Tag: ಮಾಜಿ ಸಚಿವ ಜನಾರ್ದನ ರೆಡ್ಡಿ

  • ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ

    ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ

    ಬೆಂಗಳೂರು: ಅಂಬಿಡೆಂಟ್ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬಳ್ಳಾರಿ ಅಕ್ರಮ ಅದಿರು ಗಣಿಗಾರಿಕೆ ಪ್ರಕರಣ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ವಿರುದ್ಧ ವಿಶೇಷ ತನಿಖಾ ತಂಡ (ಎಸ್‍ಐಟಿ) ಚಾರ್ಜ್ ಶೀಟ್ ಸಲ್ಲಿಸಿದೆ.

    ಶೇಖ್ ಸಾಬ್ ಗಣಿಯಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿರುವ ಜನಾರ್ದನ ರೆಡ್ಡಿ ಮತ್ತು ಆಪ್ತರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ್ಕಕೆ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಚಾರ್ಜ್ ಶೀಟ್ ನಲ್ಲಿ ಜನಾರ್ದನ ರೆಡ್ಡಿ ಎ 1 ಆರೋಪಿಯಾಗಿದ್ದು, ಎ 2 ಆಗಿ ಅಲಿಖಾನ್ ಹಾಗೂ ಎ 3 ಆರೋಪಿಯಾಗಿ ಶ್ರೀನಿವಾಸ ರೆಡ್ಡಿ ಅವರ ಹೆಸರು ಉಲ್ಲೇಖ ಮಾಡಲಾಗಿದೆ. ಉಳಿದಂತೆ ಮತ್ತೊಬ್ಬ ಆರೋಪಿ ಖಾರದ ಪುಡಿ ಮಹೇಶ್ ಸೇರಿ ಹಲವರನ್ನು ಚಾರ್ಜ್ ಶೀಟ್ ನಿಂದ ಕೈ ಬಿಡಲಾಗಿದೆ.

    ಜನಾರ್ದನ ರೆಡ್ಡಿ ವಿರುದ್ಧ IPಅ 379, 420, 120ಬಿ, ಎಂಎಂಡಿಆರ್ ಕಾಯ್ದೆಯ 125ನಿಯಮ, ಕರ್ನಾಟಕ ಅರಣ್ಯ ಖಾಯ್ದೆ ನಿಯಮ 144ರ ಅಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಸುಮಾರು 1,069 ಮೆಟ್ರಿಕ್ ಟನ್ ಅದಿರು ಅಕ್ರಮ ಗಣಿಗಾರಿಗೆ ನಡೆಸಿದ್ದಾರೆ ಹಾಗು ಅಕ್ರಮ ಗಣಿಗಾರಿಕೆ ನಡೆಸಿ ರಾಜ್ಯ ಸರ್ಕಾರಕ್ಕೆ 23,89,650 ರೂ. ನಷ್ಟ ಮಾಡಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ. ಅಂದಹಾಗೇ ಶೇಖ್ ಸಾಬ್ ಎಂಬವರಿಂದ ರೆಡ್ಡಿ & ಟೀಂ ಗಣಿ ಕಂಪನಿಯ ಗುತ್ತಿಗೆ ಪಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೆಡ್ಡಿ ಆಪ್ತ ಅಲಿಖಾನ್‍ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ರೆಡ್ಡಿ ಆಪ್ತ ಅಲಿಖಾನ್‍ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    – ಪೊಲೀಸರ ಮುಂದೆ ಶರಣಾದ ಗಣಿಧಣಿ ಬಂಟ

    ಬೆಂಗಳೂರು: ಆಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ  ನಿರೀಕ್ಷಣಾ ಜಾಮೀನು ಅರ್ಜಿಯನ್ನ ತಿರಸ್ಕರಿಸಲಾಗಿದ್ದು, ಇದರ ಪರಿಣಾಮ ಒಂದನೇ ಎಸಿಎಂಎಂ ನ್ಯಾಯಾಲಯದ ಮುಂದೆ ಅಲಿಖಾನ್ ಶರಣಾಗಿದ್ದಾನೆ.

    ನಗರದ 61 ನೇ ಸಿಸಿಹೆಚ್ ನ್ಯಾಯಾಲಯದ ನ್ಯಾಯಮೂರ್ತಿ ವಿದ್ಯಾಧರ್ ಶಿರಹಟ್ಟಿ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇತ್ತ ಅಲಿಖಾನ್ ಶರಣಾಗುತ್ತಿದಂತೆ ನ್ಯಾಯಾಲಯದ ಮುಂದೇ ಹಾಜರಾದ ಪ್ರಕರಣದ ತನಿಖಾಧಿಕಾರಿ ವೆಂಕಟೇಶ್ ಪ್ರಸನ್ನ ಅವರು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿಗಳು, ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿರುವುದರಿಂದ ಪೊಲೀಸ್ ಕಸ್ಟಡಿ ಕೋರಿ ಮತ್ತೊಂದು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದರು.

    ನ್ಯಾಯಾಲಯ 7 ದಿನಗಳ ಕಾಲ ಅಲಿಖಾನ್‍ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ನಾಳೆ ಸಾರ್ವತ್ರಿಕ ರಜೆ ಕಾರಣ ಸಿಸಿಬಿ ಪೊಲೀಸರ ಕಸ್ಟಡಿ ಅರ್ಜಿ ಗುರುವಾರ ವಿಚಾರಣೆಗೆ ಬರಲಿದೆ. ಇದರಿಂದ ನ.27 ರ ತನಕ ಅಲಿಖಾನ್ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾನೆ. ಈ ಕುರಿತು ಒಂದನೇ ಎಸಿಎಂಎಂ ನ್ಯಾಯಮೂರ್ತಿ ಜಗದೀಶ್ ಆದೇಶ ನೀಡಿದ್ದಾರೆ.

    ಅಲಿಖಾನ್ ವಿರುದ್ಧ ಇಡಿ ಹೆಸರಿನಲ್ಲಿ ಡೀಲ್ ಮಾಡಿದ ಆರೋಪ ಮಾಡಲಾಗಿದ್ದು, 18 ಕೋಟಿ ಮೌಲ್ಯದ ಚಿನ್ನ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಆರೋಪಿಸಿದ್ದಾರೆ. ಈ ಹಿಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಅಲಿಖಾನ್ ಹಣವನ್ನು ಹಿಂದಿರುಗಿಸುವುದಾಗಿ ಹೇಳಿದ್ದ. ಅಲ್ಲದೇ ಈ ಹಣವನ್ನು ಸಾಲದ ರೂಪದಲ್ಲಿ ಪಡೆದಿದ್ದು, ದೇವರ ಹರಕೆ ತೀರಿಸಿಲು ಪಡೆದಿದ್ದಾಗಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದ.

    ಅಲಿಖಾನ್ ಪರ ವಕೀಲ ಚಂದ್ರಶೇಖರ್ ಸೋಮವಾರ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಸಿಸಿಬಿ ಪರ ಪಿಪಿ ಶೈಲಾಜಾ ನಾಯಕ್ ವಾದ ಮಾಡಿದ್ದು, ಪ್ರಕರಣದಲ್ಲಿ ಅಲಿಖಾನ್ ಭಾಗಿಯಾಗಿರುವುದು ಕಂಡು ಬಂದಿದೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಅವಶ್ಯಕತೆ ಇದೆ. ಪರೋಕ್ಷವಾಗಿ ತಾನು ಭಾಗಿಯಾದ ಬಗ್ಗೆ ಅಲಿಖಾನ್ ಒಪ್ಪಿಗೆ ನೀಡಿದ್ದು, ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ನಾನು ಗೌರವಯುತವಾಗಿ ಹಣ ವಾಪಸ್ ಕೊಡುವುದಾಗಿ ಹೇಳಿದ್ದಾರೆ. ಅಲ್ಲದೇ ತಾಜ್ ಹೋಟೆಲ್ ನಲ್ಲಿ ಫರೀಧ್ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಎಲ್ಲರ ಭೇಟಿ ಸಂಶಯಾಸ್ಪದವಾಗಿದೆ ಎಂದು ವಾದ ಮಂಡಿಸಿದ್ದರು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು, ನಾಳೆ ಸಾರ್ವತ್ರಿಕ ರಜೆ ಹಿನ್ನೆಲೆ, ಗುರುವಾರ ಪೊಲೀಸ್ ಕಸ್ಟಡಿಗೆ ಪಡೆಯಲು ಸಿಸಿಬಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗುವುದು, 18 ಕೋಟಿ ರೂ. ಹಣವನ್ನ ಸ್ವಾಧೀನಕ್ಕೆ ಪಡೆಯಲು ಬಾಡಿ ವಾರೆಂಟ್ ಮೇಲೆ ಕಸ್ಟಡಿ ಪಡೆಯಲಾಗುದು ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಜಕೀಯ ಸೇಡಿಗೆ ಪೊಲೀಸ್ ವ್ಯವಸ್ಥೆ ದುರುಪಯೋಗ – ರೆಡ್ಡಿ ಪರ ಬಿಎಸ್‍ವೈ ಬ್ಯಾಟಿಂಗ್

    ರಾಜಕೀಯ ಸೇಡಿಗೆ ಪೊಲೀಸ್ ವ್ಯವಸ್ಥೆ ದುರುಪಯೋಗ – ರೆಡ್ಡಿ ಪರ ಬಿಎಸ್‍ವೈ ಬ್ಯಾಟಿಂಗ್

    ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪ ಮಾಡಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಎಸ್‍ವೈ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಯಾರು ಯಾರ ಮಾತನ್ನೂ ಕೇಳದ ಪರಿಸ್ಥಿತಿಯಲ್ಲಿ ಆಡಳಿತ ಯಂತ್ರ ದುರುಪಯೋಗವಾಗುತ್ತಿದೆ. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರು ನಗರದಲ್ಲಿ ಹಾಡಹಗಲೇ ಸಮಾಜಘಾತುಕ ಶಕ್ತಿಗಳು ಕತ್ತಿ ಝಳಪಿಸುತ್ತಿವೆ. ಪೊಲೀಸ್ ಇಲಾಖೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವಾಗುತ್ತಿದ್ದು, ಇದಕ್ಕೆ ಜನಾರ್ದನ ರೆಡ್ಡಿಯವರನ್ನು ಬಂಧಿಸಿ ಬಿಡುಗಡೆಗೊಳಿಸಿರುವುದು ತಾಜಾ ಉದಾಹರಣೆಯಾಗಿದೆ. ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ. ಇದು ಅಧಿಕಾರ ದುರುಪಯೋಗ ಅಲ್ಲದೇ ಮತ್ತೇನು ಎಂದು ಪ್ರಶ್ನೆ ಮಾಡಿದ್ದಾರೆ.

    ನಗರದ ವಿಜಯನಗರದಲ್ಲಿ ಸಿಗರೇಟ್ ವಿಚಾರದಲ್ಲಿ ನಡೆದ ಕೊಲೆಯನ್ನು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು, ಘಟನೆಯ ವೀಡಿಯೋ ವೈರಲ್ ಆಗಿದ್ದು ಅಮಾನವೀಯ. ಇದು ಬೆಂಗಳೂರಿನಲ್ಲಿ ಇರುವ ಪೊಲೀಸ್ ಕಾನೂನು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಒಂದು ತಿಂಗಳಿನ ಹಿಂದೆ ಮಂಡ್ಯದಲ್ಲಿ ಸಾಲದ ಹಣ ಮರುಪಾವತಿಸಲಿಲ್ಲ ಎಂದು ಹೆಣ್ಣು ಮಗಳನ್ನು ಎಳೆದುಕೊಂಡು ಜೀಪ್‍ನಲ್ಲಿ ತೆಗೆದುಕೊಂಡು ಹೋದ ಪ್ರಕರಣ ಹಾಗೇ ಮುಚ್ಚಿಹೋಗಿದ್ದು, ಅಭಿವೃದ್ಧಿ ಕಾರ್ಯವಲ್ಲದೇ ಸರ್ಕಾರದ ಎಲ್ಲಾ ಅಂಗಗಳೂ ಮುರಿದು ಬಿದ್ದಿವೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟರೆ ಯಾವುದೇ ಉದ್ದಿಮೆದಾರ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ. ಈ ಎಲ್ಲ ಅಪರಾಧ ಘಟನೆಗಳು ರಾಜ್ಯದ ಅಭಿವೃದ್ಧಿ ಮತ್ತು ಹೂಡಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದೆಲ್ಲಕ್ಕೂ ಪೊಲೀಸ್ ವ್ಯವಸ್ಥೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವೇ ಕಾರಣವಾಗಿದೆ ಎಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜೈಲಿನಿಂದ ಹೊರ ಬಂದ ಗಣಿಧಣಿ

    ಜೈಲಿನಿಂದ ಹೊರ ಬಂದ ಗಣಿಧಣಿ

    -ಸ್ಫೋಟಕ ಮಾಹಿತಿ ಹೊರಹಾಕಿದ ರೆಡ್ಡಿ
    -ಇನ್ಮುಂದೆ ನಾನು ಸುಮ್ಮನೆ ಕುಳಿತುಕೊಳ್ಳಲ್ಲ

    ಬೆಂಗಳೂರು: ಭಾನುವಾರ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಕೋರ್ಟ್ ಇಂದು ಜಾಮೀನು ನೀಡಿತ್ತು. ಸಂಜೆ ಪರಪ್ಪನ ಅಗ್ರಹಾರದಿಂದ ಹೊರ ಬಂದ ಜನಾರ್ದನ ರೆಡ್ಡಿ ನೇರವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಪರಪ್ಪನ ಅಗ್ರಹಾರದ ಮುಂದೆ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ಮೊದಲಿಗೆ ಬಿಜೆಪಿ ಹಿರಿಯ ನಾಯಕ ಅನಂತಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ನನಗೆ ರಾಜಕೀಯ ಜನ್ಮ ನೀಡಿದ ಅನಂತಕುಮಾರ್ ಅವರ ಸಾವು ನನಗೆ ದುಃಖ ತಂದಿದೆ. ಅನಂತಕುಮಾರ್ ಅವರ ಸಾವಿನ ಸುದ್ದಿ ವೇಳೆ ಕಣ್ಣೀರಲ್ಲೇ ನಾನು ಇದ್ದೆ. ಹಲವರು ವಿಚಾರದಲ್ಲಿ ನನಗೆ ತೊಂದರೆ ಕೊಟ್ಟರು ಕೊನೆಯ ಬಾರಿಗೆ ನನಗೆ ಅಣ್ಣನ ಮುಖ ನೋಡಲು ಸಾಧ್ಯವಾಗದಂತೆ ಮಾಡಿದರು ಎಂದು ಭಾವುಕರಾದರು.

    ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡುತ್ತಿದ್ದರು. ಅನಂತಕುಮಾರ್ ಅವರು ಒಂದು ಸಾರಿ ನಮ್ಮ ಮನೆಗೆ ಆಗಮಿಸಿದ್ದರು. ಅಂದು ನನ್ನ ಮೊದಲ ಬ್ಯುಸಿನೆಸ್ ಎನೋಬೆಲ್ ಸಂಸ್ಥೆಯಿಂದ ಹೊರ ಬಂದ ನಂತರ ಬಳಿಕ ವಿಮಾನಯಾನ ಸೇವೆ ನಡೆಸಲು ತೀರ್ಮಾನಿಸಿದ್ದೆ. ಆದರೆ ಅವರು ಬೇಡ ಎಂದು ಸಲಹೆ ನೀಡಿದ ಬಳಿಕ ಗಣಿಗಾರಿಕೆ ಆರಂಭ ಮಾಡಿದೆ. ಆ ಬಳಿಕವೇ ನಾನು ಇಷ್ಟು ದೊಡ್ಡ ವ್ಯಕ್ತಿಯಾದೆ. ಅವರ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷನಾದೆ. ಆ ಬಳಿಕ ಶ್ರಮವಹಿಸಿ ಬಳ್ಳಾರಿಯಲ್ಲಿ ಪಕ್ಷ ನಿರ್ಮಾಣ ಮಾಡಿದೆ. ಅವರು ರಾಜ್ಯಾಧ್ಯಕ್ಷರಾಗಿದ್ದರು ಎಂದು ನೆನೆದುಕೊಂಡರು.

    ಅನಂತ್ ಕುಮಾರ್ ಅವರು ನೀಡಿದ ಸ್ಫೂರ್ತಿಯಿಂದ ನನ್ನ ಸಹೋದರ ಮೊದಲ ಬಾರಿಗೆ ಎಂಪಿ ಆಗಿ ಆಯ್ಕೆ ಆಗಿದ್ದರು. ಗಣಿ ಹಗರಣದ ಬಳಿಕವೂ ಅವರು ನನಗೆ ಆರೋಪ ಮುಕ್ತರಾದ ಬಳಿಕ ಮತ್ತೆ ಪಕ್ಷಕ್ಕೆ ಕರೆತರುವ ಮಾತು ಹೇಳಿದ್ದರು. ಅವರು ಇನ್ನು 10 ವರ್ಷ ಇದ್ದಿದ್ದರೆ ಪ್ರಧಾನಿ ಆಗುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿಯೇ ಅವರನ್ನು ಕಳೆದು ಕೊಂಡಿದ್ದೇವೆ ಎಂದು ಬೇಸರ ವ್ಯಕ್ತಡಿಸಿದರು. ಇಂದು ನನಗೆ ಬಂಧನ ಆಗಿರುವ ಬಗ್ಗೆ ನನಗೆ ದುಃಖ ಇಲ್ಲ. ಆದರೆ ಅಣ್ಣನ ಮುಖ ನೋಡದಂತೆ ಮಾಡಿರುವುದು ನನಗೆ ಬೇಸರ ಆಗಿದೆ.

    ಸಿಎಂಗೆ ಹಾವಿನ ದ್ವೇಷ:
    ಸಿಎಂ ಕುಮಾರಸ್ವಾಮಿ ಅವರು  12 ವರ್ಷಗಳ ಹಿಂದಿನ ತಮ್ಮ ಹಾವಿನ ದ್ವೇಷವನ್ನು ತೀರಿಸಿಕೊಂಡಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಿಎಂ ನನ್ನ ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದರು. 2006ರಲ್ಲಿ 1500 ಪೊಲೀಸರನ್ನು ಕಳುಹಿಸಿ ನನ್ನನ್ನು ಬಂಧಿಸಲು ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಅದೇ ದ್ವೇಷವನ್ನು ಮುಂದುವರೆಸಿಕೊಂಡ ಬಂದ ಸಿಎಂ ಇಂದು ನನ್ನನ್ನು ಜೈಲಿಗೆ ಕಳುಹಿಸಿದರು ಎಂದು ಆರೋಪಿಸಿದರು.

    ಅಂಬಿಡೆಂಟ್ ಸಂಸ್ಥೆಯಲ್ಲಿ ಅಲಿಖಾನ್ ಲಕ್ಷಾಂತರ ಕೋಟಿ ಹೂಡಿಕೆ ಮಾಡಿದ್ದಾರೆ. ಇದು ಹೇಗೆ ಡೀಲ್ ಮಾಡಲು ಸಾಧ್ಯ. ಅಂಬಿಡೆಂಟ್ ವಿರುದ್ಧ ದೂರು ಕೊಟ್ಟ ವೇಳೆ ಆಗಿನ ಸಿಎಂ, ಪೊಲೀಸ್ ಆಧಿಕಾರಿಗಳು ಏಕೆ ಕ್ರಮಕೈಗೊಳ್ಳಲಿಲ್ಲ. ಆ ವೇಳೆ ಅಂಬಿಡೆಂಟ್ ಕಂಪನಿ ಜೊತೆ ಅಲಿಖಾನ್ ಜಗಳ ಮಾಡಿಕೊಂಡಿದ್ದರು. ಬಳಿಕವಷ್ಟೇ ಫರೀದ್ ನನ್ನ ಭೇಟಿ ಮಾಡಿದ್ದು ಅಷ್ಟೇ. ಆ ವೇಳೆ ಗೃಹ ಸಚಿವರು ರಾಮಲಿಂಗ ರೆಡ್ಡಿ ಆಗಿದ್ದರು. ಅವರಿಗೆ ಮಾಹಿತಿ ನೀಡಿದ ಬಳಿಕವೇ ಘಟನೆ ನಡೆದಿದೆ. ಅದ್ದರಿಂದ ಅವರನ್ನು ಬಂಧನ ಮಾಡಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದರು.

    ಜನಾರ್ದನ ರೆಡ್ಡಿ ಅವರಿಂದ ಬಿಜೆಪಿ ಪಕ್ಷಕ್ಕೆ ಕೆಟ್ಟ ಹೆಸರು ಬಂದಿಲ್ಲ. ಇದನ್ನು ಹಿರಿಯ ನಾಯಕರೇ ಹೇಳುತ್ತಾರೆ. ಜನಾರ್ದನ ರೆಡ್ಡಿ ಎಂದಿಗೂ ಕೊಡುವ ಕೈ ಆಗುತ್ತದೆ ವಿನಃ ತೆಗೆದುಕೊಳ್ಳುವ ಕೈ ಆಗುವುದಿಲ್ಲ. ಆದ್ದರಿಂದ ಮಾಧ್ಯಮಗಳು ನನ್ನ ಮೇಲಿನ ವಿರುದ್ಧ ವರದಿ ಮಾಡುವುದು ಬೇಸರ ತಂದಿದೆ. ಆದರೆ ನಾನು ಆತ್ಮೀಯ ಸ್ನೇಹಿತನ ವಿಚಾರಕ್ಕಾಗಿ ಮಾತ್ರ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡಿದ್ದೇನೆ ಅಷ್ಟೇ.

    ಕಳೆದ 4 ವರ್ಷ ಜೈಲಿನಲ್ಲಿ ಇದ್ದ ವೇಳೆ ನನ್ನ ಕುಟುಂಬ ಪಟ್ಟ ಕಷ್ಟ ದೂರ ಮಾಡಲು ಜೈಲಿನಿಂದ ಬಂದ ಬಳಿಕ ಸುಮ್ಮನೆ ಇದ್ದೆ. ಆದರೆ ನನ್ನ ಮೇಲೆ ಸುಮ್ಮನೆ ಇದ್ದರು ಈ ರೀತಿ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಬಳಕೆ ಮಾಡಿ ನನ್ನ ಮೇಲೆ ದ್ವೇಷ ಸಾಧನೆ ಮಾಡುತ್ತಿದ್ದಾರೆ. ಸಿಸಿಬಿ ಅಧಿಕಾರಿಗಳ ಮೇಲೆ ಒತ್ತಡ ಇದ್ದಿದ್ದರಿಂದ ಈ ರೀತಿ ವರ್ತನೆ ಮಾಡಿದ್ದಾರೆ. ಆದರೆ ಮಾಧ್ಯಮಗಳು ನೀಡಿದ ಕೆಲ ವರದಿಗಳು ನನ್ನ ನೋವನ್ನು ಸ್ವಲ್ಪ ದೂರ ಮಾಡಿವೆ ಅಂತಾ ಅಂದ್ರು.

    ಬೆಂಗ್ಳೂರಿನಿಂದ ನನ್ನನ್ನು ಓಡಿಸುವ ಪ್ರಯತ್ನ:
    ಉಪಚುನಾವಣೆ ವೇಳೆಯೇ ನನ್ನ ಮೇಲೆ ಸಂಚು ರೂಪಿಸಲಾಗಿತ್ತು. ಇದನ್ನು ನಾನು ಅಂದೇ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೆ. ನನಗೆ ಜೀವ ಭಯವಿದೆ ಎಂದು ಭದ್ರತೆ ನೀಡಿ ಎಂದು ಮನವಿ ಮಾಡಿಕೊಂಡರು ನಿರ್ಲಕ್ಷ್ಯ ಮಾಡಿದ್ದಾರೆ. ನಾನೋರ್ವ ಮಾಜಿ ಸಚಿವನಾಗಿದ್ದು, ಭದ್ರತೆ ನೀಡಬೇಕೆಂದು ಕೇಳಿದ್ರು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇಂದು ನಾನು ಬಳ್ಳಾರಿಗೆ ಹೋಗುವಂತಿಲ್ಲ. ಹಾಗಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಇಲ್ಲಿಂದಲೂ ನನ್ನನ್ನು ಹೊರಹಾಕುವ ಪ್ರಯತ್ನ ಮಾಡಲಾಗ್ತಿದೆ ಎಂದು ಗರಂ ಆದ್ರು.

    ಲಾಟರಿ ಹೊಡೆದು ಅಧಿಕಾರ:
    ಕುಮಾರಸ್ವಾಮಿ ಅವರು ಲಾಟರಿ ಹೊಡೆದು ಅಧಿಕಾರಕ್ಕೆ ಬಂದಿದ್ದಾರೆ. ಆದರೆ ನನ್ನನ್ನು ಬೆಂಗಳೂರು ಬಿಟ್ಟು ಕಳುಹಿಸಲು ಸಾಧ್ಯವಿಲ್ಲ. ನನ್ನ ಜೀವಕ್ಕೆ ಅಪಾಯ ಇದೆ ಎಂಬ ವಾತಾವರಣ ನಿರ್ಮಾಣ ಆಗುತ್ತಿದೆ. ಈ ಹಿಂದೆಯೂ ರಕ್ಷಣೆಗೆ ಮನವಿ ಸಲ್ಲಿಸಿದ್ದೆ. ಇಂದು ಕೂಡ ಮನವಿ ಸಲ್ಲಿಸುತ್ತೇನೆ. ಆದರೆ ನಿಮ್ಮ ಭದ್ರತೆಯನ್ನು ನಂಬುವುದಿಲ್ಲ. ಆದರೆ ಇನ್ನು ನನ್ನ ಮೇಲಿನ ಆರೋಪದ ಬಳಿಕ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಇನ್ನು ನಿಮ್ಮ ಅಧಿಕಾರ 6 ತಿಂಗಳ ಅಥವಾ 5 ವರ್ಷ ಎಷ್ಟು ಅಂತಾ ದೇವರು ನಿರ್ಧಾರ ಮಾಡುತ್ತಾನೆ. ಆಂಧ್ರಪ್ರದೇಶದಲ್ಲಿ ನನಗೆ ಭದ್ರತೆ ಇದೆ, ಆದರೆ ರಾಜ್ಯದಲ್ಲಿ ಇಲ್ಲ ಏಕೆ ಎಂದು ಪ್ರಶ್ನೆ ಮಾಡಿದರು.

    ಮುಂದಿನ ಹಂತದಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇನೆ. ಕರ್ನಾಟಕದ ಹೈಕೋರ್ಟ್ ನನ್ನ ಮೇಲಿನ ಎಲ್ಲಾ ಆರೋಪಗಳನ್ನು ದೂರು ಮಾಡಿದೆ. ಆದರೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ಮಾಡಲಾಗಿದೆ. ಅದನ್ನು ಎದುರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ನಾನು ರಾಜ್ಯದಲ್ಲಿ ಕೋಟಿ ಕೋಟಿ ಹೂಡಿಕೆ ಮಾಡಲು ಸಿದ್ಧತೆ ಸಿದ್ಧನಿದ್ದೇನೆ. ಆದರೆ ನನ್ನನ್ನು 8-10 ಕೋಟಿ ರೂ. ಆರೋಪದಲ್ಲಿ ಬಂಧಿಸಿರುವುದು ನನಗೆ ಅನುಮಾನ ಆಗುತ್ತಿದೆ. ಪುಣ್ಯಕೋಟಿ ಪದ್ಯದಲ್ಲಿ ಹೇಳಿರುವಂತೆ ನಾನು ನನ್ನ ಮಾಂಸಖಂಡ, ಹೃದಯ ಎಲ್ಲವನ್ನು ನೀಡುವುದಕ್ಕೆ ಸಿದ್ಧನಿದ್ದು. ಈ ಸರ್ಕಾರದ ದುರಾಡಳಿತ ಇನ್ನು ಹೆಚ್ಚು ದಿನ ನಡೆಯಲು ಸಾಧ್ಯವಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • 10 ದಿನದಲ್ಲಿ 18 ಕೋಟಿ ಹಣ ವಾಪಸ್ ಕೊಡೋದಾಗಿ ಅಲಿಖಾನ್ ಪ್ರಮಾಣಪತ್ರ!

    10 ದಿನದಲ್ಲಿ 18 ಕೋಟಿ ಹಣ ವಾಪಸ್ ಕೊಡೋದಾಗಿ ಅಲಿಖಾನ್ ಪ್ರಮಾಣಪತ್ರ!

    ಬೆಂಗಳೂರು: ಅಂಬಿಡೆಂಟ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಲಯ ಜಾಮೀನು ನೀಡಿದ್ದರೆ, ಇತ್ತ ರೆಡ್ಡಿ ಆಪ್ತ ಅಲಿಖಾನ್ 18 ಕೋಟಿ ರೂ.ಗಳನ್ನು ವಾಪಸ್ ನೀಡುವುದಾಗಿ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿದ್ದಾನೆ.

    ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿರುವ ಅಲಿಖಾನ್ ಪೂರ್ತಿ ಹಣವನ್ನು ಹಿಂದಿರುಗಿಸುತ್ತೇನೆ. ಸ್ವಲ್ಪ ಕಾಲಾವಕಾಶ ನೀಡಿ ಎಂದು ಮನವಿ ಸಲ್ಲಿಸಿದ್ದಾನೆ. ಅಲಿಖಾನ್ ಪ್ರಮಾಣ ಪತ್ರಕ್ಕೆ ಸಿಸಿಬಿ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದು, ಹಣ ನೀಡುವುದಾಗಿ ಹೇಳಿರುವ ಅಲಿಖಾನ್ ಎಷ್ಟು ದಿನಗಳಲ್ಲಿ ನೀಡುತ್ತಾರೆ ಎಂದು ತಿಳಿಸಿಲ್ಲ ಎಂದು ಹೇಳಿದ್ದರು. ಆದರೆ ಸಿಸಿಬಿ ಪೊಲೀಸರ ಅಕ್ಷೇಪದ ಬಳಿಕ 10 ದಿನಗಳಲ್ಲಿ ಹಣ ವಾಪಸ್ ನೀಡುತ್ತೇನೆ ಎಂದು ಮತ್ತೊಂದು ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

    ನ್ಯಾಯಾಲಯಕ್ಕೆ ಸಲ್ಲಿಕೆ ಆಗಿರುವ ಪ್ರಮಾಣ ಪಾತ್ರದಲ್ಲಿ ಅಲಿಖಾನ್ ನಾನು ದೇವರ ಹರಕೆ ತಿರುಸಲು ಚಿನ್ನವನ್ನು ಬಳಕೆ ಮಾಡಿಕೊಂಡಿದ್ದು, ಫರೀದ್ ಬಳಿ ಸಾಲದ ರೂಪದಲ್ಲಿ ಹಣ ಪಡೆದಿದ್ದೇನೆ. ದೇವರ ಹರಕೆ ತಿರಿಸಲು ಹಣ ಖರ್ಚು ಆಗಿದ್ದು, 10 ದಿನಗಳಲ್ಲಿ ಹಣ ಪಾವತಿ ಮಾಡುತ್ತೇನೆ ಎಂದು ತಿಳಿಸಲಾಗಿದೆ.

    ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆ ಮೇಲೆ ರೆಡ್ಡಿ ಸಹೋದರ ಕರುಣಾಕರ ರೆಡ್ಡಿ ಹಾಗೂ ಆಪ್ತ ಅಲಿಖಾನ್ ಪರಪ್ಪನ ಆಗ್ರಹಾರ ಜೈಲಿನ ಬಳಿ ಆಗಮಿಸಿದ್ದಾರೆ. ಇತ್ತ ಜಾಮೀನು ಸಿಕ್ಕ ಖುಷಿ ಸಂಗತಿ ತಿಳಿಸಿದ ಜನಾರ್ದನ ರೆಡ್ಡಿ ಬೆಂಬಲಿಗರು ಜೈಲಿನ ಬಳಿ ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಾದೆ ಮಾತು ಹೇಳಿ ರೆಡ್ಡಿ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ

    ಗಾದೆ ಮಾತು ಹೇಳಿ ರೆಡ್ಡಿ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ

    ಚಿಕ್ಕಮಗಳೂರು: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನಾರ್ದನ ರೆಡ್ಡಿ ಅವರ ನ್ಯಾಯಾಂಗ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

    ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳುತ್ತಾರೆ. ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದರು ಶಿಕ್ಷೆಯಾಗಲೇಬೇಕು. ನ್ಯಾಯಾಲಯ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುತ್ತೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ಬಿಜೆಪಿ ವರ್ಚಸ್ಸನ್ನು ಕಡಿಮೆ ಮಾಡಲು ಕಾಂಗ್ರೆಸ್ ತಂತ್ರ ಹೆಣೆದಿದೆ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನಾರ್ದನ ರೆಡ್ಡಿ ಅವರು ಬಿಜೆಪಿಯಲ್ಲೇ ಇಲ್ಲ. ಏಕೆಂದರೆ ರೆಡ್ಡಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೇ ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ಮಾತು ರೆಡ್ಡಿ ಅವರಿಗೆ ಏಕೆ ಎಂದು ಲೇವಡಿ ಮಾಡಿದರು.

    ಅಂಬಿಡೆಂಟ್ ಡೀಲ್ ಪ್ರಕಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನದ ನೀಡಿದೆ. ಇದರಂತೆ ಜನಾರ್ದನ ರೆಡ್ಡಿ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜನಾರ್ದನ ರೆಡ್ಡಿಗೆ 14 ದಿನ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಸೇರಿದ ರೆಡ್ಡಿ

    ಜನಾರ್ದನ ರೆಡ್ಡಿಗೆ 14 ದಿನ ನ್ಯಾಯಾಂಗ ಬಂಧನ – ಪರಪ್ಪನ ಅಗ್ರಹಾರ ಸೇರಿದ ರೆಡ್ಡಿ

    ಬೆಂಗಳೂರು: ಅಂಬಿಡೆಂಟ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನಗರದ ಒಂದನೇ ಎಸಿಎಂಎಂ ನ್ಯಾಯಾಧೀಶರು ಅದೇಶ ನೀಡಿದ್ದಾರೆ.

    ನ್ಯಾಯಾಲಯಕ್ಕೆ ಇಂದು ರಜೆ ಇರುವ ಕಾರಣ ಸಿಸಿಬಿ ಪೊಲೀಸರು ಜನಾರ್ದನ ರೆಡ್ಡಿ ಅವರನ್ನು ನ್ಯಾಯಾಧೀಶರ ಮನೆಗೆ ಕರೆತಂದು ಹಾಜರು ಪಡಿಸಿದ್ದರು. ಈ ವೇಳೆ ನ್ಯಾ.ಜಗದೀಶ ಅವರು ನ್ಯಾಯಾಂಗ ಬಂಧನ ಆದೇಶ ನೀಡಿದ್ದು, ಸದ್ಯ ಜನಾರ್ದನ ರೆಡ್ಡಿ ಮೂರನೇ ಬಾರಿಗೆ ಜೈಲು ಸೇರಿದ್ದಾರೆ.

    ಸಿಸಿಬಿ ಪೊಲೀಸರು ನೀಡಿದ ನೋಟಿಸ್ ಅನ್ವಯ ಶನಿವಾರವೇ ಸಿಸಿಬಿ ಕಚೇರಿಗೆ ಆಗಮಿಸಿದ್ದ ಜನಾರ್ದನ ರೆಡ್ಡಿ ಪೊಲೀಸರ ವಿಚಾರಣೆ ಎದುರಿಸಿದ್ದರು. ಆ ಬಳಿಕ ರೆಡ್ಡಿ ಅವರನ್ನು ವಶಕ್ಕೆ ಪಡೆದ ಪೊಲೀಸರು ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಇದರಂತೆ ಜನಾರ್ದನ ರೆಡ್ಡಿ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ.

    ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಜನಾರ್ದನ ರೆಡ್ಡಿ ಪರ ವಕೀಲರದ ಹನುಮಂತ ರಾಯಪ್ಪ ಅವರು, ಇದೊಂದು ಉದ್ದೇಶ ಪೂರಿತವಾದ ಪ್ರಕರಣವಾಗಿದ್ದು, ವಿಚಾರಣೆ ನಡೆಸಲು ಹಿಂದೇಟು ಹಾಕುವುದಿಲ್ಲ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಧೀಶರಿಗೆ ಮನವಿ ಮಾಡಿದರು. ಆದರೆ ನ್ಯಾಯಮೂರ್ತಿಗಳು ನ್ಯಾಯಾಂಗ ಬಂಧನ ಆದೇಶದ ಸೂಚನೆ ನೀಡಿದರು. ಇತ್ತ ರೆಡ್ಡಿ ಆಪ್ತ ಪ್ರಕರಣದ ಪ್ರಮುಖವಾಗಿರುವ ಅಲಿಖಾನ್‍ಗೂ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜನಾರ್ದನ ರೆಡ್ಡಿ ಅವರೊಂದಿಗೆ ಜೈಲು ಸೇರಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಕೀಲ ಚಂದ್ರಶೇಖರ್, ಜನಾರ್ದನ್ ರೆಡ್ಡಿ ಪ್ರಕರಣದಲ್ಲಿ ನಿರಪರಾಧಿ ಆಗಿದ್ದು, ಸೋಮವಾರ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗುವುದು. ಅಂಬಿಡೆಂಟ್ ಸಂಸ್ಥೆಗೂ ಜನಾರ್ದನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ. ಇದನ್ನ ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಡುತ್ತೇವೆ. ಜಾಮೀನಿಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಂಡಿದ್ದೇವೆ. ಸೋಮವಾರ ಖಂಡಿತ ನಮಗೆ ಜಾಮೀನು ಸಿಗುತ್ತೆ. ಪ್ರಕರಣದಲ್ಲಿ ರೆಡ್ಡಿ ಅವರ ಕೈವಾಡದ ಬಗ್ಗೆ ಯಾವುದೇ ಸೂಕ್ತ ಸಾಕ್ಷಿಗಳು ಇಲ್ಲ. ಉದ್ದೇಶ ಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರೆಡ್ಡಿ ಡೀಲ್ ಕೇಸ್‍ನಲ್ಲಿ ತಗ್ಲಾಕ್ಕೊಂಡಿದ್ದು ಹೇಗೆ?

    ರೆಡ್ಡಿ ಡೀಲ್ ಕೇಸ್‍ನಲ್ಲಿ ತಗ್ಲಾಕ್ಕೊಂಡಿದ್ದು ಹೇಗೆ?

    ಬೆಂಗಳೂರು: ಅಂಬಿಡೆಂಟ್ ಡೀಲ್ ಕೇಸ್‍ನಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೆಸರು ಬಂದಿರುವ ಹಿಂದೆ ಮಹತ್ವದ ಅಂಶಗಳಿದ್ದು, ಜನಾರ್ದನ ರೆಡ್ಡಿ ಅವರು ಎನ್ನೋಬೆಲ್ ಇಂಡಿಯಾ ಚಿಟ್‍ಫಂಡ್ ಕಂಪನಿ ನಿದೇರ್ಶಕರಾಗಿದ್ದೇ ಪ್ರಕರಣಲ್ಲಿ ಸಿಸಿಬಿ ಪೊಲೀಸರಿಗೆ ಅನುಮಾನ ಉಂಟಾಗಲು ಕಾರಣವಾಗಿದೆ ಎನ್ನಲಾಗಿದೆ.

    ಬಳ್ಳಾರಿಯಲ್ಲಿ ಎನ್ನೋಬೆಲ್ ಇಂಡಿಯಾ ಚಿಟ್‍ಫಂಡ್ ಕಂಪನಿ ಪ್ರಸಿದ್ಧ ಸಂಸ್ಥೆಯಾಗಿದ್ದು, ಸದ್ಯ ಇದೇ ಕಂಪನಿಯ ಹೆಸರಲ್ಲಿ 57 ಕೆಜಿ ಖರೀದಿ ಮಾಡಿದ್ದ ಚಿನ್ನದ ಬಿಲ್ ಲಭ್ಯವಾಗಿತ್ತು. ಈ ಕುರಿತು ಫರೀದ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು, ಇದೇ ವೇಳೆ ತಾಜ್ ವೆಸ್ಟ್ ಎಂಡ್ ಡೀಲ್ ಸತ್ಯ ಸಿಸಿಬಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಬಳ್ಳಾರಿಯ ರಾಜ್ ಮಹಲ್ ಜುವೆಲರ್ಸ್ ಮಾಲೀಕ ರಮೇಶ್, 57 ಕೆಜಿ ಚಿನ್ನದ ಬಿಲ್ ನ್ನು ಜನಾರ್ದನ ರೆಡ್ಡಿ ಒಡೆತನದ ಎನ್ನೋಬೆಲ್ ಇಂಡಿಯಾ ಚಿಟ್‍ಫಂಡ್ ಕಂಪನಿ ಹೆಸರಲ್ಲಿ ಮಾಡಿದ್ದರು. ಈ ವೇಳೆ ಎನ್ನೋಬೆಲ್ ಇಂಡಿಯಾ ಚಿಟ್‍ಫಂಡ್ ಸಂಸ್ಥೆಗೆ ಹೆಸರಿಗೆ ಬಂದ ಬಿಲ್ ಅನ್ವಯವಾಗಿ ಅಲಿಖಾನ್ ಡೀಲ್ ಮಾಡಿದ್ದರು ಎನ್ನಲಾಗಿದೆ. ಈ ವೇಳೆ ರೆಡ್ಡಿ ಆಪ್ತರಾಗಿದ್ದ ಅಲಿಖಾನ್ ಹೆಸರು ಪ್ರಕರಣದಲ್ಲಿ ಕೇಳಿ ಬರುತ್ತಿದಂತೆ ಸಂಸ್ಥೆಯ ನಿರ್ದೇಶಕರಾಗಿದ್ದ ಜನಾರ್ದನ ರೆಡ್ಡಿ ಹೆಸರು ಪ್ರಕರಣದಲ್ಲಿ ಕೇಳಿಬಂತು.

    ಎನ್ನೋಬೆಲ್ ಇಂಡಿಯಾ ಕಂಪನಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮಾತ್ರವಲ್ಲದೇ ಶಾಸಕ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿ, ಕರುಣಾಕರ್ ರೆಡ್ಡಿ ಅವರು ಕೂಡ ನಿರ್ದೇಶಕರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿಚಾರಣೆ ನಡೆಯುವ ಸಾಧ್ಯತೆಗಳು ಕೂಡ ಇದೆ. ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಅಲೋಕ್ ಕುಮಾರ್ ಅವರು, ನಮಗೆ 57 ಕೆಜಿ ಚಿನ್ನದ ಬಿಲ್ ರಹಸ್ಯ ಮಾತ್ರವಲ್ಲ, ಇದರ ಹಿಂದೆ ಮತ್ತಷ್ಟು ಮಾಹಿತಿ ಸಂಗ್ರಹಿಸಬೇಕಿದೆ ಎಂದು ತಿಳಿಸಿದ್ದರು. ಅಲೋಕ್ ಕುಮಾರ್ ಅವರ ಹೇಳಿಕೆಯಂತೆ ಸದ್ಯ ಎನ್ನೋಬೆಲ್ ಇಂಡಿಯಾ ಕಂಪನಿಯ ನಿರ್ದೇಶಕರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಜನಾರ್ದನ ರೆಡ್ಡಿಗೆ ದೀಪಾವಳಿ ಅಮಾವಾಸ್ಯೆ ಕಂಟಕ!

    ಜನಾರ್ದನ ರೆಡ್ಡಿಗೆ ದೀಪಾವಳಿ ಅಮಾವಾಸ್ಯೆ ಕಂಟಕ!

    ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಡೀಲ್ ಪ್ರಕರಣದಲ್ಲಿ ಸಿಲುಕಿದ ಬೆನ್ನಲ್ಲೇ ಅವರಿಗೆ ದೀಪಾವಳಿ ಅಮಾವಾಸ್ಯೆ ಕಂಟಕನಾ? ಎಂಬ ಅಂಶ ಚರ್ಚೆಗೆ ಕಾರಣವಾಗಿದೆ.

    ಈ ಹಿಂದೆಯೂ ಕೂಡ ಜನಾರ್ದನ ರೆಡ್ಡಿ ಅವರಿಗೆ ದೀಪಾವಳಿ ಅಮಾವಸ್ಯೆ ವೇಳೆಯೇ ಸಂಕಷ್ಟ ಎದುರಾಗಿತ್ತು. 2011ರಲ್ಲಿ ಜನಾರ್ದನ ರೆಡ್ಡಿ ಅವರನ್ನ ಮೊದಲ ಬಾರಿಗೆ ಬಂಧನ ಮಾಡುವ ವೇಳೆ ದೀಪಾವಳಿ ಅಮಾವಾಸ್ಯೆಗೆ ಕೇವಲ 15 ದಿನ ಮಾತ್ರ ಬಾಕಿ ಉಳಿದಿತ್ತು. 2012ರಲ್ಲಿಯೂ ಕೂಡ ದೀಪಾವಳಿ ಹಬ್ಬದ ಹೊತ್ತಲ್ಲೇ ಜಾಮೀನುಗಾಗಿ ಸಲ್ಲಿಕೆ ಮಾಡಿದ್ದ ವೇಳೆ ಬೇಲ್ ಡೀಲ್ ಆರೋಪದಲ್ಲಿ ಜನಾರ್ದನ ರೆಡ್ಡಿ ಸಿಲುಕಿದ್ದರು.

    ಮೈನಿಂಗ್ ಹಗರಣಕ್ಕೆ ಸಂಬಂದಿಸಿದಂತೆ ನವೆಂಬರ್ 20, 2015ರಂದು ಎಸ್‍ಐಟಿ ಅಧಿಕಾರಿಗಳು ರೆಡ್ಡಿ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದರು. ಸದ್ಯ ಆಂಬಿಡೆಂಟ್ ಡೀಲ್ ಪ್ರಕರಣದಲ್ಲೂ ದೀಪಾವಳಿಯ ಅಮಾವಸ್ಯೆ ವೇಳೆಯೇ ಬಂಧನ ಭೀತಿ ಎದುರಿಸುತ್ತಿದ್ದಾರೆ. ಸಿಸಿಬಿ ಪೊಲೀಸರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ವಿಚಾರಣೆಗೆ ಸಿಸಿಬಿ ಕಚೇರಿಗೆ ಆಗಮಿಸಿದ ವೇಳೆಯೇ ಬಂಧಿಸುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಅವರಿಗೆ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರು ಆದರೆ ನ್ಯಾಯಾಲಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭದ್ರಕೋಟೆ ಭೇದಿಸಿದ ಸಿಸಿಬಿ!

    ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭದ್ರಕೋಟೆ ಭೇದಿಸಿದ ಸಿಸಿಬಿ!

    ಬೆಂಗಳೂರು: ಅಂಬಿಡೆಂಟ್ ಕಂಪೆನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 61ನೇ ಸಿಟಿ ಸಿವಿಲ್ ಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದು, ಇತ್ತ 4 ದಿನಗಳ ಬಳಿಕ ರೆಡ್ಡಿ ಇರುವ ಸ್ಥಳವನ್ನು ಸಿಸಿಬಿ ಪತ್ತೆ ಮಾಡಿದೆ ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ಜನಾರ್ದನ ರೆಡ್ಡಿ ಬಂಧನ ಆಗುವ ಸಾಧ್ಯತೆಗಳಿವೆ. ಭಾನುವಾರ ವಿಚಾರಣೆಗೆ ಹಾಜರಾದರೆ ಬಂಧನದಿಂದ ರೆಡ್ಡಿ ಪಾರಾಗಲಿದ್ದು, ಒಂದು ವೇಳೆ ರೆಡ್ಡಿ ಎಸ್ಕೇಪ್ ಆಗಲು ಮುಂದಾದರೆ ಬಂಧನವಾಗುವ ಸಾಧ್ಯೆತಗಳಿವೆ.

    ಸಿಸಿಬಿ ಅರೆಸ್ಟ್ ಸುದ್ದಿ ಗೊತ್ತಾಗುತ್ತಿದ್ದಂತೆ ರೆಡ್ಡಿ ನಿಗೂಢ ಸ್ಥಳ ಬದಲಿಸುತ್ತಲೇ ಹೋಗಿದ್ದಾರೆ. ಅತ್ಯಾಪ್ತ ಅಲಿಖಾನ್, ಹಳೆ ಡ್ರೈವರ್ ಬಿಟ್ಟು ಅಜ್ಞಾತ ಸ್ಥಳದಲ್ಲಿ ವಾಸ ಮಾಡುತ್ತಿದ್ದಾರೆ. ಆ ನಿಗೂಢ ಸ್ಥಳವನ್ನು ಬದಲಿಸುತ್ತಲೇ ಹೋಗಿ ಇದೀಗ ಸಿಕ್ಕಿಬಿದ್ದಿದ್ದಾರೆ. ಹೈದರಾಬಾದ್, ಬಳ್ಳಾರಿ, ಬೆಂಗಳೂರು ಬಿಟ್ಟು ಬೇರೆ ಸ್ಥಳದಲ್ಲಿದ್ದಾರೆ. ಆದ್ರೆ ಆ ಅಜ್ಞಾತ ಸ್ಥಳದ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಬಿಟ್ಟುಕೊಡುತ್ತಿಲ್ಲ. ಅಲ್ಲಿಂದ ರೆಡ್ಡಿಯನ್ನು ಬೆಂಗಳೂರಿಗೆ ಕರೆತರಲು ಕನಿಷ್ಠ 8-10 ಗಂಟೆ ಬೇಕಾಗುತ್ತದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?:
    ಬಳ್ಳಾರಿ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರೆಡ್ಡಿ ಎಂಟ್ರಿಯಾಗಿದ್ದರು. ಇದೇ ಸಂದರ್ಭದಲ್ಲಿ ಸಚಿವ ಡಿಕೆಶಿ ಹಾಗೂ ಸಿಎಂ ಕುಮಾರಸ್ವಾಮಿ ಇಬ್ಬರು ಸೇರಿ ಶ್ರೀರಾಮುಲು ಕಟ್ಟಿ ಹಾಕಲು ತಂತ್ರ ರೂಪಿಸಿದ್ದರು. ರಾಮುಲು ಹಣದ ಮೂಲ ಪತ್ತೆಗೆ ಇಂಟಲಿಜೆನ್ಸ್ ರೆಡ್ಡಿ ಬೆನ್ನುಬಿದ್ದಿದ್ದು, ಅಂಬಿಡೆಂಟ್ ಜೊತೆ ನಂಟು ಬಗ್ಗೆ ಸಿಎಂಗೆ ಇಂಟಲಿಜೆನ್ಸ್ ನಿಂದ ಮಾಹಿತಿ ಸಿಕ್ಕಿದೆ. ಹೀಗಾಗಿ ಕೂಡಲೇ ಸಿಎಂ ಅವರು ಪೊಲೀಸ್ ಆಯುಕ್ತರಿಗೆ ಸಿಸಿಬಿಗೆ ಪ್ರಕರಣ ವರ್ಗಕ್ಕೆ ಸೂಚನೆ ನೀಡಿದ್ದಾರೆ.


    ಈ ಹಿನ್ನೆಲೆಯಲ್ಲಿ ಅಲೋಕ್ ಕುಮಾರ್ ಅವರು ಅಂಬಿಡೆಂಟ್ ಮಾಲೀಕ ಫರೀದ್‍ಗೆ ಬುಲಾವ್ ನೀಡಿ ಡಾಕ್ಯುಮೆಂಟ್ಸ್ ತೋರಿಸಿ ಬಾಯಿ ಬಿಡಿಸಿದ್ದಾರೆ. ಇದೇ ವೇಳೆ ರೆಡ್ಡಿಗೂ ನಿನಗೂ ಏನ್ ಸಂಬಂಧ ಅಂತ ಪ್ರಶ್ನಿಸಿದಾಗ ಪ್ರಕರಣದ ಸಂಪೂರ್ಣ ವಿವರ ಹೊರಬಿದ್ದಿದ್ದು, ಫರೀದ್ 20 ಕೋಟಿ ಡೀಲ್ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈ ಮೂಲಕ ಜನಾರ್ದನ ರೆಡ್ಡಿ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ. ಕೂಡಲೇ ಮೊಳಕಾಳ್ಮೂರಿನಲ್ಲೇ ರೆಡ್ಡಿ ಬಂಧನಕ್ಕೆ ಸಿಸಿಬಿ ಖೆಡ್ಡಾ ತೋಡಿತ್ತು. ಆದ್ರೆ ತಾನು ಬಂಧನವಾಗುವ ಬಗ್ಗೆ ಸುಳಿವು ಸಿಗುತ್ತಿದ್ದಂತೆಯೇ ರೆಡ್ಡಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಎಸ್ಕೇಪ್ ಬಳಿಕ ಪತ್ನಿ ಅರುಣಾ ಜೊತೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಯೋಗಕ್ಷೇಮಕ್ಕಾಗಿ ಮಾಡಿದ್ದ ಕರೆ ಆಧರಿಸಿ ಸಿಸಿಬಿ ಪೊಲೀಸರು ಬೆನ್ನು ಬಿದ್ದಿದ್ದರಿಂದ ಇದೀಗ ರೆಡ್ಡಿ ಇರುವ ಸ್ಥಳ ತಿಳಿದಿದೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಜನಾರ್ದನ ರೆಡ್ಡಿ ಬಂಧನವಾಗಬಹುದು ಎಂಬ ಮಾಹಿತಿಯೊಂದು ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews