Tag: ಮಿಸ್ ಕೇರಳ

  • ಅಪಘಾತ ಪ್ರಕರಣಕ್ಕೆ ಸ್ಫೋಟಕ ತಿರುವು – ಕೇರಳ ಮಾಡೆಲ್‍ಗಳಿಗಿತ್ತಾ ಡ್ರಗ್ ಪೆಡ್ಲರ್‌ಗಳ ನಂಟು?

    ಅಪಘಾತ ಪ್ರಕರಣಕ್ಕೆ ಸ್ಫೋಟಕ ತಿರುವು – ಕೇರಳ ಮಾಡೆಲ್‍ಗಳಿಗಿತ್ತಾ ಡ್ರಗ್ ಪೆಡ್ಲರ್‌ಗಳ ನಂಟು?

    ತಿರುವನಂತಪುರ: ಕೊಚ್ಚಿಯಲ್ಲಿ ನವೆಂಬರ್ 1 ರಂದು ಅಪಘಾತದಲ್ಲಿ ಮೃತಪಟ್ಟ ಮಾಡೆಲ್‍ಗಳಿಗೆ ಡ್ರಗ್ ಪೆಡ್ಲರ್‌ಗಳ ನಂಟು ಇತ್ತಾ ಎಂಬ ಪ್ರಶ್ನೆ ಎದ್ದಿದೆ.

    ಮೃತಪಟ್ಟ ಮಾಡೆಲ್‍ಗಳ ಪ್ರಕರಣ ಕುರಿತಂತೆ ತನಿಖೆ ಚುರುಕಾಗಿದ್ದು, ಇದೀಗ ಪಾರ್ಟಿಯಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ವೇಳೆ ಡ್ರಗ್ಸ್ ಲಿಂಕ್ ಬಗ್ಗೆ ಅನುಮಾನ ಬಂದಿದೆ.

    Kerala Model

    ನವೆಂಬರ್ 1 ರಂದು ಫೋರ್ಟ್ ಕೊಚ್ಚಿಯ ನಂ.18 ಎಂಬ ಐಷಾರಾಮಿ ಹೋಟೆಲ್‍ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಮಿಸ್ ಕೇರಳ 2019 ವಿಜೇತೆ ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಭಾಗಿಯಾಗಿದ್ದರು. ಪಾರ್ಟಿ ಬಳಿಕ ಇಬ್ಬರು ರಸ್ತೆ ಅಪಘತಾದಲ್ಲಿ ಸಾವನ್ನಪ್ಪಿದ್ದರು. ಇದನ್ನೂ ಓದಿ:  ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ

    Kerala Model

    ಪ್ರಕರಣಕ್ಕೆ ಸಂಬಂಧಿಸಿ ನಂ.18 ಹೋಟೆಲ್‍ನ ಮಾಲೀಕ ರಾಯ್ ವಯಲಾತ್ ಹಾಗೂ ಹೋಟೆಲ್‍ನ ಐವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಮಾಡೆಲ್‍ಗಳು ಹೋಗುತ್ತಿದ್ದ ಕಾರನ್ನು ಆಡಿ ಕಾರೊಂದು ಹಿಂಬಾಲಿಸುತ್ತಿದ್ದ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ದೊರೆತ್ತಿತ್ತು. ಕಾರನ್ನು ಚಲಾಯಿಸುತ್ತಿದ್ದ ಸೈಜು ತಂಕಚನ್‍ಗೆ ಕೊಚ್ಚಿಯಲ್ಲಿ ಡ್ರಗ್ ಪೆಡ್ಲರ್ ಸಂಪರ್ಕವಿದೆ. ಈತ ಬೆಂಗಳೂರಿನಿಂದ ಕೊಚ್ಚಿಗೆ ಡ್ರಗ್ಸ್ ಮಾರಾಟ ಮಾಡುವ ಗುಂಪಿನಲ್ಲಿ ಕೆಲಸ ಮಾಡುತ್ತಿದ್ದ ಎಂಬ ಆರೋಪ ಬಂದಿದೆ.

     

    View this post on Instagram

     

    A post shared by Ansi Kabeer (@ansi_kabeer)

    ಪಾರ್ಟಿ ನಂತರ ಭೇಟಿಯಾಗುವಂತೆ ಸೈಜು ತಿಳಿಸಿದ್ದ. ಆದರೆ ಆತನ ಆಹ್ವಾನವನ್ನು ಮಾಡೆಲ್‍ಗಳು ನಿರಾಕರಿಸಿದ್ದರು. ಆದಾದ ಬಳಿಕ ಈ ಅಪಘಾತ ನಡೆದಿದೆ. 2021 ಮೇನಲ್ಲಿ ಸೈಜು ಹೋಟೆಲ್ ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವೆಸಿದ್ದ ಫೋಟೋ ಲಭ್ಯವಾಗಿದೆ. ಆದರೆ ಹೋಟೆಲ್ ಮಾಲೀಕ ರಾಯ್ ವಯಲಾತ್ ಪೊಲೀಸರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರಿಂದ ತನಿಖೆಗೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ:  1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

    ಘಟನೆಯಾಗಿ ಮೂರು ವಾರ ಕಳೆದರೂ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣ ಇದೀಗ ಅಪರಾಧ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಬಿಜಿ ಜಾರ್ಜ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

  • ಮಿಸ್ ಕೇರಳ ಸುಂದರಿಯರ ದುರಂತ ಅಂತ್ಯ

    ಮಿಸ್ ಕೇರಳ ಸುಂದರಿಯರ ದುರಂತ ಅಂತ್ಯ

    ತಿರುವನಂತಪುರಂ: ಕಾರು ಅಪಘಾತದಲ್ಲಿ ಮಿಸ್ ಕೇರಳ 2019 ವಿಜೇತೆ ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಮೃತಪಟ್ಟಿದ್ದಾರೆ.

    ಮಾಜಿ ಮಿಸ್ ಕೇರಳ(Former Miss Kerala) ವಿಜೇತೆ ಆನ್ಸಿ ಕಬೀರ್(WinnerAnsi Kabeer), ರನ್ನರ್ ಅಪ್ ಅಂಜನಾ ಶಾಜನ್(Runner-up Anjana Shajan) ಮೃತರಾಗಿದ್ದಾರೆ. ನಿನ್ನೆ ಮಧ್ಯರಾತ್ರಿ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿ ಬೈಪಾಸ್‍ನಲ್ಲಿ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಮಾಡೆಲಿಂಗ್ ಫೋಟೋ ಸೆಷನ್‍ಗಾಗಿ ಆನ್ಸಿ ತಿರುವನಂತಪುರಂನಿಂದ ಮತ್ತು ಅಂಜನಾ ತ್ರಿಶೂರ್‌ನ ತಮ್ಮ ಊರುಗಳಿಂದ ಕೊಚ್ಚಿಗೆ ಬಂದಿದ್ದರು ಮತ್ತು ತ್ರಿಶೂರ್‌ಗೆ  ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಇದನ್ನೂ ಓದಿ: ಆಸ್ಪತ್ರೆಯಿಂದ ರಜನಿಕಾಂತ್ ಡಿಸ್ಚಾರ್ಜ್ – ಮನೆಗೆ ಆಗಮಿಸಿ ದೇವರಿಗೆ ಪ್ರಾರ್ಥನೆ

    ಮಾಡೆಲಿಂಗ್ ಫೋಟೋ ಸೆಷನ್‍ಗಾಗಿ ಆನ್ಸಿ ತಿರುವನಂತಪುರಂನಿಂದ ಮತ್ತು ಅಂಜನಾ ತ್ರಿಶೂರ್‍ನ ತಮ್ಮ ಊರುಗಳಿಂದ ಕೊಚ್ಚಿಗೆ ಬಂದಿದ್ದರು. ಫೋಟೋಶೂಟ್ ಮುಗಿಸಿ ಮತ್ತೆ ತ್ರಿಶೂರ್‍ಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಚಕ್ಕರಪರಂಬು ಜಂಕ್ಷನಲ್ಲಿ ಈ ಹಿಂದೆಯೂ ಹೆಚ್ಚು ಅಪಘಾತಗಳು ನಡೆದಿವೆ. ತಡರಾತ್ರಿ ಬೈಕ್ ಅಡ್ಡ ಬಂದ ಕಾರಣ, ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಬೈಕ್ ಸವಾರ ಮಾತ್ರ ಸಣ್ಣ ಪುಟ್ಟ ಗಾಯಗೊಂದಿಗೆ ಪಾವಡ ಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಆನ್ಸಿ ಮತ್ತು ಅಂಜನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರನ್ನ ಪಾಲಾರಿವಟ್ಟಂನ ಇಎಂಸಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಆದರೆ ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

    ಈ ದುರ್ಘಟನೆಗೆ ಮುನ್ನ ಆನ್ಸಿ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಾಕಿದ್ದಾರೆ. ಸಾವಿಗೆ ಕೊನೆಯ ಪಯಣಕ್ಕೂ ಮುನ್ನ ಮಾಜಿ ಸುಂದರಿ ಕೇರಳದ ಆನ್ಸಿ ಕಬೀರ್ ಅವರ ಮಾತು ಕೇಳಿ ಅಭಿಮಾನಿಗಳು ಮತ್ತು ಸ್ನೇಹಿತರು ಶಾಕ್ ಆಗಿದ್ದಾರೆ. ಇದು ಹೋಗಲು ಸಮಯ ಎಂದು ಆನ್ಸಿ ಕಬೀರ್ ಫೋಟೋವೊಂದರ ಜತೆ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದರು. ಆದರೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಇವರು ಪ್ರಯಾಣಿಸುತ್ತಿದ್ದ ಕಾರು ಬೈಕ್‍ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಇವರಿಬ್ಬರು ಒಳ್ಳೆಯ ಸ್ನೇಹಿತರು ಆಗಿದ್ದರು. ಯಾವುದೇ ಫೋಟೋಶೂಟ್‍ಗೆ ಹೋದರೂ ಒಟ್ಟಿಗೆಯಾಗಿ ಹೋಗುತ್ತಿದ್ದರಂತೆ. ಈಗ ಸಾವಿನಲ್ಲೂ ಈ ಮಾಡೆಲ್‍ಗಳಿಬ್ಬರು ಜೊತೆಯಾಗಿ ಇಹಲೋಕ ತ್ಯಜಿಸಿದ್ದಾರೆ.