Tag: ಮಾಜಿ ಶಾಸಕ

  • ಮಾಜಿ ಶಾಸಕರ ಕಾರು ಡಿಕ್ಕಿ- ಬಾಲಕ ಸಾವು

    ಮಾಜಿ ಶಾಸಕರ ಕಾರು ಡಿಕ್ಕಿ- ಬಾಲಕ ಸಾವು

    ಕೊಪ್ಪಳ: ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಮುಕ್ಕುಂಪಿ ಗ್ರಾಮದ ಬಳಿ ನಡೆದಿದೆ.

     

    ಮುಕ್ಕುಂಪಿ ಗ್ರಾಮದ 12 ವರ್ಷದ ಬಾಲಕ ಬಸವರಾಜ ಮೃತ ಬಾಲಕ. ಈತ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ವತಃ ಶಾಸಕರೇ ತಮ್ಮ ಕಾರ್ ನಲ್ಲಿ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ವಾಹನ ಗಮನಿಸದೇ ರಸ್ತೆ ದಾಟಿದ್ದು ಘಟನೆಗೆ ಕಾರಣ ಎನ್ನಲಾಗಿದೆ.

    ಚಿಕಿತ್ಸೆಗಾಗಿ ಬಾಲಕನನ್ನು ಕರೆ ತಂದಿದ್ದ ಗಂಗಾವತಿ ಸರ್ಕಾರಿ ಆಸ್ಪತ್ರೆ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಾಜಿ ಶಾಸಕ ಶಿವರಾಮೇಗೌಡರ ಮಗ್ಳ ಮದುವೆಗೆ ಮಂಡ್ಯದಿಂದ 216 KSRTC ಬಸ್!

    ಮಾಜಿ ಶಾಸಕ ಶಿವರಾಮೇಗೌಡರ ಮಗ್ಳ ಮದುವೆಗೆ ಮಂಡ್ಯದಿಂದ 216 KSRTC ಬಸ್!

    ಮಂಡ್ಯ: ಜಿಲ್ಲೆಯ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಶಿವರಾಮೇಗೌಡ ಅವರ ಮಗಳ ಮದುವೆ ಇಂದು ನಡೆಯಲಿದೆ.

    ಬುಧವಾರ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಿವರಾಮೇಗೌಡರ ಪುತ್ರಿ ಭವ್ಯ ಮತ್ತು ರಾಜೀವ್ ಮದುವೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕರು ಮಂಡ್ಯ ವಿಭಾಗದಿಂದ ಸುಮಾರು 216 ಕೆ ಎಸ್ ಆರ್ ಟಿಸಿ ಬಸ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ಮಂಡ್ಯ, ನಾಗಮಂಗಲ, ಮಳವಳ್ಳಿ, ಪಾಂಡವಪುರ, ಕೆ ಆರ್ ಪೇಟೆ, ಮದ್ದೂರು, ಚನ್ನರಾಯಪಟ್ಟಣ ಹಾಗೂ ತುರುವೆಕೆರೆ ಡಿಪೋಗಳಿಂದ ಬಸ್ ಗಳು ಇಂದು ಮುಂಜಾನೆ ಸುಮಾರು 5 ಗಂಟೆಯಿಂದಲೇ ಬೆಂಗಳೂರಿನತ್ತ ಹೊರಟಿವೆ. ಇನ್ನು ಬಸ್ ಗಳ ಜೊತೆ ನೂರಾರು ಕಾರುಗಳಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

    ನಾಗಮಂಗಲ ತಾಲೂಕಿನ ಹಳ್ಳಿಗಳಿಂದ ಮಗಳ ಮದುವೆಗೆ ಬರುವವರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಏಕಕಾಲಕ್ಕೆ ಸುಮಾರು 216 ಬಸ್ ನೀಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ಇಂದು ಮಂಡ್ಯ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ ಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಗಳಿವೆ.

    ಬಾಡಿಗೆ ಪಡೆದು ಏಕಕಾಲಕ್ಕೆ ಬೃಹತ್ ಪ್ರಮಾಣದ ಬಸ್ ಮದುವೆಗೆ ನೀಡಿದ್ದರಿಂದ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಶಿವರಾಮೇಗೌಡರು ಇಲಾಖೆಯ ಲಾಭದ ಜೊತೆಗೆ ಸಾರ್ವಜನಿಕರ ಹಿತ ಮರೆತರಾ ಎಂಬ ಚರ್ಚೆ ಇದೀಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

    ಈ ಹಿಂದೆ ಮಾಜಿ ಸಚಿವ ಜನಾರ್ದನ ರೆಡ್ಡಿ ಮಗಳ ಮದುವೆಗೆ ಮಾಡಿಸಿದ್ದ ವಿಶೇಷ ಆಹ್ವಾನ ಪತ್ರಿಕೆ ಮಾದರಿಯಲ್ಲೇ ಶಿವರಾಮೇಗೌಡ ಅವರು ತಮ್ಮ ಮಗಳ ಮದುವೆಗೆ ವಿಡಿಯೋ ಹಾಡೊಂದನ್ನು ಮಾಡಿಸಿದ್ದಾರೆ. ಹಾಡು, ಡ್ಯಾನ್ಸ್, ಗೀತೆ ಸಂಯೋಜನೆಯೊಂದಿಗೆ ವಿಶೇಷ ಡಿಜಿಟಲೈಸ್ಡ್ ಚಿತ್ರೀಕರಣ ಮಾಡಲಾಗಿದೆ. ವಿಡಿಯೋದಲ್ಲಿ ಶಿವರಾಮೇಗೌಡರ ಕುಟುಂಬ ಸದಸ್ಯರು ಕಾಣಿಸಿಕೊಂಡಿದ್ದು, ಮದುವೆಗೆ ವಿಶೇಷ ಆಹ್ವಾನ ಕೋರಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    https://www.youtube.com/watch?v=DFbodv3fXdw

  • ಮಾಜಿ ಶಾಸಕರಿಗೂ ಬೇಕಂತೆ ನಿವೃತ್ತಿ ವೇತನ ಹೆಚ್ಚಳ

    ಮಾಜಿ ಶಾಸಕರಿಗೂ ಬೇಕಂತೆ ನಿವೃತ್ತಿ ವೇತನ ಹೆಚ್ಚಳ

    ಬೆಂಗಳೂರು: ರಾಜ್ಯದ ಮಾಜಿ ಶಾಸಕರು ತಮ್ಮ ನಿವೃತ್ತಿ ವೇತನವನ್ನು ಹೆಚ್ಚಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    5 ರಿಂದ 10 ಸಾವಿರ ರೂ. ನಿವೃತ್ತಿ ವೇತನ ಹೆಚ್ಚಿಸಿ ಎಂದು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ನಮಗೂ ಮದುವೆ, ಮುಂಜಿ ಅಂತಹ ಕಾರ್ಯಕ್ರಮಗಳು ಕಡಿಮೆ ಆಗಿಲ್ಲ. ಜನರ ಭೇಟಿ ನಿಂತಿಲ್ಲ ಎಂದು ಮಾಜಿ ಶಾಸಕರು ಹೇಳುತ್ತಾರೆ. ಈಗ ಕೊಡುತ್ತಿರುವ ನಿವೃತ್ತಿ ವೇತನ ಸಾಕಾಗುತ್ತಿಲ್ಲ. 40 ಸಾವಿರ ನಿವೃತ್ತಿ ವೇತನಕ್ಕೆ ಐದರಿಂದ ಹತ್ತು ಸಾವಿರ ಸೇರಿಸಿ ಎಂದು ಆಗ್ರಹಿಸಿದ್ದಾರೆ.

    ಮಾಜಿ ಶಾಸಕರು ಈ ಬೇಡಿಕೆ ಹಿಡಿದುಕೊಂಡು ವಿಪಕ್ಷ ನಾಯಕರು, ಸ್ಪೀಕರ್, ಸಭಾಪತಿ ಅವರ ಕಚೇರಿಗಳಿಗೆ ಭೇಟಿ ನೀಡಿದ್ದಾರೆ. ಒಂದು ವೇಳೆ ನಿವೃತ್ತಿಯ ವೇತನ ಹೆಚ್ಚಾದರೆ 650 ಮಂದಿ ಮಾಜಿ ಶಾಸಕರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.

     

  • ಮುಂದಿನ ವಾರ ಮತ್ತೊಂದು ಸಿನಿಮಾ ನೋಡಲಿದ್ದಾರೆ ಸಿಎಂ

    ಮುಂದಿನ ವಾರ ಮತ್ತೊಂದು ಸಿನಿಮಾ ನೋಡಲಿದ್ದಾರೆ ಸಿಎಂ

    ಬೆಂಗಳೂರು: ಕಳೆದ ವಾರ ಬಾಹುಬಲಿ-2 ಚಿತ್ರ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ ಮುಂದಿನ ವಾರ ಮತ್ತೊಂದು ಸಿನಿಮಾ ವೀಕ್ಷಿಸಲಿದ್ದಾರೆ.

    ಇಂದು ನಟ ಹಾಗೂ ಮಾಜಿ ಶಾಸಕ ಬಿ.ಸಿ.ಪಾಟೀಲ್ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ರು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರ ಭೇಟಿ ಬಳಿಕ ಮಾತನಾಡಿದ ಬಿ.ಸಿ.ಪಾಟೀಲ್, ಹ್ಯಾಪಿ ನ್ಯೂ ಇಯರ್ ಚಿತ್ರ ವೀಕ್ಷಿಸುವಂತೆ ಸಿಎಂಗೆ ಮನವಿ ಮಾಡಿದ್ದೇನೆ. ಮುಂದಿನ ವಾರ ಚಿತ್ರ ವೀಕ್ಷಿಸೋದಾಗಿ ಸಿಎಂ ಹೇಳಿದ್ದಾರೆ ಅಂದ್ರು.

    ಇದನ್ನೂ ಓದಿ: ಬಾಹುಬಲಿ ಸಿನಿಮಾ ವೀಕ್ಷಣೆ: ಕೈ ನಾಯಕನ ವಿರುದ್ಧ ಸಿಎಂ ಗರಂ

    ಇದೇ ವೇಳೆ ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಸಿಎಂಗೆ ಮನವಿ ಮಾಡಿರೋದಾಗಿ ಬಿ.ಸಿ.ಪಾಟೀಲ್ ಹೇಳಿದ್ರು. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕೆ.ಸಿ. ವೇಣುಗೋಪಾಲ್ ಆಗಮನದ ಹಿನ್ನೆಲೆಯಲ್ಲಿ, ಮಾಜಿ ಶಾಸಕರಾಗಿ ನಮ್ಮದೂ ಕೂಡಾ ಬೇಡಿಕೆಗಳಿವೆ. ಇಂದು ವೇಣುಗೋಪಾಲ್ ಅವರನ್ನು ಭೇಟಿ ಮಾಡುತ್ತೇನೆ. ಮುಖ್ಯಮಂತ್ರಿ ದಕ್ಷಿಣ ಕರ್ನಾಟಕ ಭಾಗದವರಾಗಿರುವ ಕಾರಣ ಉತ್ತರ ಕರ್ನಾಟಕ ಭಾಗಕ್ಕೆ ಅಧ್ಯಕ್ಷ ಸ್ಥಾನ ನೀಡುವಂತೆ ವೇಣುಗೋಪಾಲ್ ಅವರಿಗೆ ಮನವಿ ಮಾಡುತ್ತೇನೆ ಅಂದ್ರು.

    ಪನ್ನಗಾಭರಣ ನಿರ್ದೇಶನದಲ್ಲಿ ಮೂಡಿಬಂದಿರೋ ಹ್ಯಾಪಿ ನ್ಯೂ ಇಯರ್ ಚಿತ್ರದಲ್ಲಿ ಸಾಯಿ ಕುಮಾರ್, ಬಿಸಿ ಪಾಟೀಲ್, ಶೃತಿ ಹರಿಹರನ್, ದಿಗಂತ್, ವಿಜಯ್ ರಾಘವೇಂದ್ರ, ಧನಂಜಯ್, ಸುಧಾರಾಣಿ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.