Tag: ಮಾಜಿ ಶಾಸಕ ಸುರೇಶ್ ಗೌಡ

  • ಸಾಮಾಜಿಕ ಅಂತರ ಮರೆತು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಿಜೆಪಿ ಮಾಜಿ ಶಾಸಕ!

    ಸಾಮಾಜಿಕ ಅಂತರ ಮರೆತು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡ ಬಿಜೆಪಿ ಮಾಜಿ ಶಾಸಕ!

    ತುಮಕೂರು: ಕೊರೊನಾ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗಿದ್ದ ಮಾಜಿ ಶಾಸಕರೊಬ್ಬರು ನಿಯಮಗಳನ್ನು ಮರೆತು ಸಂಭ್ರಮಾಚರಣೆ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಸಾಮಾಜಿ ಅಂತರ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

    ತುಮಕೂರಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆ ಇಂದು ನಿಗದಿಯಾಗಿತ್ತು. ಚುನಾವಣೆಯಲ್ಲಿ ಬಿಜೆಪಿಯ ಕವಿತಾ ರಮೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಅವರು ಸಂಭ್ರಮಾಚರಣೆ ಮಾಡಿದ್ದರು. ಇದನ್ನು ಕಂಡು ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸಲು ಮನವಿ ಮಾಡಿದ ಎಸ್‍ಐ ಮಂಜುನಾಥ್ ಅವರ ಮೇಲೂ ಮಾಜಿ ಶಾಸಕರು ಗರಂ ಆಗಿದ್ದರು.

    ಮಾಜಿ ಶಾಸಕ ಸುರೇಶ್ ಗೌಡ ಮತ್ತು ಅವರ ಕಾರ್ಯಕರ್ತರು ಜೊತೆಗೆ ಸೇರಿ ಜೈಕಾರವನ್ನು ಕೂಗಿ ಸಾಮಾಜಿಕ ಅಂತರ ಮರೆದು ಗುಂಪುಗೂಡಿದ್ದರು. ಸಾಮಾಜಿಕ ಅಂತರವನ್ನ ಮರೆತು ಗುಂಪು ಗುಂಪಾಗಿ ನಿಂತು ಸಂಭ್ರಮಾಚರಣೆ ಮಾಡಿದ್ದು ಅಲ್ಲದೇ ಹಲವರು ಮಾಸ್ಕ್ ಧರಿಸದೆ ಇರುವುದು ಕಂಡು ಬಂದಿತ್ತು.

    ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಸರ್ಕಾರ, ಸಾರ್ವಜನಿಕರು ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣ ಮಾಡುವುದರ ಬಗ್ಗೆ ಚಿಂತನೆ ನಡೆಸಿದೆ. ಆದರೆ ಈ ಬಗ್ಗೆ ಸ್ವಯಂ ಜವಾಬ್ದಾರಿ ವಹಿಸಿಕೊಂಡು ತಮ್ಮ ಹಿಂಬಾಲಕರಿಗೆ ಮಾದರಿಯಾಗ ಬೇಕಿದ್ದ ಮಾಜಿ ಶಾಸಕರು ಮಾತ್ರ ತಮ್ಮ ಕರ್ತವ್ಯವನ್ನು ಮರೆತಿದ್ದರು. ಈಗಾಗಲೇ ಕೊರೊನಾ ಸಮುದಾಯದ ಹಂತಕ್ಕೆ ತಲುಪಿರುವ ಅನುಮಾನಗಳು ವ್ಯಕ್ತವಾಗುತ್ತಿದ್ದು, ಇಂತಹ ಸಂಭ್ರಮಾಚರಣೆಗಳಿಂದ ಮತ್ತಷ್ಟು ಮಂದಿಗೆ ಸೋಂಕು ಹರಡುವ ಸಾಧ್ಯತೆ ಇದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

  • ಕುರುಬ ಸಮುದಾಯದ ಕ್ಷಮೆ ಕೋರಿದ ಮಾಜಿ ಶಾಸಕ ಸುರೇಶ್ ಗೌಡ

    ಕುರುಬ ಸಮುದಾಯದ ಕ್ಷಮೆ ಕೋರಿದ ಮಾಜಿ ಶಾಸಕ ಸುರೇಶ್ ಗೌಡ

    ತುಮಕೂರು: ನಾನು ಕುರುಬ ಸಮುದಾಯಕ್ಕೆ 420 ಎಂದು ಹೇಳಿಲ್ಲ. ಪುಟ್ಟರಾಜು ಎಂಬ ಪೇದೆ 420 ಕೆಲಸ ಮಾಡುತ್ತೇನೆ ಎಂದು ಹೇಳಿದ್ದೆ ಅಷ್ಟೇ ಎಂದು ಮಾಜಿ ಶಾಸಕ ಸುರೇಶ್ ಗೌಡ ಅವರ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ನನ್ನ ಹೇಳಿಕೆಯಿಂದ ಕುರುಬ ಸಮುದಾಯದವರಿಗೆ ನೋವಾಗಿದರೆ ವಿಷಾದಿಸುತ್ತೇನೆ ಎಂದಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷಮೆ ಕೇಳುವುದರಿಂದ ನಾನು ಚಿಕ್ಕವನಾಗಲ್ಲ, ದೊಡ್ಡವನೂ ಆಗಲ್ಲ ಎಂದರು. ಅಲ್ಲದೇ ಕುರುಬ ಸಮುದಾಯದ ಮುಖಂಡರೊಂದಿಗೆ ಸುದ್ದಿಗೋಷ್ಠಿ ನಡೆಸಿ, ನಾನು ಕುರುಬ ಸಮುದಾಯಕ್ಕೆ 420 ಎಂದು ಹೇಳಿಲ್ಲ, ವ್ಯಕ್ತಿ ಕೇಂದ್ರಿಕೃತವಾಗಿ ಹೇಳಿದ್ದೇನೆ ಅಷ್ಟೇ ಎಂದರು.

    ಸಾಮಾಜಿಕ ಜಾಲತಾಣದಲ್ಲಿ ನನ್ನ ವಿಡಿಯೋವನ್ನು ತಿರುಚಿ ನನ್ನ ಮೇಲೆ ಈ ರೀತಿ ವಿಡಿಯೋ ವೈರಲ್ ಮಾಡಲಾಗಿದೆ. ಅಲ್ಲದೇ ಒಂದು ಸಮುದಾಯವನ್ನು ನನ್ನ ವಿರುದ್ಧ ಮಾಡಲಾಗಿದೆ. ಆದರೆ ಕ್ಷಮೆ ಕೇಳುವುದು, ಸಾಮಾಜಿಕ ಜೀವನದಲ್ಲಿ ಇರುವುದಕ್ಕೆ ಯಾವುದೇ ರೀತಿ ಕುಂದಾಗುವುದಿಲ್ಲ. ಕ್ಷಮೆ ಕೇಳುವುದು ರಾಜ ಧರ್ಮ. ಆದ್ದರಿಂದಲೇ ಕ್ಷಮೆ ಕೇಳುತ್ತಿದ್ದೇನೆ ಎಂದರು.

    ವ್ಯಕ್ತಿಯ ಹೆಸರು ಗೊತ್ತಿಲ್ಲದ ಹಿನ್ನೆಲೆಯಲ್ಲಿ ನಾನು ಸಮುದಾಯವನ್ನು ಪ್ರಸ್ತಾಪ ಮಾಡಿದ್ದೇ. 10 ವರ್ಷ ಶಾಸಕನಾಗಿ ಸೇವೆ ಮಾಡಲು ನನಗೆ ಕ್ಷೇತ್ರದ ಜನತೆ ಅವಕಾಶ ನೀಡಿದ್ದರು. ಆದರೆ ನಿನ್ನೆಯ ಘಟನೆ ಪೊಲೀಸ್ ಇಲಾಖೆಯ ದುರುಪಯೋಗದ ಬಗ್ಗೆಯಷ್ಟೇ ನಾನು ಗಮನ ಸೆಳೆಯಲು ಮಾತನಾಡಿದ್ದೆ. ಆದ್ದರಿಂದ ಈ ವಿಚಾರವನ್ನು ಉನ್ನತ ಮಟ್ಟದ ತನಿಖೆ ನಡೆಸುವವರೆಗೂ ಕೊಂಡ್ಯೊಯುತ್ತೇನೆ ಎಂದರು.

    ಹಾಲಿ ಹಾಗೂ ಮಾಜಿ ಶಾಸಕರ ನಡುವಿನ ಫೈಟ್‍ನಲ್ಲಿ ಮಾಜಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದ್ದರು. ಈ ಹಂತದಲ್ಲಿ ಅವರು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಕೆಲ ದಿನಗಳ ಹಿಂದೆಯಷ್ಟೇ ಶಾಸಕ ಗೌರಿಶಂಕರ್ ಹಾಗೂ ಸುರೇಶ್ ಗೌಡ ಅವರು ಆರೋಪ ಪ್ರತ್ಯಾರೋಪ ಮಾಡಿಕೊಂಡು ಕೆಲ ಅಧಿಕಾರಗಳ ವಿರುದ್ಧ ದೂರು ನೀಡಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಹಾಲಿ, ಮಾಜಿ ಶಾಸಕರ ಹೈ ಡ್ರಾಮಾಕ್ಕೆ ಹೈರಾಣಾದ ಅಧಿಕಾರಿಗಳು

    ಹಾಲಿ, ಮಾಜಿ ಶಾಸಕರ ಹೈ ಡ್ರಾಮಾಕ್ಕೆ ಹೈರಾಣಾದ ಅಧಿಕಾರಿಗಳು

    ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಹಾಗೂ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಅವರ ಹೈಡ್ರಾಮಾಕ್ಕೆ ಅಧಿಕಾರಿಗಳು ಇಂದು ಹೈರಾಣಾಗಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗೌರಿಶಂಕರ್ ಹಾಗೂ ಸುರೇಶ್ ಗೌಡ ಅವರು ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಧಿಕಾರಿಗಳ ವಿರುದ್ಧವು ಗುಡುಗಿ, ದೂರು ನೀಡಿದ್ದಾರೆ.

    ಬೆಳಗುಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್‍ಗಳಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರಿಗೆ ಕಡಿಮೆ ಮತ ಬಂದಿವೆ. ಹೀಗಾಗಿ ಶಾಸಕ ಗೌರಿಶಂಕರ್ ಅವರು ಬೆಳಗುಂಬ ಬೂತ್ ವ್ಯಾಪ್ತಿಯ ಜನರ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಗರ್ ಹುಕುಂನಲ್ಲಿ ಕೆಲವರಿಗೆ ಮಂಜೂರಾದ ಜಮೀನನ್ನು ಶಾಸಕರು ರದ್ದುಪಡಿಸುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಸುರೇಶ್ ಗೌಡ ಆರೋಪಿಸಿದ್ದಾರೆ.

    ಈ ಸಂಬಂಧ ನೂರಾರು ಸಂಖ್ಯೆಯಲ್ಲಿ ಬಗರ್ ಹುಕುಂ ಫಲಾನುಭವಿಗಳ ಜೊತೆಗೆ ಮಾಜಿ ಶಾಸಕ ಸುರೇಶ್ ಗೌಡ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಬಳಿಕ ಶಾಸಕ ಗೌರಿಶಂಕರ್ ವಿರುದ್ಧ ದೂರು ನೀಡಿದರು.

    ಸುರೇಶ್ ಗೌಡ ಅವರ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ಕಚೇರಿಗೆ ನೂರಾರು ಜನ ಬೆಂಬಲಿಗರೊಂದಿಗೆ ಶಾಸಕ ಗೌರಿಶಂಕರ್ ಆಗಮಿಸಿದರು. ಈ ವೇಳೆ ಶಾಸಕರು, ಸುರೇಶ್ ಗೌಡರ ಅಧಿಕಾರ ಅವಧಿಯಲ್ಲಿ ಬಗರ್ ಹುಕುಂ ಜಮೀನು ಮಂಜೂರು ಮಾಡುವಲ್ಲಿ ಅಕ್ರಮ ನಡೆದಿದೆ. ಈ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

    ಶಾಸಕ ಗೌರಿಶಂಕರ್ ಹಾಗೂ ಮಾಜಿ ಶಾಸಕ ಸುರೇಶ್ ಗೌಡ ಅವರ ಮಧ್ಯೆ ಕಳೆದ ಒಂದು ವರ್ಷದಿಂದಲೂ ಸಣ್ಣಪುಟ್ಟ ವಿಚಾರಕ್ಕೂ ಫೈಟ್ ನಡೆಯುತ್ತಿದೆ. ಇದು ದಿನದಿಂದ ದಿನಕ್ಕೆ ಅತಿರೇಕಕ್ಕೆ ಹೋಗುತ್ತಿದೆ. ಆದರೆ ಹಾಲಿ, ಮಾಜಿಗಳ ಕಿತ್ತಾಟದಿಂದ ಅಧಿಕಾರಿಗಳು ಹೈರಾಣಾಗುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

  • ಎಚ್‍ಡಿಡಿಗೆ ಗಂಗೆ ಶಾಪವಿದ್ದು, ತುಮಕೂರಿನಿಂದ ಸ್ಪರ್ಧೆ ಮಾಡಿದ್ರೆ ಸೋಲು ಗ್ಯಾರಂಟಿ: ಮಾಜಿ ಶಾಸಕ

    ಎಚ್‍ಡಿಡಿಗೆ ಗಂಗೆ ಶಾಪವಿದ್ದು, ತುಮಕೂರಿನಿಂದ ಸ್ಪರ್ಧೆ ಮಾಡಿದ್ರೆ ಸೋಲು ಗ್ಯಾರಂಟಿ: ಮಾಜಿ ಶಾಸಕ

    ತುಮಕೂರು: ಮಾಜಿ ಪ್ರಧಾನಿ ದೇವೇಗೌಡರಿಗೆ ಗಂಗೆ ಶಾಪ ಇದ್ದು ತುಮಕೂರಿನಿಂದ ಅವರು ಸ್ಪರ್ಧೆ ಮಾಡಿದರೆ ಅವರ ಸೋಲು ಗ್ಯಾರಂಟಿ ಎಂದು ತುಮಕೂರು ಬಿಜೆಪಿ ಸಂಭಾವ್ಯ ಅಭ್ಯರ್ಥಿ ಮಾಜಿ ಶಾಸಕ ಸುರೇಶ್ ಗೌಡ ಭವಿಷ್ಯ ನುಡಿದಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿದ ಸುರೇಶ್ ಗೌಡರು, ದೇವೇಗೌಡರಿಗೆ ಗಂಗೆ ಶಾಪ ಇರೋದಾಗಿ ಈಗಾಗಲೇ ಜ್ಯೋತಿಷಿಗಳು ಹೇಳಿದ್ದಾರೆ. ಈ ವಿಚಾರ ಸ್ವತಃ ದೇವೇಗೌಡರಿಗೆ ಗೊತ್ತು. ಈ ಶಾಪ ಹೊತ್ತುಕೊಂಡು ದೇವೇಗೌಡರು ತುಮಕೂರಿನಿಂದ ಸ್ಪರ್ಧೆ ಮಾಡಿದರೆ ಅವರ ಸೋಲು ಕಟ್ಟಿಟ್ಟ ಬುತ್ತಿ ಎಂದು ಸುರೇಶ್ ಗೌಡ ಪ್ರತಿಕ್ರಿಯಿಸಿದ್ದಾರೆ.

    ತುಮಕೂರು ಜಿಲ್ಲೆಗೆ ಹೇಮಾವತಿ ನೀರು ನೀಡದೆ ದೇವೇಗೌಡರು ವಂಚಿಸಿದ್ದಾರೆ. ಲಕ್ಷಾಂತರ ರೈತರ ಕಣ್ಣೀರ ಶಾಪದಿಂದಾಗಿ ಮಾತೆ ಗಂಗೆ ದೇವೇಗೌಡರ ಮೇಲೆ ಶಾಪ ಕೊಟ್ಟಿದ್ದಾಳೆ. ಹಾಗಾಗಿ ತೂಮಕೂರಿನಿಂದ ಸ್ಪರ್ಧೆ ಮಾಡಿದರೆ ಶಾಪದಿಂದಾಗಿ ಅವರ ಸೋಲು ಗ್ಯಾರಂಟಿ ಎಂದು ಸುರೇಶ್ ಗೌಡ ಹೇಳಿದ್ದಾರೆ.

    ಅಲ್ಲದೆ ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್ ಸಂಭಾವ್ಯ ಅಭ್ಯರ್ಥಿ ಪಟ್ಟಿಯ ನನ್ನ ಹೆಸರೂ ಇದೆ. ಸಾಮಾಜಿಕ ಜಾಲತಾಣದಲ್ಲಿ ನಡೆದ ಸರ್ವೆಯಲ್ಲಿ ನನ್ನ ಪರ ಒಲವು ತೋರಿದ್ದಾರೆ. ಅದರ ಜೊತೆಗೆ ನಾನು ಯಡಿಯೂರಪ್ಪ ನವರ ಶಿಷ್ಯ ಎನ್ನುವುದು ಜನರಿಗೆ ಗೊತ್ತು. ಹಾಗಾಗಿ ಟಿಕೆಟ್ ತಮಗೇ ಅಂತಿಮವಾಗುತ್ತೆ ಎಂದು ಸುರೇಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv