Tag: ಮಾಜಿ ಸಂಸದೆ

  • ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

    ಅಫ್ಘಾನಿಸ್ತಾನದ ಮಾಜಿ ಸಂಸದೆ ಗುಂಡೇಟಿಗೆ ಬಲಿ

    ಕಾಬೂಲ್: ಅಫ್ಘಾನಿಸ್ತಾನವನ್ನು (Afghanistan) ತಾಲಿಬಾನ್ (Taliban) ವಶಪಡಿಸಿಕೊಳ್ಳುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದಿದ್ದ ಮಾಜಿ ಸಂಸದೆ (Former Lawmaker) ಗುಂಡಿಕ್ಕಿ ಕೊಂದಿರುವ ಘಟನೆ ಅಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ (Kabul) ನಡೆದಿರುವುದಾಗಿ ಅಲ್ಲಿನ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

    ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಲ್ ನಬಿಜಾದಾ (Mursal Nabizada)(32) ಅವರ ಮನೆಗೆ ಶನಿವಾರ ರಾತ್ರಿ ವೇಳೆ ಬಂದೂಕುಧಾರಿಗಳು ನುಗ್ಗಿದ್ದು, ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುಂಡಿನ ದಾಳಿ ವೇಳೆ ನಬಿಜಾದಾ ಅವರ ಅಂಗರಕ್ಷಕರೊಬ್ಬರು ಕೂಡಾ ಸಾವನ್ನಪ್ಪಿದ್ದಾರೆ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ.

    ಮುರ್ಸಲ್ ನಬಿಜಾದಾ ಅವರು ಈ ಹಿಂದಿನ ಅಮೆರಿಕ ಬೆಂಬಲಿತ ಸರ್ಕಾರದ ಸಂಸತ್ತಿನ ಸದಸ್ಯರಾಗಿದ್ದರು. ಅವರು ಅಫ್ಘಾನಿಸ್ತಾನದ ಒಬ್ಬ ನಿರ್ಭೀತ ನಾಯಕಿಯಾಗಿದ್ದರು ಎಂದು ಮಾಜಿ ಶಾಸಕ ಮರಿಯಮ್ ಸೊಲೈಮಂಖಿಲ್ ತಿಳಿಸಿದ್ದಾರೆ. ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ವೇಳೆ ಅವರು ತಮ್ಮ ಅಧಿಕಾರದಿಂದ ಕೆಳಗಿಳಿಯಬೇಕಾಯಿತು.

    ಶನಿವಾರ ರಾತ್ರಿ ನಡೆದಿರುವ ಗುಂಡಿನ ದಾಳಿಯಲ್ಲಿ ಮುರ್ಸಲ್ ನಬಿಜಾದಾ ಹಾಗೂ ಅವರ ಅಂಗರಕ್ಷಕ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಬಿಜಾದಾ ಅವರ ಸಹೋದರ ಕೂಡಾ ಗಾಯಗೊಂಡಿದ್ದಾರೆ. ಘಟನೆಯನ್ನು ಭದ್ರತಾ ಪಡೆಗಳು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆಯನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಹಾಕಿ ವಿಶ್ವಕಪ್‌ – ಭಾರತ, ಇಂಗ್ಲೆಂಡ್‌ ಪಂದ್ಯ ಡ್ರಾನಲ್ಲಿ ಅಂತ್ಯ

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಉನ್ನತ ಸರ್ಕಾರಿ ಹುದ್ದೆಯಲ್ಲಿರುವವರಿಗೆ ದೇಶವನ್ನು ತೊರೆಯಲು ಅವಕಾಶ ನೀಡಲಾಗಿತ್ತು. ಅಂತಹ ಉನ್ನತ ಹುದ್ದೆಯಲ್ಲಿದ್ದ ಹಲವಾರು ಮಹಿಳೆಯರು ವಿದೇಶಕ್ಕೆ ತೆರಳಿದ್ದರು. ಆದರೆ ನಬಿಜಾದಾ ಮಾತ್ರ ತನ್ನ ಜನರಿಗಾಗಿ ಅಫ್ಘಾನಿಸ್ತಾನದಲ್ಲೇ ಉಳಿಯಲು ಹಾಗೂ ಹೋರಾಡಲು ನಿರ್ಧರಿಸಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸೋಮವಾರ ಬೆಂಗಳೂರಿನಲ್ಲಿ ಪ್ರಿಯಾಂಕಾ ಅಬ್ಬರ- 1 ಲಕ್ಷ ಮಹಿಳಾ ಕಾರ್ಯಕರ್ತರು ಭಾಗಿ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪೊಲೀಸ್‌ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ – ಬಿಜೆಪಿ ಮಾಜಿ ಸಂಸದೆ ವಿರುದ್ಧ ಎಫ್‌ಐಆರ್‌

    ಪೊಲೀಸ್‌ ಕಾನ್‌ಸ್ಟೇಬಲ್‌ಗೆ ಕಪಾಳಮೋಕ್ಷ – ಬಿಜೆಪಿ ಮಾಜಿ ಸಂಸದೆ ವಿರುದ್ಧ ಎಫ್‌ಐಆರ್‌

    ಜೈಪುರ: ರಾಜಸ್ಥಾನದ (Rajasthan) ಭರತ್‌ಪುರದಲ್ಲಿ ಭದ್ರತಾ ಅಧಿಕಾರಿಗಳಿಗೆ ಅಡ್ಡಿಪಡಿಸಿ, ಪೊಲೀಸ್ ಪೇದೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದೆ ಕೃಷ್ಣೇಂದ್ರ ಕೌರ್ (Krishnendra Kaur) ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೌರ್, ನಗರದ ಅಖಾಡ್ ತಿರಾಹಾದಲ್ಲಿ ಕಾನ್‌ಸ್ಟೇಬಲ್‌ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದೆ ವಿರುದ್ಧ ಕಾನ್‌ಸ್ಟೇಬಲ್ ದೂರು ನೀಡಿದ ನಂತರ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದುವೆಗೆಂದು ವಿಮಾನವನ್ನೇ ಬುಕ್ ಮಾಡಿದ ಜೋಡಿ

    ದೂರು ದಾಖಲಿಸಿರುವ ಕಾನ್‌ಸ್ಟೇಬಲ್ ಗಜರಾಜ್ ಸಿಂಗ್ ಭರತ್‌ಪುರದ ಆರ್‌ಎಸಿಯ 6ನೇ ಬೆಟಾಲಿಯನ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃಷ್ಣೇಂದ್ರ ಕೌರ್ ತಮ್ಮ ಕಾರನ್ನು ನಡುರಸ್ತೆಯಲ್ಲೇ ನಿಲ್ಲಿಸಿದ್ದರು. ಹೀಗೆ ಕಾರು ನಿಲ್ಲಿಸುವಂತಿಲ್ಲ ಎಂದು ನಾನು ಹೇಳಿದೆ. ಆದರೆ ಡ್ರೈವರ್‌ ನನ್ನ ಮಾತು ಕೇಳಲಲ್ಲಿ. ಕಾರಿನಲ್ಲಿ ಕುಳಿತಿದ್ದ ಕೌರು ಅವರು ನನ್ನ ವಿರುದ್ಧ ನಿಂದನೆ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲದೆ ಕಾರಿನಿಂದ ಕೆಳಗಿಳಿದು ಕಪಾಳಮೋಕ್ಷ ಮಾಡಿದ್ದಾರೆ ಎಂದು ಕಾನ್‌ಸ್ಟೇಬಲ್‌ ಗಂಭೀರ ಆರೋಪ ಮಾಡಿದ್ದಾರೆ.

    ಆಕೆಯ ಡ್ರೈವರ್ ಮತ್ತು ಇತರರು ಕೂಡ ನನ್ನನ್ನು ನಿಂದಿಸಿದ್ದಾರೆ. ನಾನು ಘಟನೆಯ ಬಗ್ಗೆ ಉಸ್ತುವಾರಿ ಪ್ರಭು ದಯಾಳ್ ಮತ್ತು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಂತರ ನಾನು ಕೌರ್ ವಿರುದ್ಧ ಪ್ರಕರಣ ದಾಖಲಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪರಿಚಿತ ವ್ಯಕ್ತಿ ನೀಡಿದ ಚಾಕ್ಲೆಟ್ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ- ಆರೋಪಿಗಾಗಿ ಹುಡುಕಾಟ

    Live Tv
    [brid partner=56869869 player=32851 video=960834 autoplay=true]

  • ರಮ್ಯಾಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು!

    ರಮ್ಯಾಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು!

    ಮಂಡ್ಯ: ನಟಿ, ಮಾಜಿ ಸಂಸದೆ ರಮ್ಯಾಗೆ ಮಂಡ್ಯ ಟಿಕೆಟ್ ಕೈ ತಪ್ಪಿದ್ದಕ್ಕೆ ತಾಯಿ ರಂಜಿತಾ ಕಣ್ಣೀರು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ರಮ್ಯಾ 5 ಲಕ್ಷ ಮತಗಳನ್ನ ಪಡೆದು ಗೆದ್ದಿದ್ದರು. ಅಂಬರೀಶ್ ಕಾಂಗ್ರೆಸ್‍ಗೆ ದ್ರೋಹ ಮಾಡಿ ಜೆಡಿಎಸ್‍ನ್ನ ಗೆಲ್ಲಿಸಿದ್ರು. ಮಂಡ್ಯ ಋಣ ತೀರಿಸಲು ಕೆಲವರಿಗೆ ಅವಕಾಶವಿತ್ತು, ಋಣನೂ ತೀರಿಸಲಿಲ್ಲ, ಕೆಲಸನೂ ಮಾಡಿಲ್ಲ. ನಾವು ಕಾಂಗ್ರೆಸ್‍ನಲ್ಲಿದ್ದೇವೆ, ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡುತ್ತೇವೆ ಎಂದು ಹೇಳಿದ್ರು.

    ರಮ್ಯಾ ಅಥವಾ ನಾನು ಇಲ್ಲಿ ಸೋಲಿಸೋಕೆ ಏನೂ ಇಲ್ಲ. ನಮ್ಮ ಮಂಡ್ಯ ಮತದಾರರು ತುಂಬಾ ಬುದ್ಧಿವಂತರಿದ್ದಾರೆ. ಮಂಡ್ಯ ಜಿಲ್ಲೆಗೆ ಮಾತ್ರವಲ್ಲ ಇಡೀ ದೇಶಕ್ಕೆ ರಮ್ಯಾ ಸೋತಿದ್ದಕ್ಕೆ ಕಾರಣ ಯಾರು, ಸೋಲಿಸಿದವರು ಯಾರು ಎಂದು ಗೊತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಯಾರಿಂದ ಸರ್ವನಾಶ ಆಗಿದೆ. 7 ಶಾಸಕರು ಯಾರಿಂದ ಸೋತಿದ್ದರು. ಮಂಡ್ಯದಲ್ಲಿ ನಮ್ಮ 5 ಲಕ್ಷ ಮತದಾರರು ಯಾರಿಂದ ಅನಾಥರಾಗಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅಸ್ತಿತ್ವ ಇಲ್ಲದಂತೆ ಮಾಡಿದ್ದು ಯಾರು ಎಂದು ಮಂಡ್ಯ ಜನತೆಗೆ ಗೊತ್ತಾಗಿದೆ. ಹೀಗಾಗಿ ನಾವೇನೂ ಹೇಳಕ್ಕಾಗಲ್ಲ. ಅವರೇ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದ್ರು.

    ನಾನು ಮಣ್ಣಿನ ನಿಜವಾದ ಮಗಳು. ಈ ಭೂಮಿಗೋಸ್ಕರ ನಾವು ಈ ಜನಕ್ಕೆ ಕೆಲಸ ಮಾಡಬೇಕು ಎಂದು ಆಸೆ ಇಟ್ಟುಕೊಂಡು ಬಂದಿದ್ದವರು. ನಮಗೆ ಬೇಕಾದಂತೆ ಬದುಕಬಹುದಿತ್ತು. ಯಾಕಂದ್ರೆ ವೈಭವ, ದುಡ್ಡು ಎಲ್ಲವೂ ಇತ್ತು. ಇವುಗಳನ್ನೆಲ್ಲಾ ಬಿಟ್ಟು ಮಂಡ್ಯ ಜಿಲ್ಲೆಗೆ ಸೇವೆ ಮಾಡಬೇಕು ಎಂದು ಬಂದೆವು. ಹಾಗೆಯೇ ಒಂದು ಅವಕಾಶನೂ ಕೊಟ್ಟರು. ಯಾರ್ಯಾರು ಎಷ್ಟೆಷ್ಟೋ ಗೆದ್ದಿದ್ದರೂ ಬೇಕಾದಷ್ಟು ಸಮಯವಿತ್ತು. ಕೆಲವರಿಗೆ ಋಣ ತೀರಿಸಲು, ಕೆಲಸ ಮಾಡಲು ಸಮಯವಿತ್ತು. ಆದ್ರೆ ಯಾರೂ ಏನೂ ಮಾಡಿಲ್ಲ ಎಂದು ಭಾವುಕರಾದ್ರು.

    ಮಂಡ್ಯ ಜನತೆ ದಡ್ಡರಲ್ಲ. ತುಂಬಾ ಬುದ್ಧಿವಂತರಾಗಿದ್ದು, ಯೋಚನೆ ಮಾಡುವ ಶಕ್ತಿ ಇದೆ. ಇಂದು ರಮ್ಯಾ ಅವರಿಗೆ ಯಾಕೆ ಅವಕಾಶ ಸಿಕ್ಕಿಲ್ಲ ಎಂದು ಜಿಲ್ಲೆಯ ಜನತೆಗೆ ಗೊತ್ತಿದೆ. ರಮ್ಯಾರನ್ನು ಯಾರು ಸೋಲಿಸಿದ್ರು, ಯಾರು ನಮ್ಮ ಕೈ ಬಿಟ್ಟರು ಇವೆಲ್ಲ ಜನತೆಗೆ ಗೊತ್ತಿದೆ. ಜಿಲ್ಲೆಯ ಜನರಿಗೆ ಇನ್ನೂ ನಮ್ಮ ಮೇಲೆ ಪ್ರೀತಿ, ಕರುಣೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

    ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವುದರಿಂದ ಮೈತ್ರಿ ಧರ್ಮ ಪಾಲಿಸುವುದು ನಮ್ಮ ಧರ್ಮವಾಗಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ನಮ್ಮದೇ ಅಭ್ಯರ್ಥಿ ಎಂದು ತಿಳಿದುಕೊಂಡು, ಮಂಡ್ಯದಲ್ಲಿ ಅವರನ್ನು ಗೆಲ್ಲಿಸುವುದಕ್ಕೆ ಬೆಂಬಲಿಸುತ್ತೇವೆ. ಸದ್ಯ ಮಂಡ್ಯದಲ್ಲಿ ನಿಖಿಲ್ ಪರ ಪ್ರಚಾರ ಮಾಡೋದಿಕ್ಕೆ ಬಂದಿದ್ದೇನೆ ಅಂದ್ರು.

  • ಸುಮಲತಾ ಸೋಲಿಗೆ ರಮ್ಯಾ ಸ್ಕೆಚ್!

    ಸುಮಲತಾ ಸೋಲಿಗೆ ರಮ್ಯಾ ಸ್ಕೆಚ್!

    ಬೆಂಗಳೂರು: ಮಾಜಿ ಸಂಸದೆ ರಮ್ಯಾ ಅವರ ಸೋಲಿನ ನೋವು ನನ್ನ ಮನಸ್ಸಿನಲ್ಲಿ ಇನ್ನೂ ಇದೆ. ಮರೆಯೋದಕ್ಕೆ ಆಗ್ತಿಲ್ಲ ಎಂಬ ವಿಷಯ ಅವರ ಅಭಿಮಾನಿಗಳ ಮನಸ್ಸಿನಲ್ಲಿ ಇದೆ. ಸದ್ಯ ಈಗ ಮಂಡ್ಯ ಅಖಾಡದಲ್ಲಿ ಸುಮಲತಾ ವಿರುದ್ಧ ರಮ್ಯಾ ಆಪ್ತ ವಲಯ ಮಸಲತ್ತು ನಡೆಯುತ್ತಿದೆ.

    ದೆಹಲಿಯಲ್ಲೇ ಕುಳಿತು ರಮ್ಯಾ ಮುಯ್ಯಿಗೆ ಮುಯ್ಯಿ ರಾಜಕಾರಣ ಶುರು ಮಾಡಿದ್ದಾರಾ ಎಂಬ ಪ್ರಶ್ನೆ ಈಗ ಶುರುವಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಮಂಡ್ಯ ಕಣದಿಂದ ಸೋತಿದ್ದರು. ಆಗ ಅಂಬರೀಶ್ ಬೆಂಬಲಿಗರು ಕಾಟ ಕೊಟ್ಟಿದ್ರು ಎಂದು ಆರೋಪ ಮಾಡಲಾಗಿತ್ತು.

    ಇಂದು ಅಂಬರೀಶ್ ಪತ್ನಿ ಸುಮಲತಾ ಮಂಡ್ಯ ಅಖಾಡಕ್ಕೆ ಎಂಟ್ರಿಯಾಗಿದ್ದಾರೆ. ಇದನ್ನೇ ರಾಜಕೀಯ ಟಾಂಗ್‍ಗೆ ರಮ್ಯಾ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರಾ ಎಂಬ ಪ್ರಶ್ನೆ ಕಾಡುತ್ತಿದೆ. ಯಾಕಂದ್ರೆ ಮಂಡ್ಯದಲ್ಲಿರುವ ರಮ್ಯಾ ಆಪ್ತರಿಂದಲೇ ಅಖಾಡದಲ್ಲಿ ಒಳಗುದ್ದು ಶುರುವಾಗಿದೆ.

    ಈ ವಿಚಾರ ತಿಳೀಯುತ್ತಿದ್ದಂತೆಯೇ ಅಂಬರೀಶ್ ಅಭಿಮಾನಿಗಳು ಮಾಜಿ ಸಂಸದೆ ವಿರುದ್ಧ ಗರಂ ಆಗಿದ್ದಾರೆ. 2013ರಲ್ಲಿ ರಮ್ಯಾ ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆಗ ರಮ್ಯಾ ಜೊತೆ ಮಂಡ್ಯದಲ್ಲಿ ಭರ್ಜರಿ ಕ್ಯಾಂಪೇನ್ ಮಾಡಿದ್ದು ಮರೆತ್ರಾ ಎಂದು ಕಿಡಿಕಾರುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

  • `ಅಪ್ನಾ ಟೈಂ ಆಯೇಗಾ’ ಅಂದ್ರು ಮಾಜಿ ಸಂಸದೆ ರಮ್ಯಾ..!

    `ಅಪ್ನಾ ಟೈಂ ಆಯೇಗಾ’ ಅಂದ್ರು ಮಾಜಿ ಸಂಸದೆ ರಮ್ಯಾ..!

    ಬೆಂಗಳೂರು: ಇನ್ನೇನು ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಭಾರೀ ಬೆಳವಣಿಗೆಗಳು ಆಗುತ್ತಿವೆ. ಈ ಮಧ್ಯೆ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು `ಅಪ್ನಾ ಟೈಂ ಆಯೇಗಾ’ ಎಂದು ಹೇಳಿದ್ದಾರೆ.

    ಹೌದು. ರಮ್ಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ರಾಹುಲ್ ಗಾಂಧಿ ಅವರು ನಗುನಗುತ್ತಾ ಕೈ ಮುಗಿಯುತ್ತಿರುವ ಫೋಟೋವೊಂದನ್ನು ಫೋಸ್ಟ್ ಮಾಡಿ, ನಮ್ಮ ಸಮಯ ಬರುತ್ತಾ ಇದೆ ಎಂದು ಬರೆದುಕೊಂಡಿದ್ದಾರೆ.

    ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬೀಳಿಸುವ ಕೊನೆಯ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದು, ಆಪರೇಷನ್ ಲೋಟಸ್ ಯಶಸ್ಸಿಗೆ ನಗರದ ಬಿಇಎಲ್ ವೃತ್ತದ ಬಳಿಯ ಗಣಪತಿ ದೇವಸ್ಥಾನದಲ್ಲಿ ಗರುಡಚಯನ ಯಾಗ ನಡೆಸುತ್ತಿದೆ. ಭಾನುವಾರವಷ್ಟೇ ಈ ಬಾರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರ ಬಜೆಟ್ ಮಂಡನೆ ಮಾಡುವುದು ಡೌಟ್ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ಹೆಳಿಕೆ ನೀಡಿದ್ದು, ಇದೀಗ ಭಾರೀ ಚರ್ಚೆಗೀಡಾಗಿದೆ.

    ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿರುವ ಕುರಿತು ಇಂದು ರಾಜರಾಜೇಶ್ವರಿ ಶಾಸಕ ಮುನಿರತ್ನ ಅವರು ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರು ಬಜೆಟ್ ಮಂಡನೆ ಮಾಡಿಯೇ ಮಾಡುತ್ತಾರೆ. ಒಂದು ವೇಳೆ ಅವರು ಬಜೆಟ್ ಮಂಡನೆ ಮಾಡದಿದ್ದರೆ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾವನ್ನು 5 ಕೋಟಿಗೆ ಬಿಜೆಪಿಯವರಿಗೆ ಬಿಟ್ಟುಕೊಡುವುದಾಗಿ ಸವಾಲೆಸೆದಿದ್ದಾರೆ.

    ಪ್ರಕೃತಿ ವಿಕೋಪದಂತಹ ದುರಂತಗಳು ಸಂಭವಿಸದಂತೆ, ಮಳೆ-ಬೆಳೆಗಾಗಿ ಹೋಮ-ಹವನಗಳನ್ನು ಮಾಡಿ. ಅಧಿಕಾರದ ಆಸೆಗೆ ಹೋಮಗಳನ್ನು ಮಾಡಬೇಡಿ. ಇದನ್ನು ದೇವರು ಮೆಚ್ಚಲ್ಲ ಎಂದು ಬಿಜೆಪಿ ವಿರುದ್ಧ ಗರಂ ಆಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದು ತಿಂಗಳ ಹಿಂದೆ ಅನಾರೋಗ್ಯಕ್ಕೆ ಗುರಿಯಾಗಿದ್ದ ರಮ್ಯಾ ವಿದೇಶಿ ಪ್ರವಾಸ!

    ಒಂದು ತಿಂಗಳ ಹಿಂದೆ ಅನಾರೋಗ್ಯಕ್ಕೆ ಗುರಿಯಾಗಿದ್ದ ರಮ್ಯಾ ವಿದೇಶಿ ಪ್ರವಾಸ!

    – ದುಬೈ ಪ್ರವಾಸ ಫೋಟೋ ವೈರಲ್

    ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಗೆ ಆಗಮಿಸದೇ ಭಾರೀ ಚರ್ಚೆಗೆ ಕಾರಣವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅನಾರೋಗ್ಯದ ನೆಪ ಹೇಳಿ ಅನುಕಂಪ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ದಿಢೀರ್ ಆಗಿ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾರ್ಯಕ್ರಮದ ನಿಮಿತ್ತ ಇಂದು ಮಧ್ಯಾಹ್ನ ದುಬೈಗೆ ಭೇಟಿ ನೀಡಿದ್ದಾರೆ. ಹೀಗಾಗಿ ಒಂದು ದಿನ ಮೊದಲೇ ದುಬೈಗೆ ಬಂದಿರುವ ರಮ್ಯಾ, ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ. ಕೆಲ ಹೊತ್ತು ದುಬೈನ ಬೀಚ್‍ನಲ್ಲಿ ತಿರುಗಾಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಇದನ್ನು ಓದಿ: ರಮ್ಯಾಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ಜನತೆ

    ನಟಿ ರಮ್ಯಾ ದುಬೈನಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಬರೀಷ್ ಅಂತ್ಯಕ್ರಿಯೆಗೆ ಬಾರದೆ ಅನಾರೋಗ್ಯದ ನೆಪ ಹೇಳಿ ರಮ್ಯಾ ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಒಂದು ತಿಂಗಳಿನಲ್ಲೇ ಮಾರಕ ಕಾಯಿಲೆ ಗುಣಮುಖವಾಗಿದೆಯೇ ಎಂದೆಲ್ಲ ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.  ಇದನ್ನು ಓದಿ: ಮಂಡ್ಯ ಮನೆಯನ್ನು ರಾತ್ರೋರಾತ್ರಿ ಖಾಲಿ ಮಾಡಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

    ನಾನು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ನನ್ನ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಹೀಗಾಗಿ ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ರಮ್ಯಾ ತಿಳಿಸಿದ್ದರು. ಇದನ್ನು ಓದಿ: ಸ್ಯಾಂಡಲ್‍ವುಡ್ ಕ್ವೀನ್‍ಗೆ ಫುಲ್‍ಕ್ಲಾಸ್- ರಮ್ಯಾ ಬರ್ತ್ ಡೇ ನಮ್ಗೆ ಕರಾಳ ದಿನವೆಂದ್ರು ಅಭಿಮಾನಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆ ಖಾಲಿ ಮಾಡೋ ವಿಚಾರದಲ್ಲಿ ಸುಳ್ಳು ಹೇಳಿದ್ರಾ ರಮ್ಯಾ?

    ಮನೆ ಖಾಲಿ ಮಾಡೋ ವಿಚಾರದಲ್ಲಿ ಸುಳ್ಳು ಹೇಳಿದ್ರಾ ರಮ್ಯಾ?

    ಮಂಡ್ಯ: ಇಲ್ಲಿನ ವಿದ್ಯಾನಗರದಲ್ಲಿದ್ದ ಬಾಡಿಗೆ ಮನೆ ಖಾಲಿ ಮಾಡುವ ವಿಚಾರದಲ್ಲಿ ಮಾಜಿ ಸಂಸದೆ ರಮ್ಯಾ ಅವರು ಸುಳ್ಳು ಹೇಳಿದ್ರಾ ಅನ್ನೋ ಅನುಮಾನ ಪ್ರಶ್ನೆ ಎದ್ದಿದೆ.

    ಮಾಲೀಕ ಮನೆಗೆ ಮರಳುತ್ತಿರುವ ಹಿನ್ನೆಲೆಯಲ್ಲಿ ನಾನು ಮಂಡ್ಯದ ಮನೆಯನ್ನು ಖಾಲಿ ಮಾಡಿದ್ದೇನೆ ಅಂತ ರಮ್ಯಾ ಹೇಳಿದ್ದು, ಇದೀಗ ಸ್ವತಃ ಮಾಲೀಕರೇ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಅಂತ ಹೇಳಿದ್ದಾರೆ.

    ರಮ್ಯಾ ಮನೆ ಖಾಲಿ ಮಾಡುವುದಾಗಿ ಅವರ ಪಿಎ ಎರಡು ತಿಂಗಳ ಹಿಂದೆ ಕರೆ ಮಾಡಿ ಹೇಳಿದ್ದರು. ಆದ್ರೆ ಈಗ ಮನೆ ಖಾಲಿ ಮಾಡಿರುವ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸೋಮವಾರ ಬೆಳಗ್ಗೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾದ ಸುದ್ದಿ ನೋಡಿದ ನಂತರ ರಮ್ಯಾ ಮನೆ ಖಾಲಿ ಮಾಡಿದ್ದು ಗೊತ್ತಾಗಿದೆ. ಮನೆಯಲ್ಲಿದ್ದ ಫರ್ನಿಚರ್ ತೆಗೆದುಕೊಂಡು ಹೋಗುತ್ತೇನೆ ಅಂದ್ರು. ಓಕೆ ತೆಗೆದುಕೊಂಡು ಹೋಗಿ ಇಲ್ಲ ಅಂದ್ರೆ ನಾನೇ ಕಳಿಸಿಕೊಡುತ್ತೇನೆ. ಆದ್ರೆ ಮನೆ ಖಾಲಿ ಮಾಡುವ ಬಗ್ಗೆ ಬರಹದಲ್ಲಿ ಕೊಡಿ ಎಂದು ಕೇಳಿದ್ದೆ. ಆದ್ರೆ ಇದುವರೆಗೂ ಬರಹದಲ್ಲಿ ಕೊಟ್ಟಿಲ್ಲ. ಅವರು ಸಿಗೋದೇ ಇಲ್ಲ. ಹೀಗಾಗಿ ಮನೆಯ ವಸ್ತುಗಳನ್ನು ಎಲ್ಲಿ ತೆಗೆದುಕೊಂಡು ಹೋಗಿದ್ದಾರೆ ಗೊತ್ತಿಲ್ಲ ಅಂತ ರಮ್ಯಾ ಅವರ ಬಾಡಿಗೆ ಮನೆ ಮಾಲೀಕ ಸಾದತ್ ಆಲಿಖಾನ್ ಹೇಳಿದ್ದಾರೆ.

    ಅವರು ಮನೆ ಖಾಲಿ ಮಾಡಿದ್ದಾರೆ ಎಂದು ಗೊತ್ತಾದ ನಂತರ ವಿಚಾರಿಸಿದೆ. ಇನ್ನೂ ಮನೆ ಬಳಿ ಸೆಕ್ಯೂರಿಟಿ ಇರುವುದು ಗೊತ್ತಾಗಿದೆ. ಮನೆ ಬಳಕೆಯಾಗಲಿ ಎಂದು ರಮ್ಯಾ ಅವರಿಗೆ ಕೊಟ್ಟಿದ್ದೆ. ಆದ್ರೆ ಮನೆಗೆ ಅವರು ಬರುತ್ತಲೇ ಇಲ್ಲ. ಮನೆಗೆ ಸೆಕ್ಯೂರಿಟಿ ಇಟ್ಟಿದ್ರು. ಹೀಗಾಗಿ ಮನೆ ನಿಮಗೆ ಬೇಡ ಅಂದ್ರೆ ನಾವೇ ಇರುತ್ತೇವೆ ಕೊಡಿ ಎಂದು ಕೇಳಿದ್ದೆ. ಆದ್ರೆ ನಾನು ಹಾಗೇ ಕೇಳುವ ಮುಂಚೆಯೇ ಅವರು ಖಾಲಿ ಮಾಡುತ್ತೇವೆ ಅಂದಿದ್ರು. ಹೀಗಾಗಿ ಖಾಲಿ ಮಾಡಿರಬಹುದು ಎಂದು ತಿಳಿಸಿದರು.

    ರಮ್ಯಾ ಅವರು ಅಂಬರೀಶ್ ಅಂತ್ಯ ಸಂಸ್ಕಾರಕ್ಕಾದ್ರೂ ಬರಬೇಕಿತ್ತು. ಅವರಿಗೆ ಹುಷಾರಿಲ್ಲದ ಕಾರಣ ಬಂದಿಲ್ಲದಿರಬಹುದು. ಅವರು ಚುನಾವಣೆಗೆ ನಿಂತು ಇಲ್ಲಿಯೇ ಇರುತ್ತಾರೆ ಎಂದುಕೊಂಡಿದ್ದೆ. ಆದ್ರೆ ಅವರು ಚುನಾವಣೆಗೆ ನಿಲ್ಲಲಿಲ್ಲ. ಅವರಿಗೆ ಹುಷಾರಿಲ್ಲ ಎಂದು ಯಾರೋ ಹೇಳಿದ್ರು. ಆದ್ರೆ ಅವರಿಗೆ ಏನಾಗಿದೆ ಎಂಬ ಸತ್ಯ ನನಗೆ ಗೊತ್ತಿಲ್ಲ. ಅವರು ಸಿಗ್ತಾನೆ ಇಲ್ಲ. ನನಗೆ ಆ ಮನೆಯ ಬಗ್ಗೆ ಭಾವನಾತ್ಮಕ ಸಂಬಂಧವಿದೆ. ಹೀಗಾಗಿ ಆ ಮನೆಯನ್ನು ನಾನು ಯಾರಿಗೂ ಮಾರಲ್ಲ. ಮೊದಲು ಆ ಮನೆಗೆ ಅಂಬರೀಶ್ ಬಾಡಿಗೆಗೆ ಬರುತ್ತಾರೆ ಎಂದು ಅವರ ಅಭಿಮಾನಿಗಳು ಹೇಳಿದ್ರು. ಅವರು ಬರಲಿಲ್ಲ. ಆ ನಂತ್ರ ರಮ್ಯಾ ಬಾಡಿಗೆಗೆ ಬಂದ್ರು ಅಂತ ಅವರು ವಿವರಿಸಿದ್ರು.

    ರಮ್ಯಾ ಹೇಳಿದ್ದು ಏನು?
    ರಾತ್ರೋರಾತ್ರಿ ನಾನು ನಿವಾಸವನ್ನು ಖಾಲಿ ಮಾಡಿಲ್ಲ. ಮಂಡ್ಯದಲ್ಲಿ ನಾನು ಬಾಡಿಗೆ ಮನೆಯಲ್ಲಿದ್ದೆ. ಕೆಲ ದಿನಗಳ ಹಿಂದೆ ಮನೆ ಮಾಲೀಕ ನಾನು ಮರಳುತ್ತಿದ್ದೇನೆ. ಹೀಗಾಗಿ ನನಗೆ ಆ ಮನೆ ಬೇಕೆಂದು ಹೇಳಿದರು. ಜವಾಬ್ದಾರಿಯುತ ಬಾಡಿಗೆದಾರಳಾಗಿ ಮಾಲೀಕನ ಮಾತನ್ನು ಕೇಳಬೇಕಾದದ್ದು ನನ್ನ ಕರ್ತವ್ಯ. ಹೀಗಾಗಿ ನಾನು ಮನೆಯನ್ನು ಖಾಲಿ ಮಾಡಿದ್ದೇನೆ ಎಂದು ರಮ್ಯಾ ಪ್ರತಿಕ್ರಿಯಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಪರೇಷನ್ ಬಿಟ್ರೆ ಯಾವುದೇ ಚಿಕಿತ್ಸೆ ಇಲ್ಲ- ರಮ್ಯಾ ಕಾಯಿಲೆ ಬಗ್ಗೆ ಮೂಳೆ ತಜ್ಞರ ಸ್ಪಷ್ಟನೆ

    ಆಪರೇಷನ್ ಬಿಟ್ರೆ ಯಾವುದೇ ಚಿಕಿತ್ಸೆ ಇಲ್ಲ- ರಮ್ಯಾ ಕಾಯಿಲೆ ಬಗ್ಗೆ ಮೂಳೆ ತಜ್ಞರ ಸ್ಪಷ್ಟನೆ

    ಮಂಡ್ಯ: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಬರೀಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿಲ್ಲ.

    ಈ ಕಾಯಿಲೆ ಬಗ್ಗೆ ಮೂಳೆ ತಜ್ಞ ಡಾ.ಜಗನ್ನಾಥ್ ಅವರು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆ ಪ್ರಮುಖವಾಗಿ ಮೂಳೆಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಇದನ್ನು ಮೂಳೆ ಕ್ಯಾನ್ಸರ್ ಎಂದು ಹೇಳಲಾಗುತ್ತದೆ ಎಂದು ತಿಳಿಸಿದ್ದಾರೆ.

    ಇದು ಅಪರೂಪದ ಕಾಯಿಲೆಯಾಗಿದ್ದು, ಪುರುಷ ಮತ್ತು ಮಹಿಳೆ ಇಬ್ಬರಲ್ಲೂ ಸಮಾನಾಗಿ ಕಾಣಿಸಿಕೊಳ್ಳುತ್ತದೆ. ಇದು 2-3 ಸಾವಿರ ಮಂದಿಯಲ್ಲಿ ಒಬ್ಬರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆಯನ್ನು ಮೂಳೆಯಲ್ಲಿ ಬದಲಾವಣೆ ಕಂಡುಬಂದ ನಂತರ ತಿಳಿಯಬಹುದಾಗದೆ. ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆ ಮೊದಲನೇ ಹಂತದಲ್ಲಿ ಇದ್ದಾಗಲೇ ಚಿಕಿತ್ಸೆ ಪಡೆಯಬೇಕು ಇಲ್ಲವಾದರೆ ಮೂಳೆಯನ್ನು ತಿನ್ನುತ್ತಾ ಹೋಗುತ್ತದೆ ಎಂದು ಅವರು ವಿವರಿಸಿದ್ದಾರೆ.

    ಆಸ್ಟಿಯೋಕ್ಲ್ಯಾಟೋಮಾ ಕಾಯಿಲೆ ಬಂದರೆ, ಮೂಳೆಗಳಲ್ಲಿ ತುಂಬಾ ನೋವು ಕಾಣಿಸಿಕೊಳ್ಳುತ್ತದೆ. ಅದರಲ್ಲೂ ಮುಖ್ಯವಾಗಿ ಜಾಯಿಂಟ್‍ಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ಕಾಯಿಲೆ ಬಂದರೆ ಓಡಾಡೋಕೆ ಆಗಲ್ಲ. ಅಲ್ಲದೇ ಕಾಯಿಲೆ ಕಾಣಿಸಿಕೊಂಡ ಜಾಗವನ್ನು ಅಲುಗಾಡಿಸಲು ಸಾಧ್ಯವಾಗುವುದಿಲ್ಲ. ಯಾಕೆಂದರೆ ಆ ಜಾಗದಲ್ಲಿ ತುಂಬಾ ನೋವಾಗುತ್ತದೆ. ಒಂದು ವೇಳೆ ಈ ಕಾಯಿಲೆ ಬಂದರೆ ಅದಕ್ಕೆ ಚಿಕಿತ್ಸೆ ಎಂದರೆ ಆಪರೇಷನ್ ಮಾತ್ರ. ಆಪರೇಷನ್ ಬಿಟ್ಟು ಬೇರೆ ಯಾವುದೇ ಚಿಕಿತ್ಸೆ ಇಲ್ಲ. ಆಪರೇಷನ್ ಮಾಡಿದ ತಕ್ಷಣ ಸಂಪೂರ್ಣ ಬೆಡ್ ರೆಸ್ಟ್ ಮಾಡಬೇಕು ಎಂದು ಡಾ.ಜಗನ್ನಾಥ್ ಹೇಳಿದ್ದಾರೆ.

    https://www.instagram.com/p/BpH55YWjMcE/?utm_source=ig_embed

    ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದ್ದು, ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದೆ. ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್‍ಗೆ ತುತ್ತಾಗುತ್ತಿದ್ದರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್‍ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದಾರೆ.

    ದೇಹದಲ್ಲಿ ಸಮಸ್ಯೆಗಳಾದರೆ ವ್ಯತಾಸ ಕಂಡು ಬಂದರೆ ಡಾಕ್ಟರ್ ಸಂಪರ್ಕಿಸಿ. ನಿರ್ಲಕ್ಷ್ಯ ಮಾಡಿದರೆ ಸೂಕ್ತ ಬೆಲೆ ತೆರಬೇಕಾಗತ್ತದೆ. ನಿರ್ಲಕ್ಷ್ಯ ಮಾಡಿ ನಾನು ಈಗ ಪಾಠ ಕಲಿತಿದ್ದೇನೆ ಅಂತ ಕಾಲಿನ ಚಿತ್ರ ಹಾಕಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಒಟ್ಟಿನಲ್ಲಿ ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವಿರುದ್ಧ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದ್ರೆ ರಮ್ಯಾ ಅವರು ಅಂಬಿ ನೋಡಲು ಯಾಕೆ ಬರಲಿಲ್ಲ ಅನ್ನೋ ಅಸಲಿ ಕಾರಣ ಇದೀಗ ತಿಳಿದುಬಂದಿದೆ.

    https://www.youtube.com/watch?v=pMVHrrxwSzo

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

    ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

    ಮಂಡ್ಯ: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಗೈರಾಗಲು ಅಸಲಿ ಕಾರಣವೊಂದು ಇದೀಗ ಪಬ್ಲಿಕ್ ಟಿವಿಗೆ ಲಭಿಸಿದೆ.

    ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದಾರೆ.

    https://www.instagram.com/p/BpH55YWjMcE/

    ದೇಹದಲ್ಲಿ ಸಮಸ್ಯೆಗಳಾದ್ರೆ ವ್ಯತಾಸ ಕಂಡು ಬಂದ್ರೆ ಡಾಕ್ಟರ್ ಸಂಪರ್ಕಿಸಿ. ನಿರ್ಲಕ್ಷ್ಯ ಮಾಡಿದರೆ ಸೂಕ್ತ ಬೆಲೆ ತೆರಬೇಕಾಗುತ್ತೆ. ನಿರ್ಲಕ್ಷ್ಯ ಮಾಡಿ ನಾನು ಈಗ ಪಾಠ ಕಲಿತಿದ್ದೇನೆ ಅಂತ ಕಾಲಿನ ಚಿತ್ರ ಹಾಕಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಆಸ್ಟಿಯೋಕ್ಲ್ಯಾಟೋಮಾ ಎಂಬುದು ಒಂದು ಅಪರೂಪದ ಕಾಯಿಲೆಯಾಗಿದ್ದು, ಇದೀಗ ಮಾಜಿ ಸಂಸದೆ ಈ ರೋಗಕ್ಕೆ ತುತ್ತಾಗಿದ್ದಾರೆ. ಈ ಕಾಯಿಲೆ 10 ಲಕ್ಷ ಮಂದಿಯಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ.

    ದಿವ್ಯ ಸ್ಪಂದನ ಎಂಬ ಹುಡುಗಿ ಸ್ಯಾಂಡಲ್‍ವುಡ್‍ನಲ್ಲಿ ರಮ್ಯಾ ಆಗಿ ಬೆಳೆಯುವಲ್ಲಿ ಅಂಬಿ ಆಶೀರ್ವಾದವಿತ್ತು. ಅಲ್ಲದೇ ನಟಿಯಾಗಿದ್ದ ರಮ್ಯಾ ಮಂಡ್ಯದಲ್ಲಿ ಗೆದ್ದು ಸಂಸದೆಯಾಗಿದ್ದರು. ಆದರೆ ಅಂಬರೀಶ್ ನಿಧನಕ್ಕೆ ಕೇವಲ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದರು. ಇದರಿಂದ ಸಿಟ್ಟಿಗೆದ್ದ ಅಂಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಮ್ಯಾಗೆ ಛೀಮಾರಿ ಹಾಕಿದ್ದರು. ಅಲ್ಲದೇ ಮಂಡ್ಯದ ಜನತೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

    ಅಮರ್‍ನಾಥ್, ಜಲೀಲ, ಕನ್ವರ್ ಲಾಲ್, ರೆಬೆಲ್ ಸ್ಟಾರ್, ಕಲಿಯುಗ ಕರ್ಣ, ಮಂಡ್ಯದ ಗಂಡು… ಹೀಗೆ ನಾನಾ ಹೆಸರುಗಳಿಂದ ಜನಮಾನಸದಲ್ಲಿ ಅಚ್ಚೊತ್ತಿ ಅಂಬರೀಶ್ ಅಮರರಾಗಿದ್ದಾರೆ. ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಸಂಸ್ಕಾರ ನಡೆಯಿತು. ರಾತ್ರಿ 10 ಗಂಟೆ ಕಳೆದರೂ ಅಂಬಿ ಅಭಿಮಾನಿಗಳು ಸ್ಟುಡಿಯೋಗೆ ಭೇಟಿ ನೀಡುತ್ತಿದ್ದರು. ಕೊನೆಗೆ ಪೊಲೀಸರು ಬ್ಯಾರಿಕೇಡ್‍ಗಳನ್ನು ತೆರೆದು ಅವಕಾಶ ಮಾಡಿಕೊಟ್ಟರು.

    https://www.youtube.com/watch?v=vpV25SEDROE

    https://www.youtube.com/watch?v=ei5fso60PsU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜಕೀಯ ದಾರಿ ತೋರಿದ ಅಂಬಿಯನ್ನೇ ಮರೆತ್ರಾ ರಮ್ಯಾ?

    ರಾಜಕೀಯ ದಾರಿ ತೋರಿದ ಅಂಬಿಯನ್ನೇ ಮರೆತ್ರಾ ರಮ್ಯಾ?

    ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ನಟ ಅಂಬರೀಶ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬಿ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಬಾರದ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

    ಅಂಬರೀಶ್ ಅವರು ರಮ್ಯಾಗೆ ರಾಜಕೀಯವಾಗಿ ದಾರಿ ತೋರಿಸಿದ್ದಾರೆ. ಹೀಗಾಗಿ ಅಂಬಿ ಅಂತಿಮ ದರ್ಶನಕ್ಕಾದರೂ ರಮ್ಯಾ ಮಂಡ್ಯಕ್ಕೆ ಬರಬೇಕಿತ್ತು. ಅಲ್ಲದೇ ಓರ್ವ ಮಂಡ್ಯದ ಮಗಳಾಗಿ ರಮ್ಯಾ ಮಂಡ್ಯಕ್ಕೆ ಆಗಮಿಸಬೇಕಿತ್ತು. ಆದರೆ ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಅಂಬರೀಶ್ ವಿರುದ್ಧವೇ ಇನ್ನೂ ದ್ವೇಷ ಸಾಧಿಸುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.

    ಅಂಬಿ ನಿಧನರಾಗಿ ಒಂದು ದಿನಕಳೆದರೂ ಅಂತಿಮ ದರ್ಶನಕ್ಕೆ ರಮ್ಯಾ ಬಂದಿಲ್ಲ. ಘಟಾನುಘಟಿ ನಾಯಕರು, ಸಿನಿಮಾ ತಾರೆಯರು ಬಂದು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದ್ದಾರೆ. ರಮ್ಯಾ ಅವರೆಲ್ಲರಿಗಿಂತ ಬ್ಯುಸಿ ಇದ್ದಾರಾ ಎಂದು ಪ್ರಶ್ನಿಸುವ ಮೂಲಕ ಅಂಬಿ ಅಭಿಮಾನಿಗಳು ರಮ್ಯಾ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ.

    ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ರಮ್ಯಾ ಗೆಲುವಲ್ಲಿ ಅಂಬರೀಶ್ ಪ್ರಮುಖ ಪಾತ್ರ ವಹಿಸಿದ್ದರು. ಅಂಬಿಯಂತೆ ರಮ್ಯಾ ಕೂಡ ಚಿತ್ರರಂಗ, ರಾಜಕೀಯ ಎರಡೂ ಕ್ಷೇತ್ರದಲ್ಲಿ ಗುರುತಿಸಿಕೊಂಡವರು. ಅಲ್ಲದೇ ಇಬ್ಬರೂ ಮಂಡ್ಯದವರೇ. ಹೀಗಾಗಿ ಅಂಬಿ ಪಾರ್ಥಿವ ಶರೀರ ಮಂಡ್ಯಕ್ಕೆ ತಂದಾಗ ರಮ್ಯಾ ಕೂಡ ತವರು ಜಿಲ್ಲೆಗೆ ಬಂದು ಅಂತಿಮ ದರ್ಶನ ಪಡೆಯುತ್ತಾರೆ ಅಂತ ಅಭಿಮಾನಿಗಳು ನಂಬಿದ್ದರು.

    ಕಳೆದ ಎರಡು ವರ್ಷದಿಂದ ಮಂಡ್ಯ ಕಡೆ ಆಗಮಿಸದ ರಮ್ಯಾ, ಇದೀಗ ಅಂಬಿ ಕೊನೆಯುಸಿರೆಳೆದಾಗಲೂ ಅಂತಿಮ ದರ್ಶನ ಪಡೆಯಲು ಮಂಡ್ಯಕ್ಕೆ ಆಗಮಿಸದಿರುವುದು ಇದೀಗ ಅಭಿಮಾನಿಗಳ ಕೆಂಗಣ್ಣಿಗೆ ಕಾರಣರಾಗಿದ್ದಾರೆ.

    https://www.youtube.com/watch?v=EdRmEJPlhQ8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv