Tag: ಮೀನಾಕ್ಷಿ ಲೇಖಿ

  • ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ

    ಸೈಲೆಂಟಾಗಿ ಇರದಿದ್ರೆ ನಿಮ್ಮ ಮನೆ ಮೇಲೆ ಇಡಿ ರೇಡ್- ಕೇಂದ್ರ ಸಚಿವೆ ಬೆದರಿಕೆ

    ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಗುರುವಾರ ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ (Meenakshi Lekhi) ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ.

    ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದ ಸಂದರ್ಭದಲ್ಲಿ ಸಿಟ್ಟಿಗೆದ್ದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, ವಿಪಕ್ಷ ನಾಯಕರು ಸೈಲೆಂಟಾಗಿ ಇರದಿದ್ರೆ ಅವರ ಮನೆಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬರುತ್ತಾರೆ ಎಂದು ನೇರವಾಗಿ ಎಚ್ಚರಿಕೆ ನೀಡಿದ್ದಾರೆ.

    ಮೀನಾಕ್ಷಿ ಲೇಖಿಯ ಮಾತುಗಳು ರಾಷ್ಟ್ರ ರಾಜಕೀಯದಲ್ಲೀಗ ಸಂಚಲನ ಮೂಡಿಸಿವೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ತಿದೆ ಎಂಬ ನಮ್ಮ ಮಾತು ನಿಜ ಎಂದು ಕೇಂದ್ರ ಸಚಿವರೇ ಈಗ ಒಪ್ಕೊಂಡಿದ್ದಾರೆ. ಆವೇಶದಲ್ಲಿ ಮೀನಾಕ್ಷಿ ಲೇಖಿ ವಿಪಕ್ಷಗಳನ್ನು ಬೆದರಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಎನ್‍ಸಿಪಿ ಹೇಳಿದೆ. ಇದನ್ನೂ ಓದಿ: ಏನೇ ಬಂದರೂ ನನ್ನ ಕರ್ತವ್ಯ ಹಾಗೆಯೇ ಇರಲಿದೆ: ಸುಪ್ರೀಂ ತೀರ್ಪಿಗೆ ರಾಗಾ ಪ್ರತಿಕ್ರಿಯೆ

    ಈ ಸಂಬಂಧ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ಟ್ವೀಟ್ ಮಾಡಿ, ಇದು ಎಚ್ಚರಿಕೆನಾ? ಬೆದರಿಕೆನಾ ಎಂದು ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟಿಎಂಸಿ ಸೇರಿ ಹಲವು ಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಓವೈಸಿ, ಮುಫ್ತಿ ಮತ್ತೊಮ್ಮೆ ಇತಿಹಾಸ ಓದಲಿ: ಕೇಂದ್ರ ಸಚಿವೆ

    ಓವೈಸಿ, ಮುಫ್ತಿ ಮತ್ತೊಮ್ಮೆ ಇತಿಹಾಸ ಓದಲಿ: ಕೇಂದ್ರ ಸಚಿವೆ

    ನವದೆಹಲಿ: ಎಐಎಮ್‍ಐಎಮ್ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಹಾಗೂ ಜಮ್ಮು- ಕಾಶ್ಮೀರದ ಮೆಹಬೂಬಾ ಮುಫ್ತಿ ಅವರು ಇತಿಹಾಸವನ್ನು ಮತ್ತೊಮ್ಮೆ ಓದಬೇಕು ಎಂದು ಸಲಹೆ ನೀಡುತ್ತೇನೆ ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಫ್ತಿ ಹಾಗೂ ಓವೈಸಿ ಅವರು ಶಾಂತಿ ಮತ್ತು ಸಹೋದರತ್ವವನ್ನು ಕಾಪಾಡಬೇಕು. ಇದರ ಜೊತೆಗೆ ಸಮಾಜಕ್ಕೆ ಧಕ್ಕೆ ತರುವ ಯಾವುದೇ ಕೆಲಸವನ್ನು ಮಾಡಬಾರದು ಎಂದು ಮನವಿ ಮಾಡಿದರು.

    ಜ್ಞಾನವಾಪಿ ಮಸೀದಿಯ ವಿಷಯ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಅವರು ಮಧ್ಯ ಪ್ರವೇಶಿಸಬಾರದು. ಜೊತೆಗೆ ಸಮಾಜಕ್ಕೆ ಧಕ್ಕೆಯನ್ನು ತರಬಾರದು ಎಂದರು.

    ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯದ ವೇಳೆ ಮಸೀದಿಯ ಬಾವಿಯೊಳಗೆ 12 ಅಡಿ, 8 ಇಂಚಿನ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲೇ ಓವೈಸಿ ಹಾಗೂ ಮೆಹಬೂಬಾ ಮುಫ್ತಿ ಟೀಕಿಸಿದ್ದರು. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋಯ್ತು ಸೇತುವೆ, ಕುಸಿಯಿತು ರಸ್ತೆ

    ನ್ಯಾಯಾಲಯದ ಆದೇಶವನ್ನು ಟೀಕಿಸಿದ್ದ ಓವೈಸಿ, ಡಿಸೆಂಬರ್ 1949ರಲ್ಲಿ ಬಾಬರಿ ಮಸೀದಿಯಲ್ಲಿ ಪಠ್ಯಪುಸ್ತಕ ಪುನರಾವರ್ತನೆ ಆಗಿದೆ. ಈ ಆದೇಶವು ಮಸೀದಿಯ ಧಾರ್ಮಿಕ ಸ್ವರೂಪವನ್ನು ಬದಲಾಯಿಸುತ್ತದೆ. ಇದು ಆರಾಧನ ಸ್ಥಳ (1991 ಕಾಯಿದೆ) ಕಾಯಿದೆ ಉಲ್ಲಂಘನೆಯಾಗಿದೆ. ಇದು ನನ್ನ ಆತಂಕವಾಗಿತ್ತು ಮತ್ತು ಇದು ನಿಜವಾಗಿದೆ. ಜ್ಞಾನವಾಪಿ ಮಸೀದಿಯು ಮಸೀದಿಯಾಗಿತ್ತು. ಮಸೀದಿಯಾಗಿಯೇ ಉಳಿಯುತ್ತದೆ ಎಂದಿದ್ದರು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಇಂದು ಸುಪ್ರೀಂ ಕೋರ್ಟ್ ವಿಚಾರಣೆ

  • ಚೌಕಿದಾರ್ ಚೋರ್ ಎಂದ ರಾಹುಲ್ ಗಾಂಧಿಗೆ ಸುಪ್ರೀಂನಿಂದ ನೋಟಿಸ್

    ಚೌಕಿದಾರ್ ಚೋರ್ ಎಂದ ರಾಹುಲ್ ಗಾಂಧಿಗೆ ಸುಪ್ರೀಂನಿಂದ ನೋಟಿಸ್

    ನವದೆಹಲಿ: ರಫೇಲ್ ಡೀಲ್ ಪ್ರಕರಣದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಚೌಕಿದರ್ ಚೋರ್ ಹೈ’ ಎಂದು ಹೇಳಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ರಾಹುಲ್ ಗಾಂಧಿ ಅವರು, ರಫೇಲ್ ಡೀಲ್ ಪ್ರಕರಣದ ತೀರ್ಪಿನಲ್ಲಿ ಇಲ್ಲದೆ ಇರುವ ಅಂಶಗಳನ್ನು ಉಲ್ಲೇಖಿಸಿ ಟೀಕೆ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ.

    ರಫೇಲ್ ತೀರ್ಪಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಮರುಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಬಾರದು ಎಂದು ಕೇಂದ್ರದ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈ ಆದೇಶ ಬಂದ ನಂತರ ಚೌಕಿದಾರ್ (ಪ್ರಧಾನಿ ಮೋದಿ) ಕಳ್ಳತನ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ರಾಹುಲ್ ಗಾಂಧಿ ಅವರು ಕಳೆದ ವಾರ ಹೇಳಿದ್ದರು.

    ಈ ಸಂಬಂಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಸುಪ್ರೀಂ ಕೋರ್ಟ್ ಗೆ ನ್ಯಾಯಾಂಗ ನಿಂದನೆ ದೂರು ನೀಡಿದ್ದರು. ಮೀನಾಕ್ಷಿ ಲೇಖಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

    ಕೋರ್ಟ್ ಹೇಳಿದೆ ಎಂದು ರಾಹುಲ್ ಗಾಂಧಿ ಅವರು ಉಲ್ಲೇಖಿಸಿ ನೀಡಿರುವ ಹೇಳಿಕೆ ಗಮನಕ್ಕೆ ಬಂದಿದೆ. ಕಾನೂನುಬದ್ಧವಾಗಿ ಪಡೆಯದ ದಾಖಲೆಗಳನ್ನು ಉಲ್ಲೇಖಿಸಿ ರಾಹುಲ್ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅಟಾರ್ನಿ ಜನರಲ್ ಕೋರ್ಟಿನ ಗಮನಕ್ಕೆ ತಂದಿದ್ದಾರೆ ಎಂದು ಸುಪ್ರಿಂ ಕೋರ್ಟ್ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ತಿಳಿಸಿದರು.

    ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ಕೇಳಬೇಕಾಗುತ್ತದೆ. ಹೀಗಾಗಿ ಅವರು ಮುಂದಿನ ಸೋಮವಾರ ಒಳಗಾಗಿ ಉತ್ತರ ನೀಡಬೇಕೆಂದು ಕೋರ್ಟ್ ಸೂಚಿಸಿದೆ.ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 23ಕ್ಕೆ ಮುಂದೂಡಲಾಗಿದೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯೂ ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೂ ದೂರು ನೀಡಿದೆ.