Tag: ಮಾಜಿ ಪ್ರಧಾನಿ

  • ಮಾಜಿ ಪ್ರಧಾನಿ ದೇವೇಗೌಡರ ಎದುರೇ ಹಾಸನ ಸೀಟಿಗೆ ಪ್ರಜ್ವಲ್ ಪಟ್ಟು!

    ಮಾಜಿ ಪ್ರಧಾನಿ ದೇವೇಗೌಡರ ಎದುರೇ ಹಾಸನ ಸೀಟಿಗೆ ಪ್ರಜ್ವಲ್ ಪಟ್ಟು!

    ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಎದುರೇ ಹಾಸನ ಸೀಟಿಗಾಗಿ ಪ್ರಜ್ವಲ್ ರೇವಣ್ಣ ಅವರು ಪಟ್ಟು ಹಿಡಿದಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಚುನಾವಣೆಗೆ ನಿಲ್ಲಲು ತಾತನ ಎದುರೇ ಬಿಗಿಪಟ್ಟು ಹಿಡಿದು ಕುಳಿತಿರುವ ಮೊಮ್ಮಗನ ಹಠಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಮಣಿಯದೇ, ಹಾಸನ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಪ್ರಜ್ವಲ್‍ಗೆ ದೇವೇಗೌಡರು ಮಂಡ್ಯ ಲೋಕಸಭಾ ಕ್ಷೇತ್ರವನ್ನು ತೋರಿಸಿದ್ದಾರಾ ಎಂಬ ಪ್ರಶ್ನೆಯೊಂದು ಎದ್ದಿದೆ. ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಹೋಗಲು ಹೆಚ್.ಡಿ.ದೇವೇಗೌಡರು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಆದ್ರೆ ಇತ್ತ ಹಾಸನ ಲೋಕಸಭಾ ಕ್ಷೇತ್ರದಲ್ಲೇ ನಾನು ಸ್ಪರ್ಧೆ ಮಾಡುವುದಾಗಿ ಪ್ರಜ್ವಲ್ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ತಾತ, ಮೊಮ್ಮಗನ ನಡುಯೇ ಮಾತುಕತೆ ನಡೆಯುತ್ತಿದೆ.

    ಹಾಗಾದ್ರೆ ಮಾಜಿ ಪ್ರಧಾನಿ ಹಾಸನ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡ್ತಾರಾ? ಮಂಡ್ಯದಲ್ಲಿ ದೇವೇಗೌಡರ ಕುಟುಂಬದವರಿಂದ್ಲೇ ಸ್ಪರ್ಧೆನಾ? ಅಥವಾ ಮಂಡ್ಯದವರಿಗೆ ಅವಕಾಶನಾ? ಎನ್ನುವ ಹಲವಾರು ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತದೆ. ಒಟ್ಟಿನಲ್ಲಿ ಜೆಡಿಎಸ್‍ನಲ್ಲಿ ತಾತ, ಮೊಮ್ಮಗನ ಸ್ಪರ್ಧೆಯ ಲೆಕ್ಕಚಾರದ ಬಗ್ಗೆ ಚರ್ಚೆ ಜೋರಾಗಿದೆ.

  • ಮಮತಾ ಬ್ಯಾನರ್ಜಿ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ

    ಮಮತಾ ಬ್ಯಾನರ್ಜಿ ಹೋರಾಟಕ್ಕೆ ಎಚ್‍ಡಿಡಿ ಬೆಂಬಲ

    ನವದೆಹಲಿ: ತೃತೀಯ ರಂಗದ ಸಾರಥ್ಯ ಹೊತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಮಾಜಿ ಪ್ರಧಾನಿ ದೇವಗೌಡರನ್ನು ಇಲ್ಲಿನ ಕರ್ನಾಟಕ ಭವನದಲ್ಲಿ ಭೇಟಿಮಾಡಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರನ್ನು ಇಂದು 4.30 ರಲ್ಲಿ ಮಮತಾ ಬ್ಯಾನರ್ಜಿಯವರು ಕರ್ನಾಟಕ ಭವನದಲ್ಲಿ ಭೇಟಿಯಾಗಿ ಒಂದು ಗಂಟೆಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಸರ್ಕಾರದ ಎನ್‌ಆರ್‌ಸಿ ಕರಡು ವಿರೋಧಿಸುತ್ತಿರುವ ಮಮತಾ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದು, ಮಮತಾ ಬ್ಯಾನರ್ಜಿಯವರ ಮನವಿಗೆ ಒಪ್ಪಿಕೊಂಡ ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.

    ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ನೂತನವಾಗಿ ಆಯ್ಕೆಗೊಂಡ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ಮೊದಲ ಬಾರಿ ದೇವೇಗೌಡರನ್ನು ಭೇಟಿ ಮಾಡಿದ ಅವರು, ತೃತೀಯ ರಂಗ ಬಲ ಪಡಿಸುವ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

    ಕೇಂದ್ರದಲ್ಲಿರುವ ಎನ್‍ಡಿಎ ಸರ್ಕಾರದ ವಿರುದ್ದ ಹೋರಾಟ ನಡೆಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದು, ಪ್ರಮುಖವಾಗಿ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎನ್ನುವ ವಿಚಾರವಾಗಿ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಇತರೆ ಪ್ರಾದೇಶಿಕ ಪಕ್ಷಗಳ ಒಗ್ಗೂಡಿಸುವಿಕೆಯಲ್ಲಿ ಸಹಾಯ ಮಾಡುವಂತೆ ಮಮತಾ ಬ್ಯಾನರ್ಜಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಾಷ್ಟ್ರೀಯ ನಾಗರಿಕ ನೋಂದಣಿ ಮಾಡಿಸಲು 40 ಲಕ್ಷ ಮಂದಿ ವಿಫಲ: ಏನಿದು ಎನ್‌ಆರ್‌ಸಿ? ಅಸ್ಸಾಂನಲ್ಲೇ ಮಾತ್ರ ಏಕೆ?

    ಭೇಟಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ದೇವೇಗೌಡರು ಪ್ರಧಾನಿಯಾಗಿದ್ದಾಗ ನಾನು ಸಂಸದೆಯಾಗಿದ್ದೆ ಅವರ ಮೇಲೆ ಅಪಾರ ಗೌರವಿದ್ದು ಸೌಜನ್ಯಕ್ಕಾಗಿ ಭೇಟಿಯಾಗಿದ್ದೇನೆ. ಭೇಟಿ ವೇಳೆ ಕೆಲವು ರಾಜಕೀಯ ವಿಷಯಗಳ ಬಗ್ಗೆ ಚರ್ಚೆಯಾಗಿದ್ದು, ಪಕ್ಷಗಳ ಒಗ್ಗೂಡಿಸುವಿಕೆ ಹಾಗೂ ಎನ್‌ಆರ್‌ಸಿ  ವಿರೋಧಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ್ದು, ಅದಕ್ಕೆ ದೇವೇಗೌಡರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

  • ಮಾಜಿ ಸಿಎಂ ತಂತ್ರಕ್ಕೆ ಎಚ್‍ಡಿಡಿ ಸಲಹೆಯಂತೆ ಎಚ್‍ಡಿಕೆಯಿಂದ ಹೊಸ ಬಾಣ!

    ಮಾಜಿ ಸಿಎಂ ತಂತ್ರಕ್ಕೆ ಎಚ್‍ಡಿಡಿ ಸಲಹೆಯಂತೆ ಎಚ್‍ಡಿಕೆಯಿಂದ ಹೊಸ ಬಾಣ!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಂತ್ರಕ್ಕೆ ಪ್ರತಿಯಾಗಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆಯಂತೆ ಹೊಸ ಬಾಣ ಬಿಡಲು ಕುಮಾರಸ್ವಾಮಿ ಪ್ಲಾನ್ ಮಾಡಿದ್ದಾರೆ.

    ಸಿದ್ದರಾಮಯ್ಯಗೆ ಕ್ಯಾಬಿನೆಟ್ ಸ್ಥಾನಮಾನ ನೀಡುವ ಕುರಿತ ಆದೇಶ ಮುಂದೆ ಹೋಗಿದೆ. ಸೋಮವಾರವೇ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯಗೆ ಕ್ಯಾಬಿನೆಟ್ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಬೇಕಿತ್ತು. ಆದ್ರೆ ಇವತ್ತಿನ ತನಕ ಆ ಫೈಲ್ ಮೂವ್ ಆಗದೇ ಪೆಂಡಿಂಗ್ ಉಳಿದಿದೆ. ಹೀಗಾಗಿ ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಸಿಗುತ್ತಾ? ಇಲ್ವಾ? ಅನ್ನೋ ಚರ್ಚೆ ರಾಜ್ಯ ರಾಜಕಾರಣದಲ್ಲಿ ಜೋರಾಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಮಾತಾಡಿರೋ ಸಿದ್ದರಾಮಯ್ಯರಿಗೆ ಎದುರಾಯ್ತು ಕಂಟಕ!

    ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿವನದಲ್ಲಿದ್ದುಕೊಂಡು ದೋಸ್ತಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬಾಂಬ್ ಸಿಡಿಸ್ತಿದ್ದು, ಇದರಿಂದ ಸಿಎಂ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ತತ್ತರಿಸಿದಂತೆ ಕಂಡು ಬಂದಿದೆ. ಹೀಗಾಗಿ ಈ ಇಬ್ಬರಿಗೂ ಟೆನ್ಶನ್ ಮೇಲೆ ಟೆನ್ಶನ್ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಟ್ಟಿಹಾಕಲು ದೇವೇಗೌಡರು ಸಿಎಂ ಎಚ್ ಡಿಕೆಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ

  • ಡಿಕೆಶಿ ವಿಚಾರವಾಗಿ ಹೇಗೆ ನಡೆದುಕೊಳ್ಳಬೇಕು – ಎಚ್‍ಡಿಕೆ, ರೇವಣ್ಣಗೆ ದೇವೇಗೌಡರ ಕ್ಲಾಸ್!

    ಡಿಕೆಶಿ ವಿಚಾರವಾಗಿ ಹೇಗೆ ನಡೆದುಕೊಳ್ಳಬೇಕು – ಎಚ್‍ಡಿಕೆ, ರೇವಣ್ಣಗೆ ದೇವೇಗೌಡರ ಕ್ಲಾಸ್!

    ಸಾಂದರ್ಭಿಕ ಚಿತ್ರ

    ಬೆಂಗಳೂರು: ಹವಾಲ ವ್ಯವಹಾರದಲ್ಲಿ ಜಲಸಂಪ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಅವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ, ಈ ಕುರಿತು ಹೇಗೆ ನಡೆದುಕೊಳ್ಳಬೇಕು ಎಂದು ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಎಚ್‍ಡಿ ರೇವಣ್ಣ ಅವರಿಗೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ಎಚ್ಚರಿಕೆ ಹೆಜ್ಜೆ ಇಡುವಂತೆ ಸಲಹೆ ನೀಡಿದ್ದಾರೆ.

    ಸದ್ಯ ಐಟಿ ದಾಳಿ ವಿಚಾರ ಅತ್ಯಂತ ಸೂಕ್ಷ್ಮ ಹಾಗೂ ಕಾನೂನಾತ್ಮಕ ವಿಚಾರವಾಗಿದ್ದು, ಈ ವಿಚಾರದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ಸದ್ಯದ ಸನ್ನಿವೇಶದಲ್ಲಿ ಡಿಕೆಶಿ ಅವರಿಗೆ ನೈತಿಕ ಬೆಂಬಲ ನೀಡಿ ಎಂದು ಎಚ್‍ಡಿ ದೇವೇಗೌಡ ಅವರು ಹೇಳಿದ್ದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ. ಇದನ್ನು ಓದಿ: ಐಟಿ ಅಧಿಕಾರಿಗಳ ನಿಜ ಬಣ್ಣ ಕೆಲವೇ ದಿನಗಳಲ್ಲಿ ಗೊತ್ತಾಗುತ್ತೆ: ಡಿ.ಕೆ.ಸುರೇಶ್

    ರಾಜ್ಯದಲ್ಲಿರುವ ಮೈತ್ರಿ ಸರ್ಕಾರದಲ್ಲಿ ಹೆಚ್ಚಿನ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಹಾಗೂ ಜನತೆಗೆ ತಮ್ಮ ಸಮುದಾಯದ ವಿರುದ್ಧ ಮೆಚ್ಚುಗೆ ಉಂಟಾಗುವಂತೆ ಮಾಡಲು ಡಿಕೆಶಿ ಅವರ ವಿಚಾರವಾಗಿ ಹೆಚ್ಚು ಮಾತನಾಡದಿರಲು ಸಲಹೆ ನೀಡಿದ್ದಾರೆ. ಅಲ್ಲದೇ ಸಂಪೂರ್ಣವಾಗಿ ಸುಮ್ಮನಿರಲು ಸೂಚಿಸಿರುವ ಅವರು, ಕಾನೂನು ಹೋರಾಟ ಮಾಡಿಕೊಳ್ಳುತ್ತಾರೆ. ಆದರೆ ಸರ್ಕಾರದ ಬೆಂಬಲ ಡಿಕೆಶಿ ಅವರಿಗೆ ಇರುತ್ತದೆ ಎಂದು ಹೇಳಲು ಸಲಹೆ ನೀಡಿದ್ದಾರೆ. ಇದನ್ನು ಓದಿ: ಹವಾಲ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ಭಾಗಿ? 

    ದೇವೇಗೌಡ ಸಲಹೆ ಪಡೆದು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಡಿಕೆ ಶಿವಕುಮಾರ್ ನಮ್ಮ ಸಂಪುಟದಲ್ಲಿ ಸಚಿವರು. ಅವರಿಗೆ ಕಾನೂನಾತ್ಮಕ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಬಿಜೆಪಿ ಹೇಳಿದರೆ ರಾಜೀನಾಮೆ ನೀಡಬೇಕಾ? ಏಕೆ ರಾಜೀನಾಮೆ ನೀಡಬೇಕು? ಇಲ್ಲಿ ರಾಜೀನಾಮೆಯ ಅವಶ್ಯಕತೆ ಇಲ್ಲ. ಬಿಜೆಪಿ ನಾಯಕರ ಮೇಲೆ ಎಷ್ಟು ಆರೋಪಗಳಿವೆ, ಅವರ ವಿರುದ್ಧ ಆರೋಪ ಕೇಳಿಬಂದ ವೇಳೆ ರಾಜೀನಾಮೆ ನೀಡಿದ್ದರಾ ಎಂದು ಸಚಿವ ಡಿಕೆಶಿ ಪರವಾಗಿ ಎಚ್‍ಡಿಕೆ ಬ್ಯಾಟ್ ಬೀಸಿದ್ದಾರೆ. ಇದನ್ನು ಓದಿ: ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಕೆಶಿ ಪರ ಸಿಎಂ ಎಚ್‍ಡಿಕೆ ಬ್ಯಾಟಿಂಗ್

  • ಮಾಜಿ ಪ್ರಧಾನಿ ದೇವೇಗೌಡರಿಂದ ಕಾಂಗ್ರೆಸ್‍ಗೆ ಖಡಕ್ ಸೂಚನೆ!

    ಮಾಜಿ ಪ್ರಧಾನಿ ದೇವೇಗೌಡರಿಂದ ಕಾಂಗ್ರೆಸ್‍ಗೆ ಖಡಕ್ ಸೂಚನೆ!

    ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾಂಗ್ರೆಸ್ ಗೆ ಖಡಕ್ ಸೂಚನೆ ನೀಡಿದ್ದಾರೆ.

    ಶಾಸಕ ಜಮೀರ್ ಅಹಮದ್ ಯಾವುದೇ ಕಾರಣಕ್ಕೂ ಸಂಪುಟದಲ್ಲಿ ಇರಬಾರದು. ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಅವರಿಗೆ ಜಾಗ ಇರಕೂಡದು ಎಂದು ಮಾಜಿ ಪ್ರಧಾನಿ ತಿಳಿಸಿದ್ದಾರೆ ಅಂತ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಕ್ಯಾಬಿನೆಟ್‍ಗೆ ಮುಸ್ಲಿಂ ಕೋಟಾದಡಿ ಖಾದರ್, ತನ್ವೀರ್ ಸೇಠ್, ರೋಷನ್‍ಬೇಗ್, ಜಮೀರ್ ಅಹಮದ್ ಪರ ಮಾಜಿ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ಬಂಡಾಯಗಾರರಿಗೆ ತೊಂದರೆಯಾಗಬಾರದು ಅಂತ ಹೇಳಿದ್ದರು. ಆದ್ರೆ ಇದೀಗ ದೇವೇಗೌಡರ ಸೂಚನೆಯಿಂದ ಕಾಂಗ್ರೆಸ್ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

    ಬಂಡಾಯಗಾರರ ವಿರುದ್ಧ ಮುಂದುವರಿದ ದೇವೇಗೌಡರ ಸಮರದಿಂದಾಗಿ ಜಮೀರ್ ಅಹಮದ್ ಆಂಡ್ ಗ್ಯಾಂಗ್ ಏನ್ ಮಾಡ್ತಾರೆ ಅನ್ನೋದೇ ಸದ್ಯದ ಕುತೂಹಲವಾಗಿದೆ. ಈ ಹಿಂದೆ 2013ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಗೆಲುವು ಸಾಧಿಸಿದ್ದ ಜಮೀರ್ ಅಹಮದ್ ಪಕ್ಷದ ವಿರುದ್ಧ ತೊಡೆ ತಟ್ಟಿದ್ರು. ಚುನಾವಣೆ ಸಮಯದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಜಮೀರ್ ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಗೆಲುವನ್ನು ಕಂಡಿದ್ರು.

  • ರಾಜರಾಜೇಶ್ವರಿ, ಜಯನಗರದಲ್ಲಿ ಗೆಲ್ಲುವುದೇ ನಮ್ಮ ಮೊದಲ ಆದ್ಯತೆ- ಎಚ್‍ಡಿಕೆ

    ರಾಜರಾಜೇಶ್ವರಿ, ಜಯನಗರದಲ್ಲಿ ಗೆಲ್ಲುವುದೇ ನಮ್ಮ ಮೊದಲ ಆದ್ಯತೆ- ಎಚ್‍ಡಿಕೆ

    ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಜಯನಗರದಲ್ಲಿ ಗೆಲ್ಲುವುದೇ ನಮ್ಮ ಮೊದಲ ಆದ್ಯತೆ ಹಾಗೂ ಅನಿವಾರ್ಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಪದ್ಮನಾಭ ನಗರದಲ್ಲಿರೋ ಮಾಜಿ ಪ್ರಧಾನಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರಕ್ರಿಯೆಗಳು ಯಾವ ರೀತಿ ಹೋಗಬೇಕೆಂಬುದರ ಬಗ್ಗೆ ಚರ್ಚೆ ನಡೆಸಿದ್ದೇವೆ. ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಸಚಿವ ಸಂಪುಟದ ಬಗ್ಗೆ ಚರ್ಚೆಸಿದ ಬಳಿಕ ಅಂತಿಮವಾಗುತ್ತದೆ. ಯಾಕಂದ್ರೆ ಅವರು ನಮಗೆ ಮೇಜರ್ ಪಾರ್ಟನರ್ ಅಂತ ತಿಳಿಸಿದ್ರು.

    ರಾಜರಾಜೇಶ್ವರಿನಗರ ಹಾಗೂ ಜಯನಗರ ವಿಚಾರದಲ್ಲಿ ಈ ಕ್ಷಣದವರೆಗೂ ಯಾವುದೇ ಚರ್ಚೆಯಾಗಿಲ್ಲ. ಈ ಎರಡೂ ಕ್ಷೇತ್ರದ ಚುನಾವಣೆಯಲ್ಲಿಯೂ ನಾವು ಗೆಲ್ಲುವುದೇ ನಮ್ಮ ಮೊದಲ ಆದ್ಯತೆಯಾಗಿದೆ. ರಾಜರಾಜೇಶ್ವರಿನನಗರ ಕ್ಷೇತ್ರದಲ್ಲಿ ಜೆಡಿಎಸ್, ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬುದು ಬೋಗಸ್ ನ್ಯೂಸ್. ಇದ್ಯಾವುದು ಸತ್ಯವಲ್ಲ. ಇವೆಲ್ಲ ಊಹಾಪೋಹದ ಸುದ್ದಿಗಳು. ಇದ್ಯಾವುದನ್ನು ಇನ್ನೂ ಚರ್ಚೆ ಮಾಡಿಲ್ಲ. ಈ ಎರಡೂ ಕ್ಷೇತ್ರಗಳನ್ನೂ ನಾವು ಗೆಲ್ಲಲೇಬೇಕು. ಅದು ಅನಿವಾರ್ಯ ಕೂಡ. ಆ ದೃಷ್ಟಿಯಿಂದ ಆಯಾ ಕ್ಷೇತ್ರದ ಮುಖಂಡರುಗಳು ಮತ್ತು ಕಾಂಗ್ರೆಸ್ ನ ಮುಖಂಡರುಗಳು ನಾವು ಸೇರಿ ಚರ್ಚೆ ಮಾಡಿ ಎರಡೂ ಕೇತ್ರದಲ್ಲಿ ಗೆಲ್ಲುವ ತೀರ್ಮಾನ ಮಾಡಬೇಕು. ಹೀಗಾಗಿ ಈ ಕ್ಷಣದವರೆಗೂ ನಾವೊಂದು ಕ್ಷೇತ್ರ, ಅವರೊಂದು ಕ್ಷೇತ್ರ ಅನ್ನೋ ತೀರ್ಮಾನಗಳಾಗಿಲ್ಲ. ಈ ಬಗ್ಗೆ ಯಾರೂ ಗೊಂದಲ ಮಾಡಿಕೊಳ್ಳುವುದು ಬೇಡ ಎಂದು ಅವರು ಸ್ಪಷ್ಟಪಡಿಸಿದ್ರು.

    ಬಿಜೆಪಿಯವರು ಎಷ್ಟೇ ಕುದುರೆ ವ್ಯಾಪಾರ ಮಾಡಿ, ಕೆಲವು ಶಾಸಕರನ್ನು ಹೆದರಿಸಿ, ಇಡಿ, ಐಟಿ ಇಲಾಖೆಳ ಮೂಲಕ ತೊಂದರೆ ಕೊಟ್ಟು ಯಾವುದಾದ್ರೂ ಶಾಸಕರನ್ನು ಗೆಲ್ತೀವಿ ಅಂತ ತಿಳಿದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಇಂದು ಎಲ್ಲಾ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ತೆರಳಿ ಮತದಾರರಿಗೆ ಅಭಿನಂದನೆ ಸಲ್ಲಿಸುವುದು ಅನಿವಾರ್ಯವಾಗಿದೆ. ಆದ್ದರಿಂದ ಯಾರೆಲ್ಲ ಹೋಟೆಲಿನಲ್ಲಿ ಇದ್ದಾರೆ ಎನ್ನುವುದು ನನಗೆ ತಿಳಿದಿಲ್ಲ ಅಂದ್ರು.

  • ಮಾಜಿ ಪ್ರಧಾನಿಯವರ ಮನೆಯ ಸುತ್ತಮುತ್ತ ಬಿಗಿ ಭದ್ರತೆ!

    ಮಾಜಿ ಪ್ರಧಾನಿಯವರ ಮನೆಯ ಸುತ್ತಮುತ್ತ ಬಿಗಿ ಭದ್ರತೆ!

    ಬೆಂಗಳೂರು: ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಅವರು ಇಂದು ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರದಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಈ ಮಧ್ಯೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಮನೆಗೂ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮನೆಯ ಸುತ್ತಮುತ್ತ ಪೊಲೀಸರು ಕಣ್ಗಾವಲು ಇರಿಸಿದ್ದಾರೆ. ಇದನ್ನೂ ಓದಿ: ಮಂಗ್ಳೂರು, ಬೆಂಗ್ಳೂರಲ್ಲಿ 144 ಸೆಕ್ಷನ್ ಜಾರಿ

    ಒಂದು ಕೆಎಸ್‍ಆರ್‍ಪಿ ತುಕಡಿ, ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ದೇವೇಗೌಡ ಅವರ ಮನೆಗೆ ಭದ್ರತೆ ಒದಗಿಸಲಾಗಿದೆ. ಇನ್ನು ಕಾಂಗ್ರೆಸ್, ಜೆಡಿಎಸ್ ಶಾಸಕರ ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಮಾಜಿ ಪ್ರಧಾನಿ ಅವರು ಶಾಸಕರಿಗೆ ಒಗ್ಗಾಟ್ಟಿನಲ್ಲಿರಲು ಮನದಟ್ಟು ಮಾಡುವಂತೆ ಫೋನ್ ಮೂಲಕ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುತ್ತಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.

    ಚುನಾವಣಾ ಫಲಿತಾಂಶಕ್ಕೂ ಮೊದಲೇ ನಾನೇ ಸಿಎಂ ಎಂದು ಹೇಳಿಕೊಂಡು ಬಂದಿದ್ದ ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್, ಜೆಡಿಎಸ್ ನಾಯಕರು ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಬಿಎಸ್‍ವೈ ಪ್ರಮಾಣ ವಚನ ಕುರಿತು ಸುಪ್ರೀಂ ವಿಚಾರಣೆ ನಡೆಸಿದ್ದು, ಇಂದು ಸಂಜೆ ವಿಶ್ವಾಸಮತ ಯಾಚನೆ ಮಾಡುವಂತೆ ಆದೇಶಿಸಿತ್ತು.

  • ಪ್ರಚಾರಕ್ಕೆ ತೆರಳಿದ್ದ ವೇಳೆ ಮಾಜಿ ಪ್ರಧಾನಿ ದೇವೇಗೌಡರಿಗೆ ತೀವ್ರ ಮುಜುಗರ!

    ಪ್ರಚಾರಕ್ಕೆ ತೆರಳಿದ್ದ ವೇಳೆ ಮಾಜಿ ಪ್ರಧಾನಿ ದೇವೇಗೌಡರಿಗೆ ತೀವ್ರ ಮುಜುಗರ!

    ಮೈಸೂರು: ಅರಮನೆ ನಗರಿಯಲ್ಲಿ ಪ್ರಚಾರ ಕಣಕ್ಕಿಳಿದ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಬಂಡಾಯದ ಬಿಸಿ ತಟ್ಟಿದೆ.

    ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಂಗಪ್ಪ ಪರ ಪ್ರಚಾರ ಮಾಡುತ್ತಿದ್ದ ದೇವೇಗೌಡರ ಎದುರಲ್ಲೇ ಪಕ್ಷೇತರ ಅಭ್ಯರ್ಥಿ ಹರೀಶ್‍ಗೌಡ ಪರ ಬೆಂಬಲಿಗರು ಜೈಕಾರ ಹಾಕಿದ್ದಾರೆ. ಇದರಿಂದಾಗಿ ರೋಡ್ ಶೋನಲ್ಲಿ ಭಾಗಿಯಾಗಿದ್ದ ದೊಡ್ಡಗೌಡರಿಗೆ ತೀವ್ರ ಮುಜುಗರ ಉಂಟಾದ ಪ್ರಸಂಗ ನಡೆದಿದೆ.

    ಹರೀಶ್ ಗೌಡ ಅವರಿಗೆ ಜೆಡಿಎಸ್ ಟಿಕೆಟ್ ಕೈ ತಪ್ಪಿತ್ತು. ಹೀಗಾಗಿ ಅವರು ಚಾಮರಾಜ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ನಿನ್ನೆ ದೇವೇಗೌಡರು ಪ್ರಚಾರಕ್ಕೆ ಬಂದಿದ್ದ ಸಂದರ್ಭದಲ್ಲಿ ಮುಖಾಮುಖಿಯಾದ ಕಾರ್ಯಕರ್ತರು ಹರೀಶ್ ಗೌಡ ಅವರಿಗೆ ಮಾಜಿ ಪ್ರಧಾನಿ ಎದುರೇ ಜೈಕಾರ ಹಾಕಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡ ಅವರು ಲಕ್ಷ್ಮೀಕಾಂತ್ ನಗರ, ಸುಬ್ರಹ್ಮಣ್ಯ ನಗರ, ಹೆಬ್ಬಾಳು, ಮಂಚೇಗೌಡ  ಕೊಪ್ಪಲು, ಮೇಟಗಹಳ್ಳಿಯಲ್ಲಿ ಮೊದಲಾದ ಕಡೆಗಳಲ್ಲಿ ಪ್ರಚಾರ ನಡೆಸಿದ್ದರು.

  • ಕನ್ನಡಿಗ ಪ್ರಧಾನಿಯಾದ್ರೆ ಗೌರವ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿಗಿಲ್ಲ- ಮೋದಿಯನ್ನು ಹೊಗಳಿ ಸಿಎಂ ತೆಗಳಿದ ಮಾಜಿ ಪ್ರಧಾನಿ

    ಕನ್ನಡಿಗ ಪ್ರಧಾನಿಯಾದ್ರೆ ಗೌರವ ಕೊಡುವ ಸಂಸ್ಕೃತಿ ಕಾಂಗ್ರೆಸ್ಸಿಗಿಲ್ಲ- ಮೋದಿಯನ್ನು ಹೊಗಳಿ ಸಿಎಂ ತೆಗಳಿದ ಮಾಜಿ ಪ್ರಧಾನಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಒಂದೊಂದು ರಾಜ್ಯಕ್ಕೂ ಹೋದಾಗ ಆ ರಾಜ್ಯದ ಬಗ್ಗೆ ತಿಳಿದುಕೊಂಡಿರುತ್ತಾರೆ. ಎರಡು ತಿಂಗಳಿಂದ ರಾಜ್ಯದ ಬಗ್ಗೆ ಮೋದಿ ತಿಳಿದಿದ್ದಾರೆ. ಕರ್ನಾಟಕದ ಬಗ್ಗೆ ತಿಳಿದುಕೊಂಡೇ ಅವರು ಮಾತಾಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

    ನನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡುತ್ತಿದ್ದ ವೇಳೆ ಉಡುಪಿಯಲ್ಲಿ ಮೋದಿ ಹೊಗಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಕನ್ನಡಿಗ, ರೈತರ ಮಗ ಅನ್ನೋದನ್ನ ಅವರು ತಿಳಿದುಕೊಂಡಿದ್ದಾರೆ. ಆದ್ರೆ ಕಾಂಗ್ರೆಸ್ ಅವರು ನನ್ನ ಬಗ್ಗೆ ಮಾತಾಡಿದ್ದಾರೆ. ರಾಹುಲ್ ಗಾಂಧಿ ಬೆಳೆಯುತ್ತಿರುವವರು. ಈಗಷ್ಟೇ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದಾರೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ. ಆದ್ರೆ ಸಿಎಂ ಸಿದ್ದರಾಮಯ್ಯ ಸಿಎಂ ಆದಾಗ ನನ್ನ ಫೋಟೋವನ್ನ ವಿಧಾನಸೌಧದಿಂದ ತೆಗೆದು ಹಾಕಿದ್ರು. ಇದು ಒಬ್ಬ ಮಾಜಿ ಪ್ರಧಾನಿಗೆ ಕೊಡೋ ಗೌರವನಾ ಎಂದು ಗರಂ ಆಗಿ ಪ್ರಶ್ನಿಸಿದರು.  ಇದನ್ನೂ ಓದಿ: ಕೃಷ್ಣನೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ `ನಮೋ’- ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸುಳಿವು ಕೊಟ್ರಾ ಪ್ರಧಾನಿ?

    ಮೋದಿಯವರು ಸರಿಯಾಗಿ ಮಾತಾಡಿದ್ದಾರೆ. ಸಿಎಂ ವರ್ತನೆ ಬಗ್ಗೆ ಮೋದಿ ತಿಳಿದುಕೊಂಡಿದ್ದಾರೆ. ಹೀಗಾಗಿ ನಿನ್ನೆ ಅವರು ಮಾತಾಡಿದ್ದಾರೆ ಅಷ್ಟೇ ಮೋದಿ ಬದಲಾಗಿಲ್ಲ. ನಾನೂ ಬದಲಾಗಿಲ್ಲ. ಕನ್ನಡಿಗ ಪ್ರಧಾನಿ ಆದ್ರೆ ಗೌರವ ಕೊಡುವ ಸಂಸ್ಕೃತಿ ಕಾಂಗ್ರೆಸ್ ಗೆ ಇಲ್ಲ. ಆದ್ರೆ ಮೋದಿ ಗೌರವ ನೀಡಿದ್ದಾರೆ. ಇದರಲ್ಲಿ ಯಾವ ಬೇರೆ ಉದ್ದೇಶ ಇಲ್ಲ, ವಿಶೇಷ ಇಲ್ಲ ಅಂತ ಅವರು ಹೇಳಿದ್ರು. ಇದನ್ನೂ ಓದಿ: ವೃದ್ಧಾಶ್ರಮಕ್ಕೆ ಕಳಿಸೋ ಮಾತಾಡಿದ್ದ ಮೋದಿಗೆ ಎಚ್‍ಡಿಡಿ ಮೇಲೇಕೆ ಸಡನ್ ಲವ್- ಸಿಎಂ ಪ್ರಶ್ನೆ

    ಈ ಚುನಾವಣೆ ಕರ್ನಾಟಕದಲ್ಲಿ ಎರಡು ರಾಷ್ಟ್ರಯ ಪಕ್ಷ, ಒಂದು ಪ್ರಾದೇಶಿಕ ಪಕ್ಷದ ನಡುವೆ ನಡೆಯುತ್ತಿದೆ. ಹಿಂದಿನ ಅನೇಕರು ಪ್ರಾದೇಶಿಕ ಪಕ್ಷ ಉಳಿಸಲು ಕಷ್ಟ ಪಟ್ರು. ಆದ್ರೆ ಅದು ಆಗಲಿಲ್ಲ. ಆದ್ರೆ ನಾನೂ ಕಷ್ಟ ಪಟ್ಟು ಪ್ರಾದೇಶಿಕ ಪಕ್ಷ ಉಳಿಸಿದ್ದೇನೆ ಅಂತ ಹೇಳಿದ್ರು.

     

  • ದೇವೇಗೌಡರನ್ನು ಹಾಡಿ ಹೊಗಳಿ ಪೋಸ್ಟರ್ ಹಾಕಿಸಿದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್

    ದೇವೇಗೌಡರನ್ನು ಹಾಡಿ ಹೊಗಳಿ ಪೋಸ್ಟರ್ ಹಾಕಿಸಿದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್

    ಕಲಬುರಗಿ: ನವ ಕರ್ನಾಟಕ ಯಾತ್ರೆ ವೇಳೆ ಸಿಎಂ ಸಿದ್ದರಾಮಯ್ಯಗೆ ಗದೆ ಕೊಟ್ಟಿದ್ದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಈಗ ಮಾಜಿ ಪ್ರಧಾನಿ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡ ಅವರ ಅಫಜಲಪುರ ಕ್ಷೇತ್ರ ಭೇಟಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ ಹೆಚ್‍ಡಿಡಿ ಗೆ ಸ್ವಾಗತ ಕೋರಿ ಅಫಜಲಪುರ ಪಟ್ಟಣದಲ್ಲಿ ಬಹುತೇಕ ಕಡೆ ಸ್ವಾಗತದ ಕಟೌಟ್ ಹಾಕಿಸಿದ್ದಾರೆ.

    ಕಟೌಟ್ ನಲ್ಲಿ ಪ್ರಮುಖವಾಗಿ 22 ವರ್ಷಗಳ ಬಳಿಕ ಕಲ್ಬುರ್ಗಿ ಜಿಲ್ಲೆಯ ಅಫ್ಜಲಪುರ ನಗರಕ್ಕೆ ಬರ್ತಿರೋ ಮಣ್ಣಿನ ಮಗ, ದೇಶ ಕಂಡ ಕರ್ನಾಟಕದ ಪ್ರಪ್ರಥಮ ಪ್ರಧಾನಮಂತ್ರಿ, ಹಿರಿಯ ಮುತ್ಸದಿ, ರೈತರ ಕಣ್ಮಣಿ, ಭೀಮಾ ಏತನೀರಾವರಿ ಯೋಜನೆಗೆ ಅನುದಾನ ನೀಡಿದ ಮಾನ್ಯ ಮಾಜಿ ಪ್ರಧಾನಮಂತ್ರಿಗಳಾದ ಹೆಚ್‍ಡಿ ದೇವೇಗೌಡರಿಗೆ ಮಾಲೀಕಯ್ಯ ಗುತ್ತೇದಾರ್ ಕುಟುಂಬ ಮತ್ತು ರೈತ ಸಮುದಾಯ, ಗುತ್ತೇದಾರ್ ಅಭಿಮಾನಿಗಳಿಂದ ಹಾರ್ದಿಕ ಸುಸ್ವಾಗತ ಅಂತ ಪೋಸ್ಟರ್ ಹಾಕಲಾಗಿದೆ. ಇದು ಕ್ಷೇತ್ರದ ಜನರಲ್ಲಿ ತೀವ್ರ ಕೂತೂಹಲ ಮೂಡಿಸಿದೆ.

    ಈ ಕುರಿತು ಮಾಲೀಕಯ್ಯ ಗುತ್ತೇದಾರ ಅವರನ್ನು ಕೇಳಿದ್ರೆ, ಭೀಮಾ ಏತ ನೀರಾವರಿಗೆ ದೇವೇಗೌಡರ ಕೊಡುಗೆ ಅಪಾರವಾಗಿದೆ. ಹೀಗಾಗಿ ಅವರನ್ನು ಸ್ವಾಗತಿಸಲಾಗುತ್ತಿದೆ. ಇದರಲ್ಲಿ ರಾಜಕೀಯ ಇಲ್ಲ. ನಾನು ಕಾಂಗ್ರೆಸ್ ನಿಂದಲೇ ಸ್ಪರ್ಧೆ ಮಾಡುತ್ತೇನೆ ಅಂತಾ ಸ್ಟಷ್ಟಪಡಿಸಿದ್ದಾರೆ.