Tag: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

  • ತಿಪ್ಪರಲಾಗ ಹಾಕಿದ್ರೂ ಬಿಎಸ್‍ವೈ ಸಿಎಂ ಮತ್ತೆ ಆಗಲ್ಲ – ಜಮೀರ್ ಅಹ್ಮದ್ ಲೇವಡಿ

    ತಿಪ್ಪರಲಾಗ ಹಾಕಿದ್ರೂ ಬಿಎಸ್‍ವೈ ಸಿಎಂ ಮತ್ತೆ ಆಗಲ್ಲ – ಜಮೀರ್ ಅಹ್ಮದ್ ಲೇವಡಿ

    ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಎಷ್ಟೇ ತಿಪ್ಪರಲಾಗ ಹಾಕಿದ್ರೂ ಮತ್ತೆ ಸಿಎಂ ಆಗಲ್ಲ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಜನಾರ್ದನ ರೆಡ್ಡಿ ಹಾಗೂ ಬಿಎಸ್ ಯಡಿಯೂರಪ್ಪ ಭೇಟಿಯನ್ನು ಟೀಕಿಸಿದರು. ಚೆನ್ನಾಗಿದ್ದರೆ ಎಲ್ಲರೂ ಜೊತೆಯಲ್ಲಿರುತ್ತಾರೆ. ಸ್ವಲ್ಪ ಹೆಚ್ಚು ಕಡಿಮೆ ಆದರೆ ಬಿಟ್ಟು ಬಿಡುತ್ತಾರೆ. ಕೆಟ್ಟ ಘಳಿಗೆ ಬಂದಾಗ ಹಿಂದೇಟು ಹಾಕುವುದು ಬಿಜೆಪಿಗೆ ಸಾಮಾನ್ಯವಾಗಿದ್ದು, ಜನಾರ್ದನ ರೆಡ್ಡಿ ಬಿಜೆಪಿಯಲ್ಲೇ ಇದ್ದಾರೆ. ರೆಡ್ಡಿ ಅವರು ತಮ್ಮ ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ಅಂದರೆ ಯೂ ಟರ್ನ್ ಪಕ್ಷ ಎಂದು ಚಾಟಿ ಬೀಸಿದರು.

    ಇದೇ ವೇಳೆ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತದೆ ಎಂದು ಹೇಳಿದ ಜಮೀರ್, ಬಿಎಸ್‍ವೈ ಎಷ್ಟೇ ತಿಪ್ಪರಲಾಗ ಹಾಕಿದರೂ ಏನೂ ಮಾಡಲು ಸಾಧ್ಯವಿಲ್ಲ. ಅವರು ಮತ್ತೆ ಮುಖ್ಯಮಂತ್ರಿ ಆಗಲ್ಲ. ಕಳೆದ ಕೆಲ ತಿಂಗಳುಗಳಿಂದ ಯಡಿಯೂರಪ್ಪ ಅವರು ನಿದ್ದೆ ಮಾಡುತ್ತಿಲ್ಲವಂತೆ. ಮುಖ್ಯಮಂತ್ರಿ ಆದೆ ಎಂದು ಕನಸು ಕಾಣುತ್ತಾರಂತೆ. ಕನಸು ಕಾಣುವುದು ತಪ್ಪಲ್ಲ, ಆದರೆ ಹಗಲುಗನಸು ಕಾಣಬೇಡಿ ಎಂದು ಸಲಹೆ ನೀಡಿದರು.

    ಇದಕ್ಕೂ ಮುನ್ನ ರಾಮಮಂದಿರ ನಿರ್ಮಾಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಮಸೀದಿ ಎರಡೂ ನಿರ್ಮಾಣವಾಗಲಿ. ಚುನಾವಣೆ ಬಂದಾಗ ಮಾತ್ರ ಇದು ಪ್ರಚಾರದ ವಿಷಯ ಆಗದಿರಲಿ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರ ನಾಲ್ಕೂವರೆ ವರ್ಷದಲ್ಲಿ ಬಿಜೆಪಿ ಅವರಿಗೆ ನೆನಪಿಗೆ ಬಂದಿಲ್ಲ. ಲೋಕಸಭಾ ಚುನಾವಣೆ ಬಂದರೆ ಮಂದಿರ ನೆನಪಾಗುತ್ತೆ. ಮಂದಿರ ಕಟ್ಟೋಕೆ ಮುಸಲ್ಮಾನರ ವಿರೋಧ ಇಲ್ಲ. ನಮಗೆ ಮಂದಿರವೂ ಆಗಬೇಕು, ಮಸೀದಿಯೂ ನಿರ್ಮಾಣ ಆಗಬೇಕು. ಭಾರತ ಸರ್ವ ಧರ್ಮೀಯರೂ ಸಹೋದರರಂತೆ ಬಾಳುವ ದೇಶ. ವಿಶ್ವದಲ್ಲಿ ಇಂತಹ ಇನ್ನೊಂದು ದೇಶ ನೋಡಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

  • ಹೆಚ್‍ಡಿಕೆಗೆ ಶಕ್ತಿ ಕಡಿಮೆ, ಭಾರ ಹೆಚ್ಚು – ಸಿಎಂ ಅಳಬಾರದು ಅಂತ ಏನಿಲ್ಲ ಅಲ್ವಾ : ವಿಪಕ್ಷಗಳಿಗೆ ಸತೀಶ್ ಜಾರಕಿಹೊಳಿ ಟಾಂಗ್

    ಹೆಚ್‍ಡಿಕೆಗೆ ಶಕ್ತಿ ಕಡಿಮೆ, ಭಾರ ಹೆಚ್ಚು – ಸಿಎಂ ಅಳಬಾರದು ಅಂತ ಏನಿಲ್ಲ ಅಲ್ವಾ : ವಿಪಕ್ಷಗಳಿಗೆ ಸತೀಶ್ ಜಾರಕಿಹೊಳಿ ಟಾಂಗ್

    ಬೆಳಗಾವಿ: ಸಿಎಂ ಕುಮಾರಸ್ವಾಮಿ ಅಳಬಾರದಂತೆನಿಲ್ಲ. ಸನ್ನಿವೇಶ, ಸಂದರ್ಭಕ್ಕೆ ತಕ್ಕಂತೆ ಅಲ್ಲಿ ಏನಾದ್ರೂ ಆಗಿರಬಹುದು. ಅವರಿಗೆ ಶಕ್ತಿ ಕಡಿಮೆ, ಭಾರ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಸಿಎಂ ಎಚ್‍ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ಒಂದು ಕಡೆ ಕಾಂಗ್ರೆಸ್ ಅವರ ಸಮಸ್ಯೆ ಕೇಳಬೇಕು, ಮತ್ತೊಂದು ಕಡೆ ಬಿಜೆಪಿಯರು ವಿರೋಧ ವ್ಯಕ್ತಪಡಿಸುತ್ತಾರೆ. ಸಿಎಂ ಅದನ್ನು ಸಹಿಸಿಕೊಳ್ಳಬೇಕು. ರಾಜ್ಯದ ಜನರ ಸಮಸ್ಯೆ ಇರುತ್ತೆ, ಹೀಗಾಗಿ ಒಬ್ಬ ವ್ಯಕ್ತಿಗೆ ಕೆಲಸ ಮಾಡಲು ಇತಿಮಿತಿ ಇರುತ್ತೆ. ಆದರೆ ಸಿಎಂ ಗೆ ಹೆಚ್ಚು ಕೆಲಸವಿದೆ ಹೀಗಾಗಿ ಅದರ ಒತ್ತಡದಿಂದ ಅತ್ತಿರಬಹುದು. ಅದನ್ನು ಹೆಚ್ಚು ವ್ಯಾಖ್ಯಾನ ಮಾಡುವುದು ಸರಿಯಲ್ಲ. ಅಳುವುದು ಬಿಡುವುದು ಅವರ ವೈಯಕ್ತಿಕ ಎಂದು ವಿಪಕ್ಷ ನಾಯಕರಿಗೆ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದರು.

    ಇದೇ ವೇಳೆ ಮಾಜಿ ಸಿಎಂ ಬಿಎಸ್‍ವೈ ಗೆ ಪರೋಕ್ಷ ಟಾಂಗ್ ಕೊಟ್ಟ ಅವರು, ವಿರೋಧ ಪಕ್ಷದವರು ಅಧಿಕಾರದಲ್ಲಿದ್ದ ಹಾಗೂ ಇಲ್ಲದ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದಾರೆ. ಬಹಳಷ್ಟು ಜನ ರಾಜಕಾರಣಿಗಳು ಕಣ್ಣೀರು ಹಾಕಿದ್ದಾರೆ. ಸಿಎಂ ಕುಮಾರಸ್ವಾಮಿ ಅವರಿಗೆ ಎಲ್ಲಾ ರೀತಿಯಿಂದ ಸಹಕಾರ ಕೊಡುತ್ತೇವೆ. ಒಳ್ಳೆ ಸರ್ಕಾರ ಕೊಡುವುದೇ ನಮ್ಮ ಉದ್ದೇಶ ಎಂದರು.

    ಉತ್ತರ ಕರ್ನಾಟಕ ಅನ್ಯಾಯದ ಕುರಿತು ಶ್ವೇತ್ರಪತ್ರ ಹೊರಡಿಸುವ ವಿಚಾರ ಪ್ರತಿಕ್ರಿಯೆ ನೀಡಿ, ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ಹೇಳಿದಂತೆ ಶ್ವೇತಪತ್ರ ಹೊರಡಿಸಲಿ. ಇದಕ್ಕೆ ನಮ್ಮ ಆಗ್ರಹವಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಬಹಳಷ್ಟು ಅನುದಾನ ಕೊಟ್ಟಿದ್ದಾರೆ. ಈ ಬಜೆಟ್ ನಲ್ಲಿ ಅನ್ಯಾಯವಾಗಿದ್ದರೆ ಮತ್ತೆ ಅನುದಾನ ಪಡೆಯಬಹುದು ಎಂದು ಹೇಳಿದರು.

    ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಟಾಂಗ್: ಬಿಜೆಪಿ ಹುಲಿ ಇದ್ದಂತೆ ಕಾಂಗ್ರೆಸ್ ಇಲಿ ಎನ್ನುವಂತೆ ಮಾತನಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹೇಳಿಕೆಗೆ ಏಕವಚನದಲ್ಲಿ ತಿರುಗೇಟು ಕೊಟ್ಟ ಅವರು, ಅವನು ಹೇಳ್ತಾನೆ ಇರ್ತಾನೆ. ಈ ರೀತಿ ಅನಾವಶ್ಯಕ ಮಾತು ಸೃಷ್ಟಿ ಮಾಡುವುದು ಹೊಸದೇನು ಅಲ್ಲ. ಜಾತಿ, ಧರ್ಮ, ಆಹಾರ, ಅಭಿವೃದ್ಧಿಯಲ್ಲಿ ಅನವಶ್ಯಕ ಗೊಂದಲ ಉಂಟುಮಾಡುತ್ತಾನೆ. ಅವನ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.