Tag: ಮಹಿಳಾ ಪೊಲೀಸರು

  • ಹೆಲ್ಮೆಟ್‌ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸರು – ಹಿಗ್ಗಾಮುಗ್ಗ ಕ್ಲಾಸ್‌ ತೆಗೆದುಕೊಂಡ ಮಹಿಳೆ

    ಹೆಲ್ಮೆಟ್‌ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸರು – ಹಿಗ್ಗಾಮುಗ್ಗ ಕ್ಲಾಸ್‌ ತೆಗೆದುಕೊಂಡ ಮಹಿಳೆ

    ಬೆಂಗಳೂರು: ಸಾರ್ವಜನಿಕರು ಸಂಚಾರ ನಿಯಮ (Traffic Rules) ಉಲ್ಲಂಘಿಸಿದರೆ ಬುದ್ದಿಮಾತು ಹೇಳಿ ಜಾಗೃತಿ ಮೂಡಿಸಬೇಕಾದ ಪೊಲೀಸ್‌ ಇಲಾಖೆಯವರೇ ತಪ್ಪು ಮಾಡಿ ಟೀಕೆಗೆ ಗುರಿಯಾಗಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ಹೆಲ್ಮೆಟ್‌ ಕೂಡ ಇಲ್ಲದೇ ತ್ರಿಬಲ್‌ ರೈಡಿಂಗ್‌ ಬಂದ ಮಹಿಳಾ ಪೊಲೀಸ್‌ ಪೇದೆಗಳಿಗೆ ಮಹಿಳೆಯೊಬ್ಬರು ಕ್ಲಾಸ್‌ ತೆಗೆದುಕೊಂಡಿದ್ದಾರೆ.

    ಮೂವರು ಮಹಿಳಾ ಪೊಲೀಸ್‌ ಪೇದೆಗಳು ಹೆಲ್ಮೆಟ್‌ ಇಲ್ಲದೇ ಸ್ಕೂಟಿಯಲ್ಲಿ ತ್ರಿಬಲ್‌ ರೈಡಿಂಗ್‌ ಬಂದಿದ್ದಾರೆ. ಮತ್ತೊಂದು ಸ್ಕೂಟಿಯಲ್ಲಿ ಇನ್ನಿಬ್ಬರು ಮಹಿಳಾ ಕಾನ್‌ಸ್ಟೇಬಲ್‌ಗಳಲ್ಲಿ ಹಿಂಬದಿ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ. ಇದನ್ನು ಗಮನಿಸಿದ ಮಹಿಳೆಯೊಬ್ಬರು, “ರೂಲ್ಸ್ ಮಾಡೊರೂ ನೀವೇ.. ಬ್ರೇಕ್ ಮಾಡೊರೂ ನೀವೇ..ʼ ಅಂತಾ ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೇ ಈ ದೃಶ್ಯವನ್ನು ವೀಡಿಯೋ ಕೂಡ ಮಾಡಿದ್ದಾರೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು

    ಮಹಿಳೆ ರೇಗುತ್ತಿದ್ದಂತೆಯೇ ಹಿಂಬದಿ ಸವಾರರು ಸ್ಕೂಟಿಯಿಂದ ಇಳಿದಿದ್ದಾರೆ. “ತುರ್ತು ಕೆಲಸ ಇತ್ತು. ಅದಕ್ಕಾಗಿ ಹೆಲ್ಮೆಟ್‌ ಇಲ್ಲದೇ ಬಂದಿದ್ದೇವೆ” ಎಂದು ಉಡಾಫೆ ಉತ್ತರ ಕೂಡ ಮಹಿಳಾ ಪೊಲೀಸರು ನೀಡಿದ್ದಾರೆ.

    “ನೀವು ಏನ್ ಏನ್ ರೂಲ್ಸ್ ಬ್ರೇಕ್ ಮಾಡಿದೀರಾ ನೋಡಿಕೊಳ್ಳಿ. ದಯವಿಟ್ಟು ಗಾಡಿಯಿಂದ ಇಳಿಯಿರಿ, ಹೆಲ್ಮೆಟ್ ಹಾಕಿಕೊಳ್ಳಿ. ಇವರೇ ರೂಲ್ಸ್ ಮಾಡ್ತಾರೇ ಅಂತ ಹೇಳಲ್ವಾ ಎಂದು ಮಹಿಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಮಹಿಳೆ ಈ ವೀಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವೀಡಿಯೋ ವೈರಲ್‌ ಆಗಿದೆ. ಇದನ್ನೂ ಓದಿ: ನಾವು ಯಾವುದೇ ರೌಡಿಗಳನ್ನು ಸೇರಿಸಿಕೊಂಡಿಲ್ಲ, ಪ್ರೋತ್ಸಾಹ ನೀಡಿಲ್ಲ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಭಟ್ಕಳದಲ್ಲಿ ಮಹಿಳಾ ಪೊಲೀಸರಿಂದಲೇ ರಾತ್ರಿ ಗಸ್ತು – ನಿರ್ಭೀತಿಯಿಂದ ವಾಹನಗಳ ತಪಾಸಣೆ, ವಿಚಾರಣೆ

    ಭಟ್ಕಳದಲ್ಲಿ ಮಹಿಳಾ ಪೊಲೀಸರಿಂದಲೇ ರಾತ್ರಿ ಗಸ್ತು – ನಿರ್ಭೀತಿಯಿಂದ ವಾಹನಗಳ ತಪಾಸಣೆ, ವಿಚಾರಣೆ

    ಕಾರವಾರ: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷರಿಗೆ ಸರಿಸಮಾನರಾಗಿ ಪೈಪೋಟಿ ನೀಡುತ್ತಿದ್ದಾರೆ. ಅದರಲ್ಲೂ ಪೊಲೀಸ್ ಇಲಾಖೆಯಲ್ಲೂ ಸಹ ಸೇವೆ ಸಲ್ಲಿಸುವ ಮೂಲಕ ತಮ್ಮ ಸಾಮರ್ಥ್ಯವನ್ನ ಪ್ರದರ್ಶಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ರಾತ್ರಿ ಗಸ್ತಿಗೆ ನಿಯೋಜನೆ ಮಾಡಿದ್ದಾರೆ. ಸಂಪೂರ್ಣ ಮಹಿಳಾ ಪೊಲೀಸರ ತಂಡವೇ ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸಿದೆ.

    ಹೌದು, ಸಾಮಾನ್ಯವಾಗಿ ಪೊಲೀಸ್ ಇಲಾಖೆಯಲ್ಲಿ ರಾತ್ರಿ ಕರ್ತವ್ಯಕ್ಕೆ ಮಹಿಳಾ ಸಿಬ್ಬಂದಿಯನ್ನು ಠಾಣೆಯಲ್ಲಿ ಮಾತ್ರ ನಿಯೋಜನೆ ಮಾಡುತ್ತಿದ್ದರು. ಇದೀಗ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರನ್ನು ಗಸ್ತು ಕಾರ್ಯಕ್ಕೆ ನಿಯೋಜಿಸಲಾಗಿದೆ. ಪಿಎಸ್‍ಐ ಸುಮಾ ನೇತೃತ್ವದಲ್ಲಿ ತಡರಾತ್ರಿ ಆಯಕಟ್ಟಿನ ಸ್ಥಳಗಳಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಶಂಕಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಸುರಕ್ಷತೆ ಮರೆತ ಬಿಎಂಟಿಸಿ – ಕಳ್ಳರ ಅಡ್ಡವಾದ ಬಸ್‍ಗಳು

    ಈ ವಿಚಾರವಾಗಿ ಮಾತನಾಡಿದ ಸ್ಥಳೀಯರೊಬ್ಬರು, ಮಹಿಳಾ ಸಿಬ್ಬಂದಿಯ ರಾತ್ರಿ ಗಸ್ತು ಇತರೆ ಮಹಿಳೆಯರಿಗೂ ಸ್ಫೂರ್ತಿ ನೀಡುವಂತಿದೆ. ಜೊತೆಗೆ ಮಹಿಳೆಯರಿಗೂ ಸುರಕ್ಷತೆಯ ಭಾವನೆ ಮೂಡಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಠಾಣೆಯಲ್ಲೂ ಹದಿನೈದು ದಿನಗಳಿಗೊಮ್ಮೆ ಮಹಿಳಾ ಸಿಬ್ಬಂದಿಯನ್ನು ರಾತ್ರಿ ಗಸ್ತಿಗೆ ನಿಯೋಜಿಸಲು ಚಿಂತನೆ ನಡೆದಿದೆ. ಇದು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಲಿದೆ. ಇದನ್ನೂ ಓದಿ: ಕಸದ ವಾಹನಗಳ ಮೇಲೆ BBMP ನಾಮಫಲಕ ಹಾಕುವಂತಿಲ್ಲ – ಹೆಸರು ಹಾಕಿದ ವಾಹನಗಳ ಮೇಲೆ ಕ್ರಿಮಿನಲ್ ಕೇಸ್

    Live Tv
    [brid partner=56869869 player=32851 video=960834 autoplay=true]

  • ಪ್ರಿಯಾಂಕಾ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಪೊಲೀಸರ ವಿರುದ್ಧ ಕ್ರಮ

    ಪ್ರಿಯಾಂಕಾ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಪೊಲೀಸರ ವಿರುದ್ಧ ಕ್ರಮ

    ಲಕ್ನೋ: ಕಾಂಗ್ರೆಸ್ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

    ಉತ್ತರ ಪ್ರದೇಶದಿಂದ ಆಗ್ರಾಕ್ಕೆ ಹೋಗುವಾಗ ಲಕ್ನೋ ಹೊರವಲಯದಲ್ಲಿ ಪ್ರಿಯಾಂಕಾ ಗಾಂಧಿ ಜೊತೆ ಮಹಿಳಾ ಕಾನ್ಸ್‌ಸ್ಟೇಬಲ್‌ ಗುಂಪೊಂದು ಸೆಲ್ಫಿ ಕ್ಲಿಕ್ಕಿಸಿಕೊಂಡಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದಾಗ್ಯೂ ಈ ವಿಚಾರ ಕಾನ್ಸ್‌ಸ್ಟೇಬಲ್‍ಗಳಿಗೆ ಖುಷಿಯಾದ ವಿಚಾರವಾಗಿ ಪರಿಣಮಿಸದೇ ಸಮಸ್ಯೆಯಾಗಿ ಎದುರಾಗಿದೆ. ಇದನ್ನೂ ಓದಿ: ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಬಸವರಾಜ ಬೊಮ್ಮಾಯಿ

    ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಫೋಟೋಗೆ ಪೋಸ್ ನೀಡಿದ ಮಹಿಳಾ ಕಾನ್ಸ್‌ಸ್ಟೇಬಲ್‌ಗಳು ಕ್ರಮ ಎದುರಿಸಬೇಕಾಗುತ್ತದೆ ಎಂದು ಲಕ್ನೋ ಪೊಲೀಸ್ ಆಯುಕ್ತ ಡಿ.ಕೆ. ಠಾಕೂರ್ ತಿಳಿಸಿದ್ದಾರೆ. ಇದನ್ನೂ ಓದಿ: ಪಠ್ಯಪುಸ್ತಕದಲ್ಲಿ ಪ್ರವಾದಿ, ಇಸ್ಲಾಂ ಅವಹೇಳನ – ಪ್ರೊ.ಬಿ.ಆರ್.ರಾಮಚಂದ್ರಯ್ಯರನ್ನು ಕೆಲಸದಿಂದ ವಜಾಗೊಳಿಸಿಲು ಆಗ್ರಹ

    ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ನನ್ನ ಜೊತೆ ಫೋಟೋ ತೆಗೆದುಕೊಳ್ಳುವುದು ಅಪರಾಧ ಆಗಿದ್ದರೆ, ನನಗೆ ಶಿಕ್ಷೆ ನೀಡಬೇಕು, ಆದರೆ ಮಹಿಳಾ ಕಾನ್ಸ್‌ಸ್ಟೇಬಲ್‌ಗಳನ್ನು ದೂಷಿಸುವುದು ಏಕೆ? ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ- ನಾಳೆ ತುಮಕೂರು ಬಂದ್

    ಯೋಗಿ ಆದಿತ್ಯನಾಥ್ ಅವರಿಗೆ ಈ ಫೋಟೋ ವಿಚಾರವಾಗಿ ಅಸಮಾಧಾನವಿದ್ದು, ಅವರು ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ. ನನ್ನೊಂದಿಗೆ ಫೋಟೋ ತೆಗೆದುಕೊಂಡಿರುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೆ ಶಿಕ್ಷೆ ನೀಡಬೇಕು. ಅದನ್ನು ಹೊರತುಪಡಿಸಿ ಈ ಶ್ರಮಜೀವಿ ಮತ್ತು ನಿಷ್ಠಾವಂತ ಪೊಲೀಸರ ವೃತ್ತಿಯನ್ನು ಹಾಳುಮಾಡುವುದು ಸರ್ಕಾರಕ್ಕೆ ಕ್ಷೋಭೆಯಲ್ಲ ಎಂದಿದ್ದಾರೆ.

    25 ಲಕ್ಷ ಕಳ್ಳತನ ಮಾಡಿದ ಆರೋಪದಲ್ಲಿ ಅರುಣ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದರು. ಆದರೆ ಆ ವ್ಯಕ್ತಿಯು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಲು ಹೊರಟಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆಗ್ರಾಕ್ಕೆ ತೆರಳುತ್ತಿದ್ದರು. ಆದರೆ ಈ ವೇಳೆ ಪ್ರಿಯಾಂಕಾ ಗಾಂಧಿ ಭೇಟಿಯಿಂದ ಅಲ್ಲಿನ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದ್ದಿದ್ದರಿಂದ ಪೊಲೀಸರು ಅವರನ್ನು ವಶಕ್ಕೆ ಪಡೆದಿದರು. ಆದರೆ ಸ್ವಲ್ಪ ಸಮಯದ ನಂತರ ಬಿಡುಗಡೆಗೊಳಿಸಿ ಕೇವಲ ನಾಲ್ಕು ಮಂದಿಗೆ ಮಾತ್ರ ಆಗ್ರಾಗೆ ಹೋಗಲು ಅನುಮತಿ ನೀಡಲಾಯಿತು.

  • ಹೆಣ್ಮಕ್ಳನ್ನ ಕೆಣಕಿದ್ರೆ ಹುಷಾರ್ – ತುಮಕೂರಿನಲ್ಲಿ ಹೆಣ್ಮಕ್ಳ ರಕ್ಷಣೆಗೆ ಕಲ್ಪತರು ಪಡೆ ಸಜ್ಜು

    ಹೆಣ್ಮಕ್ಳನ್ನ ಕೆಣಕಿದ್ರೆ ಹುಷಾರ್ – ತುಮಕೂರಿನಲ್ಲಿ ಹೆಣ್ಮಕ್ಳ ರಕ್ಷಣೆಗೆ ಕಲ್ಪತರು ಪಡೆ ಸಜ್ಜು

    ತುಮಕೂರು: ಹೆಣ್ಣು ಮಕ್ಕಳನ್ನು ಚುಡಾಯಿಸುವ ಬೀದಿ ಕಾಮಣ್ಣರಿಗೆ, ಕಾಲೇಜು ಬಳಿ ನಿಂತು ವಿದ್ಯಾರ್ಥಿಯರನ್ನ ಕಾಡುವ ಕಾಮುಕರಿಗೆ ಬುದ್ಧಿ ಕಲಿಸಲು ತುಮಕೂರಿನಲ್ಲಿ ಹೊಸ ಪಡೆ ಸಜ್ಜಾಗಿದೆ. ಹುಡುಗಿಯರನ್ನು ಕೆಣಕಿದರೆ ಕೇಳೋರು ಯಾರು ಅಂತ ಕಾಲರ್ ಮೇಲೇರಿಸಿ ಓಡಾಡಿದರೆ ಜೈಲೂಟ ಗ್ಯಾರೆಂಟಿ. ಯಾಕೆಂದರೆ ಬೀದಿ ಕಾಮಣ್ಣರಿಗೆ, ಸ್ತ್ರೀ ಪೀಡಕರಿಗೆ ಬುದ್ಧಿ ಕಲಿಸಲು ತುಮಕೂರಿನಲ್ಲಿ ಕಲ್ಪತರು ಪಡೆ ಎಂಬ ಮಹಿಳಾ ಪೊಲೀಸ್ ಪಡೆ ಸನ್ನದ್ಧವಾಗಿದೆ. ರಾಜ್ಯದಲ್ಲೇ ಮೊದಲನೆ ಬಾರಿಗೆ ತುಮಕೂರು ಪೊಲೀಸರು ಕಲ್ಪತರು ಪಡೆ ಹೆಸರಿನ ಮಹಿಳಾ ಪೊಲೀಸರ ತಂಡ ರೆಡಿಮಾಡಿದ್ದಾರೆ.

    ಮಹಿಳೆಯರು, ಬಾಲಕಿಯರು, ಯುವತಿಯರ ರಕ್ಷಣೆಗೆ ಶಾಲಾ-ಕಾಲೇಜು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಹಿಳಾ ಹಾಸ್ಟೇಲ್ ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಕಾಡುವ ಪೋಲಿಗಳಿಗೆ ಬುದ್ಧಿ ಕಲಿಸಲು ಈ ತಂಡ ಸಜ್ಜಾಗಿದೆ. ಅಬಲೆಯರಿಗೆ ರಕ್ಷಣೆ ನೀಡುವ ಜವಬ್ದಾರಿ ಹೊತ್ತಿರುವ ಈ ತಂಡಕ್ಕೆ ಕಳೆದ 6 ತಿಂಗಳಿಂದ ನಿರಂತರವಾಗಿ ತರಬೇತಿ ನೀಡಲಾಗಿದೆ. ಈ ತಂಡ ಪ್ರತಿದಿನ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಸ್ವಯಂ ರಕ್ಷಣೆ ಬಗ್ಗೆ ಹೆಣ್ಣು ಮಕ್ಕಳಿಗೆ ತರಬೇತಿ ನೀಡುತ್ತಿದೆ. ಜೊತೆಗೆ ಅಪತ್ಕಾಲದಲ್ಲಿ ಕಿಡಿಗೇಡಿಗಳಿಂದ ತಪ್ಪಿಸಿಕೊಳ್ಳುವುದು ಹೇಗೆ? ಎದುರಾಳಿಗಳ ದಾಳಿಗೆ ಪ್ರತಿದಾಳಿ ತೋರುವ ಕಲೆಯನ್ನು ಹೇಳಿ ಕೊಡಲಾಗುತ್ತಿದೆ. ಇದರ ಜೊತೆಗೆ ಬಾಲಕಿಯರಿಗೆ ತಮ್ಮನ್ನು ತಾವು ಕಾಪಾಡುವುದು ಹೇಗೆ? ಕಾಮುಕರ ವರ್ತನೆಗಳು ಹೇಗಿರುತ್ತೇವೆ? ಸಾರ್ವಜನಿಕ ಸ್ಥಳದಲ್ಲಿ ಹೇಗೆಲ್ಲಾ ಎಚ್ಚರವಾಗಿರಬೇಕು? ಎನ್ನುವುದನ್ನ ಮನದಟ್ಟು ಮಾಡಿಕೊಡಲಾಗುತ್ತಿದೆ.

    ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುವ ಈ ಪಡೆಗೆ ನಾಲ್ಕು ವಿಭಾಗಗಳಿಂದ 80 ಮಹಿಳಾ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ತುಮಕೂರು ನಗರ, ಶಿರಾ, ತಿಪಟೂರು, ಕುಣಿಗಲ್ ವಿಭಾಗಕ್ಕೆ ಪ್ರತ್ಯೇಕವಾಗಿ 8 ಮಹಿಳಾ ಪೊಲೀಸ್ ಪೇದೆಗಳ ತಂಡವಿದ್ದು, ಪ್ರತಿ ತಂಡಕ್ಕೆ ಓರ್ವ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಅನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಈ ತಂಡಕ್ಕೆ ಪ್ರತ್ಯೇಕವಾದ ವಾಹನ, ಸಮವಸ್ತ್ರ ಕೂಡ ನೀಡಲಾಗಿದೆ.

    ಎಸ್‍ಪಿ ಡಾ. ಕೋನ ವಂಶಿ ಕೃಷ್ಣ ಈ ಯೋಜನೆಯ ರೂವಾರಿಯಾಗಿದ್ದು, ಈ ಕಲ್ಪತರು ಪಡೆ ಮಹಿಳಾ ರಕ್ಷಣೆಯ ಜವಬ್ದಾರಿಯನ್ನು ಮಾತ್ರ ಗಮನಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿದಿನ ಶಾಲಾ-ಕಾಲೇಜು ಸೇರಿದ್ದಂತೆ ಮಹಿಳೆಯರಿಗೆ ಅಸುರಕ್ಷತೆ ಅನ್ನಿಸುವ ಸ್ಥಳಗಳಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

    ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ದೈಹಿಕ, ಮಾನಸಿಕ ಹಿಂಸೆಗಳನ್ನು ಹತ್ತಿಕ್ಕುವ ಉದ್ದೇಶದಿಂದ ಈ ರೀತಿ ವಿಭಿನ್ನವಾದ ತಂಡ ರಚನೆಯಾಗಿದೆ. ಕಾಮುಕರಿಂದ ತೊಂದರೆಗೊಳಗಾದ ಮಹಿಳೆಯರು ಕೂಡಲೇ ಈ ಕಲ್ಪತರು ಪಡೆಗೆ ಮಾಹಿತಿ ನೀಡಬಹುದಾಗಿದೆ. ಅದಕ್ಕಾಗಿ ಕಲ್ಪತರು ಪಡೆ ಸಿಬ್ಬಂದಿಗಳ ನಂಬರ್ ಗಳನ್ನು ಮಹಿಳೆಯರಿಗೆ ನೀಡಲಾಗುತ್ತಿದೆ. ಮಹಿಳೆಯರ ಸುರಕ್ಷತೆಗೆ ತುಮಕೂರು ಪೊಲೀಸರು ತೆಗೆದುಕೊಂಡಿರುವ ಈ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

  • ಕಾಮುಕರ ಹೆಡೆಮುರಿಕಟ್ಟಲು ರಾಯಚೂರಿನಲ್ಲಿ ತಲೆ ಎತ್ತಿದೆ ಓಬವ್ವ ಪಡೆ

    ಕಾಮುಕರ ಹೆಡೆಮುರಿಕಟ್ಟಲು ರಾಯಚೂರಿನಲ್ಲಿ ತಲೆ ಎತ್ತಿದೆ ಓಬವ್ವ ಪಡೆ

    – ವಿಶೇಷ ಪಿಂಕ್ ವಾಹನದಲ್ಲಿ ಗಸ್ತು ತಿರುಗಲಿದೆ 10 ಜನರ ತಂಡ
    – ನಗರ ಹಾಗೂ ಹೊರವಲಯದಲ್ಲಿ ಮಹಿಳೆಯರ ರಕ್ಷಣೆಗೆ ಖಾಕಿ ಕ್ರಮ

    ರಾಯಚೂರು: ನಗರದಲ್ಲೀಗ ವಿದ್ಯಾರ್ಥಿನಿಯರು, ಮಹಿಳೆಯರ ಮೇಲೆ ಎಲ್ಲೇ ದೌರ್ಜನ್ಯ ನಡೆಯುತ್ತೆ ಅಂತ ತಿಳಿದರೂ ಈ ವಿಶೇಷ ಸಿಬ್ಬಂದಿ ಅಲ್ಲಿ ಹೆಣ್ಣುಮಕ್ಕಳ ರಕ್ಷಣೆಗೆ ಪ್ರತ್ಯಕ್ಷವಾಗುತ್ತೆ. ಮಹಿಳಾ ಪೊಲೀಸರ ಓಬವ್ವ ಪಡೆ ಕಾಮುಕರ ಹೆಡೆಮುರಿಕಟ್ಟಲು ರಾಯಚೂರಿನಲ್ಲಿ ಸಿದ್ಧವಾಗಿದೆ.

    ಎಲ್ಲೆಡೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಯಚೂರು ಜಿಲ್ಲಾ ಪೊಲೀಸರು ಹೊಸ ಯೋಜನೆ ರೂಪಿಸಿದ್ದಾರೆ. 10 ಮಹಿಳಾ ಸಿಬ್ಬಂದಿಗೆ ಕರಾಟೆ ಸೇರಿ ಇತರೆ ತರಬೇತಿ ಹಾಗೂ ಮಹಿಳೆಯರ ರಕ್ಷಣೆ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಾರ್ಯಗಾರಗಳ ಮೂಲಕ ತಿಳುವಳಿಕೆ ನೀಡಲಾಗಿದೆ. ಎರಡು ತಂಡಗಳಾಗಿ ನಗರದ ಕಾಲೇಜು, ಹಾಸ್ಟೆಲ್ ಗಳು ಸೇರಿದಂತೆ ಎಲ್ಲಡೆ ಬೆಳಿಗ್ಗೆ 8 ರಿಂದ ರಾತ್ರಿ 10 ರವರೆಗೆ ಓಬವ್ವ ಪಡೆ ವಿಶೇಷ ಪಿಂಕ್ ವಾಹನದಲ್ಲಿ ಸಂಚರಿಸಿ ಮಹಿಳೆಯರಿಗೆ ರಕ್ಷಣೆ ನೀಡಲಿದ್ದಾರೆ. ಸಹಾಯ ವಾಣಿ ಸಂಖ್ಯೆ 94808 03800 ಕ್ಕೆ ಕರೆ ಮಾಡಿದರೆ ಓಬವ್ವ ಪಡೆ ಪ್ರತ್ಯಕ್ಷ ವಾಗುತ್ತೆ.

    ಕಳೆದ ಐದು ವರ್ಷದಲ್ಲಿ ರಾಯಚೂರು ಜಿಲ್ಲೆಯಲ್ಲಿ 72 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷ 2018 ರಲ್ಲಿ 22 ಪ್ರಕರಣ, 2019ರಲ್ಲಿ 9 ಪ್ರಕರಣ ದಾಖಲಾಗಿವೆ. ಅಲ್ಲದೆ ಕಳೆದ ಐದು ವರ್ಷದಲ್ಲಿ 173 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, 2019ರಲ್ಲೇ 31 ಪ್ರಕರಣ ದಾಖಲಾಗಿವೆ. ಆದರೆ ಇಷ್ಟು ಪ್ರಕರಣಗಳಲ್ಲಿ ಇದುವರೆಗೆ ಕೇವಲ 3 ಪ್ರಕರಗಣಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದ್ದು, 70 ಪ್ರಕರಣಗಳು ನ್ಯಾಯಾಲಯದಲ್ಲಿ ವಜಾಗೊಂಡಿವೆ. ಇದಕ್ಕೆ ಪ್ರತಿಕೂಲ ಸಾಕ್ಷಿಯೇ ಕಾರಣವಾಗಿದ್ದು, ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ. ಹೀಗಾಗಿ ಓಬವ್ವ ಪಡೆಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ ವೇದಮೂರ್ತಿ ಹೇಳಿದ್ದಾರೆ.

    ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಿಲ್ಲಾ ಪೊಲೀಸರು ಹೊಸದೊಂದು ಹೆಜ್ಜೆಯನ್ನಿಟ್ಟಿದ್ದಾರೆ. ಆಸಕ್ತ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಕರಾಟೆ ಸೇರಿದಂತೆ ಆತ್ಮರಕ್ಷಣೆ ವಿದ್ಯೆ ಕಲಿಸಲು ಇಲಾಖೆ ಮುಂದಾಗಿದೆ. ಖಾರದ ಪುಡಿ, ಮೆಣಸಿನ ಪುಡಿ ಸದಾ ಜೊತೆಗಿಟ್ಟುಕೊಳ್ಳಿ ಅಂತ ಸಲಹೆ ನೀಡುವ ಪೊಲೀಸರು ಓಬವ್ವ ಪಡೆಯ ಮೂಲಕ ಮಹಿಳಾ ರಕ್ಷಣೆಗೆ ಮುಂದಾಗಿರುವುದಕ್ಕೆ ರಾಯಚೂರಿನ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.