Tag: ಮಾಜಿ ಸಚಿವೆ

  • ಮೋದಿಗೆ ಅಭಿನಂದನೆ ಸಲ್ಲಿಸಿದ್ದ ಸುಷ್ಮಾ ಕೊನೆಯ ಟ್ವೀಟ್ ವೈರಲ್

    ಮೋದಿಗೆ ಅಭಿನಂದನೆ ಸಲ್ಲಿಸಿದ್ದ ಸುಷ್ಮಾ ಕೊನೆಯ ಟ್ವೀಟ್ ವೈರಲ್

    ನವದೆಹಲಿ: ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರು ಕೊನೆಯುಸಿರೆಳೆಯುವುದಕ್ಕೂ ಕೆಲವೇ ಗಂಟೆಗಳ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದರು. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ಕುರಿತು ಟ್ವೀಟ್ ಮಾಡಿದ್ದ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನನ್ನ ಜೀವನಮಾನದಲ್ಲಿ ಈ ದಿನವನ್ನು ನೋಡಲು ನಾನು ಬಹುದಿನಗಳಿಂದ ಕಾಯುತ್ತಿದ್ದೆ ಎಂದು ತಿಳಿಸಿದ್ದರು.

    ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಸುಷ್ಮಾ ಸ್ವರಾಜ್ ವಿಧಿವಶರಾಗಿದ್ದಾರೆ. ಈ ಟ್ವೀಟನ್ನು ಸಾವಿರಾರು ಜನರು ರೀ ಟ್ಟೀಟ್ ಮಾಡಿದ್ದಾರೆ. ಲಕ್ಷಾಂತರ ಜನರು ಲೈಕ್ ಮಾಡಿದ್ದಾರೆ.

    ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಮಂಗಳವಾರ ರಾತ್ರಿ ಏರುಪೇರು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣವೇ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

  • ಭಾರತ ಪಾಕಿಸ್ತಾನಕ್ಕೆ ಕಷ್ಟದ ನೆರೆ ರಾಷ್ಟ್ರ ಆಗಲಿದೆ: ಪಾಕ್ ಮಾಜಿ ಸಚಿವೆ

    ಭಾರತ ಪಾಕಿಸ್ತಾನಕ್ಕೆ ಕಷ್ಟದ ನೆರೆ ರಾಷ್ಟ್ರ ಆಗಲಿದೆ: ಪಾಕ್ ಮಾಜಿ ಸಚಿವೆ

    ನವದೆಹಲಿ: ಲೋಕಸಭಾ ಚುನಾವಣೆ 2019ರ ಬಗ್ಗೆ ಪಾಕಿಸ್ತಾನದಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ಹೊರಬರುತ್ತಿದೆ.

    ಪಾಕಿಸ್ತಾನದ ಮಾಜಿ ಮಾಹಿತಿ ಸಚಿವೆ ಹಾಗೂ ಪಾಕಿಸ್ತಾನ ಪೀಪಲ್ ಪಕ್ಷದ ನಾಯಕಿ ಶೆರ್ರಿ ರೆಹಮಾನ್ ಲೋಕಸಭಾ ಚುನಾವಣೆಯ ಬಗ್ಗೆ ನೆಗೆಟೀವ್ ಆಗಿ ಟ್ವೀಟ್ ಮಾಡಿದ್ದಾರೆ. “ಎಕ್ಸಿಟ್ ಪೋಲ್ ರೀತಿ ಫಲಿತಾಂಶ ಬಂದರೆ ಭಾರತ ಪಾಕಿಸ್ತಾನಕ್ಕೆ ಕಷ್ಟದ ನೆರೆ ರಾಷ್ಟ್ರ ಆಗಲಿದೆ” ಎಂದು ಟ್ವೀಟ್ ಮಾಡಿದ್ದಾರೆ.

    ಪಾಕಿಸ್ತಾನದ ಪತ್ರಕರ್ತ ವಜಾಹತ್ ಕಝ್ಮಿ, “ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆ ಆಗಿದ್ದಾರೆ. ಅವರು ಪಾಕಿಸ್ತಾನದ ಜೊತೆ ಇರುವ ಸಮಸ್ಯೆ ಬಗ್ಗೆ ಮಾತನಾಡಿ ಪರಿಹರಿಸಿಕೊಳ್ಳಿ” ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

    ಮತ್ತೊಬ್ಬರು ಪಾಕಿಸ್ತಾನಿ ಪತ್ರಕರ್ತರಾದ ಉಸ್ಮಾನ್ ತನ್ವೀರ್ ಅವರು ಕೂಡ ಟ್ವೀಟ್ ಮಾಡುವ ಮೂಲಕ ಮೋದಿಗೆ ಅಭಿನಂದಿಸಿದ್ದಾರೆ. “ಪ್ರಧಾನಿ ಇಮ್ರಾನ್ ಖಾನ್ ಅವರ ಭವಿಷ್ಯ ನಿಜವಾಗಿದೆ. ನಾನು ಅವರಿಗೂ ಅಭಿನಂದನೆ ಹೇಳಲು ಇಷ್ಟಪಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

  • ಮಾಜಿ ಸಚಿವೆ ಮೋಟಮ್ಮ ಪತಿಯಿಂದ ಕಿರುಕುಳ- ದಯಾಮರಣಕ್ಕೆ ರೈತ ಕುಟುಂಬ ಮನವಿ

    ಮಾಜಿ ಸಚಿವೆ ಮೋಟಮ್ಮ ಪತಿಯಿಂದ ಕಿರುಕುಳ- ದಯಾಮರಣಕ್ಕೆ ರೈತ ಕುಟುಂಬ ಮನವಿ

    ಮಂಡ್ಯ: ಕಳೆದ 60 ವರ್ಷಗಳಿಂದ ಉಳುಮೆ ಮಾಡುತ್ತಿದ್ದ ಗದ್ದೆ ತಮಗೆ ಬರಬೇಕೆಂದು ಮಾಜಿ ಸಚಿವೆ ಮೋಟಮ್ಮ ಅವರ ಪತಿ ವೆಂಕಟರಾಮು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರೈತ ಕುಟುಂಬವೊಂದು ದಯಾಮರಣ ನೀಡಿ ಎಂದು ಅಸಹಾಯಕತೆ ಹೊರಹಾಕುತ್ತಿದೆ.

    ಈ ಘಟನೆ ಮಂಡ್ಯದ ಕೀಲಾರ ಗ್ರಾಮದಲ್ಲಿ ನಡೆದಿದೆ. ನಾಗರಾಜು ಮತ್ತು ಮೂರ್ತಿ ಎಂಬವರಿಗೆ ಸೇರಿದ 20 ಗುಂಟೆ ಗದ್ದೆಯ ಪಕ್ಕದಲ್ಲೇ ಮಾಜಿ ಸಚಿವೆ ಮೋಟಮ್ಮ ಅವರ ಪತಿ ವೆಂಕಟರಾಮು ಅವರ ಗದ್ದೆಯಿದೆ. ಇದೀಗ ಮೋಟಮ್ಮ ಅವರ ಪತಿ ವೆಂಕಟರಾಮು ಅವರು, ಅವರ ಗದ್ದೆಯ ಪಕ್ಕದಲ್ಲಿರುವ ನಮ್ಮ ಗದ್ದೆಯ ಮೇಲೆ ಕಣ್ಣು ಹಾಕಿ, ಗದ್ದೆಯನ್ನು ಊಳಲು ಬಿಡುತ್ತಿಲ್ಲ ಅಂತ ರೈತ ಆರೋಪಿಸುತ್ತಿದ್ದಾರೆ.

    ಕೀಲಾರ ಗ್ರಾಮದ ಸರ್ವೆ ನಂಬರ್ 357 ಮತ್ತು 358 ಸರ್ವೆ ನಂಬರ್ ವ್ಯಾಪ್ತಿಯಲ್ಲಿ ಬರುವ 20 ಗುಂಟೆ ಗದ್ದೆಯನ್ನು ಕಳೆದ 60 ವರ್ಷಗಳಿಂದ ನಾವೇ ಊಳುತ್ತಿದ್ದೇವೆ. ಈ ಜಮೀನು ಸರ್ಕಾರದಿಂದ ನಮಗೆ ಕೊಡುಗೆಯಾಗಿ ಬಂದಿದೆ. ಆದ್ರೆ ಈಗ ಏಕಾಏಕಿ ಮೋಟಮ್ಮ ಪತಿ ವೆಂಕಟರಾಮು ಮತ್ತು ಜೊತೆಯವರು ಸೇರಿಕೊಂಡು ಗದ್ದೆಯಲ್ಲಿ ನಾಟಿ ಮಾಡಲು ಬಿಡುತ್ತಿಲ್ಲ. ಸುತ್ತಮುತ್ತ ಎಲ್ಲರ ಗದ್ದೆಯೂ ನಾಟಿ ಮಾಡಿಯಾಗಿದೆ. ಆದ್ರೆ ನಮ್ಮ ಗದ್ದೆ ಮಾತ್ರ ನಾಟಿ ಕೆಲಸ ಆಗದೇ ಹಾಗೇ ಉಳಿದಿದೆ ಎಂದು ನಾಗರಾಜು ಮತ್ತು ಮೂರ್ತಿ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.

    ನಾಗರಾಜು, ಮೂರ್ತಿ ಹಾಗೂ ಮೋಟಮ್ಮ ಪತಿ ವೆಂಕಟರಾಮು ಎಲ್ಲರೂ ಸಂಬಂಧಿಕರೇ ಆಗಿದ್ದು ಹಳೇ ವೈಷಮ್ಯದಿಂದ ಗಲಾಟೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಕೆರಗೋಡು ಪೊಲೀಸ್ ಠಾಣೆಗೆ ದೂರು ನೀಡಿರುವ ನಾಗರಾಜು, ನಾನು ನಿವೃತ್ತ ಎಸ್‍ಐ ಆಗಿದ್ರು ಮಾಜಿ ಸಚಿವರ ಕುಟುಂಬದ ದೌರ್ಜನ್ಯ ಎದುರಿಸಲು ಆಗುತ್ತಿಲ್ಲ ಎಂದು ಅಸಹಾಯಕತೆ ಹೊರಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv