Tag: ಮಾದವನಗರ

  • ಖಾಸಗಿ ಹೋಟೆಲ್‌ನ 19ನೇ ಫ್ಲೋರ್‌ನಿಂದ ಬಿದ್ದು ಯುವಕ ಆತ್ಮಹತ್ಯೆ

    ಖಾಸಗಿ ಹೋಟೆಲ್‌ನ 19ನೇ ಫ್ಲೋರ್‌ನಿಂದ ಬಿದ್ದು ಯುವಕ ಆತ್ಮಹತ್ಯೆ

    ಬೆಂಗಳೂರು: ಖಾಸಗಿ ಹೋಟೆಲ್‌ನ (Hotel) 19ನೇ ಫ್ಲೋರ್‌ನಿಂದ ಬಿದ್ದು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಮಾದವನಗರದಲ್ಲಿರುವ (Madavanagar) ಖಾಸಗಿ ಹೋಟೆಲ್‌ವೊಂದರಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತಮಿಳುನಾಡು ಮೂಲದ ಶರಣ್ (28) ಎಂದು ತಿಳಿದುಬಂದಿದೆ. ಈತ ಭಾನುವಾರ ಹೋಟೆಲ್‌ಗೆ ಬಂದು ಚೆಕ್ ಇನ್ ಆಗಿದ್ದು, ಬ್ಯುಸಿನೆಸ್ ವಿಚಾರವಾಗಿ ಬಂದಿರುವುದಾಗಿ ರಿಸೆಪ್ಷನ್ ಬುಕ್‌ನಲ್ಲಿ ಎಂಟ್ರಿ ಮಾಡಿದ್ದ. ಈ ಹಿಂದೆ ಕೂಡ ಈತ ಹೋಟೆಲ್‌ಗೆ ಬಂದು ಉಳಿದುಕೊಂಡಿದ್ದ. ಈ ಬಾರಿ ಎರಡು ದಿನ ಉಳಿಯೋದಾಗಿ ಹೋಟೆಲ್ ಸಿಬ್ಬಂದಿಗೆ ಹೇಳಿದ ಈತ ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ 19ನೇ ಫ್ಲೋರ್‌ನ ಬಾಲ್ಕನಿಗೆ ಬಂದು ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ- ಸವಾರ ಸಾವು

    ಆತ್ಮಹತ್ಯೆ ಮಾಡಿಕೊಳ್ಳುವ ಅರ್ಧಗಂಟೆಗೂ ಮೊದಲು ಈತ ತನ್ನ ರೂಮಿನಿಂದ ಹೊರಗೆ ಬಂದು ಬಾಲ್ಕನಿಯಲ್ಲಿ ಕುಳಿತಿದ್ದು, ಆತ್ಮಹತ್ಯೆ ಮಾಡಿಕೊಳ್ಳಬೇಕೋ ಬೇಡವೋ ಎಂದು ಯೋಚಿಸಿದ್ದ ಎಂದು ಶಂಕಿಸಲಾಗಿದೆ. ಕೊನೆಗೆ 19ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಂತಿದ್ದ ಕಸದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ಟೆಕ್ಕಿ ಸ್ಥಳದಲ್ಲೇ ಸಾವು!