Tag: ಮಾನಸಿಕ ಅಸ್ವಸ್ಥೆ

  • ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ

    ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣೆ

    ರಾಯಚೂರು: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿಸಿರುವ ಘಟನೆ ನಗರದ ಮಕ್ತಲಪೇಟೆ (Makthalpete) ಬಡಾವಣೆಯಲ್ಲಿ ನಡೆದಿದೆ.

    ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಾಯಚೂರು (Raichuru) ತಾಲೂಕಿನ ವಡವಟ್ಟಿ ಗ್ರಾಮದ ಮಹಿಳೆಯೆಂದು ಗುರುತಿಸಲಾಗಿದೆ.ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ

    ಮನೆಬಿಟ್ಟು ರಸ್ತೆಯಲ್ಲಿ ಓಡಾಡುತ್ತಿದ್ದಾಗ ಅಲ್ಲಿದ್ದ ಮಕ್ಕಳನ್ನು ಮುಟ್ಟಲು ಯತ್ನಿಸಿದ್ದಾಳೆ. ಈ ವೇಳೆ ಮಕ್ಕಳ ಕಳ್ಳಿಯಂದು ಭಾವಿಸಿ ಮಾನಸಿಕ ಅಸ್ವಸ್ಥೆಯೊಬ್ಬಳನ್ನು ಬಡಾವಣೆಯ ನಿವಾಸಿಗಳು ಮರಕ್ಕೆ ಕಟ್ಟಿ ಥಳಿಸಿದ್ದಾರೆ.

    ಬಡಾವಣೆಯಲ್ಲಿನ ಕಟ್ಟೆಯ ಮರಕ್ಕೆ ಮಹಿಳೆಯನ್ನು ಕಟ್ಟಿ ಹಾಕಿ ವಿಚಾರಣೆ ಮಾಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ 112 ಪೊಲೀಸ್ ವಾಹನ ಸಿಬ್ಬಂದಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ರಕ್ಷಿಸಿ ಠಾಣೆಗೆ ಕರೆದ್ಯೊಯ್ದಿದ್ದಾರೆ.

    ಮಹಿಳೆಯ ಕುಟುಂಬಸ್ಥರ ಮಾಹಿತಿ ಪಡೆದು ಸಂಬಂಧಪಟ್ಟವರಿಗೆ ಪೊಲೀಸರು ಒಪ್ಪಿಸಿದ್ದಾರೆ. ಮತ್ತೊಮ್ಮೆ ಮಹಿಳೆಯನ್ನು ಮನೆಯಿಂದ ಒಂಟಿಯಾಗಿ ಹೊರಬಿಡದಂತೆ ಕುಟುಂಬಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ

  • ಕರ್ನಾಟಕದಲ್ಲಿ ನಾಪತ್ತೆಯಾದ ವೃದ್ಧೆ ದೂರದ ಮನಾಲಿಯಲ್ಲಿ ಪತ್ತೆ

    ಕರ್ನಾಟಕದಲ್ಲಿ ನಾಪತ್ತೆಯಾದ ವೃದ್ಧೆ ದೂರದ ಮನಾಲಿಯಲ್ಲಿ ಪತ್ತೆ

    ದಾವಣಗೆರೆ: ಮಾನಸಿಕ ಅಸ್ವಸ್ಥತೆಯುಳ್ಳ ಕರ್ನಾಟಕದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದು, ಇದೀಗ ದೂರದ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಪತ್ತೆಯಾಗಿದ್ದಾರೆ.

    ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಮೂಲದ ಸುಶೀಲಮ್ಮ (50) ಮಾನಸಿಕ ಅಸ್ವಸ್ಥೆಯಾಗಿದ್ದು, ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಕರ್ನಾಟಕ ಬಿಟ್ಟು 2014ರಲ್ಲಿ ಹಿಮಾಚಲಪ್ರದೇಶಕ್ಕೆ ಹೋಗಿದ್ದರು.

    ಸುಶೀಲಮ್ಮನಿಗೆ ಮಕ್ಕಳಾಗದ ಕಾರಣ ಆಕೆಯ ಪತಿ ಮೂರನೇ ಮದುವೆ ಮಾಡಿಕೊಂಡು ಈಕೆಯನ್ನು ಹೊರ ಹಾಕಿದ್ದರು. ನಂತರ ಅಲ್ಲಿ ಇಲ್ಲಿ ಕೆಲಸ ಮಾಡಿಕೊಂಡು ರೈಲಿನ ಮೂಲಕ ಹಿಮಾಚಲ ಪ್ರದೇಶ ಸೇರಿ ಕೆಲಕಾಲ ಗಾರೆ ಕೆಲಸ ಸೇರಿದಂತೆ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಾನಸಿಕ ಅಸ್ವಸ್ಥೆಯಾಗಿದ್ದರು.ಸ್ಥಳೀಯ ಪೊಲೀಸರು ಹಿಮಾಚಲ ಪ್ರದೇಶದ ಮಾನಸಿಕ ಅಸ್ವಸ್ಥರ ಪುನರ್ ಚೇತರಿಕಾ ಕೇಂದ್ರಕ್ಕೆ ಸೇರಿಸಿದ್ದರು.

    ಹಿಮಾಚಲ ಪ್ರದೇಶದ ಪ್ರಯಾಸ್ ಎನ್ನುವ ಎನ್‍ಜಿಒ ಮಾನಸಿಕ ಅಸ್ವಸ್ಥರ ಪುನರ್ ಚೇತರಿಕಾ ಕೇಂದ್ರದಲ್ಲಿ 21 ದಿನಗಳ ಕಾಲ ಶಿಬಿರವನ್ನು ಹಮ್ಮಿಕೊಂಡಾಗ ಸುಶೀಲಮ್ಮನ ಬಗ್ಗೆ ಮಾಹಿತಿ ಗೊತ್ತಾಯಿತು. ಕೂಡಲೇ ಎನ್‍ಜಿಒದಲ್ಲಿರುವ ವೈದ್ಯರು ವೃದ್ಧೆಗೆ ಚಿಕಿತ್ಸೆ ನೀಡಿ ತವರೂರಿಗೆ ಕರೆದೊಯ್ಯಲು ಸ್ಥಳೀಯ ಆಡಳಿತದ ಜೊತೆ ಮಾತನಾಡಲು ಮುಂದಾಗಿದ್ದಾರೆ.

    ದಾವಣಗೆರೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬೆಂಗಳೂರಿನ ಮಾನಸಿಕ ಅಸ್ವಸ್ಥ ಕೇಂದ್ರದ ಸಿಬ್ಬಂದಿ ಜೊತೆ ಮಾತನಾಡಿದ್ದು ಕೂಡಲೇ ಸುಶೀಲಮ್ಮನವರನ್ನು ಕರೆತರುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ತವರೂರಿಗೆ ಬರಲು ಮಾನಸಿಕ ಅಸ್ವಸ್ಥೆ ಸುಶೀಲಮ್ಮ ರೆಡಿಯಾಗಿದ್ದು, ಸ್ಥಳೀಯ ಅಡಳಿತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕೂಡಲೇ ಅವರನ್ನು ತವರೂರಿಗೆ ಕರೆತಂದು ಸೂಕ್ತ ಚಿಕಿತ್ಸೆ ಕೊಡಿಸಬೇಕಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

    ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

    ಅಹಮದಾಬಾದ್: ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳ ಹೊಟ್ಟೆಯಿಂದ ಸುಮಾರು 1.5 ಕೆ.ಜಿಯಷ್ಟು ಕಬ್ಬಿಣದ ವಸ್ತುಗಳನ್ನು ಅಹಮದಾಬಾದ್‍ನ ನಾಗರಿಕ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.

    40 ವರ್ಷದ ಸಂಗೀತಾ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳು ಪತ್ತೆಯಾಗಿದೆ. ಮಹಿಳೆಯು ಮೂಲತಃ ಮಹಾರಾಷ್ಟ್ರದ ಶಿರಡಿ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥೆಯಾಗಿದ್ದಾಳೆ. ಕಳೆದ ಅಕ್ಟೋಬರ್ 31 ರಂದು ಸರ್ಕಾರಿ ಮಾನಸಿಕ ಆರೋಗ್ಯ ಕೇಂದ್ರದಿಂದ ಸಂಗೀತಾಳನ್ನು ನಾಗರಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ವರ್ಗಾಯಿಸಲಾಗಿತ್ತು.

    ಕೆಲವು ದಿನಗಳಿಂದ ಸಂಗೀತ ಹೊಟ್ಟೆ ನೋವಿನಿಂದ ನರಳುತ್ತಿದ್ದಳು. ಇದನ್ನು ಕಂಡ ವೈದ್ಯರು ಆಕೆಯನ್ನು ಸ್ಕ್ಯಾನಿಂಗ್ ಗೆ ಒಳಪಡಿಸಿದಾಗ, ಹೊಟ್ಟೆಯಲ್ಲಿ ಕಬ್ಬಿಣದ ಮೊಳೆಗಳು, ಪಿನ್‍ಗಳು, ಯು-ಪಿನ್‍ಗಳು, ಬಳೆ-ಸರ, ಮಂಗಳಸೂತ್ರ ಸೇರಿದಂತೆ ಹಲವು ಕಬ್ಬಿಣದ ವಸ್ತುಗಳು ಇರುವುದು ಪತ್ತೆಯಾಗಿತ್ತು. ಅದರಲ್ಲೂ ಒಂದು ಪಿನ್ ಸಂಗೀತಾಳ ಕರಳಿಗೆ ಚುಚ್ಚಿಕೊಂಡಿದ್ದ ಕಾರಣ ತಕ್ಷಣ ಆಕೆಗೆ ಶಸ್ತ್ರಚಿಕಿತ್ಸೆ ಮಾಡಿ, ಹೊಟ್ಟೆಯಲ್ಲಿದ್ದ ಸರಿಸುಮಾರು 1.5 ಕೆ.ಜಿ ತೂಕದ ಕಬ್ಬಿಣದ ವಸ್ತುಗಳನ್ನು ಹೊರ ತೆಗೆಯಲಾಯಿತು ಎಂದು ನಾಗರಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಹಿರಿಯ ವೈದ್ಯರಾದ ಡಾ. ನಿತಿನ್ ಪಾಮರ್ ತಿಳಿಸಿದರು.

    ಮಾನಸಿಕ ಅಸ್ವಸ್ಥ ರೋಗಿಗಳಲ್ಲಿ ಅಕ್ಯುಫಾಗಿಯಾ ಎಂಬ ರೋಗ ಲಕ್ಷಣವಿರುವವರು ಕಬ್ಬಿಣದ ವಸ್ತುಗಳು ಹಾಗೂ ಚೂಪಾದ ಯಾವುದೇ ವಸ್ತುಗಳನ್ನು ತಿಂದುಬಿಡುತ್ತಾರೆ ಎಂದು ವೈದ್ಯರು ಮಾಹಿತಿ ನೀಡಿದರು.

    ಸದ್ಯ ಸಂಗೀತಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಗುಣಮುಖಳಾದ ಮೇಲೆ ಅವಳ ಮನೆಯವರನ್ನು ಪತ್ತೆ ಮಾಡಿ ಆಕೆಯನ್ನು ಮನೆಗೆ ಕಳುಹಿಸುತ್ತೇವೆ ಎಂದು ವೈದ್ಯರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪೈಪ್‍ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯ ರಕ್ಷಣೆ!

    ಪೈಪ್‍ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯ ರಕ್ಷಣೆ!

    ಹಾವೇರಿ: ಪೈಪ್‍ನಲ್ಲಿ ಸಿಲುಕಿ ನರಳಾಡುತ್ತಿದ್ದ ಮಾನಸಿಕ ಅಸ್ವಸ್ಥೆಯನ್ನು ರಕ್ಷಣೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ಪಟ್ಟಣದಲ್ಲಿ ನಡೆದಿದೆ.

    ಗೌರಮ್ಮ ಮನೆಸಿನಕಾಯಿ(36) ಪೈಪ್‍ನಲ್ಲಿ ಸಿಲುಕಿದ್ದ ಮಾನಸಿಕ ಅಸ್ವಸ್ಥೆ. ಇವರು ಕಳೆದ ನಾಲ್ಕೈದು ದಿನಗಳ ಹಿಂದೆ ಮನೆಯಿಂದ ನಾಪತ್ತೆ ಆಗಿದ್ದರು ಎನ್ನಲಾಗಿದೆ. ಪೈಪ್ ನಲ್ಲಿ ನರಳಾಟ ಸದ್ದು ಕೇಳಿದ ಸ್ಥಳೀಯರು, ಅಗ್ನಿಶಾಮಕ ದಳಕ್ಕೆ ಸಿಬ್ಬಂದಿಗೆ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿದ್ದಾರೆ.

    ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಪೈಪ್ ಕೊರೆದು ಮಾನಸಿಕ ಅಸ್ವಸ್ಥೆಯನ್ನು ರಕ್ಷಿಸಿದ್ದಾರೆ. ನಂತರ ಅವರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಈ ಘಟನೆ ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

  • 28ರ ಮಾನಸಿಕ ಅಸ್ವಸ್ಥೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತೂರಿದ್ರು!

    28ರ ಮಾನಸಿಕ ಅಸ್ವಸ್ಥೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಗುಪ್ತಾಂಗಕ್ಕೆ ರಾಡ್ ತೂರಿದ್ರು!

    ಕೋಲ್ಕತ್ತಾ: ದೆಹಲಿಯ ನಿರ್ಭಯಾ ಪ್ರಕರಣವನ್ನೇ ಹೋಲುವ ಭಯಾನಕ ಘಟನೆಯೊಂದು ಇದೀಗ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಬುಡಕಟ್ಟು ಜನಾಂಗದ ಮಹಿಳೆಯೊಬ್ಬರ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ, ಬಳಿಕ ಆಕೆಯ ಗುಪ್ತಾಂಗಕ್ಕೆ ರಾಡೊಂದನ್ನು ತೂರಿದ್ದಾರೆ. ಸಂತ್ರಸ್ಥೆ ಮಾನಸಿಕ ಅಸ್ವಸ್ಥೆ ಎಂಬುದಾಗಿ ವರದಿಯಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ 45 ವರ್ಷದ ರಾಂಪ್ರಬೆಶ್ ಶರ್ಮಾ ಹಾಗೂ 50 ವರ್ಷದ ಅಂಧಾರು ಬರ್ಮನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೇ ಘಟನೆ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಡಿಜಿ ಅನೂಜ್ ಶರ್ಮಾ ತಿಳಿಸಿದ್ದಾರೆ.

    ಏನಿದು ಘಟನೆ?: ಫೆಬ್ರವರಿ 18 ರಂದು ಪಶ್ಚಿಮ ಬಂಗಾಳದ ದಿನಜಪೋರ್ ಜಿಲ್ಲೆಯ ಕುಶ್ಮುಂಡಿ ಪ್ರದೇಶದಲ್ಲಿ ಸಂತ್ರಸ್ತೆ ಉತ್ಸವವೊಂದಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ಸಂದರ್ಭದಲ್ಲಿ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಘಟನೆಯ ಬಳಿಕ ಚಿಂತಾನಜನಕ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ರಾಯ್ಗಂಜ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಮಲ್ಡಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಸದ್ಯ ಆಸ್ಪತ್ರೆಯಲ್ಲಿ ಮಹಿಳೆ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಬಳಿಕ ಮಹಿಳೆ ನೆಲದಲ್ಲಿ ಒದ್ದಾಡುತ್ತಿರುವುದನ್ನು ಕಂಡು ಸ್ಥಳೀಯರು ಕೂಡಲೇ ನಮಗೆ ಮಾಹಿತಿ ರವಾನಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಆಸ್ಪತ್ರೆಗೆ ದಾಖಲಾಗುವ ವೇಳೆ ಮಹಿಳೆಯ ಸ್ಥಿತಿ ಚಿಂತಾಜನಕವಾಗಿತ್ತು. ಇಲ್ಲಿಯವರೆಗೆ ಅವರನ್ನು ಸಿಸಿಯು(ಕ್ರಿಟಿಕಲ್ ಕೇರ್ ಯುನಿಟ್) ನಲ್ಲಿ ಇಡಲಾಗಿತ್ತು. ಸದ್ಯ ಅವರ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತೆಯ ಆರೋಗ್ಯ ವಿಚಾರಿಸಿದ್ದಾರೆ.

    ಮಹಿಳೆ ಅನಾಥೆ: ಸಂತ್ರಸ್ತೆ 10 ವರ್ಷಗಳ ಹಿಂದೆ ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಒಬ್ಬರೇ ಜೀವನ ನಡೆಸುತ್ತಿದ್ದರು. ಅಲ್ಲದೇ ಕಳೆದ ಕೆಲ ವರ್ಷಗಳ ಹಿಂದೆ ಮದುವೆ ಕೂಡ ಆಗಿದ್ದು, ಈಕೆ ಮಾನಸಿಕ ಅಸ್ವಸ್ಥೆ ಎಂದು ತಿಳಿದ ಬಳಿಕ ಪತಿ ವಿಚ್ಚೇಧನ ನೀಡಿದ್ದಾನೆ. ಹೀಗಾಗಿ ಮಹಿಳೆ ಒಬ್ಬರೇ ಜೀವಿಸುತ್ತಿದ್ದು, ಇವರಿಗೆ ನೆರೆಹೊರೆಯವರು ಆಹಾರ ಕೊಡುತ್ತಿದ್ದರು.

    ತನಿಖೆಗೆ ಬಿಜೆಪಿ ಒತ್ತಾಯ: ಜಿಲ್ಲೆಯಲ್ಲಿ ಇಂತಹ ಘಟನೆಗಳು ನಡೆಯುವುದು ಇದೇ ಮೊದಲಲ್ಲ. ಇಂತಹ ಅನೇಕ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಪೊಲೀಸರು ಇಂತಹ ಪ್ರಕರಣಗಳನ್ನು ಪೊಲೀಸರು ಕಡೆಗಣಿಸುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಪೊಲೀಸರು ತಳ್ಳಿ ಹಾಕುವ ಮೊದಲು ಸ್ಪಷ್ಟವಾಗಿ ತನಿಖೆ ನಡೆಸಿ ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಅಲ್ಲಿನ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

  • ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥೆ ಹೇಳಿದ ಎರಡೇ ಪದಗಳಿಂದ ಆಕೆಯನ್ನ ಕುಟುಂಬದೊಂದಿಗೆ ಸೇರಿಸಿದ ಪೊಲೀಸರು

    ಕಾಣೆಯಾಗಿದ್ದ ಮಾನಸಿಕ ಅಸ್ವಸ್ಥೆ ಹೇಳಿದ ಎರಡೇ ಪದಗಳಿಂದ ಆಕೆಯನ್ನ ಕುಟುಂಬದೊಂದಿಗೆ ಸೇರಿಸಿದ ಪೊಲೀಸರು

    ಮುಂಬೈ: ಕೆಲವು ದಿನಗಳ ಹಿಂದೆ ಕಾಣೆಯಾಗಿ ಕುಟುಂಬದಿಂದ ಬೇರ್ಪಟ್ಟಿದ್ದ ಮಾನಸಿಕ ಅಸ್ವಸ್ಥ ಯುವತಿಯನ್ನು ಆಕೆಯ ಕುಟುಂಬದೊಂದಿಗೆ ಸೇರಿಸುವಲ್ಲಿ ಮುಂಬೈ ಪೊಲೀಸರು ಯಶಸ್ವಿಯಾಗಿದ್ದಾರೆ. ಅದರಲ್ಲೂ ಯುವತಿ ಹೇಳಿಕ ಎರಡೇ ಎರಡು ಪದಗಳನ್ನ ಇಟ್ಟುಕೊಂಡು ಪೊಲೀಸರು ಆಕೆಯ ಪೋಷಕರನ್ನ ಪತ್ತೆ ಮಾಡಿದ್ದಾರೆ.

    ಮಾನಸಿಕ ಅಸ್ವಸ್ಥ ಯುವತಿ ಕೇವಲ ಸತ್ಸಂಗ್ ಮತ್ತು ಭಾಯಂದರ್ ಎಂಬ ಎರಡು ಪದಗಳನ್ನಷ್ಟೇ ಹೇಳಿದ್ದಳು. ಇದನ್ನೇ ಆಧಾರವಾಗಿಟ್ಟುಕೊಂಡ ಪೊಲೀಸರು ಮುಂಬೈ ಬಳಿಯ ಭಾಯಂದರ್ ಪ್ರದೇಶಕ್ಕೆ ಭೇಟಿ ನೀಡಿ, ಸಿಕ್ಕ ಮಾಹಿತಿಯನ್ನ ಒಂದಕ್ಕೊಂದು ಜೋಡಿಸಿ ಪೋಷಕರನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಪೊಲೀಸರ ತಂಡ ಮೊದಲಿಗೆ ಭಾಯಂದರ್‍ನಲ್ಲಿ ನಡೆದ ಹಾಗೂ ನಡೆಯುತ್ತಿರುವ ಸತ್ಸಂಗಗಳ ಬಗ್ಗೆ ಮಾಹಿತಿ ಕಲೆ ಹಾಕಿತ್ತು. ನಂತರ ಈ ಹಿಂದೆ ನಡೆದ ಸತ್ಸಂಗಗಳ ಆಯೋಜಕರು ಹಾಗೂ ಅವುಗಳಲ್ಲಿ ಭಾಗಿಯಾದ ಜನರನ್ನ ಮಾತನಾಡಿಸಿದ್ದರು.

    ಆಗಿದ್ದೇನು?: ಜನವರಿ 1ರಂದು ಸಂಜೆ 5.30ರ ವೇಳೆಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಮಿಗೆ ಕರೆಯೊಂದು ಬಂದಿತ್ತು. ಅಪರಿಚಿತ ಯುವತಿಯೊಬ್ಬಳು ವಡಾಲಾದ ಬಿಪಿಟಿ ಕಾಲೋನಿಯ ರಸ್ತೆ ಮೇಲೆ ಬಿದ್ದಿದ್ದಾಳೆಂದು ಮಾಹಿತಿ ಪಡೆದಿದ್ದರು. ನಂತರ ಕಂಟ್ರೋಲ್ ರೂಮಿನವರು ವಡಾಲಾದಲ್ಲಿನ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಬಳಿಕ ಪೊಲೀಸ್ ವ್ಯಾನ್‍ನಲ್ಲಿ ಸಬ್ ಇನ್ಸ್ ಪೆಕ್ಟರ್ ಸಂದೀಪ್ ಪವಾರ್ ಸ್ಥಳಕ್ಕೆ ಭೇಟಿ ನೀಡಿದಾಗ, ಯುವತಿ ಮಾತನಾಡಲೂ ಕಷ್ಟಪಡುತ್ತಿದ್ದು, ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದಳು.

    ಮೊದಲಿಗೆ ಯುವತಿಯನ್ನ ಪರೇಲ್‍ನ ಕೆಇಎಮ್ ಆಸ್ಪತ್ರೆಗೆ ದಾಖಲಿಸಿ ನಂತರ ಜೆಜೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಲ್ಲಿ ಯುವತಿಯನ್ನ ನೋಡಿಕೊಳ್ಳಲು ಮಹಿಳಾ ಪೇದೆಯರನ್ನ ನಿಯೋಜಿಸಲಾಗಿತ್ತು. ಶಿಫ್ಟ್‍ಗಳಲ್ಲಿ ಕೆಲಸ ಮಾಡಿದ ಮಹಿಳಾ ಪೇದೆಗಳು ಯುವತಿಯೊಂದಿಗೆ ಮಾತನಾಡಲು ಪ್ರತ್ನಿಸಿದ್ದರು. ಆದ್ರೆ ಯುವತಿ ಸಂತ್ಸಂಗ್, ಭಾಯಂದರ್ ಎಂಬ ಎರಡು ಪದಗಳನ್ನು ಮಾತ್ರ ಹೇಳುತ್ತಿದ್ದಳು.

    ಇದನ್ನೇ ಆಧಾರವಾಗಿಟ್ಟುಕೊಂಡು ನಮ್ಮ ಬಳಿ ಇದ್ದ ಮಾಹಿತಿಯನ್ನಾಧರಿಸಿ ಕಾರ್ಯಾಚರಣೆ ಮಾಡಿದೆವು. ನಾನು ಭಾಯಂದರ್ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ, ಯಾವುದಾದ್ರೂ ಯುವತಿ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ಯಾ ಎಂದು ಪರಿಶೀಲಿಸಿದೆ. ಆದ್ರೆ ಆ ರೀತಿ ಯಾವುದೇ ಕೇಸ್ ದಾಖಲಾಗಿಲ್ಲ ಎಂದು ಅವರು ತಿಳಿಸಿದರು ಎಂದು ಪಿಎಸ್‍ಐ ಸಂದೀಪ್ ಪವಾರ್ ಹೇಳಿದ್ದಾರೆ.

    ನಂತರ ಪವಾರ್ ಅವರು ಆ ಪ್ರದೇಶದಲ್ಲಿ ಇತ್ತೀಚೆಗೆ ಯಾವುದಾದ್ರೂ ಸತ್ಸಂಗ ನಡೆದಿತ್ತಾ ಎಂದು ಪೊಲೀಸ್ ಠಾಣೆಯಲ್ಲಿ ವಿಚಾರಿಸಿದ್ದರು. ಕಳೆದ ವಾರ ಅಂತಹ ಎರಡು ಮೂರು ಕಾರ್ಯಕ್ರಮಗಳು ನಡೆದಿವೆ ಎಂಬ ಮಾಹಿತಿ ಸಿಕ್ಕಿತ್ತು.

    ಇದನ್ನಾಧರಿಸಿ ಜನವರಿ 7ರಂದು ಕಾರ್ಯಕ್ರಮ ನಡೆದ ಒಂದು ಸ್ಥಳಕ್ಕೆ ಭೇಟಿ ನೀಡಿದ ಪವಾರ್, ದೇರಾ ಸಚ್ಛಾ ಸೌದಾ ಸತ್ಸಂಗ ಆಯೋಜಕರಿಗೆ ಯುವತಿಯ ಫೋಟೋ ತೋರಿಸಿ ವಿಚಾರಿಸಿದ್ದರು. ಸತ್ಸಂಗದಲ್ಲಿ ಭಾಗವಹಿಸಿದ್ದ ಕುಟುಂಬವೊಂದು, ಸುಮಾರು ಇದೇ ವಯಸ್ಸಿನ ತಮ್ಮ ಮಗಳನ್ನ ಕಳೆದುಕೊಂಡಿದ್ದಾರೆಂದು ಆಯೋಜಕರು ಹೇಳಿದ್ದರು. ನಂತರ ಸತ್ಸಂಗ ಆಯೋಜಕರು ಮಗಳನ್ನು ಕಳೆದುಕೊಂಡಿದ್ದ ಕುಟುಂಬದವರನ್ನ ಸಂಪರ್ಕಿಸಲು ಪವಾರ್ ಅವರಿಗೆ ಸಹಾಯ ಮಾಡಿದ್ದರು.

    ನಾನು ಸೂರತ್ ಮೂಲದ ಕುಟುಂಬವನ್ನ ಸಂಪರ್ಕಿಸಿ ಯುವತಿಯ ಫೋಟೋವನ್ನ ಹಂಚಿಕೊಂಡೆ. ಅವರು ಕೂಡಲೇ ಅದು ನಮ್ಮ ಮಗಳು ಫಲ್ಗುಣಿ ಪಟೇಲ್ ಎಂದು ಗುರುತಿಸಿದ್ರು. ಯುವತಿ ದಲ್‍ಸುಖ್ ಪಟೇಲ್ ಎಂಬವರ ಮಗಳಾಗಿದ್ದು ಕುಟಂಬಸ್ಥರು ಸತ್ಸಂಗದಲ್ಲಿ ಭಾಗವಹಿಸಲು ವಾಸೈ ರೈಲ್ವೆ ನಿಲ್ದಾಣಕ್ಕೆ ಬಂದಾಗ ಕಾಣೆಯಾಗಿದ್ದಳು. ಕುಟುಂಬಸ್ಥರು ಈಗ ಮುಂಬೈಗೆ ಬಂದಿದ್ದು, ಯುವತಿಯನ್ನ ಅವರಿಗೆ ಒಪ್ಪಿಸಲಾಗಿದೆ ಎಂದು ಪವಾರ್ ಹೇಳಿದ್ರು.

  • ಅತ್ತೆ-ಮಾವ, ಇಬ್ಬರು ಪುತ್ರಿಯರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    ಅತ್ತೆ-ಮಾವ, ಇಬ್ಬರು ಪುತ್ರಿಯರಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

    ರಾಜ್‍ಕೋಟ್: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳು ಹಾಗೂ ಅತ್ತೆ ಮಾವನ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ತಾನೂ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಡೆದಿದೆ.

    30 ವರ್ಷದ ಭಾವನಾ ಪರ್ಮರ್ ತನ್ನ ನಾಲ್ವರು ಕುಟುಂಬಸ್ಥರನ್ನು ಕೊಲ್ಲಲು ಯತ್ನಿಸಿದ ಮಹಿಳೆ. ಇಲ್ಲಿನ ಭೀಮ್‍ನಗರನಲ್ಲಿನ ಮನೆಯಲ್ಲಿ ಶುಕ್ರವಾರದಂದು ಎಲ್ಲರೂ ಮಲಗಿದ್ದ ವೇಳೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದು, ನಂತರ ತಾನೂ ಬೆಂಕಿ ಹಂಚಿಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ.

    ಭಾವನಾ ಹಾಗೂ ಆಕೆಯ ಪುತ್ರಿಯರಾದ 11 ವರ್ಷದ ಜ್ಯೋತಿ, 9 ವರ್ಷದ ನಿಕಿತಾ, ಅತ್ತೆ ನಂದುಬೆನ್(55) ಮಾವ ಮೇರುಭಾಯ್(60) ಎಲ್ಲರನ್ನೂ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಭಾವನಾ ಸಾವನ್ನಪ್ಪಿದ್ದು, ಉಳಿದ ನಾಲ್ವರಿಗೆ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಭಾವನಾ ಮಾನಸಿಕ ಅಸ್ವಸ್ಥರಾಗಿದ್ದು, ಮನೋವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಸಬ್ ಇನ್ಸ್ ಪೆಕ್ಟರ್ ಎಸ್‍ಆರ್ ವಾರು ಹೇಳಿದ್ದಾರೆ.

    ಕೋಣೆಯೊಂದರಲ್ಲಿ ಮಲಗಿದ್ದ ನಾಲ್ವರ ಮೇಲೆ ಸೀಮೆಎಣ್ಣೆ ಸುರಿದು ನಂತರ ತಾನೂ ಸೀಮೆಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಮಹಿಳೆಯ ಪತಿ ರಾಜೇಶ್ ಪರ್ಮರ್ ತನ್ನ 5 ವರ್ಷದ ಮಗಳೊಂದಿಗೆ ಪಕ್ಕದ ಕೋಣೆಯಲ್ಲಿ ಮಲಗಿದ್ದರು. ಅವರು ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಭಾವನಾ ಸಾವನ್ನಪ್ಪಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.