ಹಾಸನ: ಕೆಎಸ್ಆರ್ಟಿಸಿ ಬಸ್ ಮತ್ತು ಮಾರುತಿ ಓಮ್ನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಲಕ್ಷ್ಮಿದೇವರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದೆ. ಮೃತರನ್ನು ಮುಜೀಬ್(53), ಮಹಮದ್ ಸಾದಿಕ್ (22) ಹಾಗೂ ಮುಸ್ಕಾನ್ (19) ಎಂದು ಗುರುತಿಸಲಾಗಿದೆ.
ಶಲೀನಾ ಬಾನು, ಇಮ್ರಾನ್ ಅಹಮದ್, ಶಲೀನಾ ತಾಜ್ ಮತ್ತು ಮೊಹಮದ್ ಶಲೀನಾರಿಗೆ ಗಾಯಾಳುಗಳಾಗಿದ್ದು, ಇವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: 2020ರ ಅಕ್ಟೋಬರ್ ನಿಂದ ಓಮ್ನಿ ಕಾರಿನ ಉತ್ಪಾದನೆಯನ್ನು ನಿಲ್ಲಿಸಲು ಮಾರುತಿ ಸುಝುಕಿ ಕಂಪನಿ ನಿರ್ಧರಿಸಿದೆ.
ಭಾರತ್ ನ್ಯೂ ವೆಹಿಕಲ್ ಸೇಫ್ಟಿ ಅಸೆಸ್ಮೆಂಟ್ ಪ್ರೋಗ್ರಾಂ(ಬಿಎನ್ವಿಎಸ್ಎಪಿ) 2020 ಅಕ್ಟೋಬರ್ ನಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹಲವು ವಾಹನಗಳ ಉತ್ಪಾದನೆ ಸ್ಥಗಿತವಾಗಲಿದೆ. ಅದರಲ್ಲಿ ಮಾರುತಿ ಓಮ್ನಿ ಕಾರು ಕೂಡ ಒಂದು ಎಂದು ಮಾರುತಿ ಸುಝುಕಿ ಕಂಪನಿಯ ಮುಖ್ಯಸ್ಥ ಆರ್ಸಿ ಭಾರ್ಗವ ತಿಳಿಸಿದ್ದಾರೆ. ಇದನ್ನೂ ಓದಿ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಪೆಟ್ರೋಲ್ ಕಾರುಗಳ ವಿವರ ಇಲ್ಲಿದೆ ನೋಡಿ
1983 ರಲ್ಲಿ ಮಾರುತಿ 800 ಕಾರುಗಳನ್ನು ಬಿಡುಗಡೆ ಮಾಡಿದ್ದ ಮಾರುತಿ ಸುಝುಕಿ ಎರಡನೇ ಉತ್ಪನ್ನವಾಗಿ ಮಾರುತಿ ವ್ಯಾನ್ ಬಿಡುಗಡೆ ಮಾಡಿತ್ತು. 34 ವರ್ಷಗಳಲ್ಲಿ ಮೂಲ ಕಾರಿನ ಮಾದರಿಯಲ್ಲಿ 2 ಬಾರಿ ಮಾತ್ರ ಬದಲಾವಣೆಯಾಗಿತ್ತು. 1998 ರಲ್ಲಿ ಹೆಡ್ ಲ್ಯಾಂಪ್ ಬದಲಾಗಿದ್ದರೆ, 2005 ರಲ್ಲಿ ಕಾರಿನ ಮುಂಭಾಗದ ಡ್ಯಾಶ್ ಬೋರ್ಡ್ ನಲ್ಲಿ ಸಣ್ಣ ಬದಲಾವಣೆ ಮಾಡಿ ಬಿಡುಗಡೆ ಮಾಡಿತ್ತು.
ಸ್ಥಗಿತ ಯಾಕೆ?
ಅಪಘಾತಗಳಿಂದ ಪ್ರಾಣ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2020ರ ವೇಳೆಗೆ ಎಲ್ಲ ವಾಹನಗಳು ಕನಿಷ್ಠ ಸುರಕ್ಷತಾ ಮಾನದಂಡವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕೆಂದು ಎಲ್ಲಾ ಕಾರು ಉತ್ಪಾದಕಾ ಕಂಪನಿಗಳಿಗೆ ಸೂಚಿಸಿದೆ. ಓಮ್ನಿ ಕಾರಿನ ಮುಂಭಾಗ ನೇರವಾಗಿರುವ ಕಾರಣ ಅಪಘಾತದ ಸಮಯದಲ್ಲಿ ಒಳಗಿದ್ದವರಿಗೆ ಸುರಕ್ಷತೆ ನೀಡಲು ಸಾಧ್ಯವೇ ಇಲ್ಲ. ಬಿಎನ್ವಿಎಸ್ಎ ಮಾನದಂಡವನ್ನು ಅನುಸರಿಸಿ ಕಾರನ್ನು ಬಿಡುಗಡೆ ಮಾಡಲು ಓಮ್ನಿ ಮಾಡೆಲ್ ನಲ್ಲಿ ಸಾಧ್ಯವಿಲ್ಲ. ಈ ಕಾರಣಕ್ಕೆ ಈ ಮಾಡೆಲ್ ಅನ್ನೇ ಸಂಪೂರ್ಣವಾಗಿ ನಿಲ್ಲಿಸಲು ಮಾರುತಿ ಸುಝುಕಿ ಕಂಪನಿ ಮುಂದಾಗಿದೆ. ಇದನ್ನೂ ಓದಿ: ಕ್ರ್ಯಾಶ್ ಟೆಸ್ಟ್ ನಲ್ಲಿ 4 ಸ್ಟಾರ್ ಪಡೆದ ವಿಟಾರಾ ಬ್ರೇಝಾ- ವಿಡಿಯೋ ನೋಡಿ ಏನಿದು ಕ್ರ್ಯಾಶ್ ಟೆಸ್ಟ್? ಹೇಗೆ ಅಂಕ ನೀಡಲಾಗುತ್ತದೆ?