Tag: ಮಹಾಲಕ್ಷ್ಮಿ ಲೇಔಟ್

  • ಸೀಲ್‍ಡೌನ್ ಪ್ರದೇಶದಲ್ಲಿ ವಾಕಿಂಗ್- ಪೊಲೀಸರ ಎಚ್ಚರಿಕೆಗೂ ಕ್ಯಾರೆ ಎನ್ನದ ಜನ

    ಸೀಲ್‍ಡೌನ್ ಪ್ರದೇಶದಲ್ಲಿ ವಾಕಿಂಗ್- ಪೊಲೀಸರ ಎಚ್ಚರಿಕೆಗೂ ಕ್ಯಾರೆ ಎನ್ನದ ಜನ

    – ಮಹಾಲಕ್ಷ್ಮಿ ಲೇಔಟ್ ನಲ್ಲಿ ಜನರ ಓಡಾಟ ಜೋರು

    ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‍ನ ಮಾರಪ್ಪನ ಪಾಳ್ಯದಲ್ಲಿ ಶನಿವಾರ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ಈ ಕುರಿತು ಪೊಲೀಸರು ಎಚ್ಚರಿಕೆ ನೀಡಿದರೂ ಜನ ವಾಕಿಂಗ್ ಮಾಡುತ್ತಿದ್ದಾರೆ.

    ಸೀಲ್‍ಡೌನ್ ಪ್ರದೇಶದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ವಾಕ್ ಮಾಡುತ್ತಿದ್ದು, ಮನೆಯಿಂದ ಹೊರಗಡೆ ಬರಬೇಡಿ ಎಂದು ಪೊಲೀಸರು ಕೂಗಿ ಹೇಳಿದರೂ, ಕ್ಯಾರೇ ಅನ್ನದೆ ಓಡಾಟ ನಡೆಸಿದ್ದಾನೆ. ಸೀಲ್‍ಡೌನ್ ಆದ ರೋಡಲ್ಲಿ ವಾಕಿಂಗ್ ವಾಕಿಂಗ್ ಮಾಡಿ ನಿರ್ಲಕ್ಷ್ಯದಿಂದ ವರ್ತಿಸಿದ್ದಾನೆ. ಶನಿವಾರವಷ್ಟೇ ಪೋಲೀಸ್ ಪೇದೆಗೆ ಪಾಸಿಟಿವ್ ಬಂದಿದ್ದು, ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್ ರಸ್ತೆಯನ್ನು ಸೀಲ್‍ಡೌನ್ ಮಾಡಲಾಗಿದೆ.

    ಸಂಪೂರ್ಣವಾಗಿ ಸೀಲ್‍ಡೌನ್ ಮಾಡಿ ಬ್ಯಾರಿಕೇಡ್ ಹಾಕಿದ್ದಾರೆ. ಆದರೆ ವ್ಯಕ್ತಿ ಓಡಾಟ ನಡೆಸಿದ್ದಾನೆ. ಮಹಾಲಕ್ಷ್ಮಿ ಲೇಔಟ್ ನಲ್ಲಿ ಜನರ ಓಡಾಟ ಜೋರಾಗಿದ್ದು, ಹಾಲು ಹಣ್ಣು, ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಕೊಳ್ಳಲು ಗುಂಪಾಗಿ ಸೇರುತ್ತಿದ್ದಾರೆ. ಎಷ್ಟೇ ಬ್ಯಾರಿಕೇಡ್ ಹಾಕಿದರೂ ಜನ್ರ ಓಡಾಡೋದು ಬಿಡುತ್ತಿಲ್ಲ. ಲಾಕ್‍ಡೌನ್ 4.0 ಹಿನ್ನೆಲೆ ಮೇ ಅಂತ್ಯದವರೆಗೂ ಪ್ರತಿ ಭಾನುವಾರ ಬಂದ್ ಇರುತ್ತೆ. ಹಾಲು, ತರಕಾರಿ ಕೊಳ್ಳಲು ಅವಕಾಶವೂ ಇದೆ. ಆದರೆ ಮಾರ್ಕೆಟ್‍ನಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ, ಮಾಸ್ಕ್ ಧರಿಸದೆ ಬರುತ್ತಿದ್ದಾರೆ. ಜೊತೆಗೆ ಚಿಕ್ಕ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದು, ಶನಿವಾರ ಪೇದೆಗೆ ಪಾಸಿಟಿವ್ ಬಂದರೂ ಜನರಿಗೆ ಭಯ ಇಲ್ಲದಂತಾಗಿದೆ.

  • ಹಣಕ್ಕೆ ಡಿಗ್ರಿ ಅಂಕಪಟ್ಟಿ ನೀಡುತ್ತಿದ್ದವರು ಸಿಸಿಬಿ ಬಲೆಗೆ ಬಿದ್ರು

    ಹಣಕ್ಕೆ ಡಿಗ್ರಿ ಅಂಕಪಟ್ಟಿ ನೀಡುತ್ತಿದ್ದವರು ಸಿಸಿಬಿ ಬಲೆಗೆ ಬಿದ್ರು

    ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದ ಮಹಾಲಕ್ಷ್ಮಿ ಲೇಔಟ್ ಶ್ರೀ ವೆಂಕಟೇಶ್ವರ ಇನ್‍ಸ್ಟಿಟ್ಯೂಟ್ ಮೇಲೆ ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ.

    ಮಂಗಳವಾರ ಸಂಜೆಯಿಂದ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹಲವು ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಅಪಾರ ಪ್ರಮಾಣದ ನಕಲಿ ಮಾರ್ಕ್ಸ್ ಕಾರ್ಡ್ ಗಳು ಪತ್ತೆಯಾಗಿವೆ. ಆಂಧ್ರ ಮೂಲದ ಶ್ರೀನಿವಾಸ್ ರೆಡ್ಡಿಗೆ ಸೇರಿದ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಈ ಮಾರ್ಕ್ಸ್ ಕಾರ್ಡ್ ದಂಧೆ ನಡೆಯುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

    ಹಣ ನೀಡಿದರೆ ಬೇಕಾದ ಡಿಗ್ರಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು. ಎಗ್ಗಿಲ್ಲದೇ ಮಾರ್ಕ್ಸ್ ಕಾರ್ಡ್ ಮಾರಾಟ ದಂಧೆ ನಡೆಯುತ್ತಿತ್ತು. ಒಂದು ಮಾರ್ಕ್ಸ್ ಕಾರ್ಡಿಗೆ 80 ಸಾವಿರದಿಂದ ಲಕ್ಷಾಂತರ ರೂಪಾಯಿ ಪಡೆಯುತ್ತಿದ್ದರು. ಅದೂ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಈ ಮಾರ್ಕ್ಸ್ ಕಾರ್ಡ್ ದಂಧೆ ಎಗ್ಗಿಲ್ಲದೆ ನಡೆಯುತಿತ್ತು.

    ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ ಸೇರಿ ಎಲ್ಲಾ ಡಿಗ್ರಿಗಳ ನಕಲಿ ಅಂಕ ಪಟ್ಟಿಯನ್ನು ಇಲ್ಲಿ ಮಾಡಿಕೊಡಲಾಗುತಿತ್ತು. ಒಂದು ವಿಷಯಕ್ಕೆ 15 ಸಾವಿರ ದಿಂದ 3 ಲಕ್ಷದವರೆಗೂ ಚಾರ್ಜ್ ಮಾಡಲಾಗುತಿತ್ತು. ನಾಮಾಕಾವಸ್ಥೆಗೆ ಪರೀಕ್ಷೆ ಬರೆಸುತ್ತಿದ್ದ ಆರೋಪಿಗಳು ಎಕ್ಸಾಮ್ ಅಟೆಂಡ್ ಮಾಡಿ ಬಂದರೆ ಸಾಕು ಇಲ್ಲಿ ಸುಲಭವಾಗಿ ಡಿಗ್ರಿ ಸಿಗುತಿತ್ತು. ಎಲ್.ಎಲ್.ಬಿ ಪದವಿಗಾಗಿ 3 ಲಕ್ಷ ಕೊಟ್ಟರೆ ಸರ್ಟಿಫಿಕೇಟ್ ಮಾಡಿಸಿ ಕೊಡುತ್ತಿದ್ದರು.

    ಈ ಆರೋಪಿಗಳು ಕೊಡುತ್ತಿದ್ದ ಮಾರ್ಕ್ಸ್ ಕಾರ್ಡ್ ಆಂಧ್ರ ಹಾಗೂ ರಾಜ್ಯದ ಅನೇಕ ವಿಶ್ವವಿದ್ಯಾಲಯಗಳದ್ದಾಗಿತ್ತು. ಕಾರ್ಲೆಕ್ಸ್ ಟೀಚರ್ ಯುನಿವರ್ಸಿಟಿ, ನಾರ್ತ್ ಈಸ್ಟ್ ಯುನಿವರ್ಸಿಟಿ, ಸ್ವಾಮಿ ವಿವೇಕಾನಂದ ಯುನಿವರ್ಸಿಟಿಗಳ ಮಾರ್ಕ್ಸ್ ಕಾರ್ಡ್ ಗಳನ್ನು ಲಕ್ಷ ಲಕ್ಷ ದುಡ್ಡು ತಗೊಂಡು ಕೊಡಿಸುತ್ತಿದ್ದರು.

    ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ತಂಡಕ್ಕೆ ಸಾವಿರಾರು ನಕಲಿ ಮಾರ್ಕ್ಸ್ ಕಾರ್ಡ್ ಗಳು ಪತ್ತೆಯಾಗಿವೆ. ದಾಳಿ ವೇಳೆ ಇನ್‍ಸ್ಟಿಟ್ಯೂಟ್ ನಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹಳೆ ಕಲ್ಲು ಹೊಸ ಬಿಲ್ಲು – ಬಿಬಿಎಂಪಿ ಹಗರಣ ಬಯಲು

    ಹಳೆ ಕಲ್ಲು ಹೊಸ ಬಿಲ್ಲು – ಬಿಬಿಎಂಪಿ ಹಗರಣ ಬಯಲು

    ಬೆಂಗಳೂರು: ಹಳೆ ಕಲ್ಲು ಹೊಸ ಬಿಲ್ಲು ಬಿಬಿಎಂಪಿಗೆ ಹೊಸದೇನಲ್ಲ. ಇದೀಗ ಬಿಬಿಎಂಪಿ ಹಗರಣ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅದು ಮಾಜಿ ಉಪಮೇಯರ್ ವಾರ್ಡ್ ಸಂಬಂಧಿತವಾಗಿದ್ದು ಅನ್ನೋದು ಇದೀಗ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

    ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ನಾಗಪುರ ವಾರ್ಡ್ ನಲ್ಲಿ ಇರುವ ಉಷಾ ಪಾರ್ಕ್ ನಲ್ಲಿ ಜಿಮ್ ಉಪಕರಣಗಳ ಬದಲಾವಣೆಗೆ ಈಗ ಟೆಂಡರ್ ಕರೆಯಲಾಗಿದೆ. ವರ್ಷದ ಹಿಂದೆ ಹಾಕಿದ್ದ ಜಿಮ್ ಉಪಕರಣಗಳ ಬದಲಾವಣೆಗೆ ಟೆಂಡರ್ ಕರೆಯಲಾಗಿದೆ. ಆದರೆ ವರ್ಷದ ಹಿಂದೆ ಹಾಕಿರೋ ಉಪಕರಣಕ್ಕೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‍ಐಡಿಎಲ್) ದಿಂದ ಹಣ ಬಿಡುಗಡೆಯಾಗಿದೆ.

    ಪಾರ್ಕ್ ನಲ್ಲಿ ಜಿಮ್ ಉಪಕರಣ ಹಾಕಲು ಸ್ಥಳಾವಕಾಶವಿಲ್ಲ. ಈಗಾಗಲೇ ಹತ್ತಕ್ಕೂ ಹೆಚ್ಚು ಜಿಮ್ ಉಪಕರಣಗಳು ಉತ್ತಮ ಸ್ಥಿತಿಯಲ್ಲಿದೆ. ಹೀಗಿರುವಾಗ ಜಿಮ್ ಸಲಕರಣೆ ಬದಲಾವಣೆಗೆ 25 ಲಕ್ಷ ಟೆಂಡರ್ ಕರೆಯಲಾಗಿದ್ದು, ಜೊತೆಗೆ ಉಷಾ ಪಾರ್ಕ್ ಇತರ ಅಭಿವೃದ್ಧಿಗಾಗಿ 20 ಲಕ್ಷ ಟೆಂಡರ್ ಮೊತ್ತ ಸಹ ಸೇರ್ಪಡೆ ಮಾಡಲಾಗಿದೆ. ಈ ಉಷಾ ಪಾರ್ಕ್ ಗಾಗಿ 45 ಲಕ್ಷ ಸುರಿಯಲು ಸಿದ್ಧವಾಗಿದೆ ಎನ್ನಲಾಗಿದೆ.

    ಹೊಸ ಟೆಂಡರ್ ಅಗತ್ಯ ಈ ಪಾರ್ಕ್ ನಲ್ಲಿ ಕಾಣಿಸುತ್ತಿದೆಯಾ ಎಂದು ಈ ಹಗರಣ ಸಂಬಂಧ ದೂರು ನೀಡಲು ಮತ್ತೊಬ್ಬ ಮಾಜಿ ಉಪಮೇಯರ್ ಸಿದ್ಧವಾಗಿದ್ದಾರೆ. ಜೊತೆಗೆ 1 ಸಾವಿರ ಕೋಟಿ ಮಹಾಲಕ್ಷ್ಮೀ ಲೇಔಟ್ ಗೆ ಅನುದಾನ ಬಂದಿದೆ. ಈ ಎಲ್ಲ ಅನುದಾನದ ಬಗ್ಗೆ ತನಿಖೆಗೆ ಆಗ್ರಹಿಸಲು ಮಾಜಿ ಉಪಮೇಯರ್ ಹರೀಶ್ ಸಜ್ಜಾಗಿದ್ದಾರೆ.