Tag: ಮಹುವಾ ಮೊಯಿತ್ರಾ

  • ಮಹುವಾ ವಿರುದ್ಧ ಕೇಸ್‌ – ನಾನು ಕಾಳಿ ಆರಾಧಕಿಯಾಗಿದ್ದು ಹೆದರಲ್ಲ ಎಂದ ಸಂಸದೆ

    ಮಹುವಾ ವಿರುದ್ಧ ಕೇಸ್‌ – ನಾನು ಕಾಳಿ ಆರಾಧಕಿಯಾಗಿದ್ದು ಹೆದರಲ್ಲ ಎಂದ ಸಂಸದೆ

    ನವದೆಹಲಿ: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಮಧ್ಯಪ್ರದೇಶದಲ್ಲಿ ಎಫ್‌ಐಆರ್ ದಾಖಲಾಗಿದೆ.

    ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಮಹುವಾ ಮೊಯಿತ್ರಾ ಅವರು, ನನಗೆ ಕಾಳಿ ಮಾತೆಯು ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆಯಾಗಿದ್ದಾಳೆ. ನಿಮ್ಮ ದೇವತೆ ಬಗ್ಗೆ ಊಹಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಎಂದು ಹೇಳಿದ್ದರು. ಈ ಹೇಳಿಕೆ ವಿವಾದವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು.

    ವಿವಾದ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಟಿಎಂಸಿ, ಮಹುವಾ ಮೊಯಿತ್ರಾ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ಮಹುವಾ ಹೇಳಿಕೆ ವೈಯಕ್ತಿಕ ಎಂದು ಹೇಳಿ ವಿವಾದಿಂದ ದೂರ ಉಳಿದಿದೆ. ಇದನ್ನೂ ಓದಿ: ಭಾರತ ತಂಡದ ಒಂದು ಎಡವಟ್ಟಿನಿಂದಾಗಿ ರ್‍ಯಾಂಕಿಂಗ್‌ನಲ್ಲಿ ಜಿಗಿತ ಕಂಡ ಪಾಕ್

    ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಮಹುವಾ ಅವರನ್ನು ಬಂಧಿಸಬೇಕೆಂಬ ಬೇಡಿಕೆಯನ್ನಿರಿಸಿದೆ.

    ಈ ಕುರಿತು ಬುಧವಾರ ಮತ್ತೆ ಟ್ವೀಟ್‌ ಮಾಡಿದ ಮಹುವಾ, ನಾನು ಕಾಳಿ ಆರಾಧಕಿಯಾಗಿದ್ದು ಯಾವುದಕ್ಕೂ ಹೆದರುವುದಿಲ್ಲ. ನಿಮ್ಮ ಮೂಢತೆ, ಗೂಂಡಾ, ಪೊಲೀಸ್ ಅಥವಾ ಟ್ರೋಲ್‌ಗಳಿಗೆ ಬಗ್ಗುವುದಿಲ್ಲ ಎಂದಿದ್ದಾರೆ.

    ಮಹುವಾ ಹೇಳಿಕೆಯನ್ನು ಬಾಲಿವುಡ್‌ ನಟಿ ಸ್ವರ ಬೆಂಬಲಿಸಿದ್ದಾರೆ. ಅದ್ಭುತವಾಗಿದೆ! ಅವರ ಧ್ವನಿಗೆ ಹೆಚ್ಚಿನ ಶಕ್ತಿ ಬೇಕಿದೆ ಎಂದು ಟ್ವೀಟ್‌ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ದೇವಿ ಮದ್ಯ, ಮಾಂಸ ಸೇವಿಸುವ ದೇವತೆ: ಟಿಎಂಸಿ ಸಂಸದೆ

    ಕಾಳಿ ದೇವಿ ಮದ್ಯ, ಮಾಂಸ ಸೇವಿಸುವ ದೇವತೆ: ಟಿಎಂಸಿ ಸಂಸದೆ

    ಕೋಲ್ಕತ್ತಾ: ಕಾಳಿ ದೇವಿಯು ಮಾಂಸ ತಿನ್ನುವ, ಮದ್ಯವನ್ನು ಸೇವಿಸುವ ದೇವತೆಯಾಗಿ ಕಾಣುತ್ತಾಳೆ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಚಿತ್ರದ ಪೋಸ್ಟರ್ ವಿವಾದಕ್ಕೆ ಪ್ರತಿಕ್ರಿಯಿಸಿದರು. ಅವರವರ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇರುತ್ತದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ ಹಾಗೂ ಇನ್ನೂ ಕೆಲವು ಸ್ಥಳಗಳಲ್ಲಿ ಧರ್ಮದ ನಿಂದನೆ ಆಗಿರುತ್ತದೆ ಎಂದು ತಿಳಿಸಿದರು.

    ಅದಕ್ಕೆ ಉದಾಹರಣೆ ಎಂಬಂತೆ ಸಿಕ್ಕಿಂನಲ್ಲಿ ಕಾಳಿ ದೇವಿಗೆ ವಿಸ್ಕಿಯನ್ನು ನೀಡುತ್ತಾರೆ. ಆದರೆ ಉತ್ತರ ಪ್ರದೇಶದಲ್ಲಿ ವಿಸ್ಕಿಯನ್ನು ಪ್ರಸಾದ ಎಂದು ಹೇಳಿದರೆ ಅವರು ಅದನ್ನು ಪ್ರಸಾದ ಎಂದರೆ ಧರ್ಮ ನಿಂದನೆ ಆಗುತ್ತದೆ ಎಂದರು. ಇದನ್ನೂ ಓದಿ: ಸಾರ್ವಜನಿಕವಾಗಿ ಕುರಾನ್ ಸುಟ್ಟಿದ್ದಕ್ಕೆ ಆಕ್ರೋಶ – ನಾಯಕನ ಕಾರನ್ನು ಅಪಘಾತಗೈದವರು ಅರೆಸ್ಟ್

    ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಎಸಿಬಿ ದಾಳಿಗೆ ಒಳಗಾಗುವವರು ಶುದ್ಧರಾಗಿದ್ರೆ ಏಕೆ ಹೆದರಬೇಕು: ಬಿ.ಸಿ.ನಾಗೇಶ್ ಟಾಂಗ್

    Live Tv
    [brid partner=56869869 player=32851 video=960834 autoplay=true]

  • ನನಗೆ ಇಷ್ಟವಾದಾಗ ಮಾಂಸ ತಿನ್ನಲು ಅವಕಾಶವಿದೆ: ಮೊಯಿತ್ರಾ

    ನನಗೆ ಇಷ್ಟವಾದಾಗ ಮಾಂಸ ತಿನ್ನಲು ಅವಕಾಶವಿದೆ: ಮೊಯಿತ್ರಾ

    ನವದೆಹಲಿ: ಕರ್ನಾಟಕ ರಾಜ್ಯಾದ್ಯಂತ ಹಲಾಲ್‌ಕಟ್, ಝಟ್ಕಾಕಟ್ ವಿವಾದದ ನಡುವೆ ಇದೀಗ ರಾಷ್ಟ್ರಮಟ್ಟದಲ್ಲಿ `ಮೀಟ್ ಬ್ಯಾನ್’ (ಮಾಂಸ ನಿಷೇಧ) ಅಭಿಯಾನ ತಲೆ ಎತ್ತಿದೆ. ಒಂದೆಡೆ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧಿಸುವಂತೆ ದೆಹಲಿಯಲ್ಲಿ ಮೀಟ್ ಬ್ಯಾನ್ ಅಭಿಯಾನ ನಡೆಯುತ್ತಿದೆ. ಇನ್ನೊಂದೆಡೆ ಮುಸ್ಲಿಂ ಬಾಂದವರು ಸಹ ಪವಿತ್ರ ರಂಜಾನ್ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಆಗ್ರಹಿಸುತ್ತಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ, ಸಂವಿಧಾನವು ತನಗೆ ಇಷ್ಟವಾದಾಗ ಮಾಂಸ ತಿನ್ನಲು ಅವಕಾಶ ನೀಡುತ್ತದೆ. ಅದೇ ರೀತಿ ಅಂಗಡಿಯವರಿಗೆ ವ್ಯಾಪಾರ ನಡೆಸಲೂ ಸ್ವಾತಂತ್ರ್ಯ ನೀಡುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಇಸ್ಲಾಂ ಸ್ಲೀಪರ್ ಸೆಲ್ ಕೆಲಸ ಮಾಡ್ತಿದೆ: ಚಕ್ರವರ್ತಿ ಸೂಲಿಬೆಲೆ

    meat ban

    ನವರಾತ್ರಿ ಸಂದರ್ಭದಲ್ಲಿ ದಕ್ಷಿಣ ದೆಹಲಿಯ ಕೆಲ ಭಾಗಗಳಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೇಯರ್ ಮುಖೇಶ್ ಸೂರ್ಯನ್ ಅವರು ಸೂಚಿಸಿರುವ ಬೆನ್ನಲ್ಲೇ ಮೊಯಿತ್ರಾ ಈ ಹೇಳಿಕೆ ನೀಡಿದ್ದಾರೆ.

    ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪ್ರತಿಯೊಬ್ಬರು ರಂಜಾನ್ ಸಮಯದಲ್ಲಿ ಸಾರ್ವಜನಿಕವಾಗಿ ಮಾಂಸಾಹಾರ ಸೇವನೆ ಮಾಡುವುದನ್ನು ನಿಷೇಧಿಸಬೇಕು. ರಂಜಾನ್ ಸಮಯದಲ್ಲಿ ನಾವು ಸೂರ್ಯೋದಯ ಮತ್ತು ಸೂರ್ಯಾಸ್ತದ ನಡುವೆ ಊಟ ಮಾಡುವುದಿಲ್ಲ. ಹಾಗಾಗಿ ಪ್ರತಿಯೊಬ್ಬ ಮುಸ್ಲಿಮೇತರರು, ಪ್ರವಾಸಿಗರು ಹಾಗೂ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಮಾಂಸಾಹಾರ ಸೇವನೆ ಮಾಡುವುದನ್ನು ನಿಷೇಧಿಸುವುದು ಸರಿಯೆಂದು ನಾನು ಭಾವಿಸುತ್ತೇನೆ ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

    ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ವರ್ಮಾ, ಇದು ದೆಹಲಿಗೆ ಮಾತ್ರವಲ್ಲ, ಭಾರತದ ಇತರ ಭಾಗಗಳಿಗೂ ವಿಸ್ತರಿಸಬೇಕು. ನವರಾತ್ರಿ ಹಬ್ಬದ ಸಂದರ್ಭದಲ್ಲಿ ವ್ರತ ಹಿಡಿದು ದೇವಿಯನ್ನು ಪೂಜಿಸುತ್ತಾರೆ. ಮುಸ್ಲಿಮರೇ ಆಗಲಿ, ಬೇರೆಯವರೇ ಆಗಲಿ ನಮ್ಮ ಸಂಸ್ಕೃತಿ ಹೇಳುವುದನ್ನು ನಾವು ಗೌರವಿಸಬೇಕು ಹಾಗಾಗಿ ಈ ಕ್ರಮ ದೇಶಾದ್ಯಂತ ಜಾರಿಯಾಗಬೇಕು ಎಂದು ಅವರು ಹೇಳಿದ್ದಾರೆ.

    ಕಾಂಗ್ರೆಸ್ ನಾಯಕ ಸಲ್ಮಾನ್ ನಿಜಾಮಿ ಅವರು, ದಕ್ಷಿಣ ದೆಹಲಿಯಲ್ಲಿ ಮಾಂಸ ನಿಷೇಧಿಸುವ ಬಿಜೆಪಿಯ ಕ್ರಮವು ಬೂಟಾಟಿಕೆಯಾಗಿದೆ. ನವರಾತ್ರಿಯಲ್ಲಿ ಮಾಂಸ ಮಾರಾಟ ನಿಷೇಧಿಸುವುದಾದರೆ ಪವಿತ್ರ ರಂಜಾನ್ ತಿಂಗಳಲ್ಲಿ ಮದ್ಯವನ್ನು ಏಕೆ ನಿಷೇಧಿಸಬಾರದು? ನೀವು ನವರಾತ್ರಿಯಲ್ಲಿ ಈರುಳ್ಳಿ ಅಥವಾ ಮಾಂಸವನ್ನು ತಿನ್ನದಿದ್ದರೆ ಇತರರನ್ನು ಏಕೆ ನಿಲ್ಲಿಸಬೇಕು? ಇದು ಪ್ರಜಾಪ್ರಭುತ್ವವೇ? ನಮ್ಮ ಭಾವನೆಗಳು ಮತ್ತು ಸಂವಿಧಾನದ ಬಗ್ಗೆ ಹಕ್ಕುಗಳು ಹೇಳುವುದು ಇದನ್ನೆಯೇ ಎಂದು ಎಂದು ಪ್ರಶ್ನಿಸಿದ್ದಾರೆ.