Tag: ಮಾಹಿತಿ

  • ಬಾಲಕಿಯ ಕಷ್ಟ ಆಲಿಸಿದ್ದ ಸಿಎಂ ಎಚ್‍ಡಿಕೆ -ಇಂದು ತಹಶೀಲ್ದಾರ್ ಶಬಾಬ್ತಾಜ್ ಮನೆಗೆ ಭೇಟಿ

    ಬಾಲಕಿಯ ಕಷ್ಟ ಆಲಿಸಿದ್ದ ಸಿಎಂ ಎಚ್‍ಡಿಕೆ -ಇಂದು ತಹಶೀಲ್ದಾರ್ ಶಬಾಬ್ತಾಜ್ ಮನೆಗೆ ಭೇಟಿ

    ಮಂಡ್ಯ: ರಸ್ತೆ ಬದಿ ಹೂ ಮಾರುತ್ತಿದ್ದ ಬಾಲಕಿಯ ಕಷ್ಟಕ್ಕೆ ಸ್ಪಂದಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾವು ಕೊಟ್ಟ ಮಾತಿನಂತೆ ಬಾಲಕಿಯ ಮನೆಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಅವರನ್ನು ಕಳುಹಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

    ಮುಖ್ಯಮಂತ್ರಿ ಕುಮಾರಸ್ವಾಮಿ ಬಾಲಕಿಗೆ ಕೊಟ್ಟ ಮಾತಿನಂತೆ ಶ್ರೀರಂಗಪಟ್ಟಣ ತಹಶೀಲ್ದಾರ್ ನಾಗೇಶ್ ಅವರಿಗೆ ಕರೆ ಮಾಡಿದ್ದಾರೆ. ಬಳಿಕ ಹೂ ಮಾರುತ್ತಿದ್ದ ಬಾಲಕಿಯ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಾಲಕಿ ಶಬಾಬ್ತಾಜ್ ಮನೆಗೆ ತಹಶೀಲ್ದಾರ್ ನಾಗೇಶ್ ಅವರು ಭೇಟಿ ನೀಡಿದ್ದು, ಬಾಲಕಿ ಮತ್ತು ಅವರ ಮನೆಯವರಿಂದ ಮಾಹಿತಿ ಕಲೆ ಹಾಕಿದ್ದಾರೆ.

    ಈ ವೇಳೆ ಬಾಲಕಿ ಶಬಾಬ್ತಾಜ್ ಮನೆಯವರ ಕಷ್ಟವನ್ನು ತಹಶೀಲ್ದಾರ್ ಬಳಿ ಹೇಳಿಕೊಂಡಿದ್ದಾಳೆ. ತಾನು ಉನ್ನತ ವ್ಯಾಸಂಗ ಮಾಡಬೇಕೆನ್ನುವ ಆಸೆಯನ್ನು ವ್ಯಕ್ತಪಡಿಸಿದ್ದಾಳೆ. ಸದ್ಯದಲ್ಲೇ ತಾವು ಪಡೆದಿರುವ ಮಾಹಿತಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕಳುಹಿಸಿಕೊಡುವುದಾಗಿ ತಹಶೀಲ್ದಾರ್ ನಾಗೇಶ್ ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸಾಮಾನ್ಯ ಬಾಲಕಿಯೊಬ್ಬಳ ಕಷ್ಟಕ್ಕೆ ಸ್ಪಂದಿಸಿದ ರೀತಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿದೆ.

    ಬುಧವಾರ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೂಳ ಗ್ರಾಮದ ರಸ್ತೆ ಬದಿಯಲ್ಲಿ 12 ವರ್ಷದ ಶಬಾಬ್ತಾಜ್ ಬಾಲಕಿ ಶಾಲೆಗೆ ಹೋಗದೆ ಹೂವನ್ನು ಮಾರುತ್ತಿದ್ದಳು. ಅದೇ ಮಾರ್ಗವಾಗಿ ಬರುತ್ತಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಬಾಲಕಿಯ ಬಳಿ ಕಾರ್ ನಿಲ್ಲಿಸಿ ಆಕೆ ಶಾಲೆಗೆ ಹೋಗದೆ ಯಾಕೆ ಹೂ ಮಾರುತ್ತಿದ್ದಾಳೆ ಎಂಬುದನ್ನು ವಿಚಾರಿಸಿದ್ದರು. ಅಷ್ಟೇ ಅಲ್ಲದೇ ಬಾಲಕಿಯ ಬಳಿ ಹೂ ತೆಗೆದುಕೊಂಡು ಬಾಲಕಿ ಬೇಡವೆಂದರೂ ಆಕೆಗೆ ನೂರು ರೂಪಾಯಿ ಕೊಟ್ಟು ಆಕೆಯ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನ ಸಂತ್ರಸ್ತರೇ, ಪರಿಹಾರ ವೆಬ್‍ಸೈಟಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ!

    ಕೊಡಗಿನ ಸಂತ್ರಸ್ತರೇ, ಪರಿಹಾರ ವೆಬ್‍ಸೈಟಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ!

    ಬೆಂಗಳೂರು: ಕೊಡಗು ನೆರೆಯಿಂದ ಸಂತ್ರಸ್ತರಾದವರಿಗೆ ರಾಜ್ಯದ ಜನ ಸಹಾಯ ಮಾಡುತ್ತಿದ್ದು, ನಿಜವಾಗಿ ಸಂತ್ರಸ್ತರಿಗೆ ಈಗ ಏನು ಅಗತ್ಯವಿದೆ ಎನ್ನುವುದು ತಿಳಿಯುತ್ತಿಲ್ಲ. ಈ ಕಾರಣಕ್ಕಾಗಿ ಕರ್ನಾಟಕ ಸರ್ಕಾರ ಸಂತ್ರಸ್ತರಿಗೆ ಸಹಾಯ ಮಾಡಲು ಈಗ ವೆಬ್‍ಸೈಟ್ ಆರಂಭಿಸಿದೆ.

    www.www.parihara.karnataka.gov.in ಹೆಸರಿನಲ್ಲಿ ವೆಬ್‍ಸೈಟ್ ಆರಂಭಿಸಿದೆ. ವೆಬ್‍ಸೈಟ್ ಡ್ಯಾಶ್‍ಬೋರ್ಡ್ ನಲ್ಲಿ ಸಹಾಯಕ್ಕಾಗಿ ನೋಂದಾಯಿಸಿ, ಸಹಾಯಕ್ಕಾಗಿ ನೊಂದಾಯಿಸಿದ ವಿನಂತಿಗಳು ಮತ್ತು ಗೂಗಲ್ ಪರ್ಸನ್ ಫೈಂಡರ್‍ಗಳಿದ್ದು ಇವುಗಳ ಮೂಲಕ ಸಂಪರ್ಕಿಸಬಹುದಾಗಿದೆ.

    ಸಹಾಯಕ್ಕಾಗಿ ನೊಂದಾಯಿಸಿ ವಿಭಾಗವನ್ನು ಕ್ಲಿಕ್ ಮಾಡಿ ಜಿಲ್ಲೆ, ತಾಲೂಕು, ಹೊಬಳಿ, ಗ್ರಾಮ, ಮನವಿದಾರನ ವಿಳಾಸಕ್ಕೆ, ಮೊಬೈಲ್ ನಂಬರ್ ತುಂಬಿ ಬಳಿಕ ಬೇಕಾದ ಅವಶ್ಯಕತೆಗಳು ಆಯ್ಕೆ ಮಾಡಬೇಕಾಗುತ್ತದೆ. ನೊಂದಾಯಿಸಿದ ವಿನಂತಿಗಳ ವಿಭಾಗವನ್ನು ಓಪನ್ ಮಾಡಿದ್ದಲ್ಲಿ ಯಾರ ಯಾವ ಸಹಾಯದ ಅಗತ್ಯವಿದೆ ಎನ್ನುವ ಮಾಹಿತಿಯನ್ನು ನೋಡಬಹುದಾಗಿದೆ. ಗೂಗಲ್ ಪರ್ಸನ್ ಫೈಂಡರ್ ನಲ್ಲಿ ಬೇಕಾಗಿರುವ ವ್ಯಕ್ತಿಗೆ ಸಂಬಂಧಿಸಿದ ವಿವರವನ್ನು ತುಂಬಿದರೆ ಉಳಿದ ವ್ಯಕ್ತಿಗಳಿಗೆ ಹುಡುಕಾಟ ನಡೆಸಲು ಸಹಾಯವಾಗುತ್ತದೆ.

    ಇಲ್ಲಿ ದಾಖಲಾದ ಮಾಹಿತಿಗಳು ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಲಭ್ಯವಾಗಲಿದ್ದು ಸಹಾಯ ಮಾಡಲು ಸಹಕಾರಿಯಾಗಲಿದೆ.

    ವೆಬ್‍ಸೈಟಿಗೆ ಭೇಟಿ ನೀಡಲು ಕ್ಲಿಕ್ ಮಾಡಿ: www.www.parihara.karnataka.gov.in

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತದ ಮೇಲೆ ದಾಳಿ ನಡೆಸಲು ಗಡಿಯಲ್ಲಿ ಕಾದು ಕುಳಿತಿದ್ದಾರೆ 600 ಕ್ಕೂ ಹೆಚ್ಚು ಮಂದಿ ಉಗ್ರರು!

    ಭಾರತದ ಮೇಲೆ ದಾಳಿ ನಡೆಸಲು ಗಡಿಯಲ್ಲಿ ಕಾದು ಕುಳಿತಿದ್ದಾರೆ 600 ಕ್ಕೂ ಹೆಚ್ಚು ಮಂದಿ ಉಗ್ರರು!

    ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಸಹಾಯದಿಂದ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

    ಆಗಸ್ಟ್ 11 ರಂದು ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಆಗಸ್ಟ್ 15 ರಂದು ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಈ ಎರಡೂ ಕಾರ್ಯಕ್ರಮಗಳ ನಡುವೆ ಭಾರತದಲ್ಲಿ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಮೂಲದ ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಗೃಹ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ.

    ಉಗ್ರರ ಬಾರ್ಡರ್ ಆ್ಯಕ್ಷನ್ ಟೀಂ (ಬ್ಯಾಟ್) ತಂಡದ ಸೋಗಿನಲ್ಲಿ ಪಾಕಿಸ್ತಾನಿ ಸೈನಿಕರೇ ಭಾರತೀಯ ಯೋಧರ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದೆ.

    ಗಡಿಯಲ್ಲಿ ಈಗಾಗಲೇ ಸುಮಾರು 600ಕ್ಕೂ ಅಧಿಕ ಉಗ್ರರು ಮತ್ತು ಉಗ್ರರ ಸೋಗಿನಲ್ಲಿರುವ ಪಾಕಿಸ್ತಾನಿ ಸೈನಿಕರು ಗಡಿನಿಯಂತ್ರಣ ರೇಖೆ ದಾಟಲು ಕಾದು ಕುಳಿತಿದ್ದು, ಅವಕಾಶ ಸಿಕ್ಕ ತಕ್ಷಣವೇ ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

    ಭಾರತದ ಗಡಿ ಪ್ರದೇಶಗಳಾದ ಗುರೆಝ್ ಸೆಕ್ಟರ್ 67 ಮಂದಿ ಭಯೋತ್ಪಾದಕರು ಹಾಗೆಯೇ ಮಶಿಲ್ ಸೆಕ್ಟರ್ ನಲ್ಲಿ 96, ಕೆರನ್ ಸಕ್ಟರ್ ನಲ್ಲಿ 117, ಟ್ಯಾಂಗ್ಧರ್ ಸೆಕ್ಟರ್ ನಲ್ಲಿ 79, ಉರಿ ಸೆಕ್ಟರ್ 26, ರಾಂಪುರ ಸೆಕ್ಟರ್ 43, ಪೂಂಚ್ ಸೆಕ್ಟರ್ 43, ಕೃಷ್ಣಾ ಘಾಟಿ ಸೆಕ್ಟರ್ 21, ಬೀಂಬರ್ ಗ್ಯಾಲಿ ಸೆಕ್ಟರ್ 40, ನೌಶೇರಾ ಸೆಕ್ಟರ್ 6 ಹಾಗೂ ಸುಂದರ್ಬನಿ ಸೆಕ್ಟರ್ ನಲ್ಲಿ 16 ಮಂದಿ ಭಯೋತ್ಪಾದಕರು ಸೇರಿದಂತೆ ಒಟ್ಟು 600 ಮಂದಿ ಉಗ್ರರು ಒಳನುಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ.

    ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸೇನೆಗೆ ಗಡಿಯಲ್ಲಿ ವ್ಯಾಪಕವಾಗಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.

  • ನಿಮ್ಮ ರೈಲು ಈಗ ಎಲ್ಲಿದೆ? ವಾಟ್ಸಪ್‍ಗೆ ಬರುತ್ತೆ ಮೆಸೇಜ್: ಮಾಹಿತಿ ಪಡೆಯೋದು ಹೇಗೆ?

    ನಿಮ್ಮ ರೈಲು ಈಗ ಎಲ್ಲಿದೆ? ವಾಟ್ಸಪ್‍ಗೆ ಬರುತ್ತೆ ಮೆಸೇಜ್: ಮಾಹಿತಿ ಪಡೆಯೋದು ಹೇಗೆ?

    ನವದೆಹಲಿ: ರೈಲು ಪ್ರಯಾಣಿಕರಿಗೆ ತ್ವರಿತಗತಿಯಲ್ಲಿ ಮಾಹಿತಿಯನ್ನು ನೀಡುವ ಉದ್ದೇಶದಿಂದ ಭಾರತೀಯ ರೈಲ್ವೇ ಇಲಾಖೆಯು ವಾಟ್ಸಪ್ ಮೂಲಕ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.

    ಹೌದು, ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಅನುಕೂಲವಾಗುವ ಹಾಗೂ ಸಮಯ ಉಳಿತಾಯವಾಗುವಂತಹ ನೂತನ ಒಪ್ಪಂದವನ್ನು ಭಾರತದ ಮೇಕ್ ಮೈ ಟ್ರಿಪ್ ಸಂಸ್ಥೆಯ ಸಹಭಾಗಿತ್ವದಲ್ಲಿ ಅನಾವರಣಗೊಳಿಸಿದೆ. ಈ ಯೋಜನೆಯಲ್ಲಿ ಪ್ರಯಾಣಿಕರು ತಮ್ಮ ವಾಟ್ಸಪ್ ನಲ್ಲಿ ರೈಲಿನ ನಂಬರ್ ಹಾಕುವ ಮೂಲಕ ರೈಲಿನ ನಿಖರ ಮಾಹಿತಿಯನ್ನು ಕ್ಷಣಮಾತ್ರದಲ್ಲೇ ತಿಳಿದುಕೊಳ್ಳಬಹುದಾಗಿದೆ. ಈ ಮೂಲಕ ಯಾವುದೇ ಅಡೆತಡೆಗಳಿಲ್ಲದೇ ಸರಿಯಾದ ಸಮಯಕ್ಕೆ ರೈಲು ಪ್ರಯಾಣವನ್ನು ಮುಂದುವರಿಸಲು ಪ್ರಯಾಣಿಕರಿಗೆ ಅನುಕೂಲವಾಗುತ್ತದೆ.

    ಈ ಮೊದಲು ಭಾರತೀಯ ರೈಲ್ವೇ ಇಲಾಖೆಯು ಆಪ್ ಬಿಡುಗಡೆಗೊಳಿಸಿತ್ತು. ಈ ಆ್ಯಪ್ ನಲ್ಲಿ ರೈಲು ಈಗ ಯಾವ ಪ್ರದೇಶದಲ್ಲಿ ಸಂಚರಿಸುತ್ತಿದೆ ಎನ್ನುವುದನ್ನು ತಿಳಿಯಬಹುದಿತ್ತು. ಆದರೆ ಈಗ ಆಪ್ ಇಲ್ಲದೇ ನೇರವಾಗಿ ರೈಲಿನ ಮಾಹಿತಿಯನ್ನು ಪಡೆಯಬಹುದಾಗಿದೆ.

    ಹೇಗೆ ಮಾಹಿತಿ ಪಡೆದುಕೊಳ್ಳಬಹುದು?
    ರೈಲಿನ ನಿಖರ ಮಾಹಿತಿಯನ್ನು ಪಡೆಯಲು ಪ್ರಯಾಣಿಕರು, ಮೇಕ್ ಮೈ ಟ್ರಿಪ್ ನ ನೂತನ 73493 89104 ಮೊಬೈಲ್ ನಂಬರನ್ನು ತಮ್ಮ ಕಾಂಟ್ಯಾಕ್ಟ್ ನಲ್ಲಿ ಸೇವೆ ಮಾಡಿಕೊಳ್ಳಬೇಕು. ನಂತರ ಇದನ್ನು ತಮ್ಮ ವಾಟ್ಸಪ್ ನಂಬರಿನ ಮೂಲಕ ನಿಮಗೆ ಬೇಕಾದ ರೈಲಿನ ಸಂಖ್ಯೆಯನ್ನು ಹಾಕಿ ಸಂದೇಶ ಕಳುಹಿಸಿದರೆ ರೈಲು ಹೊರಟಿದ್ಯಾ ಇಲ್ಲವೇ ಎನ್ನುವ ಮಾಹಿತಿಯನ್ನು ತಿಳಿಸುತ್ತದೆ.

  • ಸಾರ್ವಜನಿಕರಿಗಾಗಿ ಮಂಡ್ಯ ಪೊಲೀಸರಿಂದ ವೆಬ್‍ ಸೈಟ್ ಅನಾವರಣ

    ಸಾರ್ವಜನಿಕರಿಗಾಗಿ ಮಂಡ್ಯ ಪೊಲೀಸರಿಂದ ವೆಬ್‍ ಸೈಟ್ ಅನಾವರಣ

    ಮಂಡ್ಯ: ನಗರದ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‍ ಸೈಟ್ ಒಂದು ಅನಾವರಣಗೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು http://www.mandyadistrictpolice.com/ ವೆಬ್‍ ಸೈಟ್ ಅನಾವರಣಗೊಳಿಸಿದರು.

    ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಾರ್ವಜನಿಕರಿಗೆ ಸಿಗಲೆಂದ ಈ ವೆಬ್‍ ಸೈಟನ್ನು ರೂಪಿಸಲಾಗಿದೆ. ಜಿಲ್ಲಾಮಟ್ಟದ ಪೊಲೀಸ್ ಅಧಿಕಾರಿಗಳು, ಕಚೇರಿಗಳು, ದೂರವಾಣಿ ಸಂಖ್ಯೆಗಳ ಮಾಹಿತಿ ಹಾಗೂ ಮಕ್ಕಳು ಮತ್ತು ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಸಹಾಯವಾಣಿ ಸೇರಿದಂತೆ ಪೊಲೀಸ್ ಇಲಾಖೆಗೆ ಸಂಬಂಧಿಸಿದ ನೋಟಿಫಿಕೇಷನ್ ಗಳೂ ಕೂಡ ಈ ವೆಬ್‍ಸೈಟ್ ನಲ್ಲಿ ಲಭ್ಯವಾಗಲಿದೆ.

    ಜಿಲ್ಲಾ ಪೊಲೀಸ್ ವೆಬ್‍ಸೈಟನ್ನು ಸದುಪಯೋಗ ಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.

  • ಆನ್‍ಲೈನ್ ನಲ್ಲಿ ನಿಮಗೆ ಬೇಕಾದ ತಳಿಯ ಹಸುಗಳನ್ನು ಖರೀದಿಸಿ!- ಏನಿದರ ವಿಶೇಷತೆ?

    ಆನ್‍ಲೈನ್ ನಲ್ಲಿ ನಿಮಗೆ ಬೇಕಾದ ತಳಿಯ ಹಸುಗಳನ್ನು ಖರೀದಿಸಿ!- ಏನಿದರ ವಿಶೇಷತೆ?

    ನವದೆಹಲಿ: ರಾಸುಗಳ ವ್ಯಾಪಾರಕ್ಕೆ ಡಿಜಿಟಲ್ ಸ್ಪರ್ಷ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ “ಇ-ಪಶುಹಾತ್” ವೆಬ್‍ಸೈಟ್‍ವೊಂದನ್ನು ಅಭಿವೃದ್ಧಿ ಪಡಿಸಿದೆ. ಮಧ್ಯವರ್ತಿಗಳ ಹಾವಳಿ ತಡೆದು, ರೈತರ ಹಿತ ಕಾಯಲು ನಿಟ್ಟಿನಲ್ಲಿ ಇ-ಪಶುಹಾತ್ ವೆಬ್‍ಸೈಟ್ ಕೆಲಸ ಮಾಡಲಿದೆ.

    ಫ್ಲಿಪ್‍ಕಾರ್ಟ್, ಅಮೆಜಾನ್, ಓಎಲ್‍ಎಕ್ಸ್ ನಂತಯೇ ಇ-ಪಶುಹಾತ್ ವೆಬ್ ಸೈಟ್ ಕಾರ್ಯನಿರ್ವಹಿಸಲಿದೆ. ಇಲ್ಲಿ ರಾಸುಗಳನ್ನು ಮಾರುವವರು ಹಾಗೂ ಖರೀದಿಸುವವರು ನೇರವಾಗಿ ಸಂಪರ್ಕ ಸಾಧಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರೊಂದಿಗೆ ಪಶುಸಂಗೋಪನೆಗೆ ನೆರವಾಗುವ ಮಾಹಿತಿ, ವೈದ್ಯಕೀಯ ಸೇವೆ ಸೇರಿದಂತೆ ಅನೇಕ ಸೌಲಭ್ಯಗಳು ಇಲ್ಲಿ ದೊರೆಯಲಿದೆ.

    ಏನೇನು ಅಭ್ಯವಿದೆ?
    ಜಾನುವಾರು, ಹೋರಿ, ಎಮ್ಮೆ, ಒಂಟೆ, ಕುರಿ, ಆಡು, ಹಂದಿ, ಕುದುರೆ, ಕೋಳಿ, ಕೋನ, ಇತರೆ ಪ್ರಾಣಿಗಳು ಪಟ್ಟಿಯಿದ್ದು, ರಾಜ್ಯವಾರು ಪ್ರತಿಯೊಂದು ಪ್ರಾಣಿಯ ಸಂಖ್ಯೆಯನ್ನು ದಾಖಲಿಸಲಾಗಿದೆ. ಅಷ್ಟೇ ಅಲ್ಲದೇ ಜಾನುವಾರುಗಳ ಪ್ರಾಮಾಣಿಕರಣ ಪರಿಶೀಲನೆ ಸೇವೆ, ಪೌಷ್ಟಿಕತೆ ಸಲಹಾ ಸೇವೆ, ಸ್ವಚ್ಚ ಹಾಲು ಉತ್ಪಾದನೆ, ಆರೋಗ್ಯ ಕಾರ್ಡ್, ವೆಟರ್ ನರಿ ಸೇವೆ, ಕೃತಕ ಗರ್ಭಧಾರಣೆ, ಸಾರಿಗೆ ಸೌಲಭ್ಯಕ್ಕೆ ಸಂಪರ್ಕ ಕಲ್ಪಿಸುವುದು ರೋಗ ಪತ್ತೆ ಮತ್ತು ಪರೀಕ್ಷೆ, ಎಸ್‍ಎಂಎಸ್, ವಾಯ್ಸ್ ಕಾಲ್ ಹಾಗೂ ಇಮೇಲ್ ರಿಮೈಂಡರ್ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ಸಲಹೆ, ದೂರು ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ಮೇಲ್ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ.

    ವೆಬ್‍ಸೈಟ್ ನಲ್ಲಿ ಸ್ಥಳೀಯವಾಗಿ ನಡೆಯುವ ಕಾರ್ಯಕ್ರಮ, ವಿಚಾರ ಸಂಕಿರಣಗಳ ಬಗ್ಗೆಯೂ ನೋಂದಣಿ ಮಾಡಿಸಿಕೊಂಡಿರುವ ರೈತರಿಗೆ ಮಾಹಿತಿ ನೀಡಲಾಗುತ್ತದೆ. ಮಧ್ಯವರ್ತಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಇ-ಪಶುಹಾತ್ ಸಹಾಯಕವಾಗಲಿದ್ದು, ರಾಸುಗಳ ಮಾಲೀಕರಿಗೆ ಹಾಗೂ ಖರೀದಿ ಮಾಡುವವರಿಗೆ ಸೂಕ್ತ ಬೆಲೆ ದೊರೆಯಲಿದೆ. ಅಲ್ಲದೇ ರಾಜ್ಯದ ವಿವಿಧ ತಳಿಗಳ ಬಗ್ಗೆ ಮಾಹಿತಿ, ನೀಡುವ ಜೊತೆಗೆ ಅವುಗಳ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಒಂದು ಹೆಜ್ಜೆ ಮುಂದುವರೆದು ಹಸುಗಳಿಗೆ ಆನ್‍ಲೈನ್ ಟ್ರೇಡಿಂಗ್ ಒದಗಿಸುವ ಮಹತ್ವದ ಯೋಜನೆಯನ್ನು ಈ ವೆಬ್‍ಸೈಟ್ ಕಲ್ಪಿಸಲಿದೆ.

    ಸದ್ಯ ಇ-ಪಶುಹಾತ್ ವೆಬ್‍ಸೈಟ್ ನಲ್ಲಿ ದೇಶದ 56 ವೀರ್ಯ ಸ್ಟೇಷನ್‍ಗಳೊಂದಿಗೆ ಸಂಪರ್ಕ ಸಾಧಿಸಲಾಗಿದೆ. ಹೀಗಾಗಿ ರೈತರು ಯಾವುದೇ ಅಧಿಕಾರಿಗಳ ಸಹಾಯ ಪಡೆಯದೇ ನೇರವಾಗಿ ರಾಜ್ಯದಲ್ಲಿರುವ ಖಾಸಗಿ ಸಂಸ್ಥೆ, ಕೃಷಿ ವಿಶ್ವವಿದ್ಯಾಲಯಗಳ ವಿಳಾಸ, ದೂರವಾಣಿ ಸಂಖ್ಯೆ, ಮಾಹಿತಿ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಪ್ರಮುಖವಾಗಿ ರಾಸುಗಳ ಮಾರಾಟ, ಹೆಪ್ಪುಗಟ್ಟಿದ ದನಗಳ ವೀರ್ಯ (ಎಫ್‍ಎಸ್) ವ್ಯಹಾರಕ್ಕೆ ಅವಕಾಶವಿದೆ. ಇದಕ್ಕಾಗಿ ಅಧಿಕೃತ ಪೂರೈಕೆದಾರರ ಪಟ್ಟಿ ಕೂಡ ಲಭ್ಯವಿದೆ. ವೆಬ್‍ಸೈಟಿಗೆ ಭೇಟಿ ನೀಡಲು ಕ್ಲಿಕ್ ಮಾಡಿ: https://epashuhaat.gov.in/

    ಇ-ಪಶುಹಾತ್ ವೆಬ್‍ಸೈಟ್‍ನಲ್ಲಿ ರೈತರು ಅಥವಾ ಪಶುಗಳ ಮಾಲೀಕರು ನೋಂದಣಿ ಮಾಡಿಕೊಂಡಲ್ಲಿ, ನೇರವಾಗಿ ಮಾರುವವರು ಹಾಗೂ ಖರೀದಿಗಾರರು ಸಂಪರ್ಕ ಸಾಧಿಸಬಹುದು. ದೇಶದಲ್ಲಿ ವಿವಿಧ ತಳಿಗಳನ್ನು ಅಭಿವೃದ್ಧಿಗೆ ಸಂಶೋಧನೆ ನಡೆಯುತತ್ತಿದ್ದು, ಈ ಕುರಿತು ಮಾಹಿತಿ ಕೂಡಾ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಲಭ್ಯವಾಗಲಿದೆ.

    ಕೇಂದ್ರ, ರಾಜ್ಯ ಸಹಕಾರಿ ಮತ್ತು ಖಾಸಗಿ ಸಂಸ್ಥೆಗಳ ಮಧ್ಯೆ ಕೊಂಡಿಯ ರೂಪದಲ್ಲಿ ಇದು ಕಾರ್ಯನಿರ್ವಹಿಸಲಿದೆ. ಇದರಿಂದ ರೈತರು, ಹೈನುಗಾರಿಕೆ, ಕುರಿ ಸಾಕಾಣಿಕೆ, ಕೋಳಿ ಫಾರ್ಮ್ ಸೇರಿದಂತೆ ಪಶುಸಂಗೋಪನೆ ಮಾಡುವವರಿಗೆ ಹೆಚ್ಚು ಅನುಕೂಲವಾಗಲಿದೆ.

  • ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

    ಭೂಮಿ ಖರೀದಿ ಮಾಡೋ ಮಂದಿಗೆ ಗುಡ್ ನ್ಯೂಸ್- ನಿಮ್ಮ ನೆರವಿಗೆ ಬರಲಿದೆ `ದಿಶಾಂಕ್’ ಆ್ಯಪ್

    ಬೆಂಗಳೂರು: ಹೊಸ ಜಾಗ ಖರೀದಿ ಮಾಡಲು ನೀವು ಪ್ರಯತ್ನ ಮಾಡುತ್ತಿದ್ದೀರಾ? ನೀವು ಖರೀದಿ ಮಾಡಿದ ಜಾಗದಲ್ಲಿ ರಾಜಕಾಲುವೆ ಎಲ್ಲಿದೆ ಎನ್ನುವುದನ್ನು ತಿಳಿದುಕೊಳ್ಳಬೇಕೇ? ಹಾಗಾದ್ರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ನಿಮ್ಮ ಎಲ್ಲ ಸಂಶಯ, ಗೊಂದಲಗಳನ್ನು ಪರಿಹಾರ ಮಾಡುತ್ತೆ `ದಿಶಾಂಕ್’ ಆ್ಯಪ್. ಹೇಗೆ ಈ ಅಪ್ಲಿಕೇಶನ್ ಪರಿಹಾರ ಮಾಡುತ್ತೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.

    ಏನಿದು ಆ್ಯಪ್, ಯಾವ ಮಾಹಿತಿ ಸಿಗುತ್ತೆ?
    ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್‍ನಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಮಾತ್ರವಲ್ಲದೇ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ.

    ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್ ಸಹಕಾರಿಯಾಗಲಿದೆ. ಭೂ ಭಾಗದ ವಿವರ, ರಾಜಕಾಲುವೆ, ಕೆರೆ ಕುಂಟೆ ಸುತ್ತಲಿನ ಪ್ರದೇಶ ಹಾಗೂ ಆಸ್ತಿಯ ಆಸುಪಾಸಿನಲ್ಲಿರುವ ಇತರೇ ಭೂ ಭಾಗದ ಮಾಹಿತಿಯನ್ನು ನೀಡಲಿದೆ. ಇದರಿಂದ ಭೂ ಒತ್ತುವರಿಯನ್ನೂ ಸುಲಭವಾಗಿ ಪತ್ತೆಹಚ್ಚಬಹುದುದಾಗಿದೆ.

    ಬಳಕೆ ಹೇಗೆ?
    ಮೊಬೈಲ್ ಫೋನ್‍ಗಳಲ್ಲಿ ಈ ಆ್ಯಪ್ ಡೌನ್‍ಲೋಡ್ ಮಾಡಿ, ಲೊಕೇಷನ್ ವಿವರವನ್ನು ಅಪ್‍ಡೇಟ್ ಮಾಡಿಕೊಳ್ಳಬೇಕು. ಈ ವೇಳೆ ವ್ಯಕ್ತಿ ಯಾವ ಪ್ರದೇಶದಲ್ಲಿ ಇರುತ್ತಾರೆ ಆ ಸ್ಥಳದ ಯಾವ ಸರ್ವೆ ನಂಬರ್ ನಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇದರೊಂದಿಗ ಯಾವುದೇ ಆಸ್ತಿಯ ಸರ್ವೆ ನಂಬರ್ ನಮೂದಿದರೆ ಆ ನಿರ್ದಿಷ್ಟ ಜಾಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು. ಆ ಜಾಗದಕ್ಕೆ ರಸ್ತೆ ಮಾರ್ಗ ಇದೆಯೇ ಎಂಬುದನ್ನೂ ತಿಳಿದುಕೊಳ್ಳಬಹುದಾಗಿದೆ.

    ಕಾನೂನು ಬದ್ಧ ದಾಖಲೆ ಅಲ್ಲ:
    ದಿಶಾಂಕ್ ಆ್ಯಪ್ ನೀಡುವ ಭೂಮಿಯ ವಿವರ ಕೇವಲ ಮಾಹಿತಿ ಆಗಿದೆ. ಇದನ್ನು ಕಾನೂನು ಬದ್ಧ ದಾಖಲೆ ಎಂದು ಪರಿಗಣಿಸಲಾಗುವುದಿಲ್ಲ.

    ಯಾರಿಗೆ ಉಪಯುಕ್ತ?
    ರಾಜ್ಯದ ಎಲ್ಲಾ ಸಾರ್ವಜನಿಕರು, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿಂತೆ ಎಲ್ಲರೂ ಭೂಮಿಯ ವಿವರ ಪಡೆಯಲು ಆ್ಯಪ್ ಉಪಯುಕ್ತವಾಗಿದೆ. ಆಸ್ತಿ ವ್ಯವಹಾರ, ಹೊಸ ಭೂಮಿ ಖರೀದಿ ಹಾಗೂ ಮಾರಾಟ ವೇಳೆ ಮಾಹಿತಿಗಾಗಿ ಆ್ಯಪ್ ಬಳಕೆ ಮಾಡಬಹುದು. ಭೂಮಿಯ ಖಾತೆ ವಿವರದಲ್ಲಿ ನಮೂದಿಸಿರುವ ಸರ್ವೆ ನಂಬರ್ ಸರಿಯಾಗಿದೆಯೇ ಎಂಬುದನ್ನೂ ಪರಿಶೀಲಿಸಬಹುದಾಗಿದೆ. ಆದರೆ ಇದರಲ್ಲಿ ಆಸ್ತಿಗಳ ಆಥವಾ ನಿವೇಶನಗಳ ಮೂಲ ಭೌಗೋಳಿಕ ವಿವರಗಳನ್ನು ಲಭಿಸುವುದಿಲ್ಲ.

    ಆ್ಯಪ್ ಸಿದ್ಧಪಡಿಸಿದ್ದು ಯಾರು?
    ದಿಶಾಂಕ್ ಆ್ಯಪ್ ಅನ್ನು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಸತತ ಮೂರು ವರ್ಷಗಳಿಂದ ಪರಿಶ್ರಮವಹಿಸಿ ಸಿದ್ಧಪಡಿಸಿದೆ. ಇಲಾಖೆಯು 70 ಲಕ್ಷದಷ್ಟು ಸರ್ವೆನಂಬರ್‍ಗಳಿಗೆ ಸಂಬಂಧಿಸಿದ ವಿವರಗಳು ಇದರಲ್ಲಿ ಲಭ್ಯವಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲಿಯಾದರೂ ಭೂ ಮಾಹಿತಿ ಪಡೆಯುವವರ ನೆರವಿಗೆ ಬರಲು ಕಂದಾಯ ಇಲಾಖೆ `ದಿಶಾಂಕ್ ಆ್ಯಪ್’ ಬಿಡುಗಡೆಗೊಳಿಸಿದೆ.

    ಆ್ಯಪ್ ಉದ್ದೇಶ ಏನು?
    ಒಂದೇ ಆ್ಯಪ್‍ನಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದ ಎಲ್ಲ ಸೇವೆ ಸಿಗುವಂತೆ ಮಾಡುವುದು ಇಲಾಖೆಯ ಉದ್ದೇಶವಾಗಿದೆ. ದಿಶಾಂಕ್ ಆ್ಯಪ್ ತಯಾರಿಸಲು ಕಂದಾಯ ಇಲಾಖೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬಿಎಂಆರ್‍ಡಿಎ, ಬಿಬಿಎಂಪಿ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವವನನ್ನು ಪಡೆದುಕೊಂಡಿದೆ. ಆ್ಯಪ್ ಮತ್ತಷ್ಟು ಜನ ಸ್ನೇಹಿಯಾಗಿ ಮಾಡಲು ಕಂದಾಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ಹಂತದಲ್ಲಿ ಆ್ಯಪ್‍ನಲ್ಲಿ ಆಸ್ತಿ ಮಾಲೀಕರಿಗೆ ಸಂಬಂಧಿಸಿದ ವಿವರಗಳನ್ನೂ ಜೋಡಿಸುವ ಮೂಲಕ ಮತ್ತಷ್ಟು ಉಪಯುಕ್ತ ಮಹಿತಿ ಕೇಂದ್ರವಾಗಿ ರೂಪಿಸಲು ಇಲಾಖೆ ಚಿತಿಂಸಿದೆ.

    ಎಲ್ಲಿ ಸಿಗುತ್ತೆ?
    ಗೂಗಲ್ ಆಂಡ್ರಾಯ್ಡ್ ಪ್ಲೇ ಸ್ಟೋರ್ ನಲ್ಲಿ ಈ ಆ್ಯಪ್ ಲಭ್ಯವಿದ್ದು 10 ಸಾವಿರಕ್ಕೂ ಹೆಚ್ಚು ಮಂದಿ ಡೌನ್‍ಲೋಡ್ ಮಾಡಿದ್ದಾರೆ. ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದರೂ, ಮಾಹಿತಿ ಕೊರತೆಯಿಂದ ಹೆಚ್ಚಿನ ಜನರು ಇದನ್ನು ಬಳಕೆ ಮಾಡಿಕೊಳ್ಳುತ್ತಿಲ್ಲ. ಆ್ಯಪ್ ಡೌನ್ ಲೋಡ್ ಮಾಡಲು ಕ್ಲಿಕ್ ಮಾಡಿ – ದಿಶಾಂಕ್ 

  • ಮೋದಿ ಆ್ಯಪ್ ನಿಂದ ಅಮೆರಿಕ ಕಂಪನಿಗಳಿಗೆ ಮಾಹಿತಿ ಸೋರಿಕೆ: ರಾಹುಲ್ ಗಾಂಧಿ

    ಮೋದಿ ಆ್ಯಪ್ ನಿಂದ ಅಮೆರಿಕ ಕಂಪನಿಗಳಿಗೆ ಮಾಹಿತಿ ಸೋರಿಕೆ: ರಾಹುಲ್ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಆ್ಯಪ್ ನಿಂದ ಮಾಹಿತಿ ಸೋರಿಕೆ ಆಗಿದೆ ಎಂದು ಆರೋಪಿಸಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

    ಮಾಹಿತಿ ಸೋರಿಕೆ ಕುರಿತು ಕೇಂಬ್ರಿಡ್ಜ್ ಅನಾಲಿಟಿಕಾ ವಿಶ್ಲೇಷಣಾ ವರದಿಯನ್ನು ಆಧಾರಿಸಿ ರಾಹುಲ್ ಈ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವಿಟ್ ನಲ್ಲಿ ಮೋದಿ ಆ್ಯಪ್ ಮೂಲಕ ಸಂಗ್ರಹಿಸಲಾಗಿರುವ ಮಾಹಿತಿಯನ್ನು ಅಮೆರಿಕನ್ ಕಂಪೆನಿಗಳಿಗೆ ನೀಡಲಾಗಿದೆ ಎಂದು ದೂರಿದ್ದಾರೆ.

    ಈ ಕುರಿತಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ನನ್ನ ಹೆಸರು ನರೇಂದ್ರ ಮೋದಿ, ನಾನು ಭಾರತದ ಪ್ರಧಾನ ಮಂತ್ರಿಯಾಗಿದ್ದೇನೆ. ಈಗ ನೀವು ನನ್ನ ಅಧಿಕೃತ ಆ್ಯಪ್ ಗೆ ಸೈನ್ ಅಪ್ ಆದರೆ ನಿಮ್ಮೆಲ್ಲಾ ಮಾಹಿತಿಯನ್ನು ನಾನು ನನ್ನ ಮಿತ್ರನ ಅಗಿರುವ ಅಮೆರಿಕ ಕಂಪೆನಿಗೆ ನೀಡುತ್ತೇನೆ” ಎಂದು ಬರೆದು ಕೊಂಡಿದ್ದಾರೆ.

    ತಮ್ಮ ಟ್ವೀಟ್‍ನಲ್ಲಿ ಪ್ರಮುಖ ಮಾಧ್ಯಮಗಳ ವಿರುದ್ಧ ಕಿಡಿಕಾರಿರುವ ರಾಹುಲ್, ಇಂತಹ ಮುಖ್ಯ ಸುದ್ದಿಗಳನ್ನು ಸುಡುತ್ತಿರುವ ನಿಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

    ರಾಹುಲ್ ತಮ್ಮ ಟ್ವೀಟ್ ನೊಂದಿಗೆ ಮಾಧ್ಯಮವೊಂದರ ವರದಿಯನ್ನು ಲಿಂಕ್ ಮಾಡಿದ್ದಾರೆ. ಈ ವರದಿಯಲ್ಲಿ ಮೋದಿ ಆ್ಯಪ್ ಬಳಕೆ ಮಾಡುವ ಎಲ್ಲರ ಹೆಸರು, ಫೋಟೋ, ಇ-ಮೇಲ್‍ಗಳ ಮಾಹಿತಿ ಮೂರನೇ ವ್ಯಕ್ತಿಗೆ ನೀಡಲಾಗುತ್ತದೆ ಎಂದು ಆರೋಪಿಸಲಾಗಿದೆ.

    ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಕೇಂಬ್ರಿಡ್ಜ್ ವಿಶ್ಲೇಷಣಾ ವರದಿ ಕುರಿತು ಆರೋಪ ಹಾಗೂ ಪ್ರತ್ಯಾರೋಪಗಳು ನಡೆಯುತ್ತಿದ್ದು, ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂಬ್ರಿಡ್ಜ್ ವಿಶ್ಲೇಷಣಾ ವರದಿ ಸಹಾಯ ಪಡೆದಿತ್ತು ಎಂದು ಬಿಜೆಪಿ ಆರೋಪಿಸಿದೆ.

    ರಾಹುಲ್ ಗಾಂಧಿ ಶನಿವಾರ ಟ್ವಿಟ್ಟರ್ ನಲ್ಲಿ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರ ವಿರುದ್ಧ ಟ್ವೀಟ್ ವಾರ್ ನಡೆಸಿದ್ದರು. ದೇಶದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣ ಕುರಿತು ಪ್ರಸ್ತಾಪಿಸಿದ್ದ ರಾಹುಲ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹೆಚ್ಚು ಬಾಕಿ ಉಳಿಯಲು ನ್ಯಾಯಾಧೀಶರ ಕೊರತೆ ಕಾರಣ ಎಂದು ತಿಳಿಸಿದ್ದರು.

    ಈ ಕುರಿತು ಪ್ರತಿಕ್ರಿಯಿಸಿದ ಸಚಿವ ರವಿ ಶಂಕರ್ ಪ್ರಸಾದ್ ಅವರು ದೇಶದ ನ್ಯಾಯಾಂಗ ವ್ಯವಸ್ಥೆ ಈ ಸ್ಥಿತಿಯನ್ನು ಎದುರಿಸಲು ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ತಿರುಗೇಟು ನೀಡಿದ್ದರು.