ಟಗರು ಪಲ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಬಲಗಾಲಿಟ್ಟಿದ್ದ ಲವ್ಲಿ ಸ್ಟಾರ್ ಪ್ರೇಮ್ ಮುದ್ದಿನ ಗೊಂಬೆ ಅಮೃತಾ ಪ್ರೇಮ್. ಚೊಚ್ಚಲ ಚಿತ್ರದಲ್ಲಿಯೇ ಭರವಸೆ ಮೂಡಿಸಿದ್ದ ಈ ಸೂರ್ಯಕಾಂತಿ ಮುಂದಿನ ಸಿನಿಮಾ ಯಾವುದು ಎಂದು ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದರು. ಈಗ ಅದಕ್ಕೆ ಉತ್ತರ ಸಿಕ್ಕಿದೆ. ಅಮೃತಾ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅಳೆದು ತೂಗಿ ಕಥೆ ಆಯ್ಕೆ ಮಾಡಿಕೊಂಡು ನಿರ್ದೇಶಕ ಮಹೇಶ್ ಬಾಬು ಚಿತ್ರದಲ್ಲಿ ನಾಯಕಿಯಾಗಿ ನಟಿಸಲು ಸಮ್ಮತಿ ಸೂಚಿಸಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಸುಸಂದರ್ಭದಲ್ಲಿ ಚಿತ್ರತಂಡ ಅಮೃತಾ ಪ್ರೇಮ್ ಅವರನ್ನು ಸ್ವಾಗತಿಸಿದೆ. ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಅಮೃತಾ ಸಾಥ್ ಕೊಡುತ್ತಿದ್ದಾರೆ. ನಿರ್ದೇಶಕ ಮಹೇಶ್ ಬಾಬು ಸಾರಥ್ಯದಲ್ಲಿ ನಡೆದ 15 ದಿನಗಳ ವರ್ಕ್ ಶಾಪ್ ನಲ್ಲಿ ನಾಯಕ ರಕ್ಷಿತ್, ನಾಯಕಿ ಅಮೃತಾ ಪ್ರೇಮ್ ಸೇರಿದಂತೆ ಇಡೀ ತಂಡ ಭಾಗಿಯಾಗಿದೆ. ಇನ್ನೂ ಅಮೃತಾ ಪ್ರೇಮ್ ತಮ್ಮ ಪಾತ್ರಕ್ಕೆ ಬೇಕಾದ ಕಸರತ್ತಿನೊಂದಿಗೆ ಶೀಘ್ರದಲ್ಲಿಯೇ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.

ಅಮೃತಾ ಪ್ರೇಮ್ (Amrita Prem) ನಾಯಕಿಯಾಗಿ ಅಭಿನಯಿಸಿದ್ದ ಟಗರು ಪಲ್ಯ ಸಿನಿಮಾ ವಿಶೇಷವಾಗಿಯೇ ಇತ್ತು. ಹಳ್ಳಿ ಹುಡುಗಿಯಾಗಿಯೆ ಅಮೃತಾ ಪ್ರೇಮ್ ತುಂಬಾನೆ ಹೆಚ್ಚು ಗಮನ ಸೆಳೆದಿದ್ದರು. ಮೊದಲ ಚಿತ್ರದಲ್ಲಿಯೇ ದೊಡ್ಡ ಕಲಾವಿದರ ಮುಂದೆ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಚಿತ್ರದ ಮೂಲಕವೇ ಸೌತ್ ಫಿಲ್ಮಂ ಫೇರ್ ಪ್ರಶಸ್ತಿಯನ್ನ ಪಡೆದುಕೊಂಡಿದ್ದಾರೆ. ದಕ್ಷಿಣದ ವಿವಿಧ ಭಾಷೆಯ ಸಿನಿಮಾಗಳಿಗೆ ವಿವಿಧ ವಿಭಾಗದಲ್ಲಿಯೇ ಪ್ರಶಸ್ತಿಯನ್ನ ಕೊಡಲಾಗುತ್ತದೆ. ಆ ರೀತಿ ಕನ್ನಡದ ಟಗರು ಪಲ್ಯದ ಚಿತ್ರದಲ್ಲಿ ನಟಿಸಿರೋ ನಟಿ ಅಮೃತಾ ಪ್ರೇಮ್, ಅತ್ಯುತ್ತಮ ಡೆಬ್ಯು ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಕಿರುಚಿತ್ರ, ಧಾರಾವಾಹಿ, ರಿಯಾಲಿಟಿ ಶೋ ಅಂತಿದ್ದ ಸ್ಮೈಲ್ ಗುರು ರಕ್ಷಿತ್ ನಾಯಕನಾಗಿ ಇಂಡಸ್ಟ್ರಿಗೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಚೊಚ್ಚಲ ಸಿನಿಮಾಗೆ ‘ಆಕಾಶ್’, ‘ಅರಸು’ ಅಂತಹ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕು ಎಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಿದ್ದಾರೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.











ಮಹೇಶ್ ಬಾಬು ನಟನೆಯ 29ನೇ ಚಿತ್ರಕ್ಕೆ ರಾಜಮೌಳಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಪ್ರಮುಖ ಪಾತ್ರಕ್ಕಾಗಿ ಪೃಥ್ವಿರಾಜ್ರನ್ನು ಚಿತ್ರತಂಡ ಸಂಪರ್ಕಿಸಿದೆ. ಮಹೇಶ್ ಬಾಬು ಮುಂದೆ ವಿಲನ್ ಆಗಿ ನಟಿಸಲು ಪೃಥ್ವಿರಾಜ್ಗೆ ಚಾನ್ಸ್ ಸಿಕ್ಕಿದೆ. ಎಂದೂ ಕಾಣಿಸಿಕೊಂಡಿರದ ಡಿಫರೆಂಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ.


ಮಹೇಶ್ ಬಾಬು, ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್. ಮೆರವಣಿಗೆ ಸಿನಿಮಾ ಮೂಲಕ ಐಂದ್ರಿತಾ ರೇ, ಚಿರು (Chiru Film) ಸಿನಿಮಾ ಮೂಲಕ ಕೃತಿ ಕರಬಂಧ, ಅಜಿತ್ ಚಿತ್ರದ ಮೂಲಕ ನಿಕ್ಕಿ ಗಲ್ರಾನಿ, ಕ್ರೇಜಿ ಬಾಯ್ (Crazy Boy) ಮೂಲಕ ಆಶಿಕಾ ರಂಗನಾಥ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ. ಇದನ್ನೂ ಓದಿ:
ಅಂದಹಾಗೆ, ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ‘ವೀರ ಮದಕರಿ’ (Veera Madakari) ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ (Jerusha Christopher) ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.






