Tag: ಮಾಳವಿಕಾ ಅವಿನಾಶ್

  • ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ

    ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ: ಮಾಳವಿಕಾ

    ಬೆಂಗಳೂರು: ಸ್ಯಾಂಡಲ್‍ವುಡ್ ನಂತೆ ಬಾಲಿವುಡ್ ನಲ್ಲಿಯೂ ಡ್ರಗ್ಸ್ ಹೊಗೆಯಾಡುತ್ತಿದ್ದು, ನಟ- ನಟಿಯ ವಿಚಾರಣೆ ನಡೆಯುತ್ತಿದೆ. ಬಾಲಿವುಡ್ ನಟಿ ದೀಪಿಕಾ ಪಡುಕೊಣೆಯವರನ್ನು ಕೂಡ ಎನ್‍ಸಿಬಿ ವಿಚಾರಣೆಗೆ ಕರೆದಿದ್ದು, ದೀಪಿಕಾರನ್ನು ರೋಲ್ ಮಾಡೆಲ್ ಆಗಿ ಹಿಂಬಾಲಿಸ್ತಿರೋರಿಗೆ ಬೇಸರದ ಸಂಗತಿ ಎಂದು ನಟಿ ಕಂ ರಾಜಕಾರಣಿ ಮಾಳವಿಕಾ ಅವಿನಾಶ್ ತಿಳಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಖಿನ್ನತೆ ಎನ್ನುವ ಕಥೆ ಕಟ್ಟಿ, ಆ ಮೂಲಕ ದೀಪಿಕಾ ಸಾಮಾಜಿಕ ಕಳಕಳಿಯ ಪ್ರಚಾರ ಪಡೆದಿರುವ ವಿಚಾರ ನಿಮಗೆಲ್ಲ ತಿಳಿದೇ ಇದೆ. ಇದೀಗ ‘ಮಾಲ್’ ಎಂಬ ಹೊಗೆ ಅವರನ್ನೇ ಆವರಿಸಿದೆ. ಈ ವಿಚಾರ ಅವರನ್ನೇ ರೋಲ್ ಮಾಡೆಲ್ ಎಂದು ಹಿಂಬಾಲಿಸುತ್ತಿರುವವರಿಗೆ ನಿಜಕ್ಕೂ ಬೇಸರದ ಸಂಗತಿ ಎಂದು ಮಾಳವಿಕಾ ಹೇಳಿದ್ದಾರೆ.

    ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆಯ ಮಧ್ಯೆ ಡ್ರಗ್ಸ್ ಪ್ರಕರಣ ಹೊರಬಿದ್ದಿದೆ. ನಟನ ಆತ್ಮಹತ್ಯೆಗೆ ಖಿನ್ನತೆ ಕಾರಣ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ, ದೀಪಿಕಾ ಪ್ರತಿಕ್ರಿಯಿಸಿದ್ದರು. ತಾನು ಖಿನ್ನತೆಯನ್ನು ಎದುರಿಸಿ ಹೇಗೆ ಅದರಿಂದ ಹೊರಗೆ ಬಂದೆ ಎಂಬುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದರು. ಈ ಮೂಲಕ ಸಲಹೆ ಕೂಡ ನೀಡಿದ್ದರು.

    ಡ್ರಗ್ಸ್ ಸಂಬಂಧಿಸಿದಂತೆ ಕೇವಲ ದೀಪಿಕಾ ಮಾತ್ರವಲ್ಲದೆ ಶ್ರದ್ಧಾ ಕಪೂರ್, ರಕುಲ್ ಪ್ರೀತ್ ಸಿಂಗ್ ಮತ್ತು ಸಾರಾ ಅಲಿಖಾನ್ ಗೆ ಎನ್‍ಸಿಬಿ ಸಮನ್ಸ್ ನೀಡಿದೆ. ಕೆಲ ದಿನಗಳ ಹಿಂದೆ ಡ್ರಗ್ಸ್ ಖರೀದಿಗಾಗಿ ದೀಪಿಕಾ ಮತ್ತು ಶ್ರದ್ಧಾ ಕಪೂರ್ ವಾಟ್ಸಪ್ ಚಾಟ್ ಮಾಹಿತಿಯನ್ನು ಖಾಸಗಿ ವಾಹಿನಿ ಬಿತ್ತರಿಸಿತ್ತು. ಇತ್ತ ರಕುಲ್ ಪ್ರೀತ್ ಸಿಂಗ್ ಮಾಧ್ಯಮಗಳಿಂದ ತಮ್ಮ ತೇಜೋವಧೆ ಆಗುತ್ತಿದೆ ಎಂದು ನ್ಯಾಯಾಲಯದ ಮೊರೆ ಹೋಗಿದ್ದರು.

    ಖಾಸಗಿ ಕಂಪನಿಯ ಮ್ಯಾನೇಜರ್ ಕರೀಷ್ಮಾ ಎಂಬವರ ಬಳಿ ಮಾಲ್ ಇದೆಯಾ ಎಂದು ದೀಪಿಕಾ ಕೇಳಿರುವ ವಾಟ್ಸಪ್ ಚಾಟ್ ಸ್ಕ್ರೀನ್‍ಶಾಟ್ ರಿವೀಲ್ ಆಗಿತ್ತು ಹ್ಯಾಶ್ ಕೇಳಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿತ್ತು. ಆದ್ರೆ ಇದುವರೆಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಿಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಮೇಘನಾ ರಾಜ್ ಭೇಟಿ ಮಾಡಿದ ಸ್ಯಾಂಡಲ್‍ವುಡ್ ಹಿರಿಯ ತಾರೆಯರು

    ಮೇಘನಾ ರಾಜ್ ಭೇಟಿ ಮಾಡಿದ ಸ್ಯಾಂಡಲ್‍ವುಡ್ ಹಿರಿಯ ತಾರೆಯರು

    – ಸುಧಾರಾಣಿ, ಮಾಳವಿಕಾ ಅವಿನಾಶ್, ಶೃತಿ ಸೇರಿ ಹಲವರು ಭೇಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ತಾರೆಯರು ನಟ ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾ ರಾಜ್ ಅವರನ್ನು ಭೇಟಿ ಮಾಡಿ, ಕುಶಲೋಪಚರಿ ವಿಚಾರಿಸಿದ್ದಾರೆ.

    ಈ ಕುರಿತು ಮಾಳ್ವಿಕಾ ಅವಿನಾಶ್ ಅವರು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಭೇಟಿಯಾದ ಕುರಿತು ಫೋಟೋಗಳನ್ನು ಹಂಚಿಕೊಂಡು ಸಾಲುಗಳನ್ನು ಬರೆದಿರುವ ಮಾಳವಿಕಾ ಅವಿನಾಶ್, ನಾನು ಬಾಲ ನಟಿಯಾಗಿದ್ದಾಗಿನಿಂದ ಸುಂದರ್ ರಾಜ್ ಅವರನ್ನು ಬಲ್ಲೆ. ನಾವಿಬ್ಬರೂ ಪ್ರತ್ಯೇಕವಾಗಿ ಹಾಗೂ ಒಟ್ಟಿಗೆ ಚಲನಚಿತ್ರ ಭ್ರಾತೃತ್ವದಲ್ಲಿ ತುಂಬಾ ಪ್ರಯಾಣಿಸಿದ್ದೇವೆ ಎಂದು ಹೇಳಿದ್ದಾರೆ.

    ಇದೀಗ ಪ್ರಮೀಳಾ ಅವರು ಪ್ರೀತಿಯಿಂದ ಮಾಡಿದ ಮಸಾಲಾ ದೋಸೆಯೊಂದಿಗೆ ತಾಯಿಯಾಗುತ್ತಿರುವ ಮೇಘನಾ ಅವರನ್ನು ಸುಧಾರಾಣಿ, ಶೃತಿ ಹಾಗೂ ಅವರ ಮಗಳು ಮಿಲಿ ಅವರೊಂದಿಗೆ ಭೇಟಿಯಾದೆವು. ಇದೊಂದು ಹೃದಯಸ್ಪರ್ಶಿ ಕ್ಷಣವಾಗಿತ್ತು ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.

    ಮಾಳವಿಕಾ ಅವಿನಾಶ್ ಅವರು ಸಿನಿಮಾ ಇಂಡಸ್ಟ್ರಿಯ ಉತ್ತಮ ಸ್ನೇಹಿತೆಯರಾದ ಸುಧಾರಾಣಿ, ಶೃತಿ ಹಾಗೂ ಸುಂದರ್ ರಾಜ್ ಕುಟುಂಬದವರೊಂದಿಗೆ ತೆಗೆದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಶೃತಿ ಮಗಳು ಮಿಲಿ ಸಹ ಸೇರಿದ್ದಾರೆ.

    ಮೇಘನಾ ಗರ್ಭಿಣಿ ಹಿನ್ನೆಲೆ ಸ್ಯಾಂಡಲ್‍ವುಡ್ ಹಿರಿಯ ನಟಿಯರು ಭೇಟಿಯಾಗಿ ಮಾತುಕತೆ ನಡೆಸಿ ಸ್ವಲ್ಪ ಹೊತ್ತ ಕಾಲ ಕಳೆದು ಬಂದಿದ್ದಾರೆ. ಪರಸ್ಪರ ಮಾತುಕತೆ ನಡೆಸಿ, ಮೇಘನಾ ಅವರ ಆರೋಗ್ಯ ವಿಚಾರಿಸಿ ಬಂದಿದ್ದಾರೆ. ಅಲ್ಲದೆ ಕುಟುಂಬದೊಂದಿಗೆ ಕಾಲ ಕಳೆದು ಹರಟೆ ಹೊಡೆದಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಮೆಘನಾ ರಾಜ್ ಇತ್ತೀಚೆಗಷ್ಟೇ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಮನೆಯಲ್ಲೇ ಕುಟುಂಬಸ್ಥರ ಜೊತೆ ಕಾಲ ಕಳೆಯುತ್ತಿದ್ದಾರೆ. ಮೆಘನಾ ಅವರು ಸೃಜನ್ ಲೋಕೇಶ್ ಜೊತೆ ಸೆಲ್ಪೀ ಮಮ್ಮಿ ಗೂಗಲ್ ಡ್ಯಾಡಿ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿದ ಬಳಿಕ ಚಿತ್ರ ಬಿಡುಗಡೆಯಾಗಲಿದೆ.

  • ರಾಖಿಭಾಯ್ ಅಖಾಡಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಎಂಟ್ರಿ – ಶೂಟಿಂಗ್ ಆರಂಭ

    ರಾಖಿಭಾಯ್ ಅಖಾಡಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಎಂಟ್ರಿ – ಶೂಟಿಂಗ್ ಆರಂಭ

    ಬೆಂಗಳೂರು: ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಸಿನಿಮಾ ‘ಕೆಜಿಎಫ್ ಚಾಪ್ಟರ್-2’ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದೆ.

    ಕೊರೊನಾ ಅಟ್ಟಹಾಸ, ಲಾಕ್‍ಡೌನ್‍ನಿಂದಾಗಿ ಬರೋಬ್ಬರಿ ನಾಲ್ಕು ತಿಂಗಳು ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಕಳೆದೊಂದು ತಿಂಗಳ ಹಿಂದೆ ಸರ್ಕಾರ ಶೂಟಿಂಗ್‍ಗೆ ಅನುಮತಿ ಸಿಕ್ಕಿದ್ದು, ಕೆಜಿಎಫ್ ಬಳಗ ಇಂದಿನಿಂದ ಚಿತ್ರೀಕರಣಕ್ಕೆ ಹಾಜರಾಗಿದೆ.

    ಮಿನರ್ವ ಮಿಲ್‍ನಲ್ಲಿ ಹಾಕಲಾಗಿರುವ ಅದ್ಧೂರಿ ಸೆಟ್‍ನಲ್ಲಿ ಚಿತ್ರೀಕರಣವನ್ನು ಶುರು ಮಾಡಲಾಗಿದೆ. ಇದೀಗ ಕೆಜಿಎಫ್ ಚಿತ್ರತಂಡಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಹೊಸದಾಗಿ ಸೇರಿಕೊಂಡಿದ್ದಾರೆ. ಆದರೆ ಪ್ರಕಾಶ್ ರೈ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬುದನ್ನು ಚಿತ್ರರಂಡ ರಿವೀಲ್ ಮಾಡಿಲ್ಲ.

    ಸದ್ಯಕ್ಕೆ ನಟಿ ಮಾಳವಿಕಾ ಅವಿನಾಶ್ ಹಾಗೂ ಪ್ರಕಾಶ್ ರೈ ಕಾಂಬಿನೇಷನ್ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಕೆಜಿಎಫ್ ಚಿತ್ರತಂಡ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಕೆಲ ತಿಂಗಳ ನಂತರ ಚಿತ್ರೀಕರಣಕ್ಕೆ ಬಂದಿರುವುದರಿಂದ ನಟಿ ಮಾಳವಿಕಾ ಸಂತಸಪಟ್ಟಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

    “ಆರು ತಿಂಗಳ ನಂತರ ಕೊರೊನಾ ಬ್ರೇಕ್ ಅಂತ್ಯವಾಗಿದೆ. ಇಂದಿನಿಂದ ಚಿತ್ರೀಕರಣ ಆರಂಭವಾಗಿದೆ. ಈ ಮೂಲಕ ಪುನರ್ಜನ್ಮ ಸಿಕ್ಕಿದ್ದಂತೆ ಭಾಸವಾಗುತ್ತಿದೆ” ಎಂದು ಮಾಳವಿಕಾ ಬರೆದುಕೊಂಡಿದ್ದಾರೆ. ಅಲ್ಲದೇ ಯಾವ ಸಿನಿಮಾ ಗೆಸ್ ಮಾಡಿ? ಎಂದು ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

    https://twitter.com/prashanth_neel/status/1298516073159905281

    ನಟಿ ಮಾಳವಿಕಾ ಅವಿನಾಶ್ ಕೆಜಿಎಫ್ ಚಾಪ್ಟರ್ 1ರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಇದೀಗ ಚಾಪ್ಟರ್ 2ನಲ್ಲೂ ತನ್ನ ಪಾತ್ರವನ್ನು ಮುಂದುವರಿಸಿದ್ದಾರೆ. ಸಣ್ಣ ಪಾತ್ರವಾದರೂ ಮಾಳವಿಕಾ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು.

  • ಹಿಂದೂ ಹಿರಿಯರು ಬುದ್ಧಿ ಹೇಳಬೇಕಲ್ವಾ ಅನ್ನೋ ಸಿದ್ದು ಪ್ರಶ್ನೆಗೆ ಮಾಳವಿಕಾ ಕೌಂಟರ್

    ಹಿಂದೂ ಹಿರಿಯರು ಬುದ್ಧಿ ಹೇಳಬೇಕಲ್ವಾ ಅನ್ನೋ ಸಿದ್ದು ಪ್ರಶ್ನೆಗೆ ಮಾಳವಿಕಾ ಕೌಂಟರ್

    ಬೆಂಗಳೂರು: ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‍ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ನಟಿ, ವಕೀಲೆ ಹಾಗೂ ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಕೌಂಟರ್ ನೀಡಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‍ಗೆ ರಿಟ್ವೀಟ್ ಮಾಡಿರುವ ಮಾಳವಿಕಾ, ತಮ್ಮ ಪಕ್ಷದ ಶಾಸಕರ ಮನೆಯ ಹುಡುಗ, ತಮ್ಮ ಪಕ್ಷದ ಬಿಬಿಎಂಪಿ ಟಿಕೆಟ್ ಆಕಾಂಕ್ಷಿಗೆ ತಾವೇ ಬುದ್ಧಿ ಹೇಳಬಹುದಲ್ಲವೇ ಸರ್? ಎಂದಿದ್ದಾರೆ.

    ಸಿದ್ದರಾಮಯ್ಯ ಟ್ವೀಟ್‍ನಲ್ಲೇನಿದೆ?
    ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‍ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ?, ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿ ಟ್ವೀಟ್ ಮಾಡಿದ್ದರು.

    ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‍ಗೆ ತಿಳಿಸಿದ್ದೇನೆ ಎಂದಿದ್ದರು.

  • ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

    ನಾನು ನಿರ್ಭಯಾ ತಾಯಿ ಪಾತ್ರ ಮಾಡ್ತೇನೆ: ಮಾಳವಿಕಾ

    – ಇಂದಿನ ರಾಷ್ಟ್ರೀಯ ಹೀರೋ ಆಶಾದೇವಿ

    ಬೆಂಗಳೂರು: ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಯಾರಾದರೂ ಸಿನಿಮಾ ಮಾಡಿದರೆ ಹೇಳಿ ನಾನು ನಿರ್ಭಯಾ ತಾಯಿ ಪಾತ್ರವನ್ನು ಮಾಡುತ್ತೇನೆ ಎಂದು ಹಿರಿಯ ನಟಿ ಮಾಳವಿಕಾ ಅವಿನಾಶ್ ಹೇಳಿದ್ದಾರೆ.

    ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಇಂದು ನಿರ್ಭಯಾ ದೋಷಿಗಳಿಗೆ ಮರಣದಂಡನೆ ಆಗಿದೆ. ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು ಎಂದು ನಿರ್ಭಯಾ ತಾಯಿ ಆಶಾದೇವಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದರು. ಇದೀಗ ನಿರ್ಭಯಾ ತಾಯಿ ಮಾತಿಗೆ ನಟಿ ಮಾಳವಿಕಾ ಅವಿನಾಶ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿರ್ಭಯಾ ಪ್ರಕರಣದ ಅಪರಾಧಿಗಳು ಸಿಕ್ಕಿಬಿದ್ದಿದ್ದು ಹೇಗೆ?

    ಮಾಳವಿಕಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ನಿರ್ಭಯಾ ದೋಷಿಗಳ ಗಲ್ಲು ಶಿಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಯಾರಾದರೂ ಸಿನಿಮಾ ಮಾಡುತ್ತಿದ್ದರೆ ಹೇಳಿ, ನಾನು ನಿರ್ಭಯಾ ತಾಯಿ ಆಶಾದೇವಿ ಪಾತ್ರ ಮಾಡುತ್ತೇನೆ. ಇಂದಿನ ರಾಷ್ಟ್ರೀಯ ಹೀರೋ ಅವರು. ಎಂತಹ ತಾಯಿ” ಎಂದು ಮಾಳವಿಕಾ ನಿರ್ಭಯಾ ತಾಯಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ನನ್ನ ಮಗನನ್ನು ಜೈಲಿನಲ್ಲಿಯೇ ಸುರಕ್ಷಿತವಾಗಿ ನೋಡಿಕೊಳ್ಳಿ: ವೈರಲ್ ಆಯ್ತು ಅಪರಾಧಿ ತಾಯಿಯ ವಿಡಿಯೋ 

    ನಿರ್ಭಯಾ ತಾಯಿ ಹೇಳಿದ್ದೇನು?
    ಹಂತಕರಿಗೆ ಗಲ್ಲು ಆಗುತ್ತಿದ್ದಂತೆ ಮಾಧ್ಯಮಗಳ ಜೊತೆ ಮಾತನಾಡಿದ ಆಶಾದೇವಿ, ನಿರ್ಭಯಾಳಿಗೆ ಇಂದು ನ್ಯಾಯ ಸಿಕ್ಕಿದೆ. ಇದು ದೇಶದ ಪ್ರತಿಯೊಬ್ಬ ಮಗಳ ಗೆಲವು. ಸರ್ಕಾರ, ರಾಷ್ಟ್ರಪತಿ ಮತ್ತು ದೇಶದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಅಪರಾಧಿಗಳು ಪದೇ ಪದೇ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಮೂರು ಬಾರಿ ಡೆತ್ ವಾರೆಂಟ್ ಮುಂದೂಡಿಕೆಯಾಗಿತ್ತು. ಹಾಗಾಗಿ ನ್ಯಾಯ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿತ್ತು. ಇಂದು ಏಕಕಾಲದಲ್ಲಿ ನಾಲ್ವರಿಗೂ ಗಲ್ಲಿಗೆ ಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಿರ್ಭಯಾ ಪ್ರಕರಣ- 2012ರಿಂದ 2020ರವರೆಗೆ ಏನೇನಾಯ್ತು?

    ನಿರ್ಭಯಾ ತಂದೆ ಹೇಳಿದ್ದೇನು?
    ಮಾಧ್ಯಮಗಳ ಜೊತೆ ಮಾತನಾಡಿದ ನಿರ್ಭಯಾ ತಂದೆ ಬದ್ರಿನಾಥ್ ಸಿಂಗ್, ಅಪರಾಧಿಗಳು ಕೊನೆಯವರೆಗೆ ಹೋರಾಟ ಮಾಡಿದ್ದಾರೆ. ಆದರೆ ನಮ್ಮ ವಕೀಲರು ಕೂಡ ಪ್ರತಿ ಕ್ಷಣ, ಪ್ರತಿ ನಿಮಿಷ ಹೋರಾಡಿದ್ದಾರೆ. ನಾವು ಇದ್ದ ಕಡೆ ಅವರು ಇರುತ್ತಿದ್ದರು. ಆದರೆ ಕೊನೆಯದಾಗಿ ನಮಗೆ ಜಯವಾಯಿತು. ಏಕೆಂದರೆ ನಾವು ಸತ್ಯದ ಕಡೆ ಇದ್ದವು ಎಂದು ಪ್ರತಿಕ್ರಿಯಿಸಿದರು.

    2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ನಿರ್ಭಯಾ ಪ್ರಕರಣದ ದೋಷಿಗಳಿಗೆ ಇಂದು ಬೆಳಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್‍ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

    ಹೈಕೋರ್ಟಿನಲ್ಲಿ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ಸುಪ್ರೀಂಕೋರ್ಟಿಗೆ ಹೋಗಿ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ದೋಷಿಗಳು ಮನವಿ ಮಾಡಿಕೊಂಡಿದ್ದರು. ಮಧ್ಯರಾತ್ರಿ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಾದ-ಪ್ರತಿವಾದವನ್ನು ಆಲಿಸಿತು. ತದನಂತರ ಅರ್ಜಿಯನ್ನು ವಜಾಗೊಳಿಸಿತ್ತು.

  • ಸಿಎಎ ಬೆಂಬಲಿಸಿ 500 ಅಡಿ ಉದ್ದದ ತಿರಂಗ ಧ್ವಜ ಮೆರವಣಿಗೆ

    ಸಿಎಎ ಬೆಂಬಲಿಸಿ 500 ಅಡಿ ಉದ್ದದ ತಿರಂಗ ಧ್ವಜ ಮೆರವಣಿಗೆ

    ಬೆಂಗಳೂರು: ಪೌರತ್ವ ಕಾಯಿದೆ ಹಾಗೂ ಎನ್.ಆರ್.ಸಿ. ಬೆಂಬಲಿಸಿ ಬೃಹತ್ ತಿರಂಗಾ ರ‍್ಯಾಲಿಯನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿದರು.

    ಸುಮಾರು 1500 ಕ್ಕೂ ಅಧಿಕ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಂತರ ಬೃಹತ್ ಸಮಾರೋಪ ಸಮಾರಂಭದಲ್ಲಿ ನಟಿ, ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಪಾಲ್ಗೊಂಡಿದ್ದರು. ನೆಲಮಂಗಲ ನಗರದ ಬಸವಣ್ಣದೇವರ ಮಠದಿಂದ ಮೆರವಣಿಗೆ ಆರಂಭವಾಗಿ, ಬಿ.ಹೆಚ್. ರಸ್ತೆಯ ಮೂಲಕ ಹಾದು ಹೋಗಿ ನಂತರ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯವಾಯಿತು.

    ಸಿಎಎ ಮತ್ತು ಎನ್.ಆರ್.ಸಿ. ಕಾಯಿದೆಗಳನ್ನು ಬೆಂಬಲಿಸುವಂತೆ ಮೆರವಣಿಗೆಯಲ್ಲಿ ಜೈಕಾರ ಕೂಗಿದ ವಿದ್ಯಾರ್ಥಿಗಳು, ನಂತರ ಭಿತ್ತಿ ಫಲಕಗಳನ್ನು ಹಿಡಿದು, ನಾಗರಿಕರಲ್ಲಿ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಸುಮಾರು 500 ಅಡಿ ಉದ್ದದ ಭಾವುಟ ಹಿಡಿದ ವಿದ್ಯಾರ್ಥಿಗಳು, ನಂತರ ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು.

    ಕಾರ್ಯಕ್ರಮದಲ್ಲಿ ಮಾಳವಿಕಾ ಅವಿನಾಶ್, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಕಾಯಿದೆ ಸಂಪೂರ್ಣ ಮಾಹಿತಿಯನ್ನು ತಿಳಿಸಿದರು. ಈ ವೇಳೆಯಲ್ಲಿ ಎಬಿವಿಪಿ ಸಂಘಟನೆಯ ಜಿಲ್ಲಾ ಪ್ರಮುಖ ಭರತ್, ತಾಲೂಕು ಘಟಕದ ಸಂತೋಷ್, ಪ್ರಾಂಶುಪಾಲರಾದ ರೇಖಾ ದೊಡ್ಡೇರಿ, ದಿನೇಶ್, ಉಪನ್ಯಾಸಕ ವರ್ಗ ಸೇರಿದಂತೆ ಭಾಗವಹಿಸಿದ್ದರು. ಮೆರವಣಿಗೆಗೆ ನೆಲಮಂಗಲ ಡಿವೈಎಸ್‍ಪಿ ಮೋಹನ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶಿವಣ್ಣ, ಪಿ.ಎಸೈ ಕೃಷ್ಣಕುಮಾರ್, ಮಂಜುನಾಥ್ ಮತ್ತು ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಒದಗಿಸಿದ್ದರು.

  • ಚಿದಂಬರಂ ಎಲ್ಲಿದ್ದೀರಪ್ಪಾ – ಮಾಳವಿಕಾ ಅವಿನಾಶ್ ಪ್ರಶ್ನೆ

    ಚಿದಂಬರಂ ಎಲ್ಲಿದ್ದೀರಪ್ಪಾ – ಮಾಳವಿಕಾ ಅವಿನಾಶ್ ಪ್ರಶ್ನೆ

    ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ‘ನಿಖಿಲ್ ಎಲ್ಲಿದಿಯಪ್ಪ’ ಘೋಷಣೆ ಭಾರೀ ಸುದ್ದಿ ಮಾಡಿತ್ತು. ಈಗ ಕೇಂದ್ರದ ಮಾಜಿ ಸಚಿವ ಚಿದಂಬರಂ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯವರು ಚಿದಂಬರಂ ಎಲ್ಲಿದ್ದೀರಪ್ಪ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

    ಬಿಜೆಪಿ ವಕ್ತಾರೆ ಮಾಳವಿಕಾ ಅವಿನಾಶ್ ಸಹ ಈ ಕುರಿತು ಟ್ವೀಟ್ ಮಾಡಿದ್ದು,’ಚಿದಂಬರ ರಹಸ್ಯ’ವನ್ನು ಬೇಧಿಸುವವರಾರು ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಕೇಳಿದಂತೆ ಹ್ಯಾಶ್ ಟ್ಯಾಗ್ ಹಾಕಿ ‘ಚಿದಂಬರಂ ಎಲ್ಲಿದ್ದೀರಪ್ಪ’ ಎಂದು ಪ್ರಶ್ನಿಸಿದ್ದಾರೆ.

    ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಖಿಲ್ ಎಲ್ಲಿದಿಯಪ್ಪಾ ಎಂಬ ಘೋಷಣೆ ಸಾಕಷ್ಟು ಟ್ರೋಲ್ ಆಗಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಷ್ ವಿರುದ್ಧ ಸ್ಪರ್ಧಿಸಿದ್ದರು. ಆಗ ಕುಮಾರಸ್ವಾಮಿ ಅಥವಾ ನಿಖಿಲ್ ಅವರ ಪ್ರತಿ ವಿಷಯಕ್ಕೂ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದರು. ಇದನ್ನು ಓದಿ: ಚಿದಂಬರಂಗಿಲ್ಲ ರಿಲೀಫ್ – ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಕಾರ

    ಇದೀಗ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಬಂಧನ ಭೀತಿಯಿಂದ ಕಾಣೆಯಾಗಿದ್ದಾರೆ. ಮಂಗಳವಾರದಿಂದಲೂ ಸಹ ಚಿದಂಬರಂ ಅವರು ತಮ್ಮ ಮನೆಗೆ ಆಗಮಿಸಿಲ್ಲ. ಹೀಗಾಗಿ ಇಡಿ ಹಾಗೂ ಸಿಬಿಐ ಅದಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಚಿದಂಬರಂ ಕಾಣೆಯಾಗಿದ್ದನ್ನು ಸಹ ಇದೀಗ ಅದೇ ಧಾಟಿಯಲ್ಲಿ ಟ್ರೋಲ್ ಮಾಡಲಾಗುತ್ತಿದೆ.

    ದೆಹಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಸಹ ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಈ ಮೂಲಕ ಚಿದಂಬರಂ ಅವರಿಗೆ ಭಾರೀ ಹಿನ್ನಡೆಯಾದಂತಾಗಿದೆ.

    ಬಂಧನದಿಂದ ರಕ್ಷಣೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಕಳುಹಿಸುತ್ತೇವೆ ಅವರೇ ಆದೇಶ ಪ್ರಕಟಿಸುತ್ತಾರೆ ಎಂದು ನ್ಯಾಯಮೂರ್ತಿ ಎನ್.ವಿ.ರಮಣ್, ಎಂ.ಶಾಂತನಗೌಡರ್ ಹಾಗೂ ಅಜಯ್ ರಸ್ಟೋಗಿ ಅವರಿದ್ದ ಪೀಠ ಇಂದು ತಿಳಿಸಿದೆ.

    ಸಿಬಿಐ ಅಧಿಕಾರಿಗಳು ಮಂಗಳವಾರ ಮಧ್ಯ ರಾತ್ರಿಯೇ ನೋಟಿಸ್ ನೀಡಿದ್ದು, ಇದೀಗ ಜಾರಿ ನಿರ್ದೇಶನಾಲಯ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಮಾತ್ರವಲ್ಲದೆ ಸಿಬಿಐ ಅಧಿಕಾರಿಗಳು ಸಹ ಚಿದಂಬರಂ ಅವರ ಮನೆಗೆ ಮೂರು ಬಾರಿ ಭೇಟಿ ನೀಡಿದ್ದಾರೆ. ಆದರೆ ಚಿದಂಬರಂ ಅವರು ಮನೆಯಲ್ಲಿರಲಿಲ್ಲ, ಎಲ್ಲಿ ಹೋಗಿದ್ದಾರೆ ಎಂಬುದು ತಿಳಿದಿಲ್ಲ. ಮಂಗಳವಾರ ಹೈ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ ನಂತರ ಚಿಂದಂಬರಂ ಅವರು ಕಾಣೆಯಾಗಿದ್ದಾರೆ. ಹೀಗಾಗಿ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ಮನೆಗೆ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ.

    ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದರು.

  • ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ನಟಿ ಮಾಳವಿಕ ಅವಿನಾಶ್ ವಿರುದ್ಧ ಆಕ್ರೋಶ

    ಧಾರವಾಡ ಸಾಹಿತ್ಯ ಸಮ್ಮೇಳನದಲ್ಲಿ ನಟಿ ಮಾಳವಿಕ ಅವಿನಾಶ್ ವಿರುದ್ಧ ಆಕ್ರೋಶ

    ಧಾರವಾಡ: ಜಿಲ್ಲೆಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಇಂದು ನಟಿ ಮಾಳವಿಕ ಅವಿನಾಶ್ ಅವರು “ವೈಚಾರಿಕತೆ ಮತ್ತು ಅಸಹಿಷ್ಣುತೆ” ವಿಚಾರವಾಗಿ ಗೊಷ್ಠಿ ನಡೆಸಿದ್ದರು. ಈ ವೇಳೆ ಮಾಳವಿಕ ವಿರುದ್ಧ ಆಕ್ರೋಶ ವ್ಯಕ್ತವಾಯಿತು.

    ವಿಷಯ ಮಂಡಣೆಯಲ್ಲಿ ಶಬರಿಮಲೆ ಪ್ರಕರಣ, ಪರೇಶ್ ಮೇಸ್ತಾ, ಶರತ್ ಮಡಿವಾಳ ಸಾವು ಸೇರಿದಂತೆ ಹಲವು ವಿಷಯಗಳನ್ನು ನಟಿ ಪ್ರಸ್ತಾಪಿಸಿದ್ದರು. ಹೀಗಾಗಿ ನೆರೆದವರು ಮಾಳವಿಕ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

    ಮಾಳವಿಕ ಏನ್ ಹೇಳಿದ್ರು..?
    ವೈಚಾರಿಕತೆ ಮತ್ತು ಅಸಹಿಷ್ಣುತೆ ವಿಚಾರವನ್ನು ಮಂಡಿಸುತ್ತಾ, 2005 ರಿಂದ 2009 ರವರೆಗೆ 24 ರಾಜ್ಯಗಳ ಕೋಮುಗಲಭೆಗಳಲ್ಲಿ ಎಲ್ಲಾ ಮತೀಯರು ಸೇರಿ ಸುಮಾರು 530 ಮಂದಿ ಮಡಿದಿದ್ದಾರೆ. 2037 ಜನ ಗಾಯಗೊಂಡಿದ್ದಾರೆ. ಇದೆಲ್ಲವೂ ಬುದ್ಧಿವಂತರಿಗೆ ಗೊತ್ತಿರಲ್ವ ಅನ್ನೋದು ನನ್ನ ಪ್ರಶ್ನೆಯಾಗಿದೆ ಅಂದ್ರು. ಇದನ್ನೂ ಓದಿ: ಚಂಪಾ ಮೊಮ್ಮಕ್ಕಳು ಎಲ್ಲಿ ಓದುತ್ತಿದ್ದಾರೆ: ಸಿಎಂ ಎಚ್‍ಡಿಕೆ

    ಧರ್ಮದೇಟು ಎಂಬ ಪದ ಬಳಕೆ ನಮ್ಮಲ್ಲಿ ತೀರಾ ಸಾಮಾನ್ಯವಾಗಿದೆ. ಒಂದು ಗುಂಪು ಯಾವುದಾದರೂ ಕೃತ್ಯವನ್ನು ನಡೆಸಿದ್ರೆ ಅದನ್ನು ಧರ್ಮದೇಟು ಅನ್ನಬಹುದು. ಇದು ನ್ಯಾಯಕ್ಕೆ ಬಾಹಿರವಾಗಿಯೇ ಇರುತ್ತದೆ. ಇಂತದ್ದು ನಮ್ಮ ಸಮಾಜದಲ್ಲಿ ನಡೆದಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಅದೆಲ್ಲದಕ್ಕೂ ಕೇಂದ್ರ ಸರ್ಕಾರವೇ ಕಾರಣ ಅಂತ ಹೇಳಲಾಗುತ್ತದೆ. ಕೇಂದ್ರ ಸರ್ಕಾರ ಪ್ರತಿಪಾದಿಸುತ್ತಿರುವ ಅಸಹಿಷ್ಣುತೆಯೇ ಕಾರವಾಣವಾದ್ರೆ, ಇತ್ತೀಚೆಗೆ ಕೇರಳದ ಪಾಲಕ್ಕಾಡ್ ನಲ್ಲಿ ಶಬರಿಮಲೆ ಪ್ರತಿಭಟನಾಕಾರರ ಮೇಲೆ ಸಿಪಿಐಎಂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಅದರಲ್ಲಿ ಓರ್ವ ಸಾವನ್ನಪ್ಪುತ್ತಾರೆ.

    ಕರ್ನಾಟಕದಲ್ಲಿ ನೋಡೋದಾದ್ರೆ 2017ರಲ್ಲಿ ಪರೇಶ್ ಮೇಸ್ತಾ, ಮತೀಯ ಕಾರಣಕ್ಕೆ ಅಪಹರಿಸಿ ದಾರುಣವಾಗಿ ಅವನನ್ನು ಹತ್ಯೆಗೈದಿದ್ದಾರೆ. ಅದು ಕೂಡ ಒಂದು ಗುಂಪು ಮಾಡಿದ ಕೆಲಸವಾಗಿದೆ. ಶರತ್ ಮಡಿವಾಳನನ್ನು ನೇರವಾಗಿ ಎಸ್‍ಡಿಪಿಐ ಅಂತ ಹೇಳಿಕೊಂಡಿರುವ ಗುಂಪೇ ಕೊಚ್ಚಿ ಹಾಕಿತ್ತು. ರುದ್ರೇಶ್ ನನ್ನು ಬೆಂಗಳೂರಿನಲ್ಲಿ ಹಾಡುಹಗಲೇ ಎಸ್‍ಡಿಪಿಐ ಅವರು ಕೊಂದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ ಅಂತ ಹೇಳುತ್ತಿರುವಾಗಲೇ ಮಾಳವಿಕ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಯಿತು. ಇದನ್ನೂ ಓದಿ: ಕನ್ನಡ ಸಮ್ಮೇಳನದಲ್ಲಿ ಚಂಪಾ ಹೇಳಿಕೆಗೆ ಸಿಎಂ ಗರಂ!

    ಇದರಿಂದ ಸಿಟ್ಟಿಗೆದ್ದ ಮಾಳವಿಕ ಅವರು, ನನ್ನ ಅಭಿವ್ಯಕ್ತಿಗೆ ಸ್ವಾತಂತ್ರ್ಯಕ್ಕೆ ಮನ್ನಣೆ ಇಲ್ಲವಾ. ನಾನು ಕೂಡ ಭಾರತೀಯ ಪ್ರಜೆ. ಹೀಗಾಗಿ ನನ್ನ ವಿಚಾರವನ್ನು ಮಂಡಿಸೋದಿಕೆ ನನಗೆ ಸ್ವಾತಂತ್ರ್ಯ ಇಲ್ಲ ಅಂದ್ರೆ ನೀವು ಅಸಹಿಷ್ಣುವಾದ್ರಿ ಅಲ್ವ. ನನ್ನ ಮಾತುಗಾರಿಕೆಯನ್ನು ಕೇಳುವ ತಾಳ್ಮೆ ಇಲ್ಲ ಎಂದಾದರೆ ಇದೇ ದೊಡ್ಡ ಅಸಹಿಷ್ಣುತೆ ಅಂತ ಹೇಳಿದ ಅವರು, ನಾನು ನನ್ನ ಮಾತನ್ನು ನಿಲ್ಲಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿ ಭಾಷಣ ಮೊಟಕುಗೊಳಿಸಿದ್ರು.

    ಮಾಳವಿಕ ಮಾತನಾಡಬೇಡಿ ಎಂದು ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶ ಮಾಡಿದ್ರು. ಗೋಷ್ಠಿಯಲ್ಲಿ ಮಾತನಾಡುವುದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯ ಹಕ್ಕು ಅಂತ ಮಾಳವಿಕಾ ಹೇಳಿದ್ರೆ ಅಭಿವ್ಯಕ್ತಿ ಹಕ್ಕನ್ನ ಹತ್ತಿಕ್ಕಬೇಡಿ ಎಂದು ಇನ್ನೊಂದು ಗುಂಪು ಒತ್ತಾಯ ಮಾಡಿತು. ಒಟ್ಟಿನಲ್ಲಿ ಸಮ್ಮೇಳನದ ಗೋಷ್ಟಿಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದಕ್ಕೆ ಸಂತೋಷವು ಇದೆ, ಖೇದವೂ ಆಗ್ತಿದೆ: ಚಂದ್ರಶೇಖರ್ ಕಂಬಾರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv