವಲಿಂಗೇಶ್ವರ್ ತಿಳಿಸಿದ್ದಾರೆ.

    ತಮಿಳುನಾಡಿನಲ್ಲಿ ಈ ಹಿಂದೆ ಸಾಂಕ್ರಾಮಿಕ ರೋಗಗಳು ಬಂದಾಗ ಅವುಗಳನ್ನು ದೇವಿ ರೂಪದಲ್ಲಿ ಆರಾಧಿಸಿ ದೇವಸ್ಥಾನ ನಿರ್ಮಿಸಲಾಗಿದೆ. ಈ ಹಿಂದೆ ಪ್ಲೇಗ್ ಜನರನ್ನು ಇನ್ನಿಲ್ಲಂತೆ ಕಾಡಿದಾಗ ಪ್ಲೇಗ್ ಮಾರಿಯಮ್ಮ ದೇವಾಲಯವನ್ನು ಕೊಯಿಮತ್ತೂರಿನಲ್ಲಿ ನಿರ್ಮಿಸಿ, ಪೂಜೆ ಸಲ್ಲಿಸಲಾಗಿತ್ತು.