Tag: ಮಾರ್ಗಸೂಚಿ

  • ಶಬರಿಮಲೆಗೆ ಹೋಗುವ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

    ಶಬರಿಮಲೆಗೆ ಹೋಗುವ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗ ಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ  ಬಿಡುಗಡೆ ಮಾಡಿದೆ.

    ಶಬರಿಮಲೆ ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಂಡು ಅನುಮತಿ ಪಡೆದ ಭಕ್ತರಿಗಷ್ಟೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ 1 ಸಾವಿರ ಭಕ್ತರಿಗೆ ವಾರಾಂತ್ಯದಲ್ಲಿ 2 ಸಾವಿರ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ ಭೇಟಿಯ 48 ಗಂಟೆ ಅವಧಿಗೆ ಮೊದಲು ಕೋವಿಡ್ ಟೆಸ್ಟ್ ಮಾಡಿಸಿದ ಸರ್ಟಿಫಿಕೇಟ್ ಹೊಂದುವುದು ಕಡ್ಡಾಯ. 10 ವರ್ಷದ ಒಳಗಿನ ಮಕ್ಕಳು 60-65 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅನಾರೋಗ್ಯದಿಂದ ನಳಲುತ್ತಿರುವವರಿಗೆ ಪ್ರವೇಶ ನಿರಾಕರಣೆ. ಇದನ್ನೂ ಓದಿ: 2 ಗ್ರಾಂ 900 ಮಿಲಿ ಚಿನ್ನದಲ್ಲಿ ಅರಳಿದ ಶಬರಿಮಲೆ ದೇವಾಲಯ

    ಬಿಪಿಎಲ್ ಕಾರ್ಡ್ ಅಥವಾ ಆಯುಷ್ಮಾನ್ ಕಾರ್ಡ್ ಹೊಂದಿದ್ದರೆ ಅದನ್ನು ಜೊತೆಗೆ ಕೊಂಡೊಯ್ಯಬೇಕು. ತುಪ್ಪದ ಅಭಿಷೇಕ, ಪಂಪಾ ನದಿಯಲ್ಲಿ ಸ್ನಾನ ಹಾಗೂ ರಾತ್ರಿ ಉಳಿದುಕೊಳ್ಳುವುದು ಯಾವುದಕ್ಕೂ ಅವಕಾಶ ಇಲ್ಲ. ಎರುಮೆಲು ಮತ್ತು ವೇದಸಾರಿಕ್ಕರ ಎರಡು ಮಾರ್ಗದಲ್ಲಷ್ಟೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

  • ಆನ್‍ಲೈನ್ ತರಗತಿಗೆ ಸರ್ಕಾರದಿಂದ ಮಾರ್ಗಸೂಚಿ- ಯಾವ ಮಕ್ಕಳಿಗೆ ಎಷ್ಟು ಗಂಟೆ, ಎಷ್ಟು ದಿನ ಕ್ಲಾಸ್?

    ಆನ್‍ಲೈನ್ ತರಗತಿಗೆ ಸರ್ಕಾರದಿಂದ ಮಾರ್ಗಸೂಚಿ- ಯಾವ ಮಕ್ಕಳಿಗೆ ಎಷ್ಟು ಗಂಟೆ, ಎಷ್ಟು ದಿನ ಕ್ಲಾಸ್?

    ಬೆಂಗಳೂರು: ಮಕ್ಕಳ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಆನ್‍ಲೈನ್ ತರಗತಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಯಾವ ತರಗತಿಯ ಮಕ್ಕಳು, ಎಷ್ಟು ದಿನ, ಎಷ್ಟು ಗಂಟೆ ಆನ್‍ಲೈನ್ ತರಗತಿಯಲ್ಲಿ ಕೂರಬೇಕು ಎಂಬ ಕುರಿತು ತಿಳಿಸಿದೆ.

    ಆನ್‍ಲೈನ್ ತರಗತಿ ಕುರಿತು ಈಗಾಗಲೇ ದೂರುಗಳು ಬರುತ್ತಿದ್ದು, ಮಕ್ಕಳಿಗೆ ವಿವಿಧ ಸಮಸ್ಯೆಗಳು ಎದುರಾಗುತ್ತಿವೆ ಎಂದು ಪೋಷಕರು ದೂರುತ್ತಿದ್ದಾರೆ. ಶೇ.20 ಮಕ್ಕಳಿಗೆ ಕತ್ತು, ಬೆನ್ನು ನೋವು ಸಮಸ್ಯೆ ಕಾಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿರಂತರ ಮೊಬೈಲ್ ವೀಕ್ಷಣೆಯಿಂದ ಕಣ್ಣಿಗೆ ತೊಂದರೆಯ ಜೊತೆಗೆ ಈಗ ಕತ್ತು ಹಾಗೂ ಬೆನ್ನು ನೋವಿನಿಂದ ಮಕ್ಕಳು ನರಳುತ್ತಿದ್ದಾರೆ. ಇದರಿಂದಾಗಿ ಪೋಷಕರು ಹೈರಾಣಾಗಿದ್ದಾರೆ. ಹೀಗಾಗಿ ತಜ್ಞರ ವರದಿ ಆಧರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

    ವಯೋಮಾನಕ್ಕನುಗುಣವಾಗಿ ಆನ್‍ಲೈನ್ ಕ್ಲಾಸ್ ನಡೆಸುವಂತೆ ತಿಳಿಸಲಾಗಿದ್ದು, 2ನೇ ತರಗತಿಯವರೆಗೆ ದಿನ ಬಿಟ್ಟು ದಿನ ಹಾಗೂ 3ನೇ ತರಗತಿಯ ನಂತರದ ಮಕ್ಕಳಿಗೆ ವಾರಕ್ಕೆ ಗರಿಷ್ಠ 5 ದಿನಗಳವರೆಗೆ ತರಗತಿ ನಡೆಸಬಹದು. ಎರಡು ದಿನ ಕಡ್ಡಾಯವಾಗಿ ರಜೆ ನೀಡಬೇಕು. 2ನೇ ತರಗತಿಯವರೆಗೆ ಪೋಷಕರ ಉಪಸ್ಥಿತಿ ಕಡ್ಡಾಯ ಅಥವಾ ಪೋಷಕರ ಅನುಮತಿಯ ಮೇರೆಗೆ ವಯಸ್ಕರ ಉಪಸ್ಥಿತಿಗೆ ಅವಕಾಶ ಇರಬೇಕು.

    ಸಿಂಕ್ರೊನಸ್ (ನೇರ ಪ್ರಸಾರದ ಅಧಿವೇಶನಗಳು) ಮತ್ತು ಅಸಿಂಕ್ರೊನಸ್ (ಪೂರ್ವ-ಮುದ್ರಿತ ಅಧಿವೇಶನಗಳು) ವಿಧಾನಗಳಿಗೆ ಆದ್ಯತೆ ನೀಡಬೇಕು. ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡದಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ 1983(1995) ರ ಸೆಕ್ಷನ್ 124(5) ಅಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರದ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

    ಯಾವ ಮಕ್ಕಳಿಗೆ ಎಷ್ಟು ದಿನ ತರಗತಿ?
    3ರಿಂದ 6 ವರ್ಷದ ಮಕ್ಕಳಿಗೆ ಒಂದು ದಿನ ಬಿಟ್ಟು ಒಂದು ದಿನದಂತೆ ವಾರಕ್ಕೆ 3 ದಿನ ತರಗತಿ ನಡೆಸಬೇಕು. ಇದಕ್ಕೆ ಪೋಷಕರ ಹಾಜರಾತಿ ಕಡ್ಡಾಯವಾಗಿದೆ. ಪ್ರತಿ ದಿನ ಕೇವಲ ಗರಿಷ್ಠ 30 ನಿಮಿಷ ಮಾತ್ರ ನಡೆಸಬೇಕು. 1 ರಿಂದ 2ನೇ ತರಗತಿ ಮಕ್ಕಳಿಗೂ ಇದೇ ನಿಯಮ ಅನ್ವಯವಾಗಲಿದೆ. ಆದರೆ ದಿನಕ್ಕೆ 2 ಸೆಷನ್ ಮಾಡಬಹುದಾಗಿದೆ. ಇವರಿಗೂ ತರಗತಿ ಅವಧಿ ಗರಿಷ್ಠ 30 ನಿಮಿಷ ಮಾತ್ರ.

    3ರಿಂದ 5ನೇ ತರಗತಿ ಮಕ್ಕಳಿಗೆ ದಿನಕ್ಕೆ 2 ಸೆಷನ್ ನಂತೆ ವಾರಕ್ಕೆ 5 ದಿನ ಕ್ಲಾಸ್ ನಡೆಸಬಹುದು. ಇದಕ್ಕೆ ಪೋಷಕರ ಹಾಜರಿ ಕಡ್ಡಾಯವಲ್ಲ. ಇವರಿಗೆ ತರಗತಿ ಅವಧಿ ಗರಿಷ್ಠ 30 ನಿಮಿಷ. 6ರಿಂದ 10ನೇ ತರಗತಿಯವರಿಗೆ ದಿನಕ್ಕೆ 3 ಸೆಷನ್‍ನಂತೆ ವಾರಕ್ಕೆ 5 ದಿನ ತರಗತಿ ನಡೆಸಬಹುದು. ಇವರಿಗೂ ಪೋಷಕರ ಹಾಜರಿ ಕಡ್ಡಾಯವಲ್ಲ. ಒಂದು ಸೆಷನ್ ಅವಧಿ ಗರಿಷ್ಠ 30-45 ನಿಮಿಷವಾಗಿದೆ.

  • ದೀಪಾವಳಿ ಮಾರ್ಗಸೂಚಿ – ಈ 10 ನಿಯಮಗಳನ್ನು ಅಂಗಡಿಗಳು ಪಾಲಿಸಲೇಬೇಕು

    ದೀಪಾವಳಿ ಮಾರ್ಗಸೂಚಿ – ಈ 10 ನಿಯಮಗಳನ್ನು ಅಂಗಡಿಗಳು ಪಾಲಿಸಲೇಬೇಕು

    ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

    ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ.

    10 ನಿಯಮಗಳು
    1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು.
    2. ಪಟಾಕಿ ಮಾರಾಟದ ಮಳಿಗೆಗಳನ್ನು ನವೆಂಬರ್ 1ರಿಂದ 17ರವರೆಗೆ ಮಾತ್ರ ತೆರೆದಿರತಕ್ಕದ್ದು,
    3. ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆಯ/ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು.

    4. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ, ಪ್ರಾಧಿಕಾರಗಳ ಅನುಮತಿ ಅಗತ್ಯ.
    5. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
    6. ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆಯ/ಪ್ರಾಧಿಕಾರದಿಂದ ನೀಡುವ ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.

    7. ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಮಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಇರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.

    8. ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆ ಆಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು.
    9. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿ ಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ ಕಾರ್ಪೊರೇಷನ್/ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು,


    10. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತು/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪ ಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

  • ಶಾಲೆ ತೆರೆಯಲು ಅನುಮತಿ – ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

    ಶಾಲೆ ತೆರೆಯಲು ಅನುಮತಿ – ಕೇಂದ್ರದ ಮಾರ್ಗಸೂಚಿಯಲ್ಲಿ ಏನಿದೆ?

    ನವದೆಹಲಿ: ಅನ್‌ಲಾಕ್‌ 5ರ ಮಾರ್ಗಸೂಚಿಯಲ್ಲಿ ಅಕ್ಟೋಬರ್ 15ರ ನಂತರ ದೇಶದಲ್ಲಿ ಶಾಲೆಗಳನ್ನು ತೆರೆಯಬಹುದು ಎಂದು ಕೇಂದ್ರ ಸರ್ಕಾರ ಆರು ದಿನಗಳ ಹಿಂದೆಯೇ ಹೇಳಿತ್ತು. ಈಗ ಗೃಹ ಸಚಿವಾಲಯ ಶಾಲೆಗಳನ್ನು ತೆರೆಯಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

    ಪೋಷಕರ ಒಪ್ಪಿಗೆ ಮೇರೆಗೆ ಮಕ್ಕಳು ಶಾಲೆಗೆ ತೆರಳಬಹುದು. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಆನ್‍ಲೈನ್ ತರಗತಿಗಳನ್ನು ಆಯ್ಕೆಯಾಗಿ ಇಟ್ಟುಕೊಳ್ಳಬಹುದು ಎಂದು ತಿಳಿಸಿದೆ.

    ಮಾರ್ಗಸೂಚಿಯಲ್ಲಿ ಏನಿದೆ?
    ಶಾಲಾ ಕೊಠಡಿಗಳನ್ನು ನಿತ್ಯವೂ ಸ್ಯಾನಿಟೈಸ್ ಮಾಡುವುದು ಕಡ್ಡಾಯ. ಎಲ್ಲಾ ಸಂದರ್ಭಗಳಲ್ಲಿಯೂ ಮಕ್ಕಳು, ಶಿಕ್ಷಕರು, ಸಿಬ್ಬಂದಿ ಮಾಸ್ಕ್ ಧರಿಸಬೇಕು. ಶಿಕ್ಷಕರು, ಮಕ್ಕಳು ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯ.

    ತುರ್ತು ಅಗತ್ಯಕ್ಕೆ ಸ್ಪಂದಿಸಲು ಟಾಸ್ಕ್ ಟೀಂ ರಚಿಸಬೇಕು. ಕಾರ್ಯಕ್ರಮಗಳು, ಕ್ರೀಡೆಗಳನ್ನು ಆಯೋಜಿಸಬಾರದು. ಪಾಠ, ಪರೀಕ್ಷೆ, ರಜೆಗೆ ಸಂಬಂಧಿಸಿದಂತೆ ಬದಲಾದ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಅನುಸರಿಸಬೇಕು. ಮಧ್ಯಾಹ್ನದ ಬಿಸಿಯೂಟದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಪೌಷ್ಠಿಕಾಂಶ ಇರುವ ಆಹಾರ ನೀಡಬೇಕು.

  • ನಂದಿ ಗಿರಿಧಾಮದಲ್ಲಿ ಪ್ರವಾಸಿಗರ ದಂಡು- ಮಾಸ್ಕ್ ಧರಿಸದವರಿಗೆ ಬಿತ್ತು ದಂಡ

    ನಂದಿ ಗಿರಿಧಾಮದಲ್ಲಿ ಪ್ರವಾಸಿಗರ ದಂಡು- ಮಾಸ್ಕ್ ಧರಿಸದವರಿಗೆ ಬಿತ್ತು ದಂಡ

    – ವೀಕೆಂಡ್ ಮಸ್ತ್ ಮಜಾ, ಸುರಕ್ಷತಾ ಕ್ರಮ ಮರೆತರು
    – ಕಾರು, ಬೈಕ್ ಗಳಲ್ಲಿ ಪ್ರವಾಸಿಗರ ಲಗ್ಗೆ

    ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ಅನ್‍ಲಾಕ್ 4 ಮಾರ್ಗಸೂಚಿ ಪ್ರಕರಟಿಸಿದ್ದು, ಪ್ರವಾಸಿ ತಾಣಗಳು ಹಾಗೂ ಮೆಟ್ರೊ ರೈಲು ಸಂಚಾರಕ್ಕೂ ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆ ನಂದಿ ಗಿರಿಧಾಮವನ್ನು ಸಹ ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಪ್ರವಾಸಿಗರು ಸಹ ನಂದಿ ಗಿರಿಧಾಮದಲ್ಲಿ ವೀಕೆಂಡ್ ಮಜಾ ಮಾಡುತ್ತಿದ್ದಾರೆ. ಆದರೆ ಎಷ್ಟೇ ಎಚ್ಚರಿಕೆ, ಅರಿವು ಮೂಡಿಸಿದರೂ ಕೊರೊನಾ ನಿಯಮ ಪಾಲಿಸುತ್ತಿಲ್ಲ. ಹೀಗೆ ಮಾಸ್ಕ್ ಧರಿಸಿದೇ ಆಗಮಿಸಿದ ಪ್ರವಾಸಿಗರಿಗೆ ದಂಡ ವಿಧಿಸಿ ಬುದ್ಧಿ ಕಲಿಸಲಾಗಿದೆ.

    ಕೊರೊನಾ ಹಿನ್ನೆಲೆ ಆತಂಕದ ನಡುವೆ ನಂದಿ ಗಿರಿಧಾಮವನ್ನು ಇಂದು ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ. ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ನಾ ಮುಂದು ತಾ ಮುಂದು ಎಂದು ಪ್ರವಾಸಿಗರು ನಂದಿಬೆಟ್ಟಕ್ಕೆ ಲಗ್ಗೆಯಿಟ್ಟಿದ್ದಾರೆ. ಆದರೆ ಕೊರೊನಾ ನಿಯಮಗಳ ಪಾಲನೆಯನ್ನು ಮರೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಈ ರೀತಿ ಮಾಸ್ಕ್ ಧರಿಸದೆ ನಿರ್ಲಕ್ಷ್ಯ ವಹಿಸುವವರಿಗೆ ಬುದ್ಧಿ ಕಲಿಸಲಾಗುತ್ತಿದ್ದು, ದಂಡ ಹಾಕಲಾಗುತ್ತಿದೆ.

    ಇಂದು ಬೆಳಗ್ಗೆ 8ಕ್ಕೆ ನಂದಿ ಗಿರಿಧಾಮದ ಚೆಕ್‍ಪೋಸ್ಟ್ ತೆಗೆದಿದ್ದೇ ತಡ ಮುಂಜಾನೆಯಿಂದಲೇ ಕಾತರದಿಂದ ಕಾಯುತ್ತಿದ್ದ ಪ್ರವಾಸಿಗರು, ನಂದಿ ಬೆಟ್ಟಕ್ಕೆ ಲಗ್ಗೆಯಿಟ್ಟರು. ಕೊರೊನಾ ಹರಡುವಿಕೆ ಹಿನ್ನೆಲೆ ಮಾರ್ಚ್ 14 ರಿಂದ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಮಾಡಿತ್ತು. ಸುಮಾರು 5 ತಿಂಗಳ ನಂತರ ಇಂದಿನಿಂದ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

    ಇಂದು ಬೆಳ್ಳಂ ಬೆಳಗ್ಗೆ ನೂರಾರು ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿ ನಂದಿಗಿರಿಧಾಮದ ಪ್ರಾಕೃತಿಕ ಸೌಂದರ್ಯವನ್ನು ಸವಿದರು. ಜಿಲ್ಲಾಡಳಿತ ಮಾಸ್ಕ್ ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಕೊರೊನಾ ನಿಯಮ ಪಾಲನೆ ಕಡ್ಡಾಯ ಮಾಡಿದೆ. ಆದರೆ ಪ್ರವಾಸಿಗರು ಮಾತ್ರ ಯಾವುದಕ್ಕೂ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಮಾಸ್ಕ್ ಧರಿಸದವರಿಗೆ ತಲಾ 100 ರೂಪಾಯಿ ದಂಡ ವಿಧಿಸಿ ಬುದ್ಧಿ ಕಲಿಸಲಾಗುತ್ತಿದೆ. ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

  • ಪಾಠ ಇಲ್ಲ, 9 -12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಹೋಗಬಹುದು

    ಪಾಠ ಇಲ್ಲ, 9 -12ನೇ ತರಗತಿ ವಿದ್ಯಾರ್ಥಿಗಳು ಶಾಲೆಗೆ ಹೋಗಬಹುದು

    ನವದೆಹಲಿ: ಕೇಂದ್ರ ಸರ್ಕಾರದ ಹೊಸ ಅನ್‌ಲಾಕ್‌ 4 ಮಾರ್ಗಸೂಚಿಯಲ್ಲಿ ಶಾಲೆ ತೆರೆಯಲು ಅನುಮತಿ ನೀಡಿಲ್ಲ. ಆದರೆ ಪೋಷಕರ ಒಪ್ಪಿಗೆ ಪಡೆದು ಶಾಲೆಗೆ ತೆರಳಿ ಮಾರ್ಗದರ್ಶನ ಪಡೆಯಲು ಅನುಮತಿ ಸಿಕ್ಕಿದೆ.

    ಸೆಪ್ಟೆಂಬರ್‌ 21ರಿಂದ ಕಂಟೈನ್ಮೆಂಟ್ ಪ್ರದೇಶದ ಹೊರಗಡೆ ಇರುವ ಪ್ರದೇಶದಲ್ಲಿರುವ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಆನ್‌ಲೈನ್‌ ಕ್ಲಾಸ್‌ ವೇಳೆ ಶಾಲೆಗಳಿಗೆ ತೆರಳಿ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ಅನುಮತಿ ನೀಡಲಾಗಿದೆ. ಈ ರೀತಿ ಮಾರ್ಗದರ್ಶನ ಪಡೆಯಲು ಪೋಷಕರ ಅನುಮತಿ ಕಡ್ಡಾಯ ಎಂದು ಸೂಚಿಸಲಾಗಿದೆ.

    ಈ ವೇಳೆ ಶೇ.50ರಷ್ಟು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಆನ್‌ಲೈನ್‌ ತರಗತಿಗಾಗಿ ಶಾಲೆಗೆ ಬಂದು ಪಾಠ ಮಾಡಲು ಅವಕಾಶ ನೀಡಲಾಗಿದೆ. ಈ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕೆಂದು ಸೂಚಿಸಿದೆ. ಇದನ್ನೂ ಓದಿ: ಇನ್ನು ಮುಂದೆ ಸಮಾರಂಭಗಳಲ್ಲಿ 100 ಜನ ಭಾಗವಹಿಸಬಹುದು

    ಸೆ.21ರಿಂದ ಸ್ನಾತಕೋತ್ತರ ಮತ್ತು ಪಿಎಚ್‌ಡಿ ವಿದ್ಯಾರ್ಥಿಗಳು ಪ್ರಯೋಗಾಲಯ ಬಳಸಬಹುದು ಮತ್ತು ಶೈಕ್ಷಣಿಕ ಚಟುವಟಿಕೆ ಆರಂಭಿಸಬಹುದು ಎಂದು ಹೇಳಿದೆ.

    ಪರಿಸ್ಥಿತಿಯನ್ನು ನೋಡಿಕೊಂಡು ಉನ್ನತ ಶಿಕ್ಷಣ ಇಲಾಖೆ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಅನುಮತಿ ನೀಡಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

  • ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ – ಷರತ್ತುಗಳು ಅನ್ವಯ

    ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ – ಷರತ್ತುಗಳು ಅನ್ವಯ

    ಬೆಂಗಳೂರು: ಕರ್ನಾಟಕ ಸರ್ಕಾರ ಗಣೇಶೋತ್ಸವ ಆಚರಿಸುವ ಸಂಬಂಧ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

    ಆಗಸ್ಟ್ 14 ರಂದು ಬಿಡುಗಡೆ ಮಾಡಿದ್ದ ಮಾರ್ಗಸೂಚಿಯಲ್ಲಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿರಲಿಲ್ಲ. ಆದರೆ ಈಗ ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅನುಮತಿಯನ್ನು ನೀಡಲಾಗಿದೆ.

    ಬದಲಾದ ಮಾರ್ಗಸೂಚಿಯಲ್ಲಿ ಏನಿದೆ?
    1. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
    2. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
    3. ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮಿತಿಗಳು/ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್/ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ/ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲು ಪ್ರೋತ್ಸಾಹಿಸುವುದು.
    4. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.

    5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
    6. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸತಕ್ಕದ್ದಲ್ಲ/ ಮಾಡತಕ್ಕದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
    7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು. ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ಜಿಲ್ಲಾಡಳಿತ/ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕರ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸುವುದು.

    ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, “ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ. ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಿ” ಎಂದು ವಿನಯಪೂರ್ವಕವಾಗಿ ವಿನಂತಿ ಮಾಡಿದ್ದಾರೆ.

  • ನಿಗದಿಯಂತೆ ಕೆಪಿಎಸ್‍ಸಿ ಪರೀಕ್ಷೆ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ನಿಗದಿಯಂತೆ ಕೆಪಿಎಸ್‍ಸಿ ಪರೀಕ್ಷೆ – ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕೆಲ ಸ್ಪರ್ಧಾತ್ಮಕ ಪರೀಕ್ಷೆಗಳು ಮುಂದೂಡಿಕೆಯಾಗಿದ್ದವು. ಆದರೆ ನಿಗದಿಯಂತೆ ಕೆಪಿಎಸ್‍ಸಿ ಪರೀಕ್ಷೆ ನಡೆಯಲಿದೆ.

    ಕೆಪಿಎಸ್‍ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟನೆ ನೀಡಿದೆ. ಆದ್ದರಿಂದ ಕೆಪಿಎಸ್‍ಸಿ ಪರೀಕ್ಷೆ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

    ಜೊತೆಗೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮಾರ್ಗಸೂಚಿ ಫಾಲೋ ಮಾಡಲು ಸೂಚನೆ ನೀಡಿದೆ. ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ, ಸಿಇಟಿ ಮಾರ್ಗಸೂಚಿಗಳನ್ನೆ ಕೆಪಿಎಸ್‍ಸಿ ಪರೀಕ್ಷೆಗೂ ಮುಂದುವರಿಕೆ ಮಾಡಿದೆ. ಬಹುತೇಕ ಅದೇ ಮಾರ್ಗಸೂಚಿಯನ್ನು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ.

    ಕೆಪಿಎಸ್‍ಸಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ
    * ಪರೀಕ್ಷೆಗೆ 3 ದಿನ ಮುಂಚೆ ಕಡ್ಡಾಯವಾಗಿ ಕೊಠಡಿ ಸ್ಯಾನಿಟೈಸ್ ಮಾಡಬೇಕು
    * ಪ್ರತಿ ವಿದ್ಯಾರ್ಥಿಗಳು ಎರಡು ಗಂಟೆ ಮುಂಚೆ ಬಂದು ಪರೀಕ್ಷಾ ಕೇಂದ್ರದಲ್ಲಿ ತಮಗೆ ನೀಡಿದ ಕೊಠಡಿಯಲ್ಲಿ ಆಸೀನರಾಗಬೇಕು
    * ಪ್ರತಿ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ
    * ಪರೀಕ್ಷೆಗೆ ಆಗಮಿಸೋವಾಗ, ಪರೀಕ್ಷೆ ಮುಗಿಸಿ ತೆರಳುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
    * ಪ್ರತಿ ಕೊಠಡಿಗೆ 24 ಅಭ್ಯರ್ಥಿಗಳು ಮಾತ್ರ  ಕೂರಿಸಬೇಕು

    * ಕೊಠಡಿಯಲ್ಲಿ ಅಭ್ಯರ್ಥಿಗಳ ಮಧ್ಯೆ ಸಾಮಾಜಿಕ ಅಂತರ ನಿಯಮ ಫಾಲೋ ಮಾಡಬೇಕು (ಕನಿಷ್ಠ 3 ಅಡಿ)
    * ಕಂಟೈನ್ಮೆಂಟ್ ವಲಯದಿಂದ ಬರೋ ಅಭ್ಯರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಬೇಕು
    * ಪರೀಕ್ಷಾ ಕೆಲಸಕ್ಕೆ ಹಾಜರಾಗೋ ಸಿಬ್ಬಂದಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಬಾರದು
    * ಅನ್ಯ ಕಾಯಿಲೆ ಇರೋ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ವ್ಯವಸ್ಥೆ ಮಾಡಬೇಕು
    * ಪರೀಕ್ಷೆ ಮುಗಿದ ಬಳಿಕ ಕೊಠಡಿ, ಡೆಸ್ಕ್, ಟೇಬಲ್ ಗಳನ್ನ ಸ್ಯಾನಿಟೈಸ್ ಮಾಡಬೇಕು
    * ಪರೀಕ್ಷಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
    * ಪ್ರತಿ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ಇರುವಂತೆ ನೋಡಿಕೊಳ್ಳಬೇಕು
    * ಪರೀಕ್ಷಾ ಕೇಂದ್ರದ ಶೌಚಾಯಲ ಶುಚಿತ್ವದಿಂದ ಇರುವಂತೆ ನೋಡಿಕೊಳ್ಳಬೇಕು
    * ಕೊರೊನಾ ಸೋಂಕು ಇರೋ ಅಭ್ಯರ್ಥಿಗಳಿಗೆ ವಿಶೇಷ ಸ್ಥಳದಲ್ಲಿ, ವಿಶೇಷ ಕೊಠಡಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆಗೆ ವ್ಯವಸ್ಥೆ ಮಾಡಬೇಕು.

  • ಅನ್‌ಲಾಕ್‌ ಮಾರ್ಗಸೂಚಿ ಪ್ರಕಟ – ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ

    ಅನ್‌ಲಾಕ್‌ ಮಾರ್ಗಸೂಚಿ ಪ್ರಕಟ – ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ

    ಬೆಂಗಳೂರು: ರಾಜ್ಯಾದ್ಯಂತ  ಲಾಕ್‌ಡೌನ್‌ ತೆರವಾಗುವುದರ ಜೊತೆಗೆ ರಾತ್ರಿಯ ಕರ್ಪ್ಯೂ ಅವಧಿಯನ್ನು ಸರ್ಕಾರ ಇಳಿಕೆ ಮಾಡಿದೆ.

    ಮಂಗಳವಾರ ರಾತ್ರಿ ಹೊಸ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವೆರೆಗೆ ನೈಟ್‌ ಕರ್ಫ್ಯೂ ಇರಲಿದೆ. ಈ ಮೊದಲು ರಾತ್ರಿ 8 ಗಂಟೆಯಿಂದ ನೈಟ್‌ ಕರ್ಫ್ಯೂ ಆರಂಭವಾಗುತ್ತಿತ್ತು.

    ಅನ್‌ಲಾಕ್ 2 ರ ಮಾರ್ಗಸೂಚಿಗಳ ಪೈಕಿ ಕೆಲ ಅಂಶಗಳನ್ನು ಬದಲಾವಣೆಗೊಳಿಸಿ ಸರ್ಕಾರ ಈಗ ಜಾರಿ ಮಾಡಲು ಮುಂದಾಗುತ್ತಿದೆ.

    ಮಾರ್ಗಸೂಚಿಯಲ್ಲಿ ಏನಿದೆ?
    – ಮೊದಲು ಇದ್ದಂತೆ ಭಾನುವಾರದ ಕರ್ಫ್ಯೂ ಮುಂದುವರಿಯಲಿದೆ.
    – ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 5 ರಿಂದ ರಾತ್ರಿ 9 ರವರೆಗೆ ತೆರೆಯಬಹುದು.
    – ಜನಸಂದಣಿಯನ್ನು ತಡೆಗಟ್ಟಲು ಬೆಂಗಳೂರು ಸೇರಿ ಎಲ್ಲ ಜಿಲ್ಲೆ, ತಾಲೂಕುಗಳಲ್ಲಿರುವ ‌ತರಕಾರಿ ಮಾರುಕಟ್ಟೆಗಳು ಸ್ಥಳಾಂತರ ಮಾಡಬೇಕು.
    – ಎಪಿಎಂಸಿಗಳಿಗೆ ಅಥವಾ ವಿಶಾಲ ಜಾಗಗಳಿಗೆ ತರಕಾರಿ ಮಾರುಕಟ್ಟೆಗಳು ಶಿಫ್ಟ್‌ ಆಗಲಿದೆ.

    – ಪಾರ್ಕ್ ಗಳಲ್ಲಿ ವಾಕ್ ಮಾಡಬಹುದು ಆದರೆ ಕಲ್ಲಿನ ಬೆಂಚ್‌ಗಳ ಮೇಲೆ ಕುಳಿತುಕೊಳ್ಳುವಂತಿಲ್ಲ.
    – ಉದ್ಯಾನನವಗಳಲ್ಲಿ ಜಿಮ್ ಸಲಕರಣೆಗಳನ್ನು ಬಳಸಿ ವ್ಯಾಯಾಮಕ್ಕೆ ನಿಷೇಧ ಹೇರಲಾಗಿದೆ.
    – ಕಂಟೈನ್ಮೆಂಟ್ ವಲಯಗಳಲ್ಲಿ ಎಲ್ಲ ಚಟುವಟಿಕೆಗಳಿಗೂ ನಿರ್ಬಂಧ ಮುಂದುವರಿಕೆ.
    – ಜುಲೈ 31ರವರೆಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.

     

  • ಎರಡೂವರೆ ತಿಂಗಳ ನಂತರ ಹೋಟೆಲ್ ಓಪನ್ – ಮಾರ್ಗಸೂಚಿಗಳೇನು?

    ಎರಡೂವರೆ ತಿಂಗಳ ನಂತರ ಹೋಟೆಲ್ ಓಪನ್ – ಮಾರ್ಗಸೂಚಿಗಳೇನು?

    ಬೆಂಗಳೂರು: ಕೊರೊನಾ ವೈರಸ್ ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ.

    ಕೊರೊನಾ ಭೀತಿಯಿಂದ ಹೋಟೆಲ್‍ಗಳು ಮುಚ್ಚಿದ್ದವು. ಆದರೆ ಇದರ ನಡುವೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ಹಂತ ಹಂತವಾಗಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡುತ್ತಿದ್ದು, ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜೊತೆಗೆ ಕೆಲ ಮಾರ್ಗ ಸೂಚಿಯನ್ನು ಸೂಚಿಸಲಾಗಿದೆ.

    ಮಾರ್ಗಸೂಚಿ ಏನು?
    ಹೋಟೆಲ್‍ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು ಹಾಗೂ ಹೋಟೆಲ್‍ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳವುದು ಕಡ್ಡಾಯವಾಗಿರುತ್ತದೆ. ಪ್ರತ್ಯೇಕ ಆಗಮನ ಮತ್ತು ನಿರ್ಗಮನ ಇರಬೇಕು. ಹೋಟೆಲ್ ರಿಸೆಪ್ಷನ್‍ನಲ್ಲಿ ಗೆಸ್ಟ್‍ಗಳು ಐ.ಡಿ. ಕಾರ್ಡ್, ಟ್ರಾವೆಲ್ ಹಿಸ್ಟರಿಯನ್ನು ಕಡ್ಡಾಯವಾಗಿ ನೀಡಬೇಕು. ಸಂಪರ್ಕ ರಹಿತ ಪ್ರಕ್ರಿಯೆ ಅಂದರೆ ಕ್ಯೂ ಆರ್ ಕೋಡ್ ಅನ್ನು ಹೋಟೆಲ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

    ಅತಿಥಿಗಳ ಲಗೇಜ್‍ಗೆ ಕ್ರಿಮಿನಾಶಕ ಸಿಂಪಡಿಸಬೇಕು. ಹೋಟೆಲ್ ಅತಿಥಿಗಳು ಕಂಟೈನ್ಮೆಂಟ್ ಝೋನ್‍ಗೆ ಭೇಟಿ ನೀಡಬಾರದು. ರೆಸ್ಟೋರೆಂಟ್‍ನಲ್ಲಿ ಸಾಮಾಜಿಕ ಅಂತರ ಕಾಪಾಡುವ ರೀತಿ ಸೀಟುಗಳನ್ನು ವ್ಯವಸ್ಥೆ ಮಾಡಿರಬೇಕು. ಡಿಜಿಟಲ್ ಪೇಮೆಂಟ್‍ಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಫೆಟ್ ವ್ಯವಸ್ಥೆಯಲ್ಲಿ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಹೋಟೆಲ್‍ಗಳಿಗೆ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.