Tag: ಮಾಹಿತಿ ಹಕ್ಕು ಕಾಯ್ದೆ

  • ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

    ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

    ಮಂಡ್ಯ: ಮಾಹಿತಿ ಹಕ್ಕು ಕಾಯ್ದೆಯಡಿ (Right to Information Act) ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ (Badruddin K) ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ಇಂದು ಮಂಡ್ಯ (Mandya) ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಆರ್‌ಟಿಐ ಕಾಯ್ದೆಯ ಕುರಿತು ಮೊದಲು ಸಮರ್ಪಕವಾಗಿ ತಿಳಿದುಕೊಳ್ಳಿ, ಮಾಹಿತಿ ಹಕ್ಕು ಕಾಯ್ದೆಯ ಮೂಲ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಅರ್ಜಿದಾರರು ಆರ್‌ಟಿಐ ಅಡಿ ಮಾಹಿತಿ ಕೋರಿದ 30 ದಿನದೊಳಗಾಗಿ ಅಗತ್ಯ ಮಾಹಿತಿ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: `ಮನಿ’ ಕೊಟ್ಟರಷ್ಟೇ ಸರ್ಕಾರಿ `ಮನೆ’ – ಜಮೀರ್‌ಗೆ ಗೊತ್ತಿಲ್ಲ ಅಂದ್ರೆ ತನಿಖೆ ಮಾಡಿಸಲಿ: ಬಿ.ಆರ್ ಪಾಟೀಲ್ ಬಾಂಬ್‌

    ಮಾಹಿತಿ ಹಕ್ಕು ಕಾಯ್ದೆಯು ಅತ್ಯಂತ ಸರಳವಾಗಿದೆ, ಓದಿ ಅರ್ಥೈಸಿಕೊಳ್ಳಿ. ಯಾವುದೇ ಅರ್ಜಿದಾರರು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಕೇಳಿರುವ ಮಾಹಿತಿಯನ್ನು ಒದಗಿಸಿ. ಅದಕ್ಕೂ ಮುನ್ನ ನೀಡಬಹುದಾದ ಹಾಗೂ ನೀಡಲಾಗದ ಮಾಹಿತಿಗಳನ್ನ ವರ್ಗೀಕರಿಸಿಟ್ಟುಕೊಳ್ಳಿ. ಬಂದ ಅರ್ಜಿ ಓದಿ ನಿಮ್ಮ ವ್ಯಾಪ್ತಿಗೆ ಬರುತ್ತದೆಯೋ ಇಲ್ಲವೂ ಎಂದು ಮೊದಲು ಖಚಿತಪಡಿಸಿಕೊಳ್ಳಿ, ನಿಮ್ಮ ವ್ಯಾಪ್ತಿಗೆ ಬಾರದಿರುವ ಅರ್ಜಿಗಳನ್ನು ಸಂಬಂಧ ಪಟ್ಟ ಇಲಾಖೆಗೆ ಅರ್ಜಿ ಸಲ್ಲಿಕೆಯಾದ 5 ದಿನದೊಳಗೆ ವರ್ಗಾಯಿಸಿ, ಗಮನಕ್ಕೆ ತನ್ನಿ ಎಂದು ತಿಳಿವಳಿಕೆ ನೀಡಿದರು. ಇದನ್ನೂ ಓದಿ: ನಾನು ಬಾಬಾ ರಾಮ್‍ದೇವ್ ಶಿಬಿರದಲ್ಲಿ ತರಬೇತಿ ಪಡೆದ ಯೋಗ ಪಟು: ಲಕ್ಷ್ಮಿ ಹೆಬ್ಬಾಳ್ಕರ್

    ಅಧಿಕಾರಿಗಳ ಕಣ್ತಪ್ಪಿನಿಂದ ಯಾವುದಾದರೂ ಮಾಹಿತಿ ನೀಡುವಲ್ಲಿ ಲೋಪ ಉಂಟಾದ್ರೆ ಅರ್ಜಿದಾರರು ಪ್ರಥಮ ಮೇಲ್ಮನವಿ ಪ್ರಾಧಿಕಾರದ ಅಧಿಕಾರಿಗಳ ಗಮನಕ್ಕೆ ತನ್ನಿ. ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ 1,135 ಮೇಲ್ಮನವಿ ಅರ್ಜಿಗಳು ಬಾಕಿ ಇದೆ. ಎಲ್ಲಾ ಜಿಲ್ಲೆಗೆ ಹೋಲಿಸಿದ್ರೆ ಮಂಡ್ಯ ಜಿಲ್ಲೆಯ ಶೇ.3 ರಷ್ಟು ಮಾತ್ರ ಇದೆ. ಇದು ಶೂನ್ಯಕ್ಕೆ ಬರಬೇಕು. ಅಧಿಕಾರಿಗಳು ಅರ್ಜಿ ಸಲ್ಲಿಸಿದವರಿಗೆ ಅಗತ್ಯ ಮಾಹಿತಿ ಒದಗಿಸಿ, ಮಾಹಿತಿ ಇಲ್ಲದಿದ್ದಲ್ಲಿ ಮಾಹಿತಿ ಏಕೆ ಲಭ್ಯವಿಲ್ಲ ಎಂಬುದನ್ನೂ ಪರಿಶೀಲಿಸಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

  • ಪ್ರಜಾಪ್ರಭುತ್ವ ಬಲವರ್ಧನೆಗೆ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿ ಅಸ್ತ್ರ: ರಾಜ್ಯ ಮಾಹಿತಿ ಆಯುಕ್ತ ಡಾ. ಹರೀಶ್ ಕುಮಾರ್

    ಪ್ರಜಾಪ್ರಭುತ್ವ ಬಲವರ್ಧನೆಗೆ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿ ಅಸ್ತ್ರ: ರಾಜ್ಯ ಮಾಹಿತಿ ಆಯುಕ್ತ ಡಾ. ಹರೀಶ್ ಕುಮಾರ್

    ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಮಾಹಿತಿ ಹಕ್ಕು ಪರಿಣಾಮಕಾರಿಯಾದ ಅಸ್ತ್ರವಾಗಿದ್ದು ಇದು ಜನತಾ ಭಾಗವಹಿಸುವಿಕೆಯನ್ನು ಉತ್ತೇಜಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಡಾ.ಹರೀಶ್ ಕುಮಾರ್ (Dr.Harish Kumar) ಹೇಳಿದರು.

    ರಾಜಾಜಿನಗರದ ಎಸ್.ನಿಜಲಿಂಗಪ್ಪ ಕಾಲೇಜಿನಲ್ಲಿ (S Nijalingappa College) ಏರ್ಪಡಿಸಿದ್ದ `ಮಾಹಿತಿ ಹಕ್ಕು ಕಾಯ್ದೆಯ ಮಹತ್ವ’ ವಿಷಯದ ಕುರಿತ ವಿಚಾರಗೋಷ್ಠಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಭಾರತದ ಪ್ರಜಾತಂತ್ರ ಸುಲಭವಾಗಿ ದಕ್ಕಿದ್ದಲ್ಲ ಅದರ ಹಿಂದೆ ಸುದೀರ್ಘ ಹೋರಾಟದ ಕಥಾನಕವೇ ಅಡಗಿದೆ ಎಂದರು. ಇದನ್ನೂ ಓದಿ: ಅಸ್ಸಾಂನಲ್ಲಿ ಇನ್ಮುಂದೆ ಅಸ್ಸಾಮಿ ಭಾಷೆಯಲ್ಲೇ ಸರ್ಕಾರಿ ಆದೇಶ, ಸುತ್ತೋಲೆ: ಸಿಎಂ ಹಿಮಂತ ಬಿಸ್ವ ಶರ್ಮಾ

    ನಾವು ಪ್ರಜಾತಂತ್ರ ರೂಪಿಕೆಯ ಜೊತೆಯಲ್ಲಿಯೇ ಸಾಮಾಜಿಕ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಳ್ಳುವ ಮುಖಾಂತರ ಅತ್ಯಂತ ಕಟ್ಟ ಕಡೆಯ ಪ್ರಜೆಗೂ ಪ್ರಭುತ್ವವನ್ನು ಸಮಾನವಾಗಿ ಪ್ರಶ್ನಿಸುವ ಅವಕಾಶವನ್ನು ನೀಡಿದ್ದೇವೆ. ಜನತೆ ಮಾಹಿತಿ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಬಳಸಿ ಆಡಳಿತದ ಆಗು ಹೋಗುಗಳಲ್ಲಿ ಭಾಗವಹಿಸಿ ಪ್ರಜಾತಂತ್ರವನ್ನು ಗಟ್ಟಿಗೊಳಿಸಬೇಕು. ಇದರಲ್ಲಿ ವಿದ್ಯಾರ್ಥಿಗಳ ಹಾಗೂ ಯುವಜನರ ಪಾತ್ರ ಹೆಚ್ಚಿದೆ ಎಂದು ತಿಳಿಸಿದರು.

  • ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಸಿಸಿಐ – ಕೇಂದ್ರ ಕಾನೂನು ಆಯೋಗ ಶಿಫಾರಸು

    ಮಾಹಿತಿ ಹಕ್ಕು ಕಾಯ್ದೆ ಅಡಿ ಬಿಸಿಸಿಐ – ಕೇಂದ್ರ ಕಾನೂನು ಆಯೋಗ ಶಿಫಾರಸು

    ನವದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂದು ಕರೆಸಿಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ (ಆರ್‌ಟಿಐ) ತರಲು ಭಾರತ ಕಾನೂನು ಆಯೋಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ಈ ಕುರಿತು ಬುಧವಾರ ಕಾನೂನು ಆಯೋಗ ತನ್ನ ವರದಿಯನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಸಲ್ಲಿಸಿದೆ. ತನ್ನ ವರದಿಯಲ್ಲಿ ದೇಶದ ಎಲ್ಲಾ ಕ್ರೀಡಾ ಸಂಸ್ಥೆಗಳು ಆರ್‌ಟಿಐ ಕಾಯ್ದೆ ಆಡಿ ಬರುತ್ತಿದ್ದು, ಬಿಸಿಸಿಐ ಇದರ ಅಡಿ ಬರಲು ಸಾಧ್ಯವಿಲ್ಲ ಯಾಕೆ ಎಂದು ಪ್ರಶ್ನಿಸಿದೆ? ಅಷ್ಟೇ ಅಲ್ಲದೇ ಕಾಯ್ದೆಯ 12 ವಿಧಿಯ ಪ್ರಕಾರ ಬಿಸಿಸಿಐ ಸಂಸ್ಥೆಯನ್ನು ತರಲು ಶಿಫಾರಸ್ಸು ಮಾಡಿದೆ.

    ಬಿಸಿಸಿಐ ಒಂದು ಸ್ವತಂತ್ರ ಸಂಸ್ಥೆಯಾದರು ಸಹ ಆದರ ಅಡಿ ರಾಜ್ಯ ಸಂಸ್ಥೆಗಳನ್ನು ಒಳಗೊಂಡಂತೆ ಎಲ್ಲಾ ಸಂಸ್ಥೆಗಳು ಸಹ ಆರ್ ಟಿಐ ಕಾಯ್ದೆ ಅಡಿ ಬರಲು ತಿಳಿಸಿದೆ. ಒಂದು ವೇಳೆ ಕೇಂದ್ರ ಸರ್ಕಾರ ಕಾನೂನು ಆಯೋಗದ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಿದರೆ ಸಾಮಾನ್ಯ ವ್ಯಕ್ತಿಯು ಸಹ ಆರ್ ಟಿಐ ಕಾಯ್ದೆ ಅಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ಬಿಸಿಸಿಐ ಸಂಸ್ಥೆ ಇತರೇ ಕ್ರಿಕೆಟ್ ಆಡುವ ರಾಷ್ಟ್ರಗಳು ಹಾಗೂ ಐಸಿಸಿ ಸಂಸ್ಥೆ ನಡುವೆ ಮಾಡಿಕೊಂಡಿರುವ ಒಪ್ಪಂದ ಕುರಿತು ಸಹ ಮಾಹಿತಿ ಪಡೆಯಬಹುದು.

    2016ರ ಜುಲೈ ನಲ್ಲಿ ಸುಪ್ರೀಂ ಕೋರ್ಟ್ ಬಿಸಿಸಿಐ ಸಂಸ್ಥೆಯನ್ನು ಆರ್ ಟಿಐ ಕಾಯ್ದೆ ಅಡಿ ತರಲು ಇರುವ ಕಾನೂನು ಅಂಶಗಳ ಕುರಿತು ವರದಿ ಸಲ್ಲಿಸುವಂತೆ ಕಾನೂನು ಆಯೋಗಕ್ಕೆ ಸೂಚಿಸಿತ್ತು. ಇದರ ಹಿನ್ನೆಲೆ ಕಾನೂನು ಆಯೋಗ ವರದಿಯನ್ನು ಸಲ್ಲಿಸಿದೆ. ಮತ್ತೊಂದು ವಿಶ್ಲೇಷಣೆ ಪ್ರಕಾರ ಈ ಶಿಫಾರಸ್ಸಿನ ಅನ್ವಯ ಬಿಸಿಸಿಐ ಮೇಲೆ ಸರ್ಕಾರ ನಿಯಂತ್ರಣ ಸಾಧಿಸಲು ಅವಕಾಶ ಲಭಿಸುತ್ತದೆ ಎನ್ನಲಾಗಿದೆ. ಈಗಾಗಲೇ ಪಾಕಿಸ್ತಾನ ಜೊತೆಗಿನ ಸರಣಿ ಆಯೋಜನೆ ವಿಚಾರದಲ್ಲಿ ಭಾರತ ವಿದೇಶಾಂಗ ನೀತಿಯೊಂದಿಗೆ ಬಿಸಿಸಿಐ ಅನುಮತಿ ಪಡೆಯವುದು ಕಡ್ಡಾಯವಾಗಿದೆ.

    ಕಾನೂನು ಆಯೋಗ ತನ್ನ ಶಿಫಾರಸ್ಸಿಗೆ ಸಾಕಷ್ಟು ಪೂರಕ ಅಂಶಗಳನ್ನು ನೀಡಿದ್ದು. ಬಿಸಿಸಿಐ 1997 ರಿಂದ ತೆರಿಗೆ ಪಾವತಿಸುವಲ್ಲಿ ಸರ್ಕಾರದಿಂದ ರಿಯಾಯಿತಿ ಪಡೆದಿದೆ. ಅಲ್ಲದೇ ಆಟಗಾರರು ಭಾರತ ತ್ರಿವರ್ಣ ಹಾಗೂ ಆಶೋಕ ಚಕ್ರ ಚಿಹ್ನೆಯನ್ನು ಬಳಕೆ ಮಾಡುವುದನ್ನು ಉಲ್ಲೇಖಿಸಿದೆ.

    ಕೇಂದ್ರ ಸರ್ಕಾರ ಈಗಾಗಲೇ ಬಿಸಿಸಿಐ ಸಂಸ್ಥೆಯನ್ನು ರಾಷ್ಟ್ರೀಯ ಕ್ರೀಡಾ ಪ್ರಾಧಿಕಾರದ ಅಡಿ ಬರುವ ಕುರಿತು ಲೋಕಸಭೆಯಲ್ಲಿ ಮಾಹಿತಿ ನೀಡಿತ್ತು. ಭಾರತ ಇತರೇ ಎಲ್ಲಾ ಕ್ರೀಡಾ ಸಂಸ್ಥೆಗಳು ರಾಷ್ಟ್ರೀಯ ಕ್ರೀಡಾ ಫೆಡರೇಷನ್(ಎನ್‍ಎಸ್‍ಎಫ್) ಅಡಿ ಕಾರ್ಯನಿರ್ವಹಿಸುತ್ತಿದೆ.