Tag: ಮಾಜಿ ಸಚಿವ ರಮಾನಾಥ್ ರೈ

  • ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ನಳಿನ್‍ಕುಮಾರ್ ಶವ ಸಂಸ್ಕಾರ ನಡೆಸೋದು ಮಾತ್ರ ಬಾಕಿಯಿದೆ: ರಮಾನಾಥ ರೈ

    ಮಂಗಳೂರು: ಸಂಸದ ನಳಿನ್‍ಕುಮಾರ್ ಕಟೀಲ್ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಎಂದು ಮಾಜಿ ಸಚಿವ ರಮಾನಾಥ ರೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ನೋಟ್ ಬ್ಯಾನ್ ಆಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಗರದ ಜಿಲ್ಲಾ ಕಚೇರಿ ಎದುರಲ್ಲಿ ಪ್ರತಿಭಟನಾ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿದ ಮಾಜಿ ಸಚಿವರು, ಲಾಭದಲ್ಲಿರುವ ವಿಜಯ ಬ್ಯಾಂಕ್ ಜೊತೆಗೆ ನಷ್ಟದಲ್ಲಿರುವ ದೇನಾ ಬ್ಯಾಂಕನ್ನು ವಿಲೀನಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಿರ್ಧಾರ ಖಂಡನೀಯ ಎಂದು ಹರಿಹಾಯ್ದರು.

    ವಿಜಯ್ ಬ್ಯಾಂಕನ್ನು ನಮ್ಮ ಸಮುದಾಯದ ನಾಯಕರು ಸ್ಥಾಪಿಸಿ ಬೆಳೆಸಿದರು. ಅದು ರಾಷ್ಟ್ರೀಕೃತಗೊಂಡು ಲಾಭದಾಯಕ ಬ್ಯಾಂಕ್ ಆಗುತ್ತಿದೆ. ಆದರೆ ಈಗ ಅದರೊಂದಿಗೆ ನಷ್ಟದಲ್ಲಿರುವ ದೇನಾ ಬ್ಯಾಂಕ್ ವಿಲೀನಗೊಳಿಸಲಾಗುತ್ತಿದೆ. ಇದನ್ನು ತಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಿಜೆಪಿ ಶಾಸಕರು, ಸಂಸದರು ವಿಫಲರಾಗಿದ್ದಾರೆ. ಹೀಗಾಗಿ ಅವರು ಜೀವಂತ ಇದ್ದೂ ಸತ್ತ ಹಾಗೆ ಎಂದು ಗುಡುಗಿದರು.

    ಬ್ಯಾಂಕ್ ವಿಲೀನ ತಪ್ಪಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಸಂಸದ ನಳಿನ್ ಕುಮಾರ್ ಕಟೀಲ್ ಸತ್ತಿದ್ದಾರೆಯೇ ಅಂತ ಪ್ರಶ್ನೆ ಮಾಡುತ್ತೇನೆ ಎಂದ ಮಾಜಿ ಸಚಿವರು, ಸಂಸದರ ಶವ ಸಂಸ್ಕಾರ ನಡೆಸುವುದು ಮಾತ್ರ ಬಾಕಿಯಿದೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದರು.

    ಲೋಕಪಾಲ್ ಜಾರಿಗೆ ತರುತ್ತೇವೆ ಎಂದು ಬಿಜೆಪಿಯವರು ಹೇಳಿದ್ದರು. ಆದರೆ ಗುಜರಾತಿನಲ್ಲೇ ಲೋಕಾಯುಕ್ತರು ಇಲ್ಲ. ಬೇರೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಬೋಧನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/

  • ಬಂಟ್ವಾಳದಲ್ಲಿ ರಮಾನಾಥ ರೈ ಬೆಂಬಲಿಗನ ಗೂಂಡಾಗಿರಿ – ನಡು ರಸ್ತೆಯಲ್ಲಿ ತಲ್ವಾರ್ ನಿಂದ ಹಲ್ಲೆ

    ಬಂಟ್ವಾಳದಲ್ಲಿ ರಮಾನಾಥ ರೈ ಬೆಂಬಲಿಗನ ಗೂಂಡಾಗಿರಿ – ನಡು ರಸ್ತೆಯಲ್ಲಿ ತಲ್ವಾರ್ ನಿಂದ ಹಲ್ಲೆ

    ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಆಪ್ತ, ತುಳು ನಟ ಸುರೇಂದ್ರ ತಮ್ಮ ಬೆಂಬಲಿಗರೊಂದಿಗೆ ಗೂಂಡಾಗಿರಿ ನಡೆಸಿದ್ದು, ಸದ್ಯ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿರುವ ಬೀದಿ ಕಾಳಗದಲ್ಲಿ ರಮಾನಾಥ ರೈ ಆಪ್ತ ಸುರೇಂದ್ರ ತಲ್ವಾರ್ ಹಿಡಿದಿದ್ದಾನೆ. ಬಂಟ್ವಾಳ ಪೇಟೆ ಬಳಿಯ ಬಡ್ಡಕಟ್ಟೆ ಎಂಬಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಸುರೇಂದ್ರ ತಲ್ವಾರ್ ಹಿಡಿದು ಬಿಜೆಪಿ ಕಾರ್ಯಕರ್ತರನ್ನು ಅಟ್ಟಿಸಿಕೊಂಡು ಬರುತ್ತಿರುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬಂಟ್ವಾಳದ ಹೊಟೇಲ್ ಒಂದರಲ್ಲಿ ಬಿಜೆಪಿ ಕಾರ್ಯಕರ್ತರು ಊಟಕ್ಕೆ ಕುಳಿತಿದ್ದಾಗ, ಸುರೇಂದ್ರ ತನ್ನ ಬೆಂಬಲಿಗರ ಜೊತೆ ಹೊಟೇಲಿಗೆ ನುಗ್ಗಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ, ಎರಡೂ ತಂಡಗಳ ಮಧ್ಯೆ ಜಟಾಪಟಿ ನಡೆದಿದ್ದು, ಕೂಡಲೇ ಅಲ್ಲಿಂದ ತೆರಳಿದ ಸುರೇಂದ್ರ ತನ್ನ ಕಾರಿನಲ್ಲಿದ್ದ ತಲ್ವಾರ್ ಎತ್ತಿಕೊಂಡು ಬಂದು ಬಿಜೆಪಿ ಕಾರ್ಯಕರ್ತರನ್ನು ಅಟ್ಟಿಸಿಕೊಂಡು ಹೋಗಿದ್ದಾನೆ.

    ಘಟನೆಯಲ್ಲಿ ಗಣೇಶ್ ಮತ್ತು ಪುಷ್ಪರಾಜ್ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇಷ್ಟಕ್ಕೂ ಈ ಸುರೇಂದ್ರ ಈ ಹಿಂದೆ ಎರಡು ತುಳು ಸಿನಿಮಾಗಳಲ್ಲಿ ನಟಿಸಿದ್ದು, ತುಳು ಸಿನಿಮಾ ರಂಗದ ಕಲಾವಿದರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾನೆ. ಅಲ್ಲದೆ, ಮಂಗಳೂರು ಮತ್ತು ಬಂಟ್ವಾಳದಲ್ಲಿ ಹಣದ ವ್ಯವಹಾರ ನಡೆಸುತ್ತಾ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ.

    ಬಂಟ್ವಾಳದ ಬೀದಿ ಕಾಳಗ ಮೊಬೈಲಿನಲ್ಲಿ ಸೆರೆಯಾಗಿ ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದರೂ ಆರೋಪಿ ಸುರೇಂದ್ರನನ್ನು ಪೊಲೀಸರು ಇನ್ನೂ ಬಂಧಿಸಿಲ್ಲ. ವಿಡಿಯೋವನ್ನು ಆಧರಿಸಿ ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸುವ ಸಾಧ್ಯತೆಯಿದೆ.

    ಆರೋಪಿ ಸುರೇಂದ್ರ ಈ ಹಿಂದೆಯೂ ಇಂತಹ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿದ್ದ. ಮೂರು ವರ್ಷಗಳ ಹಿಂದೆ ರಮಾನಾಥ ಎಂಬ ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿ, ಪ್ರಕರಣ ಎದುರಿಸುತ್ತಿದ್ದ. ಬಳಿಕ ಕಾಂಗ್ರೆಸ್ ಪ್ರಮುಖರ ಜೊತೆ ಸೇರಿ ಮೂಲಕ ಹೈಕೋರ್ಟ್‍ಗೆ ಹೋಗಿ ಪ್ರಕರಣದಿಂದ ಮುಕ್ತನಾಗಿದ್ದ ಎನ್ನುವ ವಿಚಾರ ಸಿಕ್ಕಿದೆ.

    https://www.youtube.com/watch?v=BY-V82bJ1Rs