Tag: ಮಾಧವಿ ಪುರಿ ಬುಚ್‌

  • ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

    ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

    ನವದೆಹಲಿ: ಷೇರು ಮಾರುಕಟ್ಟೆ ವಂಚನೆ ಪ್ರಕರಣದಲ್ಲಿ ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್‌ ಕ್ಲೀನ್ ಚಿಟ್ ನೀಡಿದೆ.

    ಮಾಧವಿ ಪುರಿ ಬುಚ್ ಅವರ ವಿರುದ್ಧ ಹಿಂಡೆನ್‌ಬರ್ಗ್-ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರುಗಳನ್ನು ಭಾರತೀಯ ಲೋಕಪಾಲ್ ವಜಾಗೊಳಿಸಿದೆ. ಭ್ರಷ್ಟಾಚಾರ ವಿರೋಧಿ ಒಂಬುಡ್ಸ್‌ಮನ್ ಆರೋಪಗಳಲ್ಲಿ ಯಾವುದೇ ಅರ್ಹತೆ ಇಲ್ಲ. ಊಹೆಯಿಂದ ಕೂಡಿದಂತಿದೆ. ಯಾವುದೇ ಪರಿಶೀಲಿಸಬಹುದಾದ ಪುರಾವೆಗಳ ಕೊರತೆಯಿದೆ ಎಂದು ಲೋಕಪಾಲ್‌ ಹೇಳಿದೆ.

    ಬುಧವಾರ ಹೊರಡಿಸಿದ ಆದೇಶದಲ್ಲಿ, ದೂರುಗಳು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ತನಿಖೆಗೆ ಅಗತ್ಯವಾದ ಕಾನೂನು ಅವಶ್ಯಕತೆಗಳನ್ನು ಪೂರೈಸಿಲ್ಲ ಎಂದು ಹೇಳಲಾಗಿದೆ. ಆರೋಪಗಳು ಹೆಚ್ಚಾಗಿ ಊಹೆಗಳಿಂದ ಕೂಡಿವೆ. ಹೀಗಾಗಿ, ದೂರುಗಳನ್ನು ವಿಲೇವಾರಿ ಮಾಡಲಾಗುತ್ತದೆ ಎಂದು ಲೋಕಪಾಲ್‌ ತಿಳಿಸಿದೆ.

    ಹಿಂಡೆನ್‌ಬರ್ಗ್‌ ವರದಿ ಆಧರಿಸಿ ಮಾಧವಿ ವಿರುದ್ಧ ಪ್ರತ್ಯೇಕವಾಗಿ ಎರಡು ದೂರುಗಳು ದಾಖಲಾಗಿದ್ದವು. ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಮತ್ತು ಅವರ ಪತಿ ಪಾಲುದಾರಿಕೆ ಹೊಂದಿದ್ದಾರೆಂದು ಹಂಡೆನ್‌ಬರ್ಗ್‌ ರಿಸರ್ಚ್‌ ಆರೋಪಿಸಿತ್ತು. ಇದನ್ನು ಮಾಧವಿ ಅವರು ಅಲ್ಲಗಳೆದಿದ್ದರು.

  • ಷೇರುಪೇಟೆ ವಂಚನೆ: ಸೆಬಿ ಮಾಜಿ ಅಧ್ಯಕ್ಷೆ ಬುಚ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ

    ಷೇರುಪೇಟೆ ವಂಚನೆ: ಸೆಬಿ ಮಾಜಿ ಅಧ್ಯಕ್ಷೆ ಬುಚ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ

    ಮುಂಬೈ: ಷೇರು ಮಾರುಕಟ್ಟೆ ವಂಚನೆ (Stock Market Fraud) ಆರೋಪ ಹಿನ್ನೆಲೆಯಲ್ಲಿ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ (Madhabi Puri Buch) ಮತ್ತು ಇತರ ಐದು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ACB) ನ್ಯಾಯಾಲಯ ಆದೇಶಿಸಿದೆ.

    ಸಪನ್ ಶ್ರೀವಾಸ್ತವ ಎಂಬವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಹೇಳಿದೆ. ಅಷ್ಟೇ ಅಲ್ಲದೇ ತಾನು ತನಿಖೆಯ ಮೇಲ್ವಿಚಾರಣೆ ಮಾಡುತ್ತೇನೆ ಮತ್ತು 30 ದಿನಗಳಲ್ಲಿ ಪ್ರಕರಣದ ವರದಿಯನ್ನು ನೀಡುವಂತೆ ಸೂಚಿಸಿದೆ.  ಇದನ್ನೂ ಓದಿ: ಬರಿಗಾಲಲ್ಲಿ ವಿವೇಕ್ ರಾಮಸ್ವಾಮಿ – ಸಾಮಾಜಿಕ ಜಾಲತಾಣದಲ್ಲಿ ವಿವಾದ, ಚರ್ಚೆ

    ಕೋರ್ಟ್‌ ಆದೇಶದ ಬೆನ್ನಲ್ಲೇ ಸೆಬಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಇದೊಂದು ಕ್ಷುಲ್ಲಕ ಅರ್ಜಿಯಾಗಿದೆ. ಕೋರ್ಟ್‌ ಯಾವುದೇ ಸೂಚನೆ ನೀಡದೇ ಮತ್ತು ತನ್ನ ವಾದವನ್ನು ದಾಖಲಿಸಲು ಯಾವುದೇ ಅವಕಾಶವನ್ನು ನೀಡದೇ ಅರ್ಜಿಯನ್ನು ಪುರಸ್ಕರಿಸಿದೆ ಎಂದು ಹೇಳಿದೆ.

    ಹೆಸರಿಸಲಾದ ಅಧಿಕಾರಿಗಳು ಆ ಸಮಯದಲ್ಲಿ ತಮ್ಮ ಹುದ್ದೆಗಳನ್ನು ಹೊಂದಿರಲಿಲ್ಲ. ಅರ್ಜಿದಾರರು ಕ್ಷುಲ್ಲಕ ವಿಚಾರದ ಬಗ್ಗೆ ಅರ್ಜಿ ಸಲ್ಲಿಸುವ ಹವ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಇವರು ಹಿಂದೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಮಾತ್ರವಲ್ಲದೇ ದಂಡವನ್ನೂ ವಿಧಿಸಿದೆ ಎಂದು ತಿಳಿಸಿದೆ.