Tag: ಮಹುವಾ ಮೊಯಿತ್ರಾ

  • Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

    Cash for Query – ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ

    ನವದೆಹಲಿ: ಪ್ರಶ್ನೆಗಾಗಿ ಕಾಸು (Cash for Query) ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (TMC MP Mahua Moitra) ಅವರ ವಿರುದ್ಧ ಸಿಬಿಐ (CBI) ತನಿಖೆ ನಡೆಯುವ ಸಾಧ್ಯತೆಯಿದೆ.

    ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್(Lokpal) ಕೇಂದ್ರ ತನಿಖಾ ದಳಕ್ಕೆ (CBI) ಸೂಚಿಸಿರುವ ಮಾಹಿತಿಯನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ (BJP MP Nishikant Dubey) ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
    ಇದನ್ನೂ ಓದಿ: ಹೊರ ರಾಜ್ಯದ ನೋಂದಣಿಯ ಕ್ಯಾಬ್‌ಗಳಿಗಿಲ್ಲ ದೆಹಲಿ ಪ್ರವೇಶ

    ಈ ಸಂಬಂಧ ಪೋಸ್ಟ್‌ ಮಾಡಿರುವ ನಿಶಿಕಾಂತ್ ದುಬೆ, ನಾನು ನೀಡಿದ ದೂರಿನ ಆಧಾರದ ಹಿನ್ನೆಲೆಯಲ್ಲಿ ಲೋಕಪಾಲ್ ಸಂಸ್ಥೆಯು, ರಾಷ್ಟ್ರೀಯ ಭದ್ರತೆಗೆ ಸವಾಲೊಡ್ಡಿದ ಮಹುವಾ ಮಯಿತ್ರಾ ಅವರ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕೈಗೊಳ್ಳುವಂತೆ ಸಿಬಿಐಗೆ ಸೂಚಿಸಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಗ್ರೂಪ್ ವಿರುದ್ಧ ಪ್ರಶ್ನೆ ಕೇಳಲು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದರು. ಈ ಆರೋಪಕ್ಕೆ ಪೂರಕ ಎಂಬಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೀತಿ ಸಮಿತಿಗೆ ಅಫಿಡವಿಟ್‌ ಸಲ್ಲಿಸಿ ಮಹುವಾ ಮೊಯಿತ್ರಾ ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ತಿಳಿಸಿದ್ದರು.

     

  • ಪ್ರತಿಪಕ್ಷ ನಾಯಕರನ್ನು ಪ್ರಾಂಕ್‌ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ

    ಪ್ರತಿಪಕ್ಷ ನಾಯಕರನ್ನು ಪ್ರಾಂಕ್‌ ಮಾಡಿರಬಹುದು – ಪಿಯೂಷ್ ಗೋಯಲ್ ವ್ಯಂಗ್ಯ

    ನವದೆಹಲಿ: ಕೇಂದ್ರ ಸರ್ಕಾರಕ್ಕೆ (Union Government) ಫೋನ್‌ ಕದ್ದಾಲಿಕೆ ಮಾಡುವ ಅವಶ್ಯಕತೆಯಿಲ್ಲ. ಬಹುಶಃ ವಿರೋಧ ಪಕ್ಷಗಳ ನಾಯಕರನ್ನು ಯಾರಾದರೂ ಪ್ರಾಂಕ್‌ ಮಾಡಿರಬಹುದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ವ್ಯಂಗ್ಯವಾಡಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಕೆಲ ಪ್ರತಿಪಕ್ಷ ನಾಯಕರಿಗೆ ಆಪಲ್‌ನಿಂದ (Apple) ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ ಎಂಬ ಆರೋಪವನ್ನ ತಳ್ಳಿಹಾಕಿದ್ದಾರೆ. ಬಹುಶಃ ವಿರೋಧ ಪಕ್ಷಗಳ ನಾಯಕರನ್ನು ಯಾರಾದರೂ ಪ್ರಾಂಕ್‌ ಮಾಡಿರಬಹುದು, ಅವರು ಅಧಿಕೃತವಾಗಿ ದೂರು ನೀಡಿದ್ರೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

    ಹ್ಯಾಕರ್ಸ್‌ ಸಕ್ರೀಯವಾಗಿದ್ದಾರೆ: ಪ್ರತಿಪಕ್ಷಗಳು ದುರ್ಬಲ ಸ್ಥಿತಿಯನ್ನು ಎದುರಿಸುತ್ತಿವೆ, ಎಲ್ಲದರಲ್ಲೂ ಪಿತೂರಿಯನ್ನ ಹುಡುಕುತ್ತಿದ್ದಾರೆ. ಆಪಲ್‌ ಕಂಪನಿ ಸ್ವತಃ ಸ್ಪಷ್ಟಪಡಿಸಿದೆ. ಸುಮಾರು 150 ದೇಶಗಳ ವ್ಯಕ್ತಿಗಳಿಗೆ ನೋಟಿಫಿಕೇಶನ್‌ ಹೋಗಿದೆ. ಉಗಾಂಡದ ರಾಜಕೀಯ ನಾಯಕರ ಐಫೋನಿಗೆ ಈ ರೀತಿಯ ಎಚ್ಚರಿಕೆ ಸಂದೇಶ ಬಂದಿದೆ. ಈ ದಾಳಿಯನ್ನ ಪತ್ತೆಹಚ್ಚಲು ಸಾಧ್ಯವಿಲ್ಲ ಎಂದು ಹೇಳಿದೆ. ವಿಶ್ವದಾದ್ಯಂತ ಹ್ಯಾಕರ್‌ಗಳು ಸಕ್ರಿಯರಾಗಿದ್ದಾರೆ, ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಪ್ರತಿಪಕ್ಷಗಳ ನಾಯಕರು ತಮ್ಮ ಆಂತರಿಕ ಕಚ್ಚಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಪರಿಸ್ಥಿತಿ ಹೇಗಿದೆ ಎಂಬುದು ದೇಶದ ಜನರಿಗೆ ತಿಳಿದಿದೆ. ಮೊದಲು ಅವರು ತಮ್ಮ ದೌರ್ಬಲ್ಯಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಲ್ಲಿ ಸರ್ಕಾರದ ಪಾತ್ರ ಏನೂ ಇಲ್ಲ. ಫೋನ್‌ಗಳನ್ನು ಕದ್ದಾಲಿಕೆ ಮಾಡುವ ಅವಶ್ಯಕತೆಯೂ ಸರ್ಕಾರಕ್ಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    ಏನಿದು ಆರೋಪ?
    ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ ಅವರು ತಮ್ಮ ಐ-ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪೆನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿತ್ತು?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಆಪಲ್‌ ಪ್ರತಿಕ್ರಿಯೆ ಏನು ಹೇಳಿಕೆಯಲ್ಲಿ ಏನಿದೆ?
    ರಾಜ್ಯ ಪ್ರಾಯೋಜಿತ ದಾಳಿ ಕಾಲಾನಂತರದಲ್ಲಿ ವಿಕಸನಗೊಳ್ಳುತ್ತದೆ. ಈ ದಾಳಿಗಳನ್ನು ಪತ್ತೆಹಚ್ಚುವುದು ಕಷ್ಟ. ಅಪೂರ್ಣವಾಗಿರುವ ಬೆದರಿಕೆ ಗುಪ್ತಚರ ಸಂಕೇತಗಳ ಮೇಲೆ ಅವಲಂಬಿತವಾಗಿದೆ. ಆಪಲ್‌ನ ಕೆಲವೊಂದು ಬೆದರಿಕೆ ಸೂಚನೆಗಳು ತಪ್ಪು ಅಲಾರಂಗಳಾಗಿರಬಹುದು. ಈ ದಾಳಿಗಳು ಪತ್ತೆಯಾಗದಿರುವ ಸಾಧ್ಯತೆಯಿದೆ. ಈ ದಾಳಿಗಳನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ನಾವು ಬೆದರಿಕೆ ಅಧಿಸೂಚನೆಗಳನ್ನು ನೀಡಲು ಕಾರಣವೇನು ಎಂಬುದರ ಕುರಿತು ಮಾಹಿತಿಯನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ಕೇಂದ್ರದಿಂದ ಐಫೋನ್‌ ಕದ್ದಾಲಿಕೆಗೆ ಯತ್ನ – ಎಚ್ಚರಿಕೆ ಸಂದೇಶ ಬಂದಿದ್ದಾಗಿ ಪ್ರತಿಪಕ್ಷ ನಾಯಕರ ಆರೋಪ

    ನವದೆಹಲಿ: ತಮ್ಮ ಫೋನ್‌ಗಳ ಮೇಲೆ ಸರ್ಕಾರಿ ಪ್ರಾಯೋಜಕತ್ವದ ದಾಳಿ ನಡೆಯುತ್ತಿದೆ, ಕೇಂದ್ರದಿಂದ ಫೋನ್‌ ಕದ್ದಾಲಿಕೆ ನಡೆಯುತ್ತಿದೆ ಎಂದು ಪ್ರತಿಪಕ್ಷಗಳ ವಿವಿಧ ನಾಯಕರು ಕೇಂದ್ರ ಸರ್ಕಾರದ (Union Government) ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra), ಕಾಂಗ್ರೆಸ್ ನಾಯಕ ಶಶಿ ತರೂರ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹಾಗೂ ಶಿವಸೇನಾದ (ಉದ್ಧವ್ ಬಣ) ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಅವರು ತಮ್ಮ ಐ-ಫೋನ್‌ಗಳ (iPhone) ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಕೋರರು ಟಾರ್ಗೆಟ್ ಮಾಡುತ್ತಿರಬಹುದು ಎಂದು ಆಪಲ್ ಕಂಪನಿಯಿಂದ ಫೋನ್ ಹಾಗೂ ಇ-ಮೇಲ್‌ಗಳಿಗೆ (E-mail) ಎಚ್ಚರಿಕೆ ಸಂದೇಶ ಬಂದಿರುವುದಾಗಿ ಹೇಳಿದ್ದಾರೆ.

    ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಕಚೇರಿಯಲ್ಲಿನ ಕೆಲವರಿಗೂ ಈ ಸಂದೇಶ ಬಂದಿದೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸರ್ಕಾರ, ಈ ಸಂದೇಶಗಳ ಬಗ್ಗೆ ಅರಿವಿದೆ. ಐಫೋನ್‌ಗಳಲ್ಲಿ ಬೆದರಿಕೆ ಪತ್ತೆ ಮಾಡುವ ತಂತ್ರಜ್ಞಾನವು ಕೆಲವೊಮ್ಮೆ ಅಸಮಗ್ರ ಹಾಗೂ ಅಪೂರ್ಣವಾಗಿರುತ್ತದೆ ಎಂದು ಹೇಳಿದೆ.

    ಆಪಲ್‌ನಿಂದ ಬಂದ ಸಂದೇಶದಲ್ಲಿ ಏನಿದೆ?
    ನೀವು ಸರ್ಕಾರಿ ಪ್ರಾಯೋಜಿತ ದಾಳಿಕೋರರಿಂದ ಗುರಿಯಾಗುತ್ತಿದ್ದೀರಿ. ಅವರು ನಿಮ್ಮ ಆಪಲ್ ಐಡಿಗೆ (Apple ID) ಸಂಬಂಧಿಸಿದ ಐಫೋನ್‌ಗೆ ದೂರದಿಂದ ಕದ್ದಾಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಪಲ್‌ನ ಸಂದೇಶ ಹೇಳಿದೆ.

    ಈ ದಾಳಿಕೋರರು ನೀವು ಯಾರು ಅಥವಾ ನೀವು ಏನು ಮಾಡುತ್ತೀರಿ ಎಂಬ ಆಧಾರದಲ್ಲಿ ನಿಮ್ಮನ್ನು ವ್ಯಕ್ತಿಗತವಾಗಿ ಟಾರ್ಗೆಟ್ ಮಾಡುತ್ತಿರುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಸೂಕ್ಷ್ಮ ಡೇಟಾ, ಸಂಹವನಗಳು ಅಥವಾ ಕ್ಯಾಮೆರಾ ಮತ್ತು ಮೈಕ್ರೋಫೋನ್‌ಗಳನ್ನು ಕದಿಯಲು ಅವರಿಗೆ ಸಾಧ್ಯವಾಗಲಿದೆ. ಇದು ಸುಳ್ಳು ಎಚ್ಚರಿಕೆಯಾಗುವ ಸಾಧ್ಯತೆ ಇದ್ದರೂ, ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ ಎಂದು ಸಂದೇಶದಲ್ಲಿದೆ.

    ಬಿಜೆಪಿ ಪ್ರತಿಕ್ರಿಯೆ ಏನು?
    ತಮ್ಮ ಫೋನ್‌ಗಳನ್ನು ಹ್ಯಾಕ್ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿರುವ ವಿಪಕ್ಷ ನಾಯಕರ ವಿರುದ್ಧ ಹರಿಹಾಯ್ದಿರುವ ಬಿಜೆಪಿ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ಆಪಲ್‌ನ ಸ್ಪಷ್ಟೀಕರಣ ಬರುವವರೆಗೂ ಕಾಯುವಂತೆ ಮನವಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    Cash for Query – ಪಾಸ್‌ವರ್ಡ್‌ ಶೇರ್‌ ಆಗಿತ್ತು: ಸಂಸದೆ ಮೊಯಿತ್ರಾ ಜೊತೆ ನಂಟು ಒಪ್ಪಿಕೊಂಡ ಉದ್ಯಮಿ

    ನವದೆಹಲಿ: ಪ್ರಶ್ನೆಗಾಗಿ ಕಾಸು (Cash for Query) ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ದರ್ಶನ್ ಹಿರಾನಂದಾನಿ (Darshan Hiranandani) ಅವರು ಸಂಸತ್ತಿನ ನೈತಿಕ ಸಮಿತಿಗೆ ಅಫಿಡವಿಟ್‌ ಸಲ್ಲಿಸಿದ್ದು, ಟಿಎಂಸಿ ಲೋಕಸಭೆ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಸಂಸತ್ತಿನ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಅನ್ನು ಹಂಚಿಕೊಂಡಿದ್ದರು ಎಂದು ಹೇಳಿದ್ದಾರೆ.

    ಗುರುವಾರ ಸಂಸತ್ತಿನ ನೈತಿಕ ಸಮಿತಿಯ ಮುಂದೆ ಅಫಿಡವಿಟ್ ಸಲ್ಲಿಸಿರುವ ಅವರು ಮಹುವಾ ಮೊಯಿತ್ರಾ ಪರವಾಗಿ ಪ್ರಶ್ನೆ ಪೋಸ್ಟ್‌ ಮಾಡಲು ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ನೀಡಿದ್ದರು ಎಂದು ಉಲ್ಲೇಖಿಸಿದ್ದಾರೆ.

    ಬಿಜೆಪಿ ಸಂಸದ ನಿಶಿಕಾಂತ್ ದುಬೆ

    ಟಿಎಂಸಿಯ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪ ಮಾಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

    ಸ್ನೇಹಿತರ ಸಲಹೆಯ ಮೇರೆಗೆ ರಾಷ್ಟ್ರಮಟ್ಟದಲ್ಲಿ ಬಹಳ ಬೇಗ ಹೆಸರು ಗಳಿಸಲು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವೈಯಕ್ತಿಕ ದಾಳಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.  ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ವಂಶಾವಳಿ, ನಿಗಮ ಮಂಡಳಿಗಳ ರೇಟ್ ಕಾರ್ಡ್ ರಿಲೀಸ್

    ದುಬಾರಿ ಐಷಾರಾಮಿ ವಸ್ತುಗಳನ್ನು ಉಡುಗೊರೆ, ಬಂಗಲೆಯ ನವೀಕರಣಕ್ಕೆ ಸಹಾಯ, ರಜಾ ದಿನಗಳ ಪ್ರಯಾಣ ವೆಚ್ಚ ಸೇರಿದಂತೆ ಮಹುವಾ ಮೊಯಿತ್ರಾ ನನಗೆ ಪದೇ ಪದೇ ಈಡೇರಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು ಮತ್ತು ಹಲವಾರು ಅನುಕೂಲಗಳನ್ನು ಕೇಳುತ್ತಿದ್ದರು. ಅಷ್ಟೇ ಅಲ್ಲದೇ ತನ್ನ ಪರವಾಗಿ ಕೆಲಸ ಮಾಡುವಂತೆ ಒತ್ತಡ ಹೇರುತ್ತಿದ್ದರು ಎಂದು ಎಂದು ಉಲ್ಲೇಖಿಸಿದ್ದಾರೆ.

    ದರ್ಶನ್ ಹಿರಾನಂದಾನಿ ಅಫಿಡವಿಟ್‌ ಸಲ್ಲಿಸಿದ ಬೆನ್ನಲ್ಲೇ ಮಹುವಾ ಮೊಯಿತ್ರಾ ಪ್ರತಿಕ್ರಿಯಿಸಿದ್ದಾರೆ. ಸಿಬಿಐ ಮತ್ತು ನೈತಿಕ ಸಮಿತಿಯ (ಇದು ಬಿಜೆಪಿ ಸದಸ್ಯರ ಸಂಪೂರ್ಣ ಬಹುಮತವನ್ನು ಹೊಂದಿರುವ) ಸದಸ್ಯರು ನನ್ನನ್ನು ಕರೆದರೆ ಮತ್ತು ಕೇಳಿದಾಗ ಉತ್ತರಿಸಲು ನಾನು ಸಿದ್ದನಿದ್ದೇನೆ. ಅದಾನಿ ನಿರ್ದೇಶನದ ಮಾಧ್ಯಮ ಸರ್ಕಸ್ ವಿಚಾರಣೆಗೆ ಅಥವಾ ಬಿಜೆಪಿ ಟ್ರೋಲ್‌ಗಳಿಗೆ ಉತ್ತರಿಸಲು ನನಗೆ ಸಮಯ ,ಆಸಕ್ತಿ ಇಲ್ಲ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯಾಚಾರಿಗಳಿಗೆ ಲಡ್ಡು ತಿನ್ನಿಸುತ್ತೀರಿ: ಗೂಂಡಾಗಳನ್ನ ತಲೆಕೆಳಗೆ ನೇತಾಕ್ತೀವಿ ಎಂದಿದ್ದ ಶಾಗೆ ಮಹುವಾ ತಿರುಗೇಟು

    ಅತ್ಯಾಚಾರಿಗಳಿಗೆ ಲಡ್ಡು ತಿನ್ನಿಸುತ್ತೀರಿ: ಗೂಂಡಾಗಳನ್ನ ತಲೆಕೆಳಗೆ ನೇತಾಕ್ತೀವಿ ಎಂದಿದ್ದ ಶಾಗೆ ಮಹುವಾ ತಿರುಗೇಟು

    ಕೋಲ್ಕತ್ತಾ: ಬಿಜೆಪಿ (BJP) ಆಡಳಿತದಲ್ಲಿ ಗೂಂಡಾಗಳು, ಗಲಭೆಕೋರರನ್ನ ತಲೆಕೆಳಗೆ ಮಾಡಿ ನೇತು ಹಾಕ್ತೀವಿ ಎಂದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ವಿರುದ್ಧ ತೃಣಮೂಲ ಕಾಂಗ್ರೆಸ್‌ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra) ತಿರುಗೇಟು ನೀಡಿದ್ದಾರೆ.

    ಗುಜರಾತ್‌ ಪ್ರಕರಣವನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಮಹುವಾ ಅವರು, ಬಿಹಾರದಲ್ಲಿ ಗಲಭೆಕೋರರನ್ನು ತಲೆಕೆಳಗಾಗಿ ಗಲ್ಲಿಗೇರಿಸುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತಾರೆ. ಅವರಿಗೆ ಲಡ್ಡು ತಿನ್ನಿಸುತ್ತಾರೆ ಎಂದು ಅಮಿತ್‌ ಶಾಗೆ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

    ಗುಜರಾತ್‌ನ ಬಿಲ್ಕಿಸ್‌ ಬಾನೋ ಅತ್ಯಾಚಾರ (Bilkis Bano Rape Case) ಅಪರಾಧಿಗಳ ಬಿಡುಗಡೆ ಪ್ರಕರಣ ಉಲ್ಲೇಖಿಸಿ ಬಿಜೆಪಿ ವಿರುದ್ಧ ಮಹುವಾ ಕಿಡಿಕಾರಿದ್ದಾರೆ. “ಕಳೆದ ವರ್ಷ ಗುಜರಾತ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುಂಚೆ ರಾಜ್ಯ ಸರ್ಕಾರ ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿತು. ಟಿಎಂಸಿಯ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಹೌರಾದಲ್ಲಿ ನಡೆದ ಶಿವಪುರ ಭಯೋತ್ಪಾದಕ ಘಟನೆಯ ವಿಚಾರವಾಗಿ ಕೇಂದ್ರ ಗೃಹ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಹೌರಾದಲ್ಲಿ ನಡೆದ ಹಿಂಸಾಚಾರದ ಹಿಂದೆ ಶಾ ಇದ್ದಾರೆಂದು ಹೇಳಿದ್ದರು” ಎಂದು ಮಹುವಾ ತಿಳಿಸಿದ್ದಾರೆ.

    ಅಮಿತ್‌ ಶಾ ಅವರು ಶನಿವಾರ ಬಿಹಾರದಲ್ಲಿ ನಡೆದ ರ‍್ಯಾಲಿಯಲ್ಲಿ, ರಾಮನವಮಿ ಆಚರಣೆಯ ಸಂದರ್ಭದಲ್ಲಿ ರಾಜ್ಯದ ಹಲವಾರು ಪ್ರದೇಶಗಳಲ್ಲಿ ಭುಗಿಲೆದ್ದ ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ನಿತೀಶ್‌ ಕುಮಾರ್‌ ಸರ್ಕಾರ ವಿಫಲವಾಗಿದೆ. 2025ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ನಡೆಸುತ್ತಿರುವ ಗಲಭೆಕೋರರನ್ನು ತಲೆಕೆಳಗಾಗಿ ನೇತುಹಾಕಿ ಗಲ್ಲಿಗೇರಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ಮಾನಹಾನಿ ಪ್ರಕರಣ – ಏಪ್ರಿಲ್ 13 ರವರೆಗೂ ರಾಗಾಗೆ ರಿಲೀಫ್

    ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದ ಅಮಿತ್‌ ಶಾ, ರಾಜ್ಯದಲ್ಲಿ ಭಯೋತ್ಪಾದನೆಯನ್ನು ಹರಡಲು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಕಾರಣ. ಲಾಲು ಪ್ರಸಾದ್ ಯಾದವ್ ಅವರ ಆರ್‌ಜೆಡಿ ಎಂದಿಗೂ ಬಿಹಾರದಲ್ಲಿ ಶಾಂತಿಯನ್ನು ತರಲು ಸಾಧ್ಯವಿಲ್ಲ. ಬಿಹಾರವನ್ನು ಶಾಂತಿಯುತ ರಾಜ್ಯವನ್ನಾಗಿ ಮಾಡಲು “ಮಹಾಘಟಬಂಧನ್” ಕಿತ್ತುಹಾಕಬೇಕು ಎಂದು ಜನತೆಗೆ ಕರೆ ನೀಡಿದ್ದರು.

  • ಸೀರೆಯುಟ್ಟು ಸಂಸದೆ ಮಹುವಾ ಮೊಯಿತ್ರಾ ಫುಟ್‍ಬಾಲ್ ಆಟ – ನೆಟ್ಟಿಗರು ಫುಲ್ ಫಿದಾ

    ಸೀರೆಯುಟ್ಟು ಸಂಸದೆ ಮಹುವಾ ಮೊಯಿತ್ರಾ ಫುಟ್‍ಬಾಲ್ ಆಟ – ನೆಟ್ಟಿಗರು ಫುಲ್ ಫಿದಾ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್(Trinamool Congress) ಸಂಸದೆ ಮಹುವಾ ಮೊಯಿತ್ರಾ (MP Mahua Moitra) ಅವರು ಕೃಷ್ಣಾನಗರ ಎಂಪಿ ಕಪ್ ಟೂರ್ನಿಯಲ್ಲಿ(Krishnanagar MP Cup Tournament) ಸೀರೆಯಲ್ಲೇ ಫುಟ್‍ಬಾಲ್ (Foot Ball) ಆಟ ಆಡಿದ್ದು, ಇದೀಗ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಈ ಫೋಟೋವನ್ನು ಮಹುವಾ ಮೊಯಿತ್ರಾ ಅವರೇ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಕೆಂಪು-ಕಿತ್ತಳೆ ಬಣ್ಣದ ಸೀರೆಯನ್ನುಟ್ಟು, ಕಾಲಿಗೆ ಸ್ಪೋರ್ಟ್ಸ್ ಶೂ ತೊಟ್ಟು, ಕಣ್ಣಿಗೆ ಸನ್‍ಗ್ಲಾಸ್ ಧರಿಸಿಕೊಂಡು, ಫುಟ್‌ಬಾಲ್ ಆಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅಲ್ಲದೆ ಮತ್ತೊಂದು ಫೋಟೋದಲ್ಲಿ ಗೋಲ್ ಕೀಪರ್(Goal Keeper) ಆಗಿ ನಿಂತಿರುವುದನ್ನು ಕೂಡ ನೋಡಬಹುದಾಗಿದೆ. ಇದನ್ನೂ ಓದಿ: ಮದರಸಾಗಳನ್ನು ಧ್ವಂಸಗೊಳಿಸುವಂತೆ ಕರೆ ನೀಡಿದ್ದ ಯತಿ ನರಸಿಂಹಾನಂದ ವಿರುದ್ಧ FIR

    ಫೋಟೋ ಜೊತೆಗೆ ಕೃಷ್ಣನಗರ ಎಂಪಿ ಕಪ್ ಟೂರ್ನಮೆಂಟ್ 2022 ರ ಫೈನಲ್‍ನ ಮೋಜಿನ ಕ್ಷಣಗಳು ಮತ್ತು ನಾನು ಸೀರೆಯಲ್ಲಿ ಆಟ ಆಡಿದ್ದೇನೆ ಎಂದು ಕ್ಯಾಪ್ಷನ್‌ನಲ್ಲಿ ಬರೆದುಕೊಂಡಿದ್ದಾರೆ. ಒಟ್ಟಾರೆ ಸಂಸದೆ ಸೀರೆ ಉಟ್ಟುಕೊಂಡು ಆಟವಾಡುತ್ತಿರುವುದನ್ನು ನೋಡಿ ನೆಟ್ಟಿಗರು ಫುಲ್ ಫಿದಾ ಆಗಿದ್ದು, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಡಿಸ್ಕೌಂಟ್‌ ಬೆಲೆಯಲ್ಲಿ ತೈಲ – 35 ಸಾವಿರ ಕೋಟಿ ಗಳಿಸಿದ ಭಾರತ

    Live Tv
    [brid partner=56869869 player=32851 video=960834 autoplay=true]

  • ಮತ್ತೆ ಕಾಳಿ ದೇವಿಯನ್ನು ಅಪಮಾನಿಸಿದ ಲೀನಾ: ಹಿಂದೂಗಳ ಆಕ್ರೋಶ

    ಮತ್ತೆ ಕಾಳಿ ದೇವಿಯನ್ನು ಅಪಮಾನಿಸಿದ ಲೀನಾ: ಹಿಂದೂಗಳ ಆಕ್ರೋಶ

    ಕಾಳಿ ದೇವಿಯನ್ನು ನಿರಂತರವಾಗಿ ಅಪಮಾನಿಸುತ್ತಿರುವ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಮೇಲೆ ಕ್ರಮಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆಕೆ ಯಾವುದೇ ದೇಶದಲ್ಲಿ ಇದ್ದರೂ, ಕನಿಷ್ಠ ಅವಳ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ ಗಳನ್ನು ಡಿಲಿಟ್ ಮಾಡಲೂ ಸಾಧ್ಯವಾಗುತ್ತಿಲ್ಲ ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಅವರ ಮೇಲೆ ಕ್ರಮ ತಗೆದುಕೊಳ್ಳದೇ ಇರುವ ಕಾರಣಕ್ಕಾಗಿ ಹೀಗೆ ನಿರಂತರವಾಗಿ ಅವರು ಅಪಮಾನದ ಪೋಸ್ಟ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

    ಮೊದಲ ಸಲ ಕಾಳಿ ಕೈಯಲ್ಲಿ ಸಿಗರೇಟು ಮತ್ತು ಎಲ್‍ಜಿಬಿಡಿಕ್ಯೂ ಧ್ವಜ ಕೊಟ್ಟು ಹಿಂದೂಗಳ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಆನಂತರ ಶಿವ ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟು ಅಪಮಾನ ಮಾಡಿದ್ದಾರೆ. ಇದೀಗ ಕಾಳಿಯ ಕುರಿತಾಗಿ ಮತ್ತಷ್ಟು ಬರಹಗಳನ್ನು ಬರೆದಿದ್ದು, ಸಲಿಂಗಿಗಳನ್ನು ಕಾಳಿ ಇಷ್ಟಪಡುತ್ತಾಳೆ ಎಂದೂ, ಮತ್ತು ಹಿಂದುತ್ವವನ್ನು ನಾಶ ಮಾಡಲು ಕಾಳಿ ಬರುತ್ತಾಳೆ ಎಂದು ಟ್ವಿಟರ್ ಖಾತೆಯಲ್ಲಿ ಲೀನಾ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಲೀನಾ ವಿರುದ್ಧ ದೂರುಗಳ ಮಹಾಪುರವೇ ಹರಿದು ಬರುತ್ತಿದ್ದರೂ, ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ಶುರುವಾಗಿದ್ದರೂ, ಇವರಿಗೂ ಯಾವುದೇ ಕ್ರಮ ತಗೆದುಕೊಳ್ಳದೇ ಇರುವುದಕ್ಕೆ ಹಲವರು ಹಲವು ಅನುಮಾನಗಳನ್ನು ಹೊರಹಾಕಿದ್ದಾರೆ. ಆ ಲೀನಾ ಹಿಂದೆ ಯಾರು ಇದ್ದಾರೆ ಎಂದು ಪತ್ತೆ ಹಚ್ಚಬೇಕು ಹಾಗೂ ಕೂಡಲೇ ಸೋಷಿಯಲ್ ಮೀಡಿಯಾದಿಂದ ಅವರ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಹಿಂದೂ ದೇವರನ್ನು ಸತತವಾಗಿ ಅವಮಾನಿಸುತ್ತಿರುವ ಲೀನಾ ಮಣಿಮೇಕಲೈ ವಿರುದ್ಧ ದೇಶಾದ್ಯಂತ ದೂರುಗಳು ದಾಖಲಾಗುತ್ತಿವೆ. ಲೀನಾ ಅವರು ಮೊದಲ ಪೋಸ್ಟರ್ ನಲ್ಲಿ ಕೇವಲ ಕಾಳಿ ಕೈಗೆ ಸಿಗರೇಟು ನೀಡಿದ್ದರು. ನಂತರ ಮತ್ತೊಂದು ಪೋಸ್ಟ್ ಮಾಡಿದ್ದ ಅವರು ಶಿವ ಮತ್ತು ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟಿದ್ದರು. ಈ ಕುರಿತು ಕನ್ನಡದ ನಟ ನಟಿಯರು ವಿಭಿನ್ನ ರೀತಿಯಲ್ಲಿ ಪ್ರತಿಕ್ರಯಿಸಿದ್ದಾರೆ. ನಟಿ ಮಾಳವಿಕಾ ಅವಿನಾಶ್ ಈ ನಡೆಯನ್ನು ವಿರೋಧಿಸಿದ್ದರೆ, ನಟ ಕಿಶೋರ್ ಮತ್ತೊಂದು ರೀತಿಯಲ್ಲಿ ಪ್ರತಿಕ್ರಯಿಸಿದ್ದಾರೆ.

    ಶಿವನಿಗೆ ಬೇಡರ ಕಣ್ಣಪ್ಪ ಮಾಂಸವನ್ನು ಅರ್ಪಿಸಿದಾಗ ಅವನಿಗೆ ಹಿಂದೂ ದ್ವೇಷದ ದುರಹಂಕಾರ ಇರಲಿಲ್ಲ. ಹಾಗಾಗಿ ಶಿವನಿಗೆ ಆತನ ಭಕ್ತಿ ಇಷ್ಟವಾಗಿತ್ತು. ಅಜ್ಞಾನಕ್ಕಿಂತ ಭಕ್ತಿಯೇ ಶ್ರೇಷ್ಠತೆ ಪಡೆಯಿತು. ಇದೀಗ ಉದಾರವಾದಿಗಳ ವಿಕೃತಿ ಹೆಚ್ಚಾಗುತ್ತಿದೆ. ವಿಕೃತಿಗಳಿಗೆ ಮಾರ್ಗವಾಗಿದೆ ಎಂದಿದ್ದಾರೆ. ನಿಮ್ಮ ಅಭ್ಯಾಸ ಮತ್ತು ದುರ್ಗುಣಗಳನ್ನು ಹೇರಲು ಕಾಳಿ ಮಾತೆ ಸಾಕು ಪ್ರಾಣಿಯಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸ್ತ್ರಿವಾದಿ ಮಹುವಾ ಮೊಯಿತ್ರಾಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ‘ಕೆಜಿಎಫ್ 2’, ‘ಆರ್.ಆರ್.ಆರ್’ ದಾಖಲೆ ಮುರಿಯತ್ತಾ ರಾಮ್ ಗೋಪಾಲ್ ವರ್ಮಾ ಅವರ ‘ಲಡ್ಕಿ’ ಸಿನಿಮಾ ?

    ಇದೇ ಪ್ರಕರಣಕ್ಕೆ ಹೋಲುವಂತೆ ನಟ ಕಿಶೋರ್ ಕೂಡ ವಿಭಿನ್ನವಾಗಿಯೇ ಪ್ರತಿಕ್ರಿಯೆ ನೀಡಿದ್ದು, ನನ್ನ ದೇವರು, ನನ್ನ ಭಕ್ತಿ, ನನ್ನ ನೈವೇದ್ಯಗಳು, ನನ್ನಹಕ್ಕು. ಅದು ನನ್ನ ನಾಡಿನ ಸೌಂದರ್ಯ, ನನ್ನ ನಾಡಿನ ಶಕ್ತಿ ಎಂದು ಬೇಡರ ಕಣ್ಣಪ್ಪ ಸಿನಿಮಾ ಪೋಸ್ಟರ್ ಶೇರ್ ಮಾಡಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಕಿಶೋರ್ ಅವರ ಈ ಪೋಸ್ಟ್ ಕೂಡ ಪರ ವಿರೋಧಕ್ಕೆ ಕಾರಣವಾಗಿದೆ

    ನಿರ್ಮಾಪಕಿ ಲೀನಾ ಮಣಿಮೇಕಲೈ ಕಾಳಿ ಕೈಯಲ್ಲಿ ಸಿಗರೇಟು ಮತ್ತು ಎಲ್‍ಜಿಬಿಡಿಕ್ಯೂ ಧ್ವಜ ಕೊಟ್ಟು ಹಿಂದೂಗಳ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಮೊನ್ನೆಯಷ್ಟೇ ಶಿವ ಪಾರ್ವತಿ ಕೈಯಲ್ಲೂ ಸಿಗರೇಟು ಕೊಟ್ಟು ಅಪಮಾನ ಮಾಡಿದ್ದಾರೆ. ಹೀಗಾಗಿ ಲೀನಾ ವಿರುದ್ಧ ದೂರುಗಳ ಮಹಾಪುರವೇ ಹರಿದು ಬರುತ್ತಿವೆ. ಅವರನ್ನು ಕೂಡಲೇ ಬಂಧಿಸಬೇಕು ಎಂಬ ಆಗ್ರಹ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪಾಸಿಟಿವ್‌ ಆಗಿ ಯೋಚಿಸೋಣ: ಕಾಳಿ ದೇವಿ ಕುರಿತ ವಿವಾದದ ಬಗ್ಗೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ

    ಪಾಸಿಟಿವ್‌ ಆಗಿ ಯೋಚಿಸೋಣ: ಕಾಳಿ ದೇವಿ ಕುರಿತ ವಿವಾದದ ಬಗ್ಗೆ ಮಮತಾ ಬ್ಯಾನರ್ಜಿ ಪ್ರತಿಕ್ರಿಯೆ

    ಕೋಲ್ಕತ್ತಾ: ಜನರು ತಪ್ಪು ಮಾಡುತ್ತಾರೆ. ಆದರೆ ಅದನ್ನು ಸರಿಪಡಿಸಿಕೊಳ್ಳಬಹುದು ಎಂದು ಕಾಳಿ ದೇವಿ ಕುರಿತು ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ವಿವಾದಿತ ಹೇಳಿಕೆ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದಾರೆ.

    ಕೆಲಸ ಮಾಡುವಾಗ ನಾವು ತಪ್ಪುಗಳನ್ನು ಮಾಡುತ್ತೇವೆ. ಆದರೆ ಅವುಗಳನ್ನು ಸರಿಪಡಿಸಬಹುದು. ಕೆಲವರು ಒಳ್ಳೆ ಕೆಲಸವನ್ನೆಲ್ಲಾ ನೋಡದೇ ಇದ್ದಕ್ಕಿದ್ದ ಹಾಗೆ ಕೂಗಾಡ್ತಾರೆ. ನಕಾರಾತ್ಮಕತೆ ನಮ್ಮ ಮಿದುಳಿನ ಕೋಶಗಳ ಮೇಲೆ ಪರಿಣಾಮ ಬೀರುತ್ತೆ. ಹಾಗಾಗಿ ಪಾಸಿಟಿವ್‌ ಆಗಿ ಯೋಚಿಸೋಣ ಎಂದು ಟೀಕಾಕಾರರಿಗೆ ಮಮತಾ ಬ್ಯಾನರ್ಜಿ ಚಾಟಿ ಬೀಸಿದ್ದಾರೆ. ಇದನ್ನೂ ಓದಿ: ಧರ್ಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲದ ಭಾರತದಲ್ಲಿ ಬದುಕಲು ಬಯಸುವುದಿಲ್ಲ: ಮೆಹುವಾ

    ವಿವಾದ ಏನು?
    ಮಹುವಾ ಅವರು ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡುವಾಗ, ಕಾಳಿ ದೇವಿಯು ಮಾಂಸ ಸೇವಿಸುವ ಹಾಗೂ ಮದ್ಯ ಸ್ವೀಕರಿಸುವ ದೇವತೆಯಾಗಿದ್ದಾಳೆ. ನೀವು ಭೂತಾನ್ ಅಥವಾ ಸಿಕ್ಕಿಂಗೆ ಹೋದರೆ, ಅವರು ಪೂಜೆ ಮಾಡುವಾಗ ತಮ್ಮ ದೇವರಿಗೆ ವಿಸ್ಕಿಯನ್ನು ನೀಡುತ್ತಾರೆ. ಈಗ ನೀವು ಉತ್ತರ ಪ್ರದೇಶಕ್ಕೆ ಹೋಗಿ ನಿಮ್ಮ ದೇವರಿಗೆ ವಿಸ್ಕಿಯನ್ನು ಪ್ರಸಾದವಾಗಿ ಕೊಡುತ್ತೇವೆ ಎಂದು ಹೇಳಿದರೆ, ಅದು ಧರ್ಮನಿಂದನೆ ಎನ್ನುತ್ತಾರೆ ಎಂದು ಹೇಳಿಕೆ ನೀಡಿದ್ದರು.

    ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

    Live Tv
    [brid partner=56869869 player=32851 video=960834 autoplay=true]

  • ಧರ್ಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲದ ಭಾರತದಲ್ಲಿ ಬದುಕಲು ಬಯಸುವುದಿಲ್ಲ: ಮೆಹುವಾ

    ಧರ್ಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲದ ಭಾರತದಲ್ಲಿ ಬದುಕಲು ಬಯಸುವುದಿಲ್ಲ: ಮೆಹುವಾ

    ನವದೆಹಲಿ: ಒಂದು ಧರ್ಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲದ ಭಾರತದಲ್ಲಿ ನಾನು ಬದುಕಲು ಬಯಸುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

    ಈ ಕುರಿತು ಟಿವಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ನಾನು ಕಾಳಿ ದೇವಿ ಆರಾಧಕಿ, ಹಿಂದೂ ಧರ್ಮ ಪಾಲಿಸುವಾಕೆ, ನನ್ನ ಅಭಿಪ್ರಾಯಗಳು ನನ್ನ ಸ್ವ-ಧರ್ಮದ ಮೇಲೆಯೇ ಅವಲಂಬಿತವಾಗಿದ್ದವು. ಇದರಲ್ಲಿ ಅಪರಾಧ ಎಸಗುವ ಯಾವುದೇ ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹುವಾ ವಿರುದ್ಧ ಕೇಸ್‌ – ನಾನು ಕಾಳಿ ಆರಾಧಕಿಯಾಗಿದ್ದು ಹೆದರಲ್ಲ ಎಂದ ಸಂಸದೆ

    ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಪೈಗಂಬರ್‌ರನ್ನು ಅವಹೇಳನ ಮಾಡಿದರು. ಆದರೆ ನಾನು ಕಾಳಿದೇವಿಯನ್ನು ಕೊಂಡಾಡುತ್ತೇನೆ. ಹೀಗಿದ್ದೂ ಒಂದು ಧರ್ಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲದ ಭಾರತದಲ್ಲಿ ಬದುಕಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ತಂಡದ ಒಂದು ಎಡವಟ್ಟಿನಿಂದಾಗಿ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡ ಪಾಕ್

    ಬಿಜೆಪಿ ತನ್ನ ಪರಿಕಲ್ಪನೆಯನ್ನು ಮತ್ತೊಬ್ಬರ ಮೇಲೆ ಹೇರಲು ಬಯಸುತ್ತಿದೆ. ಸಾಧ್ಯವಿದ್ದರೆ ಬಿಜೆಪಿ ನನ್ನ ತಪ್ಪುಗಳನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ.

    ಏನುದು ವಿವಾದ?: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

    ಈಚೆಗೆ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮೆಹುವಾ ಅವರು, ನನಗೆ ಕಾಳಿ ಮಾತೆಯು ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆಯಾಗಿದ್ದಾಳೆ. ನಿಮ್ಮ ದೇವತೆ ಬಗ್ಗೆ ಊಹಿಸಿಕೊಳ್ಳುವ ಸ್ವಾತಂತ್ರ‍್ಯ ನಿಮಗಿದೆ ಎಂದು ಹೇಳಿ ವಿವಾದಕ್ಕೀಡಾಗಿದ್ದರು. ಸಾಮಾಜಿಕ ಜಾಲತಾಣದಲ್ಲೂ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

    ವಿವಾದ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಟಿಎಂಸಿ, ಮಹುವಾ ಮೊಯಿತ್ರಾ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಮಹುವಾ ಹೇಳಿಕೆ ವೈಯಕ್ತಿಕ ಎಂದು ಹೇಳಿ ವಿವಾದಿಂದ ದೂರ ಉಳಿಯಿತು. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಮಹುವಾ ಅವರನ್ನು ಬಂಧಿಸಬೇಕೆಂಬ ಬೇಡಿಕೆಯನ್ನಿರಿಸಿದೆ.

    ಈ ಕುರಿತು ಬುಧವಾರ ಮತ್ತೆ ಟ್ವೀಟ್ ಮಾಡಿದ ಮಹುವಾ, ನಾನು ಕಾಳಿ ಆರಾಧಕಿಯಾಗಿದ್ದು ಯಾವುದಕ್ಕೂ ಹೆದರುವುದಿಲ್ಲ. ನಿಮ್ಮ ಮೂಢತೆ, ಗೂಂಡಾಯಿಸಂ ಅಥವಾ ಟ್ರೋಲ್‌ಗಳಿಗೆ ಬಗ್ಗುವುದಿಲ್ಲ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]