Tag: ಮಾಲೀಕ

  • ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆಗೈದ ಆರೋಪಿ ಅರೆಸ್ಟ್

    ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆಗೈದ ಆರೋಪಿ ಅರೆಸ್ಟ್

    ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮಾಲೀಕನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಹಾಗೂ ಆತನಿಗೆ ಸಾಥ್ ನೀಡಿದ್ದವನನ್ನು ಬೇಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬೊಮ್ಮನಹಳ್ಳಿಯ ರೌಡಿಶೀಟರ್ ಮದನ್ ಹಾಗೂ ಕಿರಣ್ ಬಂಧಿತ ಆರೋಪಿಗಳು. ಆನಂದ್ ಹಲ್ಲೆಗೊಳಗಾದ ಮಾಲೀಕ. ಹಲ್ಲೆ ಮಾಡಿದ ಬಳಿಕ ಮದನ್ ಹಾಗೂ ಕಿರಣ್ ಪಾಂಡಿಚೇರಿಗೆ ಪರಾರಿಯಾಗಿದ್ದರು. ಆರೋಪಿಗಳು ಇರುವ ಜಾಗವನ್ನು ಪತ್ತೆ ಹಚ್ಚಿದ ಪೊಲೀಸರು ಅಲ್ಲಿಯೇ ಅವರನ್ನು ಬಂಧಿಸಿ ಕರೆತಂದಿದ್ದಾರೆ.

    ಆಗಿದ್ದೇನು?:
    ಬೇಗೂರಿನ ಗಾರ್ವೆಬಾವಿಪಾಳ್ಯದಲ್ಲಿ ಆನಂದ್ ಕಳೆದ 15 ವರ್ಷಗಳಿಂದ ತಿರುಮಲ ವಾಟರ್ ಫ್ಯಾಕ್ಟರಿ ನಡೆಸುತ್ತಿದ್ದಾರೆ. ಅವರ ಕೈ ಕೆಳಗೆ ಸುಮಾರು 40 ಮಂದಿ ಕೆಲಸ ಮಾಡುತ್ತಿದ್ದಾರೆ. ಮದನ್ ತಾನು ರೌಡಿಶೀಟರ್ ಎಂದು ತಿಳಿಸದೆ ಆನಂದ್ ಬಳಿ ಕೆಲಸ ಕೇಳಿಕೊಂಡು ಬಂದಿದ್ದ. ಆತನ ಪರಿಸ್ಥಿತಿ ಅರಿತ ಆನಂದ್ ತನ್ನ ಕಾರು ಚಾಲಕನಾಗಿ ಕೆಲಸ ಮಾಡುವಂತೆ ತಿಳಿಸಿದ್ದ.

    ಮದನ್ ಕೆಲಸಕ್ಕೆ ಸೇರಿದ ಕೆಲವು ದಿನಗಳ ಬಳಿಕ ಹೆಣ್ಣಮಕ್ಕಳನ್ನು ಚುಡಾಯಿಸುವುದು, ಫ್ಯಾಕ್ಟರಿಯಲ್ಲೇ ಗಾಂಜಾ ಸೇದುತ್ತಿದ್ದ. ಈ ವಿಚಾರವಾಗಿ ಮಾಲೀಕ ಆನಂದ್‍ಗೆ ತಿಳಿದಿದ್ದರಿಂದ ವೇತನ ನೀಡಿ ಮದನ್‍ನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದ ಕೋಪಗೊಂಡ ಮದನ್ ಸಹಚರರೊಂದಿಗೆ ಲಾಂಗ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಆನಂದ್ ಮೇಲೆ ಜನವರಿ 30ರಂದು ಹಲ್ಲೆ ಮಾಡಿದ್ದ. ಅಷ್ಟೇ ಅಲ್ಲದೆ ವಾಟರ್ ಫ್ಯಾಕ್ಟರಿಯಲ್ಲಿದ್ದ ವಸ್ತುಗಳನ್ನು ಒಡೆದು, ಆನಂದ್‍ಗೆ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಮದನ್ ಹಾಗೂ ಆತನ ಸಹಚರರ ಕೃತ್ಯ ಸೆರೆಯಾಗಿತ್ತು.

    ಈ ಕುರಿತು ಆನಂದ್ ಬೇಗೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಚ್ಚಲು ಬಂದ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಕೊಂದೇ ಬಿಟ್ಟ ಮಾಲೀಕ..!

    ಕಚ್ಚಲು ಬಂದ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಕೊಂದೇ ಬಿಟ್ಟ ಮಾಲೀಕ..!

    ನವದೆಹಲಿ: ತನ್ನ ಮನೆಯ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ವ್ಯಕ್ತಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಲೆಗೈದ ಅಮಾನವೀಯ ಘಟನೆಯೊಂದು ನವದೆಹಲಿಯಲ್ಲಿ ನಡೆದಿದೆ.

    ಮೃತ ದುರ್ದೈವಿ ವ್ಯಕ್ತಿಯನ್ನು ಅಫಾಖ್(30) ಎಂದು ಗುರುತಿಸಲಾಗಿದೆ. ಈ ಘಟನೆ ಉತ್ತರ ದೆಹಲಿಯ ವೆಲ್‍ಕಮ್ ಕಾಲೊನಿಯಲ್ಲಿ ನಡೆದಿದೆ.

    ಘಟನೆ ವಿವರ:
    ಅಫಾಖ್ ವೆಲ್ ಕಮ್ ಕಾಲೋನಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅವರನ್ನು ನೋಡಿ ನಾಯಿಯೊಂದು ಜೋರಾಗಿ ಬೊಗಳಿದೆ. ಅಲ್ಲದೇ ಕಚ್ಚಲು ಕೂಡ ಪ್ರಯತ್ನಿಸುತ್ತಿತ್ತು. ಇದರಿಂದ ಭಯಗೊಂಡ ಅಫಶಖ್ ತನ್ನ ರಕ್ಷಣೆಗಾಗಿ ಅಲ್ಲೇ ಇದ್ದ ಕಲ್ಲನ್ನು ಎತ್ತಿ ನಾಯಿ ಕಡೆ ಎಸದಿದ್ದಾರೆ. ಇವೆಲ್ಲವನ್ನು ಮನೆಯೊಳಗಿಂದ ಮಾಲೀಕ ಮೆಹ್ತಾಬ್ ಗಮನಿಸಿದ್ದಾನೆ.

                                            ಸಾಂದರ್ಭಿಕ ಚಿತ್ರ

    ತನ್ನ ಮನೆಯ ನಾಯಿಗೆ ಕಲ್ಲು ಹೊಡೆದಿದ್ದರಿಂದ ಸಿಟ್ಟುಗೊಂಡ ಮೆಹ್ತಾಬ್ ಮನೆಯೊಳಗಿಂದ ಪಿಸ್ತೂಲ್ ತಂದು ನೇರವಾಗಿ ಅಫಾಖ್ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ಅತುಲ್ ಥಾಕೂರ್ ವಿವರಿಸಿದ್ದಾರೆ.

    ಈ ಮೊದಲು ಅಫಾಖ್ ಮತ್ತು ಮೆಹ್ತಾಬ್ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ. ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಅಫ್ತಾಖ್ ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದ್ರೆ ಅದಾಗಲೇ ಅಫ್ತಾಖ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನೆಯ ಬಳಿಕ ಮಾಲೀಕ ಮೆಹ್ತಾಬ್ ಸ್ಥಳದಿಂದ ಕಾಲ್ಕಿತ್ತಿದ್ದು, ಸದ್ಯ ಪೊಲೀಸರ ಆತನ ಪತ್ತೆಗೆ ಬಲೆ ಬೀಸಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ನಾಯಿ ಮರಿಯ ವಿಚಾರವಾಗಿಯೇ ನಾಲ್ವರು ದುಷ್ಕರ್ಮಿಗಳು ಇಬ್ಬರು ಹುಡುಗರ ಮೇಲೆ ಕೋಲಿನಿಂದ ಹಿಗ್ಗಾಮುಗ್ಗವಾಗಿ ಥಳಿಸಿದ ಘಟನೆ ಗುರುಗ್ರಾಮದಲ್ಲಿ ನಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಫಿ ಶಾಪ್ ಮಾಲೀಕ ಅಂದರ್ – ಜನ್ರಿಗೆ ವಂಚಿಸಿ ಬರೋಬ್ಬರಿ 100 ಕೋಟಿ ಆಸ್ತಿ ಮಾಡ್ದ!

    ಕಾಫಿ ಶಾಪ್ ಮಾಲೀಕ ಅಂದರ್ – ಜನ್ರಿಗೆ ವಂಚಿಸಿ ಬರೋಬ್ಬರಿ 100 ಕೋಟಿ ಆಸ್ತಿ ಮಾಡ್ದ!

    ಬೆಂಗಳೂರು: ಪ್ರತಿಷ್ಠಿತ ಕಲ್ಮನೆ ಕಾಫಿ ಶಾಪ್ ಗಳ ಮಾಲೀಕ, ಜೊತೆಗೆ ನೂರಾರು ಕೋಟಿ ಆಸ್ತಿಯ ಒಡೆಯ. ಆದರೆ ಇಷ್ಟೆಲ್ಲಾ ಆಸ್ತಿಯನ್ನ ಈತ ಜನರಿಗೆ ವಂಚಿಸಿ ಮಾಡಿದ್ದಾನೆ.

    ಅವಿನಾಶ್ ಪ್ರಭು ಜನರಿಗೆ ವಂಚಿಸಿದ ಉದ್ಯಮಿ. ಬೆಂಗಳೂರು ನಗರದಲ್ಲೇ ಈತನ 11 ಕಾಫಿ ಶಾಪ್ ಗಳಿವೆ. ಇದ್ಯಾವುದನ್ನು ಆತ ಸಂಪಾದನೆ ಮಾಡಿಲ್ಲ. ಅರ್ಧಂಬರ್ಧ ಫ್ಲ್ಯಾಟ್ ಗಳನ್ನ ಕಟ್ಟಿ ಜನರಿಂದ ನೂರಾರು ಕೋಟಿ ಆಸ್ತಿ ಮಾಡಿದ್ದಾನೆ.

    ಬೆಂಗಳೂರಿನ ವಿವಿಧೆಡೆ ಸ್ಕೈ ಲೈನ್ ಔರಾ, ಸ್ಕೈ ಲೈನ್ ರಿಟ್ರೀಟ್, ಸ್ಕೈ ಲೈನ್ ಅಕೇಶಿಯಾ ಸೇರಿದಂತೆ ಹಲವಾರು ಪ್ರಾಜೆಕ್ಟ್ ಗಳ ಹೆಸರಲ್ಲಿ ವಂಚಿಸಿದ್ದಾನೆ. ಫ್ಲ್ಯಾಟ್ ಗಳನ್ನು ಕೇವಲ 10% ಅಷ್ಟು ಕಟ್ಟಿ ಜನರಿಂದ 90% ಹಣ ವಸೂಲಿ ಮಾಡಿದ್ದಾನೆ ಎಂದು ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹೇಳಿದ್ದಾರೆ.

    200 ಜನರಿಗೆ ಸುಮಾರು ನೂರು ಕೋಟಿಯಷ್ಟು ಹಣ ವಂಚಿಸಿದ್ದಾನೆ. ಈತನ ಲ್ಯಾವೆಲ್ಲೆ ರಸ್ತೆಯ ಮನೆ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಖತರ್ನಾಕ್ ವಂಚಕ ಅವಿನಾಶ್ ಪ್ರಭುವನ್ನ ಅರೆಸ್ಟ್ ಮಾಡಿದ್ದಾರೆ. ಜನರ ದುಡ್ಡಲ್ಲಿ ತುಂಬಾ ಆಸ್ತಿ ಮಾಡಿದ್ದಾನೆ.

    14 ಬ್ಯಾಂಕ್ ಗಳಲ್ಲಿ ಬ್ಯಾಲೆನ್ಸ್, ಅಲ್ಲದೇ ಕೆಂಗೇರಿಯಲ್ಲಿ 5 ಎಕರೆ ಜಮೀನು, ಅಲ್ಲಾಳಸಂದ್ರದಲ್ಲಿ 3 ಎಕರೆ ಜಮೀನು, ಹೆಣ್ಣೂರಿನಲ್ಲಿ ಮೂರು ಎಕರೆ, ಕನಕಪುರ ಬಳಿ 7 ಎಕರೆ, ಮಂಗಳೂರಿನಲ್ಲಿ 8.5 ಎಕರೆ, ಚೆನ್ನೈನ ಮಾಣಿಕ್ಯ ರಸ್ತೆಯಲ್ಲಿ ಅರ್ಧ ಎಕರೆ ಜಮೀನು ಮಾಡಿದ್ದಾನೆ. ಸದ್ಯ ಈತನ ಮನೆಯಲ್ಲಿದ್ದ ರೇಂಜ್ ರೋವರ್ ಮತ್ತು ಆಡಿ ಕಾರ್ ಸಮೇತ ಎಲ್ಲವನ್ನೂ ಸೀಜ್ ಮಾಡಿದ್ದಾರೆ ಸಿಸಿಬಿ ಪೊಲೀಸರು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಂಬಿಕಾ ಮನೆ ಬಾಡಿಗೆಯಲ್ಲೂ ಮಧ್ಯಸ್ಥಿಕೆ ವಹಿಸಿದ್ದ ಇಮ್ಮಡಿ ಮಹದೇವ ಸ್ವಾಮೀಜಿ

    ಅಂಬಿಕಾ ಮನೆ ಬಾಡಿಗೆಯಲ್ಲೂ ಮಧ್ಯಸ್ಥಿಕೆ ವಹಿಸಿದ್ದ ಇಮ್ಮಡಿ ಮಹದೇವ ಸ್ವಾಮೀಜಿ

    ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯ ವಿಷ ಪ್ರಸಾದ ಪ್ರಕರಣದ ಎ2 ಆರೋಪಿ ಅಂಬಿಕಾ ನಾಲ್ಕು ವರ್ಷದಿಂದ ಮನೆಯ ಬಾಡಿಗೆಯನ್ನ ಕಟ್ಟದ ಮನೆಯ ಮಾಲೀಕನಿಗೂ ವಂಚನೆ ಮಾಡಿದ್ದಾಳೆ.

    ಮಾರ್ಟಳ್ಳಿ ಗ್ರಾಮದಲ್ಲಿರುವ ಗೋವಿಂದ ಎಂಬವರ ಮನೆಯನ್ನ ಅಂಬಿಕಾ ಬಾಡಿಗೆ ಪಡೆದುಕೊಂಡಿದ್ದಳು. ಪ್ರಕರಣದ ಎ1 ಆರೋಪಿ ಇಮ್ಮಡಿ ಮಹದೇವ ಸ್ವಾಮೀಜಿಯ ಮಧ್ಯಸ್ಥಿಕೆಯಲ್ಲಿ ಬಾಡಿಗೆ ಪಡೆದಿದ್ದಳು. ಆದರೆ ಸುಮಾರು ನಾಲ್ಕು ವರ್ಷದಿಂದ ಮನೆ ಬಾಡಿಗೆ ಕೊಡದೆ ಮಾಲೀಕರಿಗೆ ವಂಚನೆ ಮಾಡಿದ್ದಾಳೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಮನೆ ಮಾಲೀಕ, ಮೊದಲಿಗೆ 1 ಲಕ್ಷ ಹಣ ಅಡ್ವಾನ್ಸ್ ನೀಡಿದ್ದಾಳೆ. ನಾವು ಪ್ರತಿ ತಿಂಗಳು 1 ಸಾವಿರ ಮನೆಯ ಬಾಡಿಗೆ ಕೇಳಿದೆ. ಆದರೆ ಅವರು 1 ಸಾವಿರ ಬಾಡಿಗೆ ನೀಡಲು ಸಾಧ್ಯವಿಲ್ಲ, 500 ರೂಪಾಯಿ ಕೊಡುತ್ತೇನೆ ಎಂದು ಇಮ್ಮಡಿ ಮಹದೇವ ಸ್ವಾಮೀಜಿ ಹೇಳಿದ್ದರು. ನಾನು 500 ರೂಪಾಯಿ ಆಗುವುದಿಲ್ಲ 1 ಸಾವಿರ ಬಾಡಿಗೆ ಕೊಡಬೇಕು ಎಂದಿದ್ದೆ. ಕೊನೆಗೆ ನನ್ನ ಷರತ್ತಿಗೆ ಒಪ್ಪಿ ಇಮ್ಮಡಿ ಮಹದೇವಸ್ವಾಮೀಜಿ ಮನೆ ಬಾಡಿಗೆ ಕೊಡಿಸಿದ್ದರು ಎಂದು ಹೇಳಿದ್ದಾರೆ.

    ಇದಾದ ಬಳಿಕ ನಾಲ್ಕು ವರ್ಷಗಳ ಕಾಲ ಅಂಬಿಕಾ ಮನೆಯ ಬಾಡಿಗೆ ನೀಡಲಿಲ್ಲ. ಇಮ್ಮಡಿ ಮಹದೇವಸ್ವಾಮೀಜಿಯ ಮೇಲೆ ಇದ್ದ ನಂಬಿಕೆಯಿಂದ ಮಾಲೀಕ ಗೋವಿಂದ ಅಂಬಿಕಾಳಿಂದ ಮನೆಯ ಬಾಡಿಗೆ ಕೇಳಲಿಲ್ಲ. ಇದನ್ನೇ ದುರುಪಯೋಗಪಡಿಸಿಕೊಂಡ ಅಂಬಿಕಾ ನಾಲ್ಕು ವರ್ಷ ಬಾಡಿಗೆ ನೀಡದೆ ಮಾಲೀಕನಿಗೆ ವಂಚನೆ ಮಾಡಿದ್ದಾಳೆ. ಇತ್ತ ಬಾಡಿಗೆಯೂ ಇಲ್ಲ, ಮನೆ ಖಾಲಿಯೂ ಇಲ್ಲ. ಈಗ ಮನೆ ಖಾಲಿ ಮಾಡಿಸಿಕೊಡುವಂತೆ ಪೊಲೀಸರ ಮೊರೆ ಹೋಗಲು ಮಾಲೀಕ ನಿರ್ಧರಿಸಿದ್ದಾರೆ.

    ಹಗಲಲ್ಲೇ ಈ ಮನೆಗೆ ಇಮ್ಮಡಿ ಮಹದೇವಸ್ವಾಮೀಜಿ ಹೋಗುತ್ತಿದ್ದನು. ಇದನ್ನು ಕಂಡು ಕಾಣದಂತೆ ಮನೆಯ ಮಾಲೀಕ ಗೋವಿಂದ ಇದ್ದರು. ಈಗ ತಮ್ಮ ಮನೆ ಅನೈತಿಕ ತಾಣವಾಗಿದ್ದಕ್ಕೆ ಬೇಸರ ವ್ಯಕ್ಯ ಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಚಾಲಕನನ್ನ ಕೊಂದ ಮಾಲೀಕ!

    ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಚಾಲಕನನ್ನ ಕೊಂದ ಮಾಲೀಕ!

    – ಅನ್ನ ನೀರು ಕೊಡದೇ ಕಂಟೈನರ್ ನಲ್ಲಿ ಕೂಡಿಟ್ಟು ಚಿತ್ರ ಹಿಂಸೆ

    ತುಮಕೂರು: ಕಂಟೈನರ್ ಆಕ್ಸಿಡೆಂಟ್ ಮಾಡಿದ್ದಕ್ಕೆ ಮಾಲೀಕನೊಬ್ಬ ಇಬ್ಬರು ಚಾಲಕರಿಗೆ ಚಿತ್ರಹಿಂಸೆ ನೀಡಿ, ಓರ್ವನನ್ನು ಕೊಲೆಗೈದ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.

    ಬೆಳಗಾವಿ ಜಿಲ್ಲೆ ಬೈಲಹೊಂಗಲದ ಬಸಪ್ಪ(38) ಚಿತ್ರಹಿಂಸೆಗೆ ಬಲಿಯಾದ ಚಾಲಕ. ಮತ್ತೊಬ್ಬ ಚಾಲಕ ಸೋಮಪ್ಪ(35) ಅಸ್ವಸ್ಥಗೊಂಡಿದ್ದಾನೆ. ಕಂಟೈನರ್ ಲಾರಿ ಮಾಲೀಕ ಬಾಳಪ್ಪ ಹಾಗೂ ಆತನ ಸಹಚರರು ಸೇರಿ ಕೃತ್ಯ ಎಸಗಿದ್ದಾರೆ ಆರೋಪಿಸಿ ಬಸಪ್ಪನ ಪತ್ನಿ ಮತ್ತು ಹಲ್ಲೆಗೆ ಒಳಗಾದ ಸೋಮಪ್ಪ ಶಿರಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡು ಅಸ್ವಸ್ಥಗೊಂಡಿರುವ ಸೋಮಪ್ಪ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ದೂರಿನಲ್ಲಿರುವ ಆರೋಪ ಏನು?
    ಕಂಟೈನರ್ ಮಾಲೀಕ ಬಾಳಪ್ಪ ಕೂಡ ಬೈಲಹೊಂಗಲದ ನಿವಾಸಿಯಾಗಿದ್ದು ಅದೇ ಪಟ್ಟಣದ ನಿವಾಸಿಗಳಾದ ಬಸಪ್ಪ ಹಾಗೂ ಸೋಮಪ್ಪ ಅವರನ್ನು ಚಾಲಕರನ್ನಾಗಿ ನೇಮಿಸಿದ್ದ. ಕಂಟೈನರ್ ಡಿಸೆಂಬರ್ 11ರಂದು ಶಿರಾ ತಾಲೂಕಿನಲ್ಲಿ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿತ್ತು.

    ಈ ಕುರಿತು ಮಾಹಿತಿ ಪಡೆದ ಬಾಳಪ್ಪ ಘಟನಾ ಸ್ಥಳಕ್ಕೆ ಬಂದಿದ್ದ. ಈ ವೇಳೆ ಚಾಲಕರ ಮೇಲೆ ಕೋಪಗೊಂಡು ತನ್ನ ಸಹಚರರ ಜೊತೆಗೆ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಬಳಿಕ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಂಟೈನರ್ ನಲ್ಲಿ ಮೂರು ದಿನಗಳ ಕಾಲ ಅನ್ನ, ನೀರು ಕೊಡದೆ ಕೂಡಿ ಹಾಕಿದ್ದ. ಇಬ್ಬರನ್ನೂ ದೊಣ್ಣೆಯಿಂದ ಮನಬಂದಂತೆ ಥಳಿಸಿದ್ದ ಬಾಳಪ್ಪ, ಬಸಪ್ಪನನ್ನು ಕಾಲಿನಿಂದ ಒದ್ದು ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಲಸ ಮಾಡುವಾಗ ತುಂಡಾಯ್ತು ಕಾರ್ಮಿಕನ ಬೆರಳುಗಳು- ಚಿಕಿತ್ಸೆಗೆ ಹಣ ಕೇಳಿದಕ್ಕೆ ಕೊಲೆ ಬೆದರಿಕೆ

    ಕೆಲಸ ಮಾಡುವಾಗ ತುಂಡಾಯ್ತು ಕಾರ್ಮಿಕನ ಬೆರಳುಗಳು- ಚಿಕಿತ್ಸೆಗೆ ಹಣ ಕೇಳಿದಕ್ಕೆ ಕೊಲೆ ಬೆದರಿಕೆ

    ಬೆಂಗಳೂರು: ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬರಿಗೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನ ಬೆರಳುಗಳು ಮಷಿನ್‍ಗೆ ಸಿಲುಕಿ ತುಂಡಾದ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಇಂದು ನಡೆದಿದೆ.

    ಕಾಮಾಕ್ಷಿಪಾಳ್ಯದ ತಿಮ್ಮೇಗೌಡ ಎಂಬ ವ್ಯಕ್ತಿಗೆ ಸೇರಿದ ಪ್ಲ್ಯಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅನಂತ್ ಬರ್ಮನ್ ಎಂಬ ಯುವಕ ನಾಲ್ಕು ಬೆರಳಗಳನ್ನು ಕಳೆದುಕೊಂಡಿದ್ದಾನೆ. ಈ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ತಿಮ್ಮೇಗೌಡ ಸುರಕ್ಷತಾ ವಸ್ತ್ರ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಅನಂತ್ ಬರಿಗೈಯಲ್ಲಿ ಪ್ಲಾಸ್ಟಿಕ್ ಅನ್ನು ಮೆಷಿನ್‍ಗೆ ಹಾಕುವ ವೇಳೆ ಆತನ ಬೆರಳುಗಳು ಸಿಲುಕಿ ತುಂಡಾಗಿದೆ. ಕೂಡಲೆ ಗಾಯಗೊಂಡ ಅನಂತ್‍ನನ್ನು ಸ್ಥಳೀಯ ಆಸ್ಪತ್ರೆಗೆ ಸಹೋದರ ಹೇಮಂತ್ ದಾಖಲಿಸಿದ್ದಾನೆ.

    ಈ ಸಂದರ್ಭದಲ್ಲಿ ಸಹೋದರನ ಚಿಕಿತ್ಸಾ ವೆಚ್ಚಕ್ಕಾಗಿ ಹೇಮಂತ್ ಮಾಲೀಕನ ಬಳಿ ಹಣ ಕೇಳಲು ಹೋದಾಗ, ಮಾಲೀಕ ಆತನಿಗೆ ಬಾಯಿಗೆ ಬಂದಂತೆ ಬೈದು, ಚಿಕಿತ್ಸಾ ವೆಚ್ಚ ಭರಿಸಲು ನಿರಾಕರಿಸಿದ್ದಾನೆ. ಬಳಿಕ ಮಾಲೀಕ ಹಾಗೂ ಹೇಮಂತ್ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಚಿಕಿತ್ಸಾ ವೆಚ್ಚ ಭರಿಸದಿದ್ದರೆ ಪೊಲೀಸರಿಗೆ ದೂರು ನೀಡೋದಾಗಿ ಹೇಮಂತ್ ಹೇಳಿದ್ದಾರೆ. ಈ ವೇಳೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಮಾಲೀಕ ಬೆದರಿಕೆ ಹಾಕಿದ್ದಾನೆ ಎಂದು ಹೇಮಂತ್ ಆರೋಪಿಸಿದ್ದಾರೆ.

    ಇದ್ಯಾವುದಕ್ಕು ಹೆದರದ ಹೇಮಂತ್ ನ್ಯಾಯ ಕೊಡಿಸುವಂತೆ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ತಿಮ್ಮೇಗೌಡ ವಿರುದ್ಧ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊಬೈಲ್‍ನಲ್ಲಿ ಕೊಲೆ ದೃಶ್ಯ ಸೆರೆ ಹಿಡಿಯುತ್ತ ನಿಂತ್ರೇ ಹೊರತು ಬಿಡಿಸಲಿಲ್ಲ

    ಮೊಬೈಲ್‍ನಲ್ಲಿ ಕೊಲೆ ದೃಶ್ಯ ಸೆರೆ ಹಿಡಿಯುತ್ತ ನಿಂತ್ರೇ ಹೊರತು ಬಿಡಿಸಲಿಲ್ಲ

    ಹೈದರಾಬಾದ್: ಜಗಳದ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆಹಿಡಿಯುತ್ತ ಜನರು ನಿಂತಿದ್ದು, ಯಾರೊಬ್ಬರೂ ಹಲ್ಲೆಯನ್ನು ತಡೆಯಲು ಮುಂದಾಗದೆ ಅಮಾನವೀಯತೆ ಮೆರದ ಘಟನೆ ಹೈದರಾಬಾದ್‍ನಲ್ಲಿ ನಡೆದಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

    ಹೈದರಾಬಾದ್‍ನ ಜನನಿಬಿಡ ಪ್ರದೇಶವಾಗಿರುವ ನಯಾಪೌಲ್ ಸಮೀಪದ ಮೀರ್ ಚೌಕ್ ಎಂಬಲ್ಲಿ ಅಮಾನವೀಯ ಘಟನೆ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆಟೋ ಮಾಲೀಕ ಹಾಗೂ ಚಾಲಕ ಪರಸ್ಪರ ಜಗಳವಾಡಿ, ಮಾರಾಮಾರಿ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.

    ಆಟೋ ಚಾಲಕ ಶಾಕೀರ್ ಖುರೇಷಿ (30) ಕೊಲೆಯಾದ ವ್ಯಕ್ತಿ. ಮಾಲೀಕ ಅಬ್ದುಲ್ (29) ಹತ್ಯೆ ಮಾಡಿದ ಆರೋಪಿ. ಅಬ್ದುಲ್‍ನನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

    ಘಟನೆಯ ವಿವರ: ಆರೋಪಿ ಅಬ್ದುಲ್ ತನ್ನ ಬಳಿ ಇರುವ ಆಟೋಗಳನ್ನು ಬೇರೆಯವರಿಗೆ ಬಾಡಿಗೆ ನೀಡುತ್ತಿದ್ದ. ಆದರೆ ಇಂದು ಶಾಕೀರ್ ಖುರೇಷಿ ಮತ್ತು ಅಬ್ದುಲ್ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಪರಿಣಾಮ ಇಬ್ಬರೂ ಹೊಡೆದಾಡಿ ಕೊಂಡಿದ್ದಾರೆ. ಬಳಿಕ ಅಬ್ದುಲ್ ತನ್ನ ಬಳಿಯಿದ್ದ ಚಾಕುವಿನಿಂದ ಶಾಕೀರ್ ಗೆ ಇರಿದು ಕೊಲೆ ಮಾಡಿದ್ದಾನೆ.

    ಘಟನಾ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದು, ಯಾರೊಬ್ಬರು ಹತ್ಯೆಯನ್ನು ತಡೆಯಲು ಮುಂದಾಗಲಿಲ್ಲ. ಹೊರತಾಗಿ ದೂರದಲ್ಲಿ ನಿಂತು ತಮ್ಮ ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಚಾಕುವಿನಿಂದ ಕತ್ತು ಕೊಯ್ದು ಚಿನ್ನದಂಗಡಿ ಮಾಲೀಕನ ಬರ್ಬರ ಹತ್ಯೆ

    ಚಾಕುವಿನಿಂದ ಕತ್ತು ಕೊಯ್ದು ಚಿನ್ನದಂಗಡಿ ಮಾಲೀಕನ ಬರ್ಬರ ಹತ್ಯೆ

    ಚಿತ್ರದುರ್ಗ: ಚಾಕುವಿನಿಂದ ಕತ್ತು ಕೊಯ್ದು ಕೊಲೆ ಚಿನ್ನದಂಗಡಿ ಮಾಲೀಕನನ್ನು ಬರ್ಬರವಾಗಿ ಕೊಲೆಗೈದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

    ಕಲ್ಯಾಣ್ ಸಿಂಗ್ (54) ಬರ್ಬರವಾಗಿ ಕೊಲೆಯಾದ ಚಿನ್ನದಂಗಡಿ ಮಾಲೀಕ. ಈ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಗ್ರಾಮದಲ್ಲಿ ನಡೆದಿದೆ.

    ವ್ಯಾಪಾರ ವಹಿವಾಟಿಗೆ ಸ್ನೇಹಿತರ ನಡುವೆ ಗಲಾಟೆ ನಡೆದು, ಗೊತ್ತಿಲ್ಲದ ಊರಿಗೆ ಬಂದು ಕಲ್ಯಾಣ್ ಸಿಂಗ್ ಹೆಣವಾಗಿದ್ದಾರೆ. ಕೊಲೆಗೈದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    ಸದ್ಯ ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಸ್ಸಿನ ಆಯಸ್ಸು ಮುಗಿದಿದ್ದರೂ 3 ವರ್ಷ ಚಾಲನೆ ಮಾಡಿದ್ದು ಹೇಗೆ: ಮಂಗ್ಳೂರು ಮಾಲೀಕ

    ಬಸ್ಸಿನ ಆಯಸ್ಸು ಮುಗಿದಿದ್ದರೂ 3 ವರ್ಷ ಚಾಲನೆ ಮಾಡಿದ್ದು ಹೇಗೆ: ಮಂಗ್ಳೂರು ಮಾಲೀಕ

    ಮಂಗಳೂರು: ಬಸ್ಸು ಆಯಸ್ಸು ಮುಗಿದಿದ್ದರೂ 3 ವರ್ಷ ಚಾಲನೆ ಮಾಡಿದ್ದು ಹೇಗೆ ಎನ್ನುವುದೇ ನನಗೆ ಅನುಮಾನ ಉಂಟಾಗಿದೆ ಎಂದು ಬಸ್ಸಿನ ಮೂಲ ಮಾಲೀಕರಾಗಿದ್ದ ರಾಘವ ಕರ್ಕೇರ ಹೇಳಿದ್ದಾರೆ.

    ಮಂಡ್ಯದ ಕನಗನಮರಡಿ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಾನು ಆ ಬಸ್ ಖರೀದಿ ಮಾಡುವ ವೇಳೆಗೆ ಆದರ ಆಯಸ್ಸು 11 ವರ್ಷ ಆಗಿತ್ತು. ಬಳಿಕ ನನಗೆ ಇಲ್ಲಿ 1 ವರ್ಷ ಮಾತ್ರ ಓಡಿಸಲು ಅವಕಾಶವಿತ್ತು. ಆದ್ದರಿಂದ ನಾನು ಬಸ್ ಖರೀದಿ ಮಾಡಿ ಉತ್ತಮವಾಗಿ ನಿರ್ವಹಣೆ ಮಾಡಿದ್ದೆ. ಬಸ್ ಸ್ಥಿತಿ ಉತ್ತಮವಾಗಿದ್ದ ಕಾರಣ ಮೂರು ವರ್ಷಕ್ಕೆ ರಿನೀವಲ್ ಆಗಿತ್ತು. 12 ವರ್ಷ ಬಸ್ಸಿನ ಆಯಸ್ಸು ಇದ್ದರೂ ಚೆನ್ನಾಗಿ ನಿರ್ವಹಣೆ ಮಾಡಿದ್ದರೆ 15 ವರ್ಷ ಇಲ್ಲಿ ಓಡಿಸಬಹುದು ಎಂದು ತಿಳಿಸಿದರು.

    ಬಸ್ಸಿನ ಆಯಸ್ಸು 15 ವರ್ಷಕ್ಕೆ 4 ತಿಂಗಳು ಬಾಕಿ ಇರುವ ವೇಳೆ ನಾನು ಮಾರಾಟ ಮಾಡಿದೆ. ಆಗ ಅವರಿಗೆ ಒಂದು ಅವಧಿಗೆ ಚಾಲನೆ ಮಾಡಲು ಅವಕಾಶವಿತ್ತು. ಈಗ ಬಸ್ ಹೆಚ್ಚುವರಿಯಾಗಿ 3 ವರ್ಷ ಓಡಿಸಿದ್ದಾರೆ. ಇದಕ್ಕೆ ಹೇಗೆ ಅನುಮತಿ ಸಿಕ್ಕಿದೆ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

    ನಾನು ಬಸ್ ಕಡಿಮೆ ಅವಧಿಗೆ ಚಾಲನೆ ಮಾಡುವ ಉದ್ದೇಶದಿಂದ ಖರೀದಿ ಮಾಡಿದ್ದೆ. ಕಡಿಮೆ ಕಲೆಕ್ಷನ್ ಆಗುತ್ತಿದ್ದ ಕಾರಣ ಈ ರೂಟ್ ನಲ್ಲಿ ಹೊಸ ಬಸ್ ಓಡಿಸಲು ಸಾಧ್ಯವಿರಲಿಲ್ಲ. ಆದ್ದರಿಂದ ಉತ್ತಮ ಸ್ಥಿತಿಯಲ್ಲೇ ಇಟ್ಟು ಮಾರಾಟ ಮಾಡಿದ್ದೇನೆ. ಅವರಿಗೆ ಹೆಚ್ಚುವರಿ ಅನುಮತಿ ಹೇಗೆ ಲಭಿಸಿದೆ ಎನ್ನುವುದು ತಿಳಿದುಕೊಳ್ಳಬೇಕಿದೆ. ಅಲ್ಲದೇ ಯಾವುದೇ ಅಪಘಾತವಾದ ಬಳಿಕ ತನ್ನ ಜೀವ ಕೊಟ್ಟು ಪ್ರಯಾಣಿಕರ ಜೀವ ಉಳಿಸುವುದು ಚಾಲಕನ ಕರ್ತವ್ಯ. ಆದರೆ ಈ ಘಟನೆಯಲ್ಲಿ ಚಾಲಕ ಸ್ಥಳದಿಂದ ಪರಾರಿಯಾಗಿರುವುದು ಬೇಸರ ತಂದಿದೆ ಎಂದು ತಿಳಿಸಿದರು.  ಇದನ್ನು ಓದಿ: 30ಕ್ಕೂ ಹೆಚ್ಚು ಜನರ ಬಲಿ ತೆಗೆದುಕೊಂಡ ಮಂಡ್ಯ ದುರಂತಕ್ಕೆ ಕಾರಣ ಸಿಕ್ತು!

    ಇತಿಹಾಸ ಕೆದಕಿದಾಗ ಮತ್ತಷ್ಟು ಮಾಹಿತಿ ಸಿಕ್ಕಿದ್ದು ಇದೂವರೆಗೆ 9 ಮಂದಿ ಈ ಬಸ್ಸಿನ ಮಾಲೀಕರಾಗಿದ್ದಾರೆ. 2001ರ ಜೂ.1ಕ್ಕೆ ಆರ್ ಟಿಓ ಕಚೇರಿಯಲ್ಲಿ ನೋಂದಣಿ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಬಸ್ಸಿನ ಗರಿಷ್ಟ ಆಯಸ್ಸು 15 ವರ್ಷವಾಗಿದ್ದು, ನಂತರ ಈ ಬಸ್ಸನ್ನು ಓಡಿಸುವಂತಿಲ್ಲ ಎನ್ನುವ ನಿರ್ಧಾರವನ್ನು ಮಂಗಳೂರು ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ರೇಷನ್‍ಗೆ ಕ್ಯೂ ನಿಲ್ಲುವಂತೆ ಮಂಡ್ಯದಲ್ಲಿ ಮಟನ್‍ಗೂ ಸಾಲು ನಿಂತ್ರು!

    ರೇಷನ್‍ಗೆ ಕ್ಯೂ ನಿಲ್ಲುವಂತೆ ಮಂಡ್ಯದಲ್ಲಿ ಮಟನ್‍ಗೂ ಸಾಲು ನಿಂತ್ರು!

    ಮಂಡ್ಯ: ರೇಷನ್‍ಗೆ ಕ್ಯೂ ನಿಲ್ಲುವಂತೆ ಮಟನ್‍ಗಾಗಿ ಮಂಡ್ಯದ ಜನರು ಕ್ಯೂ ನಿಂತುಕೊಂಡಿದ್ದಾರೆ.

    ಶನಿವಾರ ಎಲೆಕ್ಷನ್ ಕಳೆಯುತ್ತಲೇ ರಿಲಾಕ್ಸ್ ಮೂಡಲ್ಲಿದ್ದ ಮಂಡ್ಯದ ಜನ ಇಂದು ಆರಾಮವಾಗಿ ಫ್ಯಾಮಿಲಿ, ಫ್ರೆಂಡ್ ಜೊತೆ ಬಾಡೂಟ ಮಾಡಲು ಮಟನ್ ಅಂಗಡಿಗೆ ಧಾವಿಸಿದ್ದಾರೆ. ಅಂಗಡಿಯ ಮಾಲೀಕ ಜನರ ಗುಂಪು ನೋಡಿ ಮಟನ್‍ಗಾಗಿ ಸರದಿ ಸಾಲಲ್ಲಿ ಬರುವಂತೆ ಸೂಚಿಸಿದ್ದಾರೆ.

    ಮಂಡ್ಯದ ಚಿಕ್ಕಮಂಡ್ಯ ರಸ್ತೆಯಲ್ಲಿ ಇರುವ ಗೋಪಾಲ್ ಮಟನ್ ಸ್ಟಾಲ್ ಮುಂದೆ ಈ ರೀತಿ ಕ್ಯೂ ಕಾಣುತ್ತಿದ್ದು, ಅಂಗಡಿ ಮಾಲೀಕ ಇಂದು ಸುಮಾರು 20 ಮರಿಗಳನ್ನು ಕಡಿದಿದ್ದಾರೆ. ಪ್ರತಿ ಕೆಜಿಗೆ 420 ರಂತೆ ಮಾರಾಟ ಮಾಡುತ್ತಿದ್ದು, ಇವತ್ತು ಒಂದು ದಿನ ಡಿಮ್ಯಾಂಡ್ ಜಾಸ್ತಿಯಾಗಿದೆ. ಇನ್ನೆರೆಡು ಗಂಟೆ ಹೋದರೆ ಮಟನ್ ಸಿಗೋದು ಡೌಟು ಎಂದು ಹೇಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv