Tag: ಮಿಚೆಲ್‌ ಸ್ಯಾಂಟ್ನರ್‌

  • ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ರೋಹಿತ್‌ ಪಂದ್ಯಶ್ರೇಷ್ಠ – ಧೋನಿ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಕ್ಯಾಪ್ಟನ್‌

    ದುಬೈ: ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ಗರಿಷ್ಠ ರನ್‌ ಬಾರಿಸುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯಲ್ಲಿ ವಿಶೇಷ ಸಾಧನೆಗೆ ಪಾತ್ರರಾದರು.

    ಹೌದು.. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ 83 ಎಸೆತಗಳಲ್ಲಿ 76 ರನ್‌ (3 ಸಿಕ್ಸರ್‌, 7 ಬೌಂಡರಿ) ಬಾರಿಸಿದ ಹಿಟ್‌ಮ್ಯಾನ್‌ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠಕ್ಕೆ ಪಾತ್ರರಾದ ಟೀಂ ಇಂಡಿಯಾದ 2ನೇ‌ ನಾಯಕ ಹಾಗೂ ವಿಶ್ವದ ನಾಲ್ಕನೇ ಕ್ಯಾಪ್ಟನ್‌ ಎಂಬ ಸಾಧನೆಗೆ ಪಾತ್ರರಾದರು. 2011ರ ಏಕದಿನ ವಿಶ್ವಕಪ್‌ ಟೂರ್ನಿಯನ್ನಿ ಎಂ.ಎಸ್‌ ಧೋನಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

    ಐಸಿಸಿ ಫೈನಲ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಕ್ಯಾಪ್ಟನ್ಸ್‌
    * ಕ್ಲೈವ್ ಲಾಯ್ಡ್ (ವೆಸ್ಟ್ ಇಂಡೀಸ್) – 1975 ಏಕದಿನ ವಿಶ್ವಕಪ್
    * ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) – 2003 ಏಕದಿನ ವಿಶ್ವಕಪ್
    * ಎಂ.ಎಸ್. ಧೋನಿ (ಭಾರತ) – 2011 ಏಕದಿನ ವಿಶ್ವಕಪ್
    * ರೋಹಿತ್ ಶರ್ಮಾ (ಭಾರತ) – 2025 ಚಾಂಪಿಯನ್ಸ್ ಟ್ರೋಫಿ

    ಯಾವ ವರ್ಷ – ಯಾರು ಚಾಂಪಿಯನ್ಸ್‌?
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

    ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ರೋಹಿತ್‌ – 2027ರ ಏಕದಿನ ವಿಶ್ವಕಪ್‌ ಮುಂದಿನ ಟಾರ್ಗೆಟ್‌?

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ (Champions Trophy) ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಂಡಿದೆ. ಇದು ರೋಹಿತ್‌ ಶರ್ಮಾ (Rohit Sharma) ನಾಯಕತ್ವದಲ್ಲಿ ಗೆದ್ದ 2ನೇ ಐಸಿಸಿ ಟ್ರೋಫಿ ಎಂಬುದೂ ಸಹ ವಿಶೇಷ.

    ಇನ್ನೂ 2024ರ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಬಳಿಕ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್‌ ಶರ್ಮಾ, ಫೈನಲ್‌ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ವದಂತಿ ಹಬ್ಬಿತ್ತು. ಈ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪೋಸ್ಟ್‌ ಪ್ರಸೆಂಟೇಷನ್‌ನಲ್ಲಿ ಭವಿಷ್ಯದ ಯೋಜನೆಗಳೇನಾದ್ರೂ ಇದೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್‌ 2027ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಸುಳಿವು ಕೊಟ್ಟಿದ್ದಾರೆ. ಭವಿಷ್ಯದ ಯೋಜನೆಗಳು ಭವಿಷ್ಯದಲ್ಲಿ ಬರುತ್ತವೆ. ಸದ್ಯಕ್ಕೆ, ಎಲ್ಲವೂ ಹಾಗೆಯೇ ಮುಂದುವರಿಯುತ್ತದೆ ಎಂದು ರೋಹಿತ್‌ ಹೇಳಿದ್ದಾರೆ.

    ಸೆಮಿ ಫೈನಲ್‌ ವರೆಗೂ ಬ್ಯಾಟಿಂಗ್‌ನಲ್ಲಿ ಫಾರ್ಮ್‌ ಕಳೆದುಕೊಂಡಿದ್ದ ರೋಹಿತ್‌ ಶರ್ಮಾ ಫೈನಲ್‌ನಲ್ಲಿ ಕೀವೀಸ್‌ ಬೌಲರ್‌ಗಳನ್ನು ಚೆಂಡಾಡಿದರು. 83 ಎಸೆತಗಳಲ್ಲಿ 75 ರನ್‌ ಚಚ್ಚಿ ಟೀಂ ಇಂಡಿಯಾ ಗೆಲುವಿಗೆ ಕಾರಣರಾದರು.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    ಮುಂದುವರಿದು.. ಈ ಟ್ರೋಫಿಯನ್ನು ನನ್ನ ದೇಶಕ್ಕೆ ಅರ್ಪಿಸುತ್ತೇನೆ. ಏಕೆಂದರೆ ನಾವು ಗೆಲ್ಲಬೇಕೆಂದು ಪ್ರತಿಯೊಬ್ಬರು ಬಯಸಿದ್ದರು ಶರ್ಮಾ ಭಾವುಕರಾಗಿದ್ದಾರೆ.

    2 ಬಾರಿ ಫೈನಲ್‌ನಲ್ಲಿ ಸೋಲು:
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ಚಾಂಪಿಯನ್ಸ್‌ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮೋದಿ ವಿಶ್‌

    ಚಾಂಪಿಯನ್ಸ್‌ ಟ್ರೋಫಿ ಗೆದ್ದ ಟೀಂ ಇಂಡಿಯಾಗೆ ಮೋದಿ ವಿಶ್‌

    ನವದೆಹಲಿ: 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್‌ ಟ್ರೋಫಿ (ICC Champions Trophy) ಕಿರೀಟ ಮುಡಿಗೇರಿಸಿಕೊಂಡ ಭಾರತ ಕ್ರಿಕೆಟ್‌ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶುಭ ಹಾರೈಸಿದ್ದಾರೆ.

    ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಪ್ರಧಾನಿ ಮೋದಿ, ಅಸಾಧಾರಣ ಆಟ ಮತ್ತು ಅಸಾಧಾರಣ ಫಲಿತಾಂಶ… ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಭಾರತಕ್ಕೆ ತಂದ ನಮ್ಮ ಕ್ರಿಕೆಟ್ ತಂಡದ ಬಗ್ಗೆ ಹೆಮ್ಮೆಯಿದೆ. ಅವರು ಟೂರ್ನಿಯುದ್ಧಕ್ಕೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಸಂಘಟಿತ ಪ್ರದರ್ಶನಕ್ಕಾಗಿ ನಮ್ಮ ತಂಡಕ್ಕೆ ಅಭಿನಂದನೆಗಳು ಎಂದು ಶುಭಕೋರಿದ್ದಾರೆ.

    ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    2 ಬಾರಿ ಫೈನಲ್‌ನಲ್ಲಿ ಸೋಲು:
    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

  • ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ಬಿದ್ದು ಎದ್ದು ಗೆದ್ದ ರಾಹುಲ್‌ – ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟ ಕನ್ನಡಿಗ

    ದುಬೈ: ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ 12 ವರ್ಷಗಳ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಈ ಟೂರ್ನಿಯ ಸೆಮಿಸ್‌ ಹಾಗೂ ಫೈನಲ್‌ ಪಂದ್ಯದಲ್ಲಿ ಎಚ್ಚರಿಕೆಯ ಆಟವಾಡಿದ ಕೆ.ಎಲ್‌ ರಾಹುಲ್‌ ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಕೆ.ಎಲ್‌ ರಾಹುಲ್‌ ಫಾರ್ಮ್‌ ಕಳೆದುಕೊಂಡು ಮೂಲೆಗುಂಪಾಗಿದ್ದರು. ಗಾಯದ ಸಮಸ್ಯೆ, ಫಾರ್ಮ್‌ ಕಂಡುಕೊಳ್ಳದೇ ಇದ್ದ ಕಾರಣ 2024ರ ಟಿ20 ವಿಶ್ವಕಪ್‌ ತಂಡಕ್ಕೂ ಆಯ್ಕೆಯಾಗದೇ ಉಳಿದಿದ್ದರು. ಇದನ್ನೂ ಓದಿ: ಬ್ಯೂಟಿ ಜೊತೆ ಚಹಲ್‌ ಫೈನಲ್‌ ಪಂದ್ಯ ವೀಕ್ಷಣೆ – ಯಾರಿದು ಯುವತಿ?

    ಆ ಬಳಿಕ ರಣಜಿ ಟ್ರೋಫಿಯಲ್ಲಿ ಹಾಗೂ ಚಾಂಪಿಯನ್ಸ್‌ ಟ್ರೋಫಿಗೂ ಮುನ್ನ ಇಂಗ್ಲೆಂಡ್‌ ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಫಾರ್ಮ್‌ ಸಾಬೀತು ಮಾಡುವಲ್ಲಿ ರಾಹುಲ್‌ ವಿಫಲವಾಗಿದ್ದರು. ಇದರಿಂದ ಭಾರೀ ಟೀಕೆಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಐಸಿಸಿಯ 24 ಟೂರ್ನಿಗಳಲ್ಲಿ 23 ರಲ್ಲಿ ಗೆಲುವು – ಇದು ರೋ’ಹಿಟ್‌’ ಕ್ಯಾಪ್ಟನ್ಸಿ ಟ್ರ್ಯಾಕ್‌ ರೆಕಾರ್ಡ್‌

    ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಬಾಂಗ್ಲಾ ವಿರುದ್ಧ 41 ರನ್‌, ನ್ಯೂಜಿಲೆಂಡ್‌ ವಿರುದ್ಧ 23 ರನ್‌ ಗಳಿಸಿದ್ದರು. ಆದ್ರೆ ಆಸೀಸ್‌ ವಿರುದ್ಧ ನಡೆದ ಸೆಮಿ ಫೈನಲ್‌ನಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆ.ಎಲ್‌ ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 34 ಎಸೆತಗಳಲ್ಲಿ 42 ರನ್‌ ಗಳಿದ್ರೂ ಟೀಂ ಇಂಡಿಯಾ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಫೈನಲ್‌ ಪಂದ್ಯದಲ್ಲೂ 34 ರನ್‌ ಗಳಿಸುವ ಮೂಲಕ ಭಾರತ ಟ್ರೋಫಿ ಗೆಲ್ಲುವಲ್ಲಿ ಪ್ರಮುಖ ಕಾರಣರಾಗಿದ್ದಾರೆ.

    ಭಾರತ ಕೊನೆಯ ಬಾರಿಗೆ 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್‌ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ:  140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ! 

  • 140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    140 ಕೋಟಿ ಭಾರತೀಯರ ಕನಸು ನನಸು – ಚಾಂಪಿಯ‌ನ್ಸ್‌ಗಳಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ!

    – 25 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಭಾರತ

    ದುಬೈ: ಕೊನೆಗೂ 140 ಕೋಟಿ ಭಾರತೀಯರ ಕನಸು ನನಸಾಗಿದೆ. ನ್ಯೂಜಿಲೆಂಡ್ (New Zealand) ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ (Champions Trophy) ಕಿರೀಟ ಮುಡಿಗೇರಿಸಿಕೊಂಡಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದ ಭಾರತಕ್ಕಿದು ಸತತ 2ನೇ ಐಸಿಸಿ ಟ್ರೋಫಿ ಆಗಿರುವುದು ವಿಶೇಷ.

    ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಭಾರತ (Team India) 49 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿ ಗೆಲುವು ಸಾಧಿಸಿತು. ಸಂಘಟಿತ ಬೌಲಿಂಗ್, ಬ್ಯಾಟಿಂಗ್ ಪ್ರದರ್ಶನದೊಂದಿಗೆ 2000 ಇಸವಿಯಲ್ಲಿ ಕಿವೀಸ್ ವಿರುದ್ಧ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿತು.

    1998-99ರ ಚೊಚ್ಚಲ ಆವೃತ್ತಿಯಲ್ಲೇ ಚೋಕರ್ಸ್ ದಕ್ಷಿಣ ಆಫ್ರಿಕಾ ಟ್ರೋಫಿ ಮುಡಿಗೇರಿಸಿಕೊಂಡಿತ್ತು. 2000-01ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ಟ್ರೋಫಿ ಗೆದ್ದುಕೊಂಡಿತ್ತು. ಆದ್ರೆ 2002-03ರ ಆವೃತ್ತಿಯಲ್ಲಿ 2 ದಿನ ಫೈನಲ್ ನಡೆದರೂ ಮಳೆಗೆ ಪಂದ್ಯ ಬಲಿಯಾಯ್ತು. ಆದ್ದರಿಂದ ಭಾರತ ಮತ್ತು ಶ್ರೀಲಂಕಾವನ್ನ ಜಂಟಿಯಾಗಿ ಚಾಂಪಿಯನ್ಸ್ ಎಂದು ಘೋಷಿಸಲಾಯಿತು. ಇನ್ನೂ 2004ರಲ್ಲಿ ವೆಸ್ಟ್ ಇಂಡೀಸ್, 2006-07, 2009-10ರಲ್ಲಿ ಆಸ್ಟ್ರೇಲಿಯಾ, 2013ರಲ್ಲಿ ಭಾರತ, 2017ರಲ್ಲಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. 2000, 2017ರಲ್ಲಿ ಭಾರತ ಫೈನಲ್ ತಲುಪಿದ್ರೂ ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. 2000 ಇಸವಿಯಲ್ಲಿ ಕಿವೀಸ್ ವಿರುದ್ಧ, 2017ರಲ್ಲಿ ಪಾಕಿಸ್ತಾನದ ವಿರುದ್ಧ ಫೈನಲ್‌ನಲ್ಲಿ ಸೋತು ನಿರಾಸೆ ಅನುಭವಿಸಿತ್ತು. ಸದ್ಯ 25 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಿವೀಸ್ ವಿರುದ್ಧ ಗೆದ್ದು ಭಾರತ ಸೇಡು ತೀರಿಸಿಕೊಂಡಿದೆ.

    ದಾಖಲೆಯ ಶತಕದ ಜೊತೆಯಾಟ:
    ಚೇಸಿಂಗ್ ಆರಂಭಿಸಿದ ಟೀಂ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಸ್ಫೋಟಕ ಇನ್ನಿಂಗ್ಸ್ ಕಟ್ಟುವಲ್ಲಿ ಯಶಸ್ವಿಯಾದರು. 112 ಎಸೆತಗಳಲ್ಲಿ ಈ ಜೋಡಿ 105 ರನ್‌ಗಳ ಜೊತೆಯಾಟ ನೀಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ಶತಕದ ಜೊತೆಯಾಟ ಎಂಬ ದಾಖಲೆಗೂ ರೋಹಿತ್ ಗಿಲ್ ಪಾತ್ರರಾದರು. ಗಿಲ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಈ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೇವಲ 1 ರನ್ ಗಳಿಸಿ ಎಲ್‌ಬಿಡಬ್ಲ್ಯೂಗೆ ತುತ್ತಾದರು. ಆ ಬಳಿಕವೂ ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ ರೋಹಿತ್ 76 ರನ್ (83 ಎಸೆತ, 3 ಸಿಕ್ಸರ್, 7 ಬೌಂಡರಿ) ಗಳಿಸಿ ಪೆವಿಲಿಯನ್‌ಗೆ ಮರಳಿದರು.

    ಇನ್ನಿಂಗ್ಸ್‌ ಕಟ್ಟಿದ ಶ್ರೇಯಸ್‌:
    26.1 ಓವರ್‌ಗಳಲ್ಲಿ 122 ರನ್‌ಗಳಿಗೆ ಭಾರತ 3 ವಿಕೆಟ್‌ ಕಳೆದುಕೊಂಡಿದ್ದಾಗ ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಶ್ರೇಯಸ್‌ ಅಯ್ಯರ್‌ ಯಶಸ್ವಿಯಾದರು. 62 ಎಸೆತಗಳಲ್ಲಿ 48 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ರು. ಇದೇ ವೇಳೆ ಶ್ರೇಯಸ್‌ಗೆ ಜೊತೆಯಾಗಿ ಎಚ್ಚರಿಕೆಯ ಆಟವಾಡಿದ ಅಕ್ಷರ್‌ ಪಟೇಲ್‌ 40 ಎಸೆತಗಳಲ್ಲಿ 29 ರನ್‌ (1 ಸಿಕ್ಸರ್‌, 1 ಬೌಂಡರಿ) ಕೊಡುಗೆ ನೀಡಿದರು.

    ರಾಹುಲ್‌ ಎಚ್ಚರಿಕೆಯ ಆಟ:
    ಇನ್ನೂ ಲೀಗ್‌ ಸುತ್ತಿನ ಪಂದ್ಯಗಳಲ್ಲಿ ಕಳಪೆ ಪ್ರದರ್ಶನದಿಂದ ಭಾರೀ ಟೀಕೆಗೆ ಗುರಿಯಾಗಿದ್ದ ಕನ್ನಡಿಗ ಕೆ.ಎಲ್‌ ರಾಹುಲ್‌ ಸೆಮಿಫೈನಲ್‌ನಂತೆ ಫೈನಲ್‌ ಪಂದ್ಯದಲ್ಲೂ ಎಚ್ಚರಿಕೆಯ ಆಟವಾಡಿದರು. 33 ಎಸೆತಗಳಲ್ಲಿ 1 ಸಿಕ್ಸರ್‌, 1 ಬೌಂಡರಿ ಸಹಿತ 34 ರನ್‌ ಗಳಿಸಿ ಟೀಂ ಇಂಡಿಯಾ ಗೆಲುವಿಗೆ ನೆರವಾದರು. ಇದರೊಂದಿಗೆ ಪಾಂಡ್ಯ ಜವಾಬ್ದಾರಿಯುತ 18 ರನ್‌, ರವೀಂದ್ರ ಜಡೇಜಾ 3 ರನ್‌ಗಳ ಕೊಡುಗೆ ನೀಡಿದರು. ಹೆಚ್ಚುವರಿಯಾಗಿ 8 ರನ್‌ ತಂಡಕ್ಕೆ ಸೇರ್ಪಡೆಯಾಯ್ತು.

    ನ್ಯೂಜಿಲೆಂಡ್‌ ಪರ ಮಿಚೆಲ್‌ ಸ್ಯಾಂಟ್ನರ್‌, ಮೈಕಲ್‌ ಬ್ರೇಸ್‌ವೆಲ್‌ ತಲಾ 2 ವಿಕೆಟ್‌ ಕಿತ್ತರೆ, ಕೈಲ್‌ ಜೇಮಿಸನ್‌, ರಚಿನ್‌ ರವೀಂದ್ರ ತಲಾ ಒಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮಿಚೆಲ್ ಸ್ಯಾಂಟ್ನರ್ ನಾಯಕತ್ವದ ಕಿವೀಸ್, ಫೀಲ್ಡಿಂಗ್ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್ ರವೀಂದ್ರ ಹಾಗೂ ವಿಲ್ ಯಂಗ್ ಜೋಡಿ ಸ್ಪೋಟಕ ಇನ್ನಿಂಗ್ಸ್ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್ ಯಂಗ್ ವಿಕೆಟ್ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದರು. ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್, ಫಿಲಿಪ್ಸ್ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್ ಫಿಲಿಪ್ಸ್ ಹಾಗೂ ಡೇರಿಲ್ ಮಿಚೆಲ್ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್ ಲಾಥಮ್, ಮಿಚೆಲ್ ಜೋಡಿಯಿಂದ 33 ರನ್ ಹಾಗೂ ಮೈಕಲ್ ಬ್ರೇಸ್‌ವೆಲ್ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್ ಪರ ಡೇರಿಲ್ ಮಿಚೆಲ್ 63 ರನ್ (101 ಎಸೆತ, 3 ಬೌಂಡರಿ), ಮೈಕಲ್ ಬ್ರೇಸ್‌ವೆಲ್ ಅಜೇಯ 53 ರನ್ (40 ಎಸೆತ, 2 ಸಿಕ್ಸರ್, 3 ಬೌಂಡರಿ), ರಚಿನ್ ರವೀಂದ್ರ 37 ರನ್, ಗ್ಲೆನ್ ಫಿಲಿಪ್ಸ್ 34 ರನ್, ವಿಲ್ ಯಂಗ್ 15 ರನ್, ಕೇನ್ ವಿಲಿಯಮ್ಸನ್ 11 ರನ್, ಟಾಮ್ ಲಾಥಮ್ 14 ರನ್, ಮಿಚೆಲ್ ಸ್ಯಾಂಟ್ನರ್ 8 ರನ್, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ, ಕುಲ್‌ದೀಪ್ ಯಾದವ್ ತಲಾ 2 ವಿಕೆಟ್ ಕಿತ್ತರೆ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ ತಲಾ ಒಂದೊAದು ವಿಕೆಟ್ ಪಡೆದು ಮಿಂಚಿದರು.

  • Champions Trophy | ಕೊನೆಯಲ್ಲಿ ಬ್ರೇಸ್‌ವೆಲ್‌ ಸ್ಫೋಟಕ ಫಿಫ್ಟಿ – ಭಾರತದ ಗೆಲುವಿಗೆ 252 ರನ್‌ ಗುರಿ

    Champions Trophy | ಕೊನೆಯಲ್ಲಿ ಬ್ರೇಸ್‌ವೆಲ್‌ ಸ್ಫೋಟಕ ಫಿಫ್ಟಿ – ಭಾರತದ ಗೆಲುವಿಗೆ 252 ರನ್‌ ಗುರಿ

    ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ (Champions Trophy Final) ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ತಂಡ 7 ವಿಕೆಟ್‌ ನಷ್ಟಕ್ಕೆ 251 ರನ್‌ ಗಳಿಸಿದೆ. ಈ ಮೂಲಕ ಭಾರತಕ್ಕೆ (Team India) 252 ರನ್‌ಗಳ ಗುರಿ ನೀಡಿದೆ.

    ಟೀಂ ಇಂಡಿಯಾ ಸ್ಪಿನ್‌ ಬೌಲರ್‌ಗಳ ಘಾತುಕ ದಾಳಿಯ ಹೊರತಾಗಿಯೂ ಮೈಕಲ್‌ ಬ್ರೇಸ್‌ವೆಲ್‌ (Michael Bracewell) ಹಾಗೂ ಡೇರಿಲ್‌ ಮಿಚೆಲ್‌ (Daryl Mitchell) ಅವರ ಅಮೋಘ ಅರ್ಧಶತಕಗಳ ನೆರವಿನಿಂದ 250 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಗಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಮಿಚೆಲ್‌ ಸ್ಯಾಂಟ್ನರ್‌ ನಾಯಕತ್ವದ ಕಿವೀಸ್‌, ಫೀಲ್ಡಿಂಗ್‌ ಮಾಡುವ ಅವಕಾಶವನ್ನು ಭಾರತಕ್ಕೆ ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ರಚಿನ್‌ ರವೀಂದ್ರ (Rachin Ravindra) ಹಾಗೂ ವಿಲ್‌ ಯಂಗ್‌ ಜೋಡಿ ಸ್ಪೋಟಕ ಇನ್ನಿಂಗ್ಸ್‌ ಕಟ್ಟುವ ಪ್ರಯತ್ನಕ್ಕೆ ಮುಂದಾದರು. ಅಂತೆಯೇ ಮೊದಲ ವಿಕೆಟ್‌ಗೆ 47 ಎಸೆತಗಳಲ್ಲಿ 57 ರನ್‌ಗಳ ಜೊತೆಯಾಟ ನೀಡಿತ್ತು. ಆದ್ರೆ ವಿಲ್‌ ಯಂಗ್‌ ವಿಕೆಟ್‌ ಬೀಳುತ್ತಿದ್ದಂತೆ ಅಗ್ರ ಕ್ರಮಾಂಕದ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದರು. ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದ್ರು.

    ಜೀವ ತುಂಬಿದ ಮಿಚೆಲ್‌, ಫಿಲಿಪ್ಸ್‌ ಜೊತೆಯಾಟ:
    ಇನ್ನೂ 23.2 ಓವರ್‌ಗಳಲ್ಲಿ 108 ರನ್‌ಗಳಿಗೆ ಪ್ರಮುಖ ನಾಲ್ಕು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಕಿವೀಸ್‌ಗೆ ಗ್ಲೇನ್‌ ಫಿಲಿಪ್ಸ್‌ ಹಾಗೂ ಡೇರಿಲ್‌ ಮಿಚೆಲ್‌ ಅವರ ಜೊತೆಯಾಟ ಜೀವ ತುಂಬಿತು. ಟೀಂ ಇಂಡಿಯಾ ಸ್ಪಿನ್ನರ್‌ಗಳ ಎದುರು ರನ್‌ ಕದಿಯಲು ತಿಣುಕಾಡಿದ ಈ ಜೋಡಿ 87 ಎಸೆತಗಳಲ್ಲಿ 57 ರನ್‌ ಗಳಿಸಿತು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಟಾಮ್‌ ಲಾಥಮ್‌, ಮಿಚೆಲ್‌ ಜೋಡಿಯಿಂದ 33 ರನ್‌ ಹಾಗೂ ಮೈಕಲ್‌ ಬ್ರೇಸ್‌ವೆಲ್‌ ಜೊಡಿಯಿಂದ 46 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟ ಕಿವೀಸ್‌ ತಂಡ 200 ರನ್‌ಗಳ ಗಡಿದಾಟಲು ನೆರವಾಯಿತು.

    ಕಿವೀಸ್‌ ಪರ ಡೇರಿಲ್‌ ಮಿಚೆಲ್‌ 63 ರನ್‌ (101 ಎಸೆತ, 3 ಬೌಂಡರಿ), ಮೈಕಲ್‌ ಬ್ರೇಸ್‌ವೆಲ್‌ ಅಜೇಯ 53 ರನ್‌ (40 ಎಸೆತ, 2 ಸಿಕ್ಸರ್‌, 3 ಬೌಂಡರಿ), ರಚಿನ್‌ ರವೀಂದ್ರ 37 ರನ್‌, ಗ್ಲೆನ್‌ ಫಿಲಿಪ್ಸ್‌ 34 ರನ್‌, ವಿಲ್‌ ಯಂಗ್‌ 15 ರನ್‌, ಕೇನ್‌ ವಿಲಿಯಮ್ಸನ್‌ 11 ರನ್‌, ಟಾಮ್‌ ಲಾಥಮ್‌ 14 ರನ್‌, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ ವರುಣ್‌ ಚಕ್ರವರ್ತಿ, ಕುಲ್‌ದೀಪ್‌ ಯಾದವ್‌ ತಲಾ 2 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ಶಮಿ, ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ಇಂದು ಭಾರತ Vs ಕಿವೀಸ್‌ ಹೈವೋಲ್ಟೇಜ್‌ ಕದನ – ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಟೀಂ ಇಂಡಿಯಾ?

    ದುಬೈ: ತಮ್ಮ ಪಾಲಿನ ಎರಡೂ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ಬಲಿಷ್ಠ ನ್ಯೂಜಿಲೆಂಡ್‌ (IND vs NZ) ತಂಡಗಳು ಪ್ರಸಕ್ತ ಚಾಂಪಿಯನ್ಸ್‌ ಟ್ರೋಫಿಯಲ್ಲಿ (icc champions trophy) ಸೂಪರ್‌ ಸಂಡೇ ಲೀಗ್‌ ಸುತ್ತಿನ ಕೊನೆಯ ಪಂದ್ಯಗಳನ್ನಾಡಲಿವೆ.

    ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಇವೆರಡೂ ತಂಡಗಳು ಈಗಾಗಲೇ ಸೆಮೀಸ್‌ ಪ್ರವೇಶಿಸಿರುವುದರಿಂದ ಈ ಪಂದ್ಯದ ಫಲಿತಾಂಶ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೂ ಅಜೇಯವಾಗಿ ಸೆಮೀಸ್‌ ಪ್ರವೇಶಿಸುವ ಅವಕಾಶವನ್ನು ಪಂದ್ಯ ದಯಪಾಲಿಸಿದೆ. ಉಭಯ ತಂಡಗಳು ಈವರೆಗೆ 118 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 60 ಪಂದ್ಯಗಳಲ್ಲಿ ಭಾರತ, 50 ಪಂದ್ಯಗಳಲ್ಲಿ ನ್ಯೂಜಿಲೆಂಡ್‌ (New Zealand) ಗೆಲುವು ಸಾಧಿಸಿದೆ. 7 ಪಂದ್ಯಗಳು ಫಲಿತಾಂಶವಿಲ್ಲದೇ ರದ್ದಾದ್ರೆ, 1 ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ.

    ತಲಾ 4 ಅಂಕ ಗಳಿಸಿದ್ದರೂ ರನ್‌ರೇಟ್‌ ಆಧಾರದಲ್ಲಿ ಕಿವೀಸ್‌ ಎ-ಗುಂಪಿನ ಅಗ್ರಸ್ಥಾನದಲ್ಲಿದ್ದರೆ, ಭಾರತ 2ನೇ ಸ್ಥಾನದಲ್ಲಿದೆ. ಭಾನುವಾರದ ಪಂದ್ಯದಲ್ಲಿ ಭಾರತ (Team India) ಗೆದ್ದರೇ ತನ್ನ ಗುಂಪಿನಿಂದ ಅಗ್ರಸ್ಥಾನಿಯಾಗಿ ಹೊಮ್ಮಲಿದೆ. ವಿಜೇತ ತಂಡ ಸೆಮೀಸ್‌ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

    ಸ್ಪಿನ್ನರ್‌ಗಳ ಚಕ್ರವ್ಯೂಹ ಭೇದಿಸುವುದೇ ಭಾರತ?
    ಹಿಂದಿನ ಪಂದ್ಯಗಳ ಗೆಲುವಿನ ಹೊರತಾಗಿಯೂ ಟೀಂ ಇಂಡಿಯಾ ಬ್ಯಾಟರ್‌ಗಳು ಸ್ಪಿನ್‌ ಬೌಲಿಂಗ್‌ನಲ್ಲಿ ರನ್‌ ಗಳಿಸಲು ತಿಣುಕಾಡಿರುವುದು ತಂಡಕ್ಕೆ ಹಿನ್ನಡೆಯಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್‌ಗಳಾದ ಮೆಹಿದಿ ಹಸನ್‌ ಮಿರಾಜ್‌ (0/37) ಮತ್ತು ರಿಷಾದ್‌ ಹೊಸೈನ್‌ (2/38) ಅವರ ಬೌಲಿಂಗ್‌ ದಾಳಿ ಎದುರಿಸುವ ಸಂದರ್ಭ ಭಾರತೀಯ ಬ್ಯಾಟರ್‌ಗಳು ಎಚ್ಚರಿಕೆಯ ಆಟ ಪ್ರದರ್ಶಿಸಿದ್ದರು.

    ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ʻಮಿಸ್ಟರಿ ಸ್ಪಿನ್ನರ್‌ʼ ಎಂದೇ ಬಿರುದಾಂಕಿತ ಲೆಗ್‌ ಸ್ಪಿನ್ನರ್‌ ಅಬ್ರಾರ್‌ ಅಹಮದ್‌ (1/28) ಅವರ ಎಸೆತಗಳನ್ನು ಎದುರಿಸುವಾಗಲೂ ಅದೇ ಎಚ್ಚರಿಕೆ ಮತ್ತು ಸುರಕ್ಷಿತ ಆಟಕ್ಕೆ ರೋಹಿತ್‌ ಪಡೆ ಮುಂದಾಗಿತ್ತು. ಪ್ರತೀ ಎಸೆತಗಳನ್ನು ಕೊಹ್ಲಿ ಎಚ್ಚರಿಕೆಯಿಂದ ಎದುರಿಸುತ್ತಿದ್ದರು. ಆದ್ರೆ ಮಿಚೆಲ್‌ ಸ್ಯಾಂಟ್ನರ್‌ ನೇತೃತ್ವದಲ್ಲಿ ಬಲಿಷ್ಠ ಸ್ಪಿನ್‌ ಪಡೆಯನ್ನು ಹೊಂದಿರುವ ಕಿವೀಸ್‌ನಿಂದ ಭಾರತ ಕಠಿಣ ಸವಾಲನ್ನು ನಿರೀಕ್ಷಿಸಬಹುದಾಗಿದೆ.

    ಪಾಕ್‌ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಕಿವೀಸ್‌ನ ಮಿಚೆಲ್‌ ಸ್ಯಾಂಟ್ನರ್‌ (66ಕ್ಕೆ 3), ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಮೈಕೆಲ್‌ ಬ್ರೇಸ್‌ವೆಲ್‌ (28ಕ್ಕೆ 4) ಎದುರಾಳಿ ತಂಡದ ಬ್ಯಾಟರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡಿದ್ದರು. ಹೀಗಾಗಿ ಬ್ಯಾಟಿಂಗ್‌ ಲಯಕ್ಕೆ ಮರಳಿರುವ ಕಿಂಗ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಕೆ.ಎಲ್‌ ರಾಹುಲ್‌, ಶುಭಮನ್‌ ಗಿಲ್‌ ಅವರಿಂದ ಉತ್ತಮ ಪ್ರದರ್ಶನವನ್ನು ತಂಡ ನಿರೀಕ್ಷಿಸಿದೆ.

    ನ್ಯೂಜಿಲೆಂಡ್‌ ಬ್ಯಾಟರ್‌ಗಳ ವಿರುದ್ಧ ರಣತಂತ್ರ
    ಟೀಂ ಇಂಡಿಯಾ ಈವರೆಗೆ ಕಣಕ್ಕಿಳಿಸಿರುವ ಮೂವರು ಸ್ಪಿನ್ನರ್‌ಗಳಾದ ರವೀಂದ್ರ ಜಡೇಜ, ಅಕ್ಷರ್‌ ಪಟೇಲ್‌ ಮತ್ತು ಕುಲ್ದೀಪ್‌ ಯಾದವ್‌ ಹೆಚ್ಚು ವಿಕೆಟ್‌ಗಳನ್ನು ಪಡೆಯದೇ ಇದ್ದರೂ ಎದುರಾಳಿ ಬ್ಯಾಟರ್‌ಗಳನ್ನು ನಿಯಂತ್ರಿಸಿದ್ದಾರೆ. ಅದರಲ್ಲೂ ಪಾಕ್‌ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್‌ ರಿಜ್ವಾನ್‌ ಮತ್ತು ಸೌದ್‌ ಶಕೀಲ್‌ ನೂರಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನೀಡಿದರೂ 11-34 ಓವರ್‌ಗಳ ಅವಧಿಯಲ್ಲಿ ಪಾಕ್‌ ರನ್‌ ಗಳಿಕೆ ಹೆಚ್ಚಿಸಲು ಹರಸಾಹಸ ಪಟ್ಟಿತು. ಅದಕ್ಕೆ ಕಾರಣವಾಗಿದ್ದು ಭಾರತೀಯ ಸ್ಪಿನ್‌ ಬೌಲಿಂಗ್‌ ಪಡೆ.

    ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌, ವಿಲ್‌ ಯಂಗ್‌, ಟಾಮ್‌ ಲಾಥಮ್‌, ಡಿವೋನ್‌ ಕಾನ್ವೆ ಮತ್ತು ರಚಿನ್‌ ರವೀಂದ್ರ ಅವರು ಸ್ಪಿನ್‌ ದಾಳಿಯನ್ನು ಸಮರ್ಥವಾಗಿ ಎದುರಿಸಬಲ್ಲವರಾಗಿದ್ದಾರೆ. ಸದ್ಯ ಇಂದಿನ ಪಂದ್ಯದ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.