Tag: ಮಾ ಸುಬ್ರಮಣಿಯನ್

  • ಕಲುಷಿತ ನೀರು ಸೇವಿಸಿ ಮೂವರು ಸಾವು, 20ಕ್ಕೂ ಅಧಿಕ ಜನ ಅಸ್ವಸ್ಥ

    ಕಲುಷಿತ ನೀರು ಸೇವಿಸಿ ಮೂವರು ಸಾವು, 20ಕ್ಕೂ ಅಧಿಕ ಜನ ಅಸ್ವಸ್ಥ

    ಚೆನ್ನೈ: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಚೆನ್ನೈ (Chennai) ಸಮೀಪದ ಪಲ್ಲಾವರಂ (Pallavaram) ಎಂಬಲ್ಲಿ ನಡೆದಿದೆ.

    ಮೃತರನ್ನು ತಿರುವೀತಿ (56), ಮೋಹನರಂಗಂ (42), ವರಲಕ್ಷ್ಮಿ (88) ಎಂದು ಗುರುತಿಸಲಾಗಿದ್ದು, 20 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಕ್ರೋಮ್‌ಪೇಟೆ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ; ಶಂಭು ಗಡಿಯಲ್ಲಿ ರೈತರು ಜಮಾವಣೆ

    ಫೆಂಗಲ್ ಚಂಡಮಾರುತದಿಂದಾಗಿ ಪಲ್ಲಾವರಂನಲ್ಲಿ ಇತ್ತೀಚಿಗೆ ಸುರಿದ ಮಳೆಯ ಪರಿಣಾಮ ಕೊಳಚೆ ನೀರು ಮತ್ತು ಕುಡಿಯುವ ನೀರು ಮಿಶ್ರಣವಾಗಿ ಕಲುಷಿತಗೊಂಡಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

    ತಮಿಳುನಾಡು ಆರೋಗ್ಯ ಸಚಿವ ಮಾ.ಸುಬ್ರಮಣಿಯನ್ (Ma.Subramanian) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.

    ವೈದ್ಯರ ಮಾಹಿತಿಯ ಆಧಾರದ ಮೇಲೆ, ಪಲ್ಲಾವರಂನ ಕಾಮರಾಜ್‌ನಗರ ಹಾಗೂ ಮನಲ್ಮೇಡು ನಿವಾಸಿಗಳು ಕಳೆದ ಮೂರು ದಿನಗಳಿಂದ ವಾಂತಿ ಹಾಗೂ ಭೇದಿ ಲಕ್ಷಣಗಳೊಂದಿಗೆ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾರೆ. ಇಲ್ಲಿಯವರೆಗೂ ಒಟ್ಟು 34 ಚಿಕಿತ್ಸೆ ಪಡೆದಿದ್ದು, 14 ಮಂದಿ ಬಿಡುಗಡೆಯಾಗಿದ್ದಾರೆ. 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.ಇದನ್ನೂ ಓದಿ: EXCLUSIVE: ಮುಡಾ ಕೇಸ್; 13 ವರ್ಷದಲ್ಲಿ 4,921 ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ

  • 16ರ ಬಾಲಕಿಯಿಂದ 8 ಬಾರಿ ಅಂಡಾಣು ಮಾರಾಟ – 4 ಆಸ್ಪತ್ರೆಗಳು ಶಾಶ್ವತ ಬಂದ್

    16ರ ಬಾಲಕಿಯಿಂದ 8 ಬಾರಿ ಅಂಡಾಣು ಮಾರಾಟ – 4 ಆಸ್ಪತ್ರೆಗಳು ಶಾಶ್ವತ ಬಂದ್

    ಚೆನ್ನೈ: 16 ವರ್ಷದ ಬಾಲಕಿಯಿಂದ ಅಕ್ರಮವಾಗಿ ಅಂಡಾಣು ಪಡೆದು ಮಾರಾಟ ಮಾಡಿದ ಆರೋಪದ ಮೇಲೆ ತಮಿಳುನಾಡಿನ 4 ಆಸ್ಪತ್ರೆಗಳನ್ನು ಶಾಶ್ವತವಾಗಿ ಮುಚ್ಚುವಂತೆ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ.

    ಬಾಲಕಿಯ ತಾಯಿಯು ಅಕೆಯ ಅಂಡಾಣುಗಳನ್ನು 8 ಬಾರಿ ವಿವಿಧ ಕೇಂದ್ರಗಳಿಗೆ ದಾನ ಮಾಡುವಂತೆ ಒತ್ತಾಯಿಸಿದ್ದಳು ಎಂಬುದು ಗೊತ್ತಾಗಿದೆ. ಇದನ್ನೂ ಓದಿ: ತಮಿಳುನಾಡು ಸಿಎಂಗೆ ಕೋವಿಡ್ – ಆಸ್ಪತ್ರೆಗೆ ದಾಖಲು

    21-35 ವಯೋಮಾನದ ಮಹಿಳೆಯರಿಗೆ ಒಂದು ಬಾರಿ ಮಾತ್ರವೇ ಅಂಡಾಣು ದಾನ ಮಾಡಲು ಅನುಮತಿಯಿದೆ. ಆದರೆ ಈ ಪ್ರಕರಣದಲ್ಲಿ ಬಾಲಕಿಯನ್ನು ಹಲವು ಬಾರಿ ಅಂಡಾಣು ಪಡೆಯಲು ಬಲವಂತ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಹೇಳಿದ್ದಾರೆ.

    ಈ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯನ್ನು ವಯಸ್ಕಳೆಂದು ತೋರಿಸಲು ನಕಲಿ ಆಧಾರ್ ಕಾರ್ಡ್ ಮಾಡಿಸಲಾಗಿದ್ದು, ನಕಲಿ ಗಂಡನ ಒಪ್ಪಿಗೆಯನ್ನೂ ಪಡೆಯಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇದನ್ನೂ ಓದಿ: 100ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಭಾರತದಲ್ಲಿ ಇಸ್ಲಾಮಿಕ್‌ ಸರ್ಕಾರ ಸ್ಥಾಪನೆ – ಪೊಲೀಸರಿಗೆ ಸಿಕ್ತು ಹೀಗೊಂದು ದಾಖಲೆ

    ಆಸ್ಪತ್ರೆಗಳು ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆಯನ್ನು ಉಲ್ಲಂಘಿಸಿವೆ. ಅಲ್ಲದೆ, ಆಸ್ಪತ್ರೆಗಳು ಅರ್ಹ ಸಲಹೆಗಾರರನ್ನು ಹೊಂದಿಲ್ಲ, ಅಂಡಾಣು ದಾನಿ ಹುಡುಗಿಗೆ ಕಾರ್ಯವಿಧಾನದ ಸಾಧಕ-ಬಾಧಕಗಳ ಬಗ್ಗೆಯೂ ತಿಳಿಸಿಲ್ಲ ಎಂಬುದನ್ನು ವಿಚಾರಣಾ ಸಮಿತಿ ಕಂಡುಹಿಡಿದಿದೆ. ಹಾಗಾಗಿ ಆಧಾರ್ ದುರ್ಬಳಕೆ ಮತ್ತು ಪೋಕ್ಸೋ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಈ ಪ್ರಕರಣದಲ್ಲಿ ಭಾಗಿಯಾದ ಆಸ್ಪತ್ರೆಗಳಿಗೆ ವೈದ್ಯರೂ ಸೇರಿದಂತೆ 50 ಲಕ್ಷ ರೂ. ವರೆಗೆ ದಂಡ ಮತ್ತು ನೆರವಿನ ಸಂತಾನೋತ್ಪತ್ತಿ ತಂತ್ರಜ್ಞಾನ ಕಾಯ್ದೆಯಡಿ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಬಹುದು ಎಂದು ಆರೋಗ್ಯ ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ಮಾಲ್‌ನಲ್ಲಿ ನಮಾಜ್ – ಮಾಲ್ ಬಹಿಷ್ಕರಿಸುವಂತೆ ಹಿಂದೂ ಸಂಘಟನೆಗಳಿಂದ ಕರೆ

    ಆಸ್ಪತ್ರೆಯಲ್ಲಿ ದಾಖಲಾಗಿರುವ ಹಲವು ರೋಗಿಗಳ ಹಿತದೃಷ್ಟಿಯಿಂದ ಆಸ್ಪತ್ರೆ ಸ್ಥಗಿತಗೊಳಿಸಲು 2 ವಾರಗಳ ಕಾಲಾವಕಾಶ ನೀಡಲಾಗಿದೆ. ಅಲ್ಲದೆ ಆಸ್ಪತ್ರೆಗಳು ರಾಜ್ಯ ಆರೋಗ್ಯ ವಿಮಾ ಯೋಜನೆಯಡಿ ತಮ್ಮ ಎಂಪನೆಲ್‌ಮೆಂಟ್ (ಕೇಂದ್ರಸರ್ಕಾರದ ವಿಮೆ ಯೋಜನೆಗಳಿಗೆ ಆಯ್ಕೆಯಾದವರ ಪಟ್ಟಿ) ಅನ್ನು ಸಹ ಕಳೆದುಕೊಳ್ಳುತ್ತವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • XE ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ: ಮಾ ಸುಬ್ರಮಣಿಯನ್

    XE ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ: ಮಾ ಸುಬ್ರಮಣಿಯನ್

    ಚೆನ್ನೈ: ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ XE ತಳಿ ರಾಜ್ಯದಲ್ಲಿ ಹೊರಹೊಮ್ಮಿದರೆ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಭರವಸೆ ನೀಡಿದ್ದಾರೆ.

    ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ ಶಾಸಕ ಸಿ ವಿಜಯಭಾಸ್ಕರ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮಾ ಸುಬ್ರಮಣಿಯನ್ ಅವರು, ಮಹಾರಾಷ್ಟ್ರ ಮತ್ತು ಗುಜರಾತ್‍ನಲ್ಲಿ XE ರೂಪಾಂತರಿ ವೈರಸ್ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ಕೊರೊನಾ ಹೊಸ ರೂಪಾಂತರಿಯಾಗಿರುವ XE ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಅಂತ ತಿಳಿಸಿದೆ ಎಂದಿದ್ದಾರೆ. ಇದನ್ನೂ ಓದಿ:  XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

    corona

    ರಾಜ್ಯದಲ್ಲಿ ಹೊಸ ರೂಪಾಂತರಿ ವೈರಸ್ XE ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡು ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಲ್ಲದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

    ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ತಾಂತ್ರಿಕ ಸಲಹಾ ಗ್ರೂಪ್ ಆನ್ ಇಮ್ಯುನೈಸೇಶನ್ (ಎನ್‍ಟಿಎಜಿಐ) ಮುಖ್ಯಸ್ಥ ಎನ್‍ಕೆ ಅರೋರಾ ಅವರು, ಈ ಸೋಂಕು ಮಾರಣಾಂತಿಕವಲ್ಲ ಹಾಗೂ ಲಕ್ಷಣರಹಿತವಾಗಿದೆ. ಅಲ್ಲದೇ ವೇಗವಾಗಿ ಹರಡುವುದಿಲ್ಲ ಎಂದು ಹೇಳಿದ್ದಾರೆ.