Tag: ಮಿಲಿಟರಿ

  • ಯುದ್ಧದ ನಡುವೆಯೇ ದೆಹಲಿಗೆ ಬಂದಿಳಿದ ರಷ್ಯಾ ವಿದೇಶಾಂಗ ಸಚಿವ

    ಯುದ್ಧದ ನಡುವೆಯೇ ದೆಹಲಿಗೆ ಬಂದಿಳಿದ ರಷ್ಯಾ ವಿದೇಶಾಂಗ ಸಚಿವ

    ನವದೆಹಲಿ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ತಿಂಗಳು ಉಕ್ರೇನ್ ಮೇಲೆ ರಷ್ಯಾ ಆಕ್ರಮಣವನ್ನು ಆರಂಭಿಸಿದ ನಂತರ ಇದು ಭಾರತಕ್ಕೆ ಅವರ ಮೊದಲ ಪ್ರವಾಸವಾಗಿದೆ.

    ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಸ್ವಾಗತಿಸುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಗ ಅಳುತ್ತಿದ್ದರೂ ನನ್ನ ಮೇಲೆ ಅತ್ಯಾಚಾರ ಮಾಡಿದ್ರು- ಉಕ್ರೇನ್ ಮಹಿಳೆ

    RUSSIA

    ಲಾವ್ರೊವ್ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾರಿಯಾ ಜಖರೋವಾ ತಿಳಿಸಿತ್ತು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೊರಡಿಸಿರುವ ಲಾವ್ರೊವ್ ಅವರ ಭೇಟಿಯ ಮಾಧ್ಯಮ ಪ್ರಕಟಣೆಯಲ್ಲಿ ರಷ್ಯಾದ ವಿದೇಶಾಂಗ ಸಚಿವರು ಮತ್ತು ಪ್ರಧಾನಿ ನಡುವಿನ ಯಾವುದೇ ಸಭೆಯನ್ನು ಉಲ್ಲೇಖಿಸಿಲ್ಲ ಎನ್ನಲಾಗಿದೆ.

    ಮಾತುಕತೆಯ ಸಿದ್ಧತೆಗಳ ಬಗ್ಗೆ ತಿಳಿದಿರುವ ಮೂಲಗಳು, ರಷ್ಯಾದಿಂದ ವಿವಿಧ ಮಿಲಿಟರಿ ಯಂತ್ರಾಂಶಗಳು ಮತ್ತು S-400 ಕ್ಷಿಪಣಿ ವ್ಯವಸ್ಥೆಗಳ ಘಟಕಗಳನ್ನು ಸಮಯೋಚಿತವಾಗಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಒತ್ತಡ ಹೇರುವ ಸಾಧ್ಯತೆಯಿದೆ ಎಂದು ಹೇಳಿವೆ. ಇದನ್ನೂ ಓದಿ: ಪ್ಲುಟೋದಲ್ಲಿ ಹೊಸ ವಿಸ್ಮಯ – ಸೌರವ್ಯೂಹದಲ್ಲಿ ಎಲ್ಲೂ ಕಾಣಿಸದ ಮಂಜಿನ ಜ್ವಾಲಾಮುಖಿಯ ಸುಳಿವು 

    ರಷ್ಯಾ ವಿದೇಶಾಂಗ ಸಚಿವರು ಎರಡು ದಿನಗಳ ಚೀನಾ ಪ್ರವಾಸ ಮುಗಿಸಿ ಭಾರತಕ್ಕೆ ಆಗಮಿಸಿದ್ದಾರೆ. ಉಕ್ರೇನ್ ಜೊತೆಗಿನ ಸಂಘರ್ಷವನ್ನು ರಾಜತಾಂತ್ರಿಕತೆ ಮತ್ತು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಲು ಭಾರತ, ರಷ್ಯಾವನ್ನು ಒತ್ತಾಯಿಸುತ್ತಿದೆ.

    ಭಾರತ ಇಲ್ಲಿಯವರೆಗೆ ಉಕ್ರೇನ್‌ನ ಆಕ್ರಮಣಕ್ಕಾಗಿ ರಷ್ಯಾವನ್ನು ಟೀಕಿಸಿಲ್ಲ ಮತ್ತು ರಷ್ಯಾದ ಆಕ್ರಮಣವನ್ನು ಖಂಡಿಸುವಲ್ಲಿ ವಿಶ್ವಸಂಸ್ಥೆಯ ವೇದಿಕೆಗಳಲ್ಲಿ ಮತದಾನದಿಂದ ದೂರವಿತ್ತು. ಉಕ್ರೇನ್‌ನಲ್ಲಿನ ಮಾನವೀಯ ಬಿಕ್ಕಟಿನ ಕುರಿತು ರಷ್ಯಾ ನಿರ್ಣಯ ಮಂಡಿಸಿದಾಗ ಭಾರತವೂ ದೂರವಿತ್ತು. ಇದು ಸಂಘರ್ಷದ ಬಗ್ಗೆ ಅದರ ತಟಸ್ಥ ಸ್ಥಾನವನ್ನು ಪ್ರತಿಬಿಂಬಿಸುತ್ತದೆ. ಕಳೆದ ವಾರ ಜೈಶಂಕರ್ ಸಂಸತ್ತಿನಲ್ಲಿ ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವು ಸ್ಥಿರವಾಗಿದೆ ಮತ್ತು ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು.

     

  • ಉಕ್ರೇನ್‌ನಲ್ಲಿ ಸಂಪೂರ್ಣ ಮಿಲಿಟರಿ ಕಾರ್ಯಾಚರಣೆ ಕಡಿತಗೊಳಿಸಲು ರಷ್ಯಾ ನಿರ್ಧಾರ

    ಉಕ್ರೇನ್‌ನಲ್ಲಿ ಸಂಪೂರ್ಣ ಮಿಲಿಟರಿ ಕಾರ್ಯಾಚರಣೆ ಕಡಿತಗೊಳಿಸಲು ರಷ್ಯಾ ನಿರ್ಧಾರ

    ಇಸ್ತಾಂಬುಲ್: ಉಕ್ರೇನ್‌ನ ಕೀವ್‌ ಮತ್ತು ಚೆರ್ನಿಹಿವ್‌ ಮೇಲೆ ಕೇಂದ್ರೀಕರಿಸಿದ್ದ ಸಂಪೂರ್ಣ ಮಿಲಿಟರಿ ಕಾರ್ಯಾಚರಣೆಯನ್ನು ಕಡಿಮೆಗೊಳಿಸುವುದಾಗಿ ರಷ್ಯಾ ತಿಳಿಸಿದೆ.

    ಇಸ್ತಾಂಬುಲ್‌ ರಷ್ಯಾ ಮತ್ತು ಉಕ್ರೇನಿಯನ್ ಸಮಾಲೋಚನಾ ತಂಡಗಳ ನಡುವಿನ ಮಂಗಳವಾರ ʼಅರ್ಥಪೂರ್ಣʼ ಮಾತುಕತೆ ನಡೆಯಿತು. ಈ ವೇಳೆ ರಷ್ಯಾ ಮಹತ್ವದ ನಿರ್ಧಾರವನ್ನು ತಿಳಿಸಿದ್ದು, ಯುದ್ಧ ಅಂತ್ಯವಾಗುವ ಸೂಚನೆ ಸಿಕ್ಕಿದೆ. ಇದನ್ನೂ ಓದಿ: ಮಗ ಅಳುತ್ತಿದ್ದರೂ ನನ್ನ ಮೇಲೆ ಅತ್ಯಾಚಾರ ಮಾಡಿದ್ರು- ಉಕ್ರೇನ್ ಮಹಿಳೆ

    ಪರಸ್ಪರ ನಂಬಿಕೆ ಹೆಚ್ಚಿಸಲು, ಹೆಚ್ಚಿನ ಮಾತುಕತೆಗೆ ಪೂರಕ ವಾತಾವರಣ ಸೃಷ್ಟಿಸಲು, ಒಪ್ಪಂದಕ್ಕೆ ಸಹಿ ಮಾಡುವ ಅಂತಿಮ ಗುರಿಯನ್ನು ಸಾಧಿಸಲು ಕೀವ್‌ ಮತ್ತು ಚೆರ್ನಿಹಿವ್ ಭಾಗಗಳಲ್ಲಿ ಮಿಲಿಟರಿ ಚಟುವಟಿಕೆಯನ್ನು ಆಮೂಲಾಗ್ರವಾಗಿ ಕಡಿಮೆ ಮಾಡಲು ನಿರ್ಧರಿಸಲಾಗಿದೆ ಎಂದು ರಷ್ಯಾದ ಉಪ ರಕ್ಷಣಾ ಸಚಿವ ಅಲೆಕ್ಸಾಂಡರ್ ಫೋಮಿನ್ ತಿಳಿಸಿದ್ದಾರೆ.

    ಉಕ್ರೇನ್‌ನ ತಟಸ್ಥತೆ ಮತ್ತು ಪರಮಾಣು ಹೊಂದದ ಸ್ಥಿತಿಯ ಕುರಿತು ಒಪ್ಪಂದ ಮಾಡಿಕೊಳ್ಳುವ ಮಾತುಕತೆ ಪ್ರಾಯೋಗಿಕ ಹಂತಕ್ಕೆ ತಲುಪಿದೆ. ಅಂದರೆ ಮಿಲಿಟರಿ ಮೈತ್ರಿ ಅಥವಾ ಆತಿಥೇಯ ನೆಲೆಗಳನ್ನು ಸೇರುವುದಿಲ್ಲವೆಂದು ಉಕ್ರೇನ್‌ ಸಮಾಲೋಚಕರು ತಿಳಿಸಿದ್ದಾರೆ ಎಂದು ಅವರು ಫೋಮಿನ್ ಸ್ಪಷ್ಟಪಡಿಸಿದ್ದಾರೆ. ಇದು ʼಅರ್ಥಪೂರ್ಣʼ ಮಾತುಕತೆ ಎಂದು ರಷ್ಯಾದ ಸಮಾಲೋಚಕರು ಬಣ್ಣಿಸಿದ್ದಾರೆ. ಇದನ್ನೂ ಓದಿ: ನಮ್ಮ ದೇಶದ ಅಸ್ತಿತ್ವಕ್ಕೆ ಧಕ್ಕೆ ಬಂದರೆ ಮಾತ್ರವೇ ಪರಮಾಣು ಶಸ್ತ್ರಾಸ್ತ್ರ ಬಳಕೆ: ರಷ್ಯಾ

    ಮುಖ್ಯ ಸಂಧಾನಕಾರ ವ್ಲಾಡಿಮಿರ್ ಮೆಡಿನ್‌ಸ್ಕಿ ಅವರು, ಉಕ್ರೇನ್ ಪ್ರಸ್ತಾಪಗಳನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದಿಡಲಾಗುವುದು ಎಂದು ಹೇಳಿದರು.

    ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಫೆ.24 ರಂದು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಸೇನಾ ಕಾರ್ಯಾಚರಣೆಯನ್ನು ಘೋಷಿಸಿದ್ದರು. ಅಂದಿನಿಂದ ರಷ್ಯಾ ಪಡೆಗಳು ಉಕ್ರೇನ್ ಮೇಲೆ ಆಕ್ರಮಣವನ್ನು ಮುಂದುವರಿಸಿದ್ದು, ಯೋಧರು, ನಾಗರಿಕರು ಸೇರಿದಂತೆ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಝೆಲೆನ್ಸ್ಕಿ ಮೇಲೆ ಮತ್ತೊಮ್ಮೆ ದಾಳಿಗೆ ಪ್ರಯತ್ನ – ವಿಫಲವಾದ ರಷ್ಯಾ

  • ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್‌

    ರಷ್ಯಾದ 6 ಮಿಲಿಟರಿ ವಿಮಾನ ಪತನ – 50 ಸೈನಿಕರನ್ನು ಹತ್ಯೆಗೈದ ಉಕ್ರೇನ್‌

    ಕೈವ್:‌ ತನ್ನ ಮೇಲೆ ಯುದ್ಧ ಸಾರಿರುವ ರಷ್ಯಾದ 6 ಮಿಲಿಟರಿ ಯುದ್ಧ ವಿಮಾನಗಳನ್ನು ನಮ್ಮ ಸೇನೆ ಹೊಡೆದುರುಳಿಸಿದೆ. ಅಲ್ಲದೇ 50 ರಷ್ಯಾ ಸೈನಿಕರನ್ನು ಹತ್ಯೆಗೈಯಲಾಗಿದೆ ಎಂದು ಉಕ್ರೇನ್‌ ತಿಳಿಸಿದೆ.

    ಉಕ್ರೇನ್‌ನ ರಾಜಧಾನಿ ಕೈವ್‌ನ ವಿಮಾನ ನಿಲ್ದಾಣದಲ್ಲಿ ಗುಂಡಿನ ಸದ್ದು ಮೊರೆದಿದೆ. ಪರಿಣಾಮವಾಗಿ ತವರು ದೇಶಗಳಿಗೆ ಮರಳಲು ಮುಂದಾಗಿದ್ದ ನಾಗರಿಕರಿಗೆ ಆತಂಕ ಎದುರಾಗಿದೆ. ಇದನ್ನೂ ಓದಿ: Russia-Ukraine crisis: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಉಕ್ರೇನ್ ಮನವಿ

    ರಷ್ಯಾದ ಭೂಸೇನಾ ಪಡೆಗಳು ನಾನಾ ಕಡೆಗಳಿಂದ ಉಕ್ರೇನ್‌ ಗಡಿ ಭಾಗಗಳನ್ನು ಪ್ರವೇಶಿಸಿವೆ. ಈ ವೇಳೆ ರಷ್ಯಾದ 50 ಆಕ್ರಮಣಕಾರರನ್ನು ಹತ್ಯೆಗೈದಿರುವುದಾಗಿ ಉಕ್ರೇನ್‌ ತಿಳಿಸಿದೆ.

    ಕ್ರಿಮಿಯನ್ ಗಡಿಯಲ್ಲಿ ನಡೆದ ಶೆಲ್ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ನ ಗಡಿ ಸಿಬ್ಬಂದಿ ಹೇಳಿದ್ದಾರೆ. ಇದು ರಷ್ಯಾ ಆಕ್ರಮಣದ ಅಧಿಕೃತವಾಗಿ ದೃಢಪಡಿಸಿದ ಮಿಲಿಟರಿ ಮೊದಲ ಸಾವಾಗಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

    ದೇಶದ ಪೂರ್ವದಲ್ಲಿ ಆರು ರಷ್ಯಾದ ವಿಮಾನಗಳು ಮತ್ತು ಹೆಲಿಕಾಪ್ಟರ್ ಅನ್ನು ಉರುಳಿಸಲಾಗಿದೆ ಎಂದು ಉಕ್ರೇನ್ ಹೇಳಿಕೊಂಡಿದೆ. ಜಂಟಿ ಫೋರ್ಸ್ ಕಮಾಂಡ್ ಪ್ರಕಾರ, ಇಂದು ಜಂಟಿ ಪಡೆಗಳ ಕಾರ್ಯಾಚರಣೆಯ ಪ್ರದೇಶದಲ್ಲಿ ರಷ್ಯಾ ಆಕ್ರಮಣಕಾರರ ಐದು ವಿಮಾನಗಳು ಮತ್ತು ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಸೇನಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

    ಉಕ್ರೇನ್‌ನ ರಾಜಧಾನಿ ಕೈವ್‌ ಬಳಿಯಿದ್ದ ಮಿಲಿಟರಿ ಹೆಡ್‌ಕ್ವಾಟ್ರಸ್‌, ಏರ್‌ಪೋರ್ಟ್‌, ಸೇನಾನೆಲೆಗಳ ಮೇಲೆ ದಾಳಿ ನಡೆಸಿದೆ ಎಂದು ಉಕ್ರೇನ್‌ನ ಉಪ ಆಂತರಿಕ ಸಚಿವ ಆ್ಯಂಥೊನಿ ಗೆರಾಶ್ಚೆಂಕೊ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್

  • ಉಕ್ರೇನ್ ವಿರುದ್ಧ ಯುದ್ಧ: ಪುಟಿನ್ ಅಧಿಕೃತ ಘೋಷಣೆ

    ಉಕ್ರೇನ್ ವಿರುದ್ಧ ಯುದ್ಧ: ಪುಟಿನ್ ಅಧಿಕೃತ ಘೋಷಣೆ

    ಮಾಸ್ಕೋ: ರಷ್ಯಾ ಮತ್ತು ಉಕ್ರೇನ್‌ ನಡುವಿನ ಬಿಕ್ಕಟ್ಟು ಮತ್ತಷ್ಟು ಜಟಿಲಗೊಂಡಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿಲ್‌, ಉಕ್ರೇನ್‌ ಮೇಲೆ ಯುದ್ಧವನ್ನು ಘೋಷಿಸಿದ್ದಾರೆ.

    ಉಕ್ರೇನ್‌ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್‌ ಗುರುವಾರ ಸೂಚನೆ ನೀಡಿದ್ದಾರೆ. ಪುಟಿನ್‌ ದೂರದರ್ಶನದಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದನ್ನೂ ಓದಿ: ಅಪಪ್ರಚಾರ ಮಾಡಿದವರು ಕೊನೆಗೆ ಲಸಿಕೆ ಹಾಕಿಸಿಕೊಂಡರು: ಅಖಿಲೇಶ್‍ಗೆ ಮೋದಿ ಟಾಂಗ್

    ನಾನು ಮಿಲಿಟರಿ ಕಾರ್ಯಾಚರಣೆಯ ನಿರ್ಧಾರವನ್ನು ಮಾಡಿದ್ದೇನೆ ಎಂದು ಹೇಳಿರುವ ಅವರು, ಈ ವಿಚಾರವಾಗಿ ಯಾರಾದರೂ ಮಧ್ಯಪ್ರವೇಶಿಸಿದರೆ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಉಕ್ರೇನ್‌ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಬೇಕು ಎಂದು ಸಲಹೆ ನೀಡಿದ್ದಾರೆ.

    ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪುಟಿನ್ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಆದರೆ ʻಯಾವುದೇ ಉತ್ತರವಿಲ್ಲ, ಕೇವಲ ಮೌನʼ ಎಂದು ತಿಳಿಸಿದ್ದಾರೆ. ಮಾಸ್ಕೋ ಈಗ ಉಕ್ರೇನ್‌ನ ಗಡಿಯ ಬಳಿ ಸುಮಾರು 2,00,000 ಸೈನಿಕರನ್ನು ನಿಯೋಜಿಸಲಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: 200 ಶಾಸಕರಿಗೆ iPhone ಗಿಫ್ಟ್ ಕೊಟ್ಟ ರಾಜಸ್ಥಾನ ಸರ್ಕಾರ – ವಾಪಸ್ ಕೊಟ್ಟ ಬಿಜೆಪಿ

    ರಷ್ಯಾ ಬಂಡುಕೋರರ ಹಿಡಿತದಲ್ಲಿರುವ ಪೂರ್ವ ಉಕ್ರೇನ್‌ನ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ರಷ್ಯಾ ಮುಂದಾಗಿದೆ. ಆದರೆ ಇದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದೆ. ಸಮಸ್ಯೆ ಇತ್ಯರ್ಥಪಡಿಸಿಕೊಳ್ಳಲು ರಷ್ಯಾ ಮತ್ತು ಅಮೆರಿಕ ಅಧ್ಯಕ್ಷರ ನಡುವಿನ ಮಾತುಕತೆಯೂ ವಿಫಲವಾಯಿತು. ಇದಾದ ಬಳಿಕ ಈಗ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಸಾರಿದೆ.

  • ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಭಾರತಕ್ಕೆ ಇರುವ ಸವಾಲುಗಳೇನು?

    ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಭಾರತಕ್ಕೆ ಇರುವ ಸವಾಲುಗಳೇನು?

    ನವದೆಹಲಿ: ಅಫ್ಘಾನಿಸ್ತಾನದ ಆಡಳಿತ ಮತ್ತೆ ತಾಲಿಬಾನ್ ಉಗ್ರರ ಕೈಗೆ ಹೋಗಿರುವುದು ಭಾರತದ ಆತಂಕಕ್ಕೆ ಕಾರಣವಾಗಿದೆ.

    ಈ ಹಿಂದಿನ ತಾಲಿಬಾನ್‍ಗಳ ರೀತಿಯಲ್ಲ. ನಾವು ಬದಲಾಗಿದ್ದೇವೆ ಎಂದು ಹೇಳಿದ್ದರೂ ಅವರು ಈ ಹಿಂದೆ ಮಾಡಿರುವ ದುಷ್ಕೃತ್ಯಗಳನ್ನು ನಾವು ಮರೆಯುವಂತಿಲ್ಲ. ಕಂದಹಾರ್ ವಿಮಾನ ಅಪಹರಣ ಪ್ರಕರಣ ಭಾರತದ ಕರಾಳ ನೆನಪುಗಳಲ್ಲಿ ಒಂದು.

    ಅಪಹರಣ ಸುಖಾಂತ್ಯವಾದರೂ ಕುಖ್ಯಾತ ಭಯೋತ್ಪಾದಕ ಮಸೂದ್ ಅಜರ್ ನನ್ನು ಬಿಡುಗಡೆಗೊಳಿಸಬೇಕಾಗಿತ್ತು. ಈಗ ಮತ್ತೆ ಭಾರತಕ್ಕೆ ಅಫ್ಘಾನ್ ನೆಲದಲ್ಲಿನ ಬೆಳವಣಿಗಳು ಆತಂಕಕಾರಿಯಾಗಿ ಕಾಡುತ್ತಿವೆ. ಪಾಕಿಸ್ತಾನ ನೆಲದಿಂದ ಎಸಗಲಾಗುತ್ತಿರುವ ಭಾರತ ವಿರೋಧಿ ಭಯೋತ್ಪಾದಕ ಕೃತ್ಯಗಳ ನಡುವೆ ಈಗ ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ಹಿಡಿತಕ್ಕೆ ಪಡೆದಿರುವುದು ಅಪಾಯಕಾರಿ ಬೆಳವಣಿಗೆ.

    ಕತಾರ್ ರಾಜಧಾನಿ ದೋಹಾದಲ್ಲಿ ತಾಲಿಬಾನ್-ಅಮೆರಿಕ ಜೊತೆಗೆ ಹಲವು ತಿಂಗಳಿಂದ ಸಂಧಾನ ಮಾತುಕತೆ ನಡೆಯುತ್ತಿದೆ. ಇದೇ ವೇಳೆ ಭಾರತ ಕೂಡಾ ತಾಲಿಬಾನಿಗಳ ಜೊತೆಗೆ ಮಾತುಕತೆ ನಡೆಸಿರಬಹುದು ಎಂದು ಕತಾರ್ ಜೂನ್‍ನಲ್ಲಿ ಹೇಳಿಕೆ ನೀಡಿತ್ತು. ಜೂನ್‍ನಲ್ಲಿ ಎರಡು ಬಾರಿ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಕತಾರ್‍ಗೆ ಭೇಟಿ ನೀಡಿದ್ದರು. ಆದರೆ ತಾಲಿಬಾನ್ ಜೊತೆಗಿನ ಮಾತುಕತೆ ಬಗ್ಗೆ ಭಾರತ ಸರ್ಕಾರ ಎಲ್ಲೂ ಅಧಿಕೃತ ಹೇಳಿಕೆ ನೀಡಿಲ್ಲ.

    ಭಾರತಕ್ಕೆ ಇರುವ ಸವಾಲುಗಳು:
    ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಆರಂಭಗೊಂಡಿದ್ದು ಪಾಕಿಸ್ತಾನ-ಅಫ್ಘಾನ್ ಗಡಿಯಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿದೆ. ಲಷ್ಕರ್ ಇ ತೋಯ್ಬಾ, ಇಂಡಿಯನ್ ಮುಜಾಹಿದ್ದೀನ್ ಇನ್ನಷ್ಟು ಕೃತ್ಯಗಳಿಗೆ ಯತ್ನಿಸಬಹುದು. ಇದನ್ನೂ ಓದಿ: ತಾಲಿಬಾನ್ ಉಗ್ರರ ಸರ್ಕಾರಕ್ಕೆ ಪಾಕಿಸ್ತಾನ, ಚೀನಾ, ಇರಾನ್ ಬೆಂಬಲ

    ತಾಲಿಬಾನಿಗಳ ಆಡಳಿತದಲ್ಲಿ ಪಾಕಿಸ್ತಾನ ಮಿಲಿಟರಿ, ಗುಪ್ತಚರ ಸಂಸ್ಥೆ ಐಎಸ್‍ಐ ನೇರ ಹಸ್ತಕ್ಷೇಪವಿದೆ. ಈಗಾಗಲೇ ತಾಲಿಬಾನಿಗಳಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಲಿಬಾನಿಗಳ ಆಡಳಿತದಲ್ಲಿ ಪಾಕಿಸ್ತಾನ ಇನ್ನಷ್ಟು ಬಾಲ ಬಿಚ್ಚಲು ಯತ್ನಿಸಬಹುದು. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ತಾಲಿಬಾನಿಗಳ ಕೈವಶ ಬಳಿಕ ಅಫ್ಘಾನ್ ಬಗ್ಗೆ ಚೀನಾ ಆಸಕ್ತಿ ಹೆಚ್ಚಿಸಿಕೊಂಡಿದೆ. ಈಗಾಗಲೇ ತಾಲಿಬಾನ್ ಪರ ಸಾಫ್ಟ್ ಕಾರ್ನರ್ ತೋರಿಸಿರುವ ಚೀನಾ ರೈಲು, ಬೆಲ್ಟ್-ರೋಡ್ ಯೋಜನೆಗಳನ್ನು ಅಫ್ಘಾನಿಸ್ತಾನಕ್ಕೂ ವಿಸ್ತರಿಸುವ ಮೂಲಕ ಪ್ರಭಾವ ಬೀರಬಹುದು. ದಕ್ಷಿಣ ಏಷ್ಯಾದಲ್ಲಿ ಚೀನಾದ ಕುತಂತ್ರಗಳಿಗೆ ಅಫ್ಘಾನಿಸ್ತಾನವೂ ವೇದಿಕೆ ಆಗಬಹುದು.

  • ಉತ್ತರ ಕೊರಿಯಾದಲ್ಲಿ ಬ್ಲಾಕ್ ಟೀ ಬೆಲೆ 5,167 ರೂ., 1 ಕೆಜಿ ಬಾಳೆಹಣ್ಣಿಗೆ 3,336 ರೂ.

    ಉತ್ತರ ಕೊರಿಯಾದಲ್ಲಿ ಬ್ಲಾಕ್ ಟೀ ಬೆಲೆ 5,167 ರೂ., 1 ಕೆಜಿ ಬಾಳೆಹಣ್ಣಿಗೆ 3,336 ರೂ.

    – ಆಹಾರ ಸಮಸ್ಯೆಯಿಂದ ಜನ ಕಂಗಾಲು
    – ಕನಿಷ್ಟ 2 ಲೀಟರ್ ಮೂತ್ರ ಸಂಗ್ರಹಿಸಿ
    – ಕಿಮ್ ಜಾಂಗ್ ಉನ್ ಆದೇಶ

    ಪ್ಯಾನ್‍ಯಾಂಗ್: ಮಿಲಿಟರಿಯಲ್ಲಿ ಸೂಪರ್ ಪವರ್ ರಾಷ್ಟ್ರವಾಗಬೇಕು ಎಂದು ಕನಸು ಹೊತ್ತಿದ್ದ ಉತ್ತರ ಕೊರಿಯಾದಲ್ಲಿ ಈಗ ಭಾರೀ ಆಹಾರ ಸಮಸ್ಯೆ ಎದುರಾಗಿದೆ. ಎಷ್ಟು ಸಮಸ್ಯೆ ಎದುರಾಗಿದೆ ಎಂದರೆ ಬ್ಲಾಕ್ ಟೀ ಪ್ಯಾಕೆಟ್ ಬೆಲೆ 5,167 ರೂಪಾಯಿ ಆಗಿದ್ದರೆ ಒಂದು ಕೆಜಿ ಬಾಳೆಹಣ್ಣಿನ ಬೆಲೆ 3,336 ರೂ.ಗೆ ಏರಿಕೆಯಾಗಿದೆ.

    ಕಳೆದ ವಾರ ನಡೆಸಿದ ಸರ್ಕಾರದ ಸಭೆಯಲ್ಲಿ ಕೋವಿಡ್, ಚಂಡಮಾರುತ ಮತ್ತು ಪ್ರವಾಹದಿಂದಾಗಿ ದೇಶದಲ್ಲಿ ಆಹಾರ ಕೊರತೆಯಾಗುವ ಸಾಧ್ಯತೆ ಇದೆ ಉತ್ತರ ಕೊರಿಯಾ ಅಧ್ಯಕ್ಷ, ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಎಚ್ಚರಿಕೆ ನೀಡಿದ್ದರು.  ಈಗ ಆಹಾರ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ.

    ಸಮಸ್ಯೆ ಯಾಕೆ?
    ಮಿಲಿಟರಿಯಲ್ಲಿ ಪ್ರಭುತ್ವ ಸಾಧಿಸಲು ಅಣ್ವಸ್ತ್ರ ಮತ್ತು ಕ್ಷಿಪಣಿ ಪ್ರಯೋಗ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಹಲವು ದೇಶಗಳು ಉತ್ತರ ಕೊರಿಯಾ ಮೇಲೆ ನಿರ್ಬಂಧ ವಿಧಿಸಿದ್ದರಿಂದ ಮೊದಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿತ್ತು. ಈಗ ಕೋವಿಡ್‍ನಿಂದಾಗಿ ದೇಶದ ಗಡಿಯನ್ನು ಮುಚ್ಚಿದೆ. ರಫ್ತು ಮಾಡಲು ಉತ್ಪನ್ನಗಳ ಸಂಖ್ಯೆ ಕಡಿಮೆಯಾಗಿರುವ ಕಾರಣ ಆಮದು ಆಗುತ್ತಿಲ್ಲ. ಇದರಿಂದಾಗಿ ಆರ್ಥಿಕತೆಯ ಮೇಲೆ ಭಾರೀ ಹೊಡೆತ ಬಿದ್ದಿದೆ. ಇದನ್ನೂ ಓದಿ: ವಿಶ್ವಕ್ಕೆ ಕೊರೊನಾ ಬಂದರೂ ಉತ್ತರ ಕೊರಿಯಾಗೆ ಬಂದಿಲ್ಲ- ಪ್ರಜೆಗಳಿಗೆ ಕಿಮ್‌ ಧನ್ಯವಾದ

    ಕೃಷಿ ಬೀಜ, ರಸಗೊಬ್ಬರ ಕೂಡ ಚೀನಾದಿಂದ ಆಮದು ಆಗುತ್ತಿತ್ತು. ಕೊರೋನಾಗೂ ಮೊದಲು ಉತ್ತರ ಕೊರಿಯಾ ಚೀನಾದಿಂದ 500 ದಶಲಕ್ಷ ಡಾಲರ್ ಮೊತ್ತದಷ್ಟು ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿತ್ತು. ಇದೀಗ ಈ ಮೊತ್ತ ಕೇವಲ 2.5 ದಶಲಕ್ಷ ಡಾಲರ್ ಗೆ ಇಳಿದಿದೆ.

    ಆಹಾರ ಉತ್ಪನ್ನವೇ ದುಬಾರಿಯಾಗಿರುವ ಕಾರಣ ರಸಗೊಬ್ಬರ ಆಮದು ಅಥವಾ ಖರೀದಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಹೀಗಾಗಿ ರೈತರು ಪ್ರತಿನಿತ್ಯ ಕನಿಷ್ಠ 2 ಲೀಟರ್ ನಷ್ಟು  ತಮ್ಮ ಮೂತ್ರಗಳನ್ನು ಸಂಗ್ರಹಿಸಿ ರಸಗೊಬ್ಬರ ಉತ್ಪಾದಿಸಲು ನೆರವಾಗಬೇಕು ಎಂದು ಆದೇಶಿಸಲಾಗಿದೆ. ಇದನ್ನೂ ಓದಿ: ಉತ್ತರ ಕೊರಿಯಾ ಅಧ್ಯಕ್ಷನ ಹುಚ್ಚು ಅಣ್ವಸ್ತ್ರ ಪರೀಕ್ಷೆಗೆ 200 ಕಾರ್ಮಿಕರು ಬಲಿ

    ಅಣ್ವಸ್ತ್ರ, ಮಿಲಿಟರಿಗೆ ಹೆಚ್ಚಿನ ಹಣ ವಿನಿಯೋಗಿಸಿದ್ದ ಉತ್ತರ ಕೊರಿಯಾ ಆಹಾರ ಉತ್ಪಾದನೆಯತ್ತ ಗಮನ ಹರಿಸಿರಲಿಲ್ಲ. ಕಳೆದ ಪ್ರವಾಹ, ಬಿರುಗಾಳಿಯಿಂದ ಬೆಳೆಗಳು ನಾಶವಾಗಿತ್ತು. ಈ ಎಲ್ಲ ಕಾರಣಗಳಿಂದ ಈಗ ಉತ್ತರ ಕೊರಿಯಾದಲ್ಲಿ ಆಹಾರ ಕ್ಷಾಮ ಬಂದಿದೆ.

  • ಐಎಸ್‍ಡಿ ಕಾಲ್ ಕನ್ವರ್ಟ್ – ಇಬ್ಬರ ಬಂಧನ, 930 ಸಿಮ್ ವಶ

    ಐಎಸ್‍ಡಿ ಕಾಲ್ ಕನ್ವರ್ಟ್ – ಇಬ್ಬರ ಬಂಧನ, 930 ಸಿಮ್ ವಶ

    ಬೆಂಗಳೂರು: ಮಿಲಿಟರಿ ನೀಡಿದ ಮಾಹಿತಿ ಮೇರೆಗೆ ಬಹುದೊಡ್ಡ ಕಾರ್ಯಾಚರಣೆ ನಡೆಸಿರುವ ಸಿಸಿಬಿ ದೇಶದ ಭದ್ರತೆಗೆ ಸವಾಲೊಡ್ಡಿದ್ದ ಇಬ್ಬರು ನಟೋರಿಯಸ್ ವ್ಯಕ್ತಿಗಳನ್ನು ಬಂಧಿಸಿದೆ.

    ಇಬ್ರಾಹಿಮ್ ಮತ್ತು ಗೌತಮ್ ಬಂಧಿತ ಕೇರಳ ಮೂಲದ ಆರೋಪಿಗಳು. 30ಕ್ಕೂ ಹೆಚ್ಚು ಸಿಮ್ ಬಾಕ್ಸ್ ಗಳನ್ನು ಇಟ್ಟುಕೊಂಡು ಐಎಸ್‍ಡಿ ಳನ್ನ ಕನ್ವರ್ಟ್ ಮಾಡ್ತಿದ್ದರು. 10 ರೂಪಾಯಿ ಕಾಲ್ 10 ಪೈಸೆಗೆ ಕನ್ವರ್ಟ್ ಮಾಡಿರುವ ಬಗ್ಗೆ ಮಾಹಿತಿ ದೊರಕಿದ್ದು, ದೇಶದ ಭದ್ರತೆಗೆ ಬಹುದೊಡ್ಡ ಗಂಡಾಂತರ ತಂದಿದ್ದಾರಾ ಎಂಬುದರ ಬಗ್ಗೆ ತನಿಖೆ ನಡೆಸಲಾಗ್ತಿದೆ.

    ಕಾಲ್ ಕನ್ವರ್ಟ್ ಸಂಬಂಧ ಭಯೋತ್ಪಾದಕ ಕೃತ್ಯಗಳಿಗೆ ನೆರವಾಗುವ ಸಂಬಂಧ, ದೇಶದ ಹೊರಗಿನ ಉಗ್ರಗಾಮಿ ಗುಂಪುಗಳ ಜೊತೆ ಮಾತುಕತೆಗೆ ಸಹಕಾರಿ ಬಗ್ಗೆ ತನಿಖೆ ನಡೆಯುತ್ತಿದೆ. ಕಾಲ್ ಕನ್ವರ್ಟ್ ಬಗ್ಗೆ ಸಂಶಯ ಹೊಂದಿದ್ದ ಮಿಲಿಟರಿಯಿಂದ ಗುಪ್ತಚರ ಇಲಾಖೆಗೆ ಖಚಿತ ಮಾಹಿತಿ ಬಂದಿತ್ತು. ಇದನ್ನೂ ಓದಿ: ಭಯಕ್ಕೆ ಬಿದ್ದು ಭಾರತದ ವೆಬ್‌ಸೈಟ್‌ಗಳಿಗೆ ಕತ್ತರಿ ಹಾಕಿದ ಚೀನಾ

    ಈ ಸಂಬಂಧ ಈಗ ಇಬ್ಬರನ್ನು ಬಂಧಿಸಿದ್ದು ಮತ್ತೆ ಕೆಲವರ ಬಗ್ಗೆ ಹುಡುಕಾಟ ನಡೆಸುತ್ತಿದೆ. ಬಂಧಿತರಿಂದ 30 ಸಿಮ್ ಬಾಕ್ಸ್ ಸಾಧನ, 930 ಸಿಮ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.

    ಕಾಲ್ ಹೇಗೆ?
    ದುಬೈನಿಂದ ಕಾಲ್ ಗಳನ್ನು ಕನ್ವರ್ಟ್ ಮಾಡಿ ಕನೆಕ್ಟ್ ಮಾಡಲಾಗ್ತಿತ್ತು. ದುಬೈನಲ್ಲಿ ವಾಟ್ಸಪ್ ಕಾಲ್ ನಿಷೇಧಿಸಲಾಗಿದೆ. ಹೀಗಾಗಿ ಅಕ್ರಮವಾಗಿ ವಿಪಿಎನ್( ವರ್ಚುವಲ್ ಪ್ರೈವೇಟ್ ನೆಟ್ ವರ್ಕ್) ತಂತ್ರಜ್ಞಾನ ಬಳಸಿ ಕಾಲ್ ಕನ್ವರ್ಟ್ ಮಾಡಿ ಬೇರೆ ಬೇರೆ ದೇಶದಲ್ಲಿರುವವರಿಗೆ ಕರೆ ಮಾಡುತ್ತಿದ್ದರು.

    ವಿಪಿಎನ್ ಸಾಫ್ಟೇವರ್ ಅನ್ನು ಮೊಬೈಲಿನಲ್ಲಿ ಇನ್‍ಸ್ಟಾಲ್ ಮಾಡಿಕೊಂಡು ಕಾಲ್ ಮಾಡಿದಾಗ ಕಾಲ್ ಮಾಡಿದವರ ಲೋಕೆಷನ್ ಸೇರಿದಂತೆ ಯಾವುದೇ ಮಾಹಿತಿ ಸಿಗುವುದಿಲ್ಲ. ಕೆಲವು ದೇಶದಲ್ಲಿ ವಿಪಿಎನ್ ಬಳಸಲು ಅವಕಾಶವಿದೆ.ನಾವು ವಿಪಿಎನ್ ಬಳಸಿ ಕಾಲ್ ಮಾಡಿದಾಗ ಯಾವ ದೇಶದಲ್ಲಿ ಕಾನೂನು ಬದ್ಧವಿದೆ ಅಲ್ಲಿಗೆ ಕಾಲ್ ಕನೆಕ್ಟ್ ಆಗುತ್ತೆ.

     

    ಉದಾಹರಣೆಗೆ ಸಿಂಗಾಪುರದಲ್ಲಿ ಕಾನೂನು ಬದ್ಧ ಇದೆ. ಹೀಗಾಗಿ ನಾವು ಕರೆ ಮಾಡಿದಾಗ ಸಿಂಗಾಪುರ ಸರ್ವರ್ ಗೆ ಕನೆಕ್ಟ್ ಆಗಿ ನಂತರ ನಾವು ಯಾರಿಗೆ ಕಾಲ್ ಮಾಡುತ್ತೇವೋ ಅಲ್ಲಿಗೆ ಕನೆಕ್ಟ್ ಆಗುತ್ತದೆ. ದುದು ದುಬೈ ಸೇರಿದಂತೆ ಅನೇಕ ದೇಶಗಳಲ್ಲಿ ವಿಡಿಯೋ ಕಾಲ್ ಬ್ಯಾನ್ ಇದೆ. ಚೀನಾ, ಇರಾಕ್, ಉತ್ತರ ಕೊರಿಯಾ, ಓಮನ್, ರಷ್ಯಾ, ಯುಎಇ ಈ ದೇಶಗಳಲ್ಲಿ ವಿಪಿಎನ್ ಬ್ಯಾನ್ ಆಗಿದೆ. ಹೀಗಾಗಿ ಯಾವುದೇ ಕಾರಣಕ್ಕೂ ವಿಡಿಯೋ ಕಾಲ್ ಮಾಡುವಂತಿಲ್ಲ.

  • ಸ್ವಗ್ರಾಮಕ್ಕೆ ಆಗಮಿಸಿದ ಯೋಧ ಮಲ್ಲೇಶ್ ಪಾರ್ಥಿವ ಶರೀರ

    ಸ್ವಗ್ರಾಮಕ್ಕೆ ಆಗಮಿಸಿದ ಯೋಧ ಮಲ್ಲೇಶ್ ಪಾರ್ಥಿವ ಶರೀರ

    – ಸೇನಾ ಅವಧಿ ಮುಗಿದಿದ್ದರೂ ಸೇವೆಯ ಹಂಬಲ
    – ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

    ಹಾಸನ: ಅರುಣಾಚಲ ಪ್ರದೇಶದಲ್ಲಿ ಮಿಲಿಟರಿ ಸಾಮಗ್ರಿ ಸಾಗಿಸುವಾಗ ಗುಡ್ಡ ಕುಸಿದು ಸಾವನ್ನಪ್ಪಿದ ಭಾರತೀಯ ಯೋಧ ಮಲ್ಲೇಶ್ ಅವರ ಪಾರ್ಥಿವ ಶರೀರ ಹಾಸನದ ಸ್ವಗ್ರಾಮಕ್ಕೆ ಆಗಮಿಸಿದೆ. ಇದೀಗ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

    ಯೋಧ ಮಲ್ಲೇಶ್ ಅವರು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದವರು. ಇವರು ಅರುಣಾಚಲ ಪ್ರದೇಶದ ಬೆಟಾಲಿಯನ್ 18 ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಿಲಿಟರಿ ಸಾಮಗ್ರಿಗಳನ್ನು ಗಡಿ ಭಾಗಕ್ಕೆ ಸಾಗಿಸುವಾಗ ಗುಡ್ಡ ಕುಸಿದು ಮಲ್ಲೇಶ್ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಿಲಿಟರಿ ಆಸ್ಪತ್ರೆಗೆ ಸೇರಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.

    ಮಲ್ಲೇಗೌಡ ಹಾಗೂ ಪುಟ್ಟಮ್ಮ ಎಂಬವರ ಪುತ್ರರಾಗಿರುವ ಯೋಧ ಮಲ್ಲೇಶ್‍ಗೆ ಪತ್ನಿ ಪೂರ್ಣಿಮಾ ಹಾಗೂ ಋತ್ವಿಕ್, ಸಹನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಮಲ್ಲೇಶ್ ಸೇನೇ ಸೇವಾ ಅವಧಿ ಮುಗಿದಿದ್ದರೂ ದೇಶ ಸೇವೆ ಹಂಬಲದಲ್ಲಿ ಕೆಲಸ ಮುಂದುವರಿಸಿದ್ದರು.

    ಇಂದು ಸ್ವಗ್ರಾಮಕ್ಕೆ ಯೋಧ ಮಲ್ಲೇಶ್ ಪಾರ್ಥಿವ ಶರೀರ ಆಗಮಿಸಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

  • ವಿಶ್ವಸಂಸ್ಥೆಯ ಪ್ರತಿಷ್ಠಿತ ಮಿಲಿಟರಿ ಪ್ರಶಸ್ತಿಗೆ ಭಾರತದ ಸೇನಾ ಮೇಜರ್ ಆಯ್ಕೆ

    ವಿಶ್ವಸಂಸ್ಥೆಯ ಪ್ರತಿಷ್ಠಿತ ಮಿಲಿಟರಿ ಪ್ರಶಸ್ತಿಗೆ ಭಾರತದ ಸೇನಾ ಮೇಜರ್ ಆಯ್ಕೆ

    ನವದೆಹಲಿ: ವಿಶ್ವಸಂಸ್ಥೆ ನೀಡುವ ಪ್ರತಿಷ್ಠಿತ ಮಿಲಿಟರಿ ಪ್ರಶಸ್ತಿಗೆ ಭಾರತೀಯ ಸೇನಾ ಮೇಜರ್ ಸುಮನ್ ಗವಾನಿ ಆಯ್ಕೆ ಆಗಿದ್ದಾರೆ.

    ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಿಂಗ ಸಮಾನತೆಗೆ ಹೋರಾಟ ನಡೆಸಿದ್ದಕ್ಕೆ ಸುಮನ್ ಗವಾನಿ ಮತ್ತು ಬ್ರೆಜಿಲಿನ ನೌಕಾಪಡೆ ಅಧಿಕಾರಿ ಕಾರ್ಲಾ ಮಾಂಟೆರೋ ಡಿ ಕ್ಯಾಸ್ಟ್ರೊ ಅರೌಜೊ ಅವರನ್ನು ಮಿಲಿಟರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಮೂಲಕ ಈ ಪ್ರಶಸ್ತಿಗೆ ಭಾಜನರಾದ ಮೊದಲ ಭಾರತದ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಸುಮನ್ ಗವಾನಿ ಪಾತ್ರರಾಗಿದ್ದಾರೆ.

    ಈ ಇಬ್ಬರು ಮಹಿಳಾ ಶಾಂತಿಪಾಲಕರು ಪ್ರಭಾವಿ ಮಾದರಿ ವ್ಯಕ್ತಿಗಳೆಂದು ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಇಬ್ಬರು ಮಹಿಳೆಯರು ರೋಲ್ ಮಾಡೆಲ್‍ಗಳು. ತಮ್ಮ ಉತ್ತಮ ಕೆಲಸದಿಂದ ಸಮುದಾಯದ ಏಳಿಗೆಗೆ ಶ್ರಮಿಸಿಸಿದ್ದಾರೆ. ಇವರ ಈ ಸಾಧನೆ ಇತರರಿಗೆ ಪ್ರೇರಣೆಯಾಗಲಿ ಎಂದು ಗುಟೆರಸ್ ಹೇಳಿದ್ದಾರೆ.

    ಲಿಂಗ ಸಮಾನತೆಗೆ ಹೋರಾಟ ನಡೆಸಿದವರಿಗೆ ನೀಡಲಾಗುವ ಈ ಪ್ರಶಸ್ತಿಯಲ್ಲಿ 2016ರಲ್ಲಿ ಸ್ಥಾಪಿಸಲಾಗಿದ್ದು, ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ ಆಗಿದ್ದಾರೆ.

    ಪ್ರಶಸ್ತಿ ಯಾಕೆ?
    ಸುಮನ್ ಗವಾನಿ ದಕ್ಷಿಣ ಸುಡಾನಿನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ 230 ಸೇನಾ ವೀಕ್ಷಕರಿಗೆ ಲೈಂಗಿಕ ದೌರ್ಜನ್ಯ ಮತ್ತು ಸಂಘರ್ಷ ವಿಚಾರಕ್ಕೆ ಮಾರ್ಗದರ್ಶನ ನೀಡಿದ್ದರು. ಅಷ್ಟೇ ಅಲ್ಲದೇ ಮಹಿಳಾ ಸೇನಾ ವೀಕ್ಷಕರ ಸಂಖ್ಯೆ ಹೆಚ್ಚಿಸುವಲ್ಲಿ ಇವರು ಮುಖ್ಯ ಪಾತ್ರವಹಿಸಿದ್ದರು.

    ಆಫಿಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಪದವಿ ಪಡೆದ ಬಳಿಕ 2011ರಲ್ಲಿ ಸುಮನ್ ಗವಾನಿ ಭಾರತೀಯ ಸೇನೆಯನ್ನು ಸೇರಿದ್ದಾರೆ. ಸುಮನ್ ಗವಾನಿ ಅವರು ಮಿಲಿಟರಿ ಕಾಲೇಜಿನಲ್ಲಿ ಟೆಲಿಕಮ್ಯೂನಿಕೇಶನ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

  • ‘ಟೂರ್ ಆಫ್ ಡ್ಯೂಟಿ’ ಮಾಡಿದವರಿಗೆ ನಮ್ಮ ಸಂಸ್ಥೆಯಲ್ಲಿ ಉದ್ಯೋಗ – ಆನಂದ್ ಮಹೀಂದ್ರಾ

    ‘ಟೂರ್ ಆಫ್ ಡ್ಯೂಟಿ’ ಮಾಡಿದವರಿಗೆ ನಮ್ಮ ಸಂಸ್ಥೆಯಲ್ಲಿ ಉದ್ಯೋಗ – ಆನಂದ್ ಮಹೀಂದ್ರಾ

    ನವದೆಹಲಿ: ಭಾರತೀಯ ಸೇನೆಯ ‘ಟೂರ್ ಆಫ್ ಡ್ಯೂಟಿ’ ಅಡಿ ಕರ್ತವ್ಯ ನಿರ್ವಹಿಸಿದ ಯೋಧರಿಗೆ ನಮ್ಮ ಸಂಸ್ಥೆಯಲ್ಲಿ ಉದ್ಯೋಗ ನೀಡುವುದಾಗಿ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಿಳಿಸಿದ್ದಾರೆ.

    ಟೂರ್ ಆಫ್ ಡ್ಯೂಟಿ ಪ್ರಸ್ತಾಪವನ್ನು ಆನಂದ್ ಮಹೀಂದ್ರಾ ಶ್ಲಾಘಿಸಿದ್ದಾರೆ. ಈ ಸಂಬಂಧ ಸೇನೆಗೆ ಇಮೇಲ್ ಮಾಡಿರುವ ಅವರು, “ಕೆಲ ದಿನಗಳ ಹಿಂದೆ ಟೂರ್ ಆಫ್ ಡ್ಯೂಟಿ ಬಗ್ಗೆ ತಿಲಿಯಿತು. ಮಿಲಿಟರಿ ತರಬೇತಿ ಯುವಕರಿಗೆ ನೀಡುವುದು ಬಹಳ ಸಹಕಾರಿ. ಮಿಲಿಟರಿ ಮಾನದಂಡದ ಪ್ರಕಾರ ಅವರು ಆಯ್ಕೆ ಆಗುವ ಕಾರಣ ಆ ವ್ಯಕ್ತಿಗಳನ್ನು ನಮ್ಮ ಕಂಪನಿಯಲ್ಲಿ ಸಂತೋಷದಿಂದ ಸ್ವೀಕರಿಸುತ್ತೇವೆ” ಬರೆದಿದ್ದಾರೆ.

    ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಯುವ ಜನತೆಯಲ್ಲಿರುತ್ತದೆ. ಆದರೆ ಯಾವುದೋ ಕಾರಣದಿಂದಾಗಿ ಈ ಆಸೆ ಈಡೇರುವುದಿಲ್ಲ. ಆದರೆ ಈಗ 3 ವರ್ಷಗಳ ಕಾಲ ತಾತ್ಕಾಲಿಕ ಉದ್ಯೋಗ ನೀಡುವ ಬಗ್ಗೆ ಭಾರತೀಯ ಸೇನೆ ಗಂಭೀರ ಚಿಂತನೆ ನಡೆಸಿದೆ.

    ಮಿಲಿಟರಿ ಸೇರಿದರೆ ನಿವೃತ್ತಿಯಾಗುವರೆಗೆ ಕರ್ತವ್ಯ ಮಾಡಬೇಕಾಗುತ್ತದೆ. ಆದರೆ ಈಗ ಮೂರು ವರ್ಷಗಳ ಕಾಲ `ಟೂರ್ ಆಫ್ ಡ್ಯೂಟಿ’ ಹೆಸರಿನಲ್ಲಿ ಯುವಜನತೆಗೆ ಸೇನೆಯಲ್ಲಿ ಸೇವೆ ಸಲ್ಲಿಸಲು ಅನುಮತಿ ನೀಡಲು ಮುಂದಾಗಿದೆ. ಸೇನೆಗೆ ಸೇರುವವರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಅವರನ್ನು ಉತ್ತೇಜಿಸಲು ಈ ಯೋಜನೆಗೆ ಕೈ ಹಾಕಿದೆ.

    ಒಂದು ವೇಳೆ ಈ ಪ್ರಸ್ತಾಪಕ್ಕೆ ಅನುಮತಿ ಸಿಕ್ಕರೆ ಆರಂಭದಲ್ಲಿ 100 ಅಧಿಕಾರಿಗಳು ಮತ್ತು 1 ಸಾವಿರ ಸೈನಿಕರ ನೇಮಕವಾಗಲಿದೆ. ಈ ಸಂಬಂಧ ಸೇನೆಯ ವಕ್ತಾರ ಕರ್ನಲ್ ಅಮನ್ ಆನಂದ್ ಪ್ರತಿಕ್ರಿಯಿಸಿ, ವಿವಿಧ ಸೇನಾ ಕಮಾಂಡ್ ಗಳ ಪ್ರತಿಕ್ರಿಯೆ ಪಡೆಯಲಾಗಿದೆ. ಟೂರ್ ಆಫ್ ಡ್ಯೂಟಿಯನ್ನು ಪ್ರಯೋಗಿಕವಾಗಿ ಆರಂಭಿಸಲಾಗುತ್ತಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನೇಮಕವಾಗಲಿರುವ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

    26/ 27 ವಯಸ್ಸಿನ ಯುವಜನತೆಗೆ ತರಬೇತಿ ನೀಡಿ ಉದ್ಯೋಗ ನೀಡಿದಾಗ ತಾತ್ಕಲಿಕವಾಗಿ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಇಲ್ಲಿ ಸೇವೆ ಸಲ್ಲಿಸಿದ ಬಳಿಕ ಪ್ರಮಾಣಪತ್ರ ನೀಡಲಾಗುತ್ತದೆ. ಒಂದು ವೇಳೆ ಸೇನೆಯಲ್ಲಿ ಮುಂದುವರಿಯಲು ಆಸಕ್ತಿ ತೋರಿಸಿದರೆ ಅವರನ್ನು ಮುಂದುವರಿಸಲಾಗುತ್ತದೆ. ಟೂರ್ ಆಫ್ ಡ್ಯೂಟಿಯನ್ನು ಪೂರ್ಣಗೊಂಡ ಬಳಿಕ ಆ ಸೈನಿಕರು ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರದಲ್ಲಿ ಅವರ ಇಷ್ಟದ ಉದ್ಯೋಗಕ್ಕೆ ಸೇರಬಹುದು ಎಂಬ ನಂಬಿಕೆಯನ್ನು ಸೇನೆ ಇಟ್ಟುಕೊಂಡಿದೆ.

    ಯುವಜನತೆಗೆ ಸೇನೆ ಸೇರಬೇಕೆಂಬ ಆಸೆ ಇರುತ್ತದೆ. ಆದರೆ ಪೂರ್ಣಾವಧಿಗೆ ಸೇರಬೇಕೆಂಬ ಆಸೆ ಇರುವುದಿಲ್ಲ. ಸೇನೆಯ ಬಗ್ಗೆ ತಿಳಿದುಕೊಳ್ಳಲು, ರಾಷ್ಟ್ರ ಭಕ್ತಿ ತೋರಿಸಲು, ಸಾಹಸ, ಅನುಭವ ಪಡೆದುಕೊಳ್ಳಲು ಇದು ಸಹಕಾರಿಯಾಗಲಿದೆ.

    ನಾಗರಿಕರಿಗೆ ಮೂರು ವರ್ಷಗಳ ಸೇನೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ಈಗಾಗಲೇ ಇಸ್ರೇಲಿನಲ್ಲಿದೆ. ಭಾರತದಲ್ಲಿ ಆಸಕ್ತರಿಗೆ ಮಾತ್ರ ಅವಕಾಶ ನೀಡುತ್ತಿದ್ದು ಇಸ್ರೇಲಿನಲ್ಲಿ ಇದು ಕಡ್ಡಾಯ. ಇಸ್ರೇಲ್ ಸುತ್ತ 7 ರಾಷ್ಟ್ರಗಳು ಇರುವ ಅಗತ್ಯಬಿದ್ದಾಗ ಜನರ ನೆರವನ್ನು ಪಡೆಯಲು ಸೇನಾ ತರಬೇತಿಯನ್ನು ನೀಡುತ್ತದೆ. 18 ವರ್ಷ ಮೇಲ್ಪಟ್ಟ ಯುವಕರು 36 ತಿಂಗಳ ಕಾಲ, ಯುವತಿಯರು 24 ತಿಂಗಳ ಕಾಲ ಸೇನಾ ತರಬೇತಿ ಪಡೆಯುವುದನ್ನು ಇಸ್ರೇಲ್ ಕಡ್ಡಾಯಗೊಳಿಸಿದೆ.