Tag: ಮಾಜಿ ಸಚಿವ ಜನಾರ್ದನ ರೆಡ್ಡಿ

  • ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಅಂದ್ರೆ ಜನ ನಂಬಲ್ಲ : ತಿಪ್ಪೇಸ್ವಾಮಿ ಟಾಂಗ್

    ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಅಂದ್ರೆ ಜನ ನಂಬಲ್ಲ : ತಿಪ್ಪೇಸ್ವಾಮಿ ಟಾಂಗ್

    ಚಿತ್ರದುರ್ಗ: ಮೊಳಕಾಲ್ಮೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೈ ತಪ್ಪಿಸಿದ್ದು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು. ಆದರೆ ಇಂದು ಜನಾರ್ದನ ರೆಡ್ಡಿ ಅವರಿಗೂ ಬಿಜೆಪಿಗೆ ಸಂಬಂಧವಿಲ್ಲ ಎಂದರೆ ಜನ ನಂಬಲ್ಲ ಎಂದು ಮಾಜಿ ಶಾಸಕ ತಿಪ್ಪೇಸ್ವಾಮಿ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಭಾಗಿಯಾಗಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಾರೆ. ಆದರೆ ಶಾಸಕನಾಗಿದ್ದ ನನಗೆ ಮೊಳಕಾಲ್ಮೂರು ಟಿಕೆಟ್ ನೀಡದೆ ಮೋಸ ಮಾಡಿದ್ದರು. ಬಳಿಕ ಶ್ರೀರಾಮುಲು ಪರ ಬಿಜೆಪಿ ನಾಯಕರು ಹಾಗು ಜನಾರ್ದನರೆಡ್ಡಿ ಸಾಮೂಹಿಕವಾಗಿ ನನ್ನ ವಿರುದ್ಧ ಚುನಾವಣಾ ಪ್ರಚಾರ ನಡೆಸಿ ಗೆದ್ದರು. ಆದರೆ ಇಂದು ಬಿಜೆಪಿಗೂ ರೆಡ್ಡಿ ಅವರಿಗೂ ಸಂಬಂಧವಿಲ್ಲ ಎಂದು ಹೇಳುತ್ತಾರೆ. ಆದರೆ ಇದನ್ನು ರಾಜ್ಯದ ಜನರು ನಂಬಲ್ಲ ಎಂದರು.

    ಇದೇ ವೇಳೆ ಶ್ರೀರಾಮುಲು ಅವರ ವಿರುದ್ಧ ವಾಗ್ದಾಳಿ ನಡೆಸಿದ ತಿಪ್ಪೇಸ್ವಾಮಿ ಅವರು, ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಶ್ರೀರಾಮುಲುನ ಗೆಲ್ಲಿಸಿದ್ದಾರೆ. ಶ್ರೀರಾಮುಲು ಮೂಲತಃ ಆಂಧ್ರಪ್ರದೇಶ ರಾಜ್ಯದವರು. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಇಂದು ಚುನಾವಣೆಯಲ್ಲಿ ಜಯ ಪಡೆದಿದ್ದಾರೆ. ಈ ಮೂಲಕ ರಾಜ್ಯದ ನಾಯಕ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ನನಗೆ ಟಿಕೆಟ್ ನೀಡಿ ವಂಚನೆ ಮಾಡಿ ಮೋಸ ಮಾಡಿದ್ದ ಘಟನೆ ರಾಜ್ಯ ನಾಯಕರಿಗೆ ಗೊತ್ತಿರಲಿಲ್ವಾ ಎಂದು ಪ್ರಶ್ನೆ ಮಾಡುವ ಮೂಲಕ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೆಡ್ಡಿ ಬಳ್ಳಾರಿ ಅಹಂಬಾವಿ ನಿವಾಸದ ಮೇಲೆ ಸಿಸಿಬಿ ಪೊಲೀಸ್ ದಾಳಿ

    ರೆಡ್ಡಿ ಬಳ್ಳಾರಿ ಅಹಂಬಾವಿ ನಿವಾಸದ ಮೇಲೆ ಸಿಸಿಬಿ ಪೊಲೀಸ್ ದಾಳಿ

    ಬಳ್ಳಾರಿ: ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿ ಬಳ್ಳಾರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ನಗರದ ಅಹಂಬಾವಿ ನಿವಾಸದ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

    ಇಂದು ಬೆಳಂಬೆಳಗ್ಗೆ ರೆಡ್ಡಿ ನಿವಾಸಕ್ಕೆ ಎರಡು ವಾಹನಗಳಲ್ಲಿ ಆಗಮಿಸಿದ ಸಿಸಿಬಿ ಪೊಲೀಸರು ಪರಿಶೀಲನೆ ಆರಂಭ ಮಾಡಿದ್ದಾರೆ. ಒಟ್ಟು 8 ಮಂದಿ ಅಧಿಕಾರಿಗಳ ತಂಡ ಈ ಕಾರ್ಯದಲ್ಲಿ ತೊಡಗಿದೆ. ಇತ್ತ ಜರ್ನಾದನ ರೆಡ್ಡಿ ಮನೆ ಮೇಲೆ ದಾಳಿ ನಡೆಯುತ್ತಿರುವ ಸುದ್ದಿ ತಿಳಿಯುತ್ತಿದಂತೆ ಶಾಸಕ ಶ್ರೀರಾಮುಲು ಅವರು ರೆಡ್ಡಿ ಮನೆ ಬಳಿ ದೌಡಾಯಿಸಿದ್ದು, ಆಪ್ತ ಸ್ನೇಹಿತನ ನೆರವಿಗೆ ಧಾವಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನ ಪರಿಜಾತ ಅಪಾರ್ಟ್ ಮೆಂಟ್ ಮೇಲೂ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿತ್ತು. ಈ ವೇಳೆ ದಾಳಿ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಮನೆಯಲ್ಲಿ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆದರೆ ಮನೆಯ ಒಳ ಆವರಣದಲ್ಲಿ ಯಾವುದೇ ಸಿಸಿಟಿವಿ ಇಲ್ಲ. ವಶಕ್ಕೆ ಪಡೆದಿರುವ ದಾಖಲೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಗುದಿಲ್ಲ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ ಎಂದು ತಿಳಿಸಿದ್ದರು. ಈ ದಾಳಿಯ ವೇಳೆ ಪರಿಜಾತ ಅಪಾರ್ಟ್ ಮೆಂಟ್ ಹೊರ ಆವರಣದಲ್ಲಿ ಸೆಕ್ಯೂರಿಟಿಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ಡಿವಿಆರ್ ಮಾತ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರೆಡ್ಡಿ ಮೇಲಿನ ಆರೋಪಕ್ಕೆ ಬುಧವಾರ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಶ್ರೀರಾಮುಲು, ನಾನು ಮಾಧ್ಯಮಗಳಲ್ಲಿ ಈ ಪ್ರಕರಣ ಕುರಿತು ನೋಡಿದ್ದೇನೆ. ಕಾನೂನು ಅದರ ಕೆಲಸ ಮಾಡುತ್ತೆ. ಕಾನೂನಿಗಿಂತ ದೊಡ್ಡವರು ಯಾರು ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹೊಡೆದು ಜನಾರ್ದನ ರೆಡ್ಡಿ ಹೆಸರು ಹಾಕಿಸಿದ್ದಾರೆ- ಡೀಲ್ ಪ್ರಕರಣಕ್ಕೆ ಸ್ಫೋಟಕ ತಿರುವು

    ಹೊಡೆದು ಜನಾರ್ದನ ರೆಡ್ಡಿ ಹೆಸರು ಹಾಕಿಸಿದ್ದಾರೆ- ಡೀಲ್ ಪ್ರಕರಣಕ್ಕೆ ಸ್ಫೋಟಕ ತಿರುವು

    ಬೆಂಗಳೂರು: ಡೀಲ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಹೆಸರು ಹೇಳುವಂತೆ ಚಿನ್ನ ಖರೀದಿ ಮಾಡಿದ್ದ ರಮೇಶ್ ಎಂಬವರಿಗೆ ಬಾಸುಂಡೆ ಬರುವಂತೆ ಪೊಲೀಸರು ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ರಾಜಮಹಲ್ ಜ್ಯುವೆಲರ್ಸ್ ಮಾಲೀಕ ರಮೇಶ್ ಮಾರ್ಚ್‍ನಲ್ಲಿ ಚಿನ್ನ ಖರೀದಿ ಮಾಡಿದ್ದರು. ಇವರ ಮೇಲೆ ಪೊಲೀಸರು ದರ್ಪ ಎಸಗಿದ್ದು, ಡೀಲ್ ಪ್ರಕರಣದ ರಮೇಶ್ ಕೊಠಾರಿ ಬೇರೆ, ರಾಜಮಹಲ್ ಜ್ಯುವೆಲರ್ಸ್ ಮಾಲೀಕ ರಮೇಶ್ ಬೇರೆ ಎಂದು ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ವಕೀಲ ಚಂದ್ರಶೇಖರ್ ಗಂಭೀರ ಆರೋಪ ಮಾಡಿದ್ದಾರೆ.

    ಪ್ರಕರಣದ ಎ4 ಆರೋಪಿ ರಮೇಶ್ ಅವರನ್ನು ಬಳ್ಳಾರಿಯಿಂದ ಬಂಧಿಸಿ ಕಳೆದ ಶುಕ್ರವಾರ ಕರೆದುಕೊಂಡು ಬಂದು, ರಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ಜನಾರ್ದನ ರೆಡ್ಡಿ ಹಾಗೂ ಅಲಿಖಾನ್ ಅವರ ಹೆಸರು ಹೇಳುವಂತೆ ದೌರ್ಜನ್ಯ ನೀಡಿದ್ದಾರೆ. ರಮೇಶ್ ಮೇಲೆ ಹಲ್ಲೆ ಮಾಡಿರುವಂತಹ ಫೋಟೋಗಳು ನಮ್ಮಲ್ಲಿದೆ. ರಾಜಕೀಯ ಒತ್ತಡದಿಂದ ಜನಾರ್ದನ ರೆಡ್ಡಿ ಹೆಸರು ಇದರಲ್ಲಿ ತಳುಕು ಹಾಕಿಕೊಂಡಿದೆ. ಜನಾರ್ದನ ರೆಡ್ಡಿಯವರನ್ನು ಬಂಧಿಸಲೇಬೇಕೆಂದು ಈ ಪ್ರಕರಣದ ಹಿಂದೆ ದೊಡ್ಡ ಮಟ್ಟದಲ್ಲಿ ಇರುವಂತಹ ರಾಜಕಾರಣಿಗಳ ಕೈಗಳ ಕೈವಾಡವಿದೆ ಅಂತ ವಕೀಲ ಚಂದ್ರಶೇಖರ್ ಗಂಭೀರವಾಗಿ ಆರೋಪಿಸಿದ್ದಾರೆ.

    ಚಿನ್ನ ಖರೀದಿ ಮಾಡಿರುವ ಕುರಿತು ರಮೇಶ್ ಬಳಿ ಎಲ್ಲಾ ದಾಖಲೆ ಇದೆ. ಆದರೆ ಬೇರೆ ಯಾವುದೇ ಉದ್ದೇಶಕ್ಕೆ ಹಣದ ವರ್ಗಾವಣೆ ಆಗಿಲ್ಲ. ಪೊಲೀಸರು ಒತ್ತಡ ಹಾಕಿ ಜನಾರ್ದನ ರೆಡ್ಡಿ ಹೆಸರು ಹೇಳುವಂತೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದು, ಪ್ರಮುಖವಾಗಿ ಡಿಸಿಪಿ ಗಿರೀಶ್ ಮತ್ತು ಎಸಿಪಿ ವೆಂಕಟೇಶ್ ಪ್ರಸನ್ನ ಹಲ್ಲೆ ಮಾಡಿದ್ದಾರೆ. ನಾವು ಕಾನೂನಿನ ಚೌಕಟ್ಟಿನಲ್ಲೇ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • Exclusive: ಎಂಇಪಿ ನಾಯಕಿ ನೌಹಿರಾ ಶೇಖ್ ಕೇಸ್ ಖುಲಾಸೆಗೆ ಕೋಟಿ ಕೋಟಿ ಹಣ ಪಡೆದ್ರಾ ರೆಡ್ಡಿ?

    Exclusive: ಎಂಇಪಿ ನಾಯಕಿ ನೌಹಿರಾ ಶೇಖ್ ಕೇಸ್ ಖುಲಾಸೆಗೆ ಕೋಟಿ ಕೋಟಿ ಹಣ ಪಡೆದ್ರಾ ರೆಡ್ಡಿ?

    ಬೆಂಗಳೂರು: ಬ್ಯಾಂಕ್ ನೀಡುವ ಬಡ್ಡಿಗಿಂತಲೂ ಹೆಚ್ಚಿನ ದರದಲ್ಲಿ ಬಡ್ಡಿ ನೀಡುವುದಾಗಿ ಹೇಳಿ ದೇಶಾದ್ಯಂತ ಕೋಟ್ಯಂತರ ರೂಪಾಯಿ ವಂಚಿಸಿ ಸದ್ಯ ಬಂಧನದಲ್ಲಿರುವ ಎಂಇಪಿ ಪಕ್ಷದ ಸ್ಥಾಪಕಿ ನೌಹಿರಾ ಶೇಖ್ ಅವರನ್ನು ಪಾರು ಮಾಡಲು ಜನರ್ದಾನ ರೆಡ್ಡಿ ಪ್ರಯತ್ನಿಸಿದ್ದರು ಎನ್ನುವ ಗಂಭೀರ ಆರೋಪವೊಂದು ಈಗ ಕೇಳಿ ಬಂದಿದೆ.

    ಆಲ್‍ಇಂಡಿಯಾ ಮಹಿಳಾ ಎಂಪವರ್ಮೆಂಟ್ ಪಾರ್ಟಿ (ಎಂಇಪಿ) ಪಕ್ಷದ ಮುಖ್ಯಸ್ಥೆ ನೌಹೀರಾ ಶೇಖ್ ತೆಲಂಗಾಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಈ ಪ್ರಕರಣದಿಂದ ಅವರನ್ನು ರಕ್ಷಿಸಲು ರೆಡ್ಡಿ ಸಹಾಯ ಮಾಡುವುದಾಗಿ ಹಣ ಪಡೆದಿದ್ದರು ಎನ್ನುವ ಆರೋಪ ಈಗ ಕೇಳಿಬಂದಿದೆ.

    ನೌಹಿರಾ ಶೇಖ್ ದೇಶದ ಪ್ರಮುಖ ನಗರಗಳಲ್ಲಿ ಬಂಡಾವಳ ಹೂಡಿಕೆ ಮಾಡುವ ಹೆಸರಿನಲ್ಲಿ ಜನರಿಂದ ಕೋಟಿ ಕೋಟಿ ರೂ. ಹಣ ಪಡೆದ ಆರೋಪ ಎದುರಿಸುತ್ತಾರೆ. ಈಗಾಗಲೇ ಮುಂಬೈ ಪೊಲೀಸರು ಬಾಡಿ ವಾರೆಂಟ್ ಪಡೆದು ನೌಹಿರಾ ಶೇಖ್ ವಿಚಾರಣೆಗೆ ಒಳಪಡಿಸಿದ್ದಾರೆ. 

    ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ತನ್ನನ್ನು ಪಾರು ಮಾಡುವಂತೆ ನೌಹಿರಾ ಶೇಖ್ ಗಾಲಿ ಜನಾರ್ದನ ರೆಡ್ಡಿ ಅವರ ಸಹಾಯಕೋರಿದ್ದರು. ನೌಹಿರಾ ಶೇಖ್ ಅವರಿಗೆ ಸಹಾಯ ಮಾಡುವ ಭರವಸೆ ನೀಡಿದ್ದ ರೆಡ್ಡಿ ಕೋಟಿ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ರೆಡ್ಡಿ ಅವರ ಆಪ್ತರ ಬ್ಯಾಂಕ್ ಖಾತೆಗೆ ಈ ಹಣ ಸಂದಾಯವಾಗಿದೆ ಎಂಬ ಮಾಹಿತಿಯೂ ಈಗ ಲಭ್ಯವಾಗಿದೆ. ಸದ್ಯ ರೆಡ್ಡಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಳುಕು ಹಾಕಿಕೊಂಡಿರುವ ಆಂಬಿಡೆಂಟ್ ಕಂಪನಿ ಮಾಲೀಕ ಫರೀದ್ ಮೂಲಕ ಸಹಾಯ ಮಾಡಲು ಜನಾರ್ದನ ರೆಡ್ಡಿ ಮುಂದಾಗಿದ್ದರು ಎನ್ನಲಾಗಿದೆ.

    ಯಾರು ಈ ನೌಹಿರಾ ಶೇಖ್?

    ನೌಹಿರಾ ಶೇಖ್ ಬೆಂಗಳೂರು, ಹೈದ್ರಾಬಾದ್, ಮುಂಬೈ, ಪುಣೆ, ದೆಹಲಿಯಲ್ಲಿ ಬಂಡವಾಳ ಹೂಡಿಕೆ ಮಾಡುವ ಹೆಸರಿನಲ್ಲಿ ಹಲವರಿಂದ ಹಣ ಪಡೆದು ಸಾವಿರ ಕೋಟಿಗೂ ಹೆಚ್ಚು ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ್ದ ಸ್ವರಾಜ್ ಪಕ್ಷದ ಸಂಸ್ಥಾಪಕಿಯಾಗಿರುವ ನೌಹಿರಾ ವಿರುದ್ಧ 2018 ಮೇ ತಿಂಗಳ ಬಳಿಕ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ವಂಚನೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಅಗಸ್ಟ್ 25ರಂದು ಹೈದರಾಬಾದ್‍ನಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣ ಸಂಬಂಧ ಗುಪ್ತಚರ ಇಲಾಖೆಯೂ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ. ನೌಹಿರಾ ವಂಚಿಸಿದವರಲ್ಲಿ ಹೆಚ್ಚಿನವರು ಮುಸ್ಲಿಂ ಧರ್ಮಕ್ಕೆ ಸೇರಿದವರೇ ಆಗಿದ್ದು, ಹೀರಾ ಗ್ರೂಪ್ ಸಂಸ್ಥೆಯ ಮೂಲಕ ವ್ಯವಹಾರ ನಡೆಸುವುದಾಗಿ ನೌಹಿರಾ ಭರವಸೆ ನೀಡಿ ಹಣ ಸಂಗ್ರಹಿಸಿದ್ದರು ಎಂಬ ಮಾಹಿತಿ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv  

  • ಜನಾರ್ದನ ರೆಡ್ಡಿ ಆಸೆಗೆ ಸುಪ್ರೀಂ ತಣ್ಣೀರು

    ನವದೆಹಲಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಇದೇ 12 ರಂದು ಮತದಾನ ಮಾಡಲು ಬಳ್ಳಾರಿಗೆ ತೆರಳು ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

    ಜನಾರ್ದನ ರೆಡ್ಡಿ ಎರಡು ದಿನಗಳ ಕಾಲ ಬಳ್ಳಾರಿಯಲ್ಲಿ ತಂಗಲು ಅನುಮತಿ ನೀಡುವಂತೆ ಕೋರಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಮನವಿಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಮತದಾನ ಮಾಡಲು ಸಾಕಷ್ಟು ಬೇರೆ ವಿಧಾನಗಳಿವೆ. ಅದ್ದರಿಂದ ಬದಲಿ ವಿಧಾನದ ಮೂಲಕ ಮತದಾನ ಮಾಡುವಂತೆ ಸೂಚಿಸಿದೆ.

    ಬಳ್ಳಾರಿಗೆ ಜನಾರ್ದನ ರೆಡ್ಡಿ ಭೇಟಿ ನೀಡುವುದರಿಂದ ಬಳ್ಳಾರಿಯ ರಾಜಕೀಯ ಮೇಲೆ ಪ್ರಭಾವ ಉಂಟಾಗಬಹುದು ಎಂಬ ಕಾರಣ ನೀಡಿ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ತಿರಸ್ಕರಿಸಿದೆ.

    ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ಹಿಂದೆ ಜಾಮೀನು ವೇಳೆ ವಿಧಿಸಿದ್ದ ಷರತ್ತನ್ನು ಬದಲಾವಣೆ ಮಾಡುವಂತೆ ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಬಳ್ಳಾರಿಗೆ ಹೋಗದಂತೆ ವಿಧಿಸಿದ್ದ ಷರತ್ತಿನಲ್ಲಿ ಸಡಿಲಿಕೆ ಇಲ್ಲ. ಅಲ್ಲದೇ ಆಂಧ್ರದ ಕರ್ನೂಲು, ಅನಂತಪುರಂಗೂ ಭೇಟಿ ನೀಡುವಂತಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು. ಆದರೆ ಮಗಳ ಮದುವೆಗಾಗಿ ಜರ್ನಾದನ ರೆಡ್ಡಿ ಬಳ್ಳಾರಿಗೆ ಹೋಗಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.

  • ಮಹಿಳಾ ದಿನಾಚರಣೆಯಂದು ಮಡದಿಯನ್ನು ಹೂವಿನ ಪಲಕ್ಕಿಯಲ್ಲಿ ಮೆರವಣಿಗೆ ಮಾಡಿದ ಮಾಜಿ ಸಚಿವ ಜನಾರ್ದನರೆಡ್ಡಿ!

    ಮಹಿಳಾ ದಿನಾಚರಣೆಯಂದು ಮಡದಿಯನ್ನು ಹೂವಿನ ಪಲಕ್ಕಿಯಲ್ಲಿ ಮೆರವಣಿಗೆ ಮಾಡಿದ ಮಾಜಿ ಸಚಿವ ಜನಾರ್ದನರೆಡ್ಡಿ!

    ಬಳ್ಳಾರಿ: ವಿಶ್ವ ಮಹಿಳಾ ದಿನಾಚರಣೆ ದೇಶದೆಲ್ಲೆಡೆ ವಿಭಿನ್ನವಾಗಿ ವಿಶಿಷ್ಟವಾಗಿ ಆಚರಣೆ ಮಾಡಿದರೆ, ಮಾಜಿ ಸಚಿವ ಜನಾರ್ದನರೆಡ್ಡಿ ತಮ್ಮ ಮೆಚ್ಚಿನ ಮಡದಿಯನ್ನು ಹೂವಿನಿಂದ ಅಲಂಕಾರ ಮಾಡಿದ ಸಾರೋಟದಲ್ಲಿ ಕೂರಿಸಿ ಸವಾರಿ ಮಾಡಿದ್ದಾರೆ.

    ಮಹಿಳಾ ದಿನಾಚರಣೆಯಂದು ಸಾಧನೆ ಮಾಡಿದ ಮಹಿಳೆಯರಿಗೆ, ತಾಯಂದಿರಿಗೆ ಸನ್ಮಾನ ಮಾಡಿ ಪ್ರೀತಿಯ ಕಾಣಿಕೆಯನ್ನ ನೀಡ್ತಾರೆ. ಆದ್ರೆ ಸಚಿವರು ತಮ್ಮ ಸಾಧನೆಗೆ ಬೆಂಬಲವಾಗಿದ್ದ ಪತ್ನಿ ಲಕ್ಷ್ಮಿ ಅರುಣಾರನ್ನು ಹೂ ಅಲಂಕಾರ ಮಾಡಿದ ಸೈಕಲ್ ಸಾರೋಟದಲ್ಲಿ ಕೂರಿಸಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಮಹಿಳಾ ದಿನಾಚರಣೆಯನ್ನು ವಿಭಿನ್ನವಾಗಿ ಆಚರಣೆ ಮಾಡಿದರು.

    ಪತ್ನಿಯನ್ನು ಹೂ ಅಲಂಕಾರದ ಸಾರೋಟದಲ್ಲಿ ಕೂರಿಸಿ ತಾವೂ ಸವಾರಿ ಮಾಡುತ್ತಿರುವ ಫೋಟೋಗಳನ್ನು ಜನಾರ್ದನ ರೆಡ್ಡಿ ತಮ್ಮ ಫೇಸ್‍ಬುಕ್ ಪೇಜ್ ನಲ್ಲಿ ಹಾಕಿ ಮಹಿಳೆಯರಿಗೆ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಮಡದಿಯೊಂದಿಗೆ ಮಹಿಳಾ ದಿನಾಚರಣೆ ಆಚರಿಸಿಕೊಂಡ ಸಚಿವರ ಫೇಸ್ ಬುಕ್ ಪೋಸ್ಟ್ ಹಲವರು ಶೇರ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.