Tag: ಮಾಲೀಕ

  • ಕೃಷಿ ಹೊಂಡದಲ್ಲಿ ಬಿದ್ದ ಕುರಿ ರಕ್ಷಣೆ ಮಾಡಿ ಮೇಲೆ ಬರಲಾಗದೆ ಪ್ರಾಣ ಬಿಟ್ಟ ಮಾಲೀಕ

    ಕೃಷಿ ಹೊಂಡದಲ್ಲಿ ಬಿದ್ದ ಕುರಿ ರಕ್ಷಣೆ ಮಾಡಿ ಮೇಲೆ ಬರಲಾಗದೆ ಪ್ರಾಣ ಬಿಟ್ಟ ಮಾಲೀಕ

    ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಬಿದ್ದ ಕುರಿಯನ್ನ ರಕ್ಷಣೆ ಮಾಡಿದ ಕುರಿಯ ಮಾಲೀಕರೊಬ್ಬರು ಮೇಲೆ ಬರಲಾಗದೆ ಕೃಷಿ ಹೊಂಡದಲ್ಲೇ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ಮೇಲೂರು ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಪಿಳ್ಳವೆಂಕಟರೋಣಪ್ಪ ಮೃತ ವ್ಯಕ್ತಿ. ಕುರಿಗಳನ್ನ ಮೇಯಿಸುತ್ತಿದ್ದ ವೇಳೆ ಪಾಪಣ್ಣ ಎಂಬವರ ತೋಟದಲ್ಲಿದ್ದ ಕೃಷಿ ಹೊಂಡಕ್ಕೆ ಕುರಿಯೊಂದು ಬಿದ್ದಿದೆ. ಈ ವೇಳೆ ಕೃಷಿ ಹೊಂಡಕ್ಕೆ ಜಿಗಿದು ಕುರಿಯನ್ನ ಮೇಲೆ ಎತ್ತಿ ಹಾಕಿದ ಮಾಲೀಕ ವೆಂಕಟರೋಣಪ್ಪ, ಕೃಷಿ ಹೊಂಡದಿಂದ ಕೊನೆಗೆ ತಾನು ಮೇಲೆ ಬರಲಾಗದೆ ಕೃಷಿ ಹೊಂಡದಲ್ಲೇ ಜೀವ ಬಿಟ್ಟಿದ್ದಾರೆ.

    ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ಥಳೀಯರು ಮೃತದೇಹವನ್ನ ಮೇಲೆತ್ತಿದ್ದಾರೆ. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • MRPಯಲ್ಲಿ ಮದ್ಯ ಮಾರಾಟ ಮಾಡದ್ದಕ್ಕೆ ಕೊಪ್ಪಳದಲ್ಲಿ ಬಾರ್ ಮಾಲೀಕರು, ಗ್ರಾಹಕರ ನಡ್ವೆ ಜಗಳ

    MRPಯಲ್ಲಿ ಮದ್ಯ ಮಾರಾಟ ಮಾಡದ್ದಕ್ಕೆ ಕೊಪ್ಪಳದಲ್ಲಿ ಬಾರ್ ಮಾಲೀಕರು, ಗ್ರಾಹಕರ ನಡ್ವೆ ಜಗಳ

    ಕೊಪ್ಪಳ: ಮದ್ಯವನ್ನ ಎಂಆರ್ ಪಿ ಬೆಲೆಯಲ್ಲಿ ಮಾರಾಟ ಮಾಡೋದಕ್ಕೆ ಬಾರ್ ಮಾಲೀಕರು ಹಾಗೂ ಗ್ರಾಹಕರ ನಡುವೆ ವಾಗ್ವಾದ ನಡೆದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳದ ಗಂಗಾವತಿಯಲ್ಲಿ ಸಿಎಲ್ 2 ಬಾರ್ ನಲ್ಲೇ ಪ್ರತಿ ಮದ್ಯದ ಪೌಚ್ ಮೇಲೆ 20 ರಿಂದ 30 ರೂಪಾಯಿ ಹೆಚ್ಚುವರಿ ಹಣ ಪಡೆಯುತ್ತಿರೋ ಬಾರ್‍ಗಳ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ಕೂಡಾ ಸಾಕಷ್ಟು ವರದಿ ಮಾಡಿದರೂ ಅಬಕಾರಿ ಇಲಾಖೆ ಮಾತ್ರ ಕ್ರಮಕ್ಕೆ ಮುಂದಾಗಿಲ್ಲ.

    ಗಂಗಾವತಿ ತಾಲೂಕಿನಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಅವರ ಸಿಎಲ್ 2 ಅಂಗಡಿಗಳಿವೆ. ಹಗಲುದರೋಡೆ ಮಾಡುತ್ತಿರೋ ಬಾರ್ ಗಳ ವಿರುದ್ಧ ಯಾವೊಬ್ಬ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಮದ್ಯಪ್ರಿಯರು ಈ ವಿಚಾರವನ್ನು ಸಾಕಷ್ಟು ಬಾರಿ ಹೇಳಿದರೂ ಯಾರು ತಲೆಯೇ ಕೆಡಿಸಿಕೊಂಡಿಲ್ಲ ಗ್ರಾಹಕ ರಮೇಶ್ ತಿಳಿಸಿದ್ದಾರೆ.

    ಲಿಗಲ್ ಮೆಟ್ರೋಲಜಿ ಕಾಯ್ದೆ ಏನು ಹೇಳುತ್ತೆ?
    ಪ್ಯಾಕೇಜ್ಡ್ ಉತ್ಪನ್ನಗಳನ್ನ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಲೀಗಲ್ ಮೆಟ್ರೋಲಜಿ ಕಾಯ್ದೆ ಪ್ರಕಾರ ಅಪರಾಧ. ಯಾವುದೇ ವಸ್ತುವನ್ನು ಪೇಪರ್ ನಲ್ಲಿ ಪ್ಯಾಕ್ ಮಾಡಿದ್ದರೂ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ. ಕಡ್ಡಾಯವಾಗಿ ಪೊಟ್ಟಣ ಸಾಮಗ್ರಿ ನಿಯಮಾವಳಿಗಳನ್ನು ಪಾಲಿಸಿರಬೇಕು. ವಸ್ತುಗಳ ದರ ಹಾಗೂ ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಇದನ್ನು ಉಲ್ಲಂಘಿಸಿದರೆ ಮಾರಾಟಗಾರರ ಮೇಲೆ ಸ್ಥಳದಲ್ಲೇ ದಂಡ ವಿಧಿಸಲು ಅವಕಾಶವಿದೆ. ಕಾನೂನು ಮಾಪನಶಾಸ್ತ್ರ ಇಲಾಖೆ ವ್ಯಾಪ್ತಿಗೆ ಎಲ್ಲ ಅಂಗಡಿಗಳು, ಪೆಟ್ರೋಲ್ ಬಂಕ್, ಸೀಮೆಎಣ್ಣೆ ಮಾರಾಟಗಾರರು, ಬಟ್ಟೆ ಅಂಗಡಿಗಳು, ಪೊಟ್ಟಣ ತಯಾರಿಕಾ ಉದ್ಯಮಗಳು ಒಳಪಡುತ್ತದೆ.

    ದಂಡ ಎಷ್ಟು?
    ಯಾವುದೇ ಪ್ರೀ ಪ್ಯಾಕೇಜ್ಡ್ ಉತ್ಪನ್ನದ ಮೇಲೆ ನಮೂದಿಸಿರುವುದಕ್ಕೆ ಬದ್ಧವಾಗಿರದೆ ಅದನ್ನ ಮಾರಾಟ, ವಿತರಣೆ ಅಥವಾ ಡೆಲಿವರಿ ಮಾಡುವಾಗ ಸಿಕ್ಕಿಬಿದ್ದರೆ ಮೊದಲನೇ ಅಪರಾಧಕ್ಕಾಗಿ 25 ಸಾವಿರ ರೂ. ದಂಡ ಹಾಕುವ ಮೂಲಕ ಶಿಕ್ಷಿಸಲಾಗುತ್ತದೆ ಎಂದು ಲೀಗಲ್ ಮೆಟ್ರೊಲಜಿ ಕಾಯ್ದೆಯ ಸೆಕ್ಷನ್ 36 ಹೇಳುತ್ತದೆ. ಎರಡನೇ ಅಪರಾಧಕ್ಕೆ 50 ಸಾವಿರ ರೂ. ಹಾಗೂ ನಂತರದ ಅಪರಾಧಗಳಿಗೆ 1 ಲಕ್ಷ ರೂ ದಂಡ ಅಥವಾ 1 ವರ್ಷ ಜೈಲು ಶಿಕ್ಷೆ ಅಥವಾ ಎರಡೂ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನೂ ಓದಿ: ಕೊಪ್ಪಳದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮದ್ಯಕೋಟೆ?- ಇಲ್ಲಿ ಎಂಆರ್‍ಪಿಗಿಂತ ದುಪ್ಪಟ್ಟು ವಸೂಲಿ

  • ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

    ಲವ್ ಮಾಡಿ ಗರ್ಭಿಣಿ ಮಾಡ್ದ, ಮದುವೆಯಾಗು ಎಂದಿದ್ದಕ್ಕೆ ಕೊಲೆಯೇ ಮಾಡ್ಬಿಟ್ಟ ಪಾಪಿ!

    ಕರ್ನೂಲ್: ಮದುವೆಯಾಗು ಎಂದಿದ್ದಕ್ಕೆ ಗರ್ಭಿಣಿಯನ್ನ ಆಕೆಯ ಪ್ರಿಯತಮ ಕತ್ತು ಹಿಸುಕಿ ಕೊಲೆ ಮಾಡಿರೋ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ ಡೋನ್ ಮಂಡಲ್ ನ ಎರಗುಂಟ್ಲಾದಲ್ಲಿ ನವೆಂಬರ್ 20ರಂದು ನಡೆದಿದೆ. ಮೃತ ಗರ್ಭಿಣಿಯನ್ನು ರಮಿಜಬಿ ಎಂದು ಗುರುತಿಸಲಾಗಿದ್ದು, ಈಕೆಯ ತಾಯಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

    ಏನಿದು ಪ್ರಕರಣ?: ಮೃತ ರಮಿಜಬಿಗೆ ಈ ಹಿಂದೆ ಮದುವೆಯಾಗಿದ್ದು, ತನ್ನ ಗಂಡನಿಂದ ವಿಚ್ಛೇದನ ಪಡೆದು, ಮಗ ಅಖಿಲ್ ಕುಮಾರ್ ಜೊತೆ ತಂದೆ-ತಾಯಿಯೊಂದಿಗೆ ವಾಸವಾಗಿದ್ದರು. ತವರು ಮನೆಯಲ್ಲಿ ವಾಸವಾಗಿದ್ದ ರಮಿಜಬಿಗೆ ಸ್ಥಳೀಯ ಬಟ್ಟೆ ಅಂಗಡಿಯಲ್ಲಿ ಕೆಲಸ ದೊರೆತಿತ್ತು. ಅಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅಂಗಡಿ ಮಾಲೀಕನ ಮಗ ಶೇಖ್ ರಶೀದ್(22) ಜೊತೆ ಪ್ರೇಮಾಂಕುರವಾಗಿತ್ತು.

    ಕೆಲ ದಿನಗಳ ಬಳಿಕ ಅಂಗಡಿ ಮಾಲೀಕನ ಮಗ ಹಾಗೂ ನಾನು ಪ್ರೀತಿಸಿದ್ದು, ಆದ್ರೆ ಇದೀಗ ಆತ ತನನ್ನನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ ಹಿರಿಯರು ಮಧ್ಯಪ್ರವೇಶಿಸಿ ಪೊಲೀಸ್ ಕೇಸ್ ಇಲ್ಲದೆ ಮಾತುಕತೆ ಮೂಲಕ ಬಗೆಹರಿಸಿದ್ರು.

    ಹಿರಿಯರ ಜೊತೆ ಮಾತುಕತೆ ನಡೆಸಿದ ಬಳಿಕ ರಶೀದ್ ಆಕೆಯ ಜೊತೆ ಸಂಬಂಧ ಮುಂದುವರೆಸಿದ್ದ. ಪರಿಣಾಮ ರಮಿಜಬಿ ಗರ್ಭಿಣಿಯಾದ್ರು. ತಾನು ಗರ್ಭಿಣಿ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಮಹಿಳೆ ಮತ್ತೆ ರಶೀದ್ ಜೊತೆ ಮದುವೆಯ ಪ್ರಸ್ತಾಪ ಮಾಡಿದ್ದರು. ಇದನ್ನೇ ಉಪಾಯವಾಗಿ ಬಳಸಿಕೊಂಡ ರಶೀದ್, ನಾವಿಬ್ಬರು ಖಂಡಿತವಾಗಿ ಚೆನ್ನಾಗಿ ಜೀವನ ನಡೆಸೋಣ. ಹೊಸ ಜೀವನ ಆರಂಭಿಸೋಣ ಅಂತೆಲ್ಲಾ ಪೀಠಿಕೆ ಹಾಕಿ ಕಳೆದ ತಿಂಗಳ 20ರಂದು ಆಕೆಯನ್ನು ಎರಗುಂಟ್ಲಾದ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಅಲ್ಲೇ ಹೂತು ಹಾಕಿದ್ದಾನೆ.

    ಇತ್ತ ಮಗಳು ಕಾಣದಿರುವುದರಿಂದ ಆತಂಕಗೊಂಡ ತಾಯಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ಆರಂಭಿಸಿ, ರಶೀದ್‍ನನ್ನು ಕರೆಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಆರೋಪಿ ತಪ್ಪೊಪ್ಪಿಕೊಂಡ ಒಂದು ವಾರದ ಹಿಂದೆ ಕೊಲೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹ ಹೊರತೆಗೆದು ಅಲ್ಲೇ ಶವಪರೀಕ್ಷೆ ಮಾಡಿಸಿದ್ದಾರೆ. ಬಳಿಕ ಶವವನ್ನು ಅಂತ್ಯಸಂಸ್ಕಾರಕ್ಕಾಗಿ ಮಹಿಳೆ ಹೆತ್ತವರಾದ ಲಕ್ಷ್ಮೀ ದೇವಿ ಹಾಗೂ ಮಲ್ಲೇಶ್ ದಂಪತಿಗೆ ಹಸ್ತಾಂತರಿಸಿದ್ದಾರೆ.

  • ಜಿಎಸ್‍ ಟಿ ಹೆಸ್ರಲ್ಲಿ ಉದ್ಯಮಿ ಅಕೌಂಟ್‍ ನಲ್ಲಿದ್ದ 24 ಲಕ್ಷ ರೂ. ಮಂಗಮಾಯ!

    ಜಿಎಸ್‍ ಟಿ ಹೆಸ್ರಲ್ಲಿ ಉದ್ಯಮಿ ಅಕೌಂಟ್‍ ನಲ್ಲಿದ್ದ 24 ಲಕ್ಷ ರೂ. ಮಂಗಮಾಯ!

    ದಾವಣಗೆರೆ: ಜಿಎಸ್‍ ಟಿ ಹೆಸರಲ್ಲಿ ಉದ್ಯಮಿ ಅಕೌಂಟ್ ನಲ್ಲಿದ್ದ ಲಕ್ಷಾಂತರ ರೂಪಾಯಿ ಮಂಗಮಾಯವಾಗಿರೋ ಘಟನೆಯೊಂದು ನಡೆದಿರುವ ಬಗ್ಗೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

    ದಾವಣಗೆರೆಯ ಪೂಜಾರ್ ಪ್ರೋಸೆಸ್ ಕಂಪನಿಗೆ ಸೇರಿದ ಅಕೌಂಟ್ ನಿಂದ 24 ಲಕ್ಷ ರೂಪಾಯಿ ಹಣ ಮಾಯವಾಗಿದೆ. ಕಂಪನಿ ಮಾಲೀಕ ನಾಗರಾಜ್ ಕೆಲ ಚೆಕ್ ಗಳನ್ನು ಗ್ರಾಹಕರಿಗೆ ನೀಡಿದ್ರು. ಆದ್ರೆ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲ ಅಂತಾ ಗ್ರಾಹಕರು ಆರೋಪಿಸಿದ್ರು.

    ಮೊನ್ನೆ ಲಕ್ಷಾಂತರ ರೂಪಾಯಿ ಖಾತೆಯಲ್ಲಿತ್ತು. ಇದೀಗ ಝಿರೋ ಬ್ಯಾಲೆನ್ಸ್ ನಿಂದ ಆಘಾತಗೊಂಡು ಬ್ಯಾಂಕ್ ಗೆ ಹೋಗಿ ವಿಚಾರಿಸಿದ್ರು. ನೀವು ಜಿಎಸ್ ಟಿ ಕಟ್ಟಿಲ್ಲ. ಅದಕ್ಕೆ ಬಹುಶಃ ಮುಟ್ಟುಗೋಲು ಹಾಕಿಕೊಂಡಿರಬಹುದು. ನಮ್ಮಿಂದ ಯಾವುದೇ ತೊಂದರೆಯಾಗಿಲ್ಲ ಅಂತಾ ಬ್ಯಾಂಕ್ ಆಫ್ ಇಂಡಿಯಾ ಸಮರ್ಥಿಸಿಕೊಂಡಿದೆ.

    ಈ ಕಡೆ ಜಿಎಸ್ ಟಿ ಆಫೀಸ್ ಗೆ ಹೋಗಿ ಕೇಳಿದ್ರೆ ನಾವು ಹಣ ಮುಟ್ಟುಗೋಲು ಹಾಕಿಕೊಳ್ಳುವಾಗ ಗ್ರಾಹಕರಿಗೆ ನೋಟಿಸ್ ಕೊಡ್ತಿವಿ. ಜಿಎಸ್ ಟಿ ಜಾರಿಗೆ ಬಂದಾಗಿನಿಂದ ಪ್ರತಿ ತಿಂಗಳು ತಪ್ಪದೆ ಜಿಎಸ್ ಟಿ ಕಟ್ಟಿಕೊಂಡು ಬಂದಿದ್ದಾರೆ. ಕಳೆದ ತಿಂಗಳು ಮಾತ್ರ ಸರ್ವರ್ ಬ್ಯುಸಿ ಇದ್ದುದರಿಂದ ಒಂದು ದಿನ ತಡವಾಯಿತು. ಅಲ್ಲದೆ 5 ಬಾರಿ ಪ್ರಯತ್ನ ಮಾಡಿದ್ರು ಟ್ರಾನ್ಷೇಷನ್ ಫೇಲ್ ಆಗುತ್ತಾ ಬಂದಿತು. ಕೊನೆಯ ಬಾರಿ ಕಳುಹಿಸಿದಾಗ ಸಕ್ಸಸ್ ಆಯ್ತು. ಆದ್ರೆ ಈಗ ನೋಡಿದ್ರೆ ನಮ್ಮ ಖಾತೆಯಲ್ಲಿ ಹಣವನ್ನು ಮುಟ್ಟುಗೋಲು ಆಗಿದೆ. ಇದು ಬ್ಯಾಂಕ್ ನವರ ಎಡವಟ್ಟೋ ಇಲ್ಲ ಜಿಎಸ್‍ಟಿ ಯವರ ಯಡವಟ್ಟೋ ಗೊತ್ತಿಲ್ಲ. ಬ್ಯಾಕ್ ನಲ್ಲಿ ಅಕೌಂಟ್ ಸ್ಟೇಟಸ್ ತೆಗೆಸಿದ್ರೆ ಜಿ ಎಸ್ ಟಿ ರಿಕವರಿ ಎಂದು ತೋರಿಸುತ್ತಿದೆ ಅಂತ ಹೇಳಿಕೆ ನೀಡಿದ್ದಾರೆ.

  • ಅರಮನೆ ನಗರಿಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆ

    ಅರಮನೆ ನಗರಿಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆ

    ಮೈಸೂರು: ಜನರೇ ಎಚ್ಚರ, ಮೈಸೂರಿನಲ್ಲಿ ಪ್ಲಾಸ್ಟಿಕ್ ಸಕ್ಕರೆ ಸರಬರಾಜಾಗುತ್ತಿದೆ. ಒಂದು ಕ್ಷಣ ಯಾಮಾರಿದರೂ ಪ್ಲಾಸ್ಟಿಕ್ ಸಕ್ಕರೆ ನಿಮ್ಮ ಹೊಟ್ಟೆ ಸೇರುತ್ತದೆ.

    ಮೈಸೂರು ಹೋಟೆಲೊಂದರ ಮಾಲೀಕ ಖರೀದಿಸಿದ್ದ ಸಕ್ಕರೆಯಲ್ಲಿ ಪ್ಲಾಸ್ಟಿಕ್ ಸಕ್ಕರೆ ಪತ್ತೆಯಾಗಿದೆ. ಖಿಲ್ಲೆ ಮೊಹಲ್ಲಾದಲ್ಲಿರುವ ಅನ್ನಪೂರ್ಣೇಶ್ವರಿ ಫುಡ್ ಪಾಯಿಂಟ್ ನ ಮಾಲೀಕ ಪ್ರಭುಸ್ವಾಮಿ ಸಂತೇಪೇಟೆಯ ಅಂಗಡಿಯಲ್ಲಿ ಖರೀದಿಸಿದ್ದ ಸಕ್ಕರೆಯಲ್ಲಿ ಪ್ಲಾಸ್ಟಿಕ್ ಸಕ್ಕರೆ ದೊರೆತಿದೆ.

    ಹೋಟೆಲ್ ನಲ್ಲಿ ಎಂದಿನಂತೆ ಇಂದು ಕೂಡ ಟೀ ತಯಾರಿಸಲು ಪ್ರಭುಸ್ವಾಮಿ ಮುಂದಾದಾಗ ಎಷ್ಟೇ ಕುದಿಸಿದರೂ ಸಕ್ಕರೆ ಕರಗಲಿಲ್ಲ. ಇದನ್ನ ಕಂಡು ಕೂಲಂಕುಷವಾಗಿ ಪರಿಶೀಲಿಸಿದಾಗ ಇದು ಪ್ಲಾಸ್ಟಿಕ್ ಸಕ್ಕರೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.

  • 9 ತಿಂಗಳ ಗರ್ಭಿಣಿಯ ಮೇಲೆ ಹಲ್ಲೆ ಮಾಡಿ ಹೊರ ಹಾಕಿದ ಮನೆ ಮಾಲೀಕನ ಮಗ!

    9 ತಿಂಗಳ ಗರ್ಭಿಣಿಯ ಮೇಲೆ ಹಲ್ಲೆ ಮಾಡಿ ಹೊರ ಹಾಕಿದ ಮನೆ ಮಾಲೀಕನ ಮಗ!

    ಬೆಂಗಳೂರು: ಲೀಸ್ ಗಿದ್ದವರ ಮನೆಗೆ ನುಗ್ಗಿ ಮನೆ ಮಾಲೀಕನ ಮಗ ಗರ್ಭಿಣಿ ಮೇಲೆ ಹಲ್ಲೆ ಮಾಡಿ ನಂತ್ರ ಮನೆ ಸಾಮಾನುಗಳನ್ನು ಹೊರಹಾಕಿದ ಘಟನೆಯೊಂದು ನಗರದಲ್ಲಿ ನಡೆದಿದೆ.

    ಈ ಘಟನೆ ಹೊಸಕೆರೆಹಳ್ಳಿಯ ಬಿಡಿಎ ಲೇಔಟ್ ನಲ್ಲಿ ಭಾನುವಾರ ನಡೆದಿದೆ. ಘಟನೆ ಸಂಬಂಧ ಮನೆ ಮಾಲೀಕ ಬಸವೇ ಗೌಡ ಪುತ್ರ ಮಹೇಶ, ಕೆಂಚಯ್ಯ, ಭವಾನಿ, ಚಲುವಯ್ಯ ಹಾಗೂ ಅನ್ನ ಪೂರ್ಣ ಇವರುಗಳನ್ನು ಬಂಧಿಸಿದ್ದಾರೆ.

    ಏನಿದು ಘಟನೆ?: ರವೀಶ್ ತನ್ನ ಪತ್ನಿ ಹಾಗೂ ಅಜ್ಜಿಯೊಂದಿಗೆ ಬಿಡಿಎ ಲೇ ಔಟ್ ನಲ್ಲಿ 10 ಲಕ್ಷ ರೂ. ಲೀಸ್ ಗೆ ಮನೆ ಪಡೆದಿದ್ದರು. ನಿನ್ನೆ 9 ತಿಂಗಳ ಗರ್ಭಿಣಿ ಲಕ್ಷ್ಮೀ ಹಾಗೂ ಆಕೆಯ ಅಜ್ಜಿ ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆ ಮಾಲೀಕ ಬಸವೇ ಗೌಡ ಪುತ್ರ ಮಹೇಶ್ ತನ್ನ ಗ್ಯಾಂಗ್ ನೊಂದಿಗೆ ಮನೆಗೆ ನುಗ್ಗಿ ಲಕ್ಷ್ಮೀ ಮೇಲೆ ಹಲ್ಲೆ ಮಾಡಿದ್ದಾನೆ. ಅಲ್ಲದೇ ಮನೆಯ ಸಾಮಾನುಗಳನ್ನೆಲ್ಲಾ ಹೊರ ಹಾಕುವ ಮೂಲಕ ಗೂಂಡಾಗಿರಿ ಮೆರೆದಿದ್ದಾನೆ.

    ಹಲ್ಲೆಯಿಂದಾಗಿ ಲಕ್ಷ್ಮೀ ಮಾನಸಿಕವಾಗಿ ಕುಗ್ಗಿದ್ದು, ಗರ್ಭದಲ್ಲಿರೋ ಮಗುವಿನ ಹಾರ್ಟ್ ಬೀಟ್ ಕಡಿಮೆಯಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಕ್ಯಾನಿಂಗ್ ಮಾಡೋ ತನಕ ಏನನ್ನೂ ಹೇಳೋಕೆ ಆಗಲ್ಲ ಅಂತ ವೈದ್ಯರು ತಿಳಿಸಿದ್ದಾರೆ.

    ಘಟನೆ ಸಂಬಂಧ ರವೀಶ್ ಹಾಗೂ ಅವರ ಪತ್ನಿ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಐವರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರೋ ಮನೆ ಮಾಲೀಕ ಬಸವೇಗೌಡನ ಪತ್ತೆಗೆ ಬಲೆ ಬೀಸಿದ್ದಾರೆ.

     

  • ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

    ಸಾಲ ವಾಪಸ್ ಕೊಡದ್ದಕ್ಕೆ ನಾಯಿ ಬಿಟ್ಟು ದಾಳಿ- ಕೊಡಗಿನಲ್ಲೊಬ್ಬ ಭಯಾನಕ ಮಾಲೀಕ

    ಮಡಿಕೇರಿ: ಪಡೆದ ಸಾಲದ ಹಣ ಹಿಂದಿರುಗಿಸದ ತನ್ನ ಕಾರ್ಮಿಕನ ವಿರುದ್ಧ ಅಮಾನವೀಯವಾಗಿ ವರ್ತಿಸಿರೋ ಮಾಲೀಕನೋರ್ವ ಕಾರ್ಮಿಕನನ್ನು ಕಟ್ಟಿಹಾಕಿ ನಾಯಿಯಿಂದ ಕಚ್ಚಿಸಿರೋ ಪ್ರಕರಣ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳೆಲೆಯ ಹರೀಶ್ ಎಂಬವರ ಮೇಲೆ ಮಾಲೀಕ ಕಿಶನ್ ನಾಯಿ ದಾಳಿ ನಡೆಸಿದ್ದಾರೆ.

    ಏನಿದು ಘಟನೆ?: ಕಳೆದ ಒಂದೂವರೆ ವರ್ಷಗಳಿಂದ ಹರೀಶ್ ರಾಜಾಪುರ ಗ್ರಾಮದ ಕಿಶನ್ ಎಂಬವರ ಮನೆಯಲ್ಲಿ ಕೂಲಿ ಕೆಲಸಮಾಡಿಕೊಂಡಿದ್ದರು. ತನ್ನ ಮಾಲೀಕನಿಂದ 4 ಸಾವಿರ ಹಣ ಸಾಲಪಡೆದಿದ್ದ ಹರೀಶ್ ಅದನ್ನು ವಾಪಸ್ ನೀಡದೆ ಕೆಲಸಕ್ಕೂ ಹೋಗದೆ ಕದ್ದು ಮುಚ್ಚಿ ಓಡಾಡುತ್ತಿದ್ದನಂತೆ. ಹಣ ನೀಡದೆ ಕೆಲಸಕ್ಕೂ ಬಾರದೆ ಇದ್ದ ಕಾರ್ಮಿಕನ ವಿರುದ್ಧ ತೀರಾ ಸಿಟ್ಟಿಗೆದ್ದಿದ್ದ ಮಾಲೀಕ ಕಿಶನ್ ಅಗಸ್ಟ್ 29ರಂದು ಬಾಳೆಲೆಯಲ್ಲಿ ಆತನನ್ನು ಕಂಡವನೆ ನೇರವಾಗಿ ತನ್ನ ಜೀಪಲ್ಲಿ ಕೂರಿಸಿಕೊಂಡು ಹೋಗಿ ಮನೆ ಬಳಿ ಅಮಾನವೀಯತೆ ಮೆರೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

    ಕಾರ್ಮಿಕ ಹರೀಶ್ ನನ್ನು ಕಟ್ಟಿಹಾಕಿ ತನ್ನ ಶೆಡ್ ನೊಳಗೆ ಕೂಡಿ ಹಾಕಿ ನಾಯಿಗಳನ್ನ ಛೂ ಬಿಟ್ಟು ಕಚ್ಚಿಸಿದ್ದಾನೆ. ಎರಡು ಮೂರು ನಾಯಿಗಳ ದಾಳಿಯಿಂದ ತಲೆ, ದೇಹ, ಕೈಕಾಲುಗಳು ತೀವ್ರ ಗಾಯಗಳಾಗರೋ ಹರೀಶ್ ಇದೀಗ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಹರೀಶ್ ಆರೋಪಿಸಿದ್ದಾರೆ. ಆದ್ರೆ ಕಿಶನ್, `ತನಗೆ ಹರೀಶ್ 20 ಸಾವಿರ ಹಣ ಕೊಡೋಕೆ ಬಾಕಿಯಿದೆ. ಇಷ್ಟಿದ್ದರೂ ಆತ ಕದ್ದು ಮುಚ್ಚಿ ಓಡಾಡುತ್ತಿದ್ದ’ ಎಂದು ಪೊಲೀಸರಲ್ಲಿ ಹೇಳಿದ್ದಾರೆ.

    ಅದೇನೇ ಇರಲಿ ಮಾಲೀಕನ ಇಂತಹ ಅಮಾನವೀಯ ವರ್ತನೆ ಬಡ ಕಾರ್ಮಿಕನನ್ನು ಕಂಗಾಲುಗೊಳಿಸಿದ್ದು, ಇಷ್ಟೆಲ್ಲಾ ಆದ್ರೂ ನೊಂದ ಕಾರ್ಮಿಕನ ನೆರವಿಗೆ ಯಾವೊಂದು ಇಲಾಖೆಯೂ ಬಂದಿಲ್ಲ, ಆತನ ನೋವು ಕೇಳಿಲ್ಲ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರಷ್ಟೆ ಎಂದು ದಲಿತ ಸಂಘರ್ಷ ಸಮಿತಿ ಪ್ರಮುಖರು ಆರೋಪಿಸುತ್ತಿದ್ದು, ನೊಂದ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ ಎಂದು ಆಗ್ರಹಿಸುತ್ತಿದ್ದಾರೆ.

    ಸದ್ಯ ಮಾಲೀಕ ಕಿಶನ್ ವಿರುದ್ಧ ಅಪಹರಣ, ಹಲ್ಲೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಕಿಶನ್ ಬಂಧನಕ್ಕೆ ಬಲೆ ಬೀಸಿದ್ದಾರೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ನಾಗಪ್ಪ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

  • ಮಾಲೀಕನ ಈ ಸೂಪರ್ ಐಡಿಯಾದಿಂದ ವರ್ಲ್ಡ್ ಫೇಮಸ್ ಆಯ್ತು ಕೆಫೆ

    ಮಾಲೀಕನ ಈ ಸೂಪರ್ ಐಡಿಯಾದಿಂದ ವರ್ಲ್ಡ್ ಫೇಮಸ್ ಆಯ್ತು ಕೆಫೆ

    ಸ್ಯಾನ್ ಫ್ರಾನ್ಸಿಸ್ಕೋ: ಹೋಟೆಲ್ ಗಳು ಬರೀ ತಿಂಡಿ ತಿನಿಸುಗಳನ್ನು ಮಾಡಿದ್ರೆ ಸಾಲದು, ಜನರನ್ನು ಹೇಗೆ ಆಕರ್ಷಿಸಿಕೊಳ್ಳಬೇಕು. ಜನರನ್ನು ಆಕರ್ಷಿಸಲೆಂದೇ ಈಗ ಅಮೆರಿಕದ ಕೆಫೆಯೊಂದು ಸಖತ್ ಪ್ಲಾನ್ ಮಾಡಿದ್ದು ಯಶಸ್ವಿಯಾಗಿದೆ.

    ಹೌದು, ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಗಾರ್ತ್ ಹೊನಾರ್ಟ್ ಎಂಬವರು ಇಲಿಗಳ ಹೋಟೆಲ್ ನಿರ್ಮಿಸಿದ್ದಾರೆ. ಇಲಿಗಳ ಹೋಟೆಲ್ ಎನ್ನುವ ಕಾರಣಕ್ಕೆ ಇಲಿಮಾಂಸವನ್ನು ನೀಡುತ್ತಾರೆ ಎಂದು ನೀವು ಊಹಿಸಿದರೆ ತಪ್ಪಾದಿತು. ಕೆಫೆಯಲ್ಲಿ ಇಲಿಗಳು ಗ್ರಾಹಕರನ್ನು ಬರಮಾಡಿಕೊಳ್ಳುತ್ತವೆ. ಹಾಗೆ ಇಲ್ಲಿ ಗ್ರಾಹಕರೊಂದಿಗೆ ಪ್ರೀತಿಯಿಂದ ಬೆರೆಯುತ್ತವೆ ಎಂದು ಗಾರ್ತ್ ಹೊನಾರ್ಟ್ ಹೇಳುತ್ತಾರೆ.

    ಈ ಇಲಿಗಳಿಂದ ಯಾವುದೇ ಅಪಾಯವಿಲ್ಲ. ಇವುಗಳಿಂದ ಕಾಯಿಲೆ ಕೂಡಾ ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುಲಾಗಿದೆ ಎಂದು ತಿಳಿಸಿದ್ದಾರೆ.

    ಇದು ಮೊನ್ನೆಯಷ್ಟೇ ಶುರುವಾದ ರ್ಯಾಟ್ ಕೆಫೆ ಈಗ ವರ್ಲ್ಡ್ ಫೇಮಸ್ ಯಾಗಿದೆ. ಇದು ಏಷ್ಯಾದ ಕೆಲವು ಪ್ರಾಂತ್ಯಗಳಲ್ಲಿ ಮತ್ತು ಅಮೆರಿಕ, ಯೂರೋಪಿನಲ್ಲಿ ಈ Rat Cafeನ್ನು ಪ್ರಾರಂಭಮಾಡಲಾಗಿದೆ. ಈ ಇಲಿಗಳ ಜೊತೆ ಬೆಕ್ಕುಗಳು ಕೂಡಾ ಇರುತ್ತವೆ ಎನ್ನುವುದು ವಿಶೇಷವಾಗಿದೆ.

    https://twitter.com/TheSFDungeon/status/880893747520786432?ref_src=twsrc%5Etfw&ref_url=http%3A%2F%2Fwww.ndtv.com%2Foffbeat%2Fat-san-franciscos-rat-cafe-you-dine-as-rodents-run-free-only-for-50-1719691

  • ವಿಡಿಯೋ: ಬಿಲ್ ಕೇಳಿದ್ದಕ್ಕೆ ಬಾರ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

    ವಿಡಿಯೋ: ಬಿಲ್ ಕೇಳಿದ್ದಕ್ಕೆ ಬಾರ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ

    ಬೆಂಗಳೂರು: ಬಾರ್‍ನಲ್ಲಿ ಚೆನ್ನಾಗಿ ಕುಡಿದ ಪುಂಡರು ಬಿಲ್ ಕೇಳಿದ್ದಕ್ಕೆ ಬಾರ್ ಮಾಲೀಕನ ಮೇಲೆಯೇ ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಪಿಣ್ಯ 2ನೇ ಹಂತದ ಜೆಎಂಆರ್ ಬಾರ್ & ರೆಸ್ಟೋರೆಂಟ್‍ನಲ್ಲಿ ಈ ಘಟನೆ ನಡೆದಿದೆ.

    ಮಚ್ಚು ಲಾಂಗ್‍ಗಳನ್ನು ಹಿಡಿದಿದ್ದ ಮೂವರು ಪುಂಡರು ದಾಂಧಲೆ ನಡೆಸಿದ್ದಾರೆ. ಬಾರ್ ಮಾಲೀಕರ ಮೇಲೆ ಮಚ್ಚು ಬೀಸಿದ್ದು ಮಾತ್ರವಲ್ಲದೇ ಬಾರ್‍ನಲ್ಲಿದ್ದ ಗ್ರಾಹಕರಿಗೂ ತೊಂದರೆ ನೀಡಿದ್ದಾರೆ.

     ಈ ಘಟನೆ ಮೇ 9 ರಂದು ನಡೆದಿದ್ದು, ಬಾರ್‍ನಲ್ಲಿದ್ದ ಸಿಸಿಟಿವಿಯಲ್ಲಿ ದುಷ್ಕರ್ಮಿಗಳ ಪುಂಡಾಟ ಸೆರೆಯಾಗಿದೆ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=5eKACMHIc5g