Tag: ಮಾಧುಸ್ವಾಮಿ

  • ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

    ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ: ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

    ಬೆಂಗಳೂರು: ನಾನೇ ಮೇಧಾವಿ, ನಾನೇ ಬುದ್ಧಿವಂತ ಅಂದುಕೊಂಡಿದ್ದಾರೆ. ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ. ಸಚಿವರು ಇನ್ನೂ ಮುಂದಾದರೂ ಚೆನ್ನಾಗಿ ಕೆಲಸ ಮಾಡಿ. ಏನೇನೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬೇಡಿ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಸದನದ ಒಳಗೆ ವಿಪಕ್ಷಗಳನ್ನ ಸಮರ್ಥವಾಗಿ ಹಣಿಯುತ್ತಾರೆ. ಆದರೆ ಹೊರಗಡೆ ಯಾಕೆ ಈ ರೀತಿ ಹೇಳಿಕೆ ಕೊಡುತ್ತಾರೋ ಗೊತ್ತಿಲ್ಲ. ಯಾವ ಯಾವ ಕಾರಣಕ್ಕೋ ಸಚಿವರಾಗಿದ್ದಾರೆ. ಈ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡ್ತೀವಿ. ಹಾದಿ ಬೀದಿಯಲ್ಲಿ ಚರ್ಚೆ ಮಾಡಲ್ಲ ಎಂದು ಗರಂ ಆದರು. ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈ ಈಗ ಟಾಪ್‌ 5 ನಾಯಕ

    ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಕೇವಲ ಘೋಷಣೆ ಮಾಡಿಲ್ಲ, ಅನುಷ್ಠಾನಕ್ಕೆ ತಂದಿದ್ದೇವೆ. ಸಿಎಂ ಬೊಮ್ಮಾಯಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ನೋ ಅಡ್ಜಸ್ಟ್‍ಮೆಂಟ್ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅಂತಾ ನಿಮ್ಮ ತಂದೆ-ತಾಯಿ ದೇವರ ಹೆಸರು ಇಟ್ಟಿದ್ದಾರೆ. ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು. ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ ಎಂದರು.

    ಈ ದೇಶದ ಒಂದೊಂದು ಇಂಚು ಭೂಮಿ ನಮಗೆ ಸೇರಿದ್ದು. ವಕ್ಫ್ ಬೋರ್ಡ್ ಸುಪ್ರೀಂ ಆಗಿದ್ಯಾ? ಸರ್ಕಾರಕ್ಕಿಂತ ಇವರು ಕೆಲಸ ಮಾಡಿದ್ದಾರಾ? ಸಾವರ್ಕರ್ ಫೋಟೋ ಎಲ್ಲಿ ಬೇಕಾದರೂ ಇಡಬಹುದು. ಇವರು ಯಾರು ಹೇಳೋದಕ್ಕೆ?, ಯಾರನ್ನು ಕೇಳಿ ಟಿಪ್ಪು ಜಯಂತಿ ಘೋಷಣೆ ಮಾಡಿದ್ರಿ ಎಂದು ಪ್ರಶ್ನೆಗಳ ಸುರಿಮಳೆಗೈದರು. ಇದನ್ನೂ ಓದಿ: ಫಸ್ಟ್‌ ಟೈಂ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ ವಿಶ್ವದ ಅತಿ ದೊಡ್ಡ ಸೂಪರ್‌ಜಂಬೋ ವಿಮಾನ

    ತಾಕತ್ ಇದ್ರೆ ನಾನೊಬ್ಬ ಹಿಂದೂ ಅಂತ ಹೇಳಿ ಸಿದ್ದರಾಮಯ್ಯಗೆ ರೇಣುಕಾಚಾರ್ಯ ಸವಾಲೆಸೆದರು. ನಾಚಿಕೆ ಆಗಬೇಕು, ವೋಟ್ ಬ್ಯಾಂಕ್ ರಾಜಕಾರಣ ಬಿಡಿ. ಹಿಂದೂ, ಮುಸ್ಲಿಂ ಭಾರತ ಮಾತೆಯ ಮಕ್ಕಳು. ಯಡಿಯೂರಪ್ಪ, ಬೊಮ್ಮಾಯಿ ಸಾಧನೆ ಜನರಿಗೆ ತಲುಪಬಾರದು. ಅಂತಾ ಈ ರೀತಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಪಪ್ರಚಾರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನೀವು ರಾಮನ ಜಪ ಮಾಡಿ. ಪ್ರವೀಣ್, ಹರ್ಷ ಸೇರಿ ಹಲವರ ಹತ್ಯೆಗೆ ನೀವು ಕಾರಣ. ರಾಜ್ಯದ ಜನರ ಕ್ಷಮೆ ಕೇಳಿ ಎಂದು ಇದೇ ವೇಳೆ ಎಂಪಿಆರ್ ಆಗ್ರಹಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ದಾವಣಗೆರೆ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಇದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಒತ್ತಾಯಿಸಿದರು.

    ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೋಸ್ಕರ ಕೊಲೆ ಮಾಡುತ್ತಿರುವುದು ತಪ್ಪು, ಅದು ದುರ್ದೈವ. ಮಂಗಳೂರಿನಲ್ಲಿ ನಡೆದಂತ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಅದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು. ಇದನ್ನು ಉಲ್ಬಣ ಆಗಲು ಬಿಡಬಾರದು ಎಂದರು.

    ಮಂಗಳೂರಿನಲ್ಲಿ ನಡೆದ ಘಟನೆ ಸರ್ಕಾರ ಸಹಿಸುವುದಿಲ್ಲ. ಪರಿಸ್ಥಿತಿ ತಿಳಿ ಮಾಡಲಿಲ್ಲ ಅಂದರೆ ತಪಾತ್ರೆಯ ಕಟ್ಟಿಟ್ಟ ಬುತ್ತಿ, ಹತ್ಯೆ ಮಾಡುವ ಹಂತಕ್ಕೆ ಯಾರು ಹೋಗಬಾರದು. ಆದರೆ ಪ್ರವೀಣ್ ಹತ್ಯೆ ಮಾಡಿದವರು, ಅವರ ಅಂಗಡಿಯಲ್ಲೇ ಕೆಲಸ ಮಾಡುವವರೆಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪಿಎಫ್‍ಐ ಸಂಘಟನೆ ನಿಷೇಧ: ಮಂಗಳೂರಿನಲ್ಲಿ ನಡೆದ ಹತ್ಯೆ ಬಗ್ಗೆ ಪಿಎಫ್‍ಐ ಕೈವಾಡ ಇದೆ ಎನ್ನುವುದರ ಬಗ್ಗೆ ಆಧಾರ ಇಲ್ಲದೆ ಮಾತನಾಡಲು ಬರುವುದಿಲ್ಲ. ಅವರು ಈ ಹತ್ಯೆಗಳ ಹಿಂದಿದ್ದರೆ ಅನುಭವಿಸುತ್ತಾರೆ. ಪಿಎಫ್‍ಐ ಅವರ ಬಗ್ಗೆ ಬಿಜೆಪಿ, ಕಾಂಗ್ರೆಸ್‍ನವರ ಬಳಿ ದಾಕ್ಷಿಣ್ಯ ಇಲ್ಲ. ಪಿಎಫ್‍ಐ ವಿರುದ್ಧ ತನಿಖೆ ಮಾಡಲು ಆಧಾರ ಸಾಕ್ಷಿಗಳು ಬೇಕಾಗುತ್ತದೆ ಎಂದು ಹೇಳಿದರು.

    ಏಕಾಏಕಿ ಮತ್ತೊಬ್ಬರ ಕಡೆ ಬೊಟ್ಟು ಮಾಡಿ ತೋರಿಸಲು ಬರುವುದಿಲ್ಲ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಒಂದು ಹಂತಕ್ಕೆ ತಂದೇ ತರುತ್ತೇವೆ. ಯಾರು ಹುಡುಗಾಟ ಆಡಲು ಬರುವುದಿಲ್ಲ, ಮಂಗಳೂರಲ್ಲಿ ನಡೆದಿರುವ ಹತ್ಯೆಗಳು ನಿರೀಕ್ಷೆ ಮಾಡಿದ್ದಲ್ಲ. ಸರ್ಕಾರದ ವಿರುದ್ಧ ಕಾರ್ಯಕರ್ತರು ಮುನಿಸುಕೊಳ್ಳಬಾರದು. ಇದಕ್ಕೆ ಕಾರಣೀಕರ್ತರನ್ನು ಹುಡುಕಿ ತಾಕೀತು ಮಾಡಿ ಶಿಕ್ಷೆಗೊಳಪಡಿಸುತ್ತೇವೆ ಎಂದು ಮನವಿ ಮಾಡಿದರು.

    ಪ್ರವೀಣ್, ಫಾಝಿಲ್ ಹತ್ಯೆ ವಿಚಾರ: ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆಗೆ ಲಿಂಕ್ ಆಗಿರುವುದು ತಪ್ಪು. ಕೆಲವರು ಮಾತನಾಡುತ್ತಿರುವುದು ಕೂಡ ತಪ್ಪು. ವಿರೋಧ ಪಕ್ಷದವರು ಪ್ರವೀಣ್ ಹಾಗೂ ಫಾಝಿಲ್ ಕೊಲೆಗೆ ಲಿಂಕ್ ಮಾಡ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿರುವ ವಿಚಾರ ಎಂದರು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

    ಇನ್ನು ಫಾಝಿಲ್ ಹತ್ಯೆಯಾದಾಗ ಸಿಎಂ ಆಗಲಿ ಸಚಿವರಾಗಲಿ ಮನೆಯ ಹತ್ತಿರ ಹೋಗದೆ ಇರಲು ಕಾರಣ ಇದೆ. ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಅವರು ಫಾಝಿಲ್ ಕೊಲೆಯಾದಾಗ ಅವರು ಏರ್ ಕ್ರಾಪ್ಟ್‌ನಲ್ಲಿದ್ದರು. ಅಲ್ಲಿಂದ ಅವರು ಬೆಂಗಳೂರು ಕಡೆಗೆ ತಮ್ಮ ಪ್ರಯಾಣ ಬೆಳೆಸಿದ್ದರು. ಆದ್ದರಿಂದ ಅವರು ಫಾಝಿಲ್ ಮನೆಗೆ ಹೋಗಲು ಆಗಲಿಲ್ಲ ಎಂದು ಸಮರ್ಥಿಕೊಂಡರು.

    ಉತ್ತರ ಪ್ರದೇಶ ಮಾದರಿ ಅಳವಡಿಸಲು ಚಿಂತನೆ ಇಲ್ಲ: ರಾಜ್ಯದಲ್ಲಿ ಯುಪಿ ಮಾದರಿ ತರಲು ಮಾಧ್ಯಮದವರು ಒತ್ತಾಯಿಸಿದ್ದಕ್ಕಾಗಿ ಸಿಎಂ ಬೊಮ್ಮಾಯಿರವರು ಯುಪಿನೇ ಬೇರೆ, ಕರ್ನಾಟಕ ರಾಜ್ಯನೇ ಬೇರೆ. ಅಲ್ಲಿನ ಸಮಸ್ಯೆಗೂ ಇಲ್ಲಿ ಸಮಸ್ಯೆಗೂ ವ್ಯತ್ಯಾಸ ಇದೆ ಎಂದು ಈಗಾಗಲೇ ತಿಳಿಸಿದ್ದಾರೆ. ಆದರೆ ಮಾಧ್ಯಮದವರು ಕೆಲ ದಿನಗಳ ಹಿಂದೆ ಒತ್ತಿ ಒತ್ತಿ ಕೇಳಿದಕ್ಕಾಗಿ ಸಿಎಂ ಬೊಮ್ಮಾಯಿರವರು ಕರ್ನಾಟಕದಲ್ಲೂ ಯುಪಿ ಮಾದರಿ ಆಗಬಹುದು ಎಂದಿದ್ದರು, ಆದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ

    ಯಡಿಯೂರಪ್ಪನವರೇ ನಮ್ಮ ಲೀಡರ್: ಯಡಿಯೂರಪ್ಪನವರೇ ನಮ್ಮ ಲೀಡರ್. ಅದರಲ್ಲಿ ಎರಡು ಮಾತಿಲ್ಲ, ಅವರನ್ನು ಮೂಲೆ ಗುಂಪು ಮಾಡಬೇಕೆಂಬುದು ಇಡೀ ಬಿಜೆಪಿಯಲ್ಲಿ ಯಾರೊಬ್ಬರ ತಲೆಯಲ್ಲಿಲ್ಲ, ಒಂದು ಪಕ್ಷ ಅಂದರೆ ಕಾರ್ಯಕರ್ತರು ಸಂಘಟನೆ ಮಾಡಿಕೊಂಡು ಪ್ರವಾಸ ಮಾಡಬೇಕಾಗುತ್ತದೆ. ಯಡಿಯೂರಪ್ಪನವರು ಒಬ್ಬರೇ ಮಾಡಲು ಆಗುತ್ತಾ ಆಗಲ್ಲ, ಇನ್ನು ಬೇರೆ ಬೇರೆ ಘಟನೆ ಜರುಗಿದ್ದರಿಂದ ವಿಜಯೋತ್ಸವವನ್ನು ರದ್ದು ಮಾಡಿದ್ದೇವೆ. ಆದರೆ ಯಡಿಯೂರಪ್ಪನವರನ್ನು ಸಂಘಟನೆ ಮಾಡುವ ವಿಚಾರದಲ್ಲಿ ಯಾರು ತಡಿಯಲ್ಲ, ಯಾರು ತಡಿಯಲು ಆಗುವುದಿಲ್ಲ ಎಂದು ತಿಳಿಸಿದರು.

    ರನ್ನಿಂಗ್ ರೇಸ್‍ನಲ್ಲಿ ಗೆಲಲ್ಲುತ್ತೇವೆ ಎಂದು ಓಡ್ತಾರೆ, ಓಡ್ಲಿ ಬಿಡಿ ಜನ ಅಲ್ವಾ ತೀರ್ಮಾನ ಮಾಡೋದು ಎಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡಿದ್ರೇ ರಾಜ್ಯದಲ್ಲಿ ಗೆದ್ದು ಬಿಡ್ತಾರ ಎಂದು ಪ್ರಶ್ನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

    ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

    ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 48 ವರ್ಷಗಳ ಹಿಂದೆ ಹೀಗಿತ್ತು ನನ್ನ ರೆಸ್ಯೂಮ್ – ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬಿದ ಬಿಲ್‌ಗೇಟ್ಸ್

    ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಳವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

    Live Tv

  • ಒಬ್ಬ ಹೆಂಡ್ತಿಗೆ ಒಬ್ಬನೇ ತಾಳಿ ಕಟ್ಟಬಹುದು, ಇಲ್ಲಿ ಒಬ್ಬ ಹೆಂಡ್ತಿಗೆ ಇಬ್ಬಿಬ್ರು ತಾಳಿ ಕಟ್ಟಿದ್ದಾರೆ: ಸಿ.ಎಂ.ಇಬ್ರಾಹಿಂ

    ಒಬ್ಬ ಹೆಂಡ್ತಿಗೆ ಒಬ್ಬನೇ ತಾಳಿ ಕಟ್ಟಬಹುದು, ಇಲ್ಲಿ ಒಬ್ಬ ಹೆಂಡ್ತಿಗೆ ಇಬ್ಬಿಬ್ರು ತಾಳಿ ಕಟ್ಟಿದ್ದಾರೆ: ಸಿ.ಎಂ.ಇಬ್ರಾಹಿಂ

    ತುಮಕೂರು: ಮಾಧುಸ್ವಾಮಿ ಮಾತು ಕೇಳಿ ಎಸ್.ಆರ್. ಶ್ರೀನಿವಾಸ್ ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಆರೋಪಿಸಿದ್ದಾರೆ.

    ಗುಬ್ಬಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸಭೆ ಚುನಾವಣೆಯಲ್ಲಿ ಎಸ್.ಆರ್ ಶ್ರೀನಿವಾಸ್ ಬಿಜೆಪಿ ಮತ್ತು ಕಾಂಗ್ರೆಸ್‍ಗೆ ಮತ ಹಾಕಿದ್ದಾರೆ. ಒಬ್ಬ ಹೆಂಡತಿಗೆ ಒಬ್ಬನೇ ತಾಳಿ ಕಟ್ಟಬಹುದು. ಆದರೆ ಇಲ್ಲಿ ಒಬ್ಬ ಹೆಂಡತಿಗೆ ಇಬ್ಬಿಬ್ಬರು ತಾಳಿ ಕಟ್ಟಿದ್ದಾರೆ. ಇದರಲ್ಲಿ ಮಾಧುಸ್ವಾಮಿ ಕೈವಾಡ ಇದೆ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ಕಾಂಗ್ರೆಸ್‍ನವರೇ ಬಿಜೆಪಿಗೆ ಸಹಕಾರ ನೀಡಿದ್ದಾರೆ. ಎರಡನೇ ಮತ ಕಾಂಗ್ರೆಸ್‍ಗೆ ಹಾಕಿಸಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: MVA ಸರ್ಕಾರವನ್ನು ಅಲುಗಾಡಿಸುತ್ತಿರುವ ಏಕನಾಥ್ ಶಿಂಧೆ ಯಾರು?

    ಕಾಂಗ್ರೆಸ್‍ನ ಈ ನೀತಿಯನ್ನು ನಾನು ಖಂಡಿಸಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದೇನೆ. ನಿಮ್ಮ ನಾಯಕರು ಮೊದಲ ವೋಟು ಮೋದಿಗೆ ಹಾಕಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದೇನೆ. ಆದರೆ ಸೋನಿಯಾಗಾಂಧಿಯಿಂದ ರಿಪ್ಲೈ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ? – ಶೀಘ್ರವೇ ಬಿಜೆಪಿ ಅಧಿಕಾರಕ್ಕೆ

  • ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

    ರಾಜ್ಯದಲ್ಲಿ ನಡೀತಿರೋ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ: ಮಾಧುಸ್ವಾಮಿ ಅಸಮಾಧಾನ

    ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆಡಳಿತ ಪಕ್ಷಕ್ಕೆ ಗೌರವ ತರುವುದಿಲ್ಲ ಎಂದು ಹೇಳುವ ಮೂಲಕ ಸರ್ಕಾರದ ವಿರುದ್ಧ ಸಚಿವ ಮಾಧುಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ.

    ಬೆಳಗಾವಿಯ ನಿಪ್ಪಾಣಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಾರಿಗಾದ್ರೂ ತೊಂದರೆ ಕೊಡುವುದು, ಶಾಂತಿ ಕದಡುವುದು ಯಾರು ಮಾಡಿದರೂ ಗೌರವ ಬರುವುದಿಲ್ಲ. ಅದರಲ್ಲೂ ಆಡಳಿತ ಪಕ್ಷಕ್ಕಂತೂ ಗೌರವ ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

    ಆಡಳಿತ ಮಾಡಬೇಕಾದರೆ ಎಲ್ಲರು ಈ ದೇಶದ ಪ್ರಜೆಗಳೇ ಎಂದು ಭಾವಿಸಬೇಕು. ಆಕಸ್ಮಿಕವಾಗಿ ನಡೆಯುವದು ಬೇರೆ ಹುಡುಕಿಕೊಂಡು ಹೋಗುವುದನ್ನ ಯಾರೂ ಒಪ್ಪಿಕೊಳ್ಳಲು ಆಗುವುದಿಲ್ಲ. ಚಂದ್ರು ಹತ್ಯೆ ಪ್ರಕರಣದ ಮಾಹಿತಿಯನ್ನ ಗೃಹ ಮಂತ್ರಿಗಳಿಗೆ ಸರಿಯಾಗಿ ನೀಡಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ತಕ್ಷಣ ರಿಯಾಕ್ಟ್ ಮಾಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಸಮಾಧಾನವಾಗಿ ವರ್ತಿಸಬೇಕು ಎಲ್ಲರೂ ಸಮಾನತೆಯಿಂದ ಬದುಕಬೇಕು ಎಂದರು.

    ಶಾಂತಿ ಇರುವ ಕಡೆಗೆ ಅಭಿವೃದ್ಧಿಗೆ ಬೆಲೆ ಜಾಸ್ತಿ. ಶಾಂತಿ ಕದಡಿದರೇ ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದ ಅವರು, ಸದ್ಯಕ್ಕೆ ಸಂಪುಟ ಪುನರಾರಚನೆ ಇಲ್ಲ ಎಲ್ಲವೂ ಊಹಾಪೋಹ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

  • ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

    ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

    ಬೆಂಗಳೂರು: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರಕ್ಕೆ ನಿರ್ಬಂಧ ವಿಚಾರ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿ ಮಾಡಿತ್ತು.

    ಕಾಂಗ್ರೆಸ್ ಮುಸ್ಲಿಂ ಶಾಸಕರು ಮತ್ತು ಬಿಜೆಪಿಯ ಕರಾವಳಿ ಭಾಗದ ಶಾಸಕರ ನಡುವೆ ಮಾತಿನ ಚಕಮಕಿ ನಡೆಯಿತು. ವ್ಯಾಪಾರ ನಿರ್ಬಂಧದ ಭಿತ್ತಿಪತ್ರ ಹಾಕಿದವರು ಹೇಡಿಗಳು, ಕ್ರೂರಿಗಳ ಎಂದ ಖಾದರ್ ಹೇಳಿಕೆ ಗದ್ದಲವನ್ನು ಎಬ್ಬಿಸಿತು. ಶೂನ್ಯ ವೇಳೆಯಲ್ಲಿ ಶಾಸಕ ಯು.ಟಿ.ಖಾದರ್ ವಿಷಯ ಪ್ರಸ್ತಾಪಿಸಿ ರಾಜ್ಯದ ಕೆಲ ಕಡೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ಧರ್ಮದವರು ವ್ಯಾಪಾರ ಮಾಡಬಾರದು ಎಂದು ಬ್ಯಾನರ್ ಹಾಕ್ತಾರೆ, ಈ ರೀತಿ ಬ್ಯಾನರ್ ಹಾಕಿ ನಿಬರ್ಂಧ ಮಾಡಿರೋರು ಹೇಡಿಗಳು, ಕ್ರೂರಿಗಳು ಎಂದು ಖಾದರ್ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ಮೌನವಾಗಿದೆ, ಒಳಗೊಳಗೆ ಖುಷಿ ಪಡುತ್ತಿದೆಯಾ?: ಯು.ಟಿ ಖಾದರ್

    ಖಾದರ್ ಹೇಳಿಕೆಗೆ ಬಿಜೆಪಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು. ಹೇಡಿಗಳು ಎಂದು ಯಾರಿಗೆ ಹೇಳೋದು? ಎಂದು ಸಿಟ್ಟಾದ ಉಡುಪಿ ಜಿಲ್ಲೆಯ ಶಾಸಕರು, ಮಂಗಳೂರು ಜಿಲ್ಲೆಯ ಶಾಸಕರು ಕಿಡಿಕಾರಿದ್ರು. ಆಗ ನಾನು ಯಾವುದೇ ಧರ್ಮದವರನ್ನು ಪ್ರಸ್ತಾಪ ಮಾಡಿಲ್ಲ ಎಂದು ಖಾದರ್ ಸಮರ್ಥನೆಗೆ ಇಳಿದ್ರು. ಆಗ ಮತ್ತೆ ಖಾದರ್ ಮೇಲೆ ಬಿಜೆಪಿ ಶಾಸಕರಾದ ಹರೀಶ್ ಪೂಂಜಾ, ರಘುಪತಿ ಭಟ್, ರೇಣುಕಾಚಾರ್ಯ, ಸತೀಶ್ ರೆಡ್ಡಿ ಮುಗಿಬಿದ್ದು ಆಕ್ರೋಶ ಹೊರಹಾಕಿದರು.

    ಬಿಜೆಪಿ ಶಾಸಕ ಕೆ.ಜಿ ಬೋಪಯ್ಯ ಆಕ್ಷೇಪ ವ್ಯಕ್ತಪಡಿಸಿ, ಹಿಜಬ್ ವಿಚಾರವಾಗಿ ಹೈಕೋರ್ಟ್ ಆದೇಶ ಬಂದರೂ ಬಂದ್ ಮಾಡ್ತಾರೆ ಹೇಡಿಗಳು ಎಂಬ ಶಬ್ಧ ಬಳಕೆ ಯಾರಿಗೆ ಮಾಡ್ತಾರೆ ಎಂದು ಕಿಡಿಕಾರಿದರು. ನಕಲಿ ಸರ್ಟಿಫಿಕೇಟ್ ಪಡೆದು ಇಲ್ಲಿ ಬಂದು ಕುಳಿತವರು ನೀವು ಎಂದು ರೇಣುಕಾಚಾರ್ಯಗೆ ಖಾದರ್ ಟಾಂಗ್ ನೀಡಿದಾಗ ಏಯ್ ಕೂತ್ಕೂಳಲೋ ಎಂದು ಜಮೀರ್‌ಗೆ, ರೇಣುಕಾಚಾರ್ಯ ಗದರಿದ್ರು. ಆಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡ ಗೊಂದಲಕ್ಕೀಡಾಗಿ ಏನಾಗ್ತಿದೆ ಇಲ್ಲಿ, ಕಾನೂನು ಸಚಿವರು ಸಮಾಧಾನಪಡಿಸುವಂತೆ ಸ್ಪೀಕರ್ ಸೂಚಿಸಿದ್ರು. ಬಳಿಕ ಶಾಸಕರ ಸ್ಥಳಗಳಿಗೆ ಹೋಗಿ ಸಚಿವ ಮಾಧುಸ್ವಾಮಿ ಸಮಾಧಾನಪಡಿಸಿದರು. ಇದನ್ನೂ ಓದಿ: ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ವ್ಯಾಪಿಸಿದ ಧರ್ಮ ಸಂಘರ್ಷ

    ಬಳಿಕ ಮಾತನಾಡಿದ ಯು.ಟಿ.ಖಾದರ್, ಹಿಂದೂ ಸಹೋದರರನ್ನು ಗೌರವಿಸುತ್ತೇನೆ. ನಾವೆಲ್ಲ ಚೆನ್ನಾಗಿದ್ದೇವೆ, ಪೊಲೀಸ್ ಮಾಡುವ ಕೆಲಸವನ್ನು ಕೆಲ ಹಿಂದೂ ಸಹೋದರರು ಮಾಡಿದ್ದಾರೆ. ಸಮಾಜದಲ್ಲಿ ವೈಮನಸ್ಸು ಉಂಟು ಮಾಡುವ ಕೆಲಸ ಮಾಡಬಾರದು. ಮಂಗಳೂರು, ಉಡುಪಿ, ಶಿವಮೊಗ್ಗ, ಶಿರಸಿ, ನೆಲಮಂಗಲದಲ್ಲಿ ಭಿತ್ತಿಪತ್ರಗಳನ್ನು ಹಾಕಿರುವವರ ವಿರುದ್ಧ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.

    ಇದೇ ವೇಳೆ ಶಾಸಕ ರಿಜ್ವಾನ್ ಅರ್ಷಾದ್ ಪ್ರಸ್ತಾಪ ಮಾಡಿ, ಇವತ್ತು ಒಂದು ವರ್ಗದ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಎಂಬ ಬಿತ್ತಿಪತ್ರ ಹಾಕಿರೋದು ಸಮಾಜಕ್ಕೆ ಅಘಾತಕಾರಿ. ಯಾವ ಸಂಘಟನೆಗೂ ಸತ್ಯ ಗೊತ್ತಿಲ್ಲ ಅನ್ಸುತ್ತೆ, ಬಪ್ಪನಾಡು, ಮಾರಿಗುಡಿ ದೇವಾಲಯ ಸ್ಥಾಪನೆಗೆ ಮುಸ್ಲಿಂ ಸಮುದಾಯವರು ಕೂಡ ಕೈ ಜೋಡಿಸಿದ್ದಾರೆ. ಯಾರೂ ಇತಿಹಾಸವನ್ನು ಅಳಿಸಲು ಆಗಲ್ಲ. ಈ ಮಟ್ಟಕ್ಕೆ ಹೋಗುವುದು ಸರಿಯಲ್ಲ, ಬಹಿಷ್ಕಾರ ಹಾಕುವುದು ಸರಿ ಅಲ್ಲ ಎಂದರು. ಆಗ ತಕ್ಷಣವೇ ಎದ್ದ ಉಡುಪಿ ಶಾಸಕ ರಘುಪತಿ ಭಟ್ ಹಿಜಬ್ ವಿಚಾರದಲ್ಲಿ ಭಿತ್ತಿಪತ್ರ ಹಾಕಿದ್ರಲ್ಲಾ ಅದು ಸರಿನಾ? ಎಂದು ಕಿಡಿಕಾರಿದ್ರು. ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಫ್ರೀ ಟ್ರೇಡಿಂಗ್ ಇರುವಾಗ ಅಡ್ಡಿಪಡಿಸೋದು ಏಕೆ?. ಬೀದಿ ಬದಿಯಲ್ಲಿ ವ್ಯಾಪಾರ ಮಾಡಬೇಡ ಅಂದ್ರೆ ಹೇಗೆ?. ಈ ರೀತಿಯ ವ್ಯಾಪಾರ ನಿರ್ಬಂಧಕ್ಕೆ ಅವಕಾಶ ನೀಡಬಾರದು, ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬಪ್ಪನಾಡಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ – ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ

    ಸರ್ಕಾರದ ಪರವಾಗಿ ಉತ್ತರಿಸಿದ ಮಾಧುಸ್ವಾಮಿ, ಧಾರ್ಮಿಕ ಸೌಹಾರ್ದತೆ, ಶಾಂತಿಯನ್ನು ಯಾವುದೇ ಸಮುದಾಯದವರು ಭಂಗ ಮಾಡಿದ್ರೆ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಆದರೆ 2002ರ ಕಾಯ್ದೆಯಲ್ಲಿ ಧಾರ್ಮಿಕ ಸಂಸ್ಥೆಯ ಸಮೀಪದ ಜಮೀನು, ಕಟ್ಟಡವೂ ಸೇರಿದಂತೆ ಯಾವುದೇ ಆಸ್ತಿಯಲ್ಲಿ ಹಿಂದೂಗಳಲ್ಲದವರಿಗೆ ಗುತ್ತಿಗೆ ಕೊಡಬಾರದು ಎಂಬ ನಿಯಮ ಮಾಡಿದ್ದಾರೆ. ಅದೇ ನಿಯಮವನ್ನು ಇಟ್ಟುಕೊಂಡು ಜಾತ್ರೆಗಳಲ್ಲಿ ನಿಯಮಗಳನ್ನು ಮಾಡಿದ್ದಾರೆ, ಅದನ್ನು ಇಟ್ಟುಕೊಂಡು ಬ್ಯಾನರ್ ಹಾಕಿದ್ದಾರೆ ಎಂದು ನಮ್ಮ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಮಾಡಿರೋದು, ಇದು ನಾವು ಮಾಡಿರೋದಲ್ಲ. ಧಾರ್ಮಿಕ ಸಂಸ್ಥೆಗಳಿಗೆ ಹೊಂದಿಕೊಂಡಂತಿರುವ ಆಸ್ತಿಗಳಲ್ಲಿ ಅವಕಾಶ ಇಲ್ಲ, ನಿಯಮ ಪಾಲಿಸಬೇಕು, ಅದನ್ನು ಅವರು ಒಪ್ಪಿಕೊಂಡು ನಡೆಯಬೇಕು. ಆದ್ರೆ ದೇವಸ್ಥಾನದ ಆಸ್ತಿ ಹೊರಗೆ ವ್ಯಾಪಾರಕ್ಕೆ ತಡೆ ಇದ್ದರೆ ಆದರ ಬಗ್ಗೆ ಗಮನಹರಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಗೋವು ಹಂತಕರು, ಹಲಾಲ್ ವ್ಯಾಪಾರಿಗಳಿಗೆ ಹಿಂದೂ ಶ್ರದ್ಧಾ ಕೇಂದ್ರದಲ್ಲಿ ಏನು ಕೆಲಸ: ಭಜರಂಗದಳ ಪ್ರಶ್ನೆ

    ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಕಾನೂನು ಒಂದು ಕಡೆ ಸರಿ. ಆದ್ರೆ ಇನ್ನೊಂದು ಕಡೆ ಜಾತ್ರೆ ವೇಳೆ ಸಮಿತಿ ಅವರು ಲೀಸ್ ಕೊಡ್ತಾರೆ. ಯಾರು ಲೀಸ್ ತಗೊಂಡಿದ್ದಾರೆ ಅವರು ಸಬ್ ಲೀಸ್ ಕೊಡ್ತಾರೆ, ಅದು ಅವರ ನಿರ್ಣಯ. ಅದರಿಂದ ಆದಾಯ ಕೂಡ ಅವರಿಗೆ ಬರುತ್ತೆ. ಆದ್ರೆ ಕಾನೂನು ಏನ್ ಇದೆ, ಅಲ್ಲಿ ಏನ್ ನಡೆದಿದೆ ಪರಿಶೀಲನೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

  • ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್

    ಬೆಂಗಳೂರು: ತಮ್ಮ ಕ್ಷೇತ್ರದ ಬೇಡಿಕೆ ವಿಚಾರವಾಗಿ ಮಾತನಾಡುತ್ತಿದ್ದ ಕುಣಿಗಲ್ ಶಾಸಕ ರಂಗನಾಥ್, ನಾನು ನಮ್ಮ ಕ್ಷೇತ್ರಕ್ಕೆ ನೀರಿನ ಯೋಜನೆ ಆರಂಭಿಸಬೇಕೆಂದಿದ್ದಾಗ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು, ಹಾಗಾಗಿ ಮಾಧುಸ್ವಾಮಿ ನನಗೆ ಭೂತದ ರೀತಿ ಕಾಣಿಸಿದರು ಎಂದು ವ್ಯಂಗ್ಯವಾಡಿದರು.

    ಸದನದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ನಾನು ಮೂರು ಟಿಎಂಸಿ ನೀರು ತೆಗೆದುಕೊಂಡಿದ್ದೆ. ಮತ್ತೆ ಮೂರು ಟಿಎಂಸಿ ನೀರಿನ ಯೋಜನೆ ಆರಂಭವಾಗಬೇಕಿತ್ತು ಆದ್ರೆ ಸಮ್ಮಿಶ್ರ ಸರ್ಕಾರ ಬಿದ್ದು ಹೋಯ್ತು. ಬಳಿಕ ಬಿಜೆಪಿ ಸರ್ಕಾರ ಬಂತು ಆಗ ಈ ಹಿಂದಿನ ಯೋಜನೆಗೆ ಸಚಿವ ಮಾಧುಸ್ವಾಮಿ ಅಡ್ಡಗಾಲು ಹಾಕಿದ್ರು ಹಾಗಾಗಿ ನನಗೆ ಮಾಧುಸ್ವಾಮಿ ಭೂತದ ತರಹ ಕಂಡ್ರು ಎಂದರು. ಇದನ್ನು ಕೇಳಿಸಿಕೊಂಡ ಮಾಧುಸ್ವಾಮಿ ನಕ್ಕು ಸಮ್ಮನಾದರು. ಇದನ್ನೂ ಓದಿ: ತವರಿಗೆ ನವೀನ್ ಮೃತದೇಹ- ಪ್ರಧಾನಿಗೆ ಕರೆಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ

    ಗೂರುರು ಡ್ಯಾಮ್‍ನಿಂದ ಕುಣಿಗಲ್ ನಮ್ಮ ತಾಲೂಕಿಗೆ 200 ಕಿಮೀ. ಇದೆ. 3,000 ಎಮ್‌ಸಿಎಫ್‌ಟಿ ನೀರಿಗಾಗಿ ನಾನು ಬೇಡಿಕೆ ಇಟ್ಟಿದ್ದೇನೆ. ಆದರೆ ಅದನ್ನು ಕೊಡೋಕೆ ಈವರೆಗೂ ಆಗಿಲ್ಲ. ಆದರೆ ಈ ಬಾರಿ 32 ಕೆರೆಗಳನ್ನು ತುಂಬಿಸುವ ಕೆಲಸ ಆಗಿದೆ. ಈ ಹಿಂದಿನ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರು ಕೊಟ್ಟ ಸಹಕಾರದಿಂದ ಡ್ಯಾಮ್‍ನ್ನು ಪುನರ್‌ಶ್ಚೇತನ ಮಾಡಿದ್ದೇವು. ಈ ಹಿಂದಿನ ಸರ್ಕಾರದ 6ನೇ ಕ್ಯಾಬಿನೆಟ್ ಸಭೆಯಲ್ಲಿ ಈ ಯೋಜನೆಗೆ ಅನುಮತಿ ಸಿಕ್ಕಿತು. ಆ ಬಳಿಕ ದುರದೃಷ್ಟ ಎಂಬಂತೆ ಸರ್ಕಾರ ಬದಲಾವಣೆಯಾಯಿತು. ನಂತರ ಬಂದ ಸರ್ಕಾರದಲ್ಲಿ ಮಾಧುಸ್ವಾಮಿ ಈ ಯೋಜನೆ ಅಡ್ಡಗಾಲು ಹಾಕಿದ್ರು. ನಾನು ನೀರಿಗಾಗಿ ಹೋರಾಟ ಮಾಡುತ್ತ ಬರುತ್ತಿದ್ದೇನೆ ನನಗೆ ಈ ಯೋಜನೆಯನ್ನು ಪಾಸ್ ಮಾಡಿಕೋಡಿ. ಇದರಿಂದ ಬರುವ ಕ್ರೆಡಿಟ್ ಬಿಜೆಪಿ ಸರ್ಕಾರಕ್ಕೆ ಇರಲಿ. ಇದರಿಂದ 2 ಲಕ್ಷ ರೈತರಿಗೆ ಸಹಾಯ ಮಾಡಿದಂತಾಗುತ್ತದೆ ಎಂದರು.

  • ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡೋದು ಬಿಡೋದು ಕಾಂಗ್ರೆಸ್ ಇಷ್ಟ: ಮಾಧುಸ್ವಾಮಿ

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡೋದು ಬಿಡೋದು ಕಾಂಗ್ರೆಸ್ ಇಷ್ಟ: ಮಾಧುಸ್ವಾಮಿ

    ಮೈಸೂರು: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡೋದು ಬಿಡೋದು ಕಾಂಗ್ರೆಸ್ ಇಷ್ಟ. ಯಾರು ಯಾರನ್ನು ಚಿತ್ರ ನೋಡಿ ಎಂದು ಬಲವಂತ ಮಾಡಲು ಆಗುವುದಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಕಾಶ್ಮೀರ ಫೈಲ್ಸ್ ಸಿನಿಮಾ ನಾನು ಸಹ ನೋಡಿದ್ದೇನೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡುವುದು ನಮ್ಮ ಇಷ್ಟ. ನೋಡದೇ ಇರುವುದು ಕಾಂಗ್ರೆಸ್ ಇಷ್ಟ. ಯಾರು ಯಾರನ್ನು ಚಿತ್ರ ನೋಡಿ ಎಂದು ಬಲವಂತ ಮಾಡಲು ಆಗುವುದಿಲ್ಲ. ಇತಿಹಾಸದಲ್ಲಿ ಏನೂ ನಡೆದಿದೆ ಅಂತ ಜನರಿಗೆ ಹೇಳಬೇಕು. ಈ ಕೆಲಸವನ್ನು ಈ ಚಿತ್ರ ಮಾಡಿದೆ. ಅದರಲ್ಲಿ ತಪ್ಪೇನಿದೆ. ಒಂದು ಸಮುದಾಯದ ವಿರುದ್ಧ ಸಿನಿಮಾ ಇದು ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಹಾಗಾದರೆ ನಡೆದ ಘಟನಾವಳಿಗಳನ್ನು ಜನರಿಗೆ ತಿಳಿಸುವುದೇ ಬೇಡವಾ? ಎಂದು ಪ್ರಶ್ನಿಸಿದ್ದಾರೆ.

    ಹಿಜಬ್‍ಗೆ ಪಟ್ಟು ಹಿಡಿದು ಪರೀಕ್ಷೆಗೆ ಗೈರು ಹಾಜರಾದರೆ ಅವರಿಗೆ ಮರು ಪರೀಕ್ಷೆ ಇಲ್ಲ. ಈ ವಿಚಾರದಲ್ಲಿ ಸರ್ಕಾರದ ನಿಲುವಿನಲ್ಲಿ ಯಾವುದೇ ಹಂತದಲ್ಲೂ ಬದಲಾವಣೆ ಇಲ್ಲ. ಹೈಕೋರ್ಟ್ ಆದೇಶ ಚಾಚು ತಪ್ಪದೇ ಪಾಲಿಸುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯದಲ್ಲಿ ವಿಫಲರಾಗಿ ನ್ಯಾಯಾಲಯದಿಂದ ಛೀಮಾರಿ ಹಾಕಿಸಿ ಕೊಳ್ಳಲು ನಾವು ಸಿದ್ಧರಿಲ್ಲ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ

    ಸದನ ಈ ವಾರ ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವುದಿಲ್ಲ ಎಂದರು. ಇದೇ ವೇಳೆ ಪಠ್ಯ ಕ್ರಮದಲ್ಲಿ ಭಗವದ್ಗೀತೆ ಸೇರಿಸು ವಿಚಾರವಾಗಿ ಮಾತನಾಡಿದ ಅವರು, ಇಂತಹ ಯಾವ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ. ಪ್ರಸ್ತಾಪವೇ ಇಲ್ಲ ಎಂದ ಮೇಲೆ ಚರ್ಚೆ ಯಾಕೆ ಬೇಕು ಹೇಳಿ? ಈ ಬಗ್ಗೆ ಶಿಕ್ಷಣ ಸಚಿವರೆ ಸ್ಪಷ್ಟಪಡಿಸಿದ್ದಾರೆ. ಉಳಿದ ವಿಚಾರ ನನಗೆ ಗೊತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಭಗವದ್ಗೀತೆಯನ್ನು ಪಠ್ಯಪುಸ್ತಕದಲ್ಲಿ ಸೇರಿಸಲು ಸಿಎಂಗೆ ಒತ್ತಾಯಿಸುವೆ: ಬಿಎಸ್‍ವೈ

  • ಇಡೀ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು ಅಂತ ಹೊರಟ ನಮ್ಮ ಪಕ್ಷ ಇವತ್ತು ಬುದ್ಧಿ ಹೇಳಿಸಿಕೊಳ್ಳಬೇಕಾಗಿದೆ: ಮಾಧುಸ್ವಾಮಿ

    ಇಡೀ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು ಅಂತ ಹೊರಟ ನಮ್ಮ ಪಕ್ಷ ಇವತ್ತು ಬುದ್ಧಿ ಹೇಳಿಸಿಕೊಳ್ಳಬೇಕಾಗಿದೆ: ಮಾಧುಸ್ವಾಮಿ

    ಬೆಂಗಳೂರು: ನಮ್ಮ ದುರಂತ ಅಂದ್ರೆ, ಇಡೀ ಭಾರತ ದೇಶದಲ್ಲಿ ರಾಷ್ಟ್ರ ಧ್ವಜ ಹಾರಿಸಬೇಕು ಅಂತ ಹೊರಟ ನಮ್ಮ ಪಕ್ಷ ಇವತ್ತು ಬುದ್ಧಿ ಹೇಳಿಸಿಕೊಳ್ಳಬೇಕಾದ ಪರಿಸ್ಥಿತಿಗೆ ಬಂದಿದೆ ಎಂದು ಅಧಿವೇಶನದಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

    ಪರಿಷತ್‍ನಲ್ಲಿ ಈಶ್ವರಪ್ಪ ರಾಷ್ಟ್ರಧ್ವಜ ವಿವಾದಾತ್ಮಕ ಹೇಳಿಕೆ ಚರ್ಚೆ ವೇಳೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಮತ್ತು ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ್ದು ನಾವು. ನಮಗೆ ಯಾವುದೇ ಹಿಡನ್ ಅಜೆಂಡಾ ಇಲ್ಲ. ನಾವು ದೇಶದ್ರೋಹದ ಹೇಳಿಕೆ ಕೊಟ್ಟಿಲ್ಲ. ನಿನ್ನೆ ಎಲ್ಲವನ್ನು ಹೇಳಲಾಗಿದೆ. ಈಶ್ವರಪ್ಪ ಹೇಳಿಕೆ ಸ್ಪಷ್ಟವಾಗಿ ಇದೆ. ಎಲ್ಲೂ ಕೂಡಾ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ. ರಾಷ್ಟ್ರಧ್ವಜವೇ ಅಂತಿಮ ಅಂತ ಹೇಳಿದ್ದಾರೆ. ಈ ಘಟನೆ ಇಲ್ಲಿಗೆ ಬಿಡಬೇಕು. ಈಶ್ವರಪ್ಪ ಎಲ್ಲೂ ಕೇಸರಿ ಧ್ವಜ ಹಾರಿಸ್ತೀನಿ ಅಂತ ಹೇಳಿಲ್ಲ. 200, 300 ವರ್ಷಕ್ಕೆ ಆಗಬಹುದು ಅಂತ ಹೇಳಿದ್ದಾರೆ. ಅಷ್ಟು ಹೊತ್ತಿಗೆ ನಾವು ಯಾರು ಇರುವುದಿಲ್ಲ ಈ ವಿಷಯ ಇಲ್ಲಿಗೆ ಬಿಡಬೇಕು ಎಂದು ಮನವಿಮಾಡಿಕೊಂಡರು. ಇದನ್ನೂ ಓದಿ: ತ್ರಿವರ್ಣ ಧ್ವಜದ ಬಗ್ಗೆ ಗೌರವ ಇಲ್ಲದ ಸಂಘ ಪರಿವಾರದವರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್

    ಇಂಟರಾಕ್ಷನ್ ಸಂದರ್ಭ ಮಾತನಾಡಿದ್ದು ಸ್ಟೇಟ್‍ಮೆಂಟ್ ಆಗುವುದಿಲ್ಲ. ನಮ್ಮ ಸರ್ಕಾರ ಮೋದಿ ನೇತೃತ್ವದಲ್ಲಿ ರಾಷ್ಟ್ರ ಧ್ವಜ, ರಾಷ್ಟ್ರ ಗೀತೆ ಬಗ್ಗೆ ಒಡಕು ಮಾತುಗಳನ್ನು ಆಡುವುದಿಲ್ಲ. ಈಶ್ವರಪ್ಪ ತಮ್ಮ ಹೇಳಿಕೆಯನ್ನು ತಿರುಚುವುದಕ್ಕೂ ಹೋಗಿಲ್ಲ. ಈ ಪ್ರಕರಣದ ಚರ್ಚೆಯನ್ನು ಕಾಂಗ್ರೆಸ್ ಇಲ್ಲಿಗೆ ನಿಲ್ಲಿಸಲಿ ಎಂದು ಕೇಳಿಕೊಂಡರು. ಇದನ್ನೂ ಓದಿ: ನಮಗೆ ಆಜಾದಿ ಬೇಕು ಅಂತಾ ಘೋಷಣೆ ಕೂಗ್ತಿಯಾ? ನಿನ್ನನ್ನು ಅಟ್ಟಾಡಿಸಿ ಹೊಡೀತಿವಿ: ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ

    ಇತ್ತ ಕಾಂಗ್ರೆಸ್ ಈಶ್ವರಪ್ಪ ರಾಜಿನಾಮೆ ಕೊಡಬೇಕೆಂದು ಪಟ್ಟುಹಿಡಿದು ಕೂತಿದೆ. ಈ ವೇಳೆ ಸಭಾಪತಿ ಹೊರಟ್ಟಿ ಮಾತನಾಡಿ, ಇದು ಇಲ್ಲಿಗೆ ಮುಕ್ತಾಯ ಮಾಡೋಣ. ಪ್ರಶ್ನೋತ್ತರ ಕಲಾಪ ಎಂದು ರೂಲಿಂಗ್ ಕೊಟ್ಟರು, ಈ ವೇಳೆ ಸಭಾಪತಿ ರೂಲಿಂಗ್‍ಗೆ ವಿರೋಧಿಸಿ ಕಾಂಗ್ರೆಸ್ ಧರಣಿ ಆರಂಭಿಸಿತು. ಸದನದ ಬಾವಿಗಿಳಿದು ಪ್ರತಿಭಟನೆಗೆ ಮುಂದಾಯಿತು. ಅಯ್ಯಯ್ಯೋ ಅನ್ಯಾಯ ಅಂತ ಕೂಗುತ್ತ ಈಶ್ವರಪ್ಪ ವಿರುದ್ಧ ಬಿತ್ತಿಪತ್ರ ಹಿಡಿದು ಪ್ರತಿಭಟನೆಗೆ ಮುಂದಾಯಿತು.

  • ಕೈ ತಪ್ಪಿದ್ದಕ್ಕೆ ಅಸಮಾಧಾನ ಇಲ್ಲ, ತುಮಕೂರು ಸಿಕ್ಕಿದ್ರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ

    ಕೈ ತಪ್ಪಿದ್ದಕ್ಕೆ ಅಸಮಾಧಾನ ಇಲ್ಲ, ತುಮಕೂರು ಸಿಕ್ಕಿದ್ರೆ ಖುಷಿಯಾಗ್ತಿತ್ತು: ಮಾಧುಸ್ವಾಮಿ

    ತುಮಕೂರು: ನನಗೆ ಉಸ್ತುವಾರಿ ತಪ್ಪಿದ್ದರಿಂದ ಯಾವುದೇ ರೀತಿಯ ಅಸಮಾಧಾನವಿಲ್ಲ. ಆದರೆ ತುಮಕೂರು ಕೊಟ್ಟಿದ್ರೆ ಸಂತೋಷವಾಗುತ್ತಿತ್ತು ಎಂದು ಜೆ.ಸಿ.ಪುರದ ನಿವಾಸದಲ್ಲಿ ಸಚಿವ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

    ಉಸ್ತುವಾರಿ ಹಂಚಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಉಸ್ತುವಾರಿ ತಪ್ಪಿದ್ದರಿಂದ ಯಾವುದೇ ರೀತಿಯ ಅಸಮಾಧಾನವಿಲ್ಲ. ಆದರೆ ತುಮಕೂರು ಜಿಲ್ಲೆ ಕೊಟ್ಟಿದ್ರೆ ಸಂತೋಷ ಆಗ್ತಿತ್ತು. ಇನ್ನು ಏಳೆಂಟು ತಿಂಗಳಲ್ಲಿ ಚುನಾವಣೆ ಪರ್ವ ಪ್ರಾರಂಭವಾಗುತ್ತೆ. ಬೇರೆ ಜಿಲ್ಲೆಗೆ ಹೋಗಿ ನಾವು ಏನೂ ಮಾಡಕಾಗಲ್ಲ. ತವರು ಜಿಲ್ಲೆ ಉಸ್ತುವಾರಿ ಕೊಡದೇ ಇರುವುದು ಒಂದು ಹೊಸ ಪ್ರಯೋಗ. ಇದನ್ನು ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ಮಾಡಿದ್ರು. ಆಗ ಅದು ವಿಫಲ ಆಯ್ತು ಎಂದು ವಿವರಿಸಿದರು. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

    ತುಮಕೂರು; ಪ್ರಸಾದ ಸೇವಿಸಿ ಓರ್ವ ಬಾಲಕ ಸಾವು, 20 ಮಂದಿ ಅಸ್ವಸ್ಥ | udayavani

    ಬೇರೆ ಜಿಲ್ಲೆಯಲ್ಲಿ ಸ್ಥಳೀಯ ಸಮಸ್ಯೆಗಳ ಬಗ್ಗೆ ಗೊತ್ತಾಗದೇ ಇರೋದ್ರಿಂದ, ಅಲ್ಲಿ ನಾವು ಬೇರೆಯವರ ಮೇಲೆ ಅವಲಂಬನೆಯಾಗ ಬೇಕಾಗುತ್ತೆ. ಇಲ್ಲ ಅಂದ್ರೆ ಅಧಿಕಾರಿಗಳು ಹೇಳಿದ ಹಾಗೆ ಕೇಳಬೇಕಾಗುತ್ತೆ. ಆರಂಭದಲ್ಲಿ ಹಾಸನ ಜಿಲ್ಲೆ ಉಸ್ತುವಾರಿ ಕೆಲಸ ಮಾಡಿದ್ದೆ, ಅದು ಹತ್ತಿರದ ಜಿಲ್ಲೆ ಅಂತಾ ಮಾಡಿದ್ದೆ. ತುಮಕೂರು ಜಿಲ್ಲೆ ಉಸ್ತುವಾರಿ ನನಗೆ ತೃಪ್ತಿ ತಂದಿದೆ. ಪಕ್ಷ ಭೇದ ಮರೆತು ಎಲ್ಲ ಶಾಸಕರ ಕ್ಷೇತ್ರದಲ್ಲೂ ಒಳ್ಳೆಯ ಕೆಲಸ ಮಾಡಿದ್ದೀನಿ ಎಂದು ಸಂತೋಷ ವ್ಯಕ್ತಪಡಿಸಿದರು.

    ಉಸ್ತುವಾರಿ ಸಚಿವರು ಹತ್ತಿರದಲ್ಲಿರಬೇಕು. ಜಿಲ್ಲಾಡಳಿತದ ಜೊತೆ ವಾರಕ್ಕೆ ಒಂದೆರಡು ಬಾರಿಯಾದರೂ ಸ್ಪಂದಿಸುವ ರೀತಿ ಇರಬೇಕು. ಯಾವುದೋ ಒಂದು ಕೆಡಿಪಿ ಸಭೆಗೆ ಮಾತ್ರ ಸೀಮಿತವಾಗುವುದು, ನ್ಯಾಷನಲ್ ಪ್ರೋಗ್ರಾಂನಲ್ಲಿ ಧ್ವಜಾರೋಹಣ ಮಾಡೋದು ಅಷ್ಟೇ ಆದ್ರೆ ಬೇರೆ ಜಿಲ್ಲೆಗೆ ಹೋಗಿ ಮಾಡಬಹುದು. ಆದ್ರೆ ಪ್ರತಿ ಜಿಲ್ಲೆಯಲ್ಲಿ ನಾಯಕತ್ವದ ಅಗತ್ಯವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಎಸಿಬಿ ಬಲೆಗೆ ಬಿದ್ದ ಸರ್ವೇ ಅಧಿಕಾರಿ!