Tag: ಮಾಸ್ಟರ್ ಕಿಶನ್

  • ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ನ್ನಡ ಸಿನಿಮಾ ರಂಗದ ಹಲವು ತಾರೆಯರಿಗೆ ಸಿಂಹಸ್ವಪ್ನವಾಗಿರುವ, ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ಇದೀಗ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಆಗಸ್ಟ್ 15ರ ಹಿನ್ನೆಲೆಯಾಗಿಟ್ಟುಕೊಂಡು ಅವರು ಸಿನಿಮಾ ಮಾಡುತ್ತಿದ್ದಾರೆ. ಪಬ್ಲಿಕ್ ಟಿವಿ ಡಿಜಿಟಲ್ ಜತೆ ಮಾತನಾಡಿದ  ಅವರು, ‘ಇದೊಂದು ದೇಶಬಿಟ್ಟು ಹೋದವರ ಕಥೆಯನ್ನು ಹೇಳಲು ಹೊರಟಿದ್ದೇವೆ. ಸ್ವಾತಂತ್ರ್ಯ ದಿನದ ಎರಡು ದಿನದ ಮುಂಚೆ ಭಾರತದಲ್ಲಿ ನಡೆದ ಮಹತ್ವದ ಘಟನೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಆಗಸ್ಟ್ 13, 14 ಮತ್ತು 15 ಹೀಗೆ ಮೂರು ದಿನಗಳಲ್ಲಿ ನಡೆಯುವಂತಹ ಸಿನಿಮಾ ಇದಾಗಿದೆ’ ಎಂದರು. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ಇದೊಂದು ಪ್ಯಾನ್ ಇಂಡಿಯಾ ಮಾದರಿಯ ಚಿತ್ರವಾಗಿದ್ದರಿಂದ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಸಿನಿಮಾ ರಂಗದ ಕಲಾವಿದರು ಈ ಚಿತ್ರದಲ್ಲಿ ಇರಲಿದ್ದಾರೆ. ಸದ್ದಿಲ್ಲದೇ ಶೇ.90ರಷ್ಟು ಭಾಗದ ಚಿತ್ರೀಕರಣ ಕೂಡ ನಡೆದಿದೆಯಂತೆ. “ಈ ಸಿನಿಮಾವನ್ನು ಒಟ್ಟು 12 ಭಾಷೆಗಳಲ್ಲಿ ತಯಾರಿಸುತ್ತಿದ್ದೇವೆ. ಚೈನೀಸ್ ಭಾಷೆಗೂ ಅದನ್ನು ಡಬ್ ಮಾಡುವ ಆಲೋಚನೆ ಹೊಂದಿದ್ದೇವೆ. ಭಾರೀ ಬಜೆಟ್ ನಲ್ಲೇ ಈ ಸಿನಿಮಾ ಶುರುವಾಗಲಿದೆ. ಹಾಗಂತ ಇದು ದಿ ಕಾಶ್ಮೀರ್ ಫೈಲ್ಸ್ ಮಾದರಿಯ ಚಿತ್ರವಲ್ಲ. ಮನರಂಜನೆಯ ಜತೆ ಜತೆಗೆ ಒಂದು ನಿಜ ಸಂಗತಿಯನ್ನು ಈ ಸಿನಿಮಾದ ಮೂಲಕ ಬಯಲು ಮಾಡುತ್ತಿದ್ದೇವೆ’ ಎನ್ನುವುದು ಪ್ರಶಾಂತ್ ಸಂಬರಗಿ ಮಾತು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    ‘ಕೇರಾಫ್ ಫುಟ್ ಪಾತ್’ ಚಿತ್ರ ಖ್ಯಾತಿಯ ಕಿಶನ್ ಮತ್ತು ಅವರ ತಂದೆ ಶ್ರೀಕಾಂತ್ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಟೀನೇಟ್ ಸಿನಿಮಾದ ನಂತರ ಬರುತ್ತಿರುವ ಇವರ ಚಿತ್ರ ಇದಾಗಿದೆ. ಸಿನಿಮಾದ ಕಲಾವಿದರ ಮತ್ತು ತಂತ್ರಜ್ಞರ ವಿವರವನ್ನು ಸದ್ಯಕ್ಕೆ ಬಹಿರಂಗ ಪಡಿಸಿಲ್ಲ ಚಿತ್ರತಂಡ. ಬೇರೆ ರೀತಿಯಲ್ಲಿ ಅದನ್ನು ಲಾಂಚ್ ಮಾಡಬೇಕಾಗಿದ್ದರಿಂದ ಇದಷ್ಟೇ ಮಾಹಿತಿಯನ್ನು ಪ್ರಶಾಂತ್ ಸಂಬರಗಿ ನೀಡಿದ್ದಾರೆ.

  • ಎಲ್ಲಾ ದೇವಾಲಯ, ಮಸೀದಿ, ಚರ್ಚ್ ಒಡೆದು ಹಾಕಿ ಎಂದು ಕೆ.ಎಸ್ ಭಗವಾನ್ ವಿವಾದ ಸೃಷ್ಟಿ

    ಎಲ್ಲಾ ದೇವಾಲಯ, ಮಸೀದಿ, ಚರ್ಚ್ ಒಡೆದು ಹಾಕಿ ಎಂದು ಕೆ.ಎಸ್ ಭಗವಾನ್ ವಿವಾದ ಸೃಷ್ಟಿ

    – ಭಗವಾನ್ ಹೇಳಿಕೆಗೆ ನಟ ಮಾಸ್ಟರ್ ಕಿಶನ್ ವಿರೋಧ

    ರಾಯಚೂರು: ದೇಶದ ಎಲ್ಲಾ ದೇವಾಲಯ, ಚರ್ಚ್, ಮಸೀದಿಗಳನ್ನು ಒಡೆದು ಹಾಕಿ. ಇವು ಜನರನ್ನು ಸೇರಿಸಲ್ಲ ದೂರ ಮಾಡುತ್ತವೆ. ಎಲ್ಲಾ ಮತಗಳು ದ್ವೇಷವನ್ನು ಹರಡುತ್ತಿವೆ ಎಂದು ಚಿಂತಕರಾದ ಕೆಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇಂದು ರಾಯಚೂರಿನಲ್ಲಿ ನಡೆದ ಪುಸ್ತಕ ಬಿಡುಗಡೆ ಹಾಗೂ ನಾಟಕ ಪ್ರದರ್ಶನ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಅನಗತ್ಯ. ಮಂದಿರ ಬದಲಾಗಿ ಉತ್ತಮ ಜಲಾಶಯ, ಅತ್ಯುತ್ತಮ ವಿಶ್ವವಿದ್ಯಾಲಯ, ಗ್ರಾಮಗಳಲ್ಲಿ ಉತ್ತಮ ಶಾಲೆ ನಿರ್ಮಾಣವಾಗಬೇಕು. 26 ಬಾರಿ ಹೊರಗಿನವರು ದೇಶದ ಮೇಲೆ ದಾಳಿ ಮಾಡಿದಾಗ ದೇವರು ಎಲ್ಲಿ ಹೋಗಿದ್ದರು? ನಿಮ್ಮ ರಾಮ, ಶಿವ, ಕೃಷ್ಣ, ಕಾಳಿ ಏನ್ ಮಾಡುತ್ತಿದ್ದರು? ಕೆಲಸಕ್ಕೆ ಬಾರದ ದೇವರುಗಳಿಗೆ ದೇವಾಲಯ ಯಾಕೆ ಕಟ್ಟಬೇಕು? ಯಾವ ದೇವಸ್ಥಾನ ಕಟ್ಟುವುದು ಪ್ರಯೋಜನವಿಲ್ಲ ಎಂದು ಹೇಳಿದರು.

    ಶಿವನ ದೇವಾಲಯ ಯಾಕೆ ಕಟ್ಟುವುದಿಲ್ಲ? ಶಿವ ಪುರಾತನ ದೇವರು. ಗುಲಾಮಗಿರಿ ಎತ್ತಿಹಿಡಿಯುವ ದೇವರಲ್ಲ. ಆದ್ರೆ ಗುಲಾಮಗಿರಿಯನ್ನು ಎತ್ತಿ ಹಿಡಿಯುವ ರಾಮ, ಕೃಷ್ಣರ ದೇವಾಲಯಗಳನ್ನೇ ಯಾಕೆ ಕಟ್ಟುತ್ತಿದ್ದಾರೆ. ವಾಲ್ಮೀಕಿ ರಾಮಾಯಣದಲ್ಲಿ ರಾಮ ದೇವರು ಅಂತ ಹೇಳಿಲ್ಲ ಎಂದು ಭಗವಾನ್ ಹೇಳಿದ್ರು.

    ಇದೇ ವೇದಿಕೆಯಲ್ಲಿದ್ದ ಮಾಸ್ಟರ್ ಕಿಶನ್ ಇದಕ್ಕೆ ವಿರೋಧ ವ್ಯಕ್ತಪಡಿಸಿ, ಭಗವಾನ್ ಅವರ ಮಾತನ್ನ ನಾನು ಒಪ್ಪಲ್ಲ. ಮಂತ್ರಾಲಯಕ್ಕೆ ಹೋಗಬೇಕು ಅಂತ ಆಸೆ ಇತ್ತು. ಇವತ್ತು ಬೆಳಗ್ಗೆ ದೇವಸ್ಥಾನಕ್ಕೆ ಹೋಗಿದ್ದೆ. ಉಪವಾಸ ವ್ರತ ಆಚರಿಸಿ ನಾನು ದೇವಸ್ಥಾನಕ್ಕೆ ಹೋಗಿ ಬಂದೆ. ಒಬ್ಬ ಯುವಕನಾಗಿ ಜಾತಿ ವ್ಯವಸ್ಥೆ ಬಗ್ಗೆ ನಂಬಿಕೆಯಿಲ್ಲ. ಶಾಂತಿಗಾಗಿ ದೇವಾಲಯಕ್ಕೆ ಹೋಗುತ್ತೇವೆ ಎಂದು ಹೇಳಿದ್ರು.