Tag: ಮಹಾರಾಷ್ಟ್ರ ಮುಖ್ಯಮಂತ್ರಿ

  • ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್

    ಭಿನ್ನಮತಕ್ಕೆ ಬ್ರೇಕ್ ಹಾಕಲು ಉದ್ಧವ್ ಠಾಕ್ರೆ – ಶಿಂಧೆ ಸಭೆ, ಬಿಜೆಪಿ ನಾಯಕರೇ ಮಧ್ಯಸ್ಥಿಕೆ: ದೀಪಾಲಿ ಸೈಯದ್

    ಮುಂಬೈ: ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಶಿಂಧೆ ಹಾಗೂ ಶಿವಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಭೇಟಿಯಾಗಲು ಒಪ್ಪಿಕೊಂಡಿದ್ದಾರೆ ಎಂದು ಶಿವಸೇನೆ ನಾಯಕಿಯಾಗಿ ಗುರುತಿಸಿಕೊಂಡಿರುವ ಮರಾಠಿ ನಟಿ ದೀಪಾಲಿ ಸೈಯದ್ ಹೇಳಿದ್ದಾರೆ.

    ಶಿಂಧೆ ಹಾಗೂ ಠಾಕ್ರೆ ನಡುವಿನ ಸಭೆಗೆ ಬಿಜೆಪಿಯ ಕೆಲ ನಾಯಕರೇ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಬಳಿಕ ಶಿವಸೇನಾ ಅಧಿಕಾರಿಯೊಬ್ಬರು ಸೈಯದ್ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಹೊಂದಿಲ್ಲ ಎಂಬುದಾಗಿ ಹೇಳಿದ್ದಾರೆ. ಇದನ್ನೂ ಓದಿ: ತಂದೆ ಎದುರೇ ಮಗುವನ್ನು ಟೆರೇಸ್ ಮೇಲಿಂದ ಕೆಳಗೆಸೆದ ಕೋತಿ ಗ್ಯಾಂಗ್ – ಹಸುಗೂಸು ಸಾವು

    ದೀಪಾಲಿ 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಥಾಣೆ ಜಿಲ್ಲೆಯ ಮುಂಬ್ರಾ-ಕಲ್ವಾ ಕ್ಷೇತ್ರದಿಂದ ಶಿವಸೇನೆಯಿಂದ ಸ್ಫರ್ಧಿಸಲು ಉತ್ಸಾಹಿಯಾಗಿದ್ದರು. ಆದರೆ ಟಿಕೆಟ್ ಸಿಕ್ಕಿರಲಿಲ್ಲ. ಇದಕ್ಕೂ ಮುನ್ನ 2014ರಲ್ಲಿ ಆಮ್ ಆದ್ಮಿ (ಎಎಪಿ) ಪಕ್ಷದಿಂದ ಅಹ್ಮದ್‌ನಗರ ಜಿಲ್ಲೆಯಿಂದ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ: ತೆಲಂಗಾಣದ ಮೇಘಸ್ಫೋಟದ ಹಿಂದೆ ವಿದೇಶಿ ಶಕ್ತಿಗಳ ಷಡ್ಯಂತ್ರ – KCR

    ಸದ್ಯ ಶಿವಸೇನೆ ರಾಜಕೀಯ ಬೆಳವಣಿಗೆಗಳ ಕುರಿತು ಟ್ವೀಟ್ ಮಾಡಿರುವ ಅವರು, `ಶಿವಸೈನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಅವರ ಭೇಟಿ ಇನ್ನೆರಡು ದಿನಗಳಲ್ಲಿ ನಡೆಯಲಿದೆ ಎಂದು ತಿಳಿಯಲು ನನಗೆ ಸಂತೋಷವಾಗಿದೆ. ಶಿಂಧೆ ಸೈನಿಕರ ಭಾವನೆಗಳನ್ನು ಅರ್ಥಮಾಡಿಕೊಂಡರು. ಠಾಕ್ರೆ ಅವರು ತಮ್ಮ ಪಾತ್ರದಲ್ಲಿ ದೊಡ್ಡ ಮನಸ್ಸಿನಿಂದ ಅವರನ್ನ ಸ್ವೀಕರಿಸುತ್ತಿದ್ದಾರೆ. ಕೆಲವು ಬಿಜೆಪಿ ನಾಯಕರು ಈ ಸಭೆಗೆ ಮಧ್ಯಸ್ಥಿಕೆ ವಹಿಸುತ್ತಿದ್ದಾರೆ’ ಎಂದು ಸೈಯದ್ ಟ್ವೀಟ್ ಮಾಡಿದ್ದು, ಶಿವಸೇನಾ ನಾಯಕಿ ಎಂದೂ ಉಲ್ಲೇಖಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರಾವತ್, ಅಂತಹ ಯಾವುದೇ ಬೆಳವಣಿಗೆಯ ಬಗ್ಗೆ ನನಗೆ ತಿಳಿದಿಲ್ಲ. ನಾನು ಪಕ್ಷದಲ್ಲಿ ಬಹಳ ಸಣ್ಣ ಕಾರ್ಯಕರ್ತ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಸೆ.3ರಂದು ವಿಶ್ವದ ಮೊದಲ ರಣಹದ್ದು ಸಂರಕ್ಷಣೆ ಕೇಂದ್ರ ಉದ್ಘಾಟಿಸಲಿರುವ ಯೋಗಿ

    ಅಲ್ಲದೆ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ 15 ದಿನಗಳ ನಂತರವೂ ಪ್ರಮಾಣವಚನ ಸ್ವೀಕರಿಸಿಲ್ಲ. ಸಾಂವಿಧಾನಿಕ ಸಮಸ್ಯೆಗಳು ಇರುವುದರಿಂದ ಸಚಿವ ಸಂಪುಟವೂ ವಿಸ್ತರಣೆಯಾಗಿಲ್ಲ. ಶಿವಸೇನೆಯ 50 ಬಂಡಾಯ ಶಾಸಕರಲ್ಲಿ 40 ಮಂದಿ ಅನರ್ಹತೆಯ ಆತಂಕ ಎದುರಿಸುತ್ತಿದ್ದಾರೆ. ಇದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆಯಲ್ಲಿರುವುದರಿಂದ ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಒಂದು ವೇಳೆ ವಿಸ್ತರಣೆ ಮಾಡಿದರೂ ಅವರನ್ನು ಅನರ್ಹಗೊಳಿಸಲಾಗುತ್ತದೆ ಎಂದು ಟೀಕಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ಮಾಡಬಾರದು – ಮಹಾರಾಷ್ಟ್ರ ಸಿಎಂಗೆ ಶಾಸಕ ಪತ್ರ

    ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ಮಾಡಬಾರದು – ಮಹಾರಾಷ್ಟ್ರ ಸಿಎಂಗೆ ಶಾಸಕ ಪತ್ರ

    ಬೆಳಗಾವಿ: ಕರ್ನಾಟಕ ರಾಜ್ಯಕ್ಕೆ ನೀರು ಬಿಡುಗಡೆ ಮಾಡಬಾರದು ಎಂದು ಶಿವಸೇನೆ ಶಾಸಕರೊಬ್ಬರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಗೆ ಪತ್ರ ಬರೆದು ಉದ್ಧಟತನ ಪ್ರದರ್ಶಿಸಿದ್ದಾರೆ.

    ಸಿಎಂ ದೇವೇಂದ್ರ ಫಡ್ನವಿಸ್ ಅವರಿಗೆ ಪತ್ರ ಬರೆದಿರುವ ಸಾತಾರಾ ಜಿಲ್ಲೆಯ ಪಾಟಣ್ ಕ್ಷೇತ್ರದ ಶಾಸಕ ಶಂಭುರಾಜ ದೇಸಾಯಿ ಕೃಷ್ಣಾ ನದಿಗೆ ಕೊಯ್ನಾ ಡ್ಯಾಂನಿಂದ ನೀರು ಬಿಡುಗಡೆ ಮಾಡದಂತೆ ಪತ್ರ ಬರೆದು ನೀಚತನ ಪ್ರದರ್ಶನ ಮಾಡಿದ್ದಾರೆ.

    ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯಲ್ಲಿರುವ 105 ಟಿಎಂಸಿ ನೀರು ಸಂಗ್ರಹಣಾ ಸಾಮಥ್ರ್ಯದ ಕೊಯ್ನಾ ಡ್ಯಾಂನಲ್ಲಿ ಪ್ರಸ್ತುತ 36.89 ಟಿಎಂಸಿ ನೀರು ಸಂಗ್ರಹ ಹೊಂದಿದೆ. ರಾಜ್ಯದಲ್ಲಿ ಬರಗಾಲ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಮಹಾರಾಷ್ಟ್ರ ಸರ್ಕಾರಕ್ಕೆ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಶಂಭುರಾಜ ದೇಸಾಯಿ ಈ ಪತ್ರ ಬರೆದಿದ್ದಾರೆ.

    ಮೇ 5 ರಂದು ಸಿಎಂ ಕುಮಾರಸ್ವಾಮಿ, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ. ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.