Tag: ಮೀಟಿಂಗ್

  • ಪುಡಿ ರೌಡಿಗಳ ಜೊತೆ ಶಾಸಕರ ಮೀಟಿಂಗ್? – ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ಸತೀಶ್ ರೆಡ್ಡಿ

    ಪುಡಿ ರೌಡಿಗಳ ಜೊತೆ ಶಾಸಕರ ಮೀಟಿಂಗ್? – ಮತ್ತೊಂದು ವಿವಾದ ಮೈಮೇಲೆಳೆದುಕೊಂಡ ಸತೀಶ್ ರೆಡ್ಡಿ

    ಬೆಂಗಳೂರು: ಇತ್ತೀಚೆಗೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಬೊಮ್ಮನಹಳ್ಳಿ (Bommanahalli) ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಪುಡಿ ರೌಡಿಗಳ (Rowdy) ಜೊತೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಂ ಸತೀಶ್ ರೆಡ್ಡಿ (Satish Reddy) ಸಭೆಯನ್ನು ನಡೆಸಿದ್ದಾರೆ ಎನ್ನಲಾದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಚುನಾವಣೆ ಹತ್ತಿರವಾಗುತ್ತಿದ್ದಂತೆ ಸತೀಶ್ ರೆಡ್ಡಿ ತಮ್ಮ ಮನೆಯಲ್ಲಿ ಕೆಲ ಹುಡುಗರನ್ನು ಕರೆಸಿ ಸಭೆಯೊಂದನ್ನು ಮಾಡಿದ್ದಾರೆ. ಅವರ ಜೊತೆ ತೆಲುಗಿನಲ್ಲಿ ಮಾತನಾಡುತ್ತಿರುವ ವೀಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಈ ವೀಡಿಯೋದಲ್ಲಿ ‘ನಿಮಗೇನು ಸಪೋರ್ಟ್ ಬೇಕು ಅದನ್ನು ನಾನು ಕೊಡಿಸುತ್ತೇನೆ. ಚುನಾವಣೆ ಸಮಯದಲ್ಲಿ ಮೆಂಟಲಿ ಟಾರ್ಚರ್ ಕೊಡುತ್ತಿದ್ದಾರೆ. ನಿಮಗೆ ಯಾವ ಸಪೋರ್ಟ್ ಬೇಕು ಅದು ನಮ್ಮಿಂದ ಇರುತ್ತದೆ’ ಎನ್ನುವ ಮಾತುಗಳನ್ನಾಡಿರುವ ದೃಶ್ಯವಿದೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ಆಡಿಯೋ ಬಾಂಬ್- ರೇವಣ್ಣ, ಶಿವಲಿಂಗೇಗೌಡ ಮಾತುಕತೆ ಆಡಿಯೋ ವೈರಲ್

    ಚುನಾವಣೆ ಹಿನ್ನೆಲೆ ರೌಡಿಶೀಟರ್ ಹಾಗೂ ಪುಡಿ ರೌಡಿಗಳ ಜೊತೆ ಬೊಮ್ಮನಹಳ್ಳಿ ಶಾಸಕರು ಮೀಟಿಂಗ್ ಮಾಡಿದ್ದಾರೆ ಎಂಬುದಾಗಿ ಎಲ್ಲೆಡೆ ಈ ವೀಡಿಯೋ ಹರಿದಾಡುತ್ತಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಉಮಾಪತಿ ಗೌಡ ವಿರುದ್ಧ ಗೆಲ್ಲಲು ಹೊಸ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂಬ ಮಾತು ಸಹ ಕೇಳಿ ಬರುತ್ತಿದೆ.

    ಕಳೆದ ಕೆಲವು ದಿನಗಳ ಹಿಂದೆ ಪುಡಿ ರೌಡಿಯೊಬ್ಬ ಸತೀಶ್ ರೆಡ್ಡಿ ಕೊಲೆಗೆ ಸಂಚು ರೂಪಿಸಿದ್ದ ಎನ್ನುವ ಆಡಿಯೋ ಬಯಲಾಗಿತ್ತು. ಇದಾದ ಬಳಿಕ ಈಗ ಸತೀಶ್ ರೆಡ್ಡಿ ರೌಡಿಗಳ ಜೊತೆ ಕಾಣಿಸಿಕೊಂಡಿದ್ದಾರೆ ಎನ್ನುವ ವೀಡಿಯೋ ಬಯಲಾಗಿದ್ದು, ಪ್ರತಿಪಕ್ಷಗಳಿಗೆ ಈ ವಿವಾದಗಳು ವರದಾನವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಡಿಎದಿಂದ ಕರಗ ಮಂಟಪ ಅಭಿವೃದ್ಧಿಗೆ 6 ಕೋಟಿ ರೂ.: ಎಸ್.ಆರ್ ವಿಶ್ವನಾಥ್

  • ಪ್ರವಾಹ ಪೀಡಿತ ರಾಜ್ಯಗಳ ಜೊತೆ ಇಂದು ಮೋದಿ ಮೀಟಿಂಗ್

    ಪ್ರವಾಹ ಪೀಡಿತ ರಾಜ್ಯಗಳ ಜೊತೆ ಇಂದು ಮೋದಿ ಮೀಟಿಂಗ್

    ನವದೆಹಲಿ: ರಾಜ್ಯದಲ್ಲಿ ಒಂದು ಕಡೆ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಮತ್ತೊಂದು ಕಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ ಜನರು ತತ್ತರಿಸಿದ್ದಾರೆ. ಈ ನಡುವೆ ಇಂದು ರಾಜ್ಯ ಸಚಿವರ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಎಲ್ಲ ಮಾಹಿತಿ ಪಡೆದುಕೊಳ್ಳಲಿದ್ದಾರೆ.

    ರಾಜ್ಯ ಏಕ ಕಾಲದಲ್ಲಿ ಎರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ಮೋದಿ ರಾಜ್ಯದ ಸಚಿವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಸಭೆಗೆ ಗೈರಾಗಲಿದ್ದು, ಸಿಎಂ ಪರವಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ್ ಭಾಗಿಯಾಗಲಿದ್ದಾರೆ.

    ಬೆಳಗ್ಗೆ 11:30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಪ್ರವಾಹದಿಂದ ಸೃಷ್ಟಿಯಾಗಿರುವ ಅನಾಹುತ, ನಷ್ಟ ಪರಿಹಾರ ಕಾರ್ಯಗಳ ಮಾಹಿತಿ ಪಡೆದುಕೊಳ್ಳಿದ್ದಾರೆ. ಇದರ ಜೊತೆಗೆ ಕೊರೊನಾ ನಿಯಂತ್ರಣ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಪಿಎಂ ಜೊತೆಗಿನ ಸಭೆ ಹಿನ್ನೆಲೆ ಕಂದಾಯ ಸಚಿವ ಆರ್.ಅಶೋಕ್ ಈಗಾಗಲೇ ಎಲ್ಲ ಪ್ರವಾಹ ಪೀಡಿತ ಹಾಗೂ ಅತಿ ಹೆಚ್ಚು ಕೊರೊನಾ ಕಾಣಿಸಿಕೊಂಡ ರಾಜ್ಯಗಳಿಂದ ಮಾಹಿತಿ ತರಿಸಿಕೊಂಡಿದ್ದಾರೆ. ಈ ಎಲ್ಲ ಮಾಹಿತಿಯನ್ನ ಪಿಎಂ ಮೋದಿ ಮುಂದೆ ಪ್ರಸುತ್ತ ಪಡಿಸಲಿದ್ದಾರೆ.

    ಕರ್ನಾಟಕದ ಜೊತೆಗೆ ಮಹಾರಾಷ್ಟ್ರ ಹಾಗೂ ಕೇರಳದ ಸಿಎಂ ಜೊತೆಗೆ ಪ್ರಧಾನಿ ಮೋದಿ ಮಾತನಾಡಲಿದ್ದು, ಇದಕ್ಕೆ ಪ್ರತ್ಯೇಕ ಸಮಯ ಮೀಸಲಿಡಲಾಗಿದೆ. ಪ್ರಧಾನಿ ಮೋದಿ ಸಭೆಯಿಂದ ರಾಜ್ಯದ ಪರಿಸ್ಥಿತಿ ಸರ್ಕಾರದ ಗಮನಕ್ಕೆ ಬಂದಲ್ಲಿ ಮುಂದೆ ರಾಜ್ಯಕ್ಕೆ ಹೆಚ್ಚು ಪರಿಹಾರ ಸಿಗುವ ನಿಟ್ಟಿನಲ್ಲೂ ಸಹಕಾರಿಯಾಗಲಿದೆ. ಸಚಿವರು ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಮನದಟ್ಟು ಮಾಡಿಕೊಡಬೇಕಿದೆ.

  • ದೋಸ್ತಿಗಳಿಗೆ ಶುರುವಾಯ್ತು ಸರ್ಕಾರ ಪತನದ ಭಯ – ರಾತ್ರಿವರೆಗೂ ಮೈತ್ರಿ ಮಂಥನ

    ದೋಸ್ತಿಗಳಿಗೆ ಶುರುವಾಯ್ತು ಸರ್ಕಾರ ಪತನದ ಭಯ – ರಾತ್ರಿವರೆಗೂ ಮೈತ್ರಿ ಮಂಥನ

    ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಆದರೆ ಇತ್ತ ದೋಸ್ತಿಗಳಿಗೆ ಢವಢವ ಶುರುವಾಗಿದೆ. ಸರ್ಕಾರವನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬ ಚಿಂತೆಗೆ ಬಿದ್ದ ದೋಸ್ತಿಗಳು, ಹೀನಾಯ ಸೋಲಿನ ಬೆನ್ನಲ್ಲೇ ಮೀಟಿಂಗ್ ಮೇಲೆ ಮೀಟಿಂಗ್ ನಡೆಸುತ್ತಿದ್ದಾರೆ.

    ಸಿಎಂ ಕುಮಾರಸ್ವಾಮಿ, ಪುತ್ರ ನಿಖಿಲ್, ಮಂಡ್ಯ ಜೆಡಿಎಸ್ ನಾಯಕರಾದ ಸಿ.ಎಸ್ ಪುಟ್ಟರಾಜು, ಶಿವರಾಮೇಗೌಡ, ಶಾಸಕ ಶಿವಲಿಂಗೇಗೌಡ ಹಾಗೂ ಸಾರಾ ಮಹೇಶ್ ದೇವೇಗೌಡರ ನಿವಾಸಕ್ಕೆ ಆಗಮಿಸಿ ತಡರಾತ್ರಿ ಸುಮಾರು 2 ಗಂಟೆವರೆಗೂ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

    ಇದೇ ವೇಳೆ ಮಂಡ್ಯ ಹಾಗೂ ತುಮಕೂರು ಜೆಡಿಎಸ್ ನಾಯಕರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದು, ಸಭೆ ಬಳಿಕ ಹಿಂದಿರುಗುವಾಗ ಮಾಜಿ ಸಂಸದ ಶಿವರಾಮೇಗೌಡ ಸಪ್ಪೆ ಮೊರೆ ಹಾಕಿಕೊಂಡಿದ್ದರು. ಇಂದು ಸಂಜೆ ಸುಮಾರು 4.30ಕ್ಕೆ ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಸಭೆ ಕರೆದಿದ್ದು, ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಕಳೆದ ದಿನದ ಚುನಾವಣೆಯ ಫಲಿತಾಂಶದಲ್ಲಿ ಮೋದಿ ನೇತೃತ್ವದ ಎನ್‍ಡಿಎ ಒಕ್ಕೂಟಕ್ಕೆ 349 ಸ್ಥಾನ ಸಿಕ್ಕರೆ, ಬಿಜೆಪಿಯವರೇ ಬರೋಬ್ಬರಿ 303 ಕಡೆ ಕೇಸರಿ ಬಾವುಟ ಹಾರಿಸಿದ್ದಾರೆ. ಚುನಾವಣೋತ್ತರ ಸಮೀಕ್ಷೆಯನ್ನು ಮೀರಿ ಭಾರತೀಯ ಜನತಾ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಪಡೆದಿದೆ. ಇದರೊಂದಿಗೆ ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಪೂರ್ಣ ಬಹುಮತದ ಸರ್ಕಾರ ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ.

  • ದೋಸ್ತಿಗಳ ವಾರ್, ಲೋಕ ರಿಸಲ್ಟ್‌ನ ಟೆನ್ಷನ್ – ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಬುಲಾವ್

    ದೋಸ್ತಿಗಳ ವಾರ್, ಲೋಕ ರಿಸಲ್ಟ್‌ನ ಟೆನ್ಷನ್ – ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಬುಲಾವ್

    ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೆ ರಾಜ್ಯ ರಾಜಕಾರಣದ ಬೆಳವಣಿಗೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಲೆಕೆಡಿಸಿಕೊಂಡಿದ್ದಾರಾ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

    ದೋಸ್ತಿಗಳ ವಾರ್ ಮತ್ತು ಲೋಕಸಭಾ ಚುನಾವಣಾ ಫಲಿತಾಂಶದ ಟೆನ್ಷನ್ ಹಿನ್ನೆಲೆಯಲ್ಲಿ ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದಿಢೀರ್ ಮೀಟಿಂಗ್ ಕರೆದಿದ್ದಾರೆ. ಈ ಮೂಲಕ ಫಲಿತಾಂಶದ ಜೊತೆ ಜೊತೆಗೆ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಗಟ್ಟಿ ಮಾಡಲು ರಾಹುಲ್ ಗಾಂಧಿ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

    ಚುನಾವಣಾ ಫಲಿತಾಂಶಕ್ಕೆ ಇನ್ನೂ ನಾಲ್ಕು ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದು ಅಚ್ಚರಿ ಮೂಡಿಸಿದೆ. ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ನಾಯಕರಾದ ದಿನೇಶ್ ಗುಂಡೂರಾವ್, ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆಶಿ ಜೊತೆ ಸಭೆ ನಡೆಸಲಿದ್ದಾರೆ.

    ಒಂದು ಕಡೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮೈತ್ರಿ ಎಷ್ಟು ಸ್ಥಾನ ಗೆಲ್ಲಬಹುದು ಎಂಬ ಲೆಕ್ಕಾಚಾರದ ಬಗ್ಗೆಯೂ ಚರ್ಚೆ ನಡೆಯಲಿದೆ. ಅದಕ್ಕೂ ಮುಖ್ಯವಾಗಿ ರಾಜ್ಯ ಸಮ್ಮಿಶ್ರ ಸರ್ಕಾರದ ಗೊಂದಲಗಳನ್ನ ಬಗೆಹರಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೈತ್ರಿ ಅನಿವಾರ್ಯ ಎಂದು ಹಿಂದೆಯೇ ಹೇಳಿದ್ದರು. ಆದರೆ ಫಲಿತಾಂಶಕ್ಕೂ ಮುನ್ನವೇ ಮೈತ್ರಿಯಲ್ಲಿ ಬಿರುಕಿನ ಸೂಚನೆಗಳು ಕಾಣತೊಡಗಿವೆ. ಇದರಿಂದ ಎಚ್ಚೆತ್ತ ರಾಹುಲ್ ಗಾಂಧಿ ಲೋಕ ಸಮರ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಕೈ ಕೊಟ್ಟ ಆಪಾದನೆ ಬರದಂತೆ ತಡೆಯಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತದೆ.

    ಇತ್ತೀಚಿನ ಎಲ್ಲಾ ಬೆಳವಣಿಗೆಗಳ ಬಗ್ಗೆ ಪಕ್ಷದ ನಾಯಕರ ಜೊತೆ ರಾಹುಲ್ ಗಾಂಧಿ ಮುಕ್ತವಾಗಿ ಚರ್ಚೆ ಮಾಡಲಿದ್ದಾರೆ. ಅಗತ್ಯ ಬಿದ್ದಲ್ಲಿ ದೇವೇಗೌಡರ ಜೊತೆ ಮಾತುಕತೆ ನಡೆಸಲು ಮುಂದಾಗುವ ಸಾಧ್ಯತೆಗಳಿವೆ. ಹೀಗೆ ಲೋಕ ಲೆಕ್ಕಾಚಾರದ ಜೊತೆಗೆ ರಾಜ್ಯ ಸಮ್ಮಿಶ್ರ ಸರ್ಕಾರದ ಗೊಂದಲವನ್ನು ಸರಿಪಡಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ಆದರೆ ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ರಾಹುಲ್ ಗಾಂಧಿ ರಾಜ್ಯ ನಾಯಕರನ್ನ ಕರೆಸಿ ಮಾತುಕತೆಗೆ ಮುಂದಾಗಿದ್ದು ರಾಜ್ಯ ರಾಜಕಾರಣದ ಅಚ್ಚರಿಯ ಬೆಳವಣಿಗೆಯಾಗಿದೆ.

  • ಕೊಪ್ಪಳ ‘ಕೈ’ ನಾಯಕರಿಗೆ ಸಿದ್ದರಾಮಯ್ಯ ವಾರ್ನ್!

    ಕೊಪ್ಪಳ ‘ಕೈ’ ನಾಯಕರಿಗೆ ಸಿದ್ದರಾಮಯ್ಯ ವಾರ್ನ್!

    ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕೊಪ್ಪಳ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇತ್ತೀಚೆಗಿನ ಸಮಾವೇಶ ಮುಗಿದ ಬಳಿಕ ಜಿಲ್ಲೆಯ ಕೈ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.

    ಸಿದ್ದರಾಮಯ್ಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಮೀಟಿಂಗ್ ಮಾಡಿದ್ದು, ಹೇಗಾದರೂ ಮಾಡಿ ಲೋಕಸಭಾ ಚುನಾವಣೆಯಲ್ಲಿ ರಾಜಶೇಖರ್ ಹಿಟ್ನಾಳ್ ನನ್ನು ಗೆಲ್ಲಿಸಬೇಕು. ಒಂದು ವೇಳೆ ಗೆಲ್ಲದೆ ಹೋದರೆ ನನಗೆ ಮುಖ ತೋರಿಸಬೇಡಿ ಎಂದು ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ವ್ಯಾಪ್ತಿಯ ಕೈ ನಾಯಕರಿಗೆ ವಾರ್ನ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಸಿದ್ದರಾಮಯ್ಯ ಸುಮಾರು ಅರ್ಧಗಂಟೆಗಳ ಕಾಲ ಮಾಜಿ ಶಾಸಕರು ಮತ್ತು ಸಚಿವರೊಂದಿಗೆ ಮೀಟಿಂಗ್ ಮಾಡಿದ್ದು, ಸಭೆಯಲ್ಲಿ ಮಾಜಿ ಸಚಿವ ಶಿವರಾಜ್ ತಂಗಡಗಿ, ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ, ಕುಷ್ಟಗಿ ಕೈ ಶಾಸಕ ಅಮರೆಗೌಡ ಬಯ್ಯಾಪೂರ್, ಕೊಪ್ಪಳ ಕೈ ಶಾಸಕ ರಾಘವೇಂದ್ರ ಹಿಟ್ನಾಳ್, ಜೆ.ಡಿ.ಎಸ್ ಮುಖಂಡರು ಭಾಗಿಯಾಗಿದ್ದರು.

    ಈ ಮೀಟಿಂಗ್ ಗೆ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಗೈರಾಗಿದ್ದಾರೆ. ರಾಯರೆಡ್ಡಿ ನಡೆಯಿಂದ ಸಾಕಷ್ಟು ಅನುಮಾನ ಮೂಡಿಸಿದೆ. ಇದೇ ವೇಳೆ ಕೆಲ ನಾಯಕರು ಸಿದ್ದರಾಮಯ್ಯ ಮುಂದೆ ವಿಧಾನಸಭೆ ಸೋಲಿನ ಕಹಿ ತೋಡಿಕೊಂಡಿದ್ದಾರೆ. ಆಗ ಸಿದ್ದರಾಮಯ್ಯ ಆಗಿದ್ದನ್ನ ಮರೆತು ಬಿಡಿ, ಇದೀಗ ಒಟ್ಟಾಗಿ ಚುನಾವಣೆ ಮಾಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

  • ಚುನಾವಣೆ ಘೋಷಣೆಯಾಗ್ತಿದ್ದಂತೆ ಮುಂಬೈಗೆ ತೆರಳಿದ್ರು ಉಮೇಶ್ ಜಾಧವ್

    ಚುನಾವಣೆ ಘೋಷಣೆಯಾಗ್ತಿದ್ದಂತೆ ಮುಂಬೈಗೆ ತೆರಳಿದ್ರು ಉಮೇಶ್ ಜಾಧವ್

    ಕಲಬುರಗಿ: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮುಂಬೈಗೆ ಹಾರಿದ್ದಾರೆ.

    ಜಾಧವ್ ಮುಂಬೈನಲ್ಲಿ ಎರಡನೇ ದಿನವೂ ಬೆಂಬಲಿಗರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದು, ಅಫಜಲ್‍ಪುರ, ಚಿತ್ತಾಪುರ, ಗುರುಮಠಕಲ್ ಭಾಗದ ಮತದಾರೊಂದಿಗೆ ನಿರಂತರ ಮೀಟಿಂಗ್ ಮಾಡಲಿದ್ದಾರೆ. ಕೆಲಸದ ನಿಮಿತ್ತ ಮುಂಬೈನಲ್ಲಿ ಒಂದು ಲಕ್ಷಕ್ಕೂ ಅಧಿಕ ಮತದಾರರು ನೆಲೆಸಿದ್ದು, ಅವರ ಮನವೊಲಿಕೆಗೆ ರಣತಂತ್ರ ರೂಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಉಮೇಶ್ ಜಾಧವ್ ಅವರು ಸತತ 11 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಪಣತೊಟ್ಟು ನಿಂತಿದ್ದಾರೆ. ಹೀಗಾಗಿ ಚುನಾವಣೆಗೂ ಮುನ್ನ ಎಲ್ಲಾ ಮತದಾರರನ್ನ ಕಲಬುರಗಿಗೆ ಕರೆತರುವ ವ್ಯವಸ್ಥೆ ಮಾಡುತ್ತಿದ್ದಾರೆ. ಅದಕ್ಕಾಗಿ ಈಗಾಗಲೇ ಮತದಾರರಿಗೊಸ್ಕರ ರೈಲ್ವೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ.

    ಜಾಧವ್ ಪ್ರಮುಖವಾಗಿ ಬಂಜಾರ ಸಮುದಾಯದ ಮತದಾರರನ್ನ ಭೇಟಿಯಾಗುತ್ತಿದ್ದು, ಇನ್ನು ಮತದಾರರನ್ನು ತರಲು ಹಲವು ಮುಖಂಡರನ್ನು ನೇಮಕ ಮಾಡಿದ್ದಾರೆ. ಈ ಮೂಲಕ ಶಾತಾಯಗತಾಯ ಲೋಕಸಭಾ ಚುನಾವಣೆ ಗೆಲ್ಲಲು ಜಾಧವ್ ತಂತ್ರ ರೂಪಿಸುತ್ತಿದ್ದಾರೆ. ಇಂದು ಸಹ ಸಭೆ ನಡೆಸಿ ಮಧ್ಯಾಹ್ನ ಅಥವಾ ಸಂಜೆ ನೇರವಾಗಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಸ್ಪೀಕರ್ ರಮೇಶ್ ಕುಮಾರ್ ಅವರು ಶಾಸಕರ ಅನರ್ಹತೆ ಕುರಿತು ನಡೆಸುತ್ತಿರುವ ವಿಚಾರಣೆಯಲ್ಲಿ ಭಾಗಿಯಾಗಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬರದ ನಡುವೆ ಭರ್ಜರಿ ಬಾಡೂಟ ಆಯೋಜಿಸಿದ ನಗರಸಭೆ

    ಬರದ ನಡುವೆ ಭರ್ಜರಿ ಬಾಡೂಟ ಆಯೋಜಿಸಿದ ನಗರಸಭೆ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಡೆ ಬರಗಾಲ ತಾಂಡವವಾಡುತ್ತಿದೆ. ಚಿಕ್ಕಬಳ್ಳಾಪುರದಲ್ಲೂ ಬರ ಎದರಾಗಿದೆ. ಆದರೆ ಚಿಕ್ಕಬಳ್ಳಾಪುರ ನಗರಸಭೆಗೆ ಮಾತ್ರ ಬರ ಬಂದಿಲ್ಲ.

    ನಗರಸಭೆಯ ಬಜೆಟ್ ಮೀಟಿಂಗ್ ಬಳಿಕ ಎಲ್ಲಾ ಸದಸ್ಯರಿಗೂ ಹಾಗೂ ಸಿಬ್ಬಂದಿಗೆ ಬಾಡೂಟ ಆಯೋಜನೆ ಮಾಡಲಾಗಿದೆ. ನಗರಸಭೆ ಆವರಣದಲ್ಲಿ ಖಾದ್ಯಗಳನ್ನು ತಯಾರಿ ಮಾಡಿ ಭರ್ಜರಿ ಬಾಡೂಟ ಹಾಕಿಸಿದ್ದಾರೆ.

    ಚಿಕನ್ ಫ್ರೈ, ಮಟನ್ ಬಿರಿಯಾನಿ, ಫಿಶ್, ಕಬಾಬ್ ಸೇರಿದಂತೆ ವಿವಿಧ ಖಾದ್ಯಗಳನ್ನು ಮಾಡಲಾಗಿದೆ. ಈಗಾಗಲೇ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳಿದರೂ ನಗರಸಭೆಯಲ್ಲಿ ಬಾಡೂಟ ಆಯೋಜನೆ ಮಾಡಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

    ಈ ಬಗ್ಗೆ ನಗರಸಭೆಯವರನ್ನು ಕೇಳಿದರೆ ಎಂದಿನಂತೆ ಇಂದು ಕೂಡ ಊಟ ಆಯೋಜನೆ ಮಾಡಿದ್ದೇವೆ ಎನ್ನುವ ಉತ್ತರ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಿರಿಯ ಶಾಸಕರ ಜೊತೆ ಕೆ.ಸಿ ವೇಣುಗೋಪಾಲ್ ಮಧ್ಯರಾತ್ರಿ ಗುಪ್ತ್ ಗುಪ್ತ್ ಮೀಟಿಂಗ್!

    ಕಿರಿಯ ಶಾಸಕರ ಜೊತೆ ಕೆ.ಸಿ ವೇಣುಗೋಪಾಲ್ ಮಧ್ಯರಾತ್ರಿ ಗುಪ್ತ್ ಗುಪ್ತ್ ಮೀಟಿಂಗ್!

    ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ನಲ್ಲಿ ಇನ್ನು ಹಿರಿಯರಿಗೆ ಅವಕಾಶಗಳು ಇಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಕಿರಿಯ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರಾತ್ರಿ ಎರಡು ಗಂಟೆಗೆ ಗುಪ್ತ ಸಭೆ ನಡೆಸಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಯುವಕರ ಹೊಸ ತಂಡ ಕಟ್ಟಲು ಮುಂದಾಗಿದ್ದು, ಅವರ ಕನಸು ನನಸು ಮಾಡಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಬುಧವಾರ ಮಧ್ಯರಾತ್ರಿ ಗುಪ್ತ್ ಗುಪ್ತ್ ಮೀಟಿಂಗ್ ನಡೆದಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ನೂತನ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಅನುಭವಿಗಳನ್ನ ಆಯ್ಕೆ ಮಾಡಬೇಕು ಎಂಬುದು ರಾಜ್ಯ ಹಿರಿಯ ನಾಯಕರ ವಾದವಾಗಿದೆ. ಆದರೆ ಯುವ ಮುಖಕ್ಕೆ ರಾಜ್ಯ ಕಾಂಗ್ರೆಸ್ ಹೊಣೆ ನೀಡಬೇಕು ಎಂಬುದು ಯುವ ನಾಯಕರುಗಳ ವಾದವಾಗಿದೆ. ವಾದ ಪ್ರತಿ-ವಾದಗಳ ನಡುವೆಯೇ ವೇಣುಗೋಪಾಲ್ ನಗರದ ಖಾಸಗಿ ಹೋಟೆಲ್ ನಲ್ಲಿ ರಾತ್ರಿ 2 ಗಂಟೆಗೆ ಯುವ ಶಾಸಕರುಗಳ ಸಭೆ ನಡೆಸಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ಸ್ಥಾನವೇರಲು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಇಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯದ ಕೆಲವು ಸಂಸದರು ಮತ್ತು ಸಚಿವರು ಸೇರಿದಂತೆ ಹಿರಿಯರೇ ಅಡ್ಡಗಾಲು ಹಾಕಿದ್ದಾರೆ. ಇವೆಲ್ಲವನ್ನು ಮೀರಿ ದಿನೇಶ್ ಗುಂಡುರಾವ್, ಕೃಷ್ಣಬೈರೇಗೌಡ, ರಿಜ್ವಾನ್ ಅರ್ಷದ್ ರ ತಂಡ ದಿನೇಶ್ ಗುಂಡೂರಾವ್ ಪರ ಲಾಬಿ ಆರಂಭಿಸಿದೆ ಎಂದು ತಿಳಿದುಬಂದಿದೆ.

    ಈ ಮೂವರು ಕಿರಿಯ ಶಾಸಕರ ಜೊತೆ ವೇಣುಗೋಪಾಲ್ ರಾತ್ರಿ ಎರಡು ಗಂಟೆಗೆ ಗುಪ್ತ ಸಭೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರ ಯುವ ನಾಯಕತ್ವ ಕನಸಿಗೆ ನೀರೆರೆಯಲು ವೇಣುಗೋಪಾಲ್ ಮುಂದಾಗಿದ್ದು, ದಿನೇಶ್ ಗುಂಡೂರಾವ್ ನಾಯಕತ್ವಕ್ಕೆ ಯುವ ಶಾಸಕರುಗಳು ಸಾಥ್ ನೀಡಿದ್ದಾರೆ ಎನ್ನಲಾಗಿದ್ದು, ಈಗ ಹಿರಿಯರ ನಡೆ ಏನು ಎನ್ನುವ ಕುತೂಹಲ ಮೂಡಿದೆ.