Tag: ಮಹೇಶ್ ಕುಮಾರ್

  • ‘ಅಯೋಗ್ಯ 2’ಗೆ ಅದ್ಧೂರಿ ಮುಹೂರ್ತ- ಮತ್ತೆ ಜೊತೆಯಾದ ಸತೀಶ್‌ ನೀನಾಸಂ, ರಚಿತಾ ರಾಮ್

    ‘ಅಯೋಗ್ಯ 2’ಗೆ ಅದ್ಧೂರಿ ಮುಹೂರ್ತ- ಮತ್ತೆ ಜೊತೆಯಾದ ಸತೀಶ್‌ ನೀನಾಸಂ, ರಚಿತಾ ರಾಮ್

    ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ (Rachita Ram) ಹಾಗೂ ಸತೀಶ್ ನೀನಾಸಂ (Satish Ninasam) ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ‘ಅಯೋಗ್ಯ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ.

    ಇಂದು (ಡಿ.11) ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದ ಅದ್ಧೂರಿ ಮುಹೂರ್ತ ಸಮಾರಂಭದಲ್ಲಿ ‘ಅಯೋಗ್ಯ 2’ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಡೈರೆಕ್ಟರ್ ಮಹೇಶ್ ಕುಮಾರ್ ಸಾರಥ್ಯದಲ್ಲಿ ‘ಅಯೋಗ್ಯ 2’ (Ayogya 2) ಮೂಡಿ ಬರುತ್ತಿದ್ದು‌, ಮುನೇಗೌಡ ಅವರು ತಮ್ಮ ಎಸ್ ವಿ ಸಿ ಪ್ರೊಡಕ್ಷನ್‌ನಲ್ಲಿ ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ:ಪೂಜಾ ಹೆಗ್ಡೆಗೆ ಠಕ್ಕರ್-‌ ನಾಗಚೈತನ್ಯಗೆ ಶ್ರೀಲೀಲಾ ಜೋಡಿ?

    ಇನ್ನೂ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ‘ಅಯೋಗ್ಯ 2’ ಚಿತ್ರಕ್ಕೆ ಕ್ಲ್ಯಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಹಾರೈಸಿದರು. ಮುಹೂರ್ತ ಸಮಾರಂಭದಲ್ಲಿ ಇಡೀ ಸಿನಿಮಾತಂಡದ ಜೊತೆಗೆ ನೆನಪಿರಲಿ ಪ್ರೇಮ್, ನಟ ಶ್ರೇಯರ್ ಮಂಜು, ಪ್ರಮೋದ್ ಸೇರಿದಂತೆ ಅನೇಕ ಕಲಾವಿದರು ಹಾಜರಿದ್ದು ಸಿನಿಮಾತಂಡಕ್ಕೆ ಶುಭಹಾರೈಸಿದರು.

    ಪೂಜೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮಹೇಶ್, ಅಯೋಗ್ಯ  2 ಕನ್ನಡದ ಜೊತೆಗೆ ತಮಿಳು, ತೆಲುಗಿನಲ್ಲೂ ಮಾಡುತ್ತಿದ್ದೇವೆ. ರಚಿತಾ ಮತ್ತು ಸತೀಶ್ ಅವರನ್ನು ತೆರೆಮೇಲೆ ನೋಡೋಕೆ ತುಂಬಾ ಖುಷಿ ಆಗುತ್ತೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ, ಫ್ಯಾನ್ ಇಂಡಿಯಾ ಸಿನಿಮಾ. ಮೊದಲ ಭಾಗ ಹಿಟ್ ಆದ್ಮೇಲೆ ಬೇರೆ ಭಾಷೆಗೆ ಡಬ್ ಮಾಡಿದ್ವಿ. ಆದರೀಗ ತಮಿಳು ಹಾಗೂ ತೆಲುಗಿನಲ್ಲಿ ಮಾಡುತ್ತಿದ್ದೇವೆ ಎಂದು ಹೇಳಿದರು.

    ನೀನಾಸಂ ಸತೀಶ್ ಮಾತನಾಡಿ, ಅಯೋಗ್ಯ 2 ಸಿನಿಮಾಗೆ ನಿರ್ಮಾಪಕರ ದೊಡ್ಡ ಲಿಸ್ಟ್ ಇತ್ತು. ಅದರೆ ಕೊನೆಯದಾಗಿ ಮುನೇಗೌಡ ಅವರು ಫೈನಲ್ ಆಗಿದ್ದಾರೆ ಅವರು ಉತ್ತಮ ನಿರ್ಮಾಪಕರು. ಅಯೋಗ್ಯ 2 ಸಿನಿಮಾ ಕನ್ನಡ ಸಿನಿಮಾರಂಗಕ್ಕೆ ದೊಡ್ಡ ಸಿನಿಮಾವಾಗಲಿದೆ ಎಂದು ಹೇಳಿದರು.

    ಇನ್ನೂ ನಟಿ ರಚಿತಾ ರಾಮ್ ಮಾತನಾಡಿ, ‘ಕಳೆದ 6 ವರ್ಷದ ಹಿಂದೆ ಅಯೋಗ್ಯ ಸಿನಿಮಾ ಇದೇ ಜಾಗದಲ್ಲಿ ಮುಹೂರ್ತ ಆಗಿತ್ತು. ತುಂಬಾ ಖುಷಿ ಆಗುತ್ತಿದೆ. ಅಶ್ವಿನಿ ಮೇಡಮ್ ಅವರ ಆಶೀರ್ವಾದವಿದೆ. ಮೊದಲ ಭಾಗಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಅಯೋಗ್ಯ 2 ಮಾಡಬೇಕು ಅಂದಾಗ ಮೊದಲು ತಲೆಗೆ ಬಂದಿದ್ದು ಏನಮ್ಮಿ ಏನಮ್ಮಿ ಹಾಡಿಗೆ ರಿಪ್ಲೇಸ್ ಯಾವುದು ಅಂತ ಆದರೆ ಆ ಹಾಡಿಗೆ ಯಾವುದೇ ರಿಪ್ಲೇಸ್ ಇಲ್ಲ. ನಾನು ಮತ್ತು ಸತೀಶ್ ಟಾಮ್ ಅಂಡ್ ಜೆರ್ರಿ ಹಾಗೆ ಕಿತ್ತಾಡುತ್ತಿರುತ್ತೇವೆ ಎಂದು ಹೇಳಿದರು. ಇನ್ನೂ ಈ ಸಿನಿಮಾದಲ್ಲಿ ರಚಿತಾ ಅವರಿಗೆ ಲೇಡಿ ಸೂಪರ್ ಸ್ಟಾರ್ ಎನ್ನುವ ಬಿರುದನ್ನು ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ರಚಿತಾ, ನಾನು ಯಾವಾಗಲು ಅಭಿಮಾನಿಗಳ ಪ್ರೀತಿಯ ಬುಲ್ ಬುಲ್ ಆಗಿಯೇ ಇರುತ್ತೇನೆ ಎಂದರು.

    ನಿರ್ಮಾಪಕ ಎಂ ಮುನೇಗೌಡ ಮಾತನಾಡಿ, ‘ಕನ್ನಡ ಸಿನಿಮಾರಂಗಕ್ಕೆ ಉತ್ತಮ ಸಿನಿಮಾವಾಗಲಿದೆ. ಮಹೇಶ್ ಬಂದು ಅಯೋಗ್ಯ 2 ಮಾಡಬೇಕು ಅಂದಾಗೆ ಹಿಂದೆ ಮುಂದೆ ನೋಡದೇ ಒಪ್ಪಿಕೊಂಡೆ. ಅಯೋಗ್ಯ ಮೊದಲ ಭಾಗ ಸೂಪರ್ ಹಿಟ್ ಆಗಿತ್ತು. ರಚಿತಾ ಮೇಡಮ್ ಕೂಡ ಸಿನಿಮಾ ಮಾಡಿ ಎಂದರು. ಎಲ್ಲಾ ಉತ್ತಮ ಕಲಾವಿದರಿದ್ದಾರೆ ಎಂದು ಹೇಳಿದರು.

    6 ವರ್ಷದ ಹಿಂದೆ ಬಂದಿದ್ದ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಫಿದಾ ಆಗಿದ್ದರು. ಈಗ ಮತ್ತದೇ ತಂಡ ‘ಅಯೋಗ್ಯ 2’ ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಅಯೋಗ್ಯ 2ನಲ್ಲಿ ಬಹುತೇಕ ಕಲಾವಿದರು ಹಾಗೂ ತಂತ್ರಜ್ಞರು ಮೊದಲ ಭಾಗದಲ್ಲಿ ಇದ್ದವರೇ ಮುಂದುವರೆಯುತ್ತಿರುವುದು ವಿಶೇಷ. ಹಿರಿಯ ನಟ ಸುಂದರ್ ರಾಜ್, ತಬಲ ನಾಣಿ, ಶಿವರಾಜ್ ಕೆ ಆರ್ ಪೇಟೆ ಪಾರ್ಟ್ 2ನಲ್ಲೂ ಇದ್ದಾರೆ. ಈ ಬಾರಿ ಮಂಜು ಪಾವಗಡ ಕೂಡ ಅಯೋಗ್ಯ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಇನ್ನೂ ಮಾಸ್ತಿ ಅವರ ಸಂಭಾಷಣೆ, ವಿಶ್ವಜಿತ್ ರಾವ್ ಕ್ಯಾಮರಾ, ಅರ್ಜುನ್ ಜನ್ಯ ಅವರ ಸಂಗೀತ ಸಿನಿಮಾಗಿರಲಿದೆ.

    ‘ಅಯೋಗ್ಯ’ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ಕುತೂಹಲ ಹಾಗೂ ನಿರೀಕ್ಷೆಗಳೊಂದಿಗೆ ಅಯೋಗ್ಯ 2 ಸೆಟ್ಟೇರಿದೆ. ಮಂಡ್ಯದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ.

  • ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್- ಮತ್ತೆ ಒಂದಾದ ಸಕ್ಸಸ್ ಜೋಡಿ ರಚಿತಾ ರಾಮ್, ಸತೀಶ್ ನಿನಾಸಂ

    ‘ಅಯೋಗ್ಯ2’ಗೆ ಮುಹೂರ್ತ ಫಿಕ್ಸ್- ಮತ್ತೆ ಒಂದಾದ ಸಕ್ಸಸ್ ಜೋಡಿ ರಚಿತಾ ರಾಮ್, ಸತೀಶ್ ನಿನಾಸಂ

    ಸ್ಯಾಂಡಲ್‌ವುಡ್‌ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ (Rachita Ram) ಹಾಗೂ ಸತೀಶ್ ನಿನಾಸಂ (Satish Ninasam) ಮತ್ತೆ ಒಂದಾಗಿದ್ದಾರೆ. ‘ಅಯೋಗ್ಯ’ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಅಯೋಗ್ಯ ಸಿನಿಮಾದ ಪಾರ್ಟ್ 2 (Ayogya 2) ಸೆಟ್ಟೇರುತ್ತಿದ್ದು, ಈಗಾಲೇ ಮುಹೂರ್ತಕ್ಕೆ ಡೇಟ್ ಫಿಕ್ಸ್ ಆಗಿದೆ.

    6 ವರ್ಷದ ಹಿಂದೆ ಸಿದ್ದೇಗೌಡ ಹಾಗೂ ನಂದಿನಿ ಲವ್ ಸ್ಟೋರಿಗೆ ಕನ್ನಡ‌ ಸಿನಿಮಾ ಪ್ರೇಮಿಗಳು ಶಹಬ್ಬಾಸ್ ಎಂದಿದ್ದರು. ಈಗ ಮತ್ತದೇ ತಂಡ ‘ಅಯೋಗ್ಯ 2’ ಸಿನಿಮಾ ಮೂಲಕ‌ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ‘ಅಯೋಗ್ಯ’ ಸಿನಿಮಾದ ಹಾಡುಗಳು ಕನ್ನಡ ಸಿನಿಮಾರಂಗದಲ್ಲಿಯೇ ಹೊಸ ಇತಿಹಾಸ ಬರೆದಿತ್ತು. ಈಗ ಮತ್ತಷ್ಟು ನಿರೀಕ್ಷೆಗಳೊಂದಿಗೆ ಚಿತ್ರತಂಡ ಹೊಸ ದಾಖಲೆ ಸೃಷ್ಟಿಸಲು‌ ಸಜ್ಜಾಗಿದೆ. ಇನ್ನು ‘ಅಯೋಗ್ಯ 2’ ಸಿನಿಮಾ ಡಿಸೆಂಬರ್ 11ರಂದು ಸೆಟ್ಟೇರಲಿದ್ದು, ಮಹೇಶ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಎಂ ಮುನೇಗೌಡ ‘ಅಯೋಗ್ಯ 2’ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ‌‌ ಇರಲಿದೆ.

    ರಚಿತಾ ರಾಮ್, ಸತೀಶ್ ನಿನಾಸಂ‌, ರವಿಶಂಕರ್, ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ‘ಅಯೋಗ್ಯ’ ಸಿನಿಮಾದಲ್ಲಿ ಅಭಿನಯಿಸಿದ ಬಹುತೇಕ ಕಲಾವಿದರು ಅಯೋಗ್ಯ- 2ನಲ್ಲಿ ಮುಂದುವರೆಯುತ್ತಿರುವುದು ವಿಶೇಷ. ಇದನ್ನೂ ಓದಿ:ಸಂಸತ್ ಲೈಬ್ರರಿಯಲ್ಲಿ `ಸಾಬರಮತಿ ರಿಪೋರ್ಟ್‌’ ಸಿನಿಮಾ ವೀಕ್ಷಿಸಿದ ಮೋದಿ

    ಸೂಪರ್ ಹಿಟ್ ಸಿನಿಮಾದ ಸೀಕ್ವೆಲ್ ಅಂದರೆ ನಿರೀಕ್ಷೆ ಮತ್ತು ಕುತೂಹಲ ಕೊಂಚ ಜಾಸ್ತಿನೆ ಇರಲಿದೆ. ಹಾಗಾಗಿ ಅಯೋಗ್ಯ-2 ಕೂಡ ಸೆಟ್ಟೇರುವುದಕ್ಕೂ ಮೊದಲೇ ನಿರೀಕ್ಷೆ ದುಪ್ಪಟ್ಟು ಮಾಡಿದೆ. ಪಾರ್ಟ-2 ಹೇಗಿರಲಿದೆ ರವಿ ಶಂಕರ್ ಮತ್ತು ಸತೀಶ್ ನಡುವಿನಕಾದಾಟ, ಜಿದ್ದಾಜಿದ್ದಿ ಹಾಗೆ ಮುಂದುವರೆಯಲಿದಿಯಾ ಕಾದುನೋಡಬೇಕು.

  • ಅಸಲಿಗೆ ‘ಕಾಟೇರ’ ಟೈಟಲ್‌ ಕೊಟ್ಟಿದ್ದು ಯಾರು? ನಿರ್ದೇಶಕ ಮಹೇಶ್‌ ಸ್ಪಷ್ಟನೆ

    ಅಸಲಿಗೆ ‘ಕಾಟೇರ’ ಟೈಟಲ್‌ ಕೊಟ್ಟಿದ್ದು ಯಾರು? ನಿರ್ದೇಶಕ ಮಹೇಶ್‌ ಸ್ಪಷ್ಟನೆ

    ಸ್ಯಾಂಡಲ್‌ವುಡ್‌ನಲ್ಲಿ ‘ಕಾಟೇರ’ ಟೈಟಲ್ ಬಗ್ಗೆ ಕದನ ಶುರುವಾಗಿದೆ. ‘ಕಾಟೇರ’ ಟೈಟಲ್ ಕೊಟ್ಟಿದ್ದು ನಾನೇ ಎಂದ ಉಮಾಪತಿಗೆ ದರ್ಶನ್ ಕೌಂಟರ್ ಕೊಟ್ಟಿದ್ದಾರೆ. ನಾವು ಗುಮ್ಮಿಸಿಕೊಳ್ಳುವವರಲ್ಲ ಎಂದು ದರ್ಶನ್‌ಗೆ ಉಮಾಪತಿ ಟಕ್ಕರ್ ಕೊಟ್ಟರು. ಅಸಲಿಗೆ ಕಾಟೇರ ಟೈಟಲ್ ಕೊಟ್ಟಿದ್ದು ಯಾರು? ಆಗಿದ್ದೇನು ಎಂದು ನಿರ್ದೇಶಕ ಮಹೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

    ‘ಮದಗಜ’ ಟೈಟಲ್ ಇದ್ದಿದ್ದು ನಿರ್ಮಾಪಕ ರಾಮ್‌ಮೂರ್ತಿ ಸರ್ ಹತ್ತಿರ. ಅದರಂತೆ ‘ಕಾಟೇರ’ ಟೈಟಲ್ ಇದ್ದಿದ್ದು ಉಮಾಪತಿ ಸರ್ ಹತ್ತಿರ. ಆದರೆ ಇದನ್ನು ಹೇಳಿ ಮಾಡಿಸಿದ್ದು ದರ್ಶನ್ ಅವರು ಎಂದು ಮಹೇಶ್ ಮಾತನಾಡಿದ್ದಾರೆ. ಎರಡು ಕಡೆ ಮಾತಾಡಿ ಸಿನಿಮಾ ಟೈಟಲ್ ಅನ್ನು ದರ್ಶನ್ ಎಕ್ಸ್‌ಚೇಂಜ್ ಮಾಡಿಸಿದ್ದರು.

    ದರ್ಶನ್ ಮನೆಯಲ್ಲಿ ಕಾಟೇರ ಎಂಬ ಕುದುರೆ ಇತ್ತು. ಅದು ಸತ್ತ ಮೇಲೆ ನೆನಪಿಗೋಸ್ಕರ ಆ ಟೈಟಲ್‌ನ ತುರುಣ್ ಸುಧೀರ್ ಅವರ ಬ್ಯಾನರ್‌ನಲ್ಲಿ ರಿಜಿಸ್ಟರ್ ಮಾಡಿಸುವ ಪ್ಲ್ಯಾನ್ ಇತ್ತು. ಆದರೆ ಒಂದೇ ಬ್ಯಾನರ್‌ನಲ್ಲಿ 3 ಹೆಸರನ್ನು ರಿಜಿಸ್ಟರ್ ಮಾಡೋಕೆ ಆಗಲ್ಲ ಅಂತ ಹೇಳಿ. ಉಮಾಪತಿ ಅವರ ಬ್ಯಾನರ್‌ನಲ್ಲಿ ದರ್ಶನ್ ರಿಜಿಸ್ಟರ್ ಮಾಡಿಸಿದ್ದರು. ಈಗ ಈ ವಿಚಾರ ದೊಡ್ಡದಾಗಿ ಇಲ್ಲಿತನಕ ಬಂದಿದೆ ಎಂದರು ಮಹೇಶ್.

    ದರ್ಶನ್ ಅವರು ಯಾವತ್ತು ಯಾವುದರ ಬಗ್ಗೆಯೂ ಮಾತನಾಡಲ್ಲ. ಈಗ ಮಾತನಾಡಿದ್ದಾರೆ ಅಂದರೆ ಅವರಿಗೆ ನೋವಾಗಿದೆ ಎಂದರ್ಥ. ಈಗ ಇದರ ಬಗ್ಗೆ ಸ್ಪಷ್ಟನೆ ನೀಡೋಣ ಅಂತ ನಿರ್ಧರಿಸಿದ್ದರು. ಯಾಕೆಂದ್ರೆ ಇದಾದ ಮೇಲೆ ಅವರು ‘ಡೆವಿಲ್’ ಶೂಟಿಂಗ್‌ನಲ್ಲಿ ಬ್ಯುಸಿಯಾಗ್ತಾರೆ ಅಂತ. ಈ ವಿಚಾರಕ್ಕೆ ಸ್ಪಷ್ಟನೆ ಇರಲಿ ಅಂತಲೇ ಕಾಟೇರ ಸಕ್ಸಸ್‌ ಕಾರ್ಯಕ್ರಮದಲ್ಲಿ ವೇದಿಕೆಗೆ ಕರೆದು ಡಿಬಾಸ್, ನನ್ನ ಮತ್ತು ತರುಣ್ ಬಳಿ ಕ್ಲ್ಯಾರಿಟಿ ಕೊಡಿಸಿದ್ದರು. ಇದನ್ನೂ ಓದಿ:ಟಾಪ್‌ಲೆಸ್ ಅವತಾರದಲ್ಲಿ ಸೋನಾಲಿ- ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ನಟಿ

    ಉಮಾಪತಿ ಅವರು ಕಾಟೇರ ಟೈಟಲ್ ಕೊಟ್ಟಿದ್ದು ನಾನೇ ಎಂದು ಹಲವು ಕಡೆ ಹೇಳಿದ್ದಾರೆ. ಹಾಗಾಗಿ ದರ್ಶನ್ ಅವರು ಇಂದು ಸ್ಪಷ್ಟನೆ ಕೊಟ್ಟರು. ಅಂದು ಸಾಕಷ್ಟು ಬಾರಿ ದರ್ಶನ್ ಅವರೇ ನನಗೆ ಕಾಟೇರ ಟೈಟಲ್ ಹೇಳಿದ್ದು ಎಂದು ನನ್ನ ಬಳಿ ಉಮಾಪತಿ ಸರ್ ಹೇಳಿಕೊಂಡಿದ್ದರು. ಈಗ ಸಮಯ ಬದಲಾಗಿದೆ ಅಷ್ಟೇ ಎಂದು ಮಹೇಶ್ ಮಾತನಾಡಿದ್ದರು.

    ಬೆಂಕಿ ಇಲ್ಲದೇ ಹೊಗೆಯಾಡಲ್ಲ. ಅವತ್ತಿನ ಅವರ ಹೇಳಿಕೆಯಿಂದಲೇ ಇದೆಲ್ಲಾ ಇಂದು ಶುರುವಾಗಿದ್ದು, ಆದರೆ ದರ್ಶನ್ ಮತ್ತು ಉಮಾಪತಿ ಒಂದಾಗಲಿ, ಅವರ ಸಂಬಂಧ ಸರಿ ಹೋಗಲಿ ಎಂದು ನಾನು ಅಶಿಸುತ್ತೇನೆ ಎಂದು ಮಹೇಶ್ ಮಾತನಾಡಿದ್ದರು.

  • ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಅಭಿಷೇಕ್ ಅಂಬರೀಶ್ ಭೇಟಿ

    ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಅಭಿಷೇಕ್ ಅಂಬರೀಶ್ ಭೇಟಿ

    ‘ಬ್ಯಾಡ್ ಮ್ಯಾನರ್ಸ್’ (Bad Manners) ಸಿನಿಮಾ ರಿಲೀಸ್‌ಗೆ ತಯಾರಿ ನಡೆಯುತ್ತಿರೋ ಬೆನ್ನಲ್ಲೇ, ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಅಭಿಷೇಕ ಅಂಬರೀಶ್ (Abhishek Ambareesh) ಭೇಟಿ ನೀಡಿದ್ದಾರೆ. ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ರಿಲೀಸ್ ಮತ್ತು ಅಭಿಷೇಕ್- ಮಹೇಶ್ ಕುಮಾರ್ (Mahesh Kumar) ನಟನೆಯ ಮುಂದಿನ ಸಿನಿಮಾ ಶೂಟಿಂಗ್ ಶುರು ಮಾಡುವ ಮುನ್ನ, ಕದ್ರಿ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಭಿಷೇಕ್ ಜೊತೆ ನಿರ್ದೇಶಕ ಮಹೇಶ್ ಕುಮಾರ್, ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ:ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? ರಾಗಿಣಿ ದ್ವಿವೇದಿ ಪ್ರತಿಕ್ರಿಯೆ

    ಅಭಿಷೇಕ್- ರಚಿತಾ ರಾಮ್ (Rachita Ram) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾಗೆ ದುನಿಯಾ ಸೂರಿ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಫಸ್ಟ್ ಲುಕ್ ಮತ್ತು ಹಾಡುಗಳು ಅಭಿಮಾನಿಗಳ ಗಮನ ಸೆಳೆದಿದೆ. ಸದ್ಯದಲ್ಲೇ ಚಿತ್ರದ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

    ಯಂಗ್ ರೆಬೆಲ್ ಅಭಿಷೇಕ್ 4ನೇ ಸಿನಿಮಾಗೆ ‘ಮದಗಜ’ ಮಹೇಶ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಅಭಿಷೇಕ್ – ಮಹೇಶ್ ಕಾಂಬಿನೇಷನ್ ಚಿತ್ರದಲ್ಲಿ ನಟಿ ಅಮೂಲ್ಯ

    ನಟ ಅಭಿಷೇಕ್ – ಮಹೇಶ್ ಕಾಂಬಿನೇಷನ್ ಚಿತ್ರದಲ್ಲಿ ನಟಿ ಅಮೂಲ್ಯ

    ಸುಂದರಿ, ಅಗ್ನಿಸಾಕ್ಷಿ, ನನ್ನರಸಿ ರಾಧೆ, ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಮೋಡಿ ಮಾಡಿರುವ ಚೆಲುವೆ ಅಮೂಲ್ಯ ಗೌಡ ಇದೀಗ ಸ್ಯಾಂಡಲ್‌ವುಡ್‌ನಲ್ಲಿ ನಾಯಕಿಯಾಗಿ ಮಿಂಚಲು ರೆಡಿಯಾಗಿದ್ದಾರೆ. `ಕುರುಡು ಕಾಂಚಣ’ (Kurudu Kanchana) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಬಗ್ಗೆ ಇತ್ತೀಚಿಗೆ ಅಪ್‌ಡೇಟ್ ನೀಡಿದ್ದರು. ಇದೀಗ ಮತ್ತೊಂದು ಚಿತ್ರಕ್ಕೆ ಅಮೂಲ್ಯ ಆಯ್ಕೆಯಾಗಿದ್ದಾರೆ.

    2016ರಲ್ಲಿ `ಸುಂದರಿ’ ಧಾರಾವಾಹಿ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ನಟಿ ಅಮೂಲ್ಯ ಬಳಿಕ ಶಮಂತ್ ಗೌಡ ಜೊತೆ `ಮರೆಯಲಾರೆ’ ಎಂಬ ಬ್ರೇಕಪ್ ಸಾಂಗ್‌ನಲ್ಲಿ ನಟಿಸಿದ್ದರು. ಸಾಕಷ್ಟು ಜಾಹಿರಾತಿನಲ್ಲಿ ಮಾಡೆಲ್ ಆಗಿ ಕಾಣಿಕೊಂಡಿದ್ದಾರೆ. ಇದೀಗ ಸಿನಿಮಾದತ್ತ ಮುಖ ಮಾಡಿದ್ದಾರೆ.

    ಅಭಿಷೇಕ್ ಅಂಬರೀಶ್ ಮತ್ತು ʻಮದಗಜʼ ನಿರ್ದೇಶಕ ಮಹೇಶ್ ಕುಮಾರ್ ಕಾಂಬಿನೇಷನ್‌ನಲ್ಲಿ ಮೂಡಿ ಬರಲಿರುವ ಚಿತ್ರದಲ್ಲಿ ನಟಿ ಅಮೂಲ್ಯ ಗೌಡ (Amoolya Gowda) ಕೂಡ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಅಪ್‌ಡೇಟ್‌ ಸಿಗುವವರೆಗೂ ಕಾದುನೋಡಬೇಕಿದೆ.

  • ಮೆಟ್ರೋದಲ್ಲಿ ಯಂಗ್ ರೆಬಲ್ ಸ್ಟಾರ್ ಮೊದಲ ಜರ್ನಿ

    ಮೆಟ್ರೋದಲ್ಲಿ ಯಂಗ್ ರೆಬಲ್ ಸ್ಟಾರ್ ಮೊದಲ ಜರ್ನಿ

    ತ್ತೀಚೆಗೆ ಯಂಗ್ ರೆಬಲ್ ಸ್ಟಾರ್ ಅಭಿಷೇಕ್(Young Rebel Star Abhishek) ತಮ್ಮ ಮದುವೆಯ ವಿಚಾರವಾಗಿ ಸಖತ್ ಸುದ್ದಿಯಾಗಿದ್ದರು. ಬಳಿಕ ನಟಿ ಸುಮಲತಾ ಅಂಬರೀಶ್(Sumalatha) ಮದುವೆ ವದಂತಿಗೆ ಬ್ರೇಕ್ ಹಾಕಿದ್ದರು. ಈ ಬೆನ್ನಲ್ಲೇ ಮತ್ತೆ ಯಂಗ್ ರೆಬಲ್ ಹೀರೋ ಮತ್ತೆ ಸುದ್ದಿಯಾಗಿದ್ದಾರೆ. ಮೊದಲ ಬಾರಿಗೆ ಮೆಟ್ರೋದಲ್ಲಿ ಅಭಿಷೇಕ್ ಅಂದರೀಶ್ ಜರ್ನಿ ಮಾಡಿದ್ದಾರೆ.

    `ಅಮರ್’ ಸಿನಿಮಾದ ಮೂಲಕ ಚಂದನವನಕ್ಕೆ ಪರಿಚಿತರಾದ ಪ್ರತಿಭಾನ್ವಿತ ನಟ ಅಭಿಷೇಕ್ ಇದೀಗ `ಬ್ಯಾಡ್ ಮ್ಯಾನರ್ಸ್’ ಮೂಲಕ ಸದ್ದು ಮಾಡ್ತಿದ್ದಾರೆ. ಇದೀಗ ನಿರ್ದೇಶಕ ಮಹೇಶ್ ಕುಮಾರ್ (Mahesh Kumar) ಜೊತೆ ಮೆಟ್ರೋದಲ್ಲಿ ಜರ್ನಿ ಮಾಡಿದ್ದಾರೆ. ಮೊದಲ ಬಾರಿಗೆ ಮೆಟ್ರೋದಲ್ಲಿ ಸಾರ್ವಜಿನಿಕರ ಮಧ್ಯೆ ತಾವು ಒಬ್ಬರಾಗಿ ಪ್ರಯಾಣ ಬೆಳೆಸಿದ್ದಾರೆ. ಸಿಲ್ಕ್ ಇನ್‌ಸ್ಟಿಟ್ಯೂಟ್ ಸಾರಕ್ಕಿ ಜೆ.ಪಿ ನಗರದವೆಗೂ ಅಭಿಷೇಕ್ ಮತ್ತು ನಿರ್ದೇಶಕ ಮಹೇಶ್ ಕುಮಾರ್ ಟ್ರಾವೆಲ್ ಮಾಡಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ರು `ಅಗ್ನಿಸಾಕ್ಷಿ’ಯ ವೈಷ್ಣವಿ ಗೌಡ

    ನಟ ಅಭಿಷೇಕ್ ಮಹೇಶ್ ಕುಮಾರ್ ಜೊತೆ `ಬ್ಯಾಡ್ ಮ್ಯಾನರ್ಸ್’ (Bad Manners) ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ. ಡೈರೆಕ್ಟರ್ ಕೃಷ್ಣ ಜೊತೆ ಕಾಳಿ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾಗೆ `ಕಾಂತಾರ’ (Kantara Film) ಬ್ಯೂಟಿ ಸಪ್ತಮಿ ಗೌಡ ನಾಯಕಿಯಾಗಿ ನಟಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ಭಿಷೇಕ್ ಅಂಬರೀಶ್ ಅವರಿಗೆ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿರುವ ಅಯೋಗ್ಯ ಚಿತ್ರ ಖ್ಯಾತಿಯ ಮಹೇಶ್ ಕುಮಾರ್ ತಮ್ಮ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ಮೋಷನ್ ಪೋಸ್ಟರ್ ಕೂಡ ಬಿಡುಗಡೆ ಆಗಿದೆ.  ನಾನು ಅಂಬರೀಶ್ ಅಣ್ಣನ ದೊಡ್ಡ ಅಭಿಮಾನಿ. ಅವರ ಮಗ ಅಭಿಷೇಕ್ ಅವರಿಗೆ ಸಿನಿಮಾ ಮಾಡುತ್ತಿರುವುದು ಖುಷಿಯಾಗಿದೆ. ನಿರ್ದೇಶನಕ್ಕೆ ಅವಕಾಶ ನೀಡಿರುವ ರಾಕ್ ಲೈನ್ ವೆಂಕಟೇಶ್ ಸರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಹಾರೈಸಿದ ಸುಮಲತಾ ಅಂಬರೀಶ್ ಅವರಿಗೆ  ಧನ್ಯವಾದ. ರವಿ ಬಸ್ರೂರು, ಟಿ.ಕೆ.ದಯಾನಂದ್ ಸೇರಿದಂತೆ ನನ್ನ ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿ ಬರಲಿದೆ ಎಂದು ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದರು.

    ಅಂಬರೀಶ್ ಅವರ ಸ್ಮಾರಕದ ಬಳಿ ಈ ಸಮಾರಂಭ ನಡೆಯುತ್ತಿದೆ. ಚಿತ್ರಕ್ಕೆ ಅಂಬರೀಶ್ ಅವರ  ಆಶೀರ್ವಾದ ಸಂಪೂರ್ಣ ಇದೆ. ಇದಕ್ಕೆ ಸಾಕ್ಷಿಯಾಗಿ ಪೋಸ್ಟರ್ ಬಿಡುಗಡೆಯಾಗುತ್ತಿದ್ದಂತೆ ಅಂಬರೀಶ್ ಅವರ ಭಾವಚಿತ್ರದ ಬಲಗಡೆಯಿಂದ ಹೂವು ಬಿತ್ತು. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಸುಮಲತಾ ಅಂಬರೀಶ್ ಹಾರೈಸಿದರು. ಅಭಿಷೇಕ್ ಅವರಿಗೆ ಸಿನಿಮಾ ಮಾಡಬೇಕೆಂಬುದು ನನಗೆ ಬಹಳ ದಿನಗಳ ಆಸೆ. ಆದರೆ ಚಿತ್ರದ ಕಥೆ ಚೆನ್ನಾಗಿರಬೇಕು ಅಂತ ಕಾಯುತ್ತಿದೆ. ಅಭಿ ಅವರೆ ಈ ಕಥೆಯ ಬಗ್ಗೆ ನನಗೆ ಹೇಳಿದರು. ಇಷ್ಟವಾಯಿತು. ಚಿತ್ರ ಅದ್ದೂರಿಯಾಗಿ ನಿರ್ಮಾಣವಾಗಲಿದೆ.  ಸುಮಲತಾ ಅಂಬರೀಶ್ ಅವರ ಹುಟ್ಟುಹಬ್ಬದ ದಿನ, ಅಂಬರೀಶ್ ಅವರ ಆಶೀರ್ವಾದದೊಂದಿಗೆ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದೀವಿ. ಮುಂದೆ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು. ಇದನ್ನೂ ಓದಿ: ಜಯಶ್ರೀ, ಚೈತ್ರಾ ಬೆಸ್ಟಿ ಅಂದ ರೂಪೇಶ್- ಸಾನ್ಯಾಗೆ ಶುರುವಾಯ್ತು ಹೊಟ್ಟೆಕಿಚ್ಚು..?

    ಅಪ್ಪನ ಹುಟ್ಟುಹಬ್ಬ ಹಾಗೂ ನನ್ನ ಹುಟ್ಟುಹಬ್ಬಕ್ಕೆ ಏನಾದರೂ ವಿಶೇಷತೆ ಇರುತ್ತಿತ್ತು. ಆದರೆ ನಮ್ಮ ಅಮ್ಮನ ಹುಟ್ಟುಹಬ್ಬದ ದಿನ ಈ ಮೋಷನ್ ಪೋಸ್ಟರ್ ಬಿಡುಗಡೆ ಮಾಡಬೇಕೆಂದು ನನ್ನ ಆಸೆಯಿತ್ತು. ಹಾಗಾಗಿ ಇಂದು ಬಿಡುಗಡೆ ಮಾಡಿದ್ದೀವಿ‌. ಇದೇ ಅಮ್ಮನಿಗೆ ನನ್ನ ಕಡೆಯಿಂದ ಹುಟ್ಟುಹಬ್ಬದ ಉಡುಗೊರೆ. ಮಹೇಶ್ ಕುಮಾರ್ ಮೋಷನ್ ಪೋಸ್ಟರ್ ಬಹಳ ಚೆನ್ನಾಗಿ ಮಾಡಿದ್ದಾರೆ. ಚಿತ್ರವನ್ನು  ಅಷ್ಟೇ ಚೆನ್ನಾಗಿ ಮಾಡುತ್ತಾರೆ ಎಂಬ ಭರವಸೆಯಿದೆ ಎಂದರು ನಾಯಕ‌ ಅಭಿಷೇಕ್ ಅಂಬರೀಶ್.

    Live Tv
    [brid partner=56869869 player=32851 video=960834 autoplay=true]

  • ಸುಮಲತಾ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ಸುಮಲತಾ ಹುಟ್ಟು ಹಬ್ಬಕ್ಕೆ ಅಭಿಷೇಕ್ ಅಂಬರೀಶ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ರಿಲೀಸ್

    ಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇವರ ಹುಟ್ಟು ಹಬ್ಬಕ್ಕಾಗಿ ನಿರ್ದೇಶಕ ಮಹೇಶ್ ಕುಮಾರ್ ತಮ್ಮ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದು, ಈ ಸಿನಿಮಾದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸುತ್ತಿದ್ದಾರೆ. ಪೋಸ್ಟರ್ ನಲ್ಲಿ ಖಡಕ್ ಲುಕ್ ನಲ್ಲಿ ಅಭಿಷೇಕ್ ಕಂಡಿದ್ದಾರೆ.

    ಅಂಬರೀಶ್ ಅವರ ಹುಟ್ಟು ಹಬ್ಬದಂದು ಘೋಷಣೆಯಾಗಿದ್ದ ಅಭಿಷೇಕ್ ಅಂಬರೀಶ್ ಅವರ ಈ ಸಿನಿಮಾದ ಮುಹೂರ್ತ ಇಂದು ಅಂಬರೀಶ್ ಅವರ ಸಮಾಧಿ ಹತ್ತಿರ ನೆರವೇರಿತು. ಇವತ್ತು ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬವಾಗಿದ್ದರಿಂದ ಈ ಸಂದರ್ಭವನ್ನು ಸಿನಿಮಾ ತಂಡ ಬಳಸಿಕೊಂಡು, ಮೋಷನ್ ಪೋಸ್ಟರ್ ರಿಲೀಸ್ ಮತ್ತು ನಿರ್ಮಾಪಕರ ಹೆಸರು ಘೋಷಣೆ ಮಾಡಲಾಯಿತು. ಇದನ್ನೂ ಓದಿ:ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

    ಈ ಹೊಸ ಸಿನಿಮಾವನ್ನು ಅಯೋಗ್ಯ ಚಿತ್ರಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಭಾರತೀಯ ಸಿನಿಮಾ ರಂಗದ ಹೆಮ್ಮೆಯ ಸಂಸ್ಥೆಯು ರಾಕ್ ಲೈನ್ ಪ್ರೊಡಕ್ಷನ್ ಈ ಚಿತ್ರವನ್ನು ತಯಾರು ಮಾಡಲಿದೆ. ಈ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕರು. ಈ ವರ್ಷ ಈಗಾಗಲೇ ಎರಡು ಸಿನಿಮಾಗಳನ್ನು ಘೋಷಣೆ ಮಾಡಿರುವ ರಾಕ್ ಲೈನ್ ಸಂಸ್ಥೆ, ಸುಮಲತಾ ಅವರ ಹುಟ್ಟು ಹಬ್ಬಕ್ಕಾಗಿ ಅವರ ಪುತ್ರ ಅಭಿಷೇಕ್ ಅವರ ಹೊಸ ಸಿನಿಮಾವನ್ನೂ ತಯಾರು ಮಾಡುತ್ತಿರುವುದಾಗಿ ತಿಳಿಸಿದೆ.

    ದುನಿಯಾ ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ನಂತರ ಅಭಿಷೇಕ್ ಈ ಚಿತ್ರಕ್ಕೆ ಸೈನ್ ಮಾಡಿದ್ದು, ಪಿರಿಯಡ್ ಡ್ರಾಮಾ ಕಥೆಯಲ್ಲಿ ಯಂಗ್ ರೆಬೆಲ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ  ‘AA04’ ಎಂದು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಚಿತ್ರದಲ್ಲಿ ಅಭಿಷೇಕ್ ಹೋರಾಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ: ಇಂದು ಮಹೂರ್ತ

    ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ: ಇಂದು ಮಹೂರ್ತ

    ಅಂಬರೀಶ್ ಅವರ ಹುಟ್ಟು ಹಬ್ಬದಂದು ಘೋಷಣೆಯಾಗಿದ್ದ ಅಭಿಷೇಕ್ ಅಂಬರೀಶ್ ಅವರ ಹೊಸ ಸಿನಿಮಾದ ಮುಹೂರ್ತ ಇಂದು ಅಂಬರೀಶ್ ಅವರ ಸಮಾಧಿ ಹತ್ತಿರ ನೆರವೇರಿತು. ಇವತ್ತು ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬವಾಗಿದ್ದರಿಂದ ಈ ಸಂದರ್ಭವನ್ನು ಸಿನಿಮಾ ತಂಡ ಬಳಸಿಕೊಂಡು, ಮೋಷನ್ ಪೋಸ್ಟರ್ ರಿಲೀಸ್ ಮತ್ತು ನಿರ್ಮಾಪಕರ ಹೆಸರು ಘೋಷಣೆ ಮಾಡಲಾಯಿತು.

    ಈ ಹೊಸ ಸಿನಿಮಾವನ್ನು ಅಯೋಗ್ಯ ಚಿತ್ರಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದು, ಭಾರತೀಯ ಸಿನಿಮಾ ರಂಗದ ಹೆಮ್ಮೆಯ ಸಂಸ್ಥೆಯು ರಾಕ್ ಲೈನ್ ಪ್ರೊಡಕ್ಷನ್ ಈ ಚಿತ್ರವನ್ನು ತಯಾರು ಮಾಡಲಿದೆ. ಈ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕರು. ಈ ವರ್ಷ ಈಗಾಗಲೇ ಎರಡು ಸಿನಿಮಾಗಳನ್ನು ಘೋಷಣೆ ಮಾಡಿರುವ ರಾಕ್ ಲೈನ್ ಸಂಸ್ಥೆ, ಸುಮಲತಾ ಅವರ ಹುಟ್ಟು ಹಬ್ಬಕ್ಕಾಗಿ ಅವರ ಪುತ್ರ ಅಭಿಷೇಕ್ ಅವರ ಹೊಸ ಸಿನಿಮಾವನ್ನೂ ತಯಾರು ಮಾಡುತ್ತಿರುವುದಾಗಿ ತಿಳಿಸಿದೆ. ಇದನ್ನೂ ಓದಿ:ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

    ದುನಿಯಾ ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾದ ನಂತರ ಅಭಿಷೇಕ್ ಈ ಚಿತ್ರಕ್ಕೆ ಸೈನ್ ಮಾಡಿದ್ದು, ಪಿರಿಯಡ್ ಡ್ರಾಮಾ ಕಥೆಯಲ್ಲಿ ಯಂಗ್ ರೆಬೆಲ್ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ  ‘AA04’ ಎಂದು ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಚಿತ್ರದಲ್ಲಿ ಅಭಿಷೇಕ್ ಹೋರಾಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜ್ಯೂನಿಯರ್ ‘ರೆಬಲ್ ಸ್ಟಾರ್’ ಅಭಿಷೇಕ್ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ

    ಜ್ಯೂನಿಯರ್ ‘ರೆಬಲ್ ಸ್ಟಾರ್’ ಅಭಿಷೇಕ್ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ನಿರ್ಮಾಪಕ

    ನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಾಲು ಸಾಲು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.  ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಶಿವರಾಜ್ ಕುಮಾರ್ ನಟನೆಯ ಯೋಗರಾಜ್ ಭಟ್ ನಿರ್ದೇಶನದ ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಆ ಸಿನಿಮಾ ಮುಹೂರ್ತ ಕೂಡ ಕಂಡಿದೆ. ಇದೀಗ ಮತ್ತೊಂದು ಸಿನಿಮಾ ಮಾಡುವ ಸುದ್ದಿ ಗಾಂಧಿನಗರದ ಗಲ್ಲಿಗಳಲ್ಲಿ ಕೇಳಿ ಬರುತ್ತಿದೆ. ಈ ಸಿನಿಮಾವನ್ನು ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

    ಅಂಬರೀಶ್ ಅವರ ಹುಟ್ಟು ಹಬ್ಬದ ದಿನದಂದು ಅಭಿಷೇಕ್ ಅಂಬರೀಶ್ ಅವರಿಗಾಗಿ ಸಿನಿಮಾವೊಂದನ್ನು ಮಾಡಲಿದ್ದೇನೆ ಎಂದು ಮಹೇಶ್ ಕುಮಾರ್ ಹೇಳಿಕೊಂಡಿದ್ದರು. ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಮಾಡಿದ್ದರು. ಅಂದು ಸಿನಿಮಾದ ನಿರ್ಮಾಪಕರು ಯಾರು ಎನ್ನುವುದನ್ನು ಬಹಿರಂಗ ಪಡಿಸಿರಲಿಲ್ಲ. ಆ ಸಿನಿಮಾವನ್ನು ರಾಕ್ ಲೈನ್ ವೆಂಕಟೇಶ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮುಂದಿನ ತಿಂಗಳಲ್ಲಿ ಅಧಿಕೃತ ಮಾಹಿತಿ ಹೊರ ಬೀಳಲಿದೆಯಂತೆ. ಇದನ್ನೂ ಓದಿ:ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

    ಆಗಸ್ಟ್  27ರಂದು ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬ. ಅಂದು ಸಿನಿಮಾದ ಶೀರ್ಷಿಕೆಯ ಜೊತೆಗೆ ನಿರ್ಮಾಪಕರ ಹೆಸರು ಕೂಡ ಬಹಿರಂಗವಾಗಲಿದೆ ಎನ್ನುವುದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ. ಈಗಾಗಲೇ ಪಬ್ಲಿಕ್ ಟಿವಿ ಡಿಜಿಟಲ್ ನಲ್ಲಿ ಈ ಸಿನಿಮಾದ ಕುರಿತು ವಿಸ್ತ್ರತ ವರದಿಯೇ ಪ್ರಕಟವಾಗಿದ್ದು, ಇದೊಂದು ಕ್ರಾಂತಿಕಾರಿಯೊಬ್ಬನ ಸಿನಿಮಾವಾಗಿದ್ದು, ದಂಗೆಯ ಹಿನ್ನೆಲೆಯಾಗಿಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]