Tag: ಮಾಜಿ ಸಚಿವ ಜಮೀರ್ ಅಹ್ಮದ್

  • ‘ಜಮೀರ್ ಅಹ್ಮದ್ ಒಬ್ಬ ಚಿಲ್ಲರೆ ಗಿರಾಕಿ’- ಏಕವಚನದಲ್ಲೇ ರೇಣುಕಾಚಾರ್ಯ ವಾಗ್ದಾಳಿ

    ‘ಜಮೀರ್ ಅಹ್ಮದ್ ಒಬ್ಬ ಚಿಲ್ಲರೆ ಗಿರಾಕಿ’- ಏಕವಚನದಲ್ಲೇ ರೇಣುಕಾಚಾರ್ಯ ವಾಗ್ದಾಳಿ

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಜಮೀರ್ ಅಹ್ಮದ್ ಹಾಗೂ ರೇಣುಕಾಚಾರ್ಯ ಅವರ ವಾಕ್ ಸಮರ ಹೆಚ್ಚು ಸದ್ದು ಮಾಡುತ್ತಿದೆ. ಇಬ್ಬರು ನಾಯಕರು ಪರಸ್ಪರ ಮಾತಿನ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇಬ್ಬರ ನಡುವಿನ ವಾಕ್ ಸಮರ ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದು, ಜಮೀರ್ ಒಬ್ಬ ಚಿಲ್ಲರೆ ಗಿರಾಕಿ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ.

    ಇಂದು ಮಾಜಿ ಸಚಿವ ಜಮೀರ್ ವಿಚಾರಕ್ಕಾಗಿಯೇ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಜಮೀರ್ ಒಬ್ಬ ಚಿಲ್ಲರೆ ಗಿರಾಕಿ. ಪುಟ್‍ಪಾತ್‍ನಲ್ಲಿ ಇದ್ದವನು. ಚಾಮರಾಜಪೇಟೆಯಲ್ಲಿ ದಂಧೆ ಮಾಡಿಕೊಂಡಿದ್ದವನನ್ನು ಕರೆತಂದು ದೇವೇಗೌಡರು ಮಂತ್ರಿ ಮಾಡಿದ್ದರು. ಅವರಿಗೆ ಜಮೀರ್ ಏನು ಮಾಡಿದ್ದರೂ ಎಂದು ಎಲ್ಲರಿಗೂ ಗೊತ್ತಿದೆ ಎಂದರು.

    ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಹಿಂದೆ ‘ಅಣ್ಣ ಕುಮಾರಣ್ಣ ಅಂತಾ ಹೇಳಿಕೊಂಡು ತಿರುಗುತ್ತಿದ್ದ’. ಅವರಿಗೂ ಜಮೀರ್ ಏನು ಮಾಡಿದ್ರು ಎಂದು ಗೊತ್ತಿದೆ. ನನ್ನ ವೈಯಕ್ತಿಕ ವಿಷಯಗಳ ಬಗ್ಗೆ ಜಮೀರ್ ಮಾತನಾಡಿದ್ರೆ ನಾನೂ ಕೂಡ ಅದೇ ಭಾಷೆಯಲ್ಲಿ ಮಾತನಾಡುವುದು ನನಗೆ ಗೊತ್ತಿದೆ. ಜಮೀರ್ ಗೆ ಸಂದರ್ಭದಲ್ಲಿ ಎಚ್ಚರಿಕೆ ಕೊಡುತ್ತೇನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಇದನ್ನು ಓದಿ: ರೇಣುಕಾಚಾರ್ಯ ಇಸ್ಪೀಟ್ ಎಲೆಯಲ್ಲಿರುವ ಜೋಕರ್‌ನಂತೆ: ಜಮೀರ್ ವ್ಯಂಗ್ಯ

    ರೇಣುಕಾಚಾರ್ಯ ಏಕವಚನ ವಾಗ್ದಾಳಿ ಜಮೀರ್ ವಿರುದ್ಧ ಮಾತ್ರ ಸೀಮಿತವಾಗಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೇಲೂ ಕೂಡ ತಿರುಗಿತ್ತು. ‘ದಿನೇಶ್ ಗುಂಡೂರಾವ್, ಮೊದಲು ನಿನ್ನ ಪಕ್ಷ ಸರಿಪಡಿಸಿಕೋ. ನಿನಗೆ ರಾಜಕಾರಣದ ಮೆದುಳೇ ಇಲ್ಲ. ಅದು ಬಿಟ್ಟು ನನ್ನ ಬಗ್ಗೆ ಮಾತನಾಡಬೇಡ’ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ಇದೆಲ್ಲವನ್ನು ನೋಡುತ್ತಿದ್ದರೆ ರೇಣುಕಾಚಾರ್ಯ ವರ್ಸಸ್ ಕಾಂಗ್ರೆಸ್ ಶಾಸಕರ ನಡುವಿನ ವೈಯುಕ್ತಿಕ ವಾಕ್ ಸಮರ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಮಾತ್ರ ಕಾಣಿಸುತ್ತಿಲ್ಲ.

  • ಐಎಂಎ ಕೇಸಲ್ಲಿ ಜೈಲು ಸೇರಿದ್ದವನ ಜೊತೆ ಜಮೀರ್ ಅಹ್ಮದ್ ಪಾರ್ಟಿ

    ಐಎಂಎ ಕೇಸಲ್ಲಿ ಜೈಲು ಸೇರಿದ್ದವನ ಜೊತೆ ಜಮೀರ್ ಅಹ್ಮದ್ ಪಾರ್ಟಿ

    ಬೆಂಗಳೂರು: ಐಎಂಎ ಬಹು ಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯ ಜೊತೆಗೆ ಮಾಜಿ ಸಚಿವ ಜಮೀರ್ ಅಹ್ಮದ್  ಹಾಗೂ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಪಾರ್ಟಿ ಮಾಡಿದ್ದಾರೆ.

    ಐಎಂಎ ಪ್ರಕರಣದಲ್ಲಿ ಜೈಲು ಸೇರಿದ್ದ ಮುಜಾಹಿದ್ದೀನ್ ಅಕ್ಟೋಬರ್ 13ರಂದು ಜಾಮೀನಿನ ಆಧಾರದ ಮೇಲೆ ಹೊರ ಬಂದಿದ್ದ. ಅಂದು ರಾತ್ರಿ ಮಾಜಿ ಸಚಿವ ಜಮೀರ್ ಅಹ್ಮದ್ ಅವರು ಮುಜಾಹಿದ್ದೀನ್ ಜೊತೆಗೆ ಪಾರ್ಟಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರ ಈ ನಡೆಯ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.

    ಐಎಂಎ ಪ್ರಕರಣದಲ್ಲಿ ಮುಖ್ಯ ಆರೋಪಿ ಆಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ಪರಾರಿಯಾಗಲು ಮುಜಾಹಿದ್ದೀನ್ ಸಹಾಯ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮುಜಾಹಿದ್ದೀನ್ ಮೇಲೆ ಎಸ್‍ಐಟಿ ರೇಡ್ ಮಾಡಿ ಅರೆಸ್ಟ್ ಮಾಡಿತ್ತು. ಆದರೆ ಅಕ್ಟೋಬರ್ 11ರಂದು ಮುಜಾಹಿದ್ದೀನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠವು ಜಾಮೀನು ನೀಡಿತ್ತು. ಅಕ್ಟೋಬರ್ 13ರಂದು ಮುಜಾಹಿದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಜೈಲಿನ ಹೊರಗೆ ನಿಂತಿದ್ದ ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದ್ದರು.

    ಗ್ರಾಹಕರಿಗೆ ವಂಚಿಸಿದ್ದು ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

    ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.