ನಮ್ಸಾಂಗ್ ಗ್ರಾಮದ ಮಾಜಿ ಹಂಗಾಮಿ ಅಧ್ಯಕ್ಷ ದಿವಂಗತ ವಾಂಗ್ಮೇಯ್ ರಾಜ್ಕುಮಾರ್ ಅವರ ಪುತ್ರ ಕಪ್ಚೆನ್ ರಾಜ್ಕುಮಾರ್ 1985-1990ರ ಅವಧಿಯಲ್ಲಿ ಹಿಂದಿನ ಖೋನ್ಸಾ ಉತ್ತರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಆರಂಭಿಕ ಶಿಕ್ಷಣವನ್ನು ದೇವಮಾಲಿಯ ನರೋತ್ತಮ್ನಗರದ ರಾಮಕೃಷ್ಣ ಮಿಷನ್ ಶಾಲೆಯಲ್ಲಿ ಮತ್ತು ನಂತರ ಖೋನ್ಸಾದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪೂರ್ಣಗೊಳಿಸಿದರು. ನವದೆಹಲಿಯ ಸಫ್ದರ್ಜಂಗ್ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಪೈಲಟ್ ತರಬೇತಿ ಕೋರ್ಸ್ ಅನ್ನು ಸಹ ಪಡೆದರು. ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..
ಕುಟುಂಬದ ಮೂಲಗಳ ಪ್ರಕಾರ, ಅವರ ಅಂತ್ಯಕ್ರಿಯೆಯನ್ನು ನಾಳೆ ಬೆಳಗ್ಗೆ ಅವರ ಹುಟ್ಟೂರು ನಾಮ್ಸಾಂಗ್ನಲ್ಲಿ ನಡೆಸಲಾಗುವುದು.
ಬೆಂಗಳೂರು: ಕಾಂಗ್ರೆಸ್ನವರು (Congress) ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ವಾರ್ ಶುರು ಮಾಡಿದ್ದಾರೆ. ಸುಮ್ಮನಿರೋಕೆ ನಾವು ಬಳೆ ತೊಟ್ಟಿಲ್ಲ ನಮ್ಮ ಬಳಿಯು ಕಾರ್ಯಕರ್ತರಿದ್ದಾರೆ, ಹುಡುಗರಿದ್ದಾರೆ ಎಂದು ಮಾಗಡಿ ಮಾಜಿ ಶಾಸಕ ಮಂಜುನಾಥ್ (Ex MLA Manjunath) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಪೋಸ್ಟರ್ ಮೂಲಕ ಅಪಪ್ರಚಾರ ನಡೆಯುತ್ತಿದೆ. ಈ ಮೂಲಕ ತೇಜೋವಧೆ ಮಾಡುತ್ತಿದ್ದಾರೆ. ಈ ಹಿಂದೆ ಪೇ ಸಿಎಂ ಪೋಸ್ಟರ್ ಅಂಟಿಸಿ ಅಪಪ್ರಚಾರ ಮಾಡಿದ್ರು. ಈ ಪೋಸ್ಟರ್ ಅಪಪ್ರಚಾರದ ಬಗ್ಗೆ ನಾವೆಲ್ಲಾ ಸಭೆ ನಡೆಸಿದ್ದೇವೆ. ನಾವು ಈ ರೀತಿಯ ಪೋಸ್ಟರ್ ಮಾಡಿ ಅಂಟಿಸುವುದು ದೊಡ್ಡ ಕೆಲಸ ಅಲ್ಲ. ನಮ್ಮ ಬಳಿಯೂ ಕಾರ್ಯಕರ್ತರ ಪಡೆ ಇದೆ ಎಂದರು.
ಪೋಸ್ಟರ್ ಎಲ್ಲಿ ಪ್ರಿಂಟ್ ಮಾಡಿಸಬೇಕು?. ಹೇಗೆ ಮಾಡಿಸಬೇಕು ಅನ್ನೋದು ನಮಗೆ ಗೊತ್ತಿದೆ. ನಾವು ಸರ್ಕಾರಕ್ಕೆ, ಗೃಹ ಇಲಾಖೆಗೆ ಎಚ್ಚರಿಕೆ ಕೊಡ್ತಾ ಇದ್ದೀವಿ. ಇದು ಇಲ್ಲಿಗೆ ಮುಗಿಯಬೇಕು. ನಾವು ಮೈ ಕೊಡವಿ ನಿಂತರೆ ಮುಂದೆ ಏನಾಗುತ್ತೆ. ಮುಂದೆ ಯಾವ ಯಾವ ರೀತಿಯ ವೆರೈಟಿ ಪೋಸ್ಟರ್ ಡಿಸೈನ್ ಮಾಡಿಸಿ ಅಂಟಿಸಬೇಕು ನಮಗೆ ಗೊತ್ತಿದೆ. ಇದರ ಹಿಂದೆ ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಮತ್ತು ಅವರ ಬೆಂಬಲಿಗರು ಇದ್ದಾರೆ ಎಂದು ಹೇಳಿದರು.
ಪೋಸ್ಟರ್ ಗಳ ಬಗ್ಗೆ ನಮ್ಮ ನಾಯಕರು ಮಾತನಾಡಬೇಡಿ ಅಂದಿದ್ರು. ಅದಕ್ಕೆ ನಾವು ಸುಮ್ಮನಿದ್ದೇವೆ. ಈ ಪೋಸ್ಟರ್ ಗಳು (Poster) ಇಲ್ಲಿಗೆ ನಿಲ್ಲಲಿಲ್ಲ ಅಂದ್ರೆ ಮುಂದೆ ಮಾರಾಮಾರಿ ನಡೆಯಬಹುದು. ಅದಕ್ಕೆ ಸರ್ಕಾರವೇ ಹೊಣೆ ಆಗುತ್ತೆ. ನಾವು ಬಳೆತೊಟ್ಟುಕೊಂಡು ಬಂದಿಲ್ಲಾ ನಾವು ರಾಜಕೀಯ ಮಾಡೋದಕ್ಕೆ ಬಂದಿದ್ದೇವೆ. ಬೆಂಗಳೂರಲ್ಲಿ ಭ್ರಷ್ಟಾಚಾರದ ಬಗ್ಗೆ ಕುಮಾರಸ್ವಾಮಿ ಜನರಿಗೆ ತಿಳಿಸ್ತಿದ್ದಾರೆ. ಇವರು ಮಾಡಿದೆಲ್ಲಾ ಸರಿ ಅಂದಿದ್ರೆ ಇದ್ಯಾವುದು ಮಾಡ್ತಿರಲಿಲ್ಲ ಎಂದು ತಿಳಿಸಿದರು.
ಅಧಿಕಾರ ಇದೆ ಅಂತ ಮಾಡಬೇಡಿ. ರಾಜಕಾರಣದಲ್ಲಿ ಎಲ್ಲರು ಸಾಚಾಗಳಲ್ಲ. ವೈಯಕ್ತಿಕ ಜೀವನವೇ ಬೇರೆನಿಮ್ಮದು ವೈಯಕ್ತಿಕ ಬದುಕಿದೆ ಮುಜುಗರಕ್ಕೀಡಾಗ್ತಿರಾ ಎಂದು ಎಚ್ಚರಿಸಿದ್ದಾರೆ. ಪೇ ಸಿಎಂ ಇರುವ ಕ್ಯೂ ಆರ್ ಇರುವ ಪೋಸ್ಟರ್ ಅಂಟಿಸಿದ್ರು. ಎಲೆಕ್ಷನ್ ನಲ್ಲಿ ಸ್ಮಾರ್ಟ್ ಕಾರ್ಡ್ಗಳನ್ನ ನೀಡಿದ್ದ ಏಜೆನ್ಸಿಯೇ ಇವತ್ತು ಕೆಲಸ ಮಾಡುತ್ತಿದೆ. ಆ ತರ ಏಜೆನ್ಸಿಗಳನ್ನ ಇಟ್ಟುಕೊಂಡು ಕೆಟ್ಟಕೆಲಸ ಮಾಡೋದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.
ತುಮಕೂರು: ಮಾಜಿ ಶಾಸಕ ಮಸಾಲೆ ಜಯರಾಮ್ (Masale Jayaram) ಅವರ ಕಿಸೆಯಿಂದ ಪಿಕ್ ಪಾಕೆಟ್ ಮಾಡಲು ಮುಂದಾವನನ್ನು ಹಿಡಿದು ಗೂಸಾ ಕೊಟ್ಟು ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಬಿ.ವೈ ವಿಜಯೇಂದ್ರ (bY Vijayendra) ಅವರು ಟೆಂಪಲ್ ರನ್ ಮಾಡುತ್ತಿದ್ದಾರೆ. ಅಂತೆಯೇ ಇಂದು ಬೆಳಗ್ಗೆ ಅವರು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದರು. ವಿಜಯೇಂದ್ರ ಅವರು ಮಠಕ್ಕೆ ಹೋಗುತ್ತಿದ್ದಂತೆಯೇ ನೂಕುನುಗ್ಗಲು ಉಂಟಾಯಿತು. ಈ ವೇಳೆ ಕಳ್ಳನೊಬ್ಬ ಪಿಕ್ ಪಾಕೆಟ್ ಮಾಡಲು ಯತ್ನಿಸಿದ್ದಾರೆ.
ವಿಜಯೇಂದ್ರ ಅವರನ್ನು ಬರ ಮಾಡಿಕೊಳ್ಳಲು ಮಸಾಲೆ ಜಯರಾಮ್ ಅವರು ಬಂದಿದ್ದರು. ಈ ನೂಕುನುಗ್ಗಲು ನಡುವೆ ಮಸಾಲೆ ಜಯರಾಮ್ ಕಿಸೆಗೆ ಕಳ್ಳರು ಕತ್ತರಿ ಹಾಕಲು ಹೊರಟಿದ್ದ. ಪಿಕ್ ಪಾಕೆಟ್ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಟವರ್ ಏರಿದ ಯುವತಿಯನ್ನು ‘ಮಗಳೇ ಕೆಳಗಿಳಿ’ ಎಂದ ಪ್ರಧಾನಿ ಮೋದಿ!
ವಿಜಯೇಂದ್ರ ಮಠಕ್ಕೆ ಭೇಟಿ ನೀಡಿ ವಾಪಸ್ ಹೋಗುತ್ತಿರುವಾಗ ಜೇಬಿಗೆ ಕೈ ಹಾಕಿ ಕಂತೆ ಹಣ ಎತ್ತುತ್ತಿರುವುದನ್ನು ಗಮನಿಸಿದ ಹಿಂಬಾಲಕರು ಕಳ್ಳನಿಗೆ ಗೂಸಾ ನೀಡಿದ್ದಾರೆ. ಬಳಿಕ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಧಾರವಾಡ: ಆಪರೇಶನ್ ಹಸ್ತದ ಮಧ್ಯೆ ಧಾರವಾಡದ ಮಾಜಿ ಶಾಸಕ ಅಮೃತ ದೇಸಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
ಧಾರವಾಡದಲ್ಲಿ (Dharwad) ಸುದ್ದಿಗಾರರೊಂದಿಗೆ ಮಾತನಾಡಿರುವ ಮಾಜಿ ಶಾಸಕ ಅಮೃತ ದೇಸಾಯಿ, ಭಾರತೀಯ ಜನತಾ ಪಾರ್ಟಿ ಚಿನ್ಹೆ ಮೇಲೆ ಆರಿಸಿ ಬಂದ ಯಾವೊಬ್ಬ ಅಭ್ಯರ್ಥಿಯೂ ಕಾಂಗ್ರೆಸ್ಗೆ (Congress) ಹೋಗುವುದಿಲ್ಲ. ಅವರು ಪಕ್ಷ ಬಿಡುವುದಿಲ್ಲ, ಕಾಂಗ್ರೆಸ್ನಲ್ಲಿ ಸಾಕಾಗಿಯೇ ಅವರು ಬಿಜೆಪಿಗೆ (BJP) ಬಂದಿದ್ದಾರೆ ಎಂದರು. ಇದನ್ನೂ ಓದಿ: ಗೃಹಜ್ಯೋತಿಗಾಗಿ ಹಣ ಬಿಡುಗಡೆ – ಎಸ್ಕಾಂಗಳು ಕೇಳಿದ್ದು ಎಷ್ಟು? ಸಿಕ್ಕಿದ್ದು ಎಷ್ಟು?
ಮತ್ತೆ ಮರಳಿ ಅವರೇಕೆ ಕಾಂಗ್ರೆಸ್ಗೆ ಹೋಗುತ್ತಾರೆ? ಸಿದ್ದರಾಮಯ್ಯನವರ ಆಡಳಿತದಿಂದ ಬೇಸತ್ತು 40-50ಜನ ಕಾಂಗ್ರೆಸ್ ಶಾಸಕರೇ ಬಿಜೆಪಿಗೆ ಬರುತ್ತಾರೆ ಎಂಬ ಮಾಹಿತಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ ಅವರು, ಈಗ ನಾವು ಇವ್ಯಾವುದನ್ನೂ ಬಹಿರಂಗಪಡಿಸುವುದಿಲ್ಲ. ಈ ಸಮಯ ಸೂಕ್ತವೂ ಅಲ್ಲ. ರೈತರ ಸಮಸ್ಯೆಗಳಿಗೆ ಈ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಹೇಳಿದರು.
ಹಲವಾರು ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಅವುಗಳನ್ನು ಬಿಟ್ಟು ಜನರ ಮರೆಮಾಚುವ ಸಲುವಾಗಿ ಕಾಂಗ್ರೆಸ್ ಅವರು ಕಾಂಗ್ರೆಸ್ಗೆ ಬರುತ್ತಾರೆ ಇವರು ಕಾಂಗ್ರೆಸ್ಗೆ ಬರುತ್ತಾರೆ ಎಂದು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ, ಕಾಂಗ್ರೆಸ್ ಮಾಡುವ ಕೆಲಸ ಬಹಳಷ್ಟಿದೆ ಎಂದ ಅಮೃತ ದೇಸಾಯಿ, ಕಾಂಗ್ರೆಸ್ನವರು ಕೊಟ್ಟ ಗ್ಯಾರಂಟಿಗಳೇ ಬೋಗಸ್ ಇವೆ. ಮಹಿಳೆಯರ ಅಕೌಂಟ್ಗೆ ಹಣ ಹಾಕುತ್ತೇವೆ ಎಂದಿದ್ದರು. ಇದುವರೆಗೂ ಹಣ ಜಮಾ ಆಗಿಲ್ಲ ಎಂದರು.
ಬರಗಾಲದ ಪರಿಸ್ಥಿತಿಯಲ್ಲಿ ರೈತರ ನೆರವಿಗೆ ಬರಬೇಕಿದ್ದ ಸರ್ಕಾರ ಕಾಲಹರಣ ಮಾಡುತ್ತಿದೆ. ಐದು ವರ್ಷ ಕಾಲಹರಣ ಮಾಡಿ ಹೋಗಲು ಈ ಸರ್ಕಾರ ಬಂದಿದೆ. ಬಿಜೆಪಿಯಿಂದ ಯಾರೂ ಕಾಂಗ್ರೆಸ್ಗೆ ಹೋಗುವುದಿಲ್ಲ. 40-50 ಜನ ಶಾಸಕರೇ ಬಿಜೆಪಿಗೆ ಬರಲಿದ್ದಾರೆ ಎಂಬ ಮಾಹಿತಿ ಇದೆ ಎಂದರು.
ಲಕ್ನೋ: ಕಲಿಕೆಗೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಉತ್ತರ ಪ್ರದೇಶದ ಇಬ್ಬರು ಮಾಜಿ ಶಾಸಕರು 50ರ ಹರೆಯದಲ್ಲೂ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೇ ಪದವಿ ಕೋರ್ಸ್ ತೆಗೆದುಕೊಳ್ಳುವ ಗುರಿಯನ್ನೂ ಹೊಂದಿದ್ದಾರೆ.
ಉತ್ತರ ಪ್ರದೇಶ ಬಿಜೆಪಿಯ ಮಾಜಿ ಶಾಸಕ ರಾಜೇಶ್ ಮಿಶ್ರಾ ಅವರು 55ನೇ ವಯಸ್ಸಿನಲ್ಲಿ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 500ರಲ್ಲಿ 263 ಅಂಕಗಳನ್ನು ಗಳಿಸುವ ಮೂಲಕ ತೇರ್ಗಡೆ ಹೊಂದಿದ್ದಾರೆ. 2017 ರಿಂದ 2022 ರವರೆಗೆ ಅಸೆಂಬ್ಲಿಯಲ್ಲಿ ಬರೇಲಿ ಜಿಲ್ಲೆಯ ಬಿತ್ರಿ-ಚೈನ್ಪುರ್ ಸ್ಥಾನವನ್ನು ಪ್ರತಿನಿಧಿಸಿದ್ದ ಮಿಶ್ರಾ, ಈಗ ಬಡವರಿಗೆ ಸಹಾಯ ಮಾಡಲು ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಯೋಜಿಸಿದ್ದಾರೆ. ಈ ಹಿನ್ನೆಲೆಯಲ್ಲಿ 12ನೇ ತರಗತಿಯ ಪರೀಕ್ಷೆಯನ್ನು ಬರೆದಿದ್ದರು.
ಈ ಬಗ್ಗೆ ಮಾತನಾಡಿರುವ ಬಿಜೆಪಿಯ ಮಾಜಿ ಶಾಸಕ , ಡ್ರಾಯಿಂಗ್, ಸಿವಿಕ್ಸ್ ಮತ್ತು ಶಿಕ್ಷಣದಲ್ಲಿ ನಾನು ಪಡೆದ ಅಂಕಗಳಿಂದ ತೃಪ್ತಿ ಹೊಂದಿಲ್ಲ. ನಾನು ಉತ್ತರ ಪತ್ರಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.
ಎರಡು ವರ್ಷಗಳ ಹಿಂದೆ, ನಾನು 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ತೇರ್ಗಡೆ ಹೊಂದಿದ್ದೇನೆ. ಈಗ ನಾನು 12ನೇ ತರಗತಿ ಪರೀಕ್ಷೆಯಲ್ಲಿಯೂ ಉತ್ತೀರ್ಣನಾಗಿದ್ದೇನೆ. ಈಗ, ನಾನು ಎಲ್ಎಲ್ಬಿಯನ್ನು ಮುಂದುವರಿಸಲು ಬಯಸುತ್ತೇನೆ. ಇದರಿಂದ ಬಡವರಿಗೆ ನ್ಯಾಯ ಪಡೆಯಲು ನಾನು ಸಹಾಯ ಮಾಡುತ್ತೇನೆ ಎಂದು ಹೇಳಿದರು.
ನಾನು ಶಾಸಕನಾಗಿದ್ದಾಗ, ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಉತ್ತಮ ವಕೀಲರ ಸೇವೆಯನ್ನು ಪಡೆಯಲು ಸಾಧ್ಯವಾಗದ್ದನ್ನು ಗಮನಿಸಿದ್ದೆ. ಇದರಿಂದಾಗಿ ಅವರಿಗೆ ನ್ಯಾಯ ಸಿಗುವುದಿಲ್ಲ ಎಂದು ನಾನು ಅರಿತುಕೊಂಡೆ. ಈ ಹಿನ್ನೆಲೆಯಲ್ಲಿ ನಾನು ವಕೀಲನಾಗುತ್ತೇನೆ ಎಂದ ಅವರು, ಬೋರ್ಡ್ ಪರೀಕ್ಷೆಗಳಲ್ಲಿ ಯಾವುದೇ ನಕಲು ನಡೆದಿಲ್ಲ ಮತ್ತು ತಪಾಸಣೆ ಕಟ್ಟುನಿಟ್ಟಾಗಿದೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ: ಶೆಟ್ಟರ್ ಅರ್ಥ ಮಾಡಿಕೊಳ್ಳಲು ಆಗಲಿಲ್ಲ, ಫೇಲ್ ಆದೆ: ಜೋಶಿ
ಪರೀಕ್ಷೆಯಲ್ಲಿ ಯಾವುದೇ ನಕಲು ನಡೆಯದಂತೆ 8,753 ಪರೀಕ್ಷಾ ಕೇಂದ್ರಗಳಲ್ಲಿ ವೈಸ್ ರೆಕಾರ್ಡರ್ಗಳೊಂದಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪ್ರೌಢ ಶಿಕ್ಷಣ ನಿರ್ದೇಶಕ ಮಹೇಂದ್ರ ದೇವ್ ಮಂಗಳವಾರ ತಿಳಿಸಿದ್ದಾರೆ.
ಪಾಟ್ನಾ: ಬಿಹಾರದಲ್ಲಿ (Bihar) ಮಹಿಳೆಯೊಬ್ಬರ ಮೇಲೆ ಅತ್ಯಾಚಾರ (Rape) ಎಸಗಿ ವೀಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಐಎಎಸ್ ಅಧಿಕಾರಿ (IAS Officer) ಹಾಗೂ ಮಾಜಿ ಶಾಸಕನ (Ex MLA) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
2021 ರಲ್ಲಿ ದೆಹಲಿಯ ಹೋಟೆಲ್ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ಮಹಿಳೆ ದೂರಿದ್ದರು. ಐಎಎಸ್ ಅಧಿಕಾರಿ, ಮಾಜಿ ಶಾಸಕನ ವಿರುದ್ಧ ಆರೋಪ ಹೊರಿಸಲಾಗಿದೆ. ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಗಂಭೀರ ಆರೋಪ ಹೊರಿಸಲಾಗಿದೆ.
ಸಂತ್ರಸ್ತೆ ಮೊದಲು ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಸಂತ್ರಸ್ತೆ ಪಾಟ್ನಾ ಹೈಕೋರ್ಟ್ನ ಬಾಗಿಲು ತಟ್ಟಿದ್ದು, ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸದ ಪಾಟ್ನಾ ಪೊಲೀಸರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಸಿವಿಲ್ ನ್ಯಾಯಾಲಯವು ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸುವಂತೆ ಸೂಚಿಸಿತು. ಈ ವಿಚಾರದಲ್ಲಿ ನಿರಾಸಕ್ತಿ ವಹಿಸಿದ್ದ ಪಾಟ್ನಾ ಪೊಲೀಸರಿಗೆ ಎಚ್ಚರಿಕೆಯನ್ನೂ ನೀಡಿದೆ. ಇದನ್ನೂ ಓದಿ: ಮದುವೆಯಾಗಲು ಹೆಣ್ಣು ಹುಡುಕಿಕೊಡುವಂತೆ ಯುವಕ ಕರೆ- ಡಿಟೇಲ್ಸ್ ಕಳುಹಿಸು ಅಂದ್ರು ಶಾಸಕ
ಆಗ ಶಾಸಕನಾಗಿದ್ದ ಗುಲಾಬ್ ಯಾದವ್, ಮಹಿಳಾ ಆಯೋಗದ ಸದಸ್ಯೆ ಮಾಡುವುದಾಗಿ ಭರವಸೆ ನೀಡಿ ಪಾಟ್ನಾದ ತನ್ನ ನಿವಾಸದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಅದನ್ನು ವೀಡಿಯೋ ಮಾಡಿಕೊಂಡು ಆಕೆಗೆ ಬ್ಲ್ಯಾಕ್ಮೇಲ್ ಮಾಡಿದ್ದ. ಮತ್ತೆ ಆಕೆಯನ್ನು ದೆಹಲಿಗೆ ಕರೆಸಿಕೊಂಡು ತಾನು ಹಾಗೂ ಐಎಎಸ್ ಅಧಿಕಾರಿ ಇಬ್ಬರೂ ಅತ್ಯಾಚಾರ ಎಸಗಿದ್ದರು.
Live Tv
[brid partner=56869869 player=32851 video=960834 autoplay=true]
ಗದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್.ಎನ್.ಪಾಟೀಲ (81) ಇಂದು ಬೆಳಗಿನ ಜಾವ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ನಕಲಿ ಡಾಕ್ಟರ್ ಎಡವಟ್ಟು – ಜ್ವರ ಎಂದು ಹೋದ ಮಹಿಳೆ ಕಾಲಿಗೆ ಗಂಡಾಂತರ
ಸರಳ, ಸಜ್ಜನಿಕೆ, ನೇರ-ನಿಷ್ಠುರ ವ್ಯಕ್ತಿತ್ವ ಹೊಂದಿದ್ದ ಎಸ್.ಎನ್.ಪಾಟೀಲ (S.N.Patil) ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿ ಅಪಾರ ಬಂಧುಗಳನ್ನು ಅಗಲಿದ್ದಾರೆ. 1989-1994 ರ ಅವಧಿಯಲ್ಲಿ ಕಾಂಗ್ರೆಸ್ನಿಂದ (Congress) ಪಾಟೀಲ ಅವರು ಶಾಸಕರಾಗಿದ್ದರು. ಎಲ್ಲಾ ಪಕ್ಷಗಳ ನಾಯಕರ ಜೊತೆ ಅನ್ಯೂನ್ಯವಾಗಿದ್ದರು.
Live Tv
[brid partner=56869869 player=32851 video=960834 autoplay=true]
1983 ರಲ್ಲಿ ಜನತಾಪರಿವಾರದಿಂದ ಗೆಲುವು ಸಾಧಿಸಿದ್ದರು. 1985 ರಲ್ಲಿ ಪಕ್ಷೇತರವಾಗಿ ಗೆದ್ದಿದ್ದರು. 1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಜಯ ಸಾಧಿಸಿದ್ದರು. ಆದರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆ.ಕೆಂಪೇಗೌಡ ಅವರು ಹಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.
ಪಾಟ್ನಾ: ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿ, 24 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಉತ್ತರ ಪ್ರದೇಶ ಹಾಗೂ ಬಿಹಾರದ ಪೊಲೀಸರು ಜಂಟಿಯಾಗಿ ಆರೋಪಿಯನ್ನು ಭಾರತ-ನೇಪಾಳ ಗಡಿ ಭಾಗದಲ್ಲಿ ಸೆರೆ ಹಿಡಿದಿದ್ದಾರೆ.
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಗೋವಿಂದಗಂಜ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರಂಜನ್ ತಿವಾರಿ 1998ರಲ್ಲಿ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದ. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆಗೆ 25,000 ರೂ. ಬಹುಮಾನವನ್ನು ಘೋಷಿಸಲಾಗಿತ್ತು. ಆದರೆ 2 ದಶಕಗಳವರೆಗೂ ಆರೋಪಿಯ ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಕೊಡಗು ಎಸ್ಪಿಗೆ ಯಾವ ರೋಗ ಬಂದಿತ್ತು: ಸಿದ್ದರಾಮಯ್ಯ ವಾಗ್ದಾಳಿ
ಆರೋಪಿ ರಕ್ಸಾಲ್ ಮೂಲಕ ಕಠ್ಮಂಡುವಿಗೆ ಪಲಾಯನ ಮಾಡಲು ಯತ್ನಿಸುತ್ತಿದ್ದುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿರುದ್ಧ ಬಿಹಾರದಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೂರ್ವ ಚಂಪಾರಣ್ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ. ಇದನ್ನೂ ಓದಿ: ಟಿಎಂಸಿ ನಾಯಕನಿಗೆ ಶೂನಲ್ಲಿ ಹೊಡೆಯುತ್ತೇವೆ: ವಿವಾದ ಸೃಷ್ಟಿಸಿದ ದಿಲೀಪ್ ಘೋಷ್ ಹೇಳಿಕೆ
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆರ್ಲಗುಂಟೆ ಎನ್. ತಿಪ್ಪೇಸ್ವಾಮಿ ಪುತ್ರ ಶಿವಕುಮಾರ್ ಅವರು ಅಕಾಲಿಕ ಸಾವಿಗೆ ತುತ್ತಾಗಿದ್ದಾರೆ. 32 ವರ್ಷದ ಶಿವಕುಮಾರ್ ಅವರು ನಿಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ಬೆಂಗಳೂರು ಸೇರಿದಂತೆ ಮತ್ತಿತರರ ಕಡೆಗಳಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ; ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ
ಮಾಜಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಶಿವಕುಮಾರ್ ಹಾಗೂ ಓರ್ವ ಸುಪುತ್ರಿ ಇದ್ದರು. ಇಪ್ಪತ್ತು ವರ್ಷಗಳ ಹಿಂದೆ ಮಗಳು ಸಹ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಇವರ ಬಲಗೈ ಆಗಿದ್ದಂತಹ ಪುತ್ರ ಶಿವಕುಮಾರ್ ತಂದೆಯ ರಾಜಕೀಯ ಭವಿಷ್ಯಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಎಲ್ಲಾ ಚುನಾವಣೆಗಳಲ್ಲೂ ತಂದೆಯ ವಾರಿಸುದಾರರಾಗಿ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿ ಶಿವಣ್ಣ ಅಂತ ಖ್ಯಾತಿಯಾಗಿದ್ದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಿದ ಕಾರಣ ಎನ್. ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಶ್ರೀರಾಮುಲು ವಿರುದ್ಧ ಅತ್ಯಧಿಕ ಮತಗಳಿಂದ ಸೋಲು ಅನುಭವಿಸಿದ್ದರು. ಆಗ ತಮ್ಮ ತಂದೆಯ ಪರ ತಮ್ಮ ಜೀವದ ಹಂಗು ತೊರೆದು ಚುನಾವಣೆ ಎದುರಿಸಿದ್ದರು.
ಇತ್ತೀಚಿನ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ತಮ್ಮ ತಂದೆಯವರಿಗೆ ಬೆನ್ನುಲುಬಾಗಿದ್ದ ಶಿವಕುಮಾರ್ ಅನುಪಸ್ಥಿತಿಯು ಮಾಜಿ ಶಾಸಕ ತಿಪ್ಪೇಸ್ವಾಮಿಯವರಿಗೆ ತುಂಬಲಾರದ ನಷ್ಟ ಎನಿಸಿದೆ.ಮೃತರ ಅಂತ್ಯ ಕ್ರಿಯೆ ನಾಳೆ ಅವರ ಸ್ವಗ್ರಾಮ ನೇರಲುಗುಂಟೆಯಲ್ಲಿ ನಡೆಯಲಿದೆ.
Live Tv
[brid partner=56869869 player=32851 video=960834 autoplay=true]