Tag: ಮಿರಾಜ್

  • ಪಾಕ್‌ನ ಮಿರಾಜ್‌ ವಿಮಾನವನ್ನು ಹೊಡೆದ ಹಾಕಿದ ಭಾರತ

    ಪಾಕ್‌ನ ಮಿರಾಜ್‌ ವಿಮಾನವನ್ನು ಹೊಡೆದ ಹಾಕಿದ ಭಾರತ

    ನವದೆಹಲಿ: ಆಪರೇಷನ್ ಸಿಂಧೂರ (Operation Siindoor) ಕಾರ್ಯಾಚರಣೆ ಸಮಯದಲ್ಲಿ ಭಾರತ ಪಾಕಿಸ್ತಾನದ ಮಿರಾಜ್ (Mirage Jet) ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕೃತವಾಗಿ ತಿಳಿಸಿದೆ. ಭಾರತೀಯ ಸೇನೆ ಇಂದು ಹಂಚಿಕೊಂಡ ವೀಡಿಯೊದಲ್ಲಿ ಪಾಕಿಸ್ತಾನಿ ಮಿರಾಜ್‌ನ ಅವಶೇಷಗಳನ್ನು ನೋಡಬಹುದು.

    ಇಂದು ಮಧ್ಯಾಹ್ನ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಹಿರಿಯ ಕಮಾಂಡರ್‌ಗಳು ಏಪ್ರಿಲ್ 22 ರಂದು ಜಮ್ಮು ಮತ್ತು ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7 ರಂದು ಪ್ರಾರಂಭಿಸಲಾದ ಆಪರೇಷನ್ ಸಿಂಧೂರ್‌ನ ಸಮಗ್ರ ವಿವರವನ್ನು ನೀಡಿದರು. ಇದನ್ನೂ ಓದಿ: ಪಾಕ್‍ಗೆ ನಾವು ಹೇಗಾದ್ರೂ ಪ್ರತಿಕ್ರಿಯಿಸುತ್ತೇವೆ, ಇದನ್ನು ಟ್ರಂಪ್ ಅರ್ಥ ಮಾಡಿಕೊಳ್ಳಲಿ: ಮೋದಿ

    ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ವೈಸ್ ಮಾರ್ಷಲ್ ಎಕೆ ಭಾರ್ತಿ ಮತ್ತು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎಎನ್ ಪ್ರಮೋದ್ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.

    ಕೆಲ ದಿನಗಳಿಂದ ಭಾರತ ಪಾಕ್‌ನ ಯುದ್ಧ ವಿಮಾನವನ್ನು ಹೊಡೆದು ಹಾಕಿದೆ ಎಂಬ ವರದಿ ಬರುತ್ತಿತ್ತು. ಆದರೆ ಅಧಿಕೃತವಾಗಿ ಭಾರತ ತಿಳಿಸಿರಲಿಲ್ಲ. ಆದರೆ ಇಂದು ಅಧಿಕೃತವಾಗಿ ಮಿರಾಜ್‌ ವಿಮಾನವನ್ನು ಆಕಾಶದಲ್ಲೇ ಹೊಡೆದು ಹಾಕಿದ್ದೇವೆ ಎಂದು ತಿಳಿಸಿದರು.

    ಆಪರೇಷನ್ ಸಿಂಧೂರ್ ಸುಮಾರು 25 ನಿಮಿಷಗಳ ಕಾಲ ನಡೆಯಿತು ಮತ್ತು ಮೇ 7 ರ ಮುಂಜಾನೆ ನಡೆಸಲಾಯಿತು. ಇದು ಒಂಬತ್ತು ದೃಢೀಕೃತ ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿತು, ಅದರಲ್ಲಿ ನಾಲ್ಕು ಪಾಕಿಸ್ತಾನದ ಮುಖ್ಯ ಭೂಭಾಗದಲ್ಲಿ ಮತ್ತು ಐದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೇರಿವೆ.

  • Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

    Sukhoi, Mirage Fighter Jets Crash: ವಿಮಾನ ಅಪಘಾತದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮ

    ಬೆಳಗಾವಿ: ಮಧ್ಯಪ್ರದೇಶದ (Madhya Pradesh) ಮೊರೆನಾದಲ್ಲಿ ಭಾರತೀಯ ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹುತಾತ್ಮರಾದ ಘಟನೆ ನಡೆದಿದೆ.

    ನಗರದ ಗಣೇಶಪುರದ ಸಂಭಾಜೀ ನಗರದ ನಿವಾಸಿ, ವಿಂಗ್ ಕಮಾಂಡರ್‌ ಹನುಮಂತರಾವ್ (Hanumanth Rao Sarathi) ಹುತಾತ್ಮರಾಗಿದ್ದಾರೆ. ಈ ಸಂಬಂಧ ಟ್ವೀಟ್‌ ಮಾಡಿ ಭಾರತೀಯ ವಾಯು ಪಡೆ (IAF) ವಿಷಾದ ವ್ಯಕ್ತಪಡಿಸಿದೆ. ಇದನ್ನೂ ಓದಿ: Madhya Pradesh Plane Crash: ಮಿರಾಜ್ 2000 ಯುದ್ಧ ವಿಮಾನದ ಪೈಲಟ್ ದುರ್ಮರಣ

    ಬೆಳಗಾವಿ ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಗಣೇಶಪುರದ ಹನುಮಂತರಾವ್ ಮನೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ವಿಂಗ್ ಕಮಾಂಡರ್ ಸಾವಿನ‌ ಸುದ್ದಿ ತಿಳಿದ ಹನುಮಂತರಾವ್ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಮಧ್ಯಪ್ರದೇಶದ ಮೊರೆನಾ ಸಮೀಪ ಸುಖೋಯ್‌ 30 (Sukhoi) ಹಾಗೂ ಒಂದು ಮಿರಾಜ್‌ 2000 (Mirage) ಯುದ್ಧವಿಮಾನ ಪತನವಾಗಿತ್ತು. ಈ ಎರಡೂ ವಿಮಾನಗಳು ಗ್ವಾಲಿಯರ್‌ ವಾಯುನೆಲೆಯಿಂದ ಟೇಕಾಫ್‌ ಆಗಿದ್ದವು. ಘಟನೆಗೆ ಕಾರಣ ತಿಳಿಯಲು ಭಾರತೀಯ ವಾಯುಪಡೆ ತನಿಖೆಗೆ ಆದೇಶ ಮಾಡಿದೆ. ಇದನ್ನೂ ಓದಿ: Plane Crash: ಬೆಂಕಿ ಕಾಣಿಸಿಕೊಂಡು ಪತನಗೊಂಡ ಚಾರ್ಟರ್ಡ್ ವಿಮಾನ – ಪೈಲಟ್‍ಗಾಗಿ ಹುಡುಕಾಟ

    ವಾಯು ಪಡೆಯ ವಿಮಾನ ಸ್ಥಳಕ್ಕೆ ಧಾವಿಸಿ ‍‍ಪರಿಶೀಲನೆ ನಡೆಸಿತು. ಘಟನೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ರಕ್ಷಣಾ ಇಲಾಖೆ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಾಕಿಸ್ತಾನದ ನೆಲದಲ್ಲೇ ಉಗ್ರ ಸಂಹಾರ ನಡೆಸಿರೋದರ ಹಿಂದಿದೆ 5 ಪ್ರಮುಖ ಕಾರಣಗಳು

    ಪಾಕಿಸ್ತಾನದ ನೆಲದಲ್ಲೇ ಉಗ್ರ ಸಂಹಾರ ನಡೆಸಿರೋದರ ಹಿಂದಿದೆ 5 ಪ್ರಮುಖ ಕಾರಣಗಳು

    ನವದೆಹಲಿ: ಬಾಲ್‍ಕೋಟ್ ಜೈಷ್ ಉಗ್ರ ಸಂಘಟನೆಯ ಪ್ರಮುಖ ಕೇಂದ್ರ. ಅಲ್ಲಿ ಉಗ್ರರ ತರಬೇತಿ, ತರಬೇತುದಾರರು, ಶಸ್ತ್ರಾಸ್ತ್ರ ಸಂಗ್ರಹ ಮಾಡಲಾಗಿತ್ತು ಅಂತ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದರು. ಅಲ್ಲದೆ ಈ ಕ್ಯಾಂಪನ್ನು ಉಡಾಯಿಸದೇ ಹೋಗಿದ್ದಲ್ಲಿ ಭಾರತದಲ್ಲಿ ಮತ್ತಷ್ಟು ಆತ್ಮಾಹುತಿ ದಾಳಿ ನಡೀತಿತ್ತು ಎಂದು ಆತಂಕ ವ್ಯಕ್ತಪಡಿಸಿದ್ದರು. ಪಾಕಿಸ್ತಾನದ ನೆಲದಲ್ಲೇ ಉಗ್ರ ಸಂಹಾರ ನಡೆಸಿರೋದರ ಹಿಂದಿದೆ ಐದು ಪ್ರಮುಖ ಕಾರಣಗಳಿವೆ.

    1. ಉಗ್ರರಿಗೆ ಪಾಕಿಸ್ತಾನದ ಯಾವುದೇ ತಾಣ ಸುರಕ್ಷಿತವಲ್ಲ
    ಭಾರತ ಇದೇ ಮೊದಲ ಬಾರಿಗೆ ವೈಮಾನಿಕ ದಾಳಿ ಬಗ್ಗೆ ಹಾಕಿಕೊಂಡಿದ್ದ ತನ್ನ ಮಾನಸಿಕ ಬೇಲಿಯನ್ನು ಮೀರಿ ಹೊರ ಬಂತು. 12 ಎಐಎಫ್ ಫೈಟರ್ ಜೆಟ್‍ಗಳು ಪಾಕ್ ವೈಮಾನಿಕ ಪ್ರದೇಶಕ್ಕೆ ನುಗ್ಗಿ ಬಾಲಕೋಟ್, ಚಕೋಟಿ, ಮುಜಾಫರ್‍ಬಾದ್‍ನಲ್ಲಿ ಉಗ್ರರನ್ನು ಸಂಹರಿಸಿದವು. ಅಷ್ಟೇ ಅಲ್ಲ, ಸುರಕ್ಷಿತವಾಗಿ ವಾಪಸ್ ಬಂದವು. ಈ ಮೂಲಕ ಪಾಕಿಸ್ತಾನದಲ್ಲಿರುವ ಯಾವ ಸ್ಥಳವೂ ಉಗ್ರರಿಗೆ ಸುರಕ್ಷಿತವಲ್ಲ. ಅದು ಇಸ್ಲಾಮಾಬಾದ್ ಇರಬೋದು ಅಥವಾ ರಾವಲ್‍ಪಿಂಡಿ ಇರಬೋದು ಅನ್ನೋ ಕಠಿಣ ಸಂದೇಶ ರವಾನಿಸಿತ್ತು.

    2. ಯಾವ ಬೆದರಿಕೆಗೂ ಬಗ್ಗಲ್ಲವೆಂದು ಪಾಕ್‍ಗೆ ಪಾಠ
    ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತ ಯಾವುದೇ ಕ್ಷಣದಲ್ಲಿಯೂ ಪ್ರತಿಕಾರ ತೀರಿಸಬಹುದು ಎಂದು 2 ದಿನಗಳ ಹಿಂದಷ್ಟೇ ಪಾಕ್ ಸೇನಾ ಮುಖ್ಯಸ್ಥ ಮೇಜರ್ ಜನರಲ್ ಆಸಿಫ್ ಗಫೂರ್ ಹೇಳಿದ್ರು. ಆದರೆ, ಪಾಕ್ ಗಡಿ ದಾಟಿ ಬಂದ ಭಾರತೀಯ ಸೇನೆಯನ್ನು ಸುಮ್ಮನೆ ಬಿಡಲ್ಲ. ನಮ್ಮ ಬಳಿಯೂ ಅಣ್ವಸ್ತ್ರ ಇದೆ ಎಂದು ಬೆದರಿಕೆಯೊಡ್ಡಿದ್ದರು. ಇದ್ಯಾವುದಕ್ಕೂ ಕ್ಯಾರೇ ಎನ್ನದ ವಾಯುಸೇನೆ 12 ಜೆಟ್‍ಗಳ ಮೂಲಕ ಅವರ ನೆಲಕ್ಕೆ ನುಗ್ಗಿ ಉಗ್ರಾಘಾತ ಮಾಡಿ ಬಂದಿವೆ. ಈ ಮೂಲಕ ನೀವು ಏನ್ ಬೇಕಾದರೂ ಮಾಡಿ ಯಾವ ಬೆದರಿಕೆಗೂ ಬಗ್ಗಲ್ಲ ಅಂತ ಸೇನೆ ಹೇಳಿ ಬಂದಿದೆ.

    3. ಉಗ್ರರ ಕ್ಯಾಂಪ್‍ಗಳೇ ಟಾರ್ಗೆಟ್
    ಪಾಕಿಸ್ತಾನದ ಜೈಷ್ ಉಗ್ರರು ಅಡಗುವ ಪ್ರದೇಶಗಳು ಜನಸಂದಣಿಯಿಂದ ಕೂಡಿರುತ್ತವೆ. ಲಾಹೋರ್ ಬಳಿಯ ಜೈಶ್ ಹೆಡ್‍ಕ್ವಾಟ್ರಸ್ ಮುಂದಕ್ಕೆ ಅಥವಾ ದಕ್ಷಿಣ ಪಂಜಾಬ್‍ನ ಬಹವಾಲ್‍ಪುರದ ಕೇಂದ್ರಗಳು ಇದಕ್ಕೆ ಉದಾಹರಣೆ. ಕೈಬರ್ ಪಖ್ತುಂಖ್ವಾದ ಉಗ್ರ ತರಬೇತಿ ಕೇಂದ್ರ ದಟ್ಟ ಅರಣ್ಯದಲ್ಲಿದೆ. ಹಾಗಾಗಿ ಇದನ್ನೇ ಉಡೀಸ್ ಮಾಡುವ ಎಂದು ತಳಮಟ್ಟದಲ್ಲಿ ದಾಳಿ ನಡೆಸುವ ಸಾಮಥ್ರ್ಯದೊಂದಿಗೆ 12 ಜೆಟ್‍ಗಳು ಉಗ್ರರ ಕ್ಯಾಂಪ್‍ಗಳನ್ನು ಟಾರ್ಗೆಟ್ ಮಾಡಿದವು. ಹೀಗಾಗಿ ಜನರ ಜೀವಹಾನಿಗೆ ಆಸ್ಪದವೇ ಕೊಡಲಿಲ್ಲ.

    4. ಭಾರತದ ತಾಂತ್ರಿಕ ಶ್ರೇಷ್ಠತೆ ಪ್ರದರ್ಶನ
    ಪಾಕಿಸ್ತಾನದ ಹದ್ದಿನ ಕಣ್ಣನ್ನು ತಪ್ಪಿಸಿ ಒಳನುಗ್ಗಿದ ಭಾರತೀಯ ಸೇನೆಯ ಯಶಸ್ಸಿನ ಜೊತೆಗೆ ನಮ್ಮ ದೇಶದ ಐಎಎಫ್‍ನ ತಾಂತ್ರಿಕ ಶ್ರೇಷ್ಠತೆ ಕೂಡ ಸಾಬೀತಾಗಿದೆ. ಅಮೆರಿಕದಲ್ಲಿ ಸಿದ್ಧಪಡಿಸಲಾದ ಪಾಕಿಸ್ತಾನದ ರಡಾರ್ ರಕ್ಷಣೆಯನ್ನು ಭೇದಿಸಿದ ಮಿರಾಜ್ ಜೆಟ್‍ಗಳು ಕಣ್ಮುಚ್ಚಿ ಕಣ್ತೆರೆಯುವಂತೆ ಮಿಂಚಿನ ಸಂಚಾರದ ದಾಳಿ ಮಾಡಿ ಉಗ್ರರ ಹೆಡೆಮುರಿ ಕಟ್ಟಿದೆ. ಈ ಮೂಲಕ ತನ್ನ ಟೆಕ್ನಿಕಲ್ ಸುಪಿರಿಯಾರಿಟಿಯನ್ನು ಜಗತ್ತಿಗೇ ಪ್ರದರ್ಶಿಸಿದೆ.

    5. ಜಾಗತಿಕ ಮಟ್ಟದಲ್ಲಿ ಭಾರತಕ್ಕಿಲ್ಲ ಆತಂಕ
    ಜಾಗತಿಕ ಮಟ್ಟದಲ್ಲೂ ವಿರೋಧ ಕಟ್ಟಿಕೊಳ್ಳಬಾರದು. ಉಗ್ರರನ್ನು ಸುಮ್ಮನೆ ಬಿಡಬಾರದು ಎಂದು ನಡೆಸಿದ ಏರ್ ಸ್ಟ್ರೈಕ್ ಸಕ್ಸಸ್ ಆಗಿದೆ. ಯಾಕಂದ್ರೆ, ವಿಶ್ವದ ಯಾವ ದೇಶವೂ ಸಹ ಭಾರತದ ದಾಳಿಯ ಬಗ್ಗೆ ಆಕ್ಷೇಪ ಎತ್ತಿಲ್ಲ. ಜೊತೆಗೆ ಭಾರತ ಈ ದಾಳಿಯನ್ನು ಯುದ್ಧ ಎಂದು ಒಪ್ಪಿಕೊಂಡಿಲ್ಲ. ನಾವು ಯಾವುದೇ ಯುದ್ಧ ಸಾರುತ್ತಿಲ್ಲ, ದಾಳಿಯನ್ನಷ್ಟೇ ಮಾಡಿದ್ದೇವೆ ಎಂದು ಭಾರತ ಸ್ಪಷ್ಟಪಡಿಸಿದೆ. ಅಷ್ಟರ ಮಟ್ಟಿಗೆ ನಮ್ಮ ಯೋಧರು ತಮ್ಮ ಟಾರ್ಗೆಟ್, ಆಪರೇಷನ್ ಅನ್ನು ಫಿನಿಶ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಜಿಕಲ್ ಸ್ಟ್ರೈಕ್ 2: ವಾಯುಸೇನೆಗೆ ಅಭಿನಂದಿಸಿ ನಾವು ಹೆಮ್ಮೆ ಪಡಬೇಕು ಯಾಕೆ?

    ಸರ್ಜಿಕಲ್ ಸ್ಟ್ರೈಕ್ 2: ವಾಯುಸೇನೆಗೆ ಅಭಿನಂದಿಸಿ ನಾವು ಹೆಮ್ಮೆ ಪಡಬೇಕು ಯಾಕೆ?

    ನವದೆಹಲಿ: ಉಗ್ರರ ವಿರುದ್ಧ ಹೋರಾಡಬೇಕಾದರೆ ನಮಗೆ ಸಾಕ್ಷ್ಯ ನೀಡಿ. ಪ್ರಬಲ ಸಾಕ್ಷ್ಯವನ್ನು ಕೊಟ್ಟರೆ ನಾವು ಉಗ್ರರನ್ನು ಮಟ್ಟ ಹಾಕುತ್ತೇವೆ ಎಂದು ಎಂದಿದ್ದ ಪಾಕಿಸ್ತಾನಕ್ಕೆ ಭಾರತ ಸಾಕ್ಷ್ಯ ಸಮೇತ ಉತ್ತರವನ್ನು ನೀಡಿದೆ.

    ಹೌದು. ಇಲ್ಲಿಯವರೆಗೆ ಭಾರತ ಮಾತಿನ ಮೂಲಕ ಪ್ರತಿಕ್ರಿಯೆ ನೀಡುತಿತ್ತು. ಅಷ್ಟೇ ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಮರ್ಯಾದೆಯನ್ನು ಕಳೆಯುವ ಪ್ರಯತ್ನವನ್ನು ನಡೆಸುತಿತ್ತು. ಉರಿ ಮತ್ತು ಪುಲ್ವಾಮಾ ದಾಳಿ ಬಳಿಕ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿ ನಮ್ಮ ಶಕ್ತಿ ಏನು ಎನ್ನುವುದನ್ನು ತೋರಿಸಿಕೊಟ್ಟಿದೆ. ಈ ವಿಚಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಲಿದೆ ಎನ್ನುವುದನ್ನು ಮೊದಲೇ ಅರಿತ ಭಾರತ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ವಾಯುದಾಳಿ ನಡೆಸಿ ಪಾಕಿಸ್ತಾನಕ್ಕೆ ಶಾಕ್ ನೀಡಿದೆ.

    ಉಗ್ರರು ಒಳ ನುಸುಳುವ ಸಮಯದಲ್ಲಿ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯ ಬಳಿ ಗುಂಡಿನ ದಾಳಿ ಆರಂಭಿಸುತ್ತದೆ. ಈ ವೇಳೆ ಭಾರತ ಸಹ ಪ್ರತಿದಾಳಿ ನಡೆಸುತ್ತದೆ. ಭಾರತ ಸೈನಿಕರ ಗಮನವನ್ನು ಸೆಳೆದು ಪಾಕಿಸ್ತಾನ ಉಗ್ರರು ಕಾಶ್ಮೀರ ಪ್ರವೇಶಿಸಲು ಸಹಾಯ ಮಾಡುತ್ತಿರುತ್ತದೆ. ಈ ವಿಚಾರ ಭಾರತಕ್ಕೆ ಗೊತ್ತಿದ್ದರೂ ದಾಳಿ ನಡೆಸಲು ಧೈರ್ಯ ತೋರಿರಲಿಲ್ಲ. ಆದರೆ ಪುಲ್ವಾಮಾದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ದಾಳಿ ಬಳಿಕ ಭಾರತೀಯರ ಆಕ್ರೋಶದ ಕಟ್ಟೆ ಒಡೆದಿತ್ತು. ಯಾವ ರೀತಿ ದಾಳಿ ನಡೆಸಿ ಉಗ್ರರನ್ನು ಹೆಡೆಮುರಿ ಕಟ್ಟಿ ಹಾಕುತ್ತಿರಿ ಎಂದು ಜನ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿದ್ದರು. ಜನರ ಆಕ್ರೋಶ ಕಟ್ಟೆ ಒಡೆಯುತ್ತಿದ್ದಂತೆ ಸರ್ಕಾರ ಉಗ್ರರನ್ನು ಹೀಗೆಯೇ ಬಿಟ್ಟರೆ ಆಗುವುದಿಲ್ಲ ಎಂದು ಅರಿತ ಗಡಿಯನ್ನು ದಾಟಿ ದಾಳಿ ನಡೆಸುವುದೇ ಸೂಕ್ತ ಎನ್ನುವ ನಿರ್ಧಾರಕ್ಕೆ ಬಂದು ಇಂದು ಮುಹೂರ್ತ ಫಿಕ್ಸ್ ಮಾಡಿತ್ತು. ಈ ಪ್ಲಾನ್ ಯಶಸ್ವಿಯಾಗಿದ್ದು ಭಾರತ ತನ್ನ ಗಡಿಯನ್ನು ದಾಟಿ ದಾಳಿ ನಡೆಸಲು ತಯಾರಾಗುತ್ತಿದ್ದ ಉಗ್ರರನ್ನು ಅವರ ನೆಲದಲ್ಲೇ ಹತ್ಯೆ ಮಾಡಿ ತನ್ನ ಪರಾಕ್ರಮವನ್ನು ತೋರಿಸಿದೆ.

    ಕಾರಣ 1:
    ಬಾಲ್‍ಕೋಟ್ ನಲ್ಲಿ ಜೈಶ್-ಇ-ಮೊಹಮ್ಮದ್ (ಜೆಇಎಂ) ನ ದೊಡ್ಡ ತರಬೇತಿ ಶಿಬಿರವನ್ನು ವಾಯುಸೇನೆ ಬಾಂಬ್ ದಾಳಿ ನಡೆಸಿ ಧ್ವಂಸ ಮಾಡಿದೆ. ಈ ಹಿಂದೆ ಉರಿ ಸೇನಾ ನೆಲೆಯ ಮೆಲೆ ದಾಳಿ ನಡೆದ ಬಳಿಕ ಪಾಕ್ ಆಕ್ರಮಿತ ಕಾಶ್ಮೀರ ಒಳಗಡೆ ಹೆಲಿಕಾಪ್ಟರ್ ಸಹಾಯದಿಂದ ನುಗ್ಗಿ ಭೂ ಸೇನೆಯ ಸೈನಿಕರು ಉಗ್ರರನ್ನು ಸಂಹಾರ ಮಾಡಿದ್ದರು. ಆದರೆ ಮೊದಲ ಬಾರಿಗೆ ವಾಯುಸೇನೆ ಬಾಂಬ್ ಬಳಸಿ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಮೌಲಾನಾ ಯೂಸುಫ್ ಅಝರ್ (ಅಲಿಯಾಸ್ ಉಸ್ತಾದ್ ಘೌರಿ), ಜೆಇಎಂ ಮುಖ್ಯಸ್ಥ ಮಸೂದ್ ಅಝರ್‍ನ ಸೋದರ ಸಂಬಂಧಿ ನಡೆಸುತ್ತಿದ್ದ ಬಾಲಕೋಟ್ ಅಡಗುದಾಣದ ಮೇಲೆಯೇ ದಾಳಿ ನಡೆದಿದೆ. ಮೂರು ದಾಳಿಯಲ್ಲಿ ಭಯೋತ್ಪಾದಕರು, ತರಬೇತುದಾರರು ಮತ್ತು ಹಿರಿಯ ಕಮಾಂಡರ್‍ಗಳು ಸೇರಿ ಒಟ್ಟು 350ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಮೂಲಕ ಭಾರತ ಪಾಕಿಸ್ತಾನ ಸೇರಿದಂತೆ ವಿಶ್ವಕ್ಕೆ ತನ್ನ ವಾಯುಸೇನೆಯ ಶಕ್ತಿಯನ್ನು ತೋರಿಸಿದೆ.

    ಕಾರಣ 2 :
    ಪಾಕಿಸ್ತಾನದಲ್ಲಿ ಭಯೋತ್ಪಾದನಾ ತರಬೇತಿ ಶಿಬಿರಗಳ ಮೇಲೆ ದಾಳಿ ಭಾರತೀಯ ವಾಯುಸೇನೆ ಮೊದಲ ಬಾರಿಗೆ ಗಡಿ ನಿಯಂತ್ರಣ ರೇಖೆಯನ್ನು ದಾಟಿದೆ. 1971 ರ ಇಂಡೋ-ಪಾಕ್ ಯುದ್ಧದ ಸಂದರ್ಭದಲ್ಲಿ ಇದೇ ರೀತಿಯ ದಾಳಿ ನಡೆದಿತ್ತು. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲೂ ವಾಯುಸೇನೆಯ ವಿಮಾನ ಬಳಸಿ ದಾಳಿ ಮಾಡಲಾಗಿತ್ತು. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗಡಿ ನಿಯಂತ್ರಣ ರೇಖೆಯನ್ನು ದಾಟದಂತೆ ಸೂಚನೆ ಬಂದಿತ್ತು. ಆದರೆ ಈ ಬಾರಿ ಸೇನೆಗೆ ಸರ್ಕಾರ ಸಂಪೂರ್ಣ ಅನುಮತಿ ನೀಡಿತ್ತು. ಪುಲ್ವಾಮಾ ದಾಳಿ ಬಳಿಕ ಸೇನೆಗೆ ಸಂಪೂರ್ಣ ಅಧಿಕಾರವನ್ನು ನೀಡಲಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು. ಭಾರತ ಗಡಿನಿಯಂತ್ರಣ ರೇಖೆಯನ್ನು ದಾಟಿ ನಮ್ಮ ನೆಲದ ಮೇಲೆ ಬಂದು ದಾಳಿ ಮಾಡಿದೆ ಎನ್ನುವುದನ್ನು ಪಾಕಿಸ್ತಾನವೇ ಒಪ್ಪಿಕೊಂಡಿದೆ.

    ಕಾರಣ 3 :
    ಭಾರತ ಹೇಗೆ ಬಜೆಟ್ ನಲ್ಲಿ ಮಿಲಿಟರಿ ಶಕ್ತಿ ಹೆಚ್ಚಿನ ಹಣವನ್ನು ಮೀಸಲಿಡುತ್ತದೋ ಅದೇ ರೀತಿಯಾಗಿ ಪಾಕಿಸ್ತಾನ ಸಹ ಬಜೆಟ್‍ನಲ್ಲಿ ಹಣವನ್ನು ಮೀಸಲಿಡುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಪಾಕಿಸ್ತಾನ ಖರೀದಿಸಿದೆ. ಪುಲ್ವಾಮಾ ದಾಳಿ ಬಳಿಕ ಭಾರತ ಪ್ರತಿದಾಳಿ ನಡೆಸಲಿದೆ ಎನ್ನುವುದನ್ನು ಅರಿತ ಪಾಕಿಸ್ತಾನ ಗಡಿಯಲ್ಲಿ ತನ್ನ ಸೇನೆಯನ್ನು ನಿಯೋಜಿಸಿತ್ತು. ಈ ನಡುವೆ ಮೋದಿ ಸೈನಿಕರ ಬಲಿದಾನವನ್ನು ವ್ಯರ್ಥವಾಗಲು ಬಿಡುವುದಿಲ್ಲ. ಹಿಂದಿನ ಎಲ್ಲ ಬಾಕಿಗಳನ್ನು ತೀರಿಸಿಯೇ ತೀರಿಸುತ್ತೇವೆ ಎಂದು ಗುಡುಗಿದ್ದರು. ಹೀಗಾಗಿ ಪಾಕಿಸ್ತಾನ ತನ್ನ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿತ್ತು. ಇಷ್ಟೆಲ್ಲ ಅಲರ್ಟ್ ಘೋಷಿಸಿದರೂ ಭಾರತ ಮಂಗಳವಾರ ಬೆಳಗ್ಗೆ ಪಾಕ್ ಸೈನಿಕರ ಕಣ್ಣು ತಪ್ಪಿಸಿ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿ ಪ್ರಪಂಚವೇ ನಿಬ್ಬೆರಾಗುವಂತೆ ಮಾಡಿ ತನ್ನ ಶಕ್ತಿಯನ್ನು ತೋರಿಸಿದೆ.

    ಭಾರತದಿಂದ ಪ್ರತೀಕಾರದ ಮಾತು ಬರುತ್ತಿದ್ದಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ನಾವು ಯಾವುದೇ ದಾಳಿ ಎದುರಿಸಲು ಸಿದ್ಧ ಎಂದು ಹೇಳಿದ್ದರು. ಕಳೆದ ಶುಕ್ರವಾರ ಪಾಕಿಸ್ತಾನದ ಸೇನೆಯ ವಕ್ತಾರ ಮೇಜರ್ ಜನರಲ್ ಗಫೂರ್ ಮಾತನಾಡಿ, ಪಾಕಿಸ್ತಾನದ ಸೇನಾ ಪಡೆಗಳು ನಿಮ್ಮಿಂದ ಎಂದಿಗೂ ಆಶ್ಚರ್ಯಪಡುವುದಿಲ್ಲ. ಆದರೆ ನಾನು ನಿಮಗೆ ಭರವಸೆ ನೀಡುತ್ತೇವೆ. ನಾವು ನಿಮ್ಮನ್ನು ಅಚ್ಚರಿಗೊಳಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗಳಿಗೆ ಭಾರತ ತಲೆ ಕೆಡಿಸಿಕೊಳ್ಳದೇ ಪ್ಲಾನ್ ಮಾಡಿ ದಾಳಿ ನಡೆಸಿ ಪಾಕಿಸ್ತಾನಕ್ಕೆ ಭಾರೀ ಮುಜುಗರವನ್ನುಂಟು ಮಾಡಿದೆ.

    ಕಾರಣ 4 :
    ಭಾರತದ ಮೇಲೆ ನೇರವಾಗಿ ಯುದ್ಧ ಮಾಡಿದರೆ ನಮಗೆ ಸೋಲು ಖಚಿತ ಎನ್ನುವುದು ಪಾಕಿಸ್ತಾನಕ್ಕೆ ಗೊತ್ತಿದೆ. ಹೀಗಾಗಿ ಅದು ಉಗ್ರರನ್ನು ಛೂ ಬಿಡುವ ಮೂಲಕ ಭಾರತದ ಮೇಲೆ ದಾಳಿ ನಡೆಸಲು ಪ್ರಚೋದನೆ ನೀಡುತ್ತಿದೆ. ಉರಿ ದಾಳಿ ಬಳಿಕವೇ ಭಾರತ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉತ್ತರ ನೀಡಿ ಭಯೋತ್ಪಾದನೆಯನ್ನು ನಾವು ಸಹಿಸುವುದಿಲ್ಲ ಎಂದು ಹೇಳಿತ್ತು. ಪುಲ್ವಾಮಾ ದಾಳಿ ಬಳಿಕ ಭಾರತ ಮತ್ತೊಂದು ದಾಳಿ ನಡೆಸಬಹುದು ಎಂದು ಪಾಕಿಸ್ತಾನ ತನ್ನ ಗಡಿಯಲ್ಲಿದ್ದ ಉಗ್ರರ ಕೇಂದ್ರಗಳನ್ನು ಬೇರೆ ಕಡೆಗೆ ಶಿಫ್ಟ್ ಮಾಡಿತ್ತು. ಪಾಕ್ ಈ ಉಗ್ರರನ್ನು ಕಾಪಾಡುತ್ತಿದ್ದರೂ ಭಾರತ ಈಗ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿದೆ. ಇಲ್ಲಿಯವರೆಗೆ ಉಗ್ರರ ವಿಚಾರದಲ್ಲಿ ನಾವು ಕಟು ಮಾತಿನಲ್ಲಿ ಮಾತ್ರ ಪ್ರತಿಕ್ರಿಯೆ ನೀಡುತ್ತಿದ್ದರೆ ಈಗ ನಮ್ಮಲ್ಲಿರುವ ರಕ್ಷಣಾ ಪಡೆಗಳ ಮೂಲಕ ಪ್ರತಿ ಉತ್ತರ ನೀಡುತ್ತೇವೆ ಎನ್ನುವ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುದ್ಧ ವಿಮಾನ ಪತನ- ಭಾರೀ ದುರಂತವನ್ನೇ ತಡೆದು ಅಮರರಾದ ಪೈಲಟ್‍ಗಳು..!

    ಯುದ್ಧ ವಿಮಾನ ಪತನ- ಭಾರೀ ದುರಂತವನ್ನೇ ತಡೆದು ಅಮರರಾದ ಪೈಲಟ್‍ಗಳು..!

    ಬೆಂಗಳೂರು: ತಾಂತ್ರಿಕ ದೋಷದಿಂದ ವಾಯುಪಡೆಯ ಮಿರಾಜ್-2000 ನಂಬರ್‍ನ ಯುದ್ಧ ವಿಮಾನ ಬೆಂಗಳೂರಿನ ಎಚ್‍ಎಎಲ್‍ನ ಯಮಲೂರು ಬಳಿ ಪತನಗೊಂಡು ಇಬ್ಬರು ಪೈಲಟ್‍ಗಳು ಶುಕ್ರವಾರ ಸಾವನ್ನಪ್ಪಿದ್ದರು. ಆದರೆ ಪೈಲಟ್ ಗಳು ತಮ್ಮ ಜೀವತೆತ್ತು ಸಂಭವಿಸಬಹುದಾದ ಭಾರೀ ಅವಘಡವನ್ನು ತಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಪ್ರಾಯೋಗಿಕ ಹಾರಾಟ ವೇಳೆ ಈ ಅವಘಡ ಸಂಭವಿಸಿದ್ದು, ರನ್‍ವೇಯಲ್ಲಿ ಹಾರಾಟ ನಡೆಸಿದ್ದ ವಿಮಾನ ಟೇಕಾಫ್ ಆಗಿದ್ದರೆ ವಸತಿ ಹೆಚ್ಚಾಗಿರುವ ಪ್ರದೇಶದಲ್ಲಿ ಬೀಳುವ ಸಾಧ್ಯತೆ ಇತ್ತು. ಆದರೆ ಇದನ್ನು ಮನಗಂಡ ಫೈಲಟ್‍ಗಳು ವಿಮಾನ ಎತ್ತರಕ್ಕೆ ಟೇಕಾಫ್ ಮಾಡದಿರಲು ನಿರ್ಧರಿಸಿ ಹೊರ ಬರಲು ಪ್ರಯತ್ನಿಸಿದ್ದರು.

    ಅಂತಿಮ ಕ್ಷಣದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದ ಪೈಲಟ್ ಗಳು ಪ್ಯಾರಚೂಟ್ ಬಳಸಿ ಹಾರಲು ಯತ್ನಿಸಿದ್ದರು. ಆದರೆ ಆ ವೇಳೆಗೆ ವಿಮಾನ ಸ್ಫೋಟಗೊಂಡಿತ್ತು. ಪರಿಣಾಮ ಸಿದ್ದಾರ್ಥ್ ನೇಗಿ (31), ಸಮೀರ್ ಅಬ್ರೋಲ್(33) ಜೀವ ಕಳೆದುಕೊಂಡಿದ್ದಾರೆ. ಸಮೀರ್ ಬೆಂಕಿ ಹೊತ್ತಿಕೊಂಡಿದ್ದ ಪ್ಯಾರಚೂಟ್ ಮೇಲೆಯೇ ಬಿದ್ದ ಪರಿಣಾಮ ಸುಟ್ಟು ಕರಕಲಾದರೆ, ತೀವ್ರ ಗಾಯಗೊಂಡಿದ್ದ ನೇಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು.

    ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಒಂದೊಮ್ಮೆ ವಿಮಾನ ಜನ ವಸತಿ ಪ್ರದೇಶದಲ್ಲಿ ಪತನವಾಗಿದ್ದರೆ ಭಾರೀ ಅವಘಡ ಸಂಭವಿಸುತ್ತಿತ್ತು ಎಂದು ತಿಳಿಸಿದ್ದಾರೆ. ಅಲ್ಲದೇ ಈ ಕುರಿತು ಮಾಹಿತಿ ನೀಡಿರುವ ಎಚ್‍ಎಎಲ್ ಅಧಿಕಾರಿಯೊಬ್ಬರು ರನ್‍ವೇಯಲ್ಲಿಯೇ ವಿಮಾನದ ಟೈರ್ ಕಳಚಿ ಬಿದ್ದ ಪರಿಣಾಮ ಮುಂಭಾಗ ರನ್ ವೇಗೆ ಉಜ್ಜಿ ಬೆಂಕಿ ಕಿಡಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ವಿವರಿಸಿದ್ದಾರೆ.

    ವಿಮಾನ ಸ್ಫೋಟಗೊಂಡ ಅಲ್ಪ ದೂರದಲ್ಲೇ ಜನ ವಸತಿ ಪ್ರದೇಶಗಳಿದ್ದು, ಶಾಲೆ, ಟೆಕ್ ಪಾರ್ಕ್, ರಸ್ತೆ ಸೇರಿದಂತೆ ಹಲವು ಪ್ರದೇಶಗಳಿದೆ. ಒಂದೊಮ್ಮೆ ಪೈಟಲ್‍ಗಳು ವಿಮಾನವನ್ನು ರನ್ ವೇಯಿಂದ ಟೇಕಾಫ್ ಆಗಿದ್ದರೆ ವಸತಿ ಪ್ರದೇಶದಲ್ಲಿ ಉರುಳುವ ಸಾಧ್ಯತೆ ಇತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ- ಪೈಲಟ್ ದುರ್ಮರಣ

    ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ- ಪೈಲಟ್ ದುರ್ಮರಣ

    ಬೆಂಗಳೂರು: ಇಲ್ಲಿ ಎಚ್‍ಎಎಲ್ ಏರ್ ಪೋರ್ಟ್  ಬಳಿ ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲಟ್ ಮೃತಪಟ್ಟಿರುವ ಘಟನೆ  ಇಂದು ನಡೆದಿದೆ.

    ಸಿದ್ದಾರ್ಥ್ ಮೃತ ದುರ್ದೈವಿ ಪೈಲಟ್ ಆಗಿದ್ದು, ಮಿರಾಜ್ ಎನ್ನುವ ಯುದ್ಧ ವಿಮಾನ ಪತನವಾಗಿದೆ. ಮಿರಾಜ್ ಭಾರೀ ಸ್ಫೋಟಗೊಂಡ ಪರಿಣಾಮ ದಟ್ಟವಾದ ಹೊಗೆ ಅಲ್ಲಿ ಆವರಿಸಿದೆ. ಇದರಿಂದ ಸ್ಥಳೀಯರು ಗಾಬರಿಗೊಂಡಿದ್ದಾರೆ.

    ಎಚ್ ಎ ಎಲ್ ನಿಂದ ಹೊರಭಾಗದಲ್ಲಿ ಮನೆಗಳ ಮೇಲೆ ಪತನವಾಗುವ ಸಾಧ್ಯತೆ ಇತ್ತು. ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಎಚ್ ಎ ಎಲ್ ಕಂಪೌಂಡ್ ಒಳಗೆ ಬಿದ್ದಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv