Tag: ಮಹಿಷ ದಸರಾ

  • ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

    ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

    – ಸಂಘರ್ಷಕ್ಕೂ ಸೈ.. ಹೊಡೆದಾಟಕ್ಕೂ ಸೈ ಎಂದ ಸಂಸದ
    – ಮಹಿಷ ದಸರಾ ವಿರುದ್ಧ ಆಕ್ರೋಶ

    ಮೈಸೂರು: ಮಹಿಷಾ ದಸರಾದಂತಹ (Mahisha Dasara) ವಿಕೃತಿಗಳನ್ನು ಈಗಲೇ ಸದೆ ಬಡಿಯಬೇಕು. ಇಲ್ಲದಿದ್ದರೆ ವೀರಪ್ಪನ್ ನಮ್ಮ ದೇವರು. ಮಲೆ ಮಹದೇಶ್ವರ ದೆವ್ವ ಎನ್ನುತ್ತಾರೆ ಎಂದು ಮಹಿಷ ದಸರಾ ಆಚರಿಸುವವರ ವಿರುದ್ಧ ಸಂಸದ ಪ್ರತಾಪ್ ಸಿಂಹ (Pratap Simha) ಕಿಡಿಕಾರಿದರು.

    ನಗರದಲ್ಲಿ ಚಾಮುಂಡಿ ಬೆಟ್ಟ ಚಲೋ (Chamundi Betta Chalo) ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮಹಿಷ ದಸರಾದಂಥ ವಿಕೃತಿಗಳನ್ನು ಈಗಲೇ ಸದೆಬಡಿಯಬೇಕು. ಇಲ್ಲದೆ ಇದ್ದರೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಿ ವೀರಪ್ಪನ್ ನಮ್ಮ ದೇವರು. ನಮ್ಮ ಮೂಲ ಪುರುಷ ಅಂತ ಹೇಳಿ ಮಲೈ ಮಹದೇಶ್ವರನನ್ನು ದೆವ್ವ ಮಾಡುತ್ತಾರೆ. ವೀರಪ್ಪನ್ ನಮ್ಮ ಮೂಲ ನಿವಾಸಿ. ಅವನು ಪ್ರಕೃತಿ ರಕ್ಷಕ ಅಂತ ಕಥೆ ಕಟ್ಟಿ ಮಲೆ ಮಹದೇಶ್ವರನನ್ನು ದೆವ್ವ ಮಾಡಿ ಬಿಡುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಅ.13 ರಂದು ಬೆಳಗ್ಗೆ 8 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಜಾಥಾ ನಡೆಸಲಾಗುವುದು. ಐದು ಸಾವಿರಕ್ಕೂ ಹೆಚ್ಚು ಜನ ಜಾಥಾದಲ್ಲಿ ಭಾಗಿಯಾಗಲಿದ್ದಾರೆ. ಚಾಮುಂಡಿಗೆ ಪೂಜೆ ಮಾಡಿ ಮಹಿಷಾಸುರನ ಮುಂದೆ ಕುಳಿತುಕೊಳ್ಳುತ್ತೇವೆ ಎಂದು ತಿಳಿಸಿದರು.

    ಬಿ.ಟಿ.ಲಲಿತಾ ನಾಯಕ್ ಅವರ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಹಾಕಿದ್ದ. ಲಲಿತಾ ನಾಯಕ್ ಸಚಿವೆ ಆಗಿದ್ದಾಗ ಆಕೆ ಮಗ ಅಂಬೇಡ್ಕರ್ ಪ್ರತಿಮೆಗೆ ಮದ್ಯ ಕುಡಿಸಲು ಹೋಗಿದ್ದ. ಅಂಬೇಡ್ಕರ್‌ಗೆ ಅಪಮಾನ ಮಾಡಿದ ವ್ಯಕ್ತಿಯ ತಾಯಿಯನ್ನು ಮಹಿಷ ದಸರಾ ಉದ್ಘಾಟನೆಗೆ ಕೆಲವು ದಲಿತರು ಕರೆದುಕೊಂಡು ಬರುತ್ತಿರುವುದು ಸರಿನಾ? 50 ವರ್ಷದಿಂದ ಯಾವತ್ತೂ ಮಹಿಷಾ ದಸರಾ ಎಲ್ಲಿ ಮಾಡಿದ್ದಾರೆ? ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಂಬೂ ಸವಾರಿಗೆ ಬರಲಿದ ಗತವೈಭವ – ರಾಜ ಪೋಷಾಕಿನಲ್ಲಿ ಪೊಲೀಸರು

    ಸಂಘರ್ಷಕ್ಕೂ ಸೈ ಹೊಡೆದಾಟಕ್ಕೂ ಸೈ. ಸಂಘರ್ಷಕ್ಕೆ ಸಿದ್ಧರಾಗಿಯೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತಿರುವುದು. ಸಂಘರ್ಷ ಆದರೂ ಪರವಾಗಿಲ್ಲ. ಇವರನ್ನು ಹೊಸಕಿ ಹಾಕಲೇಬೇಕು. ನಾವು ತೀರ್ಮಾನ ಮಾಡಿಯೇ ಚಾಮುಂಡಿ ಚಲೋ ಮಾಡುತ್ತಿರುವುದು ಎಂದು ಸ್ಪಷ್ಟಪಡಿಸಿದರು.

    ದೇಶ, ಧರ್ಮ ರಕ್ಷಣೆಗೆ ನಾವು ಸಂಘರ್ಷಕ್ಕೆ ಸಿದ್ಧ. ನಮ್ಮ ಪಕ್ಷವೂ ಅದೇ ರೀತಿ ಬೆಳೆದಿದ್ದು, ಚಾಮುಂಡಿ ತಾಯಿಗೆ ಅವಮಾನ ಮಾಡುವುದನ್ನು ನಿಲ್ಲಿಸಲು ಸಂಘರ್ಷ ಹಾಗೂ ಹೊಡೆದಾಟಕ್ಕೂ ಸಿದ್ಧ. ಧರ್ಮೋರಕ್ಷತಿ ರಕ್ಷಿತಃ ಎಂಬ ಮಾತನ್ನು ಉಲ್ಲೇಖಿಸಿ ಹೇಳಿದರು.

    ಚೀನಾ, ಪಾಕಿಸ್ತಾನ ಗಡಿಯಲ್ಲಿ ಸಂಘರ್ಷವನ್ನೇ ಮಾಡಬೇಕು. ಇಲ್ಲಿ ಧರ್ಮ ಉಳಿಸಲು ಸಂಘರ್ಷ ಮಾಡಬೇಕು. ಸಂಘರ್ಷ ಮಾಡಿಯೇ ನಾವು ಪಕ್ಷ ಕಟ್ಟಿರುವುದು. ಧರ್ಮ ರಕ್ಷಣೆಗೆ ಸಂಘರ್ಷ ತಪ್ಪಲ್ಲ ಎಂದರು. ಇದನ್ನೂ ಓದಿ: ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಮೈಸೂರು: ವಿವಾದಕ್ಕೆ ಕಾರಣವಾಗಿರುವ ಮಹಿಷ ದಸರಾ (Mahisha Dasara) ವಿಚಾರ ಈಗ ಮತ್ತೆ ಸುದ್ದಿಯಾಗಿದೆ. ಮಹಿಷ ದಸರಾ ಆಚರಣೆಗೆ 50 ವರ್ಷ ಎಂದು ದಿಢೀರನೇ ಇತಿಹಾಸ ಸೃಷ್ಟಿಸಲಾಗಿದೆ.

    ಹೌದು, ವಿಶ್ವವಿಖ್ಯಾತ ಮೈಸೂರು ದಸರಾಗೆ (Mysuru Dasara) ಪರ್ಯಾಯವೆಂಬಂತೆ ಇತ್ತೀಚಿನ ವರ್ಷಗಳಲ್ಲಿ ಪ್ರಗತಿಪರರ ನೇತೃತ್ವದಲ್ಲಿ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ. ಕಳೆದ ವರ್ಷ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹಿಷ ದಸರಾ ಆಚರಣೆಗೆ ಅವಕಾಶ ನೀಡಿರಲಿಲ್ಲ. ಆದರೆ ಈ ವರ್ಷ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ವೇದಿಕೆ ಸಿದ್ಧವಾಗುತ್ತಿದೆ. 50ನೇ ವರ್ಷದ ಮಹಿಷ ದಸರಾ ಆಚರಣೆ ಎಂದು ಪೋಸ್ಟರ್ ಕೂಡ ಬಿಡುಗಡೆ ಮಾಡಲಾಗಿದೆ. ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಜಂಬೂ ಸವಾರಿಗೆ ಬರಲಿದ ಗತವೈಭವ – ರಾಜ ಪೋಷಾಕಿನಲ್ಲಿ ಪೊಲೀಸರು

    ಮಹಿಷ ದಸರಾ ಆಚರಣೆ ಸಮಿತಿಯಿಂದ ಈ ಪೋಸ್ಟರ್ ಬಿಡುಗಡೆ ಮಾಡಿದೆ. ಸದ್ಯ ಸಾಮಾಜಿಕ ಜಾಲಾತಾಣದಲ್ಲಿ ಈ ಪೋಸ್ಟರ್ ಹರಿದಾಡುತ್ತಿದೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲೇ ಮಹಿಷ ದಸರಾಗೆ ಚಾಲನೆ ನೀಡಲು ಮೈಸೂರು ದಸರಾ ಆಚರಣಾ ಸಮಿತಿ ಸಜ್ಜಾಗಿದೆ. ವಿರೋಧಗಳನ್ನು ಬದಿಗೊತ್ತಿ ನಿಗದಿತ ಸ್ಥಳದಲ್ಲೇ ಮಹಿಷ ದಸರಾ ಆಚರಿಸಲು ಸಿದ್ಧವಾಗಿದೆ.

    ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿ ಬೆಟ್ಟದ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಬಗ್ಗೆ ಮಾಹಿತಿ ನೀಡಲಾಗಿದೆ. ಅಕ್ಟೋಬರ್ 13 ರಂದು ಮಹಿಷ ದಸರಾ ನಡೆಯಲಿದೆ. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಉದ್ಘಾಟನೆ ಮಾಡಲಿದ್ದಾರೆ. ಇದನ್ನೂ ಓದಿ: ಬಂದೇ ಬಿಡ್ತು ದಸರಾ – ಮೈಸೂರು ಅರಮನೆಯಲ್ಲಿ ಯಾವ ದಿನ ಏನು ಕಾರ್ಯಕ್ರಮ?

    ಅಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬೆಂಬಲಿಗರು ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಸಂಸದ ಪ್ರತಾಪ್ ಸಿಂಹ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಂದೇ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

    2015 ರಲ್ಲಿ ಮಹಿಷ ದಸರಾ ವಿವಾದ ಪ್ರಾರಂಭವಾಯಿತು. ಐತಿಹಾಸಿಕ ಸಾಂಸ್ಕೃತಿಕ ಪರಂಪರೆಯಾದ ಮೈಸೂರು ದಸರಾಗೆ ಕಪ್ಪುಚುಕ್ಕೆ ಎಂದು ಕೆಲವರು ಮಹಿಷ ದಸರಾಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮಹಿಷ ದಸರಾ ಪರವಾದಿಗಳು, ಮೈಸೂರು ಹಿಂದೆ ಮಹಿಷ ಮಂಡಲವಾಗಿತ್ತು. ಮೈಸೂರಿನ ಮೂಲಪುರುಷ ಮಹಿಷ. ಆತನನ್ನು ರಾಕ್ಷಸ ಎಂದು ಬಿಂಬಿಸಲಾಗುತ್ತಿದೆ. ಮಹಿಷನ ಮಹತ್ವವನ್ನು ಸಾರಲು ಹಾಗೂ ನಿಜವಾದ ಇತಿಹಾಸವನ್ನು ಹೇಳಲು ಮಹಿಷ ದಸರಾ ಆಚರಿಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೇದಿಕೆ ತೆಗ್ದು ಹಾಕದಿದ್ರೆ ಅರಮನೆಯಿಂದ ಓಡಿಸ್ತೀನಿ: ಶಾಮಿಯಾನ ಮಾಲೀಕನಿಗೆ ಪ್ರತಾಪ್ ಸಿಂಹ ಅವಾಜ್

    ವೇದಿಕೆ ತೆಗ್ದು ಹಾಕದಿದ್ರೆ ಅರಮನೆಯಿಂದ ಓಡಿಸ್ತೀನಿ: ಶಾಮಿಯಾನ ಮಾಲೀಕನಿಗೆ ಪ್ರತಾಪ್ ಸಿಂಹ ಅವಾಜ್

    – ಪೊಲೀಸರ ಮೇಲೂ ಆಕ್ರೋಶ

    ಮೈಸೂರು: ದಸರಾ ಹೊಸ್ತಿಲಲ್ಲಿ ಮೈಸೂರಿನಲ್ಲಿ ಚಾಮುಂಡಿ ದಸರಾ ವರ್ಸಸ್ ಮಹಿಷ ದಸರಾ ಎಂಬ ಸೈದ್ಧಾಂತಿಕ ಸಮರ ಶುರುವಾಗಿದೆ. ಈ ಕಾರಣಕ್ಕಾಗಿ ಚಾಮುಂಡಿ ಬೆಟ್ಟದಲ್ಲಿ ಪೊಲೀಸರಿಗೆ ಸಂಸದ ಪ್ರತಾಪ್ ಸಿಂಹ ತರಾಟೆ ತೆಗೆದುಕೊಂಡಿದ್ದಾರೆ.

    ಬೆಟ್ಟದ ಮೇಲಿನ ಮಹಿಷಾಸುರ ಮೂರ್ತಿ ಬಳಿ ಮಹಿಷ ದಸರಾ ನಡೆಸುವ ಸಲುವಾಗಿ ಶಾಮಿಯಾನ, ವೇದಿಕೆ ಹಾಕಿ ತಯಾರಿ ಮಾಡಲಾಗುತ್ತಿತ್ತು. ಈ ಬಗ್ಗೆ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪ್ರತಾಪ್ ಸಿಂಹ, ಇಲ್ಲಿ ವೇದಿಕೆ ಹಾಕೋದಕ್ಕೆ ಯಾರು ನಿಮಗೆ ಅನುಮತಿ ಕೊಟ್ಟರು? ಇದನ್ನು ಮೊದಲು ಇಲ್ಲಿಂದ ತೆಗೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಹಾಕುವಾಗ ನೀವು ಏನು ಮಾಡುತ್ತಿದ್ರಿ ಪೊಲೀಸರೇ, ನಿಮ್ಮಿಂದ ಇಂತಹ ಕೆಲಸ ನಿರೀಕ್ಷೆ ಮಾಡಿರಲಿಲ್ಲ ಎಂದು ಅಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪೊಲೀಸ್ ಕಮೀಷನರ್ ಹಾಗೂ ಡಿಸಿಪಿ ವಿರುದ್ಧ ಕೂಗಾಡಿದ್ದಾರೆ.

    ಆಗ ನಮಗೂ ಇದಕ್ಕೂ ಸಂಬಂಧವಿಲ್ಲ. ಇದು ಗ್ರಾಮ ಪಂಚಾಯಿತಿ ಅವರು ಮಾಡಿರುವ ಕೆಲಸ ಎಂದು ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದರು. ದಸರಾ ಉತ್ಸವ ಕಾರ್ಯಕ್ರಮಗಳಿಗೆ ವೇದಿಕೆ ಹಾಕುವ ಶಾಮಿಯಾನ ಮಾಲೀಕ ಶಫಿ ನೇತೃತ್ವದಲ್ಲಿ ಈ ವೇದಿಕೆ ಹಾಕಲಾಗಿತ್ತು. ಹೀಗಾಗಿ ಕೂಡಲೇ ಟ್ರಕ್ ತಂದು ಇದನ್ನು ತೆರವುಗೊಳಿಸಬೇಕು. ಇಲ್ಲವಾದರೆ ಅರಮನೆ ಆವರಣದಿಂದ ನಿನ್ನ ಓಡಿಸುತ್ತೇನೆಂದು ಶಾಮಿಯಾನ ಮಾಲೀಕರಿಗೆ ಪ್ರತಾಪ್ ಸಿಂಹ ಅವಾಜ್ ಹಾಕಿದ್ದಾರೆ.