Tag: ಮಾಹಿತಿ

  • ಗ್ಯಾಂಗ್‍ಸ್ಟಾರ್ ದುಬೆ ಅರೆಸ್ಟ್ – ಸುಳಿವು ನೀಡಿದ ಸೆಕ್ಯೂರಿಟಿ ಗಾರ್ಡ್ ಹೇಳಿದ್ದೇನು?

    ಗ್ಯಾಂಗ್‍ಸ್ಟಾರ್ ದುಬೆ ಅರೆಸ್ಟ್ – ಸುಳಿವು ನೀಡಿದ ಸೆಕ್ಯೂರಿಟಿ ಗಾರ್ಡ್ ಹೇಳಿದ್ದೇನು?

    ಭೋಪಾಲ್: ಉತ್ತರ ಪ್ರದೇಶದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ರೌಡಿ ಶೀಟರ್ ವಿಕಾಸ್ ದುಬೆಯನ್ನು ಪೊಲೀಸರು ಇಂದು ಮಧ್ಯಪ್ರದೇಶದ ದೇವಾಲಯದಲ್ಲಿ ಬಂಧಿಸಿದ್ದಾರೆ.

    ನಕಲಿ ಐಡಿ ಕಾರ್ಡ್ ಬಳಸಿ ಮಧ್ಯ ಪ್ರದೇಶಕ್ಕೆ ಎಂಟ್ರಿಕೊಟ್ಟಿದ್ದ ದುಬೆ, ಅಲ್ಲಿನ ಉಜ್ಜೈನ್‍ನಲ್ಲಿರುವ ಮಹಾಕಾಳಿ ದೇವಸ್ಥಾನಕ್ಕೆ ಬಂದಿದ್ದ. ಈ ವೇಳೆ ಆತನನ್ನು ಗುರುತಿಸಿದ ದೇವಸ್ಥಾನದ ಸೆಕ್ಯೂರಿಟಿ ಗಾರ್ಡ್ ಲಖನ್ ಯಾದವ್, ಪೊಲೀಸರಿಗೆ ವಿಷಯ ತಿಳಿಸಿದ್ದರು. ಈ ಮೂಲಕ ಕುಖ್ಯಾತ ರೌಡಿಯನ್ನು ಬಂಧಿಸುವಲ್ಲಿ ನೆರವಾಗಿದ್ದರು.

    ಈ ಬಗ್ಗೆ ಮಾತನಾಡಿರುವ ಲಖನ್ ಯಾದವ್ ಅವರು, ನಾನು ಈ ಮೊದಲೇ ಫೋಟೋದಲ್ಲಿ ವಿಕಾಸ್ ದುಬೆಯನ್ನು ನೋಡಿದ್ದೆ. ದುಬೆ ಇಂದು ಬೆಳಗ್ಗೆ 7 ಗಂಟೆಗೆ ದೇವಸ್ಥಾನಕ್ಕೆ ಬಂದ. ಜೊತೆಗೆ ಅವನು ಹಿಂದಿನ ಬಾಗಿಲಿನಿಂದ ದೇವಸ್ಥಾನದ ಒಳ ಬರಲು ಪ್ರಯತ್ನಿಸುತ್ತಿದ್ದ. ವಿಕಾಸ್ ದುಬೆ ನಡವಳಿಕೆ ನೋಡಿ ನನಗೆ ಅನುಮಾನ ಬಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಆತ ವಿಐಪಿ ಪಾಸ್ ಪಡೆದಿದ್ದರೂ ದೇವಸ್ಥಾನದ ಒಳಗೆ ಬರಲು ಹಿಂದೆ ಮುಂದೆ ನೋಡುತ್ತಿದ್ದ ಎಂದು ಹೇಳಿದ್ದಾರೆ.

    ಈ ವೇಳೆ ನಾನು ದೇವಸ್ಥಾನದಲ್ಲಿ ಆತನನ್ನು ತಡೆದು ವಿಚಾರಣೆ ಮಾಡಿದೆ. ಆತ ಏನೂ ಮಾತನಾಡಲಿಲ್ಲ. ನಂತರ ಸ್ಥಳಕ್ಕೆ ಬಂದು ಪೊಲೀಸರು ಆತನನ್ನು ಕರೆದುಕೊಂಡು ಹೋದರು ಎಂದು ಯಾದವ್ ಅವರು ತಿಳಿಸಿದ್ದಾರೆ. ಮಧ್ಯ ಪ್ರದೇಶದ ಪೊಲೀಸರು ಆತನನ್ನು ಬಂಧಿಸಿದ್ದು, ಉತ್ತರ ಪ್ರದೇಶದ ಪೊಲೀಸರಿಗೆ ಒಪ್ಪಿಸಲು ಸಿದ್ಧವಿದ್ದಾರೆ. ಈ ನಡುವೆ ಉತ್ತರ ಪ್ರದೇಶದಲ್ಲಿ ಇಬ್ಬರು ದುಬೆ ಸಹಚರರನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

    ಇಂದು ಬೆಳಗ್ಗೆ ಮಧ್ಯಪ್ರದೇಶದ ಪೊಲೀಸರು ವಿಕಾಸ್ ದುಬೆಯನ್ನು ಬಂಧಿಸಿದ್ದಾರೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ದೃಢಪಡಿಸಿದ್ದರು. ಉತ್ತರ ಪ್ರದೇಶದಲ್ಲಿ ಆತ ಘಟನೆಯ ನಂತರ ನಮ್ಮ ರಾಜ್ಯ ಪೊಲೀಸರು ಹೆಚ್ಚಿನ ಎಚ್ಚರಿಕೆ ವಹಿಸಿದ್ದ ಕಾರಣ ಇಂದು ದುಬೆಯನ್ನು ಬಂಧಿಸಲು ಸಾಧ್ಯವಾಯ್ತು ಎಂದು ಮಿಶ್ರಾ ತಿಳಿಸಿದ್ದಾರೆ. ಇದರ ಜೊತೆಗೆ ಮಧ್ಯ ಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾನ್, ಉಜ್ಜೈನಿ ಪೊಲೀಸರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗುಂಡಿನ ಮಳೆ ಸುರಿಸಿದ್ದಾರೆ. ಪರಿಣಾಮ ಎಂಟು ಮಂದಿ ಪೊಲೀಸರು ಸಾವನ್ನಪ್ಪಿದ್ದರು.

  • ಪೊಲೀಸರ ನರಮೇಧಕ್ಕೆ ಸಿಗ್ನಲ್ ಹೋಗಿದ್ದೆ ಠಾಣೆಯಿಂದ – ಸ್ಫೋಟಕ ಸತ್ಯ ಬಯಲು

    ಪೊಲೀಸರ ನರಮೇಧಕ್ಕೆ ಸಿಗ್ನಲ್ ಹೋಗಿದ್ದೆ ಠಾಣೆಯಿಂದ – ಸ್ಫೋಟಕ ಸತ್ಯ ಬಯಲು

    – ವಿಕಾಸ್ ದುಬೆ ಸಹಚರನ ಬಂಧನ

    ಲಕ್ನೋ: ಎಂಟು ಮಂದಿ ಪೊಲೀಸರನ್ನು ಗುಂಡಿಕ್ಕಿಕೊಂದ ರೌಡಿ ಶೀಟರ್ ವಿಕಾಸ್ ದುಬೆ ಸಹಚರನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನ್ನು ವಿಕಾಸ್ ದುಬೆ ಜೊತೆ ಬಹಳ ವರ್ಷದಿಂದ ಕೆಲಸ ಮಾಡಿದ್ದ ದಯಾ ಶಂಕರ್ ಅಗ್ನಿಹೋತ್ರಿ ಎಂದು ಗುರುತಿಸಲಾಗಿದೆ. ಈತನನ್ನು ಪೊಲೀಸರು ಭಾನುವಾರ ಮುಂಜಾನೆ ಕಲ್ಯಾಣಪುರದಲ್ಲಿ ಅಡ್ಡಹಾಕಿದ್ದಾರೆ. ಆಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ದಯಾ ಶಂಕರ್ ಕಾಲಿಗೆ ಗುಂಡಿಕ್ಕಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಈ ಬಂಧಿತ ದಯಾ ಶಂಕರ್ ತನಿಖೆ ವೇಳೆ ಸ್ಫೋಟಕ ಮಾಹಿತಿಯನ್ನು ಬಾಯಿಬಿಟ್ಟಿದ್ದು, ವಿಕಾಸ್ ದುಬೆಗೆ ಪೊಲೀಸರು ಅರೆಸ್ಟ್ ಮಾಡಲು ಬರುತ್ತಾರೆ ಎಂದು ಮೊದಲೇ ಗೊತ್ತಿತ್ತು. ದುಬೆಗೆ ಪೊಲೀಸ್ ಇಲಾಖೆಯಲ್ಲೇ ಮಾಹಿತಿ ನೀಡುವವರು ಇದ್ದು, ಘಟನೆ ನಡೆದ ದಿನ ಚೌಬೆಪುರ ಪೊಲೀಸ್ ಠಾಣೆಯಿಂದ ಓರ್ವ ಪೊಲೀಸ್ ಅಧಿಕಾರಿ ಕರೆ ಮಾಡಿ ನಿನ್ನನ್ನು ಅರೆಸ್ಟ್ ಮಾಡಲು ಪೊಲೀಸರು ನಿಮ್ಮ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ದರು ಎಂದು ಹೇಳಿದ್ದಾನೆ.

    ಪೊಲೀಸರು ನನ್ನನ್ನು ಅರೆಸ್ಟ್ ಮಾಡಿದರೆ ನಾನೂ ಜೈಲು ಪಾಲಾಗುತ್ತೇನೆ ಎಂದು ವಿಕಾಸ್ ದುಬೆಗೆ ಗೊತ್ತಿತ್ತು. ಆದ್ದರಿಂದ ಆತ ವಿಷಯ ತಿಳಿಯುತ್ತಿದ್ದಂತೆ ತನ್ನ ಗ್ಯಾಂಗಿನ ಹುಡುಗರನ್ನು ಕರೆಸಿಕೊಂಡು ತಮ್ಮ ಗ್ರಾಮದಲ್ಲಿ ಉಳಿಸಿಕೊಂಡಿದ್ದ. ಪೊಲೀಸರಿಂದ ಮೊದಲೇ ಮಾಹಿತಿ ಸಿಕ್ಕ ಕಾರಣ ಪೊಲೀಸರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದರು. ಅದರಂತೆ ಗ್ರಾಮಕ್ಕೆ ಬಂದ ಪೊಲಿಸರನ್ನು ರಸ್ತೆಯಲ್ಲೇ ಅಡ್ಡಗಟ್ಟಿ ಕೊಂದು ಹಾಕಿದ್ದಾರೆ ಎಂದು ದಯಾ ತಿಳಿಸಿದ್ದಾನೆ.

    ಈ ನಡುವೆ ಉತ್ತರ ಪ್ರದೇಶದಲ್ಲಿ ಇರುವ ವಿಕಾಸ್ ದುಬೆ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತಿದೆ. ಡಿಕ್ರು ಗ್ರಾಮದಲ್ಲಿ ಇದ್ದ ಆತನ ಮನೆಯನ್ನು ಶನಿವಾರ ಜಿಲ್ಲಾಡಳಿತ ಜೆಸಿಬಿ ತೆಗೆದುಕೊಂಡು ಹೋಗಿ ನೆಲಸಮ ಮಾಡಿ ಬಂದಿತ್ತು. ಜೊತೆಗೆ ಮನೆಯಲ್ಲಿ ಇದ್ದ ಐಷಾರಾಮಿ ಕಾರುಗಳನ್ನು ಕೂಡ ಜಖಂ ಮಾಡಲಾಗಿತ್ತು. ಈಗ ಆತನ ಹೆಸರನಲ್ಲಿದ್ದ ಕಾರ್ಖಾನೆಗಳನ್ನು ಕೂಡ ಜಿಲ್ಲಾಡಳಿತ ಕೆಡವಿ ಹಾಕುತ್ತಿದೆ.

    ಎಂಟು ಜನ ಪೊಲೀಸರನ್ನು ಕೊಂದ ವಿಕಾಸ್ ದುಬೆಯನ್ನು ಎನ್‍ಕೌಂಟರ್ ಮಾಡಬೇಕು ಎಂಬ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿವೆ. ಈ ವಿಚಾರವಾಗಿ ಮಾತನಾಡಿದ್ದ ದುಬೆ ತಾಯಿ ಸರ್ಲಾ ದೇವಿ, ಆತ ಅಮಾಯಕ ಪೊಲೀಸರನ್ನು ಕೊಂದು ತಪ್ಪು ಮಾಡಿದ್ದಾನೆ. ಆತ ಪೊಲೀಸರಿಗೆ ಶರಣಾಗಬೇಕು. ಇಲ್ಲ ಆತನನ್ನು ಪೊಲೀಸರೇ ಗುಂಡಿಕ್ಕಿ ಕೊಲ್ಲಬೇಕು ಎಂದು ಹೇಳಿದ್ದರು. ಆದರೆ ವಿಕಾಸ್ ದುಬೆ ತಪ್ಪಿಸಿಕೊಂಡಿದ್ದಾನೆ.

    ಕೊಲೆ ಪ್ರಕರಣದ ಆರೋಪದ ಮೇಲೆ ವಿಕಾಸ್ ದುಬೆಯನ್ನು ಅರೆಸ್ಟ್ ಮಾಡಲು ಹೋದ ಎಂಟು ಪೊಲೀಸರನ್ನು ಕಳೆದ ಗುರುವಾರ ಗುಂಡಿಕ್ಕಿ ಕೊಲ್ಲಲಾಗಿತ್ತು. ಓರ್ವ ಡಿವೈಎಸ್ಪಿ, ಮೂವರು ಸಬ್ ಇನ್‍ಸ್ಪೆಕ್ಟರ್ ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್‍ಗಳು ಸೇರಿದಂತೆ ಒಟ್ಟು ಎಂಟು ಜನ ಪೊಲೀಸರನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಗುರುವಾರ ರಾತ್ರಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿತ್ತು.

  • ಚಿರು ಕೊರೊನಾ ಟೆಸ್ಟ್ ನೆಗೆಟಿವ್ – ಅಪೋಲೋ ವೈದ್ಯರಿಂದ ಮಾಹಿತಿ

    ಚಿರು ಕೊರೊನಾ ಟೆಸ್ಟ್ ನೆಗೆಟಿವ್ – ಅಪೋಲೋ ವೈದ್ಯರಿಂದ ಮಾಹಿತಿ

    ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ಕೊರೊನಾ ಸೋಂಕು ನೆಗಟಿವ್ ಬಂದಿದೆ ಎಂದು ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

    ಇಂದು ಮಧ್ಯಾಹ್ನ 3.48ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರು ಬೆಂಗಳುರಿನ ಅಪೊಲೋ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಈ ವಿಚಾರವಾಗಿ ಅಪೊಲೋ ಆಸ್ಪತ್ರೆ ವೈದ್ಯರು ಮೆಡಿಕಲ್ ವರದಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಮೂರು ಬಾರಿ ಸಿಪಿಆರ್ ಚಿಕಿತ್ಸೆಯಲ್ಲಿ ಯಶಸ್ವಿಯಾದರೂ ಚಿರು ಅವರಿಂದ ಸ್ಪಂದನೆ ಸಿಗಲಿಲ್ಲ ಎಂದಿದ್ದಾರೆ.

    ಆಸ್ಪತ್ರೆಯಲ್ಲಿ ಅಡ್ಮಿಟ್ ಆದ ದಿನವೇ ರೋಗಿ ಮೃತಪಟ್ಟರೆ ಕೋವಿಡ್ 19 ಪರೀಕ್ಷೆ ಮಾಡಲಾಗುತ್ತದೆ. ಹೀಗಾಗಿ ಚಿರಂಜೀವಿ ಅವರ ಗಂಟಲು ದ್ರವವನ್ನು ಕೊರೊನಾ ಟೆಸ್ಟ್ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಚಿರು ಅವರಿಗೆ ಕೊರೊನಾ ಟೆಸ್ಟ್ ನೆಗಟಿವ್ ಬಂದಿದೆ ಎಂದು ಅಪೊಲೊ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

    ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಮಧ್ಯಾಹ್ನ 2.20ಕ್ಕೆ ಆಸ್ಪತ್ರೆಗೆ ಕರೆಯಲಾಯಿತು. ತಕ್ಷಣವೇ ಎಮರ್ಜೆನ್ಸಿ ವಾರ್ಡ್‍ಗೆ ಶಿಫ್ಟ್ ಮಾಡಿ, ದೇಹದ ಉಷ್ಣಾಂಶ, ನಾಡಿಮಿಡಿತ, ಕಣ್ಣಿನ ತಪಾಸಣೆ ಮಾಡಿದಾಗ ಸ್ಪಂದನೆ ಇರಲಿಲ್ಲ. ಅತ್ಯಾಧುನಿಕ ತಂತ್ರಜ್ಞಾನ ಉಪಕರಣ ಬಳಸಿ ಎದೆಯೊತ್ತಿ ಉಸಿರು ನೀಡುವ ಸಿಪಿಆರ್ ಚಿಕಿತ್ಸೆ ಆರಂಭಿಸಲಾಯಿತು. 3.48ರವರೆಗೆ ಈ ಪ್ರಕ್ರಿಯೆ ನಡೆಯಿತು. ಮೂರು ಬಾರಿ ಸಿಪಿಆರ್ ಚಿಕಿತ್ಸೆಯಲ್ಲಿ ಯಶಸ್ವಿಯಾದರೂ ಬಳಿಕ ಸ್ಪಂದನೆ ಸಿಗಲಿಲ್ಲ. ಹಾಗಾಗಿ, 3.48ಕ್ಕೆ ಚಿರಂಜೀವಿ ಸರ್ಜಾ ನಿಧನರಾಗಿದ್ದಾರೆ ಎಂಬುದಾಗಿ ಪ್ರಕಟಿಸಲಾಯಿತು ಅಂತ ಅಪೋಲೋ ಆಸ್ಪತ್ರೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    sಶನಿವಾರ ರಾತ್ರಿಯೇ ಚಿರುಗೆ ಎದೆನೋವು ಕಾಣಿಸಿಕೊಂಡಿತ್ತು. ಇಂದು ಮಧ್ಯಾಹ್ನ ಕೂಡ ಮತ್ತೆ ಎದೆನೋವು ಕಾಣಿಸಿಕೊಂಡ ಬಳಿಕ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

  • ಕೊರೊನಾ ಪೋಸ್ಟ್‌ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್

    ಕೊರೊನಾ ಪೋಸ್ಟ್‌ಗಳಿಗೆ ಲೈಕ್, ಕಾಮೆಂಟ್ ಮಾಡೋ ಮುನ್ನ ಹುಷಾರ್

    ನವದೆಹಲಿ: ಕೊರೊನಾ ಬಗ್ಗೆ ಸತ್ಯವಲ್ಲದ ಸುದ್ದಿಗಳನ್ನು ಲೈಕ್, ಕಮೆಂಟ್ ಮಾಡುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‍ಬುಕ್ ಮುಂದಾಗಿದೆ.

    ಜಾಗತಿಕ ಮಟ್ಟದಲ್ಲಿ ಕೊರೊನಾ ದೊಡ್ಡ ಸುದ್ದಿ ಮಾಡುತ್ತಿದೆ. ಸೋಶಿಯಲ್ ಮಿಡಿಯಾಗಳನ್ನ ಓಪನ್ ಮಾಡಿದರೆ ಸಾಕು ಕೊರೊನಾ ಬಗ್ಗೆ ಅನೇಕ ಪೋಸ್ಟ್‌ಗಳು ಫೇಸ್‍ಬುಕ್, ವ್ಯಾಟ್ಸಪ್ ಇನ್‍ಸ್ಟ್ರಾಗ್ರಾಂನಲ್ಲಿ ಬರುತ್ತಿವೆ. ಹೀಗೆ ಬರುವ ಸುದ್ದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ತಪ್ಪು ಮಾಹಿತಿ ಶೇರ್ ಆಗುತ್ತಿದೆಯಂತೆ. ಹೀಗೆ ಸತ್ಯವಲ್ಲದ ಮಾಹಿತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‍ಬುಕ್ ಈಗ ಸಿದ್ಧವಾಗಿದೆ.

    ಸುಳ್ಳು ಸುದ್ದಿಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಫೇಸ್‍ಬುಕ್ ಗಮನಕ್ಕೆ ತಂದಿದೆ. ಹೀಗಾಗಿ ಇದನ್ನು ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಹಲವು ನ್ಯೂಸ್ ಏಜೆನ್ಸಿಗಳ ಜೊತೆ ಫೇಸ್‍ಬುಕ್ ಕೈ ಜೋಡಿಸಿದೆ. ಸತ್ಯವಲ್ಲದ ಸುದ್ದಿಗಳ ಬಗ್ಗೆ ಜಾಗೃತಿ ಮೂಡಿಸುವುದು, ಅನಗತ್ಯ ಸುಳ್ಳು ಮಾಹಿತಿಯನ್ನು ಶೇರ್ ಮಾಡುವುದು, ಲೈಕ್, ಕಾಮೆಂಟ್ ಮಾಡುವರಿಗೆ ಇನ್ಮುಂದೆ ಎಚ್ಚರಿಕೆ ನೀಡುವ ಕೆಲಸ ಫೇಸ್‍ಬುಕ್ ಮಾಡಲಿದೆ.

    ಫೇಸ್‍ಬುಕ್‍ನಲ್ಲಿ ಕೊರೊನಾ ಸುದ್ದಿ ಶೇರ್ ಮಾಡ್ತಿರಾ ಎಚ್ಚರ
    * ಇತ್ತೀಚೆಗೆ ಫೇಸ್‍ಬುಕ್‍ನಲ್ಲಿ ಕೊರೋನಾ ಸಂಬಂಧ ಸುಳ್ಳು ಮಾಹಿತಿ ಹೆಚ್ಚು ಶೇರ್ ಆಗುತ್ತಿದೆ
    * ಕೊರೊನಾ ವೈರಸ್ ಔಷಧಿ ಲಭ್ಯ, ಗುಣಪಡಿಸುವ ಭರವಸೆಯ ಜಾಹೀರಾತುಗಳು.
    * ವೈರಸ್ ಉಗಮದ ಬಗೆಗೆ ತಪ್ಪು ಮಾಹಿತಿ.
    * ಕೊರೊನಾ ವೈರಸ್ ಸಂಬಂಧಿಸಿದ ವದಂತಿಗಳು.
    * ಕೊರೊನಾ ಹೆಸರಿನಲ್ಲಿ ನಕಲಿ ವಸ್ತುಗಳ ಮಾರಾಟಕ್ಕೆ ಯತ್ನ.

    ಹೀಗೆ ಹಲವು ಮಾದರಿಯಲ್ಲಿ ವೈಯಕ್ತಿಕ ಹಿತಾಸಕ್ತಿಗಾಗಿ ಫೇಸ್‍ಬುಕ್ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ರೀತಿಯ ಸುಳ್ಳು ಮಾಹಿತಿ ಮತ್ತು ವಿಡಿಯೋ ಲಕ್ಷಾಂತರ ವಿವ್ಯೂ ಮತ್ತು ಶೇರ್ ಗಳನ್ನು ಪಡೆದುಕೊಳ್ಳುತ್ತಿದೆ. ಹೀಗಾಗಿ ಹೀಗೆ ತಪ್ಪು ಮಾಹಿತಿ ಶೇರ್, ಕಾಮೆಂಟ್ ಮಾಡಿದ್ದಲ್ಲಿ ಫೇಸ್‍ಬುಕ್ ಮುಂದಿನ ವಾರದಿಂದ ನಿಮ್ಮನ್ನು ಎಚ್ಚರಿಸಲಿದೆ.

    ಫೇಸ್‍ಬುಕ್ ಬಳಸುವಾಗ ನಿಮ್ಮ ಅರಿವಿಗೆ ಅದು ಬರಲಿದೆ. ಇಷ್ಟು ಮಾತ್ರವಲ್ಲದೇ ಫ್ಯಾಕ್ಟ್ ಚೆಕ್, ನ್ಯೂಸ್ ಫೀಡ್‍ಗಳನ್ನು ಕೂಡ ಪ್ರಕಟಿಸಲಿದೆ. ಇದಕ್ಕಾಗಿ ಹಲವು ಒಪ್ಪಂದಗಳನ್ನು ಫೇಸ್‍ಬುಕ್ ಮಾಡಿಕೊಂಡಿದ್ದು, ಮುಂದಿನ ವಾರದಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಫೇಸ್‍ಬುಕ್ ತಿಳಿಸಿದೆ.

  • ಮೈಸೂರಿಗರಿಗೆ ಗುಡ್ ನ್ಯೂಸ್ – ಮೊದಲ ಕೊರೊನಾ ಸೋಂಕಿತ ಡಿಸ್ಚಾರ್ಜ್

    ಮೈಸೂರಿಗರಿಗೆ ಗುಡ್ ನ್ಯೂಸ್ – ಮೊದಲ ಕೊರೊನಾ ಸೋಂಕಿತ ಡಿಸ್ಚಾರ್ಜ್

    ಮೈಸೂರು: ಕೊರೊನಾ ವೈರಸ್ ನಿಂದ ಭಯಪಟ್ಟಿದ್ದ ಮೈಸೂರಿಗರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜಿಲ್ಲೆಯ ಮೊದಲ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ದುಬೈನಿಂದ ಬಂದಿದ್ದ ಮೈಸೂರಿನ ಮೊದಲ ಕೊರೊನಾ ಸೋಂಕಿತ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೈಸೂರಿನ ಕೊರೊನಾ ಆಸ್ಪತ್ರೆಯಲ್ಲಿ ಕಳೆದ 15 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ, ಇಂದು ವೈರಸ್‍ನಿಂದ ಸಂಪೂರ್ಣ ಮುಕ್ತರಾಗಿದ್ದಾರೆ ಎಂದು ವರದಿ ಬಂದ ನಂತರ ಡಿಸ್ಚಾರ್ಜ್ ಆಗಿದ್ದಾರೆ.

    ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿರುವ ಮೈಸೂರಿನ ಜಿಲ್ಲಾಧಿಕಾರಿ ಅಭಿರಾಂ ಶಂಕರ್ ಅವರು, ಸಂಪೂರ್ಣ ಚಿಕಿತ್ಸೆಯ ನಂತರ ರೋಗಿಯ ಸ್ಯಾಂಪಲ್ ಅನ್ನು ಎರಡನೇ ಬಾರಿಯ ಟೆಸ್ಟ್ ಮಾಡಲಾಗಿತ್ತು. ಈ ವರದಿಯಲ್ಲಿ ಸೋಂಕು ನೆಗೆಟಿವ್ ವರದಿ ಬಂದಿದೆ. ಜೊತೆಗೆ ಕೊರೊನಾ ಗುಣಲಕ್ಷಣಗಳಿಂದಲೂ ಮುಕ್ತರಾಗಿದ್ದಾರೆ. ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿಸಲಾಯಿತು ಎಂದು ಹೇಳಿದ್ದಾರೆ.

  • ಮೈಸೂರಲ್ಲಿ ಕೊರೊನಾ ಸಂಪರ್ಕಿತರ ಸಂಖ್ಯೆ ನೂರೂ ಆಗ್ಬಹುದು, ಸಾವಿರನೂ ಆಗ್ಬಹುದು: ಡಿಸಿ

    ಮೈಸೂರಲ್ಲಿ ಕೊರೊನಾ ಸಂಪರ್ಕಿತರ ಸಂಖ್ಯೆ ನೂರೂ ಆಗ್ಬಹುದು, ಸಾವಿರನೂ ಆಗ್ಬಹುದು: ಡಿಸಿ

    – ಇನ್ನೂ 233 ಮಂದಿಯ ಪರೀಕ್ಷೆ ಬಾಕಿ

    ಮೈಸೂರು: ನಂಜನಗೂಡು ಜುಬಿಲೆಂಟ್ಸ್ ಕಾರ್ಖಾನೆ ಕೊರೊನಾ ಪ್ರಕರಣದ ವಿಚಾರವಾಗಿ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಆತಂಕಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೋಂಕಿತರ ಜೊತೆ ಸಂಪರ್ಕ ಹೊಂದಿದ ವ್ಯಕ್ತಿಗಳ ಸ್ಯಾಂಪಲ್ ಪರೀಕ್ಷೆ ಮಾಡಲೇಬೇಕು. ಸದ್ಯ ಪ್ರೈಮರಿ ಸಂಪರ್ಕ ಹೊಂದಿದ 223 ಜನರ ಸ್ಯಾಂಪಲ್ ಪರೀಕ್ಷೆ ನಡೆಯಬೇಕಿದೆ. ಹೀಗಾಗಿ ಕೊರೊನಾ ಪೀಡಿತರ ಸಂಪರ್ಕ ಮಾಡಿದವರ ಸಂಖ್ಯೆ 100 ಆಗಬಹುದು, ಸಾವಿರವೂ ಆಗಬಹುದು ಎಂದು ಹೇಳುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.

    ನಂಜನಗೂಡಿನ ಕೊರೊನಾ ಸೋಂಕಿತ ವ್ಯಕ್ತಿಗಳ ಜೊತೆ ಪ್ರೈಮರಿ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಹುಡುಕಾಟ ಕೂಡ ಮುಂದುವರಿದಿದೆ. ಎಲ್ಲ ಸ್ಯಾಂಪಲ್ ಪರೀಕ್ಷೆಗೆ 12 ದಿನ ಕಳೆಯಬೇಕು. ಇಲ್ಲವಾದಲ್ಲಿ ಮತ್ತೊಮ್ಮೆ ಪರೀಕ್ಷೆ ಮಾಡಬೇಕಾಗುತ್ತದೆ. 12 ದಿನ ಕಳೆದ ಮೇಲೆಯೇ ಸೋಂಕಿನ ನಿಖರ ಮಾಹಿತಿ ತಿಳಿಯೋದು. ನಂಜನಗೂಡು ಪ್ರಕರಣದ ಇನ್ನು ನೂರಾರು ಸ್ಯಾಂಪಲ್ ಪರೀಕ್ಷೆ ಮಾಡಬೇಕಿದೆ. ಎಲ್ಲರ ವರದಿ ಬಂದ ನಂತರ ಮಾಹಿತಿ ನೀಡುತ್ತೇವೆ ಎಂದು ಡಿಸಿ ತಿಳಿಸಿದ್ದಾರೆ.

    ನಂಜನಗೂಡಿನ ಹತ್ತಿರ ಇರುವ ಜುಬಿಲೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಆದರೆ ಇದಾದ ನಂತರ ಇದೇ ಕಾರ್ಖಾನೆಯ ಹಲವರಿಗೆ ಈ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಗುರುವಾರ ತಾನೇ ನಂಜನಗೂಡಿನಿಂದ ಬಳ್ಳಾರಿಗೆ ಬಂದಿದ್ದ 14 ವರ್ಷದ ಬಾಲಕನಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

  • ದೆಹಲಿಗೆ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರದ 7 ಮಂದಿಯ ವರದಿ ನೆಗೆಟಿವ್

    ದೆಹಲಿಗೆ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರದ 7 ಮಂದಿಯ ವರದಿ ನೆಗೆಟಿವ್

    ಚಿಕ್ಕಬಳ್ಳಾಪುರ: ಜಿಲ್ಲೆಯಿಂದ ದೆಹಲಿಯ ನಿಜಾಮುದ್ದೀನ್ ಮಸೀದಿ ಮತ್ತು ಈ ಪ್ರದೇಶದಲ್ಲಿ ಓಡಾಡಿದ್ದ 37 ಮಂದಿಯನ್ನ ಜಿಲ್ಲಾಡಳಿತ ಪತ್ತೆ ಮಾಡಿದೆ.

    ಕಳೆದ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಮಧ್ಯೆ ಒಂದು ತಿಂಗಳ ನಡುವೆ 31 ಮಂದಿ ದೆಹಲಿಯ ನಿಜಾಮುದ್ದೀನ್ ಜಮಾತ್‍ಗೆ ಭೇಟಿ ನೀಡಿದ್ದು, ಅವರನ್ನು ಪತ್ತೆ ಮಾಡಿರುವ ಜಿಲ್ಲಾಡಳಿತ ಮೊದಲ ಹಂತದಲ್ಲಿ 07 ಮಂದಿಯ ರಕ್ತದ ಮಾದರಿ ಹಾಗೂ ಗಂಟಲು ದ್ರವವನ್ನ ಪರೀಕ್ಷೆಗೆ ಕಳುಹಿಸಿತ್ತು. ಸದ್ಯ ಈ 7 ಮಂದಿಗೆ ಕೊರೊನಾ ವೈರಸ್ ಸೋಂಕು ಬಂದಿಲ್ಲ. ವರದಿ ನೆಗೆಟಿವ್ ಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ತಿಳಿಸಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿ ಲತಾ, ಈ 31 ಮಂದಿ ಜಮಾತ್‍ನಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಸಮಾವೇಶದಲ್ಲಿ ಭಾಗಿಯಾಗಿರಲಿಲ್ಲ. ಬದಲಾಗಿ ಇದಕ್ಕೂ ಮುನ್ನವೇ ಅವರ ಜಮಾತ್‍ಗೆ ಹೋಗಿ ಬಂದಿದ್ದರು. ಈ 31 ಮಂದಿಯೂ ಜಮಾತ್‍ಗೆ ಭೇಟಿ ನೀಡಿ ಈಗಾಗಲೇ 50 ದಿನಗಳು ಕಳೆದು ಹೋಗಿವೆ. ಆದರೂ ಕೂಡ ನಾವು ಮುನ್ನೆಚ್ಚರಿಕೆ ಕ್ರಮವಾಗಿ ಮೊದಲ ಹಂತದಲ್ಲಿ 7 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದೆವು. ಆದರೆ ಅವರ ವರದಿ ನೆಗೆಟಿವ್ ಬಂದಿದೆ. ಹೀಗಾಗಿ ಉಳಿದವರನ್ನು ಪರೀಕ್ಷೆಗೆ ಒಳಪಡಿಸಲಿಲ್ಲ ಎಂದು ತಿಳಿಸಿದರು.

    ಮತ್ತೊಂದೆಡೆ ಮಾರ್ಚ್ ತಿಂಗಳಲ್ಲಿ 6 ಮಂದಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಮ್ಮ ಜಿಲ್ಲೆಯವರು ಓಡಾಡಿರುವ ಮಾಹಿತಿ ಸಿಕ್ಕಿದೆ. ಆರು ಮಂದಿಯಲ್ಲಿ ಪ್ರವಾಸಕ್ಕೆ ತೆರಳಿದ್ದ ಶಿಡ್ಲಘಟ್ಟ ಮೂಲದ ದಂಪತಿ, ಹಾಗೂ ಇದೇ ನಿಜಾಮುದ್ದೀನ್ ಪ್ರದೇಶದಲ್ಲಿನ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು, ಹಾಗೂ ನಿಜಾಮುದ್ದೀನ್ ರೈಲ್ವೇ ನಿಲ್ದಾಣದಲ್ಲಿ ಹಾದು ಹೋಗುವ ರೈಲಿನ ಟಿಟಿಯೊಬ್ಬರು ನಮ್ಮದೇ ಜಿಲ್ಲೆಯವರು. ಇವರು ಯಾರೂ ಸಹ ಜಮಾತ್‍ಗೆ ಹೋಗಿಲ್ಲ. ಆದರೂ ಆ ಜಾಗದಲ್ಲಿ ಓಡಾಡಿರುವ ಕಾರಣ ಆರು ಮಂದಿಯನ್ನು ಕ್ವಾರಂಟೈನ್ ಗೆ ಸೂಚಿಸಲಾಗಿದೆ ಎಂದು ಡಿಸಿ ಹೇಳಿದ್ದಾರೆ.

    ಹೀಗಾಗಿ ನಿಜಾಮುದ್ದೀನ್ ಜಮಾತ್‍ನ ಮರ್ಕಜ್‍ನಿಂದ ನಮ್ಮ ಜಿಲ್ಲೆಯ ಯಾರಿಗೂ ಕೂಡ ಸೋಂಕು ತಗಲಿರುವ ಸಾಧ್ಯತೆ ತೀರಾ ಕಡಿಮೆ ಇದೆ. ಇದರಿಂದ ಜನ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಡಿಸಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.

  • ದೆಹಲಿಗೆ ಹಾಸನದಿಂದಲೂ 16 ಜನ ಹೋಗಿದ್ದು, 6 ಜನ ವಾಪಸ್ ಆಗಿದ್ದಾರೆ: ಡಿಸಿ

    ದೆಹಲಿಗೆ ಹಾಸನದಿಂದಲೂ 16 ಜನ ಹೋಗಿದ್ದು, 6 ಜನ ವಾಪಸ್ ಆಗಿದ್ದಾರೆ: ಡಿಸಿ

    ಹಾಸನ: ಕೊರೊನಾ ಸೋಂಕಿನ ಹಾಟ್‍ಸ್ಪಾಟ್ ಎಂದು ಗುರುತಿಸಲ್ಪಟ್ಟಿರುವ ದೆಹಲಿ ಧಾರ್ಮಿಕ ಸಭೆಗೆ ಹಾಸನದಿಂದ 16 ಜನ ಹೋಗಿದ್ದು, ಅವರಲ್ಲಿ 6 ಜನ ಮರಳಿದ್ದಾರೆ ಎಂದು ಹಾಸನ ಜಿಲ್ಲಾಧಿಕಾರಿ ಗಿರೀಶ್ ಮಾಹಿತಿ ನೀಡಿದ್ದಾರೆ.

    ವಾಪಸ್ ಬಂದ ಎಲ್ಲರನ್ನೂ ನಾವು ಗುರುತಿಸಿದ್ದೇವೆ. ಉಳಿದವರು ದೆಹಲಿ, ವಾರಂಗಲ್, ಕುಂದಾಪುರ, ಜಮ್ಮು ಕಾಶ್ಮೀರದಲ್ಲಿ ಇರುವ ಮಾಹಿತಿ ಲಭ್ಯವಾಗಿದೆ. ಹಾಸನ ಜಿಲ್ಲೆಯಲ್ಲಿ ಇರುವವರನ್ನು ಪ್ರತ್ಯೇಕಿಸಿ ನಿಗಾವಹಿಸಲಾಗುತ್ತಿದೆ. ಯಾರಿಗೂ ಈವರೆಗೆ ರೋಗ ಲಕ್ಷಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

    ಜಿಲ್ಲೆಯಲ್ಲಿ ಇರುವ ಆರು ಮಂದಿಯಲ್ಲಿ ಒಬ್ಬರು ಕೊಡಗಿನವರಾಗಿದ್ದು, ಅವರೂ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ. ದೆಹಲಿಗೆ ಹೋಗಿ ಬಂದವರ ಬಗ್ಗೆ ಜಿಲ್ಲೆಯ ಜನರಿಗೆ ತಿಳಿದಿದ್ದರೆ ಅವರ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ನೇರವಾಗಿ ಬಂದು ತಿಳಿಸಬಹುದು ಅಥವಾ ಹೆಲ್ಪ್‍ಲೈನ್ ಮುಖಾಂತರ ಮಾಹಿತಿ ನಿಡಬಹುದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇದುವರೆಗೂ ಯಾರಿಗೂ ಕೊರೊನ ಪಾಸಿಟಿವ್ ಕಂಡುಬಂದಿಲ್ಲ, ಜಿಲ್ಲೆಯ ಜನ ಧೈರ್ಯವಾಗಿರುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • ಹನಿಟ್ರ್ಯಾಪ್​ಗೆ ಬಿದ್ದು ಪಾಕಿಗೆ ಭಾರತೀಯ ನೌಕೆಯ ಮಾಹಿತಿ – ಕಾರವಾರದ ಇಬ್ಬರು ನಾವಿಕರು ಅರೆಸ್ಟ್

    ಹನಿಟ್ರ್ಯಾಪ್​ಗೆ ಬಿದ್ದು ಪಾಕಿಗೆ ಭಾರತೀಯ ನೌಕೆಯ ಮಾಹಿತಿ – ಕಾರವಾರದ ಇಬ್ಬರು ನಾವಿಕರು ಅರೆಸ್ಟ್

    ಕಾರವಾರ: ಹನಿಟ್ರ್ಯಾಪ್ ಹಾಗೂ ಹಣದ ಅಮಿಷಕ್ಕೆ ಒಳಗಾಗಿ ಭಾರತೀಯ ನೌಕಾದಳದ ಹಡಗುಗಳ ಚಲನವಲನ ಹಾಗೂ ಆಂತರಿಕ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಗೆ ಮಾಹಿತಿ ನೀಡುತ್ತಿದ್ದ ಕಾರವಾರದ ಕದಂಬ ನೌಕಾನೆಲೆಯ ರಾಜಸ್ಥಾನ, ಒಡಿಶಾ ಮೂಲದ ಇಬ್ಬರು ಸೈಲರ್ ಸಿಬ್ಬಂದಿ ಸೇರಿದಂತೆ ಎಂಟು ಜನರನ್ನು ಆಂಧ್ರದ ಸಿ.ಐ ಸೆಲ್ ಪೊಲೀಸರು ಇಂದು ಬಂಧಿಸಿದ್ದಾರೆ.

    ಆಂಧ್ರದ ಸಿ.ಐ ಸೆಲ್ ಪೊಲೀಸರು ಕಾರವಾರದ ಅರಗಾದ ಕದಂಬ ನೌಕಾನೆಲೆ, ಮುಂಬೈ, ವಿಶಾಖಪಟ್ಟಣದಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಬಂಧಿಸಿದ್ದಾರೆ. ಕಾರವಾರದ ಕದಂಬ ನೌಕಾನೆಲೆಯ ಇಬ್ಬರು, ವಿಶಾಖಪಟ್ಟಣದ ಮೂವರು, ಮುಂಬೈನ ಭೂಗತ ಲೋಕದ ನಂಟು ಹೊಂದಿರುವ ಹವಾಲ ಹಣ ವ್ಯವಹಾರದ ವ್ಯಕ್ತಿ ಸೇರಿ ಮೂವರು ಒಟ್ಟು ಎಂಟು ಜನರನ್ನು ರಾತ್ರೋರಾತ್ರಿ ವಶಕ್ಕೆ ಪಡೆದು ಬಂದಿಸಿದ್ದಾರೆ.

    ಬಂಧಿತರಿಂದ ಮೊಬೈಲ್, ಅಂತರಾಷ್ಟ್ರೀಯ ಬ್ಯಾಂಕ್ ವ್ಯವಹಾರ ಮಾಡಿದ ದಾಖಲೆ, ನೌಕಾನೆಲೆಯ ಆಂತರಿಕ ಸಿಗ್ನಲ್ ಮ್ಯಾಪ್ ಸೇರಿದಂತೆ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆಗಳಿಗೆ ಕಾರವಾರ ಸೇರಿದಂತೆ ದೇಶದ ಪ್ರಮುಖ ನೌಕೆಗಳ ಚಲನವಲನದ ಬಗ್ಗೆ ಹಾಗೂ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡುತಿದ್ದರು. ಇದಲ್ಲದೇ ಇವರೊಂದಿಗೆ ಹಲವು ಅಧಿಕಾರಿಗಳು ಹನಿಟ್ರ್ಯಾಪ್ ಆಗಿರುವ ಬಗ್ಗೆ ಆಂಧ್ರದ ಗುಪ್ತದಳ ಮಾಹಿತಿ ಪಡೆದಿದ್ದು, ಅವರನ್ನು ಬಂಧಿಸುವಲ್ಲಿ ಕಾರ್ಯೋನ್ಮುಕವಾಗಿದೆ. ಘಟನೆ ಸಂಬಂಧ ಆಂಧ್ರ ಪ್ರದೇಶದ ವಿಜಯವಾಡ ಇಂಟಲಿಜನ್ಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿಕ್ಕಿದ್ದು ಹೇಗೆ?
    ಆಂಧ್ರದ ಸಿ.ಐ ಸೆಲ್ ನ ಅಧಿಕಾರಿಗಳಿಗೆ ಮುಂಬೈನಲ್ಲಿರುವ ಹವಾಲ ಹಣ ವ್ಯವಹಾರ ಮಾಡುತಿದ್ದ ಭೂಗತ ಲೋಕದ ನಂಟು ಹೊಂದಿದ್ದ ವ್ಯಕ್ತಿಯನ್ನು ಆಂಧ್ರದ ವಿಜಯವಾಡದಲ್ಲಿ ಬಂಧಿಸಲಾಗಿತ್ತು. ಈತನನ್ನು ತನಿಖೆ ನಡೆಸಿದಾಗ ಹವಾಲ ಹಣ ಬಳಸಿ ಹಾಗೂ ಹನಿಟ್ರ್ಯಾಪ್ ಮಾಡುವ ಮೂಲಕ ಕಾರವಾರದ ಕದಂಬ ನೌಕಾನೆಲೆ, ವಿಶಾಖಪಟ್ಟಣ, ಮುಂಬೈ ನೌಕಾನೆಲೆಯ ನೌಕೆಯ ಸೈಲರ್ ಗಳ ಮೂಲಕ ಕಾರವಾರದ ಕದಂಬ ನೌಕಾನೆಲೆ, ವಿಶಾಖಪಟ್ಟಣಮ್, ಮುಂಬೈ ನೌಕಾನೆಯಲ್ಲಿ ಯುದ್ಧ ಹಡಗುಗಳ ಚಲನವಲನ, ಮ್ಯಾಪ್ ಗಳು, ಸಿಗ್ನಲ್ ಗಳ ಬಗ್ಗೆ ಮಾಹಿತಿ ಪಡೆಯಲಾಗುತಿತ್ತು. ಈ ಕುರಿತು ಮಾಹಿತಿಯನ್ನು ಆತ ಬಾಯಿ ಬಿಟ್ಟಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಆಂಧ್ರ ಸಿ.ಐ ಸೆಲ್ ಅಧಿಕಾರಿಗಳು ಆತನ ಫೋನ್ ಸೇರಿದಂತೆ ಬ್ಯಾಂಕ್ ವ್ಯವಹಾರದ ದಾಖಲೆ ಪರಿಶೀಲಿಸಿದ್ದು ಈ ವೇಳೆ ವಿಷಯ ಹೊರಬಂದಿದೆ. ನಂತರ ಏಕ ಕಾಲದಲ್ಲಿ ದಾಳಿ ನಡೆಸಿ ಇಂದು ಏಳು ಜನ ನೌಕಾದಳದ ಸೈಲರ್ ಸಿಬ್ಬಂದಿಗಳನ್ನು ವಶಕ್ಕೆ ಪಡೆಯಲಾಗಿದೆ.

    ಗೋವಾದಲ್ಲಿ ಹನಿಟ್ರ್ಯಾಪ್!
    ಕಾರವಾರ, ಮುಂಬೈನ ನಾವಿಕರಿಗೆ ಹೆಣ್ಣಿನ ಆಸೆ ತೋರಿಸಿ ಪಾಕಿಸ್ತಾನದ ಗುಪ್ತದಳ ಸಂಸ್ಥೆ ಗೋವಾದ ಪ್ರತಿಷ್ಠಿತ ಹೋಟಲ್ ನಲ್ಲಿ ರೂಮ್ ಬುಕ್ ಮಾಡುವ ಮೂಲಕ ಹನಿಟ್ರ್ಯಾಪ್ ಮಾಡಿದೆ. ಇದಲ್ಲದೇ ಬಂಧಿತರಿಗೆ ಹಣ ಕೂಡ ನೀಡಲಾಗಿದ್ದು ಅವರ ಖಾತೆಗಳಿಗೆ ಅಂತರಾಷ್ಟ್ರೀಯ ಬ್ಯಾಂಕ್ ವ್ಯವಹಾರದ ದಾಖಲೆ ಸಹ ಸಿಕ್ಕಿದೆ. ಈ ಹನಿಟ್ರ್ಯಾಪ್ ಗೆ ಕೇವಲ ನೌಕೆಯ ಸೈಲರ್ ಗಳಲ್ಲದೇ ನೌಕಾ ನೆಲೆಯ ಪ್ರಮುಖ ಹುದ್ದೆಯಲ್ಲಿರುವ ದೆಹಲಿ ಸೇರಿದಂತೆ ಪ್ರಮುಖ ನೌಕಾ ಕಚೇರಿಯ ಅಧಿಕಾರಿಗಳು ಸಹ ಒಳಗಾಗಿರುವ ಕುರಿತು ತನಿಖೆ ನಡೆಸಲಾಗುತ್ತಿದ್ದು ವಿಚಾರಣೆ ಮುಂದುವರಿದಿದೆ.

  • ಪಾಕ್ ಮಹಿಳಾ ಅಧಿಕಾರಿಯಿಂದ ಹನಿಟ್ರ್ಯಾಪ್ – ಇಬ್ಬರು ಯೋಧರು ಅರೆಸ್ಟ್

    ಪಾಕ್ ಮಹಿಳಾ ಅಧಿಕಾರಿಯಿಂದ ಹನಿಟ್ರ್ಯಾಪ್ – ಇಬ್ಬರು ಯೋಧರು ಅರೆಸ್ಟ್

    ಜೈಪುರ: ಪಾಕಿಸ್ತಾನದ ಐಎಸ್‌ಐ ಮಹಿಳಾ ಅಧಿಕಾರಿಯೊಬ್ಬಳ ಹನಿಟ್ರ್ಯಾಪ್ ಗೆ ಒಳಗಾಗಿ ಭಾರತೀಯ ಸೇನೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಇಬ್ಬರು ಸೈನಿಕರನ್ನು ರಾಜಸ್ಥಾನದಲ್ಲಿ ಸಿಬಿಐ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

    ಈ ಇಬ್ಬರು ಸೈನಿಕರನ್ನು ಮಧ್ಯಪ್ರದೇಶದ ಲ್ಯಾನ್ಸ್ ನಾಯಕ್ ರವಿವರ್ಮಾ ಮತ್ತು ಇನ್ನೊಬ್ಬರನ್ನು ಅಸ್ಸಾಂ ಮೂಲದ ವಿಚಿತಾ ಬೊಹ್ರಾ ಎಂದು ಗುರುತಿಸಲಾಗಿದೆ. ಈ ಇಬ್ಬರು ಸೈನಿಕರು ಪಾಕಿಸ್ತಾನಿ ಐಎಸ್‌ಐ ಅಧಿಕಾರಿಯನ್ನು ಭಾರತೀಯ ಮಹಿಳೆ ಎಂದು ತಿಳಿದು ಭಾರತೀಯ ಸೇನೆಯ ಪ್ರಮುಖ ಮಾಹಿತಿ ಮತ್ತು ಫೋಟೋಗಳನ್ನು ಕಳುಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಪಾಕ್‌ನ ಐಎಸ್‌ಐ ಅಧಿಕಾರಿಯೊಬ್ಬಳು ನಾನು ಪಂಜಾಬ್ ಮೂಲದ ಮಹಿಳೆ ಎಂದು ಹೇಳಿಕೊಂಡು ಪಾಕ್ ನಂಬರಿನಿಂದ ವಾಯ್ಸ್ ಓವರ್ ಇಂಟರ್ನೆಟ್ ಪ್ರೋಟೋಕಾಲ್ ಮೂಲಕ ಈ ಇಬ್ಬರು ಸೈನಿಕರಿಗೆ ಕರೆ ಮಾಡಿದ್ದಾಳೆ. ಪ್ರೋಟೋಕಾಲ್ ಮೂಲಕ ಕರೆ ಮಾಡಿದ ಕಾರಣ ಅದು ಇಂಡಿಯಾ ನಂಬರ್ ರೀತಿ ಕಾಣಿಸಿದೆ. ಇದನ್ನು ನಂಬಿದ ಸೈನಿಕರು ನಮ್ಮ ದೇಶದ ಸೇನೆಯ ಕೆಲ ಪ್ರಮುಖ ಮಾಹಿತಿ ಮತ್ತು ಕೆಲ ಗನ್‌ಗಳ ಫೋಟೋ ಗಳನ್ನು ವಾಟ್ಸಪ್ ಮತ್ತು ಫೇಸ್‌ಬುಕ್ ಮೂಲಕ ಕಳುಹಿಸಿದ್ದಾರೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

    ಸೈನಿಕರು ರಾಜಸ್ಥಾನದ ಪೋಖ್ರಾನ್ ಅಲ್ಲಿ ಕೆಲಸ ಮಾಡುತ್ತಿದ್ದು, ಈ ಜಾಗದಿಂದ ಸೇನಾ ಮಾಹಿತಿಗಳು ಸೋರಿಕೆ ಆಗುತ್ತಿದೆ ಎಂದು ಭಾರತೀಯ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಮಾಹಿತಿಯನ್ನು ಬೆನ್ನತ್ತಿದ ಸಿಬಿಐ ಮತ್ತು ಐಬಿ ತಂಡದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮಾಡಿ ಜೋಧಪುರದ ರೈಲು ನಿಲ್ದಾಣದಲ್ಲಿ ಈ ಇಬ್ಬರು ಸೈನಿಕರನ್ನು ಬಂಧಿಸಿದ್ದಾರೆ.

    ಈ ಇಬ್ಬರು ಅಧಿಕಾರಿಗಳು ಹನಿಟ್ರ್ಯಾಪ್ ಗೆ ಒಳಗಾಗಿದ್ದು, ಪಾಕ್ ಅಧಿಕಾರಿಯನ್ನು ಭಾರತೀಯ ಮಹಿಳೆ ಎಂದು ತಿಳಿದು ಮಾಹಿತಿಯನ್ನು ಶೇರ್ ಮಾಡಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ. ಜೋಧಪುರದ ರೈಲ್ವೇ ನಿಲ್ದಾಣದಲ್ಲಿ ಊರಿಗೆ ಹೋಗುತ್ತಿದ್ದ ಸೈನಿಕರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಜೈಪುರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.