Tag: ಮಾಜಿ ಕ್ರಿಕೆಟಿಗ

  • ಉಪ ಚುನಾವಣೆ ರಣತಂತ್ರ: ದ್ರಾವಿಡ್‍ರನ್ನ ಭೇಟಿಯಾದ ಬಿಜೆಪಿ ನಾಯಕರು

    ಉಪ ಚುನಾವಣೆ ರಣತಂತ್ರ: ದ್ರಾವಿಡ್‍ರನ್ನ ಭೇಟಿಯಾದ ಬಿಜೆಪಿ ನಾಯಕರು

    ಬೆಂಗಳೂರು: ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿದ್ದಾರೆ.

    ಡಾಲರ್ಸ್ ಕಾಲೋನಿಯಲ್ಲಿರುವ ರಾಹುಲ್ ದ್ರಾವಿಡ್ ನಿವಾಸಕ್ಕೆ ಭೇಟಿ ನೀಡಿದ ನಡ್ಡಾ ಅವರಿಗೆ ಕೇಂದ್ರ ಸಚಿವ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅರುಣ್ ಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದರು. ಈ ವೇಳೆ ಬಿಜೆಪಿ ನಾಯಕರು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ರದ್ದು ಮಾಡಿರುವ ಕುರಿತಾದ ಪುಸ್ತಕವನ್ನು ನೀಡಿದ್ದಾರೆ.

    ಭೇಟಿಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸದಾನಂದಗೌಡ ಅವರು, 70 ವರ್ಷದ ನಂತರ ಐತಿಹಾಸಿಕ ನಿರ್ಣಯವನ್ನು ಪ್ರಧಾನಿ ಮೋದಿ ಸರ್ಕಾರ ತೆಗೆದುಕೊಂಡಿದೆ. ದೇಶದ ಐಕ್ಯತೆ ಧಕ್ಕೆಯಾಗಿದ್ದ ನಿಯಮಾವಳಿಗಳನ್ನು ತೆಗೆದುಹಾಕಲಾಗಿದೆ. ಆದರೆ ಇದು ಯಾಕಾಯ್ತು, ಏನಾಯ್ತು ಎನ್ನುವುದು ಸಣ್ಣಪುಟ್ಟ ಕೊಂದಲಗಳಿವೆ. ಈ ನಿರ್ಣಯದ ಕುರಿತು ಜನರಿಗೆ ತಿಳಿಸಬೇಕಿ ಎಂದು ಹೇಳಿದರು.

    ರಾಹುಲ್ ದ್ರಾವಿಡ್ ಪಾಕಿಸ್ತಾನ ಸೇರಿದಂತೆ ದೇಶ, ವಿದೇಶಗಳಲ್ಲಿ ಕ್ರಿಕೆಟ್ ಆಡಿದವರು. ಕಾಶ್ಮೀರದ ಮೈದಾನದಲ್ಲೂ ಕ್ರಿಕೆಟ್ ಆಡಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಕ್ರಿಕೆಟ್ ಮಂಡಳಿಗಳಿವೆ. ಆದರೆ ಕಾಶ್ಮೀರದಲ್ಲಿ ಕ್ರಿಕೆಟ್ ಮಂಡಳಿ ಮಾಡುವುದಕ್ಕೆ ಬಿಡಲಿಲ್ಲ ಅಂತ ದ್ರಾವಿಡ್ ತಿಳಿಸಿದ್ದಾರೆ ಎಂದರು.

    ದೇಶದಲ್ಲಿ ಪ್ರಮುಖರನ್ನು ಭೇಟಿ ಮಾಡಲಾಗುತ್ತಿದೆ. ಮೊನ್ನೆಯಷ್ಟೇ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ, ಬನ್ನಂಜೆ ಗೋವಿಂದ ಆಚಾರ್ಯ ಸೇರಿದಂತೆ ಹಲವರನ್ನು ಭೇಟಿಯಾಗಿದ್ದೇವೆ. ದೇಶದ ಏಕತೆಗೆ ಒತ್ತು ನೀಡಲು ಹಾಗೂ ಒಂದು ದೇಶ ಒಂದು ಸಂವಿಧಾನ ಇರಬೇಕು ಎನ್ನವುದು ಉದ್ದೇಶದಿಂದ ಶ್ರಮಿಸುತ್ತಿದ್ದೇವೆ ಎಂದು ಸದಾನಂದ ಗೌಡ ತಿಳಿಸಿದರು.

    ಪ್ರವಾಹ ಪರಿಹಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ರಾಜ್ಯಕ್ಕೆ ಅಲೌಟ್ ಆದ ಹಣ ಡಿಸೆಂಬರ್ ನಲ್ಲಿ ಬರಬೇಕಿತ್ತು. ಆದರೆ ಈಗಾಗಲೇ 380 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಕರ್ನಾಟಕ ಮಾತ್ರವಲ್ಲ ಕೇರಳ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಭೀಕರ ಪ್ರವಾಹ ಉಂಟಾಗಿದೆ. ಅಲ್ಲಿಗೂ ಕೂಡ ಪರಿಹಾರ ನೀಡಬೇಕಿದೆ ಎಂದು ಹೇಳಿದರು.

    ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ತೆರವು ಆದ ಸ್ಥಾನಕ್ಕೆ ಆರು ತಿಂಗಳೊಳಗೆ ಚುನಾವಣೆ ಆಗಬೇಕು. ಯಾವತ್ತೂ ಸರ್ಕಾರ ರಚನೆ ಮಾಡಿದ್ವೋ, ಅಂದಿನಿಂದಲೇ ಉಪ ಚುನಾವಣೆಗೆ ಸಿದ್ಧರಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 25+1 ಗೆದ್ದಂತೆ, 15ಕ್ಕೆ 15 ಸ್ಥಾನಗಳನ್ನೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

  • ಶ್ರೀಲಂಕಾದ ಮಾಜಿ ಕ್ರಿಕೆಟಿಗ ಅರ್ಜುನ್ ರಣತುಂಗಾ ಬಂಧನ!

    ಶ್ರೀಲಂಕಾದ ಮಾಜಿ ಕ್ರಿಕೆಟಿಗ ಅರ್ಜುನ್ ರಣತುಂಗಾ ಬಂಧನ!

    ಕೊಲೊಂಬೊ: ಶೂಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಪೆಟ್ರೋಲಿಯಂ ಸಚಿವ ಅರ್ಜುನ್ ರಣತುಂಗಾರನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

    ಗುಂಡು ಹಾರಿಸಿ ವ್ಯಕ್ತಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜುನ್ ರಣತುಂಗಾರನ್ನು ಕೊಲೊಂಬೊ ಅಪರಾಧ ವಿಭಾಗದ ಮುಖ್ಯಸ್ಥರು ಬಂಧಿಸಿದ್ದು, ಶೀಘ್ರವೇ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

    ಏನಿದು ಪ್ರಕರಣ?
    ಮಂತ್ರಿ ಸ್ಥಾನ ಕಳೆದುಕೊಂಡ ನಂತರವೂ ಅರ್ಜುನ್ ರಣತುಂಗಾ ಭಾನುವಾರ ತಮ್ಮ ಕಚೇರಿಗೆ ಪ್ರವೇಶಿಸಲು ಯತ್ನಿಸಿದ್ದರು. ಇದನ್ನು ತಡೆಯಲು ಮುಂದಾದ ರಾಜಪಕ್ಸೆ ಬೆಂಬಲಿಗರ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತ್ತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ, ರಣತುಂಗಾ ಅವರ ಗನ್ ಮ್ಯಾನ್ ಗಳು ಏಕಾಏಕಿ ಫೈರಿಂಗ್ ನಡೆಸಿದ್ದರು. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದ.

    ಕಳೆದ ಶನಿವಾರ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಸರ್ಕಾರ ಹಾಗೂ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿ, ಮಹಿಂದಾ ರಾಜಪಕ್ಸೆಯವರನ್ನು ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದರು. ನೂತನ ಪ್ರಧಾನಿ ಆಯ್ಕೆಯಾದ ಬೆನ್ನಲ್ಲೇ ಶ್ರೀಲಂಕಾದಲ್ಲಿ ರಾಜಕೀಯ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಅಲ್ಲದೇ ಹಳೆಯ ಸಚಿವರ ಪ್ರವೇಶಕ್ಕೆ ರಾಜಪಕ್ಸೆ ಬೆಂಬಲಿಗರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ಇಂಡಿಯಾ’ಳಿಗೆ `ಇಂಡಿಯಾ’ದಿಂದ ಹುಟ್ಟುಹಬ್ಬದ ಶುಭಕೋರಿದ ಮೋದಿ!

    `ಇಂಡಿಯಾ’ಳಿಗೆ `ಇಂಡಿಯಾ’ದಿಂದ ಹುಟ್ಟುಹಬ್ಬದ ಶುಭಕೋರಿದ ಮೋದಿ!

    ನವದೆಹಲಿ: ದಕ್ಷಿಣ ಆಫ್ರಿಕಾದ ಖ್ಯಾತ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಅವರ ಮಗಳು ಇಂಡಿಯಾಳ ದ್ವಿತೀಯ ವರ್ಷದ ಹುಟ್ಟುಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

    ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್, ಮುಂಬೈ ಇಂಡಿಯನ್ಸ್ ಕೋಚಿಂಗ್ ಸಿಬ್ಬಂದಿಯ ಅವಿಭಾಜ್ಯ ಅಂಗವಾಗಿರೋ ರೋಡ್ಸ್ ಭಾರತದ ಆಚರಣೆ, ಸಂಸ್ಕೃತಿಗೆ ಮನಸೋತು ತಮ್ಮ ಮಗಳಿಗೆ ಇಂಡಿಯಾ ಅಂತಾ ಹೆಸರಿಟ್ಟಿದ್ದರು.

    ಭಾನುವಾರದಂದು ಮಗಳ ಹುಟ್ಟುಹಬ್ಬಕ್ಕೆ ಟ್ವಿಟ್ಟರ್‍ನಲ್ಲಿ ವಿಶ್ ಮಾಡಿದ ರೋಡ್ಸ್ ಮಗಳ ಜೊತೆಗಿನ ಒಂದು ಫೋಟೋ ಹಾಕಿ, `ಹ್ಯಾಪಿ ಬರ್ತ್‍ಡೇ ಬೇಬಿ ಇಂಡಿಯಾ’ ಎಂದು ಟ್ವೀಟ್ ಮಾಡಿದ್ದರು.

    ಆಶ್ಚರ್ಯವೆಂಬಂತೆ ಪ್ರಧಾನಿ ಮೋದಿ ಕೂಡ ಈ ಪೋಸ್ಟ್‍ಗೆ ಪ್ರತಿಕ್ರಿಯಿಸಿ, `ಇಂಡಿಯಾಳಿಗೆ ಇಂಡಿಯಾದಿಂದ ಹುಟ್ಟುಹಬ್ಬದ ಶುಭಾಶಯ’ ಅಂತಾ ಶುಭ ಕೋರಿದ್ದಾರೆ. ಪ್ರಧಾನಿ ಮೋದಿಯ ಟ್ವೀಟ್‍ಗೆ ಪ್ರತಿಕ್ರಿಯಿಸಿದ ರೋಡ್ಸ್, ಧನ್ಯವಾದಗಳು ಮೋದಿ ಜೀ. ಭಾರತದಲ್ಲಿ ಹುಟ್ಟಿದ ಇಂಡಿಯಾ ನಿಜಕ್ಕೂ ಧನ್ಯಳು ಎಂದಿದ್ದಾರೆ.

    ರಾಷ್ಟ್ರೀಯ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿದ ಸಂದರ್ಭದಲ್ಲಿ ರೋಡ್ಸ್, ಭಾರತದಲ್ಲಿನ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಸಂಪ್ರದಾಯಕ್ಕೆ ನಾನು ಮಸೋತಿದ್ದೇನೆ. ಭಾರತ ಒಂದು ಆಧ್ಯಾತ್ಮಿಕ ದೇಶ. ಇದೇ ವೇಳೆ ಮುಂದಾಲೋಚನೆಯುಳ್ಳ ರಾಷ್ಟ್ರವೂ ಹೌದು. ನಾವು ಪ್ರತಿದಿನ ಈ ದೇಶದ ಬಗ್ಗೆ ಹೊಸದನ್ನು ತಿಳಿದುಕೊಳ್ಳುತ್ತೇವೆ. ಮನುಷ್ಯರಾಗಿ ನಾವು ನಮ್ಮನ್ನು ಅರಿಯುವದನ್ನು ಇಷ್ಟಪಡುತ್ತೇವೆ. ಅದೇ ರೀತಿ ಮಗಳು ಇಂಡಿಯಾ ಕೂಡ ತನ್ನನ್ನು ತಾನು ಅರಿಯುತ್ತಾಳೆ ಎಂದು ಭಾವಿಸಿದ್ದೇನೆ ಎಂದು ಹೇಳಿದ್ದರು.

    ಇಂಡಿಯಾ 2015ರ ಏಪ್ರಿಲ್ 23ರಂದು ಮುಂಬೈನ ಸಾಂತಕ್ರೂಸ್‍ನ ಸೂರ್ಯ ಮದರ್ ಅಂಡ್ ಚೈಲ್ಡ್ ಕೇರ್ ಆಸ್ಪತ್ರೆಯಲ್ಲಿ ಜನಿಸಿದ್ದಳು. ಭಾರದಲ್ಲಿ ಜನಿಸಿದ್ದರಿಂದ ಆಕೆಗೆ ಇಂಡಿಯಾ ಅಂತಾ ನಾಮಕರಣ ಮಾಡಲಾಗಿತ್ತು. 2016ರಲ್ಲಿ ಜಾಂಟಿ ರೋಡ್ಸ್ ತಮ್ಮ ಮಗಳಿಗಾಗಿ ಸಾಂತಕ್ರೂಸ್‍ನಲ್ಲಿರೋ ಪೇಜಾವರ ಮಠಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದ್ದರು.