Tag: ಮಾರ್ಯಾದೆ ಹತ್ಯೆ

  • ಬೇರೆ ಧರ್ಮದ ಯುವಕನ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ – ಮರ್ಯಾದಾ ಹತ್ಯೆ ಶಂಕೆ

    ಬೇರೆ ಧರ್ಮದ ಯುವಕನ ಮದುವೆಯಾಗಿದ್ದ ಯುವತಿ ಶವವಾಗಿ ಪತ್ತೆ – ಮರ್ಯಾದಾ ಹತ್ಯೆ ಶಂಕೆ

    ಹೈದರಾಬಾದ್: ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ನಾಗಲ್ ಕೊಂಡ ಗ್ರಾಮದ ತನ್ನ ಮನೆಯಲ್ಲಿ 21 ವರ್ಷದ ಯುವತಿ ಶವವಾಗಿ ಪತ್ತೆಯಾಗಿದ್ದು, ಇದನ್ನು ಮರ್ಯಾದಾ ಹತ್ಯೆ ಎಂದು ಶಂಕಿಸಲಾಗಿದೆ.

    ಅನ್ಯಧರ್ಮದ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಯುವತಿ ಎರಡು ತಿಂಗಳ ಹಿಂದೆ ಓಡಿ ಹೋಗಿ ಮದುವೆಯಾಗಿ ಮಹಾರಾಷ್ಟ್ರದಲ್ಲಿ ನೆಲೆಸಿದ್ದಳು. ಆದರೆ ಯುವತಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಆಕೆಯನ್ನು ಪತ್ತೆ ಹಚ್ಚಿ ತೆಲಂಗಾಣಕ್ಕೆ ಪೊಲೀಸರು ಕರೆತಂದಿದ್ದರು.

    CRIME 2

    ಶುಕ್ರವಾರ ಯುವತಿ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆಕೆಯ ಕುತ್ತಿಗೆ ಮೇಲೆ ಅನೇಕ ಗಾಯಗಳಾಗಿದೆ. ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲೇ ಅತೀ ವೇಗದ ಚಾರ್ಜಿಂಗ್ ಬ್ಯಾಟರಿ – ಬೆಂಗಳೂರು ಸ್ಟಾರ್ಟ್ಅಪ್ ಸಂಶೋಧನೆ

    MARRIAGE

    ಬೇರೆ ಧರ್ಮದ ಹುಡುಗನೊಂದಿಗೆ ಓಡಿಹೋಗಿದ್ದಕ್ಕಾಗಿ ಆಕೆಯ ತಂದೆ ಯುವತಿಯನ್ನು ಕೊಂದಿರಬಹುದು ಎಂಬ ಅನುಮಾನ ಬಂದಿದೆ. ಆ ಸಮಯದಲ್ಲಿ ಕುಟುಂಬದವರು ಕೌನ್ಸಲಿಂಗ್ ಬಳಿಕ ಯುವತಿಯನ್ನು ವಾಪಸ್ ಕರೆತಂದಿದ್ದರು. ಆದರೆ ಆಕೆಯ ತಂದೆ ಈ ವಿಚಾರವಾಗಿ ಬೇಸರಗೊಂಡಿದ್ದರು ಎಂದು ಆದಿಲಾಬಾದ್‍ನ ಪೊಲೀಸ್ ವರಿಷ್ಠಾಧಿಕಾರಿ ಉದಯ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

    ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಆಡಳಿತ ಮಂಡಳಿ ಎಚ್ಚರಿಕೆಗೆ ಡೋಂಟ್‍ಕೇರ್- ಹಿಜಬ್ ಧರಿಸಿ ಬಂದ 15 ವಿದ್ಯಾರ್ಥಿನಿಯರು!

  • ಮರ್ಯಾದಾ ಹತ್ಯೆ: 13 ವರ್ಷದ ಹಿಂದೆ ಮದ್ವೆಯಾದ ದಂಪತಿಯನ್ನು ಕೊಂದೇ ಬಿಟ್ಟ!

    ಮರ್ಯಾದಾ ಹತ್ಯೆ: 13 ವರ್ಷದ ಹಿಂದೆ ಮದ್ವೆಯಾದ ದಂಪತಿಯನ್ನು ಕೊಂದೇ ಬಿಟ್ಟ!

    ಗದಗ: ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದ್ದು, ಮಹಿಳೆಯ ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿರಹಟ್ಟಿ ತಾಲೂಕಿನ ಬಸಾಪುರದಲ್ಲಿ ನಡೆದಿದೆ.

    ಅಶ್ರಫ್ ಅಲಿ ದೊಡ್ಡಮ್ಮನಿ(45), ಸೋಮವ್ವ (38) ಮೃತ ದುರ್ದೈವಿಗಳು. ಕಳೆದ 13 ವರ್ಷದ ಹಿಂದೆ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. 13 ವರ್ಷದ ನಂತರ ಮಹಿಳೆ ಪಾಲಕರನ್ನ ನೋಡಲು ತವರಿಗೆ ಬಂದಿದ್ದರು. ಈ ವೇಳೆ ಮಹಿಳೆಯ ಸಹೋದರ ದೇವಪ್ಪ ಹೊಟ್ಟಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಶಿರಹಟ್ಟಿ ಪೊಲೀಸರಿಗೆ ಶರಣಾಗತಿಯಾಗಿದ್ದಾನೆ. ಇದನ್ನು ಓದಿ: ಮರ್ಯಾದಾ ಹತ್ಯೆ: ಗರ್ಭಿಣಿ ಪತ್ನಿಯ ಎದುರೇ ಪತಿಯ ತಲೆಗೆ ಮಚ್ಚಿನಿಂದ ಏಟು

    ಇದೇ ತಿಂಗಳು ಹೈದಾರಾಬಾದ್‍ನಲ್ಲಿ ಮರ್ಯಾದೆ ಹತ್ಯೆ ನಡೆದಿತ್ತು. ಪ್ರಣಯ್ ಕುಮಾರ್ ಹಾಗೂ ಅಮೃತ ಎಂಬವರು 8 ತಿಂಗಳ ಹಿಂದೆ ಪ್ರೀತಿಸಿದ್ದ ಅವರಿಬ್ಬರು ಮದುವೆ ಮಾಡಿಕೊಂಡಿದ್ದರು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಸೆಪ್ಟೆಂಬರ್ 15 ರಂದು ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv