Tag: ಮಾದೇಗೌಡ

  • ಶಿವರಾಮೇಗೌಡ ಸರ್ಕಸ್‍ನಲ್ಲಿನ ಜೋಕರ್: ಮಧು ಮಾದೇಗೌಡ

    ಶಿವರಾಮೇಗೌಡ ಸರ್ಕಸ್‍ನಲ್ಲಿನ ಜೋಕರ್: ಮಧು ಮಾದೇಗೌಡ

    ಮೈಸೂರು: ಶಿವರಾಮೇಗೌಡ ಸರ್ಕಸ್‍ನಲ್ಲಿನ ಜೋಕರ್. ಅವನಿಗೆ ಬುದ್ಧಿ ಕಲಿಸಲು ನಮಗೆ ಗೊತ್ತಿದೆ ಎಂದು ದಿವಂಗತ ಮಾದೇಗೌಡ ಅವರ ಪುತ್ರ ಮಧು ಮಾದೇಗೌಡ ವಾಗ್ದಾಳಿ ನಡೆಸಿದ್ದಾರೆ.

    ಮಾದೇಗೌಡರಿಗೆ ಎಕ್ಕಡದಲ್ಲಿ ಹೊಡೆದಿದ್ದೆ ಎಂಬ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಆಡಿಯೋ ವಿಚಾರ ಸಂಬಂಧ ಮಧು ಪ್ರತಿಕ್ರಿಯಿಸಿದರು. ಮಂಡ್ಯ ಭಾಗದಲ್ಲಿ ಶಿವರಾಮೇಗೌಡನನ್ನು 420 ಶಿವರಾಮೇಗೌಡ ಅಂತಾ ಕರೆಯೋದು. ಶಿವರಾಮೇಗೌಡರಿಗೆ ಯಾವ ರೀತಿ ಬುದ್ಧಿ ಹೇಳಬೇಕೋ ಆ ರೀತಿಯೇ ನಾವು ಬುದ್ಧಿ ಹೇಳುತ್ತೇವೆ. ಅವರು ನಮ್ಮ ತಂದೆಯ ಕಾಲು ಹಿಡಿಯೋದನ್ನು ನಾನು ನೋಡಿದ್ದೇನೆ ಎಂದರು.

    ಶಿವರಾಮೇ ಗೌಡರಿಗೆ ಎದರುಗಡೆ ನಿಂತು ಮಾತಾಡುವ ಶಕ್ತಿಯೂ ಇರಲಿಲ್ಲ. 60 ಕೋಟಿ ಖರ್ಚು ಮಾಡಿದರೂ ಶಿವರಾಮೇಗೌಡ ಚುನಾವಣೆಯಲ್ಲಿ ಗೆಲ್ಲಲ್ಲ. 420 ಕೆಲಸ ಮಾಡುವ ಕಾರಣ ಜನ ಹೊಡೆಯುತ್ತಾರೆ ಎಂದು ಎಸ್ಕರ್ಟ್ ಹಾಕಿಕೊಂಡು ತಿರುಗಾಡುತ್ತಾನೆ. ಅವರಿಗೆ ಬುದ್ಧಿ ಕಲಿಸುವುದು ನಮಗೆ ಗೊತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಗಂಡಂದಿರನ್ನು ಕಟ್ಟಿ ಹಾಕಿ ಹೆಂಡತಿಯರನ್ನು ರೇಪ್ ಮಾಡಿದ್ರು: ಸಿದ್ದರಾಮಯ್ಯ

    ಶಿವರಾಮೇ ಗೌಡ ಆಡಿಯೋದಲ್ಲೇನಿದೆ..?
    ನಾಗಮಂಗಲದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿರುವ ಶಿವರಾಮೇಗೌಡರು ಜೆಡಿಎಸ್ ಮಹಿಳಾ ಕಾರ್ಯಕರ್ತೆ ಜೊತೆ ಮಾತಾಡಿರುವ ಆಡಿಯೋ ಎಲ್ಲೇಡೆ ಹರಿದಾಡುತ್ತಿದೆ. ಮಂಡ್ಯ ಲೋಕಸಭಾ ಎಲೆಕ್ಷನ್‍ಗೆ 30 ಕೋಟಿ ಖರ್ಚು ಮಾಡಿದ್ದೇನೆ. ಎಂಎಲ್‍ಸಿ ಎಲೆಕ್ಷನ್‍ಗೆ 27 ಕೋಟಿ ರೂಪಾಯಿ ಖರ್ಚು ಮಾಡಿದ್ದೇನೆ. ಎಂಎಲ್‍ಎ ಎಲೆಕ್ಷನ್‍ಗೆ 30 ಕೋಟಿ ರೂಪಾಯಿ ಖರ್ಚು ಮಾಡ್ತೇನೆ. ನನ್ನದು 8 ಸ್ಕೂಲ್ ಇದೆ, ತಿಂಗಳಿಗೆ 3 ಕೋಟಿ ಸಂಬಳ ಕೊಡ್ತೇನೆ. ನಾಗಮಂಗಲ ಎಲೆಕ್ಷನ್‍ಗೂ 10 ತಿಂಗಳ ಸಂಬಳದಷ್ಟೇ ಹಣ ಬೇಕು. ಎಂಎಲ್‍ಎ ಎಲೆಕ್ಷನ್‍ಗೆ ಅಷ್ಟೂ ದುಡ್ಡು ಖರ್ಚು ಮಾಡುತ್ತೇನೆ ಎಂದು ಮಾತನಾಡಿಕೊಂಡು ಬಳಿಕ ದಿವಂಗತ ಮಾದೇಗೌಡರ ಬಗ್ಗೆ ನಿಂದಿಸಿರುವುದು ಆಡಿಯೋದಲ್ಲಿದೆ. ಇದನ್ನೂ ಓದಿ: MLA ಎಲೆಕ್ಷನ್‍ಗೆ 30 ಕೋಟಿ ಖರ್ಚು ಮಾಡ್ತೀನಿ – ಶಿವರಾಮೇಗೌಡ ಆಡಿಯೋ ವೈರಲ್

  • ಜಿ.ಮಾದೇಗೌಡರು ಪಂಚಭೂತಗಳಲ್ಲಿ ಲೀನ

    ಜಿ.ಮಾದೇಗೌಡರು ಪಂಚಭೂತಗಳಲ್ಲಿ ಲೀನ

    ಮಂಡ್ಯ: ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ಅವರ ಅಂತ್ಯಕ್ರಿಯೆಯನ್ನು ಜಿಲ್ಲೆಯ ಮದ್ದೂರು ತಾಲೂಕಿನ ಹನುಮಂತನಗರದಲ್ಲಿ ನೆರವೇರಿಸಲಾಯಿತು.

    ಕೆ.ಎಂ.ದೊಡ್ಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಒಕ್ಕಲಿಗ ಸಂಪ್ರದಾಯದಂತೆ ಹನುಮಂತನಗರದಲ್ಲಿರುವ ಮಾದೇಗೌಡರಗೌಡರ ವಿದ್ಯಾರ್ಥಿ ಗೃಹದ ಕ್ರೀಡಾಂಗಣದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಮಾದೇಗೌಡರ ಪುತ್ರ ಡಾ.ಪ್ರಕಾಶ್ ಅಂತಿಮ ವಿಧಿ ವಿಧಾನ ನೆರವೇರಿಸಿದ್ದು, ಚಿತೆಗೆ ಅಗ್ನಿ ಸ್ಪರ್ಷ ಮಾಡಿದರು.

    ಜಿ.ಮಾದೇಗೌಡರ ಕುಟುಂಬಸ್ಥರಿಂದ ಪೂಜೆ, ಅಂತಿಮ ನಮನ ಸಲ್ಲಿಸಲಾಯಿತು. ಬಳಿಕ ಪೊಲೀಸರಿಂದ ಗೌರವ ವಂದನೆ, ಜಿ.ಮಾದೇಗೌಡರಿಗೆ ರಾಷ್ಟ್ರಧ್ವಜ ಹೊದಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಸೇರಿದಂತೆ ಗಣ್ಯರಿಂದ ಗೌರವ ವಂದನೆ ಸಲ್ಲಿಸಲಾಯಿತು. ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಾಜಿ ಶಾಸಕರಾದ ರಮೇಶ್ ಬಂಡಿ, ಸಿದ್ದೇಗೌಡ ಇದ್ದರು.

    ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಂಸದ ಜಿ.ಮಾದೇಗೌಡ (92) ಶನಿವಾರ ವಿಧಿವಶರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮಾದೇಗೌಡರು ಅವರು ನಿಧನರಾಗಿದ್ದರು.

    ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು, ಕಾವೇರಿ ಹೋರಾಟಗಾರರು, ಮಾಜಿ ಲೋಕಸಭಾ ಸದಸ್ಯರು ಹಾಗೂ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರು ತೀವ್ರ ಅನಾರೋಗ್ಯದಿಂದ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು.

    ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಶಾಸನಸಭೆ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ರವರ ಜೊತೆ ಶ್ರಮಿಸಿದವರು. ಮಂಡ್ಯದಲ್ಲಿ ಗಾಂಧಿ ಭವನ ನಿರ್ಮಿಸಿದ್ದರು. ಈ ಹಿಂದೆ ಮಾದೇಗೌಡರೊಂದಿಗೆ ಪ್ರಥಮ ಬಾರಿಗೆ ಶಾಸನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ ಎಸ್.ಎಂ.ಕೃಷ್ಣ ರವರು ತಮ್ಮ ಬಹುಕಾಲದ ಒಡನಾಡಿಯ ಆರೋಗ್ಯ ವಿಚಾರಿಸಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದರು.

  • ಮಾಜಿ ಸಂಸದ, ಕಾವೇರಿ ಹೋರಾಟಗಾರ ಮಾದೇಗೌಡ ವಿಧಿವಶ

    ಮಾಜಿ ಸಂಸದ, ಕಾವೇರಿ ಹೋರಾಟಗಾರ ಮಾದೇಗೌಡ ವಿಧಿವಶ

    ಮಂಡ್ಯ: ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಂಸದ ಜಿ.ಮಾದೇಗೌಡ (92) ವಿಧಿವಶರಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಮಾದೇಗೌಡರು ಇಂದು ನಿಧನರಾಗಿದ್ದಾರೆ.

    ಮಂಡ್ಯ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು, ಕಾವೇರಿ ಹೋರಾಟಗಾರರು, ಮಾಜಿ ಲೋಕಸಭಾ ಸದಸ್ಯರು ಹಾಗು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರವರು ತೀವ್ರ ಅನಾರೋಗ್ಯದಿಂದ ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಶಾಸನಸಭೆ, ಲೋಕಸಭಾ ಸದಸ್ಯರಾಗಿ, ರೈತ ಪರ ಹೋರಾಟಗಾರರಾಗಿ ಜಿಲ್ಲೆಯ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ರವರ ಜೊತೆ ಶ್ರಮಿಸಿದವರು. ಮಂಡ್ಯದಲ್ಲಿ ಗಾಂಧಿ ಭವನ ನಿರ್ಮಿಸಿದ್ದರು. ಈ ಹಿಂದೆ ಮಾದೇಗೌಡರೊಂದಿಗೆ ಪ್ರಥಮ ಬಾರಿಗೆ ಶಾಸನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ ಎಸ್.ಎಂ.ಕೃಷ್ಣ ರವರು ತಮ್ಮ ಬಹುಕಾಲದ ಒಡನಾಡಿಯ ಆರೋಗ್ಯ ವಿಚಾರಿಸಿ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದರು.

  • ಮಾದೇಗೌಡರು ನನ್ನ ಬಳಿ ಹಣ ಕೇಳಿದ್ದು ಸತ್ಯ – ಪುಟ್ಟರಾಜು ಸ್ಪಷ್ಟನೆ

    ಮಾದೇಗೌಡರು ನನ್ನ ಬಳಿ ಹಣ ಕೇಳಿದ್ದು ಸತ್ಯ – ಪುಟ್ಟರಾಜು ಸ್ಪಷ್ಟನೆ

    ಬೆಂಗಳೂರು/ಮಂಡ್ಯ: ಕಾಂಗ್ರೆಸ್ ಹಿರಿಯ ಮುಖಂಡ ಜಿ ಮಾದೇಗೌಡರು ಸಿ ಎಸ್ ಪುಟ್ಟರಾಜು ಅವರಿಗೆ ಕರೆ ಮಾಡಿ ಹಣ ಕೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿರುವ ಕುರಿತಂತೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಾತನಾಡಿರುವುದು ಸತ್ಯ. ಚುನಾವಣಾ ಪ್ರಚಾರಕ್ಕೆ ಆಯೋಗನೇ ಅಭ್ಯರ್ಥಿಗಳಿಗೆ 70 ಲಕ್ಷ ಖರ್ಚು ಮಾಡಲು ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿಗಳಾಗಿರುವುದರಿಂದ ಲೋಕಲ್ ಅವರು ನಮಗೆ ಸಪರೇಟ್ ಆಗಿ ಚುನಾವಣಾ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಹೇಳಿರುವಂತದ್ದು ನಿಜ. ಹಾಗೆಯೇ ನಾನು ಕೂಡ ಅರೆಂಜ್ ಮಾಡಿಕೊಡುತ್ತೇನೆ ಎಂದು ಹೇಳಿದ್ದು ಕೂಡ ಅಷ್ಟೇ ಸತ್ಯ.

    ಚುನಾವಣಾ ಪ್ರಚಾರ ಮಾಡಲು ವ್ಯವಸ್ಥೆಗಳನ್ನು ಮಾಡಲು ತಮ್ಮಣ್ಣನ ಬಳಿ ನಮ್ಮ ಹುಡುಗರು ಹೋಗೋದಿಲ್ಲ. ಹೀಗಾಗಿ ಜಿಲ್ಲಾ ಮಂತ್ರಿ, ಮೈತ್ರಿ ಧರ್ಮ ಪಾಲನೆ ಮಾಡಿ ಚುನಾವಣೆ ಚೆನ್ನಾಗಿ ನಡೆಸಬೇಕು. ಅದಕ್ಕೆ ಅರೆಂಜ್‍ಮೆಂಟ್ ಮಾಡಿಕೊಡಿ ಎಂದು ಮಾದೇಗೌಡರು ಕೇಳಿದ್ದಾರೆ ಅದರಲ್ಲಿ ತಪ್ಪೇನಿದೆ ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

    ಶುಕ್ರವಾರ ರಾತ್ರಿ ಫೋನ್ ಸಂಭಾಷಣೆ ಆಗಿದ್ದು, ನಿನ್ನೆ ಬ್ಯಾಂಕ್ ರಜೆ ಇತ್ತು. ಹೀಗಾಗಿ ಹಣ ಹೊಂದಿಸುತ್ತಿದ್ದೇವೆ. ಇದು ಬಿಟ್ಟು ಎಲೆಕ್ಷನ್ ದಿಕ್ಕು ತಪ್ಪಿಸುವಂತದ್ದು ಏನೂ ಇಲ್ಲ. ಇದರಿಂದ ಫೋನ್ ಟ್ರ್ಯಾಪ್ ಮಾಡುತ್ತಾರೆ ಎಂದು ಗೊತ್ತಾಗುತ್ತೆ ಅಲ್ವ ಎಂದರು.

    ಆದಾಯ ತೆರಿಗೆ ಇಲಾಖೆಯ ಮುಖಾಂತರ ಫೋನ್ ಕದ್ದಾಲಿಕೆ ಮಾಡುತ್ತಾರೆ ಎಂಬ ಮಾಹಿತಿ ನಮಗೆ ಲಭಿಸಿದೆ. ಹೀಗಾಗಿ ಐಟಿ ಇಲಾಖೆಯೇ ಅವರ ಪರ ಕೆಲಸ ಮಾಡುತ್ತದೆ ಎಂದು ಇದರಿಂದ ಸಾಬೀತಾಗುತ್ತದೆ ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ. ನಾವು ಹೋಟೆಲಿನಲ್ಲಿ ಉಳಿದುಕೊಂಡರೂ ಬಂದು ರೇಡ್ ಮಾಡುತ್ತಾರೆ. ಇಷ್ಟೆಲ್ಲ ಹಿಂದೆ ಬಿದ್ದು ನನ್ನ ಕುಟುಂಬದ ಫೋನ್ ಗಳನ್ನು ಟ್ರ್ಯಾಪ್ ಮಾಡುತ್ತಿದ್ದಾರೆ ಅನ್ನೋ ಮಾಹಿತಿಯೂ ನನಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದರಿಂದ ಚುನಾವಣೆ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಜಿಲ್ಲೆಯ ಜನ ಬಹಳ ಪ್ರಜ್ಞಾವಂತರಿದ್ದಾರೆ. ಸುಮಲತಾ ಮೇಡಂ ಹೇಳುತ್ತಿದ್ದರು ಜನ ಮುಟ್ಟಾಳರಲ್ಲ ಎಂದು ಹಾಗೆಯೇ ಇದರಿಂದ ಬಿಜೆಪಿಯವರಿಗೆ ನಮ್ಮನ್ನು ಮುಟ್ಟಾಳರನ್ನಾಗಿ ಮಾಡಲು ಸಾಧ್ಯವಿಲ್ಲ. ಯಾವುದೇ ಕಾರಣಕ್ಕೂ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ ಏ.18ರಂದು ಜಿಲ್ಲೆಯ ಜನ ಉತ್ತರ ಹೇಳುತ್ತಾರೆ ಬಿಜೆಪಿಗೆ ಟಾಂಗ್ ಕೊಟ್ಟರು.

    ಆಡಿಯೋದಲ್ಲೇನಿದೆ?
    ಮಾದೇಗೌಡರು ಸಚಿವರಿಗೆ ಕರೆ ಮಾಡುತ್ತಾರೆ. ಮಾದೇಗೌಡರ ಪರವಾಗಿ ಬೇರೊಬ್ಬ ವ್ಯಕ್ತಿ ಪುಟ್ಟರಾಜುಗೆ ಫೋನ್ ಮಾಡಿ ನಿಮ್ಮ ಜೊತೆ ಮಾದೇಗೌಡರು ಮಾತನಾಡಬೇಕಂತೆ ಎಂದು ಹೇಳುತ್ತಾರೆ. ಹೀಗಾಗಿ ಪುಟ್ಟರಾಜು ಅವರು ಆಯ್ತು, ಅವರಿಗೆ ಫೋನ್ ಕೊಡಿ ಅಂತಾರೆ. ಆಗ ಮಾದೇಗೌಡರು, ನನ್ನ ಮೊಬೈಲ್ ನಿಂದ ಹಲವು ಬಾರಿ ನಿಮಗೆ ಫೋನ್ ಮಾಡಿದೆ. ಆದ್ರೆ ನೀವು ಕರೆ ಸ್ವೀಕರಿಸಿಲ್ಲ ಎಂದಿದ್ದಾರೆ. ಆಗ ಸಚಿವರು, ಹೌದು ಮತ್ತೆ ವಾಪಸ್ ನಿಮಗೆ ಫೋನ್ ಮಾಡಿದೆ ಆಗ ನೀವು ಸಿಗಲಿಲ್ಲ ಎಂದು ಹೇಳುತ್ತಾರೆ. ನಂತರ ಹಣದ ವಿಚಾರ ಬರುತ್ತದೆ. ಮಾದೇ ಗೌಡರು ನೇರವಾಗಿ ಸಚಿವರ ಬಳಿ ಹಣ ಕೇಳುತ್ತಾರೆ.

    ಎಲೆಕ್ಷನ್ ಖರ್ಚಿಗೆ ಹಣ ಬೇಕು. ನನ್ನ ಮಗ ಓಡಾಡುತ್ತಿದ್ದಾನೆ. ಹೀಗಾಗಿ ಆದಷ್ಟು ಬೇಗ ಹಣ ಕಳುಹಿಸಿ ಕೊಡಿ ಎಂದು ಕೇಳುತ್ತಾರೆ. ಇದಕ್ಕೆ ಪುಟ್ಟರಾಜು ಅವರು ಓಕೆ ಎಂದು ಹೇಳಿದ್ದಾರೆ. ಈ ಆಡಿಯೋ ಇದೀಗ ವೈರಲ್ ಆಗಿದೆ. ಆದರೆ ಈ ಆಡಿಯೋ ಎಷ್ಟರಮಟ್ಟಿಗೆ ಸತ್ಯ ಅನ್ನೋದು ತಿಳಿದುಬರಬೇಕಿದೆ. ಯಾಕಂದ್ರೆ ಒಬ್ಬರು ಹಿರಿಯ ರಾಜಕರಾಣಿಯಾಗಿದ್ದವರು ಬೇರೊಬ್ಬರ ಮೊಬೈಲ್ ನಿಂದ ಹಣದ ವಿಷಯ ಮಾತಾಡುತ್ತಾರಾ ಅಥವಾ ಇದೊಂದು ಕ್ರಿಯೇಟ್ ಮಾಡಿರುವ ಆಡಿಯೋನಾ ಎಂಬ ಪ್ರಶ್ನೆ ಎದ್ದಿದೆ.

  • ಸಚಿವ ಪುಟ್ಟರಾಜು ಬಳಿ ಹಣ ಕೇಳಿದ್ರಾ ಮಾದೇಗೌಡ?

    ಸಚಿವ ಪುಟ್ಟರಾಜು ಬಳಿ ಹಣ ಕೇಳಿದ್ರಾ ಮಾದೇಗೌಡ?

    ಮಂಡ್ಯ: ಸಚಿವ ಸಿ.ಎಸ್ ಪುಟ್ಟರಾಜು ಬಳಿ ಕಾಂಗ್ರೆಸ್ ಹಿರಿಯ ಮುಖಂಡ ಜಿ. ಮಾದೇ ಗೌಡರು ಹಣ ಕೇಳಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ. ಈ ಮೂಲಕ ಮಂಡ್ಯ ಕ್ಷೇತ್ರದಲ್ಲಿ ಹಣದ ಹೊಳೆಯೇ ಹರಿಯುತ್ತಿದೆಯಾ ಅನ್ನೋ ಪ್ರಶ್ನೆಯೊಂದು ಚರ್ಚೆಗೆ ಗ್ರಾಸವಾಗಿದೆ.

    ಮಾದೇಗೌಡರಿಗೆ ಬೇರೆ ಯಾರೋ ಫೋನ್ ಮಾಡಿಕೊಡುತ್ತಾರೆ. ಅಲ್ಲದೆ ಒಬ್ಬ ಸಚಿವರಾಗಿದ್ದವರು ಬೇರೆಯವರ ಫೋನಿನಲ್ಲಿ ಹಣದ ವಿಚಾರ ಮಾತನಾಡುತ್ತಾರಾ ಎಂಬ ಪ್ರಶ್ನೆಗಳು ಉದ್ಭವವಾಗಿದೆ. ಆದ್ರೆ ಈ ಆಡಿಯೋ ಅಸಲಿಯೋ ಅಥವಾ ನಕಲಿಯೋ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

    ಆಡಿಯೋದಲ್ಲೇನಿದೆ?
    ಮಾದೇಗೌಡರು ಸಚಿವರಿಗೆ ಕರೆ ಮಾಡುತ್ತಾರೆ. ಮಾದೇಗೌಡರ ಪರವಾಗಿ ಬೇರೊಬ್ಬ ವ್ಯಕ್ತಿ ಪುಟ್ಟರಾಜುಗೆ ಫೋನ್ ಮಾಡಿ ನಿಮ್ಮ ಜೊತೆ ಮಾದೇಗೌಡರು ಮಾತನಾಡಬೇಕಂತೆ ಎಂದು ಹೇಳುತ್ತಾರೆ. ಹೀಗಾಗಿ ಪುಟ್ಟರಾಜು ಅವರು ಆಯ್ತು, ಅವರಿಗೆ ಫೋನ್ ಕೊಡಿ ಅಂತಾರೆ. ಆಗ ಮಾದೇಗೌಡರು, ನನ್ನ ಮೊಬೈಲ್ ನಿಂದ ಹಲವು ಬಾರಿ ನಿಮಗೆ ಫೋನ್ ಮಾಡಿದೆ. ಆದ್ರೆ ನೀವು ಕರೆ ಸ್ವೀರಿಸಿಲ್ಲ ಎಂದಿದ್ದಾರೆ. ಆಗ ಸಚಿವರು, ಹೌದು ಮತ್ತೆ ವಾಪಸ್ ನಿಮಗೆ ಫೋನ್ ಮಾಡಿದೆ ಆಗ ನೀವು ಸಿಗಲಿಲ್ಲ ಎಂದು ಹೇಳುತ್ತಾರೆ. ನಂತರ ಹಣದ ವಿಚಾರ ಬರುತ್ತದೆ. ಮಾದೇ ಗೌಡರು ನೇರವಾಗಿ ಸಚಿವರ ಬಳಿ ಹಣ ಕೇಳುತ್ತಾರೆ.

    ಎಲೆಕ್ಷನ್ ಖರ್ಚಿಗೆ ಹಣ ಬೇಕು. ನನ್ನ ಮಗ ಓಡಾಡುತ್ತಿದ್ದಾನೆ. ಹೀಗಾಗಿ ಹಣ ಕಳುಹಿಸಿ ಕೊಡಿ ಎಂದು ಕೇಳುತ್ತಾರೆ. ಇದಕ್ಕೆ ಪುಟ್ಟರಾಜು ಅವರು ಓಕೆ ಎಂದು ಹೇಳಿದ್ದಾರೆ ಅನ್ನೋ ಆಡಿಯೋ ಇದೀಗ ವೈರಲ್ ಆಗಿದೆ. ಆದರೆ ಈ ಆಡಿಯೋ ಎಷ್ಟರಮಟ್ಟಿಗೆ ಸತ್ಯ ಅನ್ನೋದು ತಿಳಿದುಬರಬೇಕಿದೆ. ಯಾಕಂದ್ರೆ ಒಬ್ಬರು ಹಿರಿಯ ರಾಜಕರಾಣಿಯಾಗಿದ್ದವರು ಬೇರೊಬ್ಬರ ಮೊಬೈಲ್ ನಿಂದ ಹಣದ ವಿಷಯ ಮಾತಾಡುತ್ತಾರಾ ಅಥವಾ ಇದೊಂದು ಕ್ರಿಯೇಟ್ ಮಾಡಿರುವ ಆಡಿಯೋನಾ ಎಂಬ ಪ್ರಶ್ನೆ ಎದ್ದಿದೆ.

  • ನ್ಯಾಯಾಲಯದ ಮೇಲೆ ವಿಶ್ವಾಸವಿದ್ದು, ತೀರ್ಪು ಕರ್ನಾಟಕದ ಪರವಾಗಿರುತ್ತೆ- ಜಿ. ಮಾದೇಗೌಡ

    ನ್ಯಾಯಾಲಯದ ಮೇಲೆ ವಿಶ್ವಾಸವಿದ್ದು, ತೀರ್ಪು ಕರ್ನಾಟಕದ ಪರವಾಗಿರುತ್ತೆ- ಜಿ. ಮಾದೇಗೌಡ

    ಮಂಡ್ಯ: ಕರ್ನಾಟಕದ ಮತ್ತು ತಮಿಳುನಾಡು ನಡುವಿನ ದಶಕಗಳ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಇಂದು ಅಂತಿಮ ತೀರ್ಪು ನೀಡಲಿದ್ದು, ನ್ಯಾಯಾಲಯದ ಮೇಲೆ ವಿಶ್ವಾಸವಿದೆ. ಹೀಗಾಗಿ ತೀರ್ಪು ಕರ್ನಾಟಕದ ಪರವಾಗಿ ಬರಬಹುದು ಎಂದು ಕಾವೇರಿ ಹೋರಾಟಗಾರ ಜಿ.ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಒಂದು ವೇಳೆ ವ್ಯತಿರಿಕ್ತವಾಗಿ ಬಂದರೆ ರೈತರು ಶಾಂತಿಯುತ ಹೋರಾಟ ಮಾಡಬೇಕು. ಯಾವುದೇ ರೀತಿಯ ಹಿಂಸೆಯಲ್ಲಿ ತೊಡಗಬಾರದು ಎಂದು ಮಾದೇಗೌಡ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಇಂದು ಸುಪ್ರೀಂನಲ್ಲಿ `ಕಾವೇರಿ’ ಅಂತಿಮ ತೀರ್ಪು- ಬೆಂಗ್ಳೂರು, ಮಂಡ್ಯ, ಮೈಸೂರಲ್ಲಿ ಕಟ್ಟೆಚ್ಚರ

    ಈ ಹಿಂದೆ ಬರುತ್ತಿದ್ದ ತೀರ್ಪು ಜಯಲಲಿತ ತೀರ್ಪು ಎಂಬಂತಾಗಿತ್ತು. ತಮ್ಮ ರಾಜ್ಯಕ್ಕೆ ಬರುವ ಅಧಿಕಾರಿಗಳಿಂದ ಬೇಕಾದ ರೀತಿ ವರದಿ ಬರೆಸುತ್ತಿದ್ರು. ಆದ್ರೆ ನ್ಯಾಯಾಲಯ ಎಲ್ಲವನ್ನು ಪರಿಶೀಲಿಸಿ ನ್ಯಾಯಯುತ ತೀರ್ಪು ನೀಡಲಿದೆ ಎಂದು ಮಾದೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾವೇರಿ ನೀರಿಗೆ ತಮಿಳುನಾಡು ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಯ್ತು? ಇಲ್ಲಿದೆ ಪೂರ್ಣ ವಿವರ

  • ಮಂಡ್ಯದಲ್ಲಿ ಮತ್ತೆ ಪದ್ಮಾವತಿ ಪರ್ವ? ಸುದ್ದಿ ಬೆನ್ನಲ್ಲೇ ಅಂಬಿ-ಮಾದೇಗೌಡ ಗೌಪ್ಯ ಚರ್ಚೆ

    ಮಂಡ್ಯದಲ್ಲಿ ಮತ್ತೆ ಪದ್ಮಾವತಿ ಪರ್ವ? ಸುದ್ದಿ ಬೆನ್ನಲ್ಲೇ ಅಂಬಿ-ಮಾದೇಗೌಡ ಗೌಪ್ಯ ಚರ್ಚೆ

    ಮಂಡ್ಯ: ಮಾಜಿ ಸಂಸದೆ ರಮ್ಯಾ ಮತ್ತೆ ಮಂಡ್ಯ ಜಿಲ್ಲೆಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದಾರೆ ಎಂಬ ವಿಚಾರವೊಂದು ಮೂಲಗಳಿಂದ ತಿಳಿದುಬಂದಿದೆ.

    ಈ ಮೂಲಕ ಮಂಡ್ಯ ಬಿಟ್ಟು ಹೋಗಲ್ಲ ಎಂದ ರಮ್ಯಾ ಮತ್ತೆ ಶೀಘ್ರದಲ್ಲೇ ವಾಪಸ್ಸಾಗಲಿದ್ದಾರೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ರಮ್ಯಾ ವಾಸವಿದ್ದ ಮನೆ ಕ್ಲೀನಿಂಗ್ ಕೆಲಸ ಶುರುವಾಗಿದೆ. ನವೆಂಬರ್ 29 ಹುಟ್ಟುಹಬ್ಬದಂದೇ ಮಂಡ್ಯದಲ್ಲಿ ಮತ್ತೆ ಪದ್ಮಾವತಿ ಪರ್ವ ಆರಂಭವಾಗಲಿದೆಸ. ರಮ್ಯಾಗೆ ಮಂಡ್ಯದಲ್ಲೇ ಟಿಕೆಟ್ ನೀಡಿ ಜಿಲ್ಲೆಯ ನಾಯಕತ್ವ ನೀಡಲು ನಡೆದಿದೆ ಸಿದ್ಧತೆ ನಡೆಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.

    ಇನ್ನು ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಂಡ್ಯದಲ್ಲಿ ರಾಜಕಾರಣ ಗರಿಗೆದರಿದ್ದು, ಇಂದು ಶಾಸಕ ಅಂಬರಿಶ್ ಕಾಂಗ್ರೆಸ್ ಹಿರಿಯ ನಾಯಕ ಜಿ.ಮಾದೇಗೌಡ ಜೊತೆ ಒಂದು ಗಂಟೆಗಳ ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.

    ಮಂಡ್ಯದಲ್ಲಿ ನಡೆದ ಟಿಪ್ಪು ಜಯಂತಿಗೆ ಗೈರಾಗಿದ್ದ ಅಂಬಿ ರಾತ್ರಿ ಮಂಡ್ಯದ ಹೊರವಲಯದಲ್ಲಿರುವ ತಮ್ಮ ಆಪ್ತ ಅಮರಾವತಿ ಚಂದ್ರಶೇಖರ್ ನಿವಾಸಕ್ಕೆ ಜಿ.ಮಾದೇಗೌಡರನ್ನು ಕರೆಸಿಕೊಂಡು ಗೌಪ್ಯ ಮಾತುಕತೆ ನಡೆಸಿದ್ದರು. ಮಾಜಿ ಸಂಸದೆ ರಮ್ಯಾ ಮಂಡ್ಯದಲ್ಲಿ ಸ್ವಂತ ಮನೆ ಮಾಡಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ರಮ್ಯಾ ಸ್ಪರ್ಧಿಸುತ್ತಾರೆ ಅನ್ನೋ ಮಾತು ಕಿವಿಗೆ ಬೀಳುತ್ತಲೇ ಕ್ಷೇತ್ರಕ್ಕೆ ಆಗಮಿಸಿದ ಅಂಬಿ ಮಾದೇಗೌಡರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಶ್, ಮಾದೇಗೌಡರು ನನ್ನ ತುಂಬಾ ಇಷ್ಟಪಡ್ತಾರೆ. ಅವರೊಂದಿಗೆ ಮಾತನಾಡಬೇಕೆನಿಸಿತು ಮಾತನಾಡಿದ್ದೇನೆ. ರಾಜಕೀಯ ಚರ್ಚೆ ನಡೆದಿಲ್ಲ ಎಂದ ಅವರು ನನಗೆ ಟಿಕೆಟ್ ಕೊಡೋದು ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಅಂತ ಹೇಳಿದ್ರು.

    ಇದನ್ನೂ ಓದಿ:  ರಾಹುಲ್ ಗಾಂಧಿಯನ್ನ ಧೋನಿಗೆ ಹೋಲಿಸಿದ ರಮ್ಯಾ

    ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರೇ ಇತ್ತೀಚೆಗೆ ನನಗೆ ಟಿಕೆಟ್ ಕೊಡುವುದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ. ಅಧ್ಯಕ್ಷರೇ ಹಾಗೆ ಹೇಳಿದ ಮೇಲೆ ನಮಗೆ ಟಿಕೆಟ್ ಕೊಡುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ರಮ್ಯಾ ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಗೊತ್ತಿಲ್ಲ. ಬಂದರೆ ಸಂತೋಷ. ನಾನು ಎಲ್ಲಿಯೂ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿಲ್ಲ ಅಂತ ಅಂಬರಿಶ್ ತಿಳಿಸಿದ್ರು.

    ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಕೆಣಕಲು ಹೋಗಿ ಪೇಚಿಗೆ ಸಿಲುಕಿದ ರಮ್ಯಾ