Tag: ಮಾರಿಕಾಂಬಾ

  • ಮಳೆಯ ಅಬ್ಬರಕ್ಕೆ ಕಳಚಿಬಿದ್ದ ಮಾರಿಕಾಂಬಾ ದೇವಿಯ ಗದ್ದುಗೆ ಮಂಟಪ

    ಮಳೆಯ ಅಬ್ಬರಕ್ಕೆ ಕಳಚಿಬಿದ್ದ ಮಾರಿಕಾಂಬಾ ದೇವಿಯ ಗದ್ದುಗೆ ಮಂಟಪ

    ಕಾರವಾರ: ಮಳೆಯ ಅಬ್ಬರಕ್ಕೆ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರೆಗೆ ದೊಡ್ಡ ವಿಘ್ನ ಎದುರಾಗಿದ್ದು ಅಬ್ಬರದ ಗಾಳಿ ಮಳೆಗೆ ಮಾರಿಕಾಂಬಾ ದೇವಿ ಗದ್ದುಗೆಯ ಮಂಟಪ ಸಂಪೂರ್ಣ ಕುಸಿದು ನೆಲಕ್ಕುರುಳಿದೆ.

    ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ ತಾಲೂಕಿನಾಧ್ಯಂತ ಅಬ್ಬರದ ಗಾಳಿ ಮಳೆ ಸುರಿದಿದೆ. ಮಾರಿಕಾಂಬಾ ಜಾತ್ರೆಗೆ ಹಾಕಿದ ಮಳಿಗೆಗಳು ಗಾಳಿ ಮಳೆಯ ರಭಸಕ್ಕೆ ಕಿತ್ತು ಬಿದ್ದಿದ್ದು ಬಟ್ಟೆ ಅಂಗಡಿ ಸೇರಿದಂತೆ ಹಲವು ಮಳಿಗೆಗಳಿಗೆ ಹಾನಿಯಾಗಿದೆ. ಅಲ್ಲದೇ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನೀರಿಗೆ ಆಹುತಿಯಾಗಿದೆ. ಇದನ್ನೂ ಓದಿ: ಗದ್ದುಗೆ ಏರಿದ ಶಿರಸಿ ಮಾರಿಕಾಂಬಾ – ಹರಿದುಬಂದ ಜನಸಾಗರ

    ಇಂದು ಸಂಜೆ ಏಕಾಏಕಿ ಗುಡುಗು ಸಹಿತ ಅಬ್ಬರದ ಮಳೆ ಪ್ರಾರಂಭವಾಗಿದೆ. ಜಾತ್ರೆಯಾಗಿದ್ದರಿಂದ ಲಕ್ಷಾಂತರ ಜನರು ಶಿರಸಿ ನಗರದಲ್ಲಿ ಸೇರಿದ್ದರು. ದುರಾದೃಷ್ಟ ಎನ್ನುವಂತೆ ಮಾರಿಕಾಂಬಾ ದೇವಿ ಮಂಟಪ ಅಬ್ಬರದ ಗಾಳಿಗೆ ಕುಸಿದು ಬಿದ್ದಿದೆ. ಶಿರಸಿ ತಾಲೂಕಿನಲ್ಲಿ ಅಲ್ಲದೇ ಮುಂಡಗೋಡು, ಹಳಿಯಾಳ, ಸಿದ್ದಾಪುರ ಭಾಗದಲ್ಲೂ ಗುಡುಗು ಸಹಿತ ಬಾರಿ ಮಳೆಯಾಗಿದೆ. ಇದನ್ನೂ ಓದಿ: ಕಾಮಣ್ಣನ ಹಬ್ಬಕ್ಕೆ ಶಸ್ತ್ರಾಸ್ತ್ರ ಹೊರ ತರುವ ಗ್ರಾಮಸ್ಥರು

  • ಗದ್ದುಗೆ ಏರಿದ ಶಿರಸಿ ಮಾರಿಕಾಂಬಾ – ಹರಿದುಬಂದ ಜನಸಾಗರ

    ಗದ್ದುಗೆ ಏರಿದ ಶಿರಸಿ ಮಾರಿಕಾಂಬಾ – ಹರಿದುಬಂದ ಜನಸಾಗರ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರಾ ಮಹೊತ್ಸವದ ನಾಲ್ಕನೇ ದಿನವಾದ ಇಂದು ಭಕ್ತ ಸಾಗರವೇ ಹರಿದುಬಂದಿದೆ.

    ಇಂದು ರಾಜ್ಯದ ಮೂಲೆ ಮೂಲೆಯಿಂದಲೂ ಜನರು ಶಿರಸಿ ಮಾರಿಕಾಂಬಾ ದೇವಿ ಗದ್ದುಗೆಗೆ ಪೂಜೆ, ಹರಕೆ ಸಲ್ಲಿಸಲು ಆಗಮಿಸಿದ್ದಾರೆ. ಬಿಡಕಿಬೈಲಿನ ಜಾತ್ರಾ ಗದ್ದುಗೆಯಲ್ಲಿ ಸರ್ವಾಲಂಕಾರ ಭೂಷಿತೆ ಮಾರಿಕಾಂಬೆಯ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಸಾವಿರಾರು ಭಕ್ತರು ದರ್ಶನ ಪಡೆದರು.  ಇದನ್ನೂ ಓದಿ:  ಮಾರ್ಚ್‌ 15 ರಿಂದ 23 ರ ವರೆಗೆ ರಾಜ್ಯದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

    ಹರಕೆ ಹೊತ್ತ ಭಕ್ತರು ಪ್ರತಿವರ್ಷದಂತೆ ಈ ಬಾರಿಯೂ ಮರ್ಕಿದುರ್ಗಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬೇವಿನ ಉಡುಗೆ ತೊಟ್ಟು ಜಾತ್ರಾಗದ್ದುಗೆಯ ಸುತ್ತಾ ಪ್ರದಕ್ಷಿಣೆ ತಿರುಗಿ ಪೂಜೆ ಸಲ್ಲಿಸಿದರು. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಸಾವಿರಾರು ಭಕ್ತರು ಬೇವಿನ ಉಡುಗೆ ತೊಡುವ ಸಂಪ್ರದಾಯ ನೂರಾರು ವರ್ಷದಿಂದ ಇಲ್ಲಿ ಚಾಲ್ತಿಯಲ್ಲಿದೆ. ಸದ್ಯ ದೇವಿಯು ಇದೀಗ ಭಕ್ತರಿಗೆ ದರ್ಶನ ನೀಡಲು ಗದ್ದುಗೆಯಲ್ಲಿ ಕುಳಿತಿದ್ದು ಮಾರ್ಚ್ 23 ರಂದು ಜಾತ್ರೆ ಮುಕ್ತಾಯಗೊಳ್ಳಲಿದೆ. ಇದನ್ನೂ ಓದಿ: ಮಿಂಚುಳ್ಳಿ ಲೋಕದಲ್ಲೊಂದು ಪಯಣ