Tag: ಮಹಿಳಾ

  • ಪ್ರಿಯಾಂಕಾ ನಿಂದನೆ: ಸೋಮವಾರ ದೇಶಾದ್ಯಂತ ದಾಖಲಾಗಲಿದೆ ಎಫ್‍ಐಆರ್

    ಪ್ರಿಯಾಂಕಾ ನಿಂದನೆ: ಸೋಮವಾರ ದೇಶಾದ್ಯಂತ ದಾಖಲಾಗಲಿದೆ ಎಫ್‍ಐಆರ್

    ನವದೆಹಲಿ: ಕೆಲ ದಿನಗಳ ಹಿಂದೆಯಷ್ಟೇ ಸಕ್ರಿಯ ರಾಜಕಾರಣ ಪ್ರವೇಶಿಸಿರುವ ಪ್ರಿಯಾಂಕಾ ವಾದ್ರಾ ವಿರುದ್ಧ ಕೀಳುಮಟ್ಟದ ಪ್ರಚಾರ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲಾಗಲಿದೆ.

    ದುರುದ್ದೇಶಪೂರಿತವಾಗಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೀಳುಮಟ್ಟದ ಪ್ರಚಾರ ನಡೆಸಿದವರ ಅವರ ವಿರುದ್ದ ದೇಶಾದ್ಯಂತ ಕಾಂಗ್ರೆಸ್ ಮಹಿಳಾ ಘಟಕ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಸೋಮವಾರ ಎಫ್‍ಐಆರ್ ದಾಖಲಿಸಲಿದೆ ಘಟಕದ ಅಧ್ಯಕ್ಷೆ ಸುಶ್ಮಿತಾ ದೇವ್ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ರಾಜಕೀಯ ಪ್ರವೇಶಿಸುತ್ತಿರುವ ನಾಯಕಿಯರ ಬಗ್ಗೆ ನಮ್ಮ ದೇಶದಲ್ಲಿ ಕೀಳಾಗಿ ನಡೆಸಿಕೊಳ್ಳಲಾಗುತ್ತಿದೆ. ಹಲವು ಬಿಜೆಪಿ ನಾಯಕರು ಈಗಾಗಲೇ ಕೀಳು ಮಟ್ಟದ ಹೇಳಿಕೆಯನ್ನು ನೀಡಿದ್ದಾರೆ. ನಾನು ದೆಹಲಿಯಲ್ಲಿ ಎಫ್‍ಐಆರ್ ದಾಖಲಿಸುತ್ತಿದ್ದು, ರಾಜ್ಯ ಘಟಕ ಅಧ್ಯಕ್ಷರಿಗೆ ಆಯಾ ರಾಜ್ಯಗಳ ರಾಜಧಾನಿಗಳಲ್ಲಿ ಎಫ್‍ಐಆರ್ ದಾಖಲಿಸಲು ಸೂಚಿಸಲಾಗಿದೆ ಎಂದು ಸುಶ್ಮಿತಾ ದೇವ್ ವಿಡಿಯೋದಲ್ಲಿ ತಿಳಿಸಿದ್ದಾರೆ.

    ಉತ್ತರ ಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ರಾವಣಾಸುರ ಹಾಗೂ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಅವರನ್ನು ಶೂರ್ಪನಖಿಗೆ ಹೋಲಿಕೆ ಮಾಡಿ ವ್ಯಂಗ್ಯವಾಡಿದ್ದರು.

    ರಾಹುಲ್ ರಾವಣನಾದರೆ, ಅವರ ಸಹೋದರಿ ಪ್ರಿಯಾಂಕಾ ಶೂರ್ಪನಖಿ. ಆದರೆ ನಮ್ಮ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮಚಂದ್ರನಿದ್ದಂತೆ. ಈ ಆಧುನಿಕ ರಾವಣ ನಮ್ಮ ರಾಮನ ವಿರುದ್ಧ ತನ್ನ ತಂಗಿಯನ್ನು ರಾಜಕೀಯ ಯುದ್ಧಕ್ಕೆ ಕಳುಹಿಸಿದ್ದಾರೆ. ಆದರೆ ರಾಮಾಯಣದಲ್ಲಿ ಯುದ್ಧಕ್ಕೆ ಮೊದಲು ರಾವಣ ತನ್ನ ತಂಗಿ ಶೂರ್ಪನಖಿಯನ್ನು ರಾಮನ ಬಳಿಗೆ ಕಳಿಸಿ ಅನುಭವಿಸಿದ ಅವಮಾನವನ್ನೇ ಈಗ ರಾಹುಲ್ ಅನುಭವಿಸಬೇಕಾಗುತ್ತದೆ ಎಂದು ಸುರೇಂದ್ರ ಸಿಂಗ್ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

     

  • ಲಕ್ಷ್ಮಿ ಹೆಬ್ಬಾಳ್ಕರ್ ತಲೆ ದಂಡಕ್ಕೆ ಮುಹೂರ್ತ ಫಿಕ್ಸ್?

    ಲಕ್ಷ್ಮಿ ಹೆಬ್ಬಾಳ್ಕರ್ ತಲೆ ದಂಡಕ್ಕೆ ಮುಹೂರ್ತ ಫಿಕ್ಸ್?

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಶೀಘ್ರದಲ್ಲಿಯೇ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲು ಮುಹೂರ್ತ ಸಿದ್ಧವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಹೌದು, ಶೀಘ್ರದಲ್ಲಿಯೇ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಜಿ ಆಗಲಿದ್ದಾರೆ. ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ಈಗಾಗಲೇ ಲಕ್ಷ್ಮಿ ಹೆಬ್ಬಾಳ್ಕರ್ ಪದಚ್ಯುತಿಗೆ ದೆಹಲಿಯಲ್ಲಿ ಮುಹೂರ್ತ ನಿಗದಿಯಾಗುತ್ತಿದೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕಾಗಿ ಮಹಿಳಾ ಕಾಂಗ್ರೆಸ್ ನಲ್ಲಿ ಲಾಬಿ ಹೆಚ್ಚಾಗಿದ್ದು, ಇನ್ನು 15 ದಿನದ ಒಳಗಾಗಿ ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಾಗಲಿದೆ. ಈಗಾಗಲೇ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದಾರೆ. ಅಲ್ಲದೇ ಬುಧವಾರವೂ ಸಹ ರಾಜ್ಯದ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನ ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದಾರೆ. ಇಂದು 3 ಜನರ ಸಂದರ್ಶನ ನಡೆಯುತ್ತಿದೆ ಎನ್ನಲಾಗಿದೆ.

    ಪುಷ್ಪ ಅಮರ್ ನಾಥ್, ನಾಗಲಕ್ಷ್ಮಿ ಚೌದರಿ, ಕಮಲಾಕ್ಷಿ ರಾಜಣ್ಣ, ಶಾರದಾ ಗೌಡ ಹಾಗೂ ಗೀತಾ ರಾಜಣ್ಣ ಸೇರಿದಂತೆ ಒಟ್ಟು 12 ಜನ ಮಹಿಳಾ ನಾಯಕಿಯರ ಸಂದರ್ಶನ ಮಾಡಲಾಗಿದೆ. ಇವರಲ್ಲಿ ಒಬ್ಬರು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

    ಹಾಲಿ ಅಧ್ಯಕ್ಷೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್, ಲೋಕಸಭಾ ಚುನಾವಣೆಯವರೆಗೂ ಮುಂದುವರಿಯಲು ಅವಕಾಶ ಕೊಡಿ ಎಂಬ ಮನವಿಗೆ ಸುಶ್ಮಿತಾ ದೇವ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅನಿವಾರ್ಯವಾಗಿ ತಮ್ಮ ಸ್ಥಾನವನ್ನು ಬಿಟ್ಟುಕೊಡಲೇಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಿಳಾ ಟೆಕ್ಕಿಯನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋದ ಊಬರ್ ಚಾಲಕ!

    ಮಹಿಳಾ ಟೆಕ್ಕಿಯನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋದ ಊಬರ್ ಚಾಲಕ!

    ಬೆಂಗಳೂರು: ಮಹಿಳಾ ಟೆಕ್ಕಿಯ ಜೊತೆ ಊಬರ್ ಚಾಲಕ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಎಚ್‍ಎಸ್‍ಆರ್ ಲೇಔಟ್ ನಿಂದ ಬೆಳ್ಳಂದೂರಿನ ಕಂಪನಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಂಪನಿಯಿಂದ ಹೋಗುವ ವೇಳೆ ಚಾಲಕ ಮಾರ್ಗ ಬದಲಾವಣೆ ಮಾಡಿದ್ದಾನೆ. ಮಾರ್ಗ ಬದಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟೆಕ್ಕಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ.

    ಈ ಕ್ಷಣವೇ ಟ್ರಿಪ್ ರದ್ದು ಪಡಿಸುತ್ತೇನೆ. ಏನು ಬೇಕಾದರೂ ಮಾಡಿಕೊಳ್ಳಿ ಎಂದು ಚಾಲಕ ತನ್ನ ದುಂಡಾವರ್ತನೆ ತೋರಿದ್ದಾನೆ. ಅಲ್ಲದೇ ಚಾಲಕ ಅವಾಚ್ಯ ಶಬ್ಧಗಳಿಂದ ನಿಂದಿಸಿ ಟೆಕ್ಕಿಯನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದಾನೆ.

    ಮಹಿಳಾ ಟೆಕ್ಕಿ ಊಬರ್ ಕ್ಯಾಬ್ ಕೆಎ 42, ಎ 4692 ಇಟಿಯೋಸ್ ಕಾರಿನಲ್ಲಿ ಕಂಪನಿಗೆ ತೆರಳುತ್ತಿದ್ದರು. ಸದ್ಯ ಟೆಕ್ಕಿ ಟ್ವಿಟರ್ ಮೂಲಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಹಿಂದೆ ಜೀವನ್‍ಭೀಮಾನಗರ ಹಾಗೂ ಚಿಕ್ಕಜಾಲದಲ್ಲಿಯೂ ಇಂತದೇ ಎರಡು ಪ್ರಕರಣಗಳು ಬೆಳಕಿಗೆ ಬಂದಿತ್ತು.