Tag: ಮಿತ್ರ

  • ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

    ಪಿ.ಸಿ ಶೇಖರ್ ನಿರ್ದೇಶನ ಮಹಾನ್ ಚಿತ್ರದಲ್ಲಿ ಮಿತ್ರ ವಿಶೇಷ ಪಾತ್ರ

    ನ್ನಡದಲ್ಲಿ (Kannada) ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ (PC Shekar) ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijay Raghavendra) ನಾಯಕರಾಗಿ ನಟಿಸುತ್ತಿರುವ ಮಹಾನ್ (Mahan) ಚಿತ್ರದ ಪ್ರಮುಖಪಾತ್ರದಲ್ಲಿ ಹೆಸರಾಂತ ನಟ ಮಿತ್ರ (Mithra) ಅಭಿನಯಿಸುತ್ತಿದ್ದಾರೆ. “ಮಹಾನ್” ಚಿತ್ರದ ಪಾತ್ರದ ಕುರಿತು ಮಿತ್ರ ತಮ್ಮ ಮಾತುಗಳ ಮೂಲಕ ತಿಳಿಸಿದ್ದಾರೆ.  ಇದನ್ನೂ ಓದಿ: ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

    ನಾನು “ರಾಗ” ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. “ರಾಗ” ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ “ಮಹಾನ್” ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. ನಿರ್ಮಾಪಕ ಪ್ರಕಾಶ್ ಬುದ್ದೂರು ಅವರು ಇಂತಹ ಉತ್ತಮ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಹಾಗೂ ನಟ ವಿಜಯ ರಾಘವೇಂದ್ರ ಬಹಳ ಅದ್ಭುತವಾದ ನಟ. ಅವರೊಂದಿಗೆ ನಟಿಸುತ್ತಿರುವಿದು ಬಹಳ ಖುಷಿಯಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಹೊಂದಿರುವ ಚಿತ್ರವನ್ನು ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರ ಕೂಡ ನಾಯಕನ ಪಾತ್ರದ ಜೊತೆಗೆ ಸಾಗುತ್ತದೆ. ನಮ್ಮಿಬ್ಬರ ಕಾಂಬಿನೇಶನ್ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ ನಟ ಮಿತ್ರ. ಇದನ್ನೂ ಓದಿ: `ರಾಮ್‌ಚರಣ್‌ಗೆ ಚಿತ್ರ ಮಾಡಿ ಕೆಟ್ಟೆ’ ಎಂದ ಪ್ರೊಡ್ಯೂಸರ್

    ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ “ರಾಗ” ಚಿತ್ರ ಇಂದು ಕೂಡ ಜನಪ್ರಿಯ. ಆನಂತರ ನನ್ನ ನಿರ್ದೇಶನದ ಚಿತ್ರಗಳಲ್ಲಿ ಮಿತ್ರ ಅವರು ನಟಿಸಿಲ್ಲ. ಏಕೆಂದರೆ, ಮಿತ್ರ ಅವರು ಸಣ್ಣ ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವುದು ನನಗೆ ಇಷ್ಟವಿಲ್ಲ. “ರಾಗ” ಚಿತ್ರದ ಅಭಿನಯಕ್ಕಾಗಿ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ಆ ಚಿತ್ರದಲ್ಲಿ ಅಂತಹ ಅದ್ಭುತ ನಟನೆ ನೀಡಿದ್ದ ಮಿತ್ರ ಅವರಿಗೆ “ಮಹಾನ್” ಚಿತ್ರದಲ್ಲೂ ಎಲ್ಲರ ನೆನಪಿನಲ್ಲುಳಿಯುವಂತ ಪಾತ್ರ ಇರುತ್ತದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೆ ಸೂಕ್ತ ಎನಿಸಿತು. ಅವರಿಗೆ ಸರಿಯಾದ ಪಾತ್ರವಿದು. ಇಡೀ ಚಿತ್ರ ಪೂರ್ತಿ ನಾಯಕನ ಪಾತ್ರದ ಜೊತೆಗೆ ಸಾಗುವ ಪಾತ್ರ ಅವರದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಸದಾ ಇರುತ್ತಾನೆ. ಆ ಸ್ಪೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ. “ಮಹಾನ್” ಚಿತ್ರದ ಮಿತ್ರ ಅವರ ಪಾತ್ರ ಕೂಡ ಎಲ್ಲರ ಮನಸ್ಸಿಗೂ ಇಷ್ಟವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.ದನ್ನೂ ಓದಿಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

    ತಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸುತ್ತಿರುವುದಕ್ಕೆ ನಿರ್ಮಾಪಕ ಪ್ರಕಾಶ್ ಬುದ್ದೂರು ಸಂತಸ ವ್ಯಕ್ತಪಡಿಸಿದ್ದಾರೆ.

  • ಕಾಮಿಡಿ ಸ್ಟಾರ್ ಈಗ ಸ್ಯಾಂಡಲ್‌ವುಡ್‌ನ ಬೇಡಿಕೆಯ ಖಡಕ್ ವಿಲನ್

    ಕಾಮಿಡಿ ಸ್ಟಾರ್ ಈಗ ಸ್ಯಾಂಡಲ್‌ವುಡ್‌ನ ಬೇಡಿಕೆಯ ಖಡಕ್ ವಿಲನ್

    ಮಿತ್ರ (Mithra) ಅಂದರೆ ಕನ್ನಡ ಸಿನಿಮಾರಂಗಕ್ಕೆ ಚಿರಪರಿಚಿತರು ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ಹಿರಿತೆರೆ ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿದ್ದಾರೆ. ಕಾಮಿಡಿ, ಎಮೋಷನ್ ಹೀಗೆ ಎಲ್ಲಾ ರೀತಿಯ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಅಭಿನಯಿಸುತ್ತಾ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ:ಮಲಯಾಳಂ ‘ಪಡಕ್ಕಳಂ’ ಚಿತ್ರಕ್ಕೆ ಚಾಲನೆ ನೀಡಿದ ಕೆ.ಆರ್.ಜಿ.ಸ್ಟುಡಿಯೋಸ್

    ಆದರೆ ಈಗ ನಟ ಮಿತ್ರ ಅವರ ಖದರ್ ಬದಲಾಗಿದೆ. ಲುಕ್ ಬೇರೆಯದ್ದೇ ರೀತಿ ಇದೆ. ಯೆಸ್, ಮಿತ್ರ‌ ಅವರು ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ (Karavali Film) ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡರು. ಒಂದು ಸಿನಿಮಾಗಾಗಿ ಮಾಡಿಕೊಂಡ ಲುಕ್ ಈಗ ಮಿತ್ರ ಅವರ ಕೆರಿಯರ್‌ನಲ್ಲಿ ಟರ್ನಿಂಗ್ ಪಾಯಿಂಟ್ ಕೊಡ್ತಿದೆ.

    ಇಷ್ಟು ದಿನಗಳ ಕಾಲ ಕಾಮಿಡಿ ಸ್ಟಾರ್ ಆಗಿ ಮಿಂಚ್ತಿದ್ದ ಮಿತ್ರ ಇನ್ನು ಮುಂದೆ ಸ್ಯಾಂಡಲ್‌ವುಡ್‌ನ ಖಡಕ್ ವಿಲನ್ ಆಗಲಿದ್ದಾರೆ. ಗಡ್ಡ ಬಿಟ್ಟು ಲುಕ್ ಬದಲಾಯಿಸಿಕೊಂಡ ಮೇಲೆ ಬೇರೆ ರೀತಿ ಪಾತ್ರಗಳು ಹುಡುಕಿ ಬರುತ್ತಿವೆಯಂತೆ. ಸದ್ಯ ಅದಕ್ಕಾಗಿ ಒಂದು ಸ್ಟೈಲೀಶ್ ವಿಲನ್ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ ಮಿತ್ರ.

    ಸದ್ಯ ಮಿತ್ರ ಅವರು ಮಾಡಿಸಿರೋ ಫೋಟೋಶೂಟ್ ಫೋಟೋಗಳನ್ನ ನೋಡ್ತಿದ್ರೆ ವಾವ್ಹ್ ಮಿತ್ರ ಅವರು ಹೀಗೂ ಕಾಣ್ತಾರಾ ಅಂತ ಅನ್ನಿಸೋದು ಗ್ಯಾರೆಂಟಿ. ವಿಲನ್ ಲುಕ್ ನಲ್ಲಿ ಸಾಕಷ್ಟು ವಿಭಿನ್ನ ಶೇಡ್ ನಲ್ಲಿ ಮಿತ್ರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಈ ಫೋಟೋಶೂಟ್ ಮಾಡಿರೋದು ‘ಕರಾವಳಿ’ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದ್.

    ಮಿತ್ರ ಅವರ ಈ ಲುಕ್ ಬರೀ ಲುಕ್ ಆಗಿಯೇ ಉಳಿದಿಲ್ಲ. ‘ಕರಾವಳಿ’ ಸಿನಿಮಾ ಬಿಟ್ಟು ಕನ್ನಡದ ದೊಡ್ಡ ಎರಡು ಸ್ಟಾರ್ ಸಿನಿಮಾಗಳಲ್ಲಿ ಮಿತ್ರ ಖಡಕ್ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ. ಅದರ ಜೊತೆಗೆ ತಮಿಳಿನ ಒಂದು ಸಿನಿಮಾಗೆ ವಿಲನ್ ಆಗಿ ಆಯ್ಕೆ ಆಗಿದ್ದಾರೆ. ಕಲಾವಿದ ಆದವರು ಎಂದಿಗೂ ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ವಯಸ್ಸಿಗೆ ತಕ್ಕಂತೆ ತಮ್ಮನ್ನ ನಾವು ಬದಲಾಯಿಸಿಕೊಳ್ಳಬೇಕು ಅನ್ನೋದನ್ನ ಮಿತ್ರ ಅವರು ಫಾಲೋ ಮಾಡಿದಂತಿದೆ. ಸದ್ಯ ಸಾಲ್ಟ್ ಅಂಡ್ ಪೆಪ್ಪರ್ ಲುಕ್ ಹಾಗೂ ಮಿಲನ್ ಖದರ್‌ನಲ್ಲಿ ಮಿತ್ರ ಸೂಪರ್ ಆಗಿ ಮಿಂಚ್ತಿದ್ದಾರೆ.

  • ‘ಕರಾವಳಿ’ಯಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಕಾಣಿಸಿಕೊಂಡ ನಟ ಮಿತ್ರ

    ‘ಕರಾವಳಿ’ಯಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಕಾಣಿಸಿಕೊಂಡ ನಟ ಮಿತ್ರ

    ಹಾಸ್ಯನಟ ಮಿತ್ರ (Actor Mithra) ಇದೀಗ ವಿಭಿನ್ನ ಪಾತ್ರಗಳಲ್ಲಿ ನಟಿಸುವ ಮೂಲಕ ಮೋಡಿ ಮಾಡುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು (ಮೇ 12) ಬಹುನಿರೀಕ್ಷಿತ ‘ಕರಾವಳಿ’ (Karavali Film) ಚಿತ್ರದಲ್ಲಿ ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಮಿತ್ರ ನಟಿಸಿರುವ ಪಾತ್ರದ ಲುಕ್ ಕೂಡ ರಿವೀಲ್ ಆಗಿದೆ.

     

    View this post on Instagram

     

    A post shared by Shinu Mithra (@actor_mithra_official)


    ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಒಂದು ವಿಶೇಷ ಗೆಟಪ್‌ನಲ್ಲಿ ಮಿತ್ರ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ‘ಮಾಬ್ಲಾ’ ಎಂಬ ಪಾತ್ರಕ್ಕಾಗಿ ಬಿಳಿ ಗಡ್ಡ ಮತ್ತು ಮೀಸೆ ಬಿಟ್ಟಿದ್ದಾರೆ. ಕೊಂಚ ತೂಕ ಕೂಡ ಇಳಿಸಿಕೊಂಡು ಹೊಸ ಶೇಡ್‌ನಲ್ಲಿ ನಟ ಮಿತ್ರ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಎರಡು ಎಮ್ಮೆಗಳನ್ನು ಹಿಡಿದುಕೊಂಡು ಖಡಕ್ ಆಗಿ ಲುಕ್ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಗುರುದತ್ ಗಾಣಿಗ ಆ್ಯಕ್ಷನ್ ಕಟ್ ಹೇಳಿದ್ದಾರೆ.

     

    View this post on Instagram

     

    A post shared by Shinu Mithra (@actor_mithra_official)

    ಅಂದಹಾಗೆ, ಕೋಮಲ್ ನಟನೆಯ ‘ಯಲಾಕುನ್ನಿ’ ಚಿತ್ರದಲ್ಲಿ ಸುಗಂಧರಾಜ ಎನ್ನುವ ಕಾಮಿಡಿ ಕಮ್ ನೆಗೆಟಿವ್ ರೋಲ್‌ನಲ್ಲಿ ಮಿತ್ರ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಅಮ್ಮನಿಗಾಗಿ ಹೆಸರು ಬದಲಿಸಿಕೊಂಡ ‘ಅಗ್ನಿಸಾಕ್ಷಿ’ ಖ್ಯಾತಿಯ ವಿಜಯ್ ಸೂರ್ಯ

    ಈ ಹಿಂದೆ ಪಾಪ ಪಾಂಡು, ಸಿಲ್ಲಿ ಲಲ್ಲಿ ಸೀರಿಯಲ್‌ನಲ್ಲಿ ಮಿತ್ರ ನಟಿಸಿದ್ದರು. ಬಳಿಕ ಶ್ರೀರಾಮ್, ಪಂಚರಂಗಿ, ಹಲವು ಸಿನಿಮಾದಲ್ಲಿ ನಟಿಸಿದ್ದರು. 2018ರಲ್ಲಿ ತೆರೆಕಂಡ ‘ರಾಗಾ’ ಚಿತ್ರದಲ್ಲಿ ಹೀರೋ ಆಗಿ, ನಿರ್ಮಾಪಕನಾಗಿ ಗುರುತಿಸಿಕೊಂಡರು. ಮಿತ್ರಗೆ ಮಲಯಾಳಂ ನಟಿ ಭಾಮಾ ನಾಯಕಿಯಾಗಿದ್ದರು.

  • ನನ್ನ ಸಿನಿ ಜರ್ನಿಯಲ್ಲೇ ಇಂಥದ್ದೊಂದು ಪಾತ್ರ ಮಾಡಿಲ್ಲ: ನಟ ಮಿತ್ರ

    ನನ್ನ ಸಿನಿ ಜರ್ನಿಯಲ್ಲೇ ಇಂಥದ್ದೊಂದು ಪಾತ್ರ ಮಾಡಿಲ್ಲ: ನಟ ಮಿತ್ರ

    ‘ಕರಾವಳಿ’ (Karavali) ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಪ್ರಜ್ವಲ್ ದೇವರಾಜ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾಗೆ ಗುರುದತ್ ಗಾಣಿಗ (Gurudutt Ganiga) ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇತ್ತೀಚಿಗಷ್ಟೇ ನಾಯಕಿ ಸಂಪದ ಅವರನ್ನು ಪರಿಚಯಿಸಿದ್ದ ಸಿನಿಮಾ ತಂಡ ಇದೀಗ ಮತ್ತೊಂದು ಮಹತ್ವದ ಪಾತ್ರದ ಪರಿಚಯ ಮಾಡಿಕೊಡುವ ಮೂಲಕ ಸಿನಿಮ ಬಗ್ಗೆ ಮತ್ತಷ್ಟು ಕುತೂಹಲವನ್ನ ಹೆಚ್ಚಿಸಿದೆ. ಕರಾವಳಿ ಸಿನಿಮಾಗೆ ಖ್ಯಾತ ನಟ ಮಿತ್ರ (Mitra) ಎಂಟ್ರಿ ಕೊಟ್ಟಿದ್ದಾರೆ.

    ಇಂದು ಮಹಾಶಿವರಾತ್ರಿಯ ಪ್ರಯುಕ್ತ ಫಸ್ಟ್ ಲುಕ್  ರಿವೀಲ್ ಮಾಡುವ ಮೂಲಕ ನಟ ಮಿತ್ರ ಅವರನ್ನು ಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರಿದೆ ಕರಾವಳಿ ಸಿನಿಮಾತಂಡ. ಸಿನಿಮಾದಲ್ಲಿ ನಾಯಕ ನಾಯಕಿಯ ಹಾಗೆ ಪೋಷಕ ಪಾತ್ರಗಳು ಸಹ ಅಷ್ಟೇ ಮುಖ್ಯ ಪಾತ್ರ ನಿರ್ವಹಿಸುತ್ತದೆ. ಕರಾವಳಿಯಲ್ಲಿ ನಟ ಮಿತ್ರ ಅವರು ನಿರ್ವಹಿಸುತ್ತಿರುವ ಪಾತ್ರ ಅಷ್ಟೇ ಮಹತ್ವದಾಗಿದೆ‌. ಸದ್ಯ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ನಟ ಮಿತ್ರ ಎರಡು ಕೋಣಗಳನ್ನು ಹಿಡಿದು ನಿಂತಿದ್ದಾರೆ. ಅವರ ಹಿಂದೆ ಒಂದು ಲಾರಿ ನಿಂತಿದ್ದು ಅದರ ಮೇಲೆ ಮಾರಣಕಟ್ಟೆ ಎಂದು ಬರೆಯಲಾಗಿದೆ. ಈ ಲುಕ್ ನೋಡ್ತಿದ್ರೆ ಮಿತ್ರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ದುಪ್ಪಟ್ಟಾಗಿಸಿದೆ. ಮಹಾಬಲ ಪಾತ್ರದಲ್ಲಿ ಮಿತ್ರ ಮಿಂಚಲಿದ್ದಾರೆ.

    ಇನ್ನೂ ಈ ಬಗ್ಗೆ ಮಾತನಾಡಿರುವ ಮಿತ್ರ, ‘ನನ್ನ ಸಿನಿ ಜೀವನದಲ್ಲಿಯೇ ನಾನು ಮಾಡಿರದ ವಿಭಿನ್ನವಾದ ಪಾತ್ರದಲ್ಲಿ  ಕಾಣಿಸಿಕೊಳ್ಳುತ್ತಿದ್ದೇನೆ. ನಿರ್ದೇಶಕ ಗುರುದತ್ ಗಾಣಿಗ ಅವರು ನನಗೆ ಅದ್ಭುತವಾದ ಪಾತ್ರವನ್ನು ನೀಡಿದ್ದಾರೆ. ಕರಾವಳಿ ಸಿನಿಮಾದಲ್ಲಿ ನಟಿಸುತ್ತಿರುವ ಖುಷಿ ನನಗಿದೆ’ ಎನ್ನುತ್ತಾರೆ.

    ಇತ್ತೀಚಿಗಷ್ಟೇ ಮುಹೂರ್ತ ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಟಿರುವ ಸಿನಿಮಾ ತಂಡ ಕರಾವಳಿಯ ಸುತ್ತಮುತ್ತ ಶೂಟಿಂಗ್ ನಲ್ಲಿ ಬಿಸಿಯಾಗಿದೆ. ಚಿತ್ರಕ್ಕೆ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸಂ ಹಾಗೂ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

    ಕರಾವಳಿ  ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿ ಬರಲಿದೆ. ಕಂಬಳ ಪ್ರಪಂಚದಲ್ಲಿ ನಡೆಯುತ್ತಿರುವ ಕಥೆ. ಈ ಸಿನಿಮಾ ಸಂಪೂರ್ಣವಾಗಿ ಕಂಬಳದ ಬಗ್ಗೆ ಇರಲಿದೆ.  ಇನ್ನು ಕರಾವಳಿ ಸಿನಿಮಾಗೆ ಅಭಿಮನ್ಯು ಸದಾನಂದ್ ಕ್ಯಾರೆಮಾ ವರ್ಕ್ ಇದೆ,  ಸಚಿನ್ ಬಸ್ರೂರು ಸಂಗೀತ ಚಿತ್ರಕ್ಕಿದೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ  ಟಿವಿ ಶ್ರೀಧರ್, ಜಿ ಜಿ, ನಿರಂಜನ್ ಸೇರಿದಂತೆ ಹಲವು ಪ್ರಖ್ಯಾತ ಕಲಾವಿದರು ನಟಿಸುತ್ತಿದ್ದಾರೆ.

  • ‘ಕರಾವಳಿ’ಯಲ್ಲಿ ಮಹಾಬಲನಾದ ಮಿತ್ರ

    ‘ಕರಾವಳಿ’ಯಲ್ಲಿ ಮಹಾಬಲನಾದ ಮಿತ್ರ

    ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ (Karavali)ಸಿನಿಮಾದ ಮತ್ತೊಂದು ಮೆಗಾ ಪಾತ್ರ ರಿವೀಲ್ ಆಗಿದೆ. ಶಿವರಾತ್ರಿ ದಿನದಂದು ಅವನು ಎಂಟ್ರಿ ಕೊಡುತ್ತಿದ್ದಾನೆ ಎಂದು ಹೇಳುವ ಮೂಲಕ ಚಿತ್ರತಂಡ ಕುತೂಹಲ ಸೃಷ್ಟಿ ಮಾಡಿತ್ತು. ಇದೀಗ ಮಹಾಬಲ (Mahabala) ಪಾತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದೆ. ಈ ಪಾತ್ರದಲ್ಲಿ ಹೆಸರಾಂತ ಹಾಸ್ಯ ನಟ ಮಿತ್ರ (Mitra) ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಇಂಥದ್ದೊಂದು  ಪಾತ್ರವನ್ನು ಅವರು ನಿರ್ವಹಿಸುತ್ತಿದ್ದಾರೆ.

    ಗುರುದತ್ ಗಾಣಿಗ (Gurudutt Ganiga) ನಿರ್ದೇಶದ ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಕರಾವಳಿ’ ಸಿನಿಮಾ ನಾನಾ ಕಾರಣಗಳಿಂದಾಗಿ ನಿರೀಕ್ಷೆ ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊನ್ನೆಯಷ್ಟೇ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿತ್ತು. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ? ಕನ್ನಡದವರಾ ಅಥವಾ ಪರಭಾಷೆಯ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಅದಕ್ಕೂ ತೆರೆ ಎಳೆದಿದ್ದಾರೆ.

    ನಟಿ ಸಂಪದಾ (Sampada) ಕರಾವಳಿ ಸಿನಿಮಾಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು  ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ಸಂಪದಾ ನಟಿಸಿದ್ದರು. ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ  ಸಿನಿಮಾ. ಸಂಪೂರ್ಣ ಬ್ಯಾಕ್ ಡ್ರಾಪ್ ಕರಾವಳಿ ಭಾಗದ್ದೆ ಆಗಿರಲಿದೆ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಮಿಂಚಲಿದ್ದಾರೆ.

     

    ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ  ಕರಾವಳಿ ಸಂಪೂರ್ಣ ಚಿತ್ರೀಕಣ ಮಂಗಳೂರು ಸುತ್ತಮುತ್ತ ನಡೆಯಲಿದೆ.

  • ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

    ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

    ಸಿನಿಮಾ ಅನ್ನೋದು ಅದ್ಭುತ ಪ್ರತಿಕ್ರಿಯೆ. ಸಿನಿಮಾ ಪ್ರೀತಿ ಮಾಡೋರಿಗೆ ಸದಾ ಅದರದ್ದೇ ಧ್ಯಾನ. ಕನ್ನಡ ಚಿತ್ರರಂಗ ಈಗ ಭಾರತೀಯ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಂಡಿದೆ. ಇಡೀ ಭಾರತೀಯ ಸಿನಿಮಾರಂಗವೇ ಹಾಗೊಮ್ಮೆ ಇತ್ತ ಕಣ್ಣಾಯಿಸುವಂತೆ ಮಾಡಿದ್ದು ಸುಳ್ಳಲ್ಲ. ಇಲ್ಲಿ ಸಿನಿಮಾ ಮಾಡೋದು ಎಷ್ಟು ಕಷ್ಟ-ಇಷ್ಟ ಅನ್ನೋದು ಅಲ್ಲಿ ಅನುಭವಿಸಿದವರಿಗಷ್ಟೇ ಗೊತ್ತು. ಸಿನಿಮಾ ಮಾಡೋದು ದೊಡ್ಡದ್ದಲ್ಲ. ಅದನ್ನು ರಿಲೀಸ್ ಮಾಡಿ, ವ್ಯಾಪಾರ ವಹಿವಾಟು ನಡೆಸೋದು ಮುಖ್ಯ. ಅದೆಷ್ಟೋ  ಸಿನಿಮಾಗಳು ತಯಾರಾಗಿ ರಿಲೀಸ್ ಅಗದೆ ಇಂದಿಗೂ ಆ ಪ್ರಯತ್ನದಲ್ಲಿವೆ. ಹಾಕಿದ ಹಣ ವಾಪಾಸ್ ಪಡೆಯೋದು ಕಷ್ಟ ಅನಿಸಿರುವ ಈ ಸಂದರ್ಭದಲ್ಲೊಂದು ಕನ್ನಡ ಸಿನಿಮಾ ನಿರ್ಮಾಪಕ, ನಿರ್ದೇಶಕರಿಗೆ ಖುಷಿಯ ಸುದ್ದಿಯೊಂದು ಹೊರಬಿದ್ದಿದೆ.

    ಹೌದು, ಕನ್ನಡದ ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವುಗಳಿಗೆ ಪ್ರಚಾರವನ್ನೂ ಮಾಡಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಮೂಲಕ ಆ ನಿರ್ಮಾಪಕರಿಗೆ ಸಾಥ್ ನೀಡುವ ಸಂಸ್ಥೆಯೊಂದು ಹುಟ್ಟುಕೊಂಡಿದೆ. ಅಂದಹಾಗೆ, ಅದು ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್’ ಸಂಸ್ಥೆ. ಇದು ಕನ್ನಡ ಸಿನಿ ಜಗತ್ತಿನಲ್ಲಿ ಆರಂಭಗೊಂಡ ಹೊಸ ಸಂಸ್ಥೆ. ಇದು ಕನ್ನಡದ ಹಾಸ್ಯ ನಟ ಮಿತ್ರ (Mitra) ಅವರ ಸಾರಥ್ಯದಲ್ಲಿ ಉದ್ಯಮಿ ಮನೀಶ್ ಮೆಹ್ತಾ (Manish Mehta) ಮತ್ತು ಗೆಳೆಯರು ಸೇರಿ ಮಾಡಿರುವ ಸಂಸ್ಥೆ. ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ‘ ಎಂಬ ಬ್ಯಾನರ್ ಮೂಲಕ ಸದಭಿರುಚಿಯ ಸಿನಿಮಾಗಳ ರೈಟ್ಸ್ , ಅವುಗಳ ವಿತರಣೆ, ರಿಲೀಸ್ ಹೊಣೆ ಹಾಗು ಸಿನಿಮಾ ನಿರ್ಮಾಣ ಆಗಲಿದೆ. ಪ್ರಮುಖವಾಗಿ ಈ ಸಂಸ್ಥೆಯ ಉದ್ದೇಶ, ಕಂಟೆಂಟ್ ಮತ್ತು ಗುಣಮಟ್ಟದ ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ಕೆಲಸಕ್ಕೆ ಕೈ ಹಾಕಿದೆ. ತಯಾರಾದ ಚಿತ್ರಗಳು, ತಯಾರಾಗದೆ ಸಮಸ್ಯೆಯಲ್ಲಿರುವ ಸಿನಿಮಾಗಳಿಗೂ ಸಾಥ್ ನೀಡುವ ಕೆಲಸ ಈ ಸಂಸ್ಥೆ ಮಾಡಲು ಮುಂದಾಗಿದೆ.

    ಈಗಾಗಲೇ ನಾಗತಿಹಳ್ಳಿ (Nagatihalli Chandrasekhar) ಸಿನಿ ಕ್ರಿಯೇಷನ್ಸ್ ನಡಿ ತಯಾರಾಗಿರುವ ‘ ಡೈಮಂಡ್ ಕ್ರಾಸ್’ (Diamond Cross) ಎಂಬ ಜಾಕಿಚಾನ್ ಮಾದರಿಯ ಕನ್ನಡದ ಆಕ್ಷನ್ ಸಿನಿಮಾವೊಂದರ ರೈಟ್ಸ್ ಪಡೆದು ರಿಲೀಸ್ ಮಾಡಲು ಮುಂದಾಗಿದೆ. ಇದರೊಂದಿಗೆ ಇನ್ನೂ ಹನ್ನೊಂದು ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ತಯಾರಿಯಲ್ಲಿದೆ. ‘ಡೈಮಂಡ್ ಕ್ರಾಸ್’ ಚಿತ್ರವನ್ನು ನಾಗತಿಹಳ್ಳಿ ಅವರ ಅಕ್ಕನ ಮಗ ರಾಮ್ ದೀಪ್ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಪ್ರತಿಭೆ ಧ್ರುವ , ರೋಜರ್ ನಾರಾಯಣ್ ಸೇರಿದಂತೆ ಹಲವರು ಸಿನಿಮಾದಲ್ಲಿದ್ದಾರೆ. ಕನ್ನಡಕ್ಕೆ ಈ ರೀತಿಯ ಒಂದು ಫ್ಲಾಟ್ ಫಾರಂ ಕೊರತೆ ಇತ್ತು. ಅದನ್ನು ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ಸಂಸ್ಥೆ ದೊಡ್ಡ ಪ್ರಯತ್ನಕ್ಕೆ ಮುಂದಾಗಿದೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಈಗ ಸಿನಿಮಾ ಮಾಡಿ ರಿಲೀಸ್ ಮಾಡೋದು ಕಷ್ಟ ಸಾಧ್ಯ. ಅದರಲ್ಲೂ ಹಾಕಿದ ಬಂಡವಾಳ ಹಿಂದಕ್ಕೆ ಬಂದರೆ ಅದೇ ಗೆಲುವು. ಇಂತಹದರಲ್ಲಿ ಹೊಸಬರ ಕಂಟೆಂಟ್ ಸಿನಿಮಾಗಳು ಬಿಡುಗಡೆಗೆ, ವ್ಯಾಪಾರಕ್ಕೆ ಅಲೆದಾಡುವ ಸ್ಥಿತಿ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಸಿನಿಮಾಗಳ ಖರೀದಿಸಿ, ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ. ಇನ್ನು, ಎಲ್ಲಾ ಸಿನಿಮಾಗಳ ರೈಟ್ಸ್ ಅಸಾಧ್ಯ. ಇಲ್ಲೂ ಕೆಲ ಮಾನದಂಡಗಳಿವೆ. ಸಂಸ್ಥೆಯ ಮುಖ್ಯಸ್ಥ ಮನೀಶ್ ಅವರು ಹೇಳುವಂತೆ, ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವರ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ನಟ ಮಿತ್ರ ಅವರು ಸಿನಿಮಾ ವೀಕ್ಷಿಸಿ, ಅದರ ಕಂಟೆಂಟ್ ಹಾಗು ಕ್ವಾಲಿಟಿ ಪರಿಶೀಲಿಸಿ, ಅದು ಚೆನ್ನಾಗಿದೆ ಎಂದು ಸರ್ಟಿಫಿಕೇಟ್ ಕೊಟ್ಟ ಬಳಿಕವೇ ಆ ಸಿನಿಮಾ ರೈಟ್ಸ್ ಇತ್ಯಾದಿ ಬಗ್ಗೆ ಅಂತಿಮಗೊಳಿಸಲಾಗುತ್ತದೆ ಎನ್ನುತ್ತಾರೆ.

    ಮಿತ್ರ ಅವರ ಪ್ರಕರ, ಈ ವೇದಿಕೆ ಹುಟ್ಟುಹಾಕಿದ್ದೇ, ಹೊಸ ಪ್ರತಿಭೆಗಳಿಗಂತೆ. ಸಿನಿಮಾ ಮಾಡಿ ರಿಲೀಸ್ ಮಾಡಲಾಗದೆ, ವ್ಯಾಪಾರ ಮಾಲಾಗದೆ ಅಸಹಾಯಕರಾಗುವ ನಿರ್ಮಾಪಕರಿಗೆ ಸಾಥ್ ನೀಡಬೇಕೆಂಬ ಉದ್ದೇಶದಿಂದ. ಅದೀಗ ಸಾಕಾರವಾಗುತ್ತಿದೆ. ಈ ವೇದಿಕೆ ಮೂಲಕ ಕನ್ನಡದ ಒಂದಷ್ಟು ಪ್ರತಿಭಾವಂತರನ್ನು ಗಟ್ಟಿಗೊಳಿಸುವ ಸಣ್ಣ ಪ್ರಯತ್ನ ನಮ್ಮದು ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಬೀದಿಯಲ್ಲಿ ಅಲ್ಲ, ಕನ್ನಡ ಸಿನಿಮಾಗಳಿಗೆ ಥಿಯೇಟರ್‍ನಲ್ಲಿ ಹೋರಾಟ ಮಾಡ್ಬೇಕು: ಮಿತ್ರ ಬೇಸರ

    ಬೀದಿಯಲ್ಲಿ ಅಲ್ಲ, ಕನ್ನಡ ಸಿನಿಮಾಗಳಿಗೆ ಥಿಯೇಟರ್‍ನಲ್ಲಿ ಹೋರಾಟ ಮಾಡ್ಬೇಕು: ಮಿತ್ರ ಬೇಸರ

    ಬೆಂಗಳೂರು: ಕನ್ನಡ ಸಿನಿಮಾಗಳಿಗೆ ಹೋರಾಟದ ಮಾಡಬೇಕಾಗಿರುವುದು ಬೀದಿಯಲ್ಲಿ ಅಲ್ಲ. ಥಿಯೇಟರ್ ಗಳಲ್ಲಿ ಹೋರಾಟ ಮಾಡಬೇಕಿದೆ ಎಂದು ರಾಗಾ ಸಿನಿಮಾದ ನಟ ಮಿತ್ರ ಹೇಳಿದ್ದಾರೆ.

    ಥಿಯೇಟರ್ ಗಳಲ್ಲಿ ರಾಗಾ ಸಿನಿಮಾವನ್ನು ಎತ್ತಂಗಡಿ ಮಾಡಿದ್ದಕ್ಕೆ ಪಬ್ಲಿಕ್ ಟಿವಿಯಲ್ಲಿ ಬೆಳಗ್ಗೆ ನಡೆದ ವಿಶೇಷ ಜಿಂದಗಿ ಕಾರ್ಯಕ್ರಮದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾವು ನೂರಾರು ಸ್ಕ್ರೀನ್ ಗಳನ್ನು ಕೇಳುತ್ತಿಲ್ಲ. ಕನ್ನಡಿಗರ ಸ್ವಾಭಿಮಾನ ಏನು ಎನ್ನುವುದೇ ಗೊತ್ತಿಲ್ಲ. ಒಂದು ವೇಳೆ ಚಿತ್ರ ಕಳಪೆಯಾಗಿದ್ದರೆ ನಾವು ಕೇಳುತ್ತಿರಲಿಲ್ಲ. ಅದು ನಮ್ಮ ಸ್ವಯಂಕೃತ ಅಪರಾಧವಾಗುತಿತ್ತು. ಆದರೆ ಚಿತ್ರ ನೋಡಿದವರು ಚೆನ್ನಾಗಿದೆ ಎಂದು ಹೇಳಿದ್ದಾರೆ. ಉತ್ತಮವಾಗಿ ಪ್ರದರ್ಶನ ನೀಡುತ್ತಿರುವಾಗಲೇ ಚಿತ್ರವನ್ನು ಎತ್ತಂಗಡಿ ಮಾಡಿದ್ದು ಎಷ್ಟು ಸರಿ ಎಂದು ಅವು ಪ್ರಶ್ನಿಸಿದ್ದಾರೆ.

    ಕಲಾವಿದನಿಗೆ ಭಾಷೆಯ ಮಿತಿ ಇಲ್ಲ. ನಾನು ಬಾಹುಬಲಿಯ ವಿರೋಧಿ ಅಲ್ಲ. ಆದ್ರೆ ರಾಗಾ ಚಿತ್ರ ತಮಿಳಿನಲ್ಲಿ ಬರುತ್ತಿದ್ದರೆ ಜನ್ರು ಕ್ಯೂನಲ್ಲಿ ನಿಂತುಕೊಂಡು ಥಿಯೇಟರ್‍ಗೆ ಬರುತ್ತಿದ್ದರು ಎಂದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಟಿಕೆಟ್ ಗಳಿಗೆ 200 ರೂ. ಗರಿಷ್ಟ ದರವನ್ನು ನಿಗದಿ ಮಾಡಿದ್ದಾರೆ. ಹೀಗಾಗಿ ಥಿಯೇಟರ್‍ಗಳಲ್ಲಿ ಬಾಹುಬಲಿಗೆ ಎಷ್ಟು ಕಲೆಕ್ಷನ್ ಆಗುತ್ತದೋ ಅಷ್ಟೇ ಕಲೆಕ್ಷನ್ ನಿಮ್ಮ ಚಿತ್ರದಿಂದಲೂ ಆಗುತ್ತದೆ ಆದರೂ ಯಾಕೆ ಹೀಗೆ ಎಂದು ಪ್ರಶ್ನಿಸಿದ್ದಕ್ಕೆ, ಈ ಪ್ರಶ್ನೆಯನ್ನು ಬಾಹುಬಲಿ ಬಿಡುಗಡೆಗೆ ವಿರೋಧಿಸಿದ ಕನ್ನಡಪರ ಹೋರಾಟಗಾರರಲ್ಲಿ ಕೇಳಬೇಕು. ಈ ಪ್ರಶ್ನೆಗೆ ಉತ್ತರ ಹೇಳಲು ಕಷ್ಟವಾಗುತ್ತದೆ ಎಂದು ತಿಳಿಸಿದರು.

    ರಾಗ ಸಿನಿಮಾ ಥಿಯೇಟರ್ ನಿಂದ ಎತ್ತಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್ ಗೆ ನಟ ನಿರ್ಮಾಪಕ ಮಿತ್ರ ಹಾಗೂ ನಿರ್ದೇಶಕ ಪಿ ಸಿ ಶೇಕರ್ ದೂರು ನೀಡಿದ್ದು, ಈಗ ಕೆಲ ಚಿತ್ರಗಳಲ್ಲಿ ಈ ಚಿತ್ರ ಪ್ರದರ್ಶನ ನಡೆಸಲು ಒಪ್ಪಿಗೆ ಸಿಕ್ಕಿದೆ.

    ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಮಿತ್ರ ಅವರು, ನಾನು ಅಳಲನ್ನು ತೋಡಿಕೊಂಡೆ. ಹೀಗಾಗಿ ಈ ಕುರಿತು ನಮಗೆ ಸಾ ರಾ ಗೋವಿಂದು ಸಹಾಯ ಮಾಡಿದ್ದಾರೆ. 4 ಕಡೆಗಳಲ್ಲಿ ಶೋಗಳಿಗೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಮಾಧ್ಯಮದವರಿಗೆ, ಸಾರಾ ಗೋವಿಂದು ಅವರಿಗೆ ನನ್ನ ಧನ್ಯವಾದಗಳು. ನಾನು ಅವರಿಗೆ ಚಿರಋಣಿ ಎಂದು ತಿಳಿಸಿದರು.

    ರಾಗ ಒಂದು ಒಳ್ಳೆ ಸಿನಿಮಾ ಇದು. ಗೋಪಾಲನ್, ಐನಾಕ್ಸ್, ಮಂತ್ರಿ ಮಾಲ್ ಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕಿದೆ. ನನಗೆ ನಂಬಿಕೆ ಇದೆ ಖಂಡಿತ ಕನ್ನಡಿಗರು ನನ್ನ ಸಿನಿಮಾ ಉಳಿಸುತ್ತಾರೆ. ಸಿಂಗಲ್ ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಾನು ಜಯಣ್ಣ ಅವರ ಜೊತೆ ಮಾತನಾಡುತ್ತೇನೆ ಎಂದು ಮಿತ್ರ ಹೇಳಿದರು.

    ಒಬ್ಬ ನಿರ್ದೇಶಕನಿಗೆ ಚಿತ್ರ ದೊಡ್ಡ ಕನಸು. ರಾಗ ಚಿತ್ರ ಈ ರೀತಿ ಆಗಿರುವುದು ಬೇಸರ ತಂದಿದೆ. ಮಾತುಕಥೆಯ ನಂತ್ರ ಚಿತ್ರ ಪ್ರದರ್ಶಿಸಲು ಒಪ್ಪಿಗೆ ಸಿಕ್ಕಿದೆ. ಸಿಂಗಲ್ ಸ್ಕ್ರೀನ್ ಪ್ರದರ್ಶನದ ಬಗ್ಗೆ ಮಾತುಕಥೆ ನಡೆಯುತ್ತಿದೆ ಎಂದು ನಿರ್ದೇಶಕ ಪಿ ಸಿ ಶೇಖರ್ ತಿಳಿಸಿದರು.

    ಫಿಲಂ ಚೇಂಬರ್ ಅಧ್ಯಕ್ಷ ಸಾರಾ ಗೋವಿಂದ್ ಮಾತನಾಡಿ, ನಾನು ಯಾವತ್ತೂ ಹಿಂದೆ ಮುಂದೆ ಮಾತನಾಡುವವನಲ್ಲ. ಮಿತ್ರನ ಪ್ರಥಮ ಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಪರಭಾಷಾ ವ್ಯಾಮೊಹವೋ ಅಥವಾ ಕನ್ನಡ ಅಭಿಮಾನದ ಕೊರತೆಯೊ ಗೊತ್ತಿಲ್ಲ. ಒಳ್ಳೆಯ ಕನ್ನಡ ಚಿತ್ರಕ್ಕೆ ಪ್ರೇಕ್ಷಕರು ಬರುತ್ತಿಲ್ಲ. ನಾನು ಈ ಕುರಿತು ಮಲ್ಟಿಪ್ಲೆಕ್ಸ್ ಗಳಲ್ಲಿ ಮಾತನಾಡುವಾಗ ಕಲೆಕ್ಷನ್ ಇಲ್ಲ ಎನ್ನುವ ಮಾತುಗಳು ಕೇಳಿ ಬಂದಿದೆ. ಹೀಗಾಗಿ ನಾನು ನಗರದ ಎಲ್ಲ ಮಲ್ಟಿಪ್ಲೆಕ್ಸ್‍ಗಳಲ್ಲಿ ಮನವಿ ಮಾಡಿಕೊಂಡಿದ್ದೇನೆ. ಎಲ್ಲರೂ ಈ ಮನವಿಗೆ ಒಂದೊಂದು ಶೋ ಪ್ರದರ್ಶಿಸಲು ಒಪ್ಪಿದ್ದಾರೆ ಎಂದು ಹೇಳಿದರು.

    ಬಜೆಟ್‍ನಲ್ಲಿ ಘೋಷಣೆಯಾಗಿರುವ ಮಲ್ಟಿಪ್ಲೆಕ್ಸ್ ಥಿಯೇಟರ್ ಗರಿಷ್ಟ ಟಿಕೆಟ್ ದರ 200 ರೂ. ಯಾವಾಗ ಜಾರಿಯಾಗಲಿದೆ ಎನ್ನುವ ಪ್ರಶ್ನೆಗೆ, ಇಂದು ಅಥವಾ ನಾಳೆ ಯಾವುದೇ ಕ್ಷಣದಲ್ಲಿ ಈ ಅದೇಶ ಜಾರಿಯಾಗಬಹುದು ಎಂದು ಸಾರಾ ಗೋವಿಂದು ತಿಳಿಸಿದರು.

    ಇದನ್ನೂ ಓದಿ: ಮಲ್ಟಿಪ್ಲೆಕ್ಸ್ ಗಳಲ್ಲಿ ಗರಿಷ್ಟ ಟಿಕೆಟ್ ದರ 200 ರೂ. ಆಗಲು ಕಾರಣ ಏನು?

    https://www.youtube.com/watch?v=SScXGMbFhws

    https://www.youtube.com/watch?v=WboEqfigkRA