Tag: ಮಾಜಿ ಕಾರ್ಪೋರೇಟರ್

  • ನನ್ನ ಪತಿ ಹಂತಕರ ತಲೆ ಕಡಿದವ್ರಿಗೆ 10 ಕೋಟಿ-  ನಾಜೀಮಾ ಖಾನ್ ಘೋಷಣೆ

    ನನ್ನ ಪತಿ ಹಂತಕರ ತಲೆ ಕಡಿದವ್ರಿಗೆ 10 ಕೋಟಿ- ನಾಜೀಮಾ ಖಾನ್ ಘೋಷಣೆ

    ಬೆಂಗಳೂರು: ಮಾಜಿ ಕಾರ್ಪೋರೇಟರ್ ಪತಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಕೊಲೆ ಮಾಡಿ ತಪ್ಪಿಸಿಕೊಂಡಿರುವ ಆರೋಪಿ ಮತ್ತಷ್ಟು ಇಂಟರೆಸ್ಟಿಂಗ್ ಮಾಹಿತಿಗಳನ್ನು ಹೊರಹಾಕಿದ್ದಾನೆ. ಇದರಿಂದ ಪೊಲೀಸರ ತನಿಖೆ ಮೇಲೆಯೇ ಅನುಮಾನ ಮೂಡುವಂತಾಗಿದೆ.

    ಜುಲೈ 13 ರಂದು ಬೆಂಗಳೂರಿನ ಚಾಮರಾಜಪೇಟೆ ಬಳಿಯ ಟಿಪ್ಪು ನಗರದ ಮಾಜಿ ಕಾರ್ಪೋರೇಟರ್ ನಾಜಿಮಾ ಖಾನ್ ಪತಿ ಆಯೂಬ್ ಖಾನ್‍ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಖುದ್ದು ಅಯೂಬ್ ಖಾನ್ ಅಣ್ಣನ ಮಗ ಮತೀನ್ ಖಾನ್ ಎಂಬವನೇ ಚಾಕು ಇರಿದಿದ್ದ. ನಡುರಸ್ತೆಯಲ್ಲೇ ಕುಸಿದುಬಿದ್ದಿದ್ದ ಆಯೂಬ್ ಖಾನ್‍ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ರೂ ಬದುಕುಳಿಯಲಿಲ್ಲ.

    ಇದೀಗ ಪತಿಯ ಹತ್ಯೆ ವಿರುದ್ಧ ಮಾಜಿ ಕಾರ್ಪೊರೇಟರ್ ನಾಜೀಮಾ ಖಾನ್ ಸಿಡಿದೆದ್ದಿದ್ದಾರೆ. ತನ್ನ ಪತಿ ಹಂತಕರ ತಲೆ ಕಡಿದವರಿಗೆ 10 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ ಎಂದು ಖುದ್ದು ಹತ್ಯೆ ಆರೋಪಿ ಪರಾರಿಯಾಗಿರುವ ಮತೀನ್ ಖಾನ್ ಹೇಳಿದ್ದಾನೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಒಂದಷ್ಟು ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾನೆ. ಹತ್ತಾರು ವರ್ಷಗಳಿಂದ ಮಸೀದಿಯನ್ನು ಅಭಿವೃದ್ದಿ ಮಾಡಿದ್ದೆ, ಅಧ್ಯಕ್ಷ ಸ್ಥಾನ ಕೊಡ್ತಿನಿ ಅಂದಿದ್ದ ಚಿಕ್ಕಪ್ಪ ಅಯೂಬ್ ಖಾನ್ ಕೊನೆ ಕ್ಷಣದಲ್ಲಿ ತನ್ನ ಮಗನನ್ನು ಅಧ್ಯಕ್ಷನಾಗಿ ಮಾಡಿದ್ದ. ಆಗಲೂ ನಾನು ಸುಮ್ಮನಿದ್ದೆ. ಆದರೆ ಆಯೂಬ್ ಖಾನ್‍ಗೆ ನಾನು ಏರಿಯಾದಲ್ಲಿರೋದು ಇಷ್ಟ ಇರಲಿಲ್ಲ. ಇದೇ ಕಾರಣಕ್ಕೆ ಗಲಾಟೆ ತೆಗೆದು ನನಗೆ ತೊಂದರೆ ಕೊಡ್ತಿದ್ದ. ಕೊಲೆಯಾದ ದಿನ ಕೂಡ ಆಯೂಬ್ ಖಾನ್ ಮತ್ತು ಮಗ ಇಬ್ಬರು ನನ್ನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡೋಕೆ ಮುಂದಾದ್ರು. ಪ್ರಾಣ ರಕ್ಷಣೆ ವೇಳೆ ಚಾಕು ತಗುಲಿ ಆಯೂಬ್ ಖಾನ್ ಸಾವನ್ನಪ್ಪಿದ್ದಾನೆ ಎಂದಿದ್ದಾನೆ. ಅಲ್ಲದೇ ಆಯೂಬ್ ಪತ್ನಿ ನಾಜೀಮಾಖಾನ್ ಸಾರ್ವಜನಿಕವಾಗಿ ಮತೀನ್ ಖಾನ್ ತಲೆ ತೆಗೆದವರಿಗೆ 10 ಕೋಟಿ ಕೊಡ್ತೀನಿ ಅಂತಾ ಘೋಷಿಸಿದ್ದಾರೆ ಅಂತಾ ವೀಡಿಯೋದಲ್ಲಿ ಹೇಳಿದ್ದಾನೆ.

    ಆಯೂಬ್ ಖಾನ್ ಹೆಂಡತಿ ನಾಜೀಮಾ, ನನ್ನ ತಲೆ ಕಡಿದು ತಂದವರಿಗೆ ಹತ್ತು ಕೋಟಿ ಕೊಡ್ತೀನಿ ಅಂತಾ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾರೆ. ಆ ಹತ್ತು ಕೋಟಿನಾ, ಯಾರಿಗೆ ಕೊಡ್ತೀರಿ ಹೇಳಲಿ, ದರ್ಗಾದವರಿಗೆ, ನನ್ನ ಕುಟುಂಬದವರಿಗೆ ಕೊಡ್ತೀರಾ..? ಒಂದು ಕೆಲಸ ಮಾಡಿ ಶಾಸಕ ಜಮೀರ್ ಅಹಮದ್ ಖಾನ್‍ಗೆ ಕೊಡಲಿ, ನಾನೇ ತಲೆ ಕಡಿದುಕೊಳ್ತೀನಿ. ಇದನ್ನೂ ಓದಿ: ಕಾಲೇಜು ಯುವತಿಯರಿಗೆ ಕೆಮಿಕಲ್ ಸ್ಪ್ರೇ ಮಾಡ್ತಿದ್ದವನಿಗೆ ಸ್ಥಳೀಯರಿಂದ ಗೂಸಾ – ಪೊಲೀಸರ ವಶಕ್ಕೆ

    ಶಾಸಕ ಜಮೀರ್ ಕೈಗೆ ಹತ್ತು ಕೋಟಿ ಕೊಡಿ: ಈ ಬಗ್ಗೆ ಸ್ಟಷ್ಟನೆ ನೀಡಿರುವ ಆರೋಪಿ ಮತೀನ್ ಖಾನ್, ನನ್ನ ತಲೆಗೆ ಹತ್ತು ಕೋಟಿ ಬೆಲೆ ಕಟ್ಟಲಾಗಿದೆ. ಆ ಹಣವನ್ನು ಶಾಸಕ ಜಮೀರ್ ಅಹ್ಮದ್ ಕೈಗೆ ಕೊಡಿ, ಆ ಹಣದಿಂದ ಜನರಿಗೆ ಸಹಾಯ ಮಾಡಲಿ. ನಾನೇ ನನ್ನ ತಲೆಯನ್ನು ಕಡಿದುಕೊಳ್ತೀನಿ ಅಂತಾ ಸವಾಲು ಹಾಕಿದ್ದಾರೆ. ಇದೇ ವೇಳೆ ಮಾತು ಮುಂದುವರಿಸಿರುವ ಮತೀನ್, ಘಟನೆ ಸ್ಥಳದಲ್ಲಿ ಸಿಸಿಟಿವಿ ಇದೆ ಅದನ್ನು ಪರಿಶೀಲನೆ ನಡೆಸಿ, ಮೊದಲಿಗೆ ಯಾರು ಹಲ್ಲೆ ಮಾಡಿದ್ದು, ಕೊಲೆಗೆ ಕಾರಣ ಏನು ಅನ್ನೋದು ತಿಳಿಯಲಿದೆ. ಯಾಕೆ ಪೊಲೀಸರು ಆ ಸಿಸಿಟಿವಿ ಬಹಿರಂಗ ಪಡಿಸ್ತಿಲ್ಲ. ಕಾರ್ಪೋರೇಟರ್ ಪರವಾಗಿ ಪೊಲೀಸರು ತನಿಖೆ ನಡೆಸ್ತಿದ್ದಾರೆ. ನಾನೇ ಪೊಲೀಸರ ಮುಂದೆ ಶರಣಾಗ್ತಿನಿ ಅಂತಾ ವೀಡೀಯೋದಲ್ಲಿ ಕೊಲೆ ಹಿಂದಿನ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾನೆ.

    ಯಾರು ಏನೇ ಹೇಳಲಿ, ಅದ್ರಲ್ಲಿ ನನಗೆ ಯಾವುದೇ ವ್ಯತ್ಯಾಸ ಬರಲ್ಲ. ನಂಗೆ ಏರಿಯಾದಲ್ಲಿ ಏನೆಲ್ಲಾ ತೊಂದರೆ ಮಾಡಿದ್ರು ಅಂತಾ ನಮ್ಮ ಮೊಹಲ್ಲಾದ ಪ್ರತಿಯೊಬ್ಬರಿಗೂ ಗೊತ್ತಿದೆ. ಗಲಾಟೆ ನಡೆದ ಜಾಗದಲ್ಲಿ ಸಿಸಿಟಿವಿ ಇತ್ತು. ಕ್ಯಾಮೆರಾವನ್ನು ಪೊಲೀಸರು ಯಾಕೆ ತನಿಖೆಗೊಳಪಡಿಸುತ್ತಿಲ್ಲ? ಅವತ್ತು ನಾನು ಮಸೀದಿಗೆ ಹೋಗಿ ಬರ್ತಿದ್ದೆ. ಆ ಬಿಲ್ಡಿಂಗ್‍ನ ಕೆಳಗಡೆಯಿರುವ ಬೇಕರಿಯವರನ್ನು ಮಾಧ್ಯಮವರು ಹಿಡಿದು ಪ್ರಶ್ನಿಸಬೇಕು. ಮಸೀದಿ ಮುಂದಿರುವ ಡಿಪೋದಲ್ಲಿರುವವರನ್ನೂ ಪ್ರಶ್ನಿಸಿ ಇವನು ಹೇಗೆ ಬಂದ ಅಂತಾ. ನಾನು ಸರೆಂಡರ್ ಆಗ್ತೀನಿ. ನನಗೆ ಯಾವುದೇ ರೀತಿಯ ಭಯವಿಲ್ಲ. ಆದರೆ ಕೊಲೆಯಾದ ಜಾಗದಲ್ಲಿ ಸಿಸಿಟಿವಿ ಬಗ್ಗೆ ಕೇಳಿದ್ರೆ, ಅದು ವರ್ಕ್ ಆಗ್ತಾ ಇರಲಿಲ್ಲ ಅಂತಿದ್ದಾರೆ. ಹಾಗಾಗಿ ಪೊಲೀಸರ ತನಿಖೆ ಮೇಲೂ ಒಂದಷ್ಟು ಅನುಮಾನ ಮೂಡಿದ್ರೆ, ಮತ್ತೊಂದು ಕಡೆ ಆರೋಪಿಯನ್ನು ರಕ್ಷಣೆ ಮಾಡ್ತಿರೋದು ಯಾರು ಅನ್ನೋ ಅನುಮಾನ ಕೂಡ ಬರುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮಸೀದಿ ಅಧ್ಯಕ್ಷ ಸ್ಥಾನದ ಕಿತ್ತಾಟಕ್ಕೆ ಬಿತ್ತು ಹೆಣ – ಮಾಜಿ ಕಾರ್ಪೋರೇಟರ್ ಪತಿ ಕೊಲೆ ರಹಸ್ಯ ಔಟ್‌

    ಮಸೀದಿ ಅಧ್ಯಕ್ಷ ಸ್ಥಾನದ ಕಿತ್ತಾಟಕ್ಕೆ ಬಿತ್ತು ಹೆಣ – ಮಾಜಿ ಕಾರ್ಪೋರೇಟರ್ ಪತಿ ಕೊಲೆ ರಹಸ್ಯ ಔಟ್‌

    ಬೆಂಗಳೂರು: ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ಕೊಲೆಗೆ ಮಸೀದಿಯೊಂದರ ಅಧ್ಯಕ್ಷಗಿರಿ ಪಟ್ಟಕ್ಕಾಗಿ ನಡೆದ ಘರ್ಷಣೆಯೇ ಕಾರಣ ಎನ್ನುವುದು ಇದೀಗ ಬಯಲಾಗಿದೆ.

    ಆಯೂಬ್ ಖಾನ್ ಕಳೆದ ಕೆಲ ವರ್ಷಗಳಿಂದ ಟಿಪ್ಪುನಗರದ ಖುದಾಯತ್ ಮಸೀದಿಗೆ ಅಧ್ಯಕ್ಷನಾಗಿದ್ದ. ಆದರೆ ಈ ಅಧ್ಯಕ್ಷ ಸ್ಥಾನದ ಮೇಲೆ ಆಯೂಬ್ ಖಾನ್ ಸಹೋದರ ಪ್ಯಾರೂಖಾನ್ ಮಗ ಮಥೀನ್ ಖಾನ್ ಕಣ್ಣಿಟ್ಟಿದ್ದ. ಅಷ್ಟೇ ಅಲ್ಲದೇ ಮಸೀದಿಯ ಪ್ರೆಸಿಡೆಂಟ್ ಹುದ್ದೆ ಬಿಟ್ಟುಕೊಡುವಂತೆ ಆಯೂಬ್ ಖಾನ್ ಬಳಿ ಹಲವು ಬಾರಿ ಕೇಳಿದ್ದ. ಇದಕ್ಕೆ ಆಯೂಬ್ ಖಾನ್ ನಿರಾಕರಿಸಿದ್ದ. ಅಷ್ಟೇ ಅಲ್ಲದೇ ಆಯೂಬ್ ಖಾನ್ ತನ್ನ ಮಗ ಸಿದ್ದಿಕ್ ಖಾನ್‌ನ್ನು ಮಸೀದಿಗೆ ಅಧ್ಯಕ್ಷನಾಗಿ ಮಾಡಲು ಬಯಸಿದ್ದ.

    POLICE JEEP

    ಈ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಇದೇ ವಿಚಾರಕ್ಕೆ ಆಯೂಬ್ ಹಾಗೂ ಮಥೀನ್ ನಡುವೆ ಜಗಳವಾಗುತ್ತಿತ್ತು. ನಿನ್ನೆ ಇದು ಜಗಳ ಮೀತಿ ಮೀರಿದ್ದು, ಟಿಪ್ಪುನಗರದ ಮಸೀದಿಯಿಂದ ನಮಾಜ್ ಮುಗಿಸಿ ಬರುವ ವೇಳೆ ಆಯೂಬ್‍ಗೆ ಮಥೀನ್‌ ಚಾಕು ಇರಿದು ಮನಸ್ಸೋ ಇಚ್ಛೆ ಥಳಿಸಿದ್ದ. ಅಲ್ಲದೆ ಆಯುಬ್‌ನ ಹೊಟ್ಟೆ ಹಾಗೂ ಮರ್ಮಾಂಗಕ್ಕೆ ಚಾಕುವಿನಿಂದ ಇರಿದಿದ್ದನು. ಚಾಕು ಇರಿದ ಜಾಗದಲ್ಲಿ ಸತತವಾಗಿ ರಕ್ತಸ್ರಾವವಾಗಿತ್ತು. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದನ್ನೂ ಓದಿ: ಎದುರಾಳಿಯ ಒಂದೇ ಒಂದು ಏಟಿಗೆ ಕಿಕ್ ಬಾಕ್ಸರ್ ಪ್ರಾಣವೇ ಹೋಯ್ತು!

    crime

    ಘಟನೆಗೆ ಸಂಬಂಧಿಸಿ ಮೃತ ಆಯೂಬ್ ಖಾನ್ ಪತ್ನಿ ನಜೀಮಾ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರಿಂದ ಎಫ್.ಐ.ಆರ್ ದಾಖಲಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

    Live Tv
    [brid partner=56869869 player=32851 video=960834 autoplay=true]

  • ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

    ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಆಯುಬ್ ಖಾನ್ ನಿಧನ

    ಬೆಂಗಳೂರು: ಸಹೋದರನಿಂದಲೇ ಹಲ್ಲೆಗೊಳಗಾಗಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯುಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

    ಬಿಬಿಎಂಪಿ 139 ವಾರ್ಡ್‍ನ ಮಾಜಿ ಕಾರ್ಪೋರೇಟರ್ ನಜೀಮಾ ಪತಿ ಆಯುಬ್ ಖಾನ್ ಮೇಲೆ ಸಹೋದರನಿಂದಲೇ ಮಾರಣಾಂತಿಕ ಹಲ್ಲೆ ನಡೆದಿತ್ತು. ಚಾಕು ಇರಿದು ಮನಸ್ಸೋ ಇಚ್ಛೆ ಥಳಿಸಿದ್ದರು. ಅಲ್ಲದೆ ಆಯುಬ್ ಸಹೋದರ ಹೊಟ್ಟೆ ಹಾಗೂ ಮೂತ್ರ ವಿಸರ್ಜನಾ ಸಂಚಿ ಭಾಗಕ್ಕೆ ಚಾಕುವಿನಿಂದ ಇರಿದಿದ್ದನು. ಚಾಕು ಇರಿದ ಜಾಗದಲ್ಲಿ ಸತತವಾಗಿ ರಕ್ತಸ್ರಾವವಾಗುತ್ತಿತ್ತು.

    ಘಟನೆ ನಡೆದ ಕೂಡಲೇ ಆಯುಬ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆ ಬಳಿ ಆಯುಬ್ ಖಾನ್ ಸಂಬಂಧಿಕರು ಜಮಾಯಿಸಿದ್ದಾರೆ. ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಮುಂದುವರಿದ ಮಳೆ ಅವಾಂತರ – 10 ದಿನದ ಹಿಂದೆ ಕೊಚ್ಚಿಹೋದ ಬಾಲಕಿ ಸುಳಿವು ಇನ್ನೂ ಸಿಕ್ಕಿಲ್ಲ

    ಸದ್ಯ ಘಟನೆ ಸಂಬಂಧ ಆರೋಪಿ ಪತ್ತೆಗಾಗಿ ಚಾಮರಾಜಪೇಟೆ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಆಯುಬ್ ಖಾನ್ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆ ಬಳಿ ಪೊಲೀಸರಿಂದ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮೂರು ಡಿ.ಆರ್ ಪೊಲೀಸ್ ವಾಹನ ಸೇರಿದಂತೆ ನೂರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರೇಖಾ ಕದಿರೇಶ್ ಹತ್ಯೆ ಹಿಂದೆ ನಾದಿನಿ ಕೈವಾಡ? – ನಾದಿನಿ ಮಾಲಾ, ಮಗ ಅರುಳ್ ಅರೆಸ್ಟ್

    ರೇಖಾ ಕದಿರೇಶ್ ಹತ್ಯೆ ಹಿಂದೆ ನಾದಿನಿ ಕೈವಾಡ? – ನಾದಿನಿ ಮಾಲಾ, ಮಗ ಅರುಳ್ ಅರೆಸ್ಟ್

    ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಮತ್ತೊಂದು ಮೇಜರ್ ಟ್ವಿಸ್ಟ್ ಸಿಕ್ಕಿದೆ. ರೇಖಾ ಕೊಲೆಯಾದ ದಿನ ಕಣ್ಣೀರು ಹಾಕ್ತಿದ್ದ ನಾದಿನಿ ಮಾಲ ಮತ್ತು ಮಗ ಅರುಳನೇ ಕೊಲೆ ಹಿಂದಿನ ಮಾಸ್ಟರ್ ಮೈಂಡ್ ಗಳು ಅನ್ನೋ ಶಾಕಿಂಗ್ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ

    ವರಸೆಯಲ್ಲಿ ರೇಖಾ ಕದಿರೇಶ್‍ಗೆ ನಾದಿಯಾಗಬೇಕು. ರೇಖಾ ಕೊಲೆಯಾದ ದಿನ ಮಾಲಾ ಓವರ್ ಆಕ್ಟಿಂಗ್ ಮಾಡಿ ಕಣ್ಣೀರು ಹಾಕುವಾಗಲೇ ಪೊಲೀಸರಿಗೆ ಡೌಟ್ ಶುರುವಾಗಿತ್ತು. ತಕ್ಷಣ ಅಲರ್ಟ್ ಆದ ಪೊಲೀಸರು ಮಾಲಾ ಮೇಲೆ ಒಂದು ಕಣ್ಣಿಟ್ಟಿದ್ದರು. ಮೊದಲಿಗೆ ಕೊಲೆ ಮಾಡಿದ ಆರೋಪಿಗಳ ಬೆನ್ನು ಬಿದ್ದು ಪ್ರಮುಖ ಆರೋಪಿ ಪೀಟರ್ ಮತ್ತು ಸೂರ್ಯನಿಗೆ ಗುಂಟೇಟು ಹೊಡೆದು, ಮತ್ತೆ ಮೂವರು ಸೇರಿದಂತೆ ಒಟ್ಟು ಐವರನ್ನು ಬಂಧಿಸಿದ್ದರು. ಈ ಐವರ ವಿಚಾರಣೆ ವೇಳೆ ರೇಖಾ ಕದಿರೇಶ್ ಕೊಲೆಯ ಹಿಂದಿನ ಮಾಸ್ಟರ್ ಮೈಂಡ್‍ಗಳು ಮಾಲ ಮತ್ತು ಮಾಲನ ಮಗ ಅರುಳ್ ಕೈವಾಡದ ಬಗ್ಗೆ ಬಾಯಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಛಲವಾದಿಪಾಳ್ಯದಲ್ಲಿ ಕದಿರೇಶ್ ಕಾರ್ಪೋರೇಟರ್ ಆಗಿದ್ದ ವೇಳೆ ಈಗ ಅರೆಸ್ಟ್ ಆಗಿರುವ ಪೀಟರ್, ಅರುಣ್, ಸೂರ್ಯ, ಸ್ಟೀಫನ್, ಪುರುಷೋತ್ತಮ ಸೇರಿದಂತೆ ಎಲ್ಲರು ಕೂಡ ಕದಿರೇಶ್ ಗೆ ತುಂಬಾ ಆಪ್ತರಾಗಿದ್ದರು. ಕದಿರೇಶ್ ಕೂಡ ಇವರನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಿದ್ದ. ಅಕ್ಕ ಮಾಲಾ ಕೂಡ ಏರಿಯಾದಲ್ಲಿ ಹವಾ ಮೆಂಟೈನ್ ಮಾಡ್ಕೊಂಡಿದ್ಳು. ಆದರೆ ಕದಿರೇಶ್ ಕೊಲೆಯಾಗಿ, ರೇಖಾ ಕಾರ್ಪೋರೇಟರ್ ಆದಾಗ ಇವರೆಲ್ಲರನ್ನೂ ದೂರ ಇಟ್ಟಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಮಾಲಾ ಮತ್ತು ಮಗ ಅರುಳ್‍ಗೆ ಪೀಟರ್ ಸಾಥ್ ನೀಡಿದ್ದ. ರೇಖಾ ಬದುಕಿರೋ ತನಕ ನಮಗೆ ಉಳಿಗಾಲವಿಲ್ಲ. ಅವಳನ್ನ ಮುಗಿಸೋಕೆ ಪ್ಲಾನ್ ಮಾಡಿ, ಕೇಸು, ಜಾಮೀನು, ನಾವ್ ನೋಡ್ಕೋತಿವಿ ಅಂತಾ ಮಾಲ ಮತ್ತು ಮಗ ಆರುಳ್ ಹತ್ಯೆ ಗೆ ಡೀಲ್ ನೀಡಿದ್ದರು ಅಂತ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಸ್ವಂತ ಮಗುವನ್ನೇ ಕೊಂದು ಹೂತುಹಾಕಿದ ಪೋಷಕರು – ಮೃತದೇಹ ಹೊರತೆಗೆದು ಪರಿಶೀಲನೆ

    ತಮ್ಮನ ಹೆಂಡತಿಗೆ ಸ್ಕೆಚ್ ಹಾಕಿ ಕೊಲೆ ಮಾಡಿಸಿದ್ದು ನಾದಿನಿ ಮಾಲ ಅಂತಾ ತಿಳಿದ ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ರೇಖಾ ಕದಿರೇಶ್ ಹತ್ಯೆ ಪ್ರಕರಣ ದಲ್ಲಿ ಏಳು ಜನರ ಬಂಧನವಾಗಿದ್ದು, ಇನ್ನೂ ಯಾರ್ಯಾರು ಈ ಕೊಲೆಯ ಹಿಂದಿದ್ದಾರೆ ಅನ್ನೋದು ಪೊಲೀಸರ ತನಿಖೆಯಿಂದ ಬಹಿರಂಗವಾಗಬೇಕಿದೆ. ಇದನ್ನೂ ಓದಿ: ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ – ಬಯಲಾಯ್ತು ಮರ್ಡರ್ ರಹಸ್ಯ

  • ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಸೂಚನೆ: ಬೊಮ್ಮಾಯಿ

    ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಸೂಚನೆ: ಬೊಮ್ಮಾಯಿ

    ಹಾವೇರಿ: ಬೆಂಗಳೂರಿನಲ್ಲಿ ನಡೆದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ಸಂಪೂರ್ಣ ತನಿಖೆ ನಡೆಸುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಹಾವೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದ್ದಾರೆ. ಹತ್ಯೆ ಯಾರು ಮಾಡಿದ್ದಾರೆ ಅವರು ಶೀಘ್ರದಲ್ಲಿ ಬಂಧನ ಆಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.

    ಇದೇ ವೇಳೆ ಮಾಜಿ ಸಚಿವ ಜಮೀರ್ ಅಹಮ್ಮದ್ ಮೇಲಿನ ಆರೋಪದ ಬಗ್ಗೆ ಗೊತ್ತಿಲ್ಲ. ಸಂಪೂರ್ಣ ತನಿಖೆ ನಡೆಯುತ್ತಿದೆ. ಹತ್ಯೆ ಮಾಡಿದ ಆರೋಪಿಯನ್ನ ಶೀಘ್ರದಲ್ಲಿ ಬಂಧನ ಆಗುತ್ತಾರೆ ಎಂದು ತಿಳಿಸಿದರು.

    ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಛಲವಾದಿಪಾಳ್ಯ ಕಾರ್ಪೊರೇಟ್ ಆಗಿದ್ದ ರೇಖಾ ಕದಿರೇಶ್ ಅವರನ್ನು ಸಹಚರರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ರೇಖಾ ಕದಿರೇಶ್ ಮನೆ ಮುಂದೆಯೇ ಇಂದು ಹಲ್ಲೆ ನಡೆದಿತ್ತು. ಮನೆಯ ಒಳಗಡೆ ಇದ್ದ ರೇಖಾ ಅವರನ್ನು ಹೊರಗೆ ಕರೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.

    ಛಲವಾದಿ ಪಾಳ್ಯದ ಬಿಜೆಪಿ ಪಾಲಿಕೆ ಸದಸ್ಯರಾಗಿದ್ದ ರೇಖಾ ಅವರ ಪತಿ ಕದಿರೇಶ್ ಅವರನ್ನು 2018ರಲ್ಲಿ ಹಾಡಹಗಲೇ ಕಾಟನ್‍ಪೇಟೆಯ ಅಂಜಿನಪ್ಪ ಗಾರ್ಡನ್ ನಲ್ಲಿ ಕೊಲೆ ಮಾಡಲಾಗಿತ್ತು.

  • ಮಾಜಿ ಕಾರ್ಪೋರೇಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಮಾಜಿ ಕಾರ್ಪೋರೇಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಬೆಂಗಳೂರು: ನಗರದ ಬಸವನಪುರ ವಾರ್ಡ್ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಅವರ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆಯ ಕೊಣೆಯಲ್ಲಿ ನೇಣು ಹಾಕಿಕೊಂಡು ಕೆಆರ್ ಪುರ ವಿ. ಕ್ಷೇತ್ರದ ಬಸವನಪುರ ವಾರ್ಡ್‍ನ ಮಾಜಿ ಕಾರ್ಪೋರೇಟರ್ ಜಯಪ್ರಕಾಶ್ ಪತ್ನಿ ವಿನೋದಾ ಆತ್ಮಹತ್ಯೆಗೆ ಶರಣರಾಗಿದ್ದು, ಸ್ಥಳಕ್ಕೆ ಕೆ.ಆರ್.ಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

    ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ವಿನೋದಾ ಅವರನ್ನು ಕೂಡಲೇ ಕುಟುಂಬಸ್ಥರು ಭಟ್ಟರಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆತ್ಮಹತ್ಯೆಗೆ ಯಾವುದೇ ನಿಖರ ತಿಳಿದು ಬಂದಿಲ್ಲ. ಇತ್ತೀಚೆಗಷ್ಟೇ ವಿನೋದಾ ಅಪೆಂಡಿಕ್ಸ್ ಆಪರೇಷನ್‍ಗೆ ಒಳಗಾಗಿದ್ದರು ಎನ್ನಲಾಗಿದೆ. ದಂಪತಿಗೆ ಮೂರು ವರ್ಷದ ಮಗುವಿದ್ದು, ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾಜಿ ಕಾರ್ಪೋರೇಟರ್ ಆಗಿರುವ ಜಯಪ್ರಕಾಶ್ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ಆಪ್ತರಾಗಿದ್ದಾರೆ.

  • ಆಸ್ಪತ್ರೆ ವಾಶ್‍ರೂಮಿನಲ್ಲೇ ಮಾಜಿ ಕಾರ್ಪೊರೇಟರ್ ಮಗ ಆತ್ಮಹತ್ಯೆ

    ಆಸ್ಪತ್ರೆ ವಾಶ್‍ರೂಮಿನಲ್ಲೇ ಮಾಜಿ ಕಾರ್ಪೊರೇಟರ್ ಮಗ ಆತ್ಮಹತ್ಯೆ

    ಮುಂಬೈ: 25 ವರ್ಷದ ಮಾಜಿ ಕಾರ್ಪೊರೇಟರ್ ಮಗ ಜುಹುವಿನ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವಾಶ್‍ರೂಮಿನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

    ಅಂಕಿತ್ ರೈ ಆತ್ಮಹತ್ಯೆಗೆ ಶರಣಾದ ಯುವಕ. ಅಂಕಿತ್ ಮೃತದೇಹವನ್ನು ಕುಟುಂಬದವರು ಮತ್ತು ಆಸ್ಪತ್ರೆಯ ಸಿಬ್ಬಂದಿ ಆತನಿದ್ದ ವಾರ್ಡಿನ ವಾಶ್‍ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನೋಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತ ಅಂಕಿತ್ ಮಾಜಿ ಕಾರ್ಪೊರೇಟರ್ ಮನೋಜ್ ರೈ ಅವರ ಪುತ್ರನಾಗಿದ್ದು, ಈತ ಖಿನ್ನತೆಗೆ ಒಳಗಾಗಿದ್ದನು. ಇದರಿಂದ ಅಂಕಿತ್ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಆತ ಎಲ್ಲರ ರೀತಿ ವರ್ತಿಸುತ್ತಿರಲಿಲ್ಲ. ಹೀಗಾಗಿ ಆತನನ್ನು ನಾಲ್ಕು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಂಕಿತ್ ವಾಶ್‍ರೂಮಿನಲ್ಲಿ ತನ್ನ ಪ್ಯಾಂಟ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬುಧವಾರ ಕುಟುಂಬದವರು ಆಸ್ಪತ್ರೆಗೆ ಬಂದಿದ್ದಾರೆ. ಆಗ ಸುಮಾರು 7.30ಕ್ಕೆ ಆಸ್ಪತ್ರೆಯ ಸಿಬ್ಬಂದಿ ಜೊತೆ ಕುಟುಂಬದವರು ಅಂಕಿತ್ ವಾರ್ಡಿಗೆ ಹೋಗಿದ್ದಾರೆ. ಆದರೆ ಆತ ಅಲ್ಲಿ ಕಾಣಿಸಲಿಲ್ಲ. ನಂತರ ವಾಶ್‍ರೂಮಿನಲ್ಲಿ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ತಕ್ಷಣ ಕುಟುಂಬದವರು ಫೋನ್ ಮಾಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಜುಹು ಪೊಲೀಸರು ಆಸ್ಪತ್ರೆಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬ ಮತ್ತು ಆಸ್ಪತ್ರೆ ಸಿಬ್ಬಂದಿಯ ಜೊತೆ ವಿಚಾರಣೆ ಮಾಡಿದ್ದಾರೆ. ನಂತರ ಅಂಕಿತ್ ಮೃತದೇಹವನ್ನು ಕೂಪರ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸದ್ಯಕ್ಕೆ ಅಂಕಿತ್ ಆತ್ಮಹತ್ಯೆ ಮಾಡಿಕೊಂಡಿದ್ದ ಸ್ಥಳದಲ್ಲಿ ಯಾವುದೇ ಡೆತ್‍ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯಕ್ಕೆ ಈ ಪ್ರಕರಣವನ್ನು ಜುಹು ಪೊಲೀಸರು ಆಕಸ್ಮಿಕ ಸಾವು ಎಂದು ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

  • ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಮಾಜಿ ಕಾರ್ಪೋರೇಟರ್ ಸೇರಿ ಗ್ರಾಮಸ್ಥರು ವಿಷ ಸೇವನೆಗೆ ಯತ್ನ

    ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಮಾಜಿ ಕಾರ್ಪೋರೇಟರ್ ಸೇರಿ ಗ್ರಾಮಸ್ಥರು ವಿಷ ಸೇವನೆಗೆ ಯತ್ನ

    ಶಿವಮೊಗ್ಗ: ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ್ ರೆಡ್ಡಿ ಜೊತೆ ಸ್ಥಳೀಯ ಗ್ರಾಮಸ್ಥರು ಸೇರಿ ವಿಷಯ ಕುಡಿಯಲು ಮುಂದಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

    ಪಾಲಿಕೆ ವ್ಯಾಪ್ತಿಯ 5ನೇ ವಾರ್ಡ್ ನಲ್ಲಿರುವ ಪುರಲೆ ಬಡಾವಣೆಯಲ್ಲಿ ಶುದ್ಧೀಕರಣ ಘಟಕ ನಿರ್ಮಾಣಕ್ಕೆ ಗುಜರಾತ್ ಮೂಲದ ಸಂಸ್ಥೆ ಮುಂದಾಗಿದೆ. ಇದೂವರೆಗೂ ಈ ಕಾಮಗಾರಿ ಆರಂಭಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಆದರೆ ಇಂದು ನೂರಾರು ಪೊಲೀಸರ ಬಿಗಿ ಭದ್ರತೆಯಲ್ಲಿ ಕಾಮಗಾರಿ ಆರಂಭಗೊಂಡಿತ್ತು. ಇದನ್ನು ತಪ್ಪಿಸಲು ಬೆಳಗ್ಗೆಯಿಂದಲೇ ಕಾಮಗಾರಿ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಮೋಹನ್ ರೆಡ್ಡಿ ಮತ್ತು ಸ್ಥಳೀಯ ಗ್ರಾಮಸ್ಥರು ಸೇರಿ ವಿಷ ಕುಡಿಯಲು ನಡೆಸಿದ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

    ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವ ಈ ಘಟಕವನ್ನು ಇಲ್ಲಿಂದ ಸ್ಥಳಾಂತರ ಮಾಡಿ ಎಂದು ಸ್ಥಳೀಯರು ಆಗ್ರಹಿಸಿ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ, ಈ ಕಾಮಗಾರಿ ಸರ್ಕಾರ ಮಟ್ಟದಲ್ಲಿ ನಿರ್ಣಯ ಆಗಿದ್ದು, ಇದನ್ನು ತಡೆಯಲು ನನಗೆ ಅಧಿಕಾರ ಇಲ್ಲ ಎಂದು ಹೇಳಿದರು.

    ಈ ಸಂಬಂಧ ಅಧಿಕಾರಿಗಳು ಮತ್ತು ಪ್ರತಿಭಟನ ನಿರತರ ನಡುವೇ ಮಾತುಕತೆ ನಡೆದು ನಂತರ ಪ್ರತಿಭಟನಾಕಾರರು ಕಾನೂನು ಹೋರಾಟ ಕೈಗೊಳ್ಳಲು ನಿರ್ಧರಿಸಿ, ಪ್ರತಿಭಟನೆ ಹಿಂಪಡೆದಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಗೌರಿ ಹತ್ಯೆ ಪ್ರಕರಣ: ಮಾಜಿ ಕಾರ್ಪೊರೇಟರ್ ಎಸ್‍ಐಟಿ ವಶಕ್ಕೆ

    ಗೌರಿ ಹತ್ಯೆ ಪ್ರಕರಣ: ಮಾಜಿ ಕಾರ್ಪೊರೇಟರ್ ಎಸ್‍ಐಟಿ ವಶಕ್ಕೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಮಾಜಿ ಕಾರ್ಪೋರೇಟರ್ ನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.

    ಶ್ರೀಕಾಂತ್ ಪನ್ಗಾರ್ಕರ್ ಎಂಬಾತನೇ ಬಂಧಿತ ಶಿವಸೇನೆ ಪಕ್ಷದ ಮಾಜಿ ಕಾರ್ಪೋರೇಟರ್. ವಿಚಾರವಾದಿಗಳು ಮತ್ತು ಚಿಂತಕರ ಹತ್ಯೆಗೆ ಶ್ರೀಕಾಂತ್ ಹಣಕಾಸು ಸಹಾಯ ಮಾಡುತ್ತಿದ್ದನು ಎಂಬ ಆರೋಪಗಳಿವೆ. ಹೀಗಾಗಿ ಶ್ರೀಕಾಂತ್ ನನ್ನು ಪುಣೆಯ ಎಸ್‍ಐಟಿ ಪೊಲೀಸರು ಬಂಧಿಸಿ ಮುಂಬೈ ಜೈಲಿನಲ್ಲಿ ಇರಿಸಿದ್ದರು.

    ಮುಂಬೈ ಜೈಲಿನಲ್ಲಿದ್ದ ಶ್ರೀಕಾಂತ್ ನನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿಗೆ ಕರೆತಂದಿರುವ ಎಸ್‍ಐಟಿ ಇಂದು ಕೋರ್ಟ್ ಗೆ ಹಾಜರುಪಡಿಸಲಿದೆ. ನ್ಯಾಯಾಲಯಕ್ಕೆ ಹಾಜುರುಪಡಿಸಿ ಆರೋಪಿ ಶ್ರೀಕಾಂತ್‍ನ್ನು ಎಸ್‍ಐಟಿ ತಮ್ಮ ವಶಕ್ಕೆ ಪಡೆಯಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಇತ್ತ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಹುಬ್ಬಳ್ಳಿಯ ಅಮಿತ್ ಬದ್ದಿ ಮತ್ತು ಗಣೇಶ್ ಮಿಸ್ಕಿನ್ ಇಬ್ಬರನ್ನು ಸಿಐಡಿ ತನ್ನ ವಶಕ್ಕೆ ಪಡೆದುಕೊಂಡಿದೆ. ವಿಚಾರವಾದಿ ಎಂ.ಎಂ.ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ತಮ್ಮ ವಶಕ್ಕೆ ನೀಡಬೇಕೆಂದು ಸಿಐಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಧಾರವಾಡದ 3 ನೇ ಹೆಚ್ಚುವರಿ ದಿವಾನಿ ನ್ಯಾಯಾಲಯ ಆರೋಪಿಗಳನ್ನು ಸೆಪ್ಟೆಂಬರ್ 28ರವರೆಗೆ ಸಿಐಡಿ ವಶಕ್ಕೆ ನೀಡುವಂತೆ ಆದೇಶಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೌಡಿ ನಾಗನ ಪತ್ತೆಗೆ ಭಿಕ್ಷುಕರ ವೇಷ ತೊಟ್ಟ ಪೊಲೀಸರು!

    ರೌಡಿ ನಾಗನ ಪತ್ತೆಗೆ ಭಿಕ್ಷುಕರ ವೇಷ ತೊಟ್ಟ ಪೊಲೀಸರು!

    ಬೆಂಗಳೂರು: ಶ್ರೀರಾಂಪುರದ ಮಾಜಿ ಕಾರ್ಪೋರೇಟರ್, ರೌಡಿಶೀಟರ್ ನಾಗನಿಗಾಗಿ ಯಾವ ರೀತಿ ಹುಡುಕಾಟ ನಡೆಸಿದ್ರೂ ಪ್ರಯೋಜನವಾಗಿಲ್ಲ. ಹೀಗಾಗಿ ಪೊಲೀಸರು ಭಿಕ್ಷುಕರ ವೇಷ ತೊಟ್ಟು ನಾಗನ ಪತ್ತೆಗೆ ಬಲೆ ಬಿಸಿದ್ದಾರೆ.

    ರೌಡಿ ನಾಗನ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸ್ರು ಕೋಟಿ ಕೋಟಿ ಹಣ ಜಪ್ತಿ ಮಾಡಿದ್ರು. ಪೊಲೀಸರು ನಾಗನನ್ನು ಪತ್ತೆ ಮಾಡುವ ಮುನ್ನವೇ ಸಿಡಿ ಬಾಂಬ್ ಸಿಡಿಸಿಬಿಟ್ಟಿದ್ದ. ಇದ್ರಿಂದ ಎಚ್ಚೆತ್ತ ಪೊಲೀಸರು ಈಗ ನಾಗನ ಹುಡುಕಾಟಕ್ಕಾಗಿ ಭಿಕ್ಷುಕರ ವೇಷ ಧರಿಸಿದ್ದಾರೆ.

    ಆದ್ರೆ ಪೊಲೀಸರು ಯಾವ ವೇಷ ಧರಿಸಿದ್ರೂ ರೌಡಿ ನಾಗ ಮಾತ್ರ ಬಲೆಗೆ ಬೀಳಲೇ ಇಲ್ಲ. ಹೀಗಾಗಿ ಬೇರೆ ದಾರಿಯಿಲ್ಲದೆ ನಾಗನ ಸಂಬಂಧಿಕರ ಮನೆಯಲ್ಲೇ ಠಿಕಾಣಿ ಹೂಡಿದ್ದಾರೆ. ಮತ್ತೊಂದೆಡೆ ಕಾನೂನು ಸಮರ ಸಾರಿರೋ ನಾಗ ನ್ಯಾಯಾಲಯದ ಮೊರೆ ಹೋಗಿದ್ದಾನೆ. ಗುರುವಾರ ನಾಗನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮೇ 4ಕ್ಕೆ ವಿಚಾರಣೆಯನ್ನು ಮುಂದೂಡಿದೆ.