Tag: ಮಾಜಿ ಪ್ರಧಾನಿ

  • ಮಾಜಿ ಪ್ರಧಾನಿ ಆರೋಗ್ಯ ಮತ್ತಷ್ಟು ಗಂಭೀರ- ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಬುಲಾವ್

    ಮಾಜಿ ಪ್ರಧಾನಿ ಆರೋಗ್ಯ ಮತ್ತಷ್ಟು ಗಂಭೀರ- ಆಸ್ಪತ್ರೆಗೆ ಬರುವಂತೆ ಸಂಬಂಧಿಕರಿಗೆ ಬುಲಾವ್

    ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಇಂದು ಮತ್ತಷ್ಟು ಗಂಭೀರವಾಗಿದ್ದು, ಸಂಬಂಧಿಕರು ಬುರುವಂತೆ ಆಸ್ಪತ್ರೆಯಿಂದ ಬುಲಾವ್ ನೀಡಲಾಗಿದೆ.

    ಈಗಾಗಲೇ ಆಸ್ಪತ್ರೆಗೆ ಎಲ್ ಕೆ ಅಡ್ವಾಣಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಮಿತ್ ಶಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿ ವಾಜಪೇಯಿ ಕುಟುಂಬಸ್ಥರು ಈಗಾಗಲೇ ಜಮಾಯಿಸಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಆಸ್ಪತ್ರೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗಿದೆ. ಆರೋಗ್ಯ ಸಚಿವ ಜೆ.ಪಿ ನಡ್ವಾ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ.

    ಇಂದು ದೇಶಾದ್ಯಂತ ಬಿಜೆಪಿಯ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಪ್ರಧಾನಿ ಕಾರ್ಯಾಲಯ ಪ್ರಕಟಣೆ ಹೊರಡಿಸಿದೆ.

    ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದ್ದು, ಆಮ್ಲಜನಕದ ಬೆಂಬಲ ನೀಡಲಾಗುತ್ತಿದೆ ಎಂದು ಬುಧವಾರ ಏಮ್ಸ್ ಆಸ್ಪತ್ರೆ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕುಡಿಯಲು ನೀರು ಕೊಟ್ಟಿದ್ದಾರೆ ಎಂದು ಸಂಭ್ರಮಿಸಲು ಸಾಧ್ಯವಿಲ್ಲ: ಎಚ್‍ಡಿಡಿ

    ಕುಡಿಯಲು ನೀರು ಕೊಟ್ಟಿದ್ದಾರೆ ಎಂದು ಸಂಭ್ರಮಿಸಲು ಸಾಧ್ಯವಿಲ್ಲ: ಎಚ್‍ಡಿಡಿ

    ನವದೆಹಲಿ: ಕುಡಿಯಲು ನೀರು ಕೊಟ್ಟಿದ್ದಾರೆ ಎಂದು ಸಂಭ್ರಮಿಸಲು ಸಾಧ್ಯವಿಲ್ಲ, ನಮ್ಮ ಪಾಲಿನ ನೀರಿನ ಮೇಲೆ ನಮಗೆ ಸಂಪೂರ್ಣವಾದ ಹಕ್ಕು ಇದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದಾರೆ.

    ಮಹದಾಯಿ ನ್ಯಾಯಾಧಿಕರಣದ ಐತೀರ್ಪು ಕುರಿತು ಮಾತನಾಡಿದ ಅವರು, ತೀರ್ಪನ್ನು ನಾನು ಅಧ್ಯಯನ ಮಾಡಲು ಸಾಧ್ಯವಾಗಿಲ್ಲ. ಬೆಂಗಳೂರಿಗೆ ತೆರಳಿದ ಮೇಲೆ ಸಂಕೀಪ್ತವಾಗಿ ಅಧ್ಯಯನ ಮಾಡುತ್ತೇನೆ. ಈಗ ಸದ್ಯ ಕುಡಿಯುವ ನೀರು ಕೊಟ್ಟಿದ್ದಾರೆಂದು ಸಂಭ್ರಮಿಸಲು ಸಾಧ್ಯವಿಲ್ಲ, ನಮ್ಮ ಪಾಲಿನ ನೀರಿನ ಮೇಲೆ ಸಂಪೂರ್ಣವಾಗಿ ಹಕ್ಕು ಚಲಾಯಿಸುವ ಅಧಿಕಾರವನ್ನು ನಾವು ಹೊಂದಿದ್ದೇವೆ ಎಂದು ತಿಳಿಸಿದರು.

    ಅಲ್ಲದೇ ಗೋವಾ ಸುಪ್ರೀಂ ಕೋರ್ಟ್ ಗೆ ಹೋಗುವ ಸಾಧ್ಯತೆ ಇದ್ದು, ನಾವು ಕೂಡ ಮುಂದಿನ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಈ ಮೊದಲು ಕಾವೇರಿ ವಿಷಯದಲ್ಲೂ ತೀರ್ಪನ್ನು ಓದಿ ಹಿರಿಯ ವಕೀಲ ನಾರೀಮನ್ ಜೊತೆ ಚರ್ಚಿಸಿದ್ದೆ. ತೀರ್ಪಿನ ಅಧ್ಯಯನ ಮಾಡಿದ ನಂತರ ಮುಂದೆ ಯಾವ ಕ್ರಮ ಕೈಗೊಳ್ಳಬೇಕೆಂದು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

    ಈ ವೇಳೆ ಏರ್ ಶೋ ಸ್ಥಳಾಂತರ ಕುರಿತು ಪ್ರತಿಕ್ರಿಯಿಸಿ, ಬೆಂಗಳೂರಿನಲ್ಲಿ ಏರ್ ಶೋ ಚೆನ್ನಾಗಿ ನಡೆಯುತ್ತಿದ್ದು, ಏರ್ ಶೋ ವಿಶ್ವ ಮಟ್ಟದಲ್ಲಿಯೂ ಹೆಸರುಗಳಿಸಿದೆ. ಕೇಂದ್ರ ಸರ್ಕಾರ ಸರಿಯಾದ ಕಾರಣವನ್ನು ನೀಡದೆ ಸ್ಥಳ ಬದಲಾವಣೆ ಮಾಡುವುದು ಸರಿಯಲ್ಲ. ಈ ಕುರಿತು ಖುದ್ದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆಯುತ್ತೇನೆ. ಅಲ್ಲದೇ ಕೇಂದ್ರದಲ್ಲಿ ಅನಂತಕುಮಾರ್ ಅವರಂಥ ಹಿರಿಯ ಸಚಿವರಿದ್ದರೂ ಹೀಗಾಗುತ್ತಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದನಿಸುತ್ತಿದೆ. ಬೆಂಗಳೂರಿನಲ್ಲಿರುವ ಸೌಲಭ್ಯ ಬೇರೆಕಡೆ ಸಿಗಲು ಸಾಧ್ಯವಿಲ್ಲ. ಹೀಗಾಗಿ ಅಷ್ಟು ಸುಲಭವಾಗಿ ಏರ್ ಶೋ ಸ್ಥಳಾಂತರ ಮಾಡಲು ಸಾಧ್ಯವಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=jzou-8fgwlc

  • ಅವಕಾಶ ಸಿಕ್ಕರೆ ಖಂಡಿತ ಎಚ್‍ಡಿಡಿ ಆಸೆ ನೆರವೇರಿಸುತ್ತೇನೆ- ಪ್ರಜ್ವಲ್ ರೇವಣ್ಣ

    ಅವಕಾಶ ಸಿಕ್ಕರೆ ಖಂಡಿತ ಎಚ್‍ಡಿಡಿ ಆಸೆ ನೆರವೇರಿಸುತ್ತೇನೆ- ಪ್ರಜ್ವಲ್ ರೇವಣ್ಣ

    ಹಾಸನ: ಲೋಕಸಭೆಗೆ ಸ್ಪರ್ಧಿಸುವ ಕುರಿತು ಎಚ್‍ಡಿಡಿ ಅವರು ನನ್ನ ಬಳಿ ಏನೂ ಹೇಳಿಲ್ಲ. ದೇವರ ಪೂಜೆ ಮಾಡಿಸಿ ಹೊರ ಬರುತ್ತಿದ್ದಂತೆಯೇ ಒಳ್ಳೆಯ ಸುದ್ದಿ ಕೇಳಿದ್ದೇನೆ. ಒಂದು ವೇಳೆ ಅಂತಹ ಸಂದರ್ಭ ಬಂದ್ರೆ ಖಂಡಿತವಾಗಿಯೂ ಅವರ ಆಸೆ ನೆರವೇರಿಸುತ್ತೇನೆ ಅಂತ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

    ನಗರದ ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರ ಎನ್ನುವುದರ ಕುರಿತು ಇದುವರೆಗೂ ಯಾವುದೇ ಚರ್ಚೆ ಆಗಿಲ್ಲ. ಯಾವ ಕ್ಷೇತ್ರವೇ ಆಗಲಿ. ದೇವೇಗೌಡ ಅವರು ಏನು ಆಶೀರ್ವಾದ ಮಾಡುತ್ತಾರೆಯೋ ಅದನ್ನು ಸ್ವೀಕರಿಸಲು ನಾನು ತಯಾರಾಗಿದ್ದೇನೆ. ಅವರು ಏನೇ ಅವಕಾಶ ಕೊಟ್ಟರೂ ಈ ರಾಜ್ಯದ ಜನತೆಗೋಸ್ಕರ ದುಡಿಯುತ್ತೇನೆ ಅಂದ್ರು.

    ಪುರಸಭೆ ಚುನಾವಣೆಯಲ್ಲಿ ಅತೀ ಹೆಚ್ಚಿನ ಸೀಟುಗಳನ್ನು ಪಡೆದು ಬಹುತ ಸಾಧಿಸಬೇಕೆಂಬುದು ನಮ್ಮ ಆಶಯವಾಗಿದೆ. ಪ್ರತಿಯೊಂದು ಚುನಾವಣೆಯೂ ನಮಗೆ ಅತಿ ಮುಖ್ಯವಾದುದಾಗಿದೆ. ವಿಧಾಸನಭೆ, ಪುರಸಭೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಥವಾ ಸಂಸದರ ಚುನಾವಣೆಯೇ ಇರಬಹುದು. ಹೀಗೆ ಪ್ರತಿಯೊಂದು ಚುನಾವಣೆಯೂ ಬಹುಮುಖ್ಯವಾಗಿದ್ದು, ಇದಕ್ಕಾಗಿ ಶ್ರಮ ವಹಿಸುತ್ತೇನೆ. ಇದನ್ನೂ ಓದಿ: ಲೋಕಸಭಾ ಚುನಾವಣಾ ಸಮರ – ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ನಿಶ್ಚಿತ

    ಇದೇ ವೇಳೆ ಮಂಡ್ಯದಲ್ಲಿ ಜನರು ಪ್ರಜ್ವಲ್ ರೇವಣ್ಣ ಅವರು ಇಲ್ಲೇ ಸ್ಪರ್ಧಿಸಬೇಕೆಂದು ಕೇಳಿಕೊಳ್ಳುವುದಕ್ಕೆ ಪ್ರತಿಕ್ರಿಯಿಸಿದ ಅವರು, ಮಂಡ್ಯ ಜನತೆಗೆ ಮೊದಲು ನಾನು ಧನ್ಯವಾದ ತಿಳಿಸುತ್ತೇನೆ. ಯಾಕಂದ್ರೆ ನಾನು ಆ ಜಿಲ್ಲೆಗೆ ಅಥವಾ ಕ್ಷೇತ್ರಕ್ಕೆ ಸಂಬಂಧಪಡದೇ ಇದ್ದರೂ ಕೂಡ ಅಲ್ಲಿನ ಜನತೆ 7 ಸೀಟು ಕೊಟ್ಟು ಇಂದು ನಮಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಜಿಲ್ಲೆಯ ಜನತೆಗೆ ನಾನು ಯಾವತ್ತೂ ಚಿರಋಣಿಯಾಗಿರುತ್ತೇನೆ. ಒಂದು ವೇಳೆ ಅದೇ ಕ್ಷೇತ್ರದಲ್ಲಿ ಅವಕಾಶ ಸಿಕ್ಕರೇ ಅದು ನನ್ನ ಪುಣ್ಯ, ಖಂಡಿತವಾಗಿಯೂ ಅದನ್ನು ನಾನು ಸ್ವೀಕರಿಸುತ್ತೇನೆ ಅಂತ ಹೇಳಿದ್ರು.

    ಒಟ್ಟಿನಲ್ಲಿ ದೊಡ್ಡವರ ನಿರ್ಧಾರಕ್ಕೆ ನಾನು, ನಮ್ಮ ನಾಯಕರು ಹಾಗೂ ಕಾರ್ಯಕರ್ತರೆಲ್ಲರೂ ಬದ್ಧರಾಗಿರುತ್ತೇವೆ ಅಂತ ಅವರು ತಿಳಿಸಿದ್ರು. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

    https://www.youtube.com/watch?v=PPxd3hiJGY4

  • ಲೋಕಸಭಾ ಚುನಾವಣೆ ಸಮರ – ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ನಿಶ್ಚಿತ

    ಲೋಕಸಭಾ ಚುನಾವಣೆ ಸಮರ – ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ನಿಶ್ಚಿತ

    ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದೋ ನಿಶ್ಚಿತವಾಗಿದೆ.

    ಹರದನಹಳ್ಳಿಯಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಎಚ್‍ಡಿಡಿ ಮಾತನಾಡಿದ್ದಾರೆ. ಹಾಸನದಿಂದ ಮಾಜಿ ಪ್ರಧಾನಿ ಸ್ಪರ್ಧೆ ಮಾಡ್ತಾರೆ ಅಂತ ಹೇಳಲಾಗುತ್ತಿತ್ತು. ಆದ್ರೆ ಇದೀಗ ಮಾಜಿ ಪ್ರಧಾನಿಯವರು ಪ್ರಜ್ವಲ್ ರೇವಣ್ಣ ಅವರು ಕಣಕ್ಕಿಳಿಯುವ ಕುರಿತು ಸುಳಿವು ನೀಡಿದ್ದಾರೆ.

    ಕುಮಾರಸ್ವಾಮಿ ಈಗಾಗಲೇ ರಾಷ್ಟ್ರ ರಾಜಕಾರಣಕ್ಕೆ ಏಕೆ ಹೋಗ್ತಾರೆ..? ಇನ್ನೂ 10 ವರ್ಷ ಇಲ್ಲೇ ಇರ್ತಾರೆ ಮುಂದೆ ನೋಡೋಣ ಅಂತಾ ದೇವೇಗೌಡ್ರು ಹೇಳಿಕೆ ನೀಡಿದ್ದು, ಪ್ರಜ್ವಲ್ ರೇವಣ್ಣ ಲೋಕಸಭೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಆದ್ರೆ ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನೋದನ್ನ ಮುಂದೆ ನಿರ್ಧಾರ ಮಾಡೋದಾಗಿ ತಿಳಿಸಿದ ಅವರು, ಸಮ್ಮಿಶ್ರ ಸರ್ಕಾರ ಚೆನ್ನಾಗಿಯೇ ನಡೀತಾ ಇದೆ. ಯಾವುದೇ ಸಮಸ್ಯೆಗಳಿಲ್ಲ. ಅಲ್ಲದೇ ಯಾವುದೇ ಗೊಂದಲಗಳಿಲ್ಲ ಅಂತ ಹೇಳಿದ್ದಾರೆ.

    ಇಂದು ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಎಚ್‍ಡಿಡಿ ಕುಟುಂಬದ ಮನೆ ದೇವರು ಹೊಳೆನರಸೀಪುರದ ಹರದನಹಳ್ಳಿ ಈಶ್ವರ ದೇವಾಲಯ, ಅವರ ತಂದೆಯ ಮೆಚ್ಚಿನ ದೈವ ಮಾವಿನ ಕೆರೆ ಬೆಟ್ಟದ ರಂಗನಾಥಸ್ವಾಮಿ ಸೇರಿದಂತೆ ಅವರ ಕುಲದೈವದ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಂತರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಪೂಜೆಗೆ ಸಿಎಂ ಕುಮಾರಸ್ವಾಮಿ ತೆರಳಲಿದ್ದಾರೆ. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಕೂಡ ಭೇಟಿ ನೀಡಲಿದ್ದಾರೆ. ಕುಮಾರಸ್ವಾಮಿ ಸ್ವಾಮಿ ಜೊತೆ ತಂದೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹಾಗೂ ಸಹೋದರ ಸಚಿವ ಹೆಚ್ ಡಿ ರೇವಣ್ಣ ಪಾಲ್ಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ವಾಜಪೇಯಿ ಆರೋಗ್ಯದಲ್ಲಿ ಸ್ಥಿರ – ಏಮ್ಸ್ ಆಸ್ಪತ್ರೆಯಿಂದ ಸ್ಪಷ್ಟನೆ

    ವಾಜಪೇಯಿ ಆರೋಗ್ಯದಲ್ಲಿ ಸ್ಥಿರ – ಏಮ್ಸ್ ಆಸ್ಪತ್ರೆಯಿಂದ ಸ್ಪಷ್ಟನೆ

    ನವದೆಹಲಿ: ಇಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿರವಾಗಿದೆ ಅಂತ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

    ಶನಿವಾರ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ವಾಜಪೇಯಿಗೆ ಡಯಾಲಿಸಿಸ್ ಮಾಡಲಾಗಿದ್ದು ಮೂತ್ರಪಿಂಡದ ಸೋಂಕು ನಿಯಂತ್ರಣಕ್ಕೆ ಬಂದಿದ್ದು ಸಹಜವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

    ಕಳೆದ ಜೂನ್ 11ರಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಏಮ್ಸ್ ನಿರ್ದೇಶಕರಾದ ಡಾಕ್ಟರ್ ರಂದೀಪ್ ಗುಲೆರಿಯಾ ಮಾರ್ಗದರ್ಶನದಲ್ಲಿ ನುರಿತ ವೈದ್ಯರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ಚಿಕಿತ್ಸೆ ನೀಡುತ್ತಿದ್ದರು. ಏಮ್ಸ್ ಆಸ್ಪತ್ರೆ ಮಂಗಳವಾರ(ಜೂನ್12)ರಂದು ಬಿಡುಗಡೆ ಮಾಡಿದ ಮೆಡಿಕಲ್ ಬುಲೆಟಿನ್ ನಲ್ಲಿ, ವಾಜಪೇಯಿಯವರು ಮೂತ್ರನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಶೀಘ್ರವೇ ಗುಣಮುಖರಾಗಲಿದ್ದಾರೆ. ಸೋಂಕು ಗುಣಮುಕ್ತವಾಗುವವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಯಲಿದೆ ಎಂದು ತಿಳಿಸಿತ್ತು.

    93 ವರ್ಷದ ವಾಜಪೇಯಿ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಕೆಲ ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ವಾಜಪೇಯಿ ಅವರು 1991, 1996, 1998, 1999 ಹಾಗೂ 2004ರಲ್ಲಿ ಲಕ್ನೋ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಆಗಿದ್ದರು. 1924ರಲ್ಲಿ ಜನಿಸಿದ ವಾಜಪೇಯಿ ಅವರು 1942 `ಭಾರತ ಬಿಟ್ಟು ತೊಲಗಿ ಚಳುವಳಿ’ಯಲ್ಲಿ ರಾಜಕಾರಣಕ್ಕೆ ಪ್ರವೇಶಿಸಿದ್ದರು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಹುಟ್ಟು ಹಬ್ಬದಂದೇ ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ಪ್ರಜ್ವಲ್ ರೇವಣ್ಣ

    ಹುಟ್ಟು ಹಬ್ಬದಂದೇ ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ಪ್ರಜ್ವಲ್ ರೇವಣ್ಣ

    ಹಾಸನ: 28 ನೇ ವರ್ಷದ ಹುಟ್ಟುಹಬ್ಬ ಅಚರಿಸಿಕೊಳ್ಳುತ್ತಿರುವ ಜೆಡಿಎಸ್ ಪಕ್ಷದ ಯುವ ಮುಖಂಡ ಹಾಗೂ ಸಚಿವ ಎಚ್‍ಡಿ ರೇವಣ್ಣ ಪುತ್ರ ತಮ್ಮ ಜನ್ಮದಿನದ ವಿಶೇಷವಾಗಿ ನೇತ್ರದಾನ ಮಾಡಿ ಪತ್ರಕ್ಕೆ ಸಹಿ ಹಾಕಿದ್ದಾರೆ.

    ಜಿಲ್ಲೆ ಹೊಳೆನರಸೀಪುರದಲ್ಲಿ ತಮ್ಮ ನಿವಾಸಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡದ ಪ್ರಜ್ವಲ್ ರೇವಣ್ಣ, ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಸಂತಸ ಹಂಚಿಕೊಂಡರು. ಇದೇ ವಿಶೇಷವಾಗಿ ತಮ್ಮ ನೇತ್ರದಾನ ಮಾಡುವ ಪತ್ರಕ್ಕೆ ಸಹಿ ಹಾಕಿದ ಪ್ರಜ್ವಲ್ ಹಲವರಿಗೆ ಆದರ್ಶವಾದರು. ಕಾರ್ಯಕ್ರಮದ ವೇಳೆ ಪುತ್ರನಿಗೆ ಸಚಿವ ರೇವಣ್ಣ ಹಾಗು ಭವಾನಿ ರೇವಣ್ಣ ಶುಭಹಾರೈಸಿದರು.

    ಪ್ರಜ್ವಲ್ ನೇತ್ರದಾನಕ್ಕೆ ಸಹಿ ಹಾಕಿದ ಹಿನ್ನೆಲೆಯಲ್ಲಿ ನೂರಾರು ಅಭಿಮಾನಿಗಳು ಕೂಡ ನೇತ್ರದಾನ ಪತ್ರಕ್ಕೆ ಸಹಿ ಹಾಕಿದರು. ಬಳಿಕ ನಡೆದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪ್ರಜ್ವಲ್ ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ಕೇಕ್ ಕತ್ತರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನಿಗೆ ಶುಭಹಾರೈಸಿದರು.

    ಈ ವೇಳೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಜನರ ಮಧ್ಯೆ ಇರಲು ನನಗೆ ತುಂಬಾ ಸಂತೋಷವಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಶುಭಹಾರೈಕೆ ಮಾಡುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಮ್ಮ ರಾಜಕೀಯ ಜೀವನ ಕುರಿತು ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೆನೆ. ಪಕ್ಷ ಸಂಘಟನೆಗಾಗಿ ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ. ಪಕ್ಷಕ್ಕಾಗಿ ದುಡಿದಿರುವ ಕಾರ್ಯಕರ್ತರ ಕುಂದು ಕೊರತೆ ವಿಚಾರಿಸುವ ಒಂದು ಅಂಶ ನನ್ನ ಮನಸ್ಸಿನಲ್ಲಿದೆ ಎಂದು ಹೇಳಿದ್ದರು.

    ಇದೇ ವೇಳೆ ಲೋಕಸಭೆಗೆ ಸ್ಪರ್ಧೆ ಕುರಿತು ಮಾತನಾಡಿ, ಈ ಕುರಿತು ಇದುವರೆಗೂ ನಾನು ಯಾರೊಂದಿಗೂ ಮಾತನಾಡಿಲ್ಲ. ಈ ವಿಚಾರದಲ್ಲಿ ಚರ್ಚಿಸಲು ದೇವೇಗೌಡರೊಂದಿಗೂ ಚರ್ಚಿಸುವ ಅವಕಾಶವೂ ಸಿಕ್ಕಿಲ್ಲ. ಯಾವುದೇ ಮಾತುಕತೆ ನಡೆದಿಲ್ಲ. ಮೊದಲು ಪಕ್ಷ ಸಂಘಟನೆಗೆ ನಾನು ತೊಡಗಿಸಿಕೊಂಡಿದ್ದೇನೆ. ನಾನು ಚುನಾವಣೆಗೆ ಹೋಗುವ ಮುನ್ನ ಪಕ್ಷದಲ್ಲಿ ಕೆಳಮಟ್ಟದ ಸಂಘಟನೆ ಅವಶ್ಯಕತೆ ಇದೆ. ಸದ್ಯ ನಾನು ಪಕ್ಷ ಸಂಘಟನೆ ಕುರಿತು ಗಮನಹರಿಸುತ್ತೇನೆ. ಚುನಾವಣೆ ಸ್ಪರ್ಧೆಯ ವಿಚಾರ ದೊಡ್ಡವರಿಗೆ ಬಿಟ್ಟಿದ್ದು. ನನ್ನ ಅವರು ಯಾವುದಕ್ಕೆ ಬಳಸಿಕೊಳ್ಳುತ್ತಾರೆ ಅದಕ್ಕೆ ನಾನು ಸಿದ್ಧವಾಗಿರುತ್ತೇನೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಲೋಕಸಭೆಗೆ ಸ್ಪರ್ಧೆ, ಮದ್ವೆ ಬಗ್ಗೆ ಎಚ್‍ಡಿಡಿ ನಿರ್ಧಾರವೇ ಅಂತಿಮ- ಪ್ರಜ್ವಲ್ ರೇವಣ್ಣ

    ಲೋಕಸಭೆಗೆ ಸ್ಪರ್ಧೆ, ಮದ್ವೆ ಬಗ್ಗೆ ಎಚ್‍ಡಿಡಿ ನಿರ್ಧಾರವೇ ಅಂತಿಮ- ಪ್ರಜ್ವಲ್ ರೇವಣ್ಣ

    – 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದೇವೇಗೌಡರ ಮೊಮ್ಮಗ

    ಹಾಸನ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಇಂದು 28 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಜನರ ಮಧ್ಯೆ ಇರಲು ನನಗೆ ತುಂಬಾ ಸಂತೋಷ ವಾಗುತ್ತದೆ. ನನ್ನ ಹುಟ್ಟುಹಬ್ಬಕ್ಕೆ ಶುಭಹಾರೈಕೆ ಮಾಡುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿಕೊಂಡ ಪ್ರಜ್ವಲ್, ತಮ್ಮ ರಾಜಕೀಯ ಜೀವನ ಕುರಿತು ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧವಾಗಿರುತ್ತೆನೆ ಎಂದು ಹೇಳಿದ್ದಾರೆ.

    ಹಾಸನದ ಹೊಳೇನರಸೀಪುರದಲ್ಲಿಂದು ಮಾತನಾಡಿದ ಅವರು, ಪಕ್ಷ ಸಂಘಟನೆಗಾಗಿ ಈ ಬರ್ತ್ ಡೇಯಿಂದ ಹೊಸ ರೆಸ್ಯೊಲ್ಯೂಷನ್ ಮಾಡಿಕೊಂಡಿದ್ದೇನೆ. ಪಕ್ಷಕ್ಕಾಗಿ ದುಡಿದಿರುವ ಕಾರ್ಯಕರ್ತರ ಕುಂದು ಕೊರತೆ ವಿಚಾರಿಸುವ ಒಂದು ಅಂಶ ನನ್ನ ಮನಸ್ಸಿನಲ್ಲಿದೆ ಎಂದು ಹೇಳಿಕೊಂಡರು.

    ಇದೇ ವೇಳೆ ಲೋಕಸಭೆಗೆ ಸ್ಪರ್ಧೆ ಕುರಿತು ಮಾತನಾಡಿ, ಈ ಕುರಿತು ಇದುವರೆಗೂ ನಾನು ಯಾರೊಂದಿಗೂ ಮಾತನಾಡಿಲ್ಲ. ಈ ವಿಚಾರದಲ್ಲಿ ಚರ್ಚಿಸಲು ದೇವೇಗೌಡರೊಂದಿಗೂ ಚರ್ಚಿಸುವ ಅವಕಾಶವೂ ಸಿಕ್ಕಿಲ್ಲ. ಯಾವುದೇ ಮಾತುಕತೆ ನಡೆದಿಲ್ಲ. ಮೊದಲು ಪಕ್ಷ ಸಂಘಟನೆಗೆ ನಾನು ತೊಡಗಿಸಿಕೊಂಡಿದ್ದೇನೆ. ನಾನು ಚುನಾವಣೆಗೆ ಹೋಗುವ ಮುನ್ನ ಪಕ್ಷದಲ್ಲಿ ಕೆಳಮಟ್ಟದ ಸಂಘಟನೆ ಅವಶ್ಯಕತೆ ಇದೆ. ಸದ್ಯ ನಾನು ಪಕ್ಷ ಸಂಘಟನೆ ಕುರಿತು ಗಮನಹರಿಸುತ್ತೇನೆ. ಚುನಾವಣೆ ಸ್ಪರ್ಧೆಯ ವಿಚಾರ ದೊಡ್ಡವರಿಗೆ ಬಿಟ್ಟಿದ್ದು. ನನ್ನ ಅವರು ಯಾವುದಕ್ಕೆ ಬಳಸಿಕೊಳ್ಳುತ್ತಾರೆ ಅದಕ್ಕೆ ನಾನು ಸಿದ್ಧವಾಗಿರುತ್ತೇನೆ ಎಂದು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಸ್ಥಳೀಯ ಸಮರಕ್ಕೆ ದೊಡ್ಡಗೌಡರಿಂದ ಮಾಸ್ಟರ್ ಪ್ಲಾನ್

    ಸ್ಥಳೀಯ ಸಮರಕ್ಕೆ ದೊಡ್ಡಗೌಡರಿಂದ ಮಾಸ್ಟರ್ ಪ್ಲಾನ್

    – ಚುನಾವಣೆ ಬಳಿಕ ಅಗತ್ಯ ಬಿದ್ದರೆ ಮೈತ್ರಿ

    ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯನ್ನ ಅಧಿಕಾರದಿಂದ ದೂರ ಇಡಲು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಚುನಾವಣೆ ನಂತರ ಸ್ಥಳೀಯ ಸಂಸ್ಥೆಯಲ್ಲಿ ದೋಸ್ತಿಗೆ ದೇವೇಗೌಡರು ಚಿಂತನೆ ನಡೆಸಿದ್ದಾರೆ. ಈ ಮೂಲಕ ಪಕ್ಷ ಉಳಿಸೋದರ ಜೊತೆಗೆ ಬಿಜೆಪಿ ದೂರ ಇಡುವುದಕ್ಕೆ ಭರ್ಜರಿ ಯೋಜನೆ ಹಾಕಿದ್ದಾರಂತೆ. ಮೈಸೂರು ಭಾಗ ಸೇರಿ ಹಲವೆಡೆ ಕಾಂಗ್ರೆಸ್-ಜೆಡಿಎಸ್ ನಡುವೆಯೇ ಫೈಟ್ ಮಾಡಲಿದ್ದು, ಮೈತ್ರಿ ಮಾಡಿಕೊಂಡರೆ ಜೆಡಿಎಸ್ ಭದ್ರಕೋಟೆ ಒಡೆದು ಹೋಗುವ ಆತಂಕ ಎದುರಾಗಿದೆಯಂತೆ.

    ಕಾರ್ಯಕರ್ತರು ಪಕ್ಷ ಬಿಟ್ಟು ಬಿಜೆಪಿ ಕಡೆ ಮುಖ ಮಾಡಬಹುದು ಎಂಬ ಭೀತಿಯಿಂದ ಚುನಾವಣೋತ್ತರ ಮೈತ್ರಿಗೆ ಜೆಡಿಎಸ್ ವರಿಷ್ಠ ಎಚ್‍ಡಿಡಿ ಪ್ಲಾನ್ ಮಾಡಿದ್ದಾರೆ. ಪ್ರತ್ಯೇಕವಾಗಿಯೇ ಚುನಾವಣೆ ಎದರಿಸೋಣ. ಬಳಿಕ ಅಗತ್ಯ ಬಿದ್ದರೆ ಮೈತ್ರಿ ಮಾಡೋಣ. ಇದರಿಂದ ಸರ್ಕಾರಕ್ಕೂ ಡ್ಯಾಮೇಜ್ ಆಗಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬಹುದು. ಚುನಾವಣೆ ನಂತರ ಮೈತ್ರಿ ಬಗ್ಗೆ ಎಚ್‍ಡಿ ದೇವೇಗೌಡರ ಮಾತಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.

    ಇದೇ ಸ್ಥಳೀಯ ಸಂಸ್ಥೆ, ಲೋಕಸಭೆ ಚುನಾವಣೆ ಮೈತ್ರಿ ವಿಚಾರವಾಗಿ ಇಂದು ಜೆಡಿಎಸ್ ಮಹತ್ವದ ಸಭೆ ನಡೆಸುತ್ತಿದೆ. ಜೆಡಿಎಸ್ ವರಿಷ್ಠ ದೇವೇಗೌಡರ ನೇತೃತ್ವದಲ್ಲಿ ಶಾಸಕರು, ಸಚಿವರ ಸಭೆ ನಡೆಯಲಿದೆ. ಪ್ರಮುಖವಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಂದಾಣಿಕೆ ಬಗ್ಗೆ ಅಂತಿಮ ನಿರ್ಧಾರವನ್ನ ತೆಗದುಕೊಳ್ಳುವ ಸಾಧ್ಯತೆ ಇದೆ. ಇದಲ್ಲದೆ ಲೋಕಸಭೆ ಚುನಾವಣೆಯಲ್ಲಿ ದೋಸ್ತಿಗೆ ಈಗಾಗಲೇ ಓಕೆ ಅಂದಿರುವ ಜೆಡಿಎಸ್, ಯಾವ ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಇಳಿಸಬೇಕು. ಎಷ್ಟು ಸ್ಥಾನವನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು ಅಂತ ನಿರ್ಧರಿಸಲಿದೆ. ಇದರ ಜೊತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನ ಬೇರೆಯವರಿಗೆ ವಹಿಸುವ ಕುರಿತು ಶಾಸಕರು, ಸಚಿವರ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕರುಣಾನಿಧಿ ಆರೋಗ್ಯ ವಿಚಾರಿಸಿದ ಮಾಜಿ ಪ್ರಧಾನಿ ಎಚ್‍ಡಿಡಿ

    ಕರುಣಾನಿಧಿ ಆರೋಗ್ಯ ವಿಚಾರಿಸಿದ ಮಾಜಿ ಪ್ರಧಾನಿ ಎಚ್‍ಡಿಡಿ

    ಚೆನ್ನೈ: ತೀವ್ರ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ತಮಿಳುನಾಡಿನ ಡಿಎಂಕೆ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಮುಖ್ಯಸ್ಥ ಎಚ್.ಡಿ.ದೇವೇಗೌಡರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

    ಶುಕ್ರವಾರ ಸಂಜೆ ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿದ ದೇವೇಗೌಡರು ಕರುಣಾನಿಧಿಯವರ ಪುತ್ರ ಸ್ಟಾಲಿನ್ ಹಾಗೂ ಪುತ್ರಿ ಕನಿಮೋಳಿಯೊಂದಿಗೆ ಮಾತುಕತೆ ನಡೆಸಿ ಕರುಣಾನಿಧಿಯವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು.

    ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕರುಣಾನಿಧಿಯವರು ಶೀಘ್ರವೇ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳುತ್ತೇವೆ. ಅವರು ಶತಮಾನವನ್ನು ಪೂರೈಸುತ್ತಾರೆ ಎನ್ನುವ ನಂಬಿಕೆ ನನಗಿದೆ. ಕರುಣಾನಿಧಿಯವರು ರಾಷ್ಟ್ರದ ಹಿರಿಯ ರಾಜಕಾರಣಿಯಾಗಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದ್ದಾರೆ.

    94 ವರ್ಷದ ಕರುಣಾನಿಧಿಯವರು ಮೂತ್ರನಾಳದ ಸೋಂಕು, ಜ್ವರ ಹಾಗೂ ವಯೋಸಹಜ ತೊಂದರೆಯಿಂದ ಬಳಲುತ್ತಿದ್ದ ಪರಿಣಾಮ ಅವರನ್ನು ಜುಲೈ 27ರಂದು  ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸಾಧ್ಯವಿಲ್ಲ: ಎಚ್‍ಡಿಡಿ

    ನನ್ನ ಜೀವಿತಾವಧಿಯಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಸಾಧ್ಯವಿಲ್ಲ: ಎಚ್‍ಡಿಡಿ

    ನವದೆಹಲಿ: ನನ್ನ ಜೀವಿತಾವಧಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

    ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ವಿಚಾರ ಹಲವು ಸಂಘಟನೆಗಳು ಇಂದು ಕರೆ ನೀಡಿದ್ದ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚುವ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ. ಬಿಜೆಪಿ ನಾಯಕ ಯಡಿಯೂರಪ್ಪ ದುರುದ್ದೇಶಪೂರಿತ ಪ್ರಚಾರದ ಮೂಲಕ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ್ದಾರೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ ಹಾಗೂ ನಾನು ಮತ್ತು ನನ್ನ ಮಗ ಮುಖ್ಯಮಂತ್ರಿ ಕುಮಾರಸ್ವಾಮಿ ಜೀವಿತಾವಧಿಯಲ್ಲಿ ಇದು ಎಂದಿಗೂ ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳಿಸಿದ ಬಿಜೆಪಿಯೂ ಸರ್ಕಾರ ರಚನೆ ಮಾಡಲಾಗದೇ ಹೋದದ್ದಕ್ಕೆ ಬಿಜೆಪಿ ನಾಯಕರಾದ ಯಡಿಯೂರಪ್ಪ ಅವರಿಗೆ ನಿರಾಸೆಯಾಗಿದೆ. ಆದ್ದರಿಂದಲೇ ಅವರು ಉತ್ತರ ಕರ್ನಾಟಕದ ಜನರಿಗೆ ಪ್ರತ್ಯೇಕ ಕರ್ನಾಟಕಕ್ಕಾಗಿ ಪ್ರಚೋದನೆ ಕೊಡುತ್ತಿದ್ದಾರೆ. ಅಲ್ಲದೆ ರಾಜ್ಯ ಬಜೆಟ್, ರೈತರ ಸಾಲ ಮನ್ನಾ ಹಾಗೂ ಇತರೆ ವಿಚಾರಗಳನ್ನಿಟ್ಟುಕೊಂಡು ಜನರನ್ನು ಪ್ರಚೋದಿಸುತ್ತಿದ್ದಾರೆ. ಇವೆಲ್ಲವೂ ರಾಜಕೀಯ ಲಾಭಕ್ಕಾಗಿಯೇ ಮಾಡುತ್ತಿದ್ದಾರೆ ಎಂದು ಬಿಎಸ್‍ವೈ ವಿರುದ್ಧ ಕಿಡಿಕಾರಿದ್ದಾರೆ.

    ಬಿಎಸ್‍ವೈ ಹೇಳಿದ್ದು ಏನು?
    ತಮ್ಮ ರಾಜಕೀಯ ಲಾಭಕ್ಕಾಗಿ ಏಕೀಕೃತ ಕರ್ನಾಟಕ ಒಡೆಯಲು ಜೆಡಿಎಸ್ ಷಡ್ಯಂತ್ರ ರೂಪಿಸಿದೆ. ಈ ಹಿಂದೆ ವೀರಶೈವ, ಲಿಂಗಾಯತ ಪ್ರತ್ಯೇಕತೆ ಮಾಡಲು ಕಾಂಗ್ರೆಸ್ ಕೈ ಹಾಕಿತ್ತು. ಈಗ ಜೆಡಿಎಸ್ ರಾಜ್ಯ ಪ್ರತ್ಯೇಕ ಮಾಡುವ ಹುನ್ನಾರ ಮಾಡ್ತಿದೆ. ದೇವೇಗೌಡರ ಈ ತಂತ್ರವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಪ್ರತ್ಯೇಕ ರಾಜ್ಯ ಹೋರಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಮೌನವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಯಡಿಯೂರಪ್ಪ ಹೇಳಿದ್ದರು.