Tag: ಮಾಲೀಕ

  • ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ – ವೈರಲ್ ಆಯ್ತು ಅಪಾರ್ಟ್‍ಮೆಂಟ್ ನಿಯಮದ ಪೋಸ್ಟ್

    ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ – ವೈರಲ್ ಆಯ್ತು ಅಪಾರ್ಟ್‍ಮೆಂಟ್ ನಿಯಮದ ಪೋಸ್ಟ್

    ಮುಂಬೈ: 3ಬಿಎಚ್‍ಕೆ ಫ್ಲ್ಯಾಟ್ ಲಭ್ಯವಿದೆ. ಆದರೆ ಮುಸ್ಲಿಮರು, ನಾಯಿಗಳಿಗೆ ಪ್ರವೇಶವಿಲ್ಲ ಎಂದು ಮುಂಬೈ ನಗರದ ಅಪಾರ್ಟ್‍ಮೆಂಟ್ ಮಾಲೀಕ ಹಾಕಿರುವ ಟು ಲೆಟ್ ಫಲಕ ಈಗ ವಿವಾದಕ್ಕೆ ಕಾರಣವಾಗಿದೆ.

    3 ಬಿಎಚ್‍ಕೆ ನಿವಾಸ ಭೋಗ್ಯಕ್ಕೆ ಲಭ್ಯವಿದೆ. ಆದರೆ ಮುಸ್ಲಿಮರು ಹಾಗೂ ನಾಯಿಗಳನ್ನು ಹೊಂದಿರುವವರಿಗೆ ಪ್ರವೇಶವಿಲ್ಲ ಎಂದು ಹಾಕಿದ್ದಾರೆ. ಮುಂಬೈ ನಿವಾಸಿ ಅನ್ಮೆಶ್ ಪಾಟೀಲ್ ಈ ನಿಯಮಗಳು ಹಾಗೂ ಫ್ಲ್ಯಾಟ್‍ನ ಚಿತ್ರವನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇದೀಗ ಸಖತ್ ವೈರಲ್ ಆಗಿದೆ. ವರ್ಣಬೇಧ ನೀತಿಗೆ ಇದೊಂದು ಉದಾಹರಣೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪತ್ರಕರ್ತೆ ರಾಣಾ ಅಯ್ಯುಬ್ ಈ ಪೋಸ್ಟ್ ಶೇರ್ ಮಾಡಿ, ಮುಸ್ಲಿಮರು ಹಾಗೂ ನಾಯಿಗಳಿಗೆ ಪ್ರವೇಶವಿಲ್ಲ ಎಂಬುದು ಮುಂಬೈನ ಬಾಂದ್ರಾದಲ್ಲಿ ಸೊಗಸಾದ ವಿಳಾಸವಾಗಿದೆ. ಇದು 20ನೇ ಶತಮಾನದ ಭಾರತ, ನಮ್ಮದು ಕೋಮುವಾದಿ ರಾಷ್ಟ್ರವಲ್ಲ. ಇದು ವರ್ಣಬೇಧ ನೀತಿಯಲ್ಲವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.

    ನಾನೂ ಸಹ ಕಳೆದ ಮೂರು ತಿಂಗಳಿಂದ ಬಾಂದ್ರಾದಲ್ಲಿ ಮನೆ ಹುಡುಕುತ್ತಿದ್ದೇನೆ. ನನ್ನ ಹೆಸರು ರಾಣಾ ಇದು ಮುಸ್ಲಿಂ ಹೆಸರಲ್ಲ ಎಂಬುದು ಹಲವು ಮಾಲೀಕರಿಗೆ ತಿಳಿಯುತ್ತದೆ. ಆದರೆ ನಮ್ಮ ಸರ್‍ನೇಮ್ ಶೇಖ್ ಎಂಬುದನ್ನು ಓದಿದಾಗ ನಮ್ಮ ಬ್ರೋಕರ್ ಕಡೆಯಿಂದ ಕರೆ ಬರುತ್ತದೆ. ಆಗ ಬ್ರೋಕರ್ ಅಸಹ್ಯಕರವಾಗಿ ಕ್ಷಮೆಯಾಚಿಸುತ್ತಾರೆ ಎಂದು ಅವರು ತಮ್ಮ ಮನೆ ಹುಡುಕುವ ಅನುಭವವನ್ನು ಹಂಚಿಕೊಂಡಿದ್ದಾರೆ.

    ಈ ಪೋಸ್ಟ್ ಪಾಕಿಸ್ತಾನ ರಾಷ್ಟ್ರಪತಿ ಡಾ.ಆರೀಫ್ ಅಲ್ವಿ ಅವರ ಗಮನ ಸೆಳೆದಿದ್ದು, ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಹಿಂದುತ್ವ ಹಾಗೂ ಆರ್‍ಎಸ್‍ಎಸ್‍ನ ಉಗ್ರಗಾಮಿ ಮತ್ತು ತತ್ವಶಾಸ್ತ್ರದಿಂದ ಪ್ರೋತ್ಸಾಹಿಸಲ್ಪಟ್ಟ ಸಮಾಜ ಮಾತ್ರ ಇದನ್ನು ಈ ರೀತಿಯಾಗಲು ಬಿಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ಹಲವರು ಈ ಕುರಿತು ವಿರೋಧ ವ್ಯಕ್ತಪಡಿಸಿದರೆ, ಇನ್ನೂ ಹಲವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅಲ್ಲದೆ ಮನೆಯ ಮಾಲೀಕ ಸಹ ತಮ್ಮ ನಿಯಮಗಳನ್ನು ಸಮರ್ಥಿಸಿಕೊಂಡಿದ್ದು, ಇದು ಖಾಸಗಿ ಆಸ್ತಿ, ನನ್ನ ಮನೆಗೆ ಯಾರು ಬಾಡಿಗೆಗೆ ಬರಬೇಕು ಎಂಬುದನ್ನು ನಿರ್ಧರಿಸುವ ಎಲ್ಲ ಹಕ್ಕನ್ನು ಹೊಂದಿದ್ದೇನೆ ಎಂದು ಹೇಳಿದ್ದಾರೆ.

  • ಅತ್ಯಾಚಾರಕ್ಕೆ ವಿರೋಧ- 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಮಾಲೀಕ

    ಅತ್ಯಾಚಾರಕ್ಕೆ ವಿರೋಧ- 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಮಾಲೀಕ

    – ಮನೆ ಕೆಲಸದ ಬಾಲಕಿ ಮೇಲೆ ಮಾಲೀಕ ಅತ್ಯಾಚಾರ

    ಹೈದರಾಬಾದ್: ಅತ್ಯಾಚಾರ ವಿರೋಧಿಸಿದ್ದಕ್ಕೆ ಮಾಲೀಕ 13 ವರ್ಷದ ಬಾಲಕಿಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿಂದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ.

    ತೆಲಂಗಾಣದ ಖಮ್ಮಮ್ ನಗರದಲ್ಲಿ ಘಟನೆ ನಡೆದಿದ್ದು, ಬುಡಕಟ್ಟು ಜನಾಂಗದ ಬಾಲಕಿ ಮೇಲೆ ಆಕೆಯ ಮಾಲೀಕನೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಒಪ್ಪದ್ದಕ್ಕೆ ಬೆಂಕಿ ಹಚ್ಚಿ ಸಜೀವ ದಹನ ಮಾಡಲು ಯತ್ನಿಸಿದ್ದು, ಬಾಲಕಿಯನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿ ಬಾಲಕಿ ಸಾವನ್ನಪ್ಪಿದ್ದಾಳೆ.

    ಪೊಲೀಸರು ಈ ಕುರಿತು ಮಾಹಿತಿ ನೀಡಿದ್ದು, 13 ವರ್ಷದ ಬಾಲಕಿ ತೆಲಂಗಾಣದ ಖಮ್ಮಮ್ ಪಟ್ಟಣದ ಆರೋಪಿಯ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದಳು. ಸೆಪ್ಟೆಂಬರ್ 18ರಂದು ಆರೋಪಿ ಕಿರುಕುಳ ನೀಡಲು ಮುಂದಾಗಿದ್ದು, ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಆಗ ಆರೋಪಿ ಅವಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಬಾಲಕಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದವು.

    ಸುಟ್ಟಗಾಯಗಳು ಹೆಚ್ಚಾಗಿದ್ದರಿಂದ ಬಾಲಕಿಯನ್ನು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ತೆಲಂಗಾಣ ಪೊಲೀಸರಿಗೆ ಪ್ರಕರಣದ ಕುರಿತು ತಿಳಿದಿದೆ. ಈ ಕುರಿತು ಖಮ್ಮಮ್ ಪೊಲೀಸ್ ಆಯುಕ್ತ ತಫ್ಸೀರ್ ಇಕ್ಬಾಲ್ ಖಚಿತಪಡಿಸಿದ್ದು, ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಬಾಲಕಿ ಸಾವನ್ನಪ್ಪಿದ್ದಾಳೆ. ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‍ಗಳಡಿ ದೂರು ದಾಖಲಾಗಿತ್ತು. ಈಗ ಕೊಲೆ ಮಾಡಿರುವುದಾಗಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ಪ್ರಕರಣದ ಕುರಿತು ಅರಿತ ತೆಲಂಗಾಣ ರಾಜ್ಯ ಮಾನವ ಹಕ್ಕುಗಳ ಆಯೋಗ(ಟಿಎಸ್‍ಎಚ್‍ಆರ್‍ಸಿ) ಖಮ್ಮಮ್ ಪೊಲೀಸರಿಗೆ ವರದಿ ನೀಡುವಂತೆ ತಿಳಿಸಿದೆ. ಪ್ರಕರಣ ನಡೆಯುತ್ತಿದ್ದಂತೆ ಪೊಲೀಸರಿಗೆ ತಿಳಿಸದೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರು ಸಹ ನಮಗೆ ಮಾಹಿತಿ ನೀಡಿಲ್ಲ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

  • ಶಿವಮೊಗ್ಗದಲ್ಲಿ ರಾಬರಿಗೆ ಯತ್ನ- ಮಾಲೀಕ ಗನ್ ತೋರಿಸ್ತಿದ್ದಂತೆ ದರೋಡೆಕೋರರು ಪರಾರಿ

    ಶಿವಮೊಗ್ಗದಲ್ಲಿ ರಾಬರಿಗೆ ಯತ್ನ- ಮಾಲೀಕ ಗನ್ ತೋರಿಸ್ತಿದ್ದಂತೆ ದರೋಡೆಕೋರರು ಪರಾರಿ

    – ಏರ್ ಗನ್ ನೋಡಿ ಭಯಬಿದ್ದ ಕಳ್ಳರು

    ಶಿವಮೊಗ್ಗ: ಮಲೆನಾಡಿನಲ್ಲಿ ಇತ್ತಿಚೇಗೆ ಕೊಲೆ, ಸುಲಿಗೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಎರಡು ಜೋಡಿ ಕೊಲೆಗಳು ನಡೆದಿವೆ.

    ಈ ಘಟನೆ ಮಾಸುವ ಮುನ್ನವೇ ನಿನ್ನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದಲ್ಲಿ ರಾಬರಿಗೆ ಬಂದ ತಂಡ ಮನೆಯ ಮಾಲೀಕ ಏರ್ ಗನ್ ಕೈಗೆತ್ತಿಕೊಳ್ಳುತ್ತಿದ್ದಂತೆ ಗನ್ ಎಂದು ಭಾವಿಸಿ ಹಾಗೂ ತಕ್ಷಣ ಗ್ರಾಮಸ್ಥರನ್ನು ಮನೆ ಬಳಿ ಬಂದ್ದಿದ್ದನ್ನು ಕಂಡು ಪರಾರಿಯಾಗಿದ್ದಾರೆ.

    ನಿನ್ನೆ ರಾತ್ರಿ ಮೇಗರವಳ್ಳಿಯ ಪುರುಷೋತ್ತಮ್ ಹೆಗಡೆ, ಗಣೇಶ್ ಹೆಗಡೆ ಹಾಗೂ ರೇವಂತ್ ಹೆಗಡೆ ಅವರ ಮನೆ ಬಾಗಿಲು ಬಡಿದು ಮಚ್ಚು, ಲಾಂಗ್ ತೋರಿಸಿ ದರೋರೆಗೆ ಯತ್ನ ಮಾಡಿದ್ದಾರೆ. ಈ ವೇಳೆ ಮನೆಯವರ ಕೂಗಾಟ ಕೇಳಿ ಗ್ರಾಮಸ್ಥರು ಹೆಗಡೆ ಮನೆಯವರ ಬಳಿ ಬರುವಷ್ಟರಲ್ಲಿ ಇನೋವಾ ಕಾರಿನಲ್ಲಿ ಬಂದಿದ್ದ ದರೋಡೆಕೋರರು ಪರಾರಿಯಾಗಿದ್ದಾರೆ. ಇದರಿಂದ ಗ್ರಾಮದಲ್ಲಿ ಆಂತಕದ ವಾತಾವರಣ ಸೃಷ್ಟಿಯಾಗಿದೆ.

    ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಬರಿ ಯತ್ನ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮೇಗರವಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಹೆಗಡೆ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

  • ಬಾಡಿಗೆ ನೀಡದ್ದಕ್ಕೆ ವಿಧವೆಯನ್ನ ಮರಕ್ಕೆ ಕಟ್ಟಿದ ಮಾಲೀಕ

    ಬಾಡಿಗೆ ನೀಡದ್ದಕ್ಕೆ ವಿಧವೆಯನ್ನ ಮರಕ್ಕೆ ಕಟ್ಟಿದ ಮಾಲೀಕ

    – ಮನೆಯ ವಸ್ತುಗಳನ್ನ ಹೊರಗೆ ಎಸೆದ
    – ಲಾಕ್‍ಡೌನ್‍ನಲ್ಲಿ ಕೆಲಸ ಕಳೆದುಕೊಂಡಿದ್ದ ಮಹಿಳೆ

    ಲಕ್ನೋ: ಮನೆಯ ಬಾಡಿಗೆ ನೀಡದಕ್ಕೆ ಮಾಲೀಕನೋರ್ವ ಮಹಿಳೆ ಜೊತೆ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಹಮರೀಪುರ ಜಿಲ್ಲೆಯ ತಲಾಬ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಶೋಭಾ ದೇವಿ ಹಲ್ಲೆಗೊಳಗಾದ ಮಹಿಳೆ. ತಲಾಬ್ ಇಲಾಖೆಯಲ್ಲಿರುವ ಭಗೀರಥ್ ಪ್ರಜಾಪತಿ ಎಂಬಾತನ ಬಾಡಿಗೆ ಮನೆಯಲ್ಲಿ ಶೋಭಾ ವಾಸವಾಗಿದ್ದರು. ಶೋಭಾ ಪತಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಲಾಕ್‍ಡೌನ್ ಅವಧಿಯಲ್ಲಿ ಕೆಲಸ ಕಳೆದುಕೊಂಡಿದ್ದ ಶೋಭಾ ಕೆಲ ತಿಂಗಳ ಬಾಡಿಗೆಯನ್ನು ಬಾಕಿ ಉಳಿಸಿಕೊಂಡಿದ್ದರು.

    ಮಾನವೀಯತೆ ಮರೆತ ಭಗೀರಥ್ ಕೆಲ ಮಹಿಳೆಯರೊಂದಿಗೆ ಶೋಭಾ ಮನೆಗೆ ಆಗಮಿಸಿದ್ದಾನೆ. ಮಹಿಳೆಯರ ಸಹಾಯದಿಂದ ಶೋಭಾ ಅವರನ್ನ ಮರಕ್ಕೆ ಕಟ್ಟಿ ಹಾಕಿ, ಮನೆಯಲ್ಲಿದ್ದ ವಸ್ತುಗಳನ್ನು ಹೊರ ಹಾಕಿ ಬೀಗ ಹಾಕಿ ಬಾಡಿಗೆ ನೀಡುವಂತೆ ಕಿರುಕುಳ ನೀಡಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನ ರಕ್ಷಿಸಿ, ಭಗೀರಥ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ಮಾಲೀಕನ ನೆನಪಲ್ಲೇ ಕೊರಗಿ ಕೊರಗಿ ಪ್ರಾಣ ಬಿಟ್ಟ ಶ್ವಾನ

    ಮಾಲೀಕನ ನೆನಪಲ್ಲೇ ಕೊರಗಿ ಕೊರಗಿ ಪ್ರಾಣ ಬಿಟ್ಟ ಶ್ವಾನ

    – ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ
    – ಮಾಲೀಕನ ಸಮಾಧಿ ಪಕ್ಕದಲ್ಲೇ ಮಣ್ಣಾದ ಶ್ವಾನ

    ಬೆಳಗಾವಿ: ಸಾಕಿ ಸಲುಹಿದ ಮಾಲೀಕನ ಅಗಲಿಕೆಯಿಂದ ಶ್ವಾನವೊಂದು ಅನ್ನ ನೀರು ತ್ಯಜಿಸಿ ಮಾಲೀಕನಿಗಾಗಿ ಹುಡುಕಾಟ ನಡೆಸಿತ್ತು. ಕೊನೆಗೆ ಮಾಲೀಕನ ನೆನಪಲ್ಲೇ ಕೊರಗಿ ಕೊರಗಿ ಪ್ರಾಣ ಬಿಟ್ಟಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ತನ್ನ ಬಳಿ ಬಂದು ನಿಂತಿದ್ದ ಶ್ವಾನವನ್ನು ಏಕಾಏಕಿ ಸರೋವರಕ್ಕೆ ಎಸೆದ- ವಿಡಿಯೋ ವೈರಲ್

    ಅವರಾದಿ ಗ್ರಾಮದ ನಿವಾಸಿ ಶಂಕ್ರಪ್ಪ ಮಡಿವಾಳರ ಸಾವನ್ನಪ್ಪಿದ್ದರು. ಆದರೆ ಅವರ ಸಾಕುನಾಯಿ ಕಡ್ಡಿ ಮಾಲೀಕನ ಅಕಾಲಿಕ ನಿಧನದಿಂದ ಅವರು ಸುತ್ತುತ್ತಿದ್ದ ಜಾಗವನ್ನೆಲ್ಲ ಸುತ್ತಿ ಮಾಲೀಕನಿಗಾಗಿ ಹುಡುಕಾಟ ನಡೆಸಿತ್ತು. ಕೊನೆಗೆ ಶ್ವಾನ ಕಡ್ಡಿ ಮಾಲೀಕನಿಗಾಗಿ ಹುಡುಕಿ ಹುಡುಕಿ ಆತನಿಲ್ಲದ ಕೊರಗಲ್ಲಿ ಊಟವನ್ನೂ ಸಹ ತ್ಯಜಿಸಿ ಸಾವನ್ನಪ್ಪಿದೆ. ಇದೇ ಸೆಪ್ಟೆಂಬರ್ 6ರಂದು ಶಂಕ್ರಪ್ಪ ಮಡಿವಾಳರ ಹೃದಯಾಘಾತದಿಂದ ಅಕಾಲಿಕವಾಗಿ ನಿಧನ ಹೊಂದಿದ್ದರು.

    ಮೃತ ಶಂಕ್ರಪ್ಪ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರಕ್ಕೆ ಹಾಲು ಮಾರಾಟ ಮಾಡುತ್ತಿದ್ದರು. ಹೀಗಾಗಿ ಶಂಕ್ರಪ್ಪ ಅಲ್ಲಿಗೆ ಹೋಗಿರಬಹುದು ಎಂದು ಶ್ವಾನ ಕಡ್ಡಿ ಅಲ್ಲಿಯೂ ಸಹ ಹುಡುಕಾಟ ನಡೆಸಿತ್ತು. ಕಳೆದ ಒಂದು ವಾರದಿಂದ ಮಾಲೀಕನ ನೆನಪಲ್ಲಿ ಊಟವನ್ನು ಸಹ ತ್ಯಜಿಸಿದ್ದ ಕಡ್ಡಿ ಆತನಿಗಾಗಿ ಊರೊಳಗೆ ಹುಡುಕದ ಜಾಗವಿಲ್ಲ. ದೂರದ ಮಹಾಲಿಂಗಪುರದ ಗಲ್ಲಿ ಗಲ್ಲಿಗೂ ಸಹ ತಿರುಗಿದ್ದ ಕಡ್ಡಿ ಕೊನೆಗೆ ಮಾಲೀಕನಿಲ್ಲದ ಕೊರಗಲ್ಲಿ ಸಾವನ್ನಪ್ಪಿದೆ ಎಂದು ಗ್ರಾಮಸ್ಥ ಪ್ರಕಾಶ್ ಹೇಳಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶ್ವಾನ ಕಡ್ಡಿಯ ಮೃತದೇಹವನ್ನು ಊರಿಗೆ ತಂದು ಊರಿನ ಪ್ರಮುಖರ ಸಮ್ಮುಖದಲ್ಲಿ ಮೆರವಣಿಗೆ ಮಾಡಿ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಾಲೀಕ ಶಂಕ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಮಣ್ಣು ಮಾಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

  • ತಲೆ ಸುತ್ತು ಬಂದಾಗ ನನ್ನ ಬಟ್ಟೆ ಬಿಚ್ಚಿದ – ಬಾಡಿಗೆ ಕೊಡೋ ನೆಪದಲ್ಲಿ ಮಾಲೀಕನ ಪತ್ನಿಯ ಮೇಲೆ ರೇಪ್

    ತಲೆ ಸುತ್ತು ಬಂದಾಗ ನನ್ನ ಬಟ್ಟೆ ಬಿಚ್ಚಿದ – ಬಾಡಿಗೆ ಕೊಡೋ ನೆಪದಲ್ಲಿ ಮಾಲೀಕನ ಪತ್ನಿಯ ಮೇಲೆ ರೇಪ್

    – ತನಿಖೆ ವೇಳೆ ಮಹಿಳೆಯ ರಹಸ್ಯ ಬಯಲು

    ಲಕ್ನೋ: 23 ವರ್ಷದ ಯುವಕನೊಬ್ಬ ಮತ್ತು ಬರುವ ಔಷಧಿ ನೀಡಿ ಮನೆ ಮಾಲೀಕನ ಪತ್ನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಜಹಾಂಗೀರ್‌ಪುರ ಪ್ರದೇಶದಲ್ಲಿ ನಡೆದಿದೆ.

    ಆರೋಪಿಯನ್ನು ವಿಶಾಲ್ ಎಂದು ಗುರುತಿಸಲಾಗಿದೆ. ಆರೋಪಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದನು. ಮತ್ತು ಬರುವ ಔಷಧಿ ನೀಡಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾಳೆ.

    ಈ ಘಟನೆ ನಡೆದಾಗ ಮಹಿಳೆಯ ಪತಿ ಮನೆಯಲ್ಲಿ ಇರಲಿಲ್ಲ. ಪತಿ ಕೆಲಸದ ನಿಮಿತ್ತ ರಾಜಸ್ಥಾನಕ್ಕೆ ಹೋಗಿದ್ದರು. ಆದರೆ ಏಪ್ರಿಲ್‍ನಿಂದ ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿದ್ದರಿಂದ ಮಹಿಳೆಯ ಪತಿ ಅಲ್ಲಿಯೇ ಇದ್ದರು. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಮಹಿಳೆ ಈಗ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾಳೆ.

    “ಆರೋಪಿ ವಿಶಾಲ್ ಬಾಡಿಗೆ ನೀಡುವ ನೆಪದಲ್ಲಿ ನಮ್ಮ ಮನೆಗೆ ಬಂದಿದ್ದ. ನಂತರ ಇಬ್ಬರು ಚಹಾವನ್ನು ಕುಡಿದೆವು. ಚಹಾ ಕುಡಿದ ನಂತರ ನನಗೆ ತಲೆ ಸುತ್ತು ಬಂತು. ಈ ವೇಳೆ ವಿಶಾಲ್ ನನ್ನ ಬಟ್ಟೆಗಳನ್ನು ಬಿಚ್ಚಿದ್ದನು. ನಂತರ ನನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ನಾನು ವಿರೋಧಿಸಿದಾಗ ಆರೋಪಿ ನನ್ನನ್ನು ಥಳಿಸಿ ನನ್ನ ಮತ್ತು ನನ್ನ ಇಬ್ಬರು ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದನು. ಚಹಾದಲ್ಲಿ ಮತ್ತು ಬರುವ ಔಷಧಿ ಮಿಕ್ಸ್ ಮಾಡಿದ್ದನು” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

    ಮಹಿಳೆ ಜೇವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಐಪಿಸಿ ಸೆಕ್ಷನ್ ಕಾಯ್ದೆಯಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆದರೆ ತನಿಖೆ ವೇಳೆ ಮಹಿಳೆಯ ಅನೈತಿಕ ಸಂಬಂಧ ಬಯಲಾಗಿದೆ.

    ಮಹಿಳೆ ಆರೋಪಿ ವಿಶಾಲ್ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಇವರಿಬ್ಬರ ಸಂಬಂಧದ ಬಗ್ಗೆ ತಿಳಿದು ಪತಿ ಕೆಲವು ದಿನಗಳ ಹಿಂದೆ ಅವಳಿಂದ ದೂರವಾಗಿ ವಾಸಿಸುತ್ತಿದ್ದನು. ಆರೋಪಿಯನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಬ್ ಇನ್ಸ್‌ಪೆಕ್ಟರ್ ಫಿರೋಜ್ ಖಾನ್ ಹೇಳಿದ್ದಾರೆ.

  • ಮೃತ ಮಾಲೀಕನ ಎಟಿಎಂ ಕಾರ್ಡ್ ಬಳಸಿ 34 ಲಕ್ಷ ರೂ. ಡ್ರಾ ಮಾಡಿದ ಮನೆ ಕೆಲಸದಾಕೆ!

    ಮೃತ ಮಾಲೀಕನ ಎಟಿಎಂ ಕಾರ್ಡ್ ಬಳಸಿ 34 ಲಕ್ಷ ರೂ. ಡ್ರಾ ಮಾಡಿದ ಮನೆ ಕೆಲಸದಾಕೆ!

    ಕೋಲ್ಕತ್ತಾ: ಮಹಿಳೆಯೊಬ್ಬಳು ತನಗೆ ಉದ್ಯೋಗ ನೀಡಿದ ಮಾಲೀಕ ಮೃತಪಟ್ಟ ಬಳಿಕ ಆತನ ಎಟಿಎಂನಿಂದಲೇ ಬರೋಬ್ಬರಿ 35 ಲಕ್ಷಕ್ಕೂ ಅಧಿಕ ಹಣ ಡ್ರಾ ಮಾಡಿದ ಘಟನೆಯೊಂದು ನಡೆದಿದೆ.

    ಆರೋಪಿ ಮಹಿಳೆಯನ್ನು ರಿತಾ ರಾಯ್ ಎಂದು ಗುರುತಿಸಲಾಗಿದ್ದು, ಈಕೆ ಕಳೆದ 7 ವರ್ಷಗಳಿಂದ ಸತ್ಯನಾರಾಯಣ್ ಅಗರ್ವಾಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ಹಣ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಸತ್ಯನಾರಾಯಣ್ ಅವರು ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಮೃತಪಟ್ಟಿದ್ದಾರೆ. ಆ ಬಳಿಕ ನಕಶಿಪರ ನಿವಾಸಿಯಾಗಿರುವ ರಾಯ್, ತನ್ನ ಸಂಬಂಧಿಕರ ಸಹಾಯ ಪಡೆದು ತನ್ನ ಮಾಲೀಕನ ಎಟಿಎಂನಿಂದಲೇ 34,90,000 ಹಣ ಪೀಕಿದ್ದಾಳೆ.

    ಸತ್ಯನಾರಾಯಣ್ ಅವರು ಲಾಕ್‍ಡೌನ್ ಆದ ಮೊದಲ ವಾರದಲ್ಲಿ ತೀರಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಅವರು, ಪ್ರಿನ್ಸ್ ಅನ್ವರ್ ಷಾ ರಸ್ತೆಯ ಸಿಟಿ ಹೈನಲ್ಲಿರುವ ಮನೆಯಲ್ಲಿಯೇ ಇದ್ದರು. ಸತ್ಯನಾರಾಯಣ್ ಮೃತಪಟ್ಟ ಸಂದರ್ಭದಲ್ಲಿ ರಾಯ್, ಅವರ ಬಳಿಯಿದ್ದ ಎಟಿಎಂ ಕಾರ್ಡ್ ಕದ್ದಿದ್ದಾಳೆ. ಅಲ್ಲದೆ ಆ ಬಳಿಕದಿಂದಲೇ ಹಣ ಡ್ರಾ ಮಾಡಲು ಆರಂಭಿಸಿದ್ದಾಳೆ. ಆದರೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆ ಸಂದರ್ಭದಲ್ಲಿ ಯಾರೂ ಬ್ಯಾಂಕಿಗೆ ಹೋಗುತ್ತಿರಲಿಲ್ಲ. ಹೀಗಾಗಿ ಸತ್ಯನಾರಾಯಣ್ ಕುಟುಂಬಕ್ಕೆ ಹಣ ಡ್ರಾ ಮಾಡಿರುವ ವಿಚಾರವೂ ಗೊತ್ತಾಗಿರಲಿಲ್ಲ.

    ಇತ್ತ ಬ್ಯಾಂಕಿನಿಂದ ಸತ್ಯನಾರಾಯಣ್ ಅವರ ಮೊಬೈಲ್ ಗೆ ಮೆಸೇಜ್ ಗಳು ಬರುತ್ತಲೇ ಇತ್ತು. ಆದರೆ ಸತ್ಯನಾರಾಯಣ್ ತೀರಿಕೊಂಡ ಬಳಿಕ ಮೊಬೈಲ್ ಸ್ವಿಚ್ಛ್ ಆಫ್ ಆಗಿತ್ತು. ಹೀಗಾಗಿ ಅವರ ಅಕೌಂಟಿನಿಂದ ಹಣ ಹೋಗುತ್ತಿರುವ ವಿಚಾರ ಕುಟುಂಬದ ಗಮನಕ್ಕೆ ಬಂದಿರಲಿಲ್ಲ. ಸತ್ಯನಾರಾಯಣ್ ಅವರ ಮಗ ಇನ್ನೊಂದು ಫ್ಲ್ಯಾಟ್‍ನಲ್ಲಿ ವಾಸವಾಗಿದ್ದನು. ಮೃತರು ಬಳಸಿದ ಮೊಬೈಲ್ ಸಂಖ್ಯೆ ಸ್ವಿಚ್ಛ್ ಆಫ್ ಆಗಿದ್ದರಿಂದ ಬ್ಯಾಂಕ್ ಅವರ ಕುಟುಂಬದ ಸದಸ್ಯರಿಗೆ ಮೆಸೇಜ್ ಮೂಲಕ ಎಚ್ಚರಿಕೆಗಳನ್ನು ಕಳುಹಿಸಲು ಆರಂಭಿಸಿತ್ತು.

    ಜೂನ್ 1ರಂದು ಸತ್ಯನಾರಾಯಣ್ ಪುತ್ರ ಅನುರಾಗ್ ಬ್ಯಾಂಕಿಗೆ ತೆರಳಿ ಖಾತೆಯ ವಿವರಗಳನ್ನು ತೆಗೆದುಗೊಂಡಾಗ ಮಹಿಳೆ ಹಣ ಡ್ರಾ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮಗ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಎಟಿಎಂ ಸಿಸಿಟಿವಿಗಳನ್ನು ಪರೀಶಿಲಿಸಿದಾಗ ಇಬ್ಬರು ವ್ಯಕ್ತಿಗಳೊಂದಿಗೆ ಮಹಿಳೆ ಹಣ ಡ್ರಾ ಮಾಡುತ್ತಿರುವುದು ಬಯಲಾಗಿದೆ. ಸದ್ಯ ಘಟನೆ ಸಂಬಂಧಪಟ್ಟಂತೆ ಆರೋಪಿಗಳನ್ನು ಆಗಸ್ಟ್ 13ರಂದು ಬಂಧಿಸಲಾಗಿದ್ದು, ಆರೋಪಗಳಿಂದ 27 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.

  • ಬಾಡಿಗೆ ನೀಡಿಲ್ಲವೆಂದು ಯುವತಿಯರನ್ನು ಕೂಡಿ ಹಾಕಿದ ಪಿಜಿ ಮಾಲೀಕ

    ಬಾಡಿಗೆ ನೀಡಿಲ್ಲವೆಂದು ಯುವತಿಯರನ್ನು ಕೂಡಿ ಹಾಕಿದ ಪಿಜಿ ಮಾಲೀಕ

    ಹಾಸನ: ಪಿಜಿ ಬಾಡಿಗೆ ನೀಡಿಲ್ಲ ಎಂದು ಇಬ್ಬರು ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ಹಾಸನದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

    ಹಾಸನದ ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ಯುವತಿಯರಿಬ್ಬರು, ಯುಗಾದಿ ಹಬ್ಬಕ್ಕೆಂದು ಮೈಸೂರಿನಲ್ಲಿರುವ ಮನೆಗೆ ತೆರಳಿದ್ದರು. ನಂತರ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಪಿಜಿಗೆ ಬಂದಿರಲಿಲ್ಲ.

    ಇಂದು ಬಟ್ಟೆ, ಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಬಾಡಿಗೆ ಕಾರು ಮಾಡಿಕೊಂಡು ಪಿಜಿಗೆ ಬಂದಿದ್ದಾರೆ. ಈ ವೇಳೆ ಎರಡು ತಿಂಗಳ ಬಾಡಿಗೆ ಹಣ ನೀಡಲೇಬೇಕು ಎಂದು ಪಿಜಿ ಮಾಲೀಕ ಒತ್ತಾಯಿಸಿದ್ದಾನೆ. ಈ ವೇಳೆ ಯುವತಿಯರು ಹಣವಿಲ್ಲ ಎಂದು ತಮ್ಮ ಕಷ್ಟ ಹೇಳಿಕೊಂಡಿದ್ದು, ಅವರ ಮಾತಿಗೆ ಕ್ಯಾರೇ ಎನ್ನದ ಪಿಜಿ ಮಾಲೀಕ ಇಬ್ಬರನ್ನೂ ಪಿಜಿಯಲ್ಲೇ ಕೂಡಿ ಹಾಕಿದ್ದಾನೆ.

    ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಡಾವಣೆ ಪೊಲೀಸರು ಯುವತಿಯರಿಬ್ಬರನ್ನು ಬಿಡುಗಡೆಗೊಳಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ಹಣ ಕೊಡ್ಲಿಲ್ಲ ಅಂತ ಮಾಲೀಕನ ಟಿಪ್ಪರ್ ಎಗರಿಸಿದ ಭೂಪ

    ಹಣ ಕೊಡ್ಲಿಲ್ಲ ಅಂತ ಮಾಲೀಕನ ಟಿಪ್ಪರ್ ಎಗರಿಸಿದ ಭೂಪ

    – ‘ನಿನ್ನೆಯಿಂದ ಟೈಟಾಗಿದ್ದೀನಿ, ಇವತ್ತು 2 ಕ್ವಾಟ್ರು ಕುಡ್ದಿದ್ದೀನಿ’

    ಚಿಕ್ಕಮಗಳೂರು: ಹೆಂಡತಿ-ಮಕ್ಕಳಿಗೆ ಹಣ ಬೇಕು. ನಿಮ್ಮ ಕಾಲಿಗೆ ಬೀಳ್ತೀನಿ ಅಂದ್ರು ಮಾಲೀಕ ಹಣ ಕೊಡಲಿಲ್ಲ ಅಂತ ಹೇಳದೆ-ಕೇಳದೆ ಎಣ್ಣೆ ಏಟಲ್ಲಿ 14 ಚಕ್ರದ ಟಿಪ್ಪರ್ ಲಾರಿಯನ್ನ ತೆಗೆದುಕೊಂಡು ಊರಿಗೆ ಹೋಗಲು ಯತ್ನಿಸಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

    ಮಂಗಳೂರು ಮೂಲದ ರಂಗಪ್ಪ ಎಂಬವನು ಕಡೂರು ತಾಲೂಕಿನಲ್ಲಿ ಪ್ರಭಾಕರ್ ಅವರ ಬಳಿ ಕೆಲಸ ಮಾಡುತ್ತಿದ್ದ. ಕೊರೊನಾ ವೈರಸ್ ಆತಂಕದಿಂದ ಇಡೀ ದೇಶವೇ ಲಾಕ್‍ಡೌನ್ ಆದಮೇಲೆ ಡ್ರೈವರ್ ರಂಗಪ್ಪ ಒಂದೂವರೆ ತಿಂಗಳು ಊರಿಗೆ ಹೋಗಿಲ್ಲ. ಹೀಗಾಗಿ ಮಾಲೀಕನಿಗೆ ಹೆಂಡತಿ-ಮಕ್ಕಳಿಗೆ ಜೀವನಕ್ಕೆ ದುಡ್ಡು ಬೇಕು, ನಿಮ್ಮ ಕಾಲಿಗೆ ಬೀಳ್ತೀನಿ ಎಂದು ಕೇಳಿಕೊಂಡಿದ್ದರೂ ಮಾಲೀಕ ಹಣ ಹಾಕಿರಲಿಲ್ಲ. ಇದರಿಂದಾಗಿ ಎಣ್ಣೆ ಮತ್ತಲ್ಲಿದ್ದ ರಂಗಪ್ಪ ಟಿಪ್ಪರ್ ನಲ್ಲಿ ಅರ್ಧ ಟ್ಯಾಂಕರ್ ಡಿಸೇಲ್ ಇದ್ದರಿಂದ ಊರಿಗೆ ಮುಟ್ತಿನಿ ಎನ್ನುವ ನಂಬಿಕೆ ಬಂದಿತ್ತು. ಆದರೆ ಮಾಲೀಕನಿಗೆ ಹೇಳದೆ ಲಾರಿ ತಂದು ಕೊಟ್ಟಿಗೆಹಾರ ಚೆಕ್‍ಪೋಸ್ಟ್‍ನಲ್ಲಿ ಸಿಕ್ಕಿಬಿದ್ದಿದ್ದಾನೆ.

    ಮದ್ಯದ ಮತ್ತಿನಲ್ಲಿದ್ದ ರಂಗಪ್ಪ, “ಊಟಕ್ಕೆ ದುಡ್ ಇರಲಿಲ್ಲ, ಊಟವೂ ಇಲ್ಲ. ಹಣ ಯಾರ್ ಕೊಡ್ತಾರೆ. ಒಂದು ಹೊಟೇಲ್ ಇಲ್ಲ. ಅದಕ್ಕೆ ಲಾರಿಯಲ್ಲಿ ಡಿಸೇಲ್ ಇತ್ತು ಕೀ ನನ್ನ ಬಳಿಯೇ ಇತ್ತು. ಊರಿಗೆ ಹೊರಟಿದ್ದೇನೆ. ಬಿಟ್ಟರೇ ಊರಿಗೆ ಹೋಗ್ತೀನಿ. ಬಿಡಲಿಲ್ಲ ಅಂದ್ರೆ ಲಾರಿಯನ್ನ ಇಲ್ಲೇ ನಿಲ್ಲಿಸ್ತೀನಿ. ಸಾಕು ನನಗೆ ಊಟ ಕೊಡಿ” ಎಂದು ಪೊಲೀಸರಿಗೆ ಕೇಳಿದ್ದಾನೆ. ಸ್ಥಳೀಯರು ಕೇಳಿದ ಪ್ರಶ್ನೆಗೆಲ್ಲಾ ಹರಳು ಹುರಿದಂತೆ ಉತ್ತರಿಸಿದ ರಂಗಪ್ಪ, “ರೆಕಾರ್ಡ್ ಮಾಡ್ಕಳಿ, ನಿನ್ನೆಯಿಂದ ಟೈಟಾಗಿದ್ದೀನಿ, ಇವತ್ತು ಎರಡು ಕ್ವಾಟ್ರು ಕುಡಿದಿದ್ದೀನೆ. ಹೆಂಡತಿ-ಮಕ್ಕಳ ನೋಡ್ಬೇಕು ಹೋಗ್ತೀನಿ” ಎಂದಿದ್ದಾನೆ.

  • ಮನೆಯೊಳಗೆ ಬರದಂತೆ ನವದಂಪತಿಯನ್ನು ತಡೆದ ಮಾಲೀಕ

    ಮನೆಯೊಳಗೆ ಬರದಂತೆ ನವದಂಪತಿಯನ್ನು ತಡೆದ ಮಾಲೀಕ

    ಬೆಂಗಳೂರು: ಕೊರೊನಾ ವೈರಸ್ ಹರಡವುದನ್ನು ತಡೆಗಟ್ಟುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಎರಡನೇ ಬಾರಿ ಲಾಕ್ ಡೌನ್ ವಿಸ್ತರಿಸುವಂತೆ ಕರೆ ಕೊಟ್ಟಿದ್ದಾರೆ. ಲಾಕ್ ಡೌನ್‍ನಿಂದಾಗಿ ಅನೇಕ ಮಂದಿಯ ಜೀವನ ಅತಂತ್ರವಾಗಿದೆ. ಹೀಗೆ ಬೆಂಗಳೂರಲ್ಲಿ ಮದುವೆ ಮುಗಿಸಿಕೊಂಡು ಬಂದ ನವದಂಪತಿಯನ್ನು ಮಾಲೀಕನೊಬ್ಬ ತಡೆದ ಪ್ರಸಂಗವೊಂದು ನಡೆದಿದೆ.

    ಹೌದು. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಂಗ, ಪವಿತ್ರ ಎಂಬಾಕೆಯನ್ನು ಮದುವೆಯಾಗಿದ್ದಾನೆ. ಕೆಲಸವಿಲ್ಲದೆ ಬೇರೆಯವರ ಮನೆಯಲ್ಲಿದ್ದ ರಂಗ ನಿನ್ನೆ ರಾತ್ರಿ 11 ಗಂಟೆಗೆ ತಾನು ಉಳಿದುಕೊಂಡಿದ್ದ ಮನೆಗೆ ವಾಪಸ್ಸಾಗಿದ್ದಾನೆ. ಈ ವೇಳೆ ಮಾಲೀಕ ಗೇಟಿಗೆ ಬೀಗ ಹಾಕಿ ನವದಂಪತಿಯನ್ನು ಹೊಹಾಕಿದ್ದಾನೆ.

    ಸುತ್ತಾಡಿ ಬಂದಿದ್ದೀರಿ ಮೆಡಿಕಲ್ ರಿಪೋರ್ಟ್ ತಗೊಂಡು ಬನ್ನಿ ಎಂದು ಮಾಲೀಕ ಗಲಾಟೆ ಮಾಡಿದ್ದಾನೆ. ಅಲ್ಲದೆ ಕೊರೊನಾ ಬಂದಿರುವ ಶಂಕೆ ಇದೆ. ಹೀಗಾಗಿ ಮೆಡಿಕಲ್ ರಿಪೋರ್ಟ್ ತಂದು ಮನೆಗೆ ಬನ್ನಿ ಎಂದು ಗೇಟಿಗೆ ಬೀಗ ಜಡಿದಿದ್ದಾನೆ. ಪರಿಣಾಮ ಬೇರೆ ದಾರಿ ಇಲ್ಲದೆ ದಂಪತಿ ಕಾರಿನಲ್ಲೇ ಮಲಗಿದ್ದಾರೆ.

    ಮದ್ವೆಯಾಗಿ 1 ತಿಂಗಳಾಗಿದೆ. ಕ್ಯಾಬ್ ಕೆಲಸವೂ ಇಲ್ಲದೆ ಹಸಿದಿದ್ದ ನವದಂಪತಿ ಬಗಲಗುಂಟೆಯಲ್ಲಿ ಮನೆ ಮಾಡಿ ಊಟಕ್ಕಾಗಿ ಬೇರೆಯವರ ಮನೆಯಲ್ಲಿದ್ದರು. ಕಷ್ಟದಲ್ಲಿದ್ದರೂ ಮನೆ ಮಾಲೀಕನ ದುರ್ವರ್ತನೆಗೆ ನವದಂಪತಿ ನೊಂದಿದ್ದಾರೆ.