Tag: ಮಾರಮಾರಿ

  • ಕೋಚಿಮುಲ್ ಚುನಾವಣೆಯಲ್ಲಿ ದೋಸ್ತಿ ದಂಗಲ್ – ಕೈ, ತೆನೆ ಬೆಂಬಲಿಗರ ಮಾರಾಮಾರಿ

    ಕೋಚಿಮುಲ್ ಚುನಾವಣೆಯಲ್ಲಿ ದೋಸ್ತಿ ದಂಗಲ್ – ಕೈ, ತೆನೆ ಬೆಂಬಲಿಗರ ಮಾರಾಮಾರಿ

    ಕೋಲಾರ: ರಾಜ್ಯದಲ್ಲಿ ದೋಸ್ತಿ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ(ಕೋಚಿಮುಲ್) ಚುನಾವಣೆಯ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಹಾಲಿ ಮತ್ತು ಮಾಜಿ ಶಾಸಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.

    ಕೋಲಾರ ನಗರದ ಗೋಕುಲ್ ಕಾಲೇಜಿನಲ್ಲಿ ಪ್ರತಿಷ್ಠಿತ ಕೋಚಿಮುಲ್ ನಿರ್ದೇಶಕರ ಚುನಾವಣೆ ನಡೆಯತ್ತಿದೆ. ಒಟ್ಟು 9 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಮತದಾನಕ್ಕೆ ಬಂದಿದ್ದ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಹಾಗೂ ಮಾಜಿ ಜೆಡಿಎಸ್ ಶಾಸಕ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಇದನ್ನೂ ಓದಿ:ಒಂದು ವೋಟಿಗೆ ಲಕ್ಷ ಲಕ್ಷ -ಕೋಚಿಮುಲ್ ಚುನಾವಣೆಯಲ್ಲೂ ರೆಸಾರ್ಟ್ ರಾಜಕೀಯ ಬಲು ಜೋರು

    ಪ್ರವಾಸ, ರೆಸಾರ್ಟ್ ಮುಗಿಸಿ ಮತದಾನ ಮಾಡಲು ಮತದಾರರನ್ನು ಕರೆತಂದ ಕಾಂಗ್ರೆಸ್ ಶಾಸಕ ನಂಜೇಗೌಡರ ಕುಕ್ಕರ್ ಗುರುತಿಗೆ ಮತ ಎಂದು ಮಂಜುನಾಥ್ ಗೌಡ ಬೆಂಬಲಿಗರು ಕೆಣಕಿದ್ದಾರೆ. ಈ ವೇಳೆ ಎರಡು ಗುಂಪುಗಳ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಲಘುಲಾಠಿ ಚಾರ್ಜ್ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ.

    150ಕ್ಕೂ ಹೆಚ್ಚು ಮತದಾರರು ಪ್ರವಾಸ, ರೆಸಾರ್ಟ್ ಮುಗಿಸಿ ಮತದಾನ ಮಾಡಲು ಮೂರು ಬಸ್ಸಿನಲ್ಲಿ ಆಗಮಿಸಿದ್ದರು. ಗೋವಾ ಪ್ರವಾಸ ಮುಗಿಸಿ ಹಾಲು ಒಕ್ಕೂಟದ ಮತದಾರರು ಭಾನುವಾರ ಬೆಂಗಳೂರಿನ ಯಲಹಂಕದ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದರು. ಇಂದು ಮಾಲೂರು ಶಾಸಕ ನಂಜೇಗೌಡ ನೇತೃತ್ವದಲ್ಲಿ ನೇರವಾಗಿ ಮೂರು ಎಸ್‍ಆರ್‍ಎಸ್ ಬಸ್ಸುಗಳಲ್ಲಿ ಗೋಕುಲ್ ಕಾಲೇಜು ಬಳಿ ಮತಕೇಂದ್ರಕ್ಕೆ ಬಂದಿದ್ದರು.

    ರಹಸ್ಯ ಕ್ಯಾಮೆರಾ ಬಳಸಿಕೊಂಡು ಮತ ಚಲಾವಣೆಗೆ ಮುಂದಾದ ನಾಲ್ವರು ಮತದಾರರು ಚುನಾವಣಾಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಕೋಚಿಮುಲ್ ಚುನಾವಣೆ ಹಿನ್ನೆಲೆ ಮತದಾನ ಮಾಡಿದ್ದನ್ನು ನಿರ್ದೇಶಕರಿಗೆ ತೋರಿಸಲು ಮತಕೇಂದ್ರಕ್ಕೆ ಪೆನ್ ಕ್ಯಾಮರಾ ತೆಗೆದುಕೊಂಡು ಹೋಗುತ್ತಿದ್ದ ನಾಲ್ಕು ಮಂದಿಯನ್ನು ಚುನಾವಣಾಧಿಕಾರಿಗಳು ಪೋಲೀಸರ ವಶಕ್ಕೆ ನೀಡಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಶ್ರೀನಿವಾಸರೆಡ್ಡಿ, ರಾಜಾರೆಡ್ಡಿ, ಮುನಿಯಪ್ಪ, ನಾರಾಯಪ್ಪ ಬಂಧಿತ ಆರೋಪಿಗಳಾಗಿದ್ದಾರೆ.

  • ಏರ್ ಪೋರ್ಟ್ ಪಾರ್ಕಿಂಗ್‍ನಲ್ಲಿ ಕಾರು ಚಾಲಕರ ಮಧ್ಯೆ ಮಾರಾಮಾರಿ- ಓಲಾ ಕ್ಯಾಬ್ ಜಖಂ

    ಏರ್ ಪೋರ್ಟ್ ಪಾರ್ಕಿಂಗ್‍ನಲ್ಲಿ ಕಾರು ಚಾಲಕರ ಮಧ್ಯೆ ಮಾರಾಮಾರಿ- ಓಲಾ ಕ್ಯಾಬ್ ಜಖಂ

    ಮಂಗಳೂರು: ನಗರ ಏರ್ ಪೋರ್ಟ್ ಪಾರ್ಕಿಂಗ್‍ನಲ್ಲಿ ಕ್ಷುಲ್ಲಕ ಕಾರಣಕ್ಕೆ ಓಲಾ ಕ್ಯಾಬ್ ಹಾಗೂ ಸ್ಥಳೀಯ ಕಾರು ಚಾಲಕರ ಮಧ್ಯೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಓಲಾ ಕ್ಯಾಬ್ ಒಂದನ್ನು ಕಲ್ಲು ತೂರಿ ಜಖಂ ಗೊಳಿಸಲಾಗಿದೆ.

    ಪ್ರಯಾಣಿಕರನ್ನು ಕರೆದೊಯ್ದಿದ್ದ ಓಲಾ ಕ್ಯಾಬ್ ಚಾಲಕ ತನ್ನ ಕಾರನ್ನು ಏರ್ ಪೋರ್ಟ್ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ. ಇದನ್ನು ಸ್ಥಳೀಯ ಕಾರು ಚಾಲಕರು ಆಕ್ಷೇಪಿಸಿದ್ದು, ಕೂಡಲೇ ಕಾರು ತೆರವು ಮಾಡುವಂತೆ ಸೂಚನೆ ನೀಡಿದ್ದರು. ಆದರೆ ಓಲಾ ಕಾರು ಚಾಲಕ ಸ್ಥಳೀಯರೊಂದಿಗೆ ವಾಗ್ವಾದ ನಡೆಸಿ, ತನ್ನ ಸಹವರ್ತಿಗಳನ್ನು ಕರೆಸಿದ್ದಾನೆ. ಆ ಬಳಿಕ ಸ್ಥಳೀಯ ಕ್ಯಾಬ್ ಚಾಲಕರು ಮತ್ತು ಓಲಾ ಸಿಬ್ಬಂದಿ ನಡುವೆ ಬೀದಿ ಕಾಳಗವೇ ನಡೆದು ಹೋಗಿದೆ. ಜಗಳದ ನಡುವೆ ಓಲಾ ಕ್ಯಾಬ್ ಮೇಲೆ ಕಲ್ಲು ತೂರಿ ಜಖಂ ಗೊಳಿಸಲಾಗಿದೆ. ಅಷ್ಟೇ ಅಲ್ಲದೆ ಘಟನೆಯಲ್ಲಿ ಓಲಾ ಕ್ಯಾಬ್ ಚಾಲಕನೊಬ್ಬನಿಗೆ ಗಂಭೀರ ಗಾಯವಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಏರ್ ಪೋರ್ಟ್ ಆವರಣದಿಂದ ಪ್ರಯಾಣಿಕರನ್ನು ಕರೆದೊಯ್ಯಲು ಸ್ಥಳೀಯ ಕಾರು ಚಾಲಕರ ನಡುವೆ ಪೈಪೋಟಿ ಇರುವುದರಿಂದ ಓಲಾ ಕ್ಯಾಬ್‍ಗಳಿಗೆ ಅವಕಾಶ ನೀಡುತ್ತಿರಲಿಲ್ಲ. ಓಲಾ ಟ್ಯಾಕ್ಸಿಯಂತಹ ಆನ್ ಲೈನ್ ಕ್ಯಾಬ್ ಗಳು ಕಡಿಮೆ ಬಾಡಿಗೆ ದರದಲ್ಲಿ ಮಂಗಳೂರು ನಗರ ತಲುಪಿಸುವ ಕಾರಣ ಈ ಹಿಂದೆಯೂ ಜಟಾಪಟಿ ನಡೆದಿತ್ತು. ಈ ವಿಚಾರ ಹಲವು ಸಮಯದಿಂದ ಹೊಗೆಯಾಡುತ್ತಿದ್ದು ಈಗ ಗೂಂಡಾಗಿರಿ ನಡೆಸುವಷ್ಟರ ಮಟ್ಟಿಗೆ ಮುಂದುವರೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv